Author: admin

ಪಾವಗಡ:  ಪಾವಗಡ ತಾಲೂಕಿನಲ್ಲಿ ಭರಣಿ ಮಳೆ ಉತ್ತಮವಾಗಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ  ಸಾಗುತ್ತಿದೆ.  ಪಾವಗಡ ಜನತೆಯ ರೈತರು ಇಲಾಖೆಯಲ್ಲಿ ನೀಡುತ್ತಿರುವ ಬಿತ್ತನೆ ಬೀಜಗಳು ವಿವಿಧ ತಳಿಗಳಾದ ಶೇಂಗಾ, ಹೆಸರು, ಕಾಳು, ಹಲಸಂದೆ, ತೊಗರಿ, ಭತ್ತ, ರಾಗಿ ಇನ್ನು ಮುಂತಾದ ಬಿತ್ತನೆ ಬೀಜಗಳನ್ನು ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ  ವೆಂಕಟರಮಣಪ್ಪ ಕರೆ ನೀಡಿದರು. ಕೃಷಿ ಉನ್ನತ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು  ಮಾತನಾಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯ ಮೂರ್ತಿ ಕೃಷಿ ಇಲಾಖೆ ಅಧಿಕಾರಿಗಳ ರಾಮಾಂಜಿನಪ್ಪ, ವೇಣು, ಮಧು ಸಂಸದ್ ಸಂಸ್ಥೆಯ ಪರವಾಗಿ ಕೆ ಹೋ ಎಫ್ ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ಕೆ.ಓ.ಎಫ್.ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ:  ರಾಮಪ್ಪ ಸಿ.ಕೆ. ಪುರ,  ಪಾವಗಡ…

Read More

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರದಲ್ಲಿ ಭಾಗವಹಿಸುವಂತೆ ಇತ್ತೀಚೆಗೆ ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಪಕ್ಷದ ರಾಜ್ಯ ಮುಖಂಡರ ನಿಯೋಗ ಮನವಿ ಸಲ್ಲಿಸಿದೆ. ಅವರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದರು. ಇತ್ತೀಚೆಗಷ್ಟೇ ಉದಯಪುರದಲ್ಲಿ ನಡೆದ ಪಕ್ಷದ ಚಿಂತನ ಶಿಬಿರದಲ್ಲಿ ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ, ಪ್ರಿಯಾಂಕಾ ಸ್ಪರ್ಧಿಸುವುದರಿಂದ ಪಕ್ಷದ ನೈತಿಕತೆ ಹೆಚ್ಚುತ್ತದೆ 2023 ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ. ಎಂಎಲ್‌ಸಿ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ ಎಂದು ಹೇಳಿದರು.…

Read More

ಸರಗೂರು: ಅರಣ್ಯ ಹಕ್ಕು ಕಾಯಿದೆ 2006ರ ನಿಯಮ 2008ರ ತಿದ್ದುಪಡಿ 2012ರ ಕಾಯ್ದೆ ಅನುಷ್ಠಾನ ಹಾಗೂ ದರಖಾಸ್ಸು ಸಮಿತಿಗೆ ಬುಡಕಟ್ಟು ಸಮುದಾಯಗಳ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಸರಗೂರು ತಾಲೂಕು ವ್ಯಾಪ್ತಿಯಲ್ಲಿ 52 ಹಾಡಿಗಳಿದ್ದು, ಜೇನುಕುರುಬ, ಯರವ, ಸೋಲಿಗ, ಕಾಡುಕುರುಬ ಸಮುದಾಯಗಳು ಸ್ವತಂತ್ರ ಪೂರ್ವದಲ್ಲಿ ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ವಾಸಿಮಾಡುತ್ತಿದ್ದು, 1972ರ ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಹಾಗೂ ನುಗು ಅಣೆಕಟ್ಟೆ ನಿರ್ಮಿಸುವಾಗ ಸಮುದಾಯಗಳ ಅಭಿವೃದ್ಧಿ ಮತ್ತು ಪುನರ್ವಸತಿ ಬಗ್ಗೆ ಸರಕಾರ ಯಾವುದೇ ಯೋಜನೆ ರೂಪಿಸಿದೆ ಏಕಾಏಕಿ ಹೊರತಂದು ಸಮುದಾಯಗಳನ್ನು ಅತಂತ್ರ ಪರಿಸ್ಥಿತಿಗೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ನಾನಾ ಘೋಷಣೆ ಕೂಗಿದರು. ನಿವಾಸಿಗಳಿಗೆ ಪುನರ್ವಸತಿ ಒದಗಿಸಲು ಕಾನೂನಿನಲ್ಲಿ ಅವಕಾಶವಿದ್ದರೂ ಜಡ್ಡುಕಟ್ಟಿದ ಆಡಳಿತ ವ್ಯವಸ್ಥೆ ನೊಂದ ಆದಿವಾಸಿ ಸಮುದಾಯಗಳಿಗೆ ನ್ಯಾಯ ಒದಗಿಸಲು ವಿಳಂಬನೀತಿ ಅನುಸರಿಸಿ ಅರಣ್ಯ ಹಕ್ಕು ಕಾಯಿದೆಯನ್ನು ಅನುಷ್ಠಾನಗೊಳಿಸುವಲ್ಲಿ…

Read More

ಚಿತ್ತದುರ್ಗ:  ಜಿಲ್ಲೆಯ ಹಿರಿಯೂರು ತಾಲೂಕಿನ ಶ್ರೀಶೈಲ ಸರ್ಕಲ್ ಗೆ ಹೋಗುವ ರಸ್ತೆ ಬದಿಯಲ್ಲಿರುವ ಮತ್ತು ಕೆ ಎಮ್  ಕೊಟ್ಟಿಗೆಯ ಹಳೇ ವಾಲ್ಮಿಕಿ ಭವನದ ಬಳಿ ಇರುವಂತಹ ವಿದ್ಯುತ್ ಟಿಸಿ  ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮವನ್ನು ಕೈಗೊಳ್ಳದೇ ಸಾರ್ವಜನಿಕರ ಪ್ರಾಣದ ಜೊತೆಗೆ ಚೆಲ್ಲಾಟವಾಡು್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ರಸ್ತೆ ಬದಿ ಇರುವ ಟಿಸಿ ಕೈಗೆಟಕುವ ಅಂತರದಲ್ಲಿದೆ. ಸಾರ್ವಜನಿಕರು ಸ್ವಲ್ಪ ಮೈಮರೆತು ಮುಟ್ಟಿದರೂ, ಅನಾಹುತವೇ ನಡೆದುಹೋಗಬಹುದು. ವಿದ್ಯಾರ್ಥಿಗಳು, ಪುಟ್ಟ ಮಕ್ಕಳು ಕಂಬವನ್ನು ಸ್ಪರ್ಶಿಸಿದರೆ, ಅವರ ಪ್ರಾಣಕ್ಕೆ ಯಾರು ಹೊಣೆ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಹಿರಿಯೂರು ತಾಲೂಕಿನಲ್ಲಿ ಈ ರೀತಿಯ ಟಿಸಿಗಳು ಎಲ್ಲೆಂದರಲ್ಲಿ ಕಾಣ ಸಿಗುತ್ತವೆ. ಸಾರ್ವಜನಿಕರ ಸುರಕ್ಷತೆಗೆ ಕಿಂಚಿತ್ತೂ  ಗಮನ ಹರಿಸಲಾಗಿಲ್ಲ. ಟಿಸಿಯ ಸಮೀಪದಲ್ಲೇ ಗಿಡಗಳು ಬೆಳೆದಿವೆ. ಆಕಸ್ಮತ್ ವಿದ್ಯುತ್ ಗಿಡಗಳಿಗೆ ಸ್ಪರ್ಶಿಸಿದರೆ, ಅದನ್ನು ಜನರೋ, ಪ್ರಾಣಿಗಳೋ ಸ್ಪರ್ಶಿಸಿದರೆ, ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಗಳಿವೆ. ಟಿಸಿಗಳ ಸುತ್ತಮುತ್ತ ಜನರು ಹೋಗದಂತೆ ಸುರಕ್ಷತೆ ಕ್ರಮವನ್ನು ಸಂಬಂಧಪಟ್ಟವರು ಅಳವಡಿಸಬೇಕು. ಈ ಬಗ್ಗೆ ಸ್ಥಳೀಯ ಶಾಸಕರು ಅಧಿಕಾರಿಗಳನ್ನು…

Read More

ಧಾರವಾಡದ ಭೀಕರ ಅಪಘಾತ ಮರೆಯಾಗುವ ಮೊದಲೇ ಹುಬ್ಬಳ್ಳಿ ನಗರದ ಹೊರವಲಯದ ರೇವಡಿಹಾಳ ಕ್ರಾಸ್ ಮೇಲ್ಸೇತುವೆ ಬಳಿ ಖಾಸಗಿ ಬಸ್ ಮತ್ತು ಅಕ್ಕಿ ಚೀಲ ಹೇರಿಕೊಂಡು ಹೊರಟಿದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ. ಬಸ್ ಚಾಲಕನು ಟ್ರ್ಯಾಕ್ಟರ್ ಹಿಂದಿಕ್ಕಿ ಮುಂದೆ ಸಾಗುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜ, ಪ್ರಯಾಣಿಕರಾದ ಇಚಲಕರಂಜಿಯ ಬಾಬಾಸಾ ಅಣ್ಣಾಸಾ ಚೌಗಲೆ, ಚಿಕ್ಕೋಡಿಯ ಬಾಬೂಸಾಬ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರೆಲ್ಲ ಬಹುತೇಕರೆಲ್ಲ ಬಸ್ಸಿನ ಪ್ರಯಾಣಿಕರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5 

Read More

ಪಶ್ಚಿಮ ಬಂಗಾಳ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದನ್ನು ಖಂಡಿಸಿರುವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಬಿಜೆಪಿಯು ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಅವರು ಹೇಳಿದರು. ಬಿಜೆಪಿ ಆಡಳಿತದಲ್ಲಿ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ ನಿರ್ಮಾಣವಾಗಿದೆ . ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲಾಗುತ್ತಿಲ್ಲ. ಯಾಕೆಂದರೆ ಅವುಗಳಿಗೆ ಸ್ವಾಯತ್ತೆ ಇಲ್ಲ. ಸ್ವಾಯತ್ತೆ ಎಂಬುದು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿದೆ. ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಭೋಪಾಲ್: ಹೊಟೇಲ್ ನಲ್ಲಿ ಬಾಲಕಿಗೆ ತಾಳಿ ಕಟ್ಟಿ, ಬಳಿಕ ಅದೇ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಹನುಮಗಂಜ್‌ ಪೊಲೀಸರು,   ಬಾಲಕಿ 9ನೇ ತರಗತಿಯ ವಿದ್ಯಾರ್ಥಿನಿ. ಆಕೆಯನ್ನು ಹೋಟೆಲ್‌ ಗೆ ಕರೆತರುವಾಗ ಆ ವ್ಯಕ್ತಿ ಆಕೆಯ ಹಣೆಗೆ ಸಿಂಧೂರ ಇಟ್ಟು ಕರೆತಂದಿದ್ದ. ಹೋಟೆಲ್‌ ಕೊಠಡಿಯಲ್ಲಿ ಸಾಂಕೇತಿಕ ವಿವಾಹವಾದ ಬಳಿಕ, ದೈಹಿಕ ಸಂಬಂಧ ಬೆಳೆಸಿದ್ದ. ಇದಾಗಿ ಕೆಲ ದಿನಗಳ ಅವಧಿಯಲ್ಲಿ ಮತ್ತೆ ಎರಡು ಬಾರಿ ದೈಹಿಕ ಸಂಪರ್ಕ ಮಾಡಿದ್ದ ಎಂದು ತಿಳಿಸಿದ್ದಾರೆ. ಇನ್ನು ತಾನೂ ಸಾಂಕೇತಿಕ ವಿವಾಹವಾಗಿರುವ ವಿಚಾರ ಬಾಲಕಿ ತನ್ನ ಮನೆಯವರಿಗೆ ಕೆಲ ದಿನಗಳ ಬಳಿಕ ತಿಳಿಸಿದ್ದಳು. ಕೂಡಲೇ ಅವರು  ಯುವಕನ ಮನೆಯವರನ್ನು ಸಂಪರ್ಕಿಸಿದ್ದರು. ಆದರೆ, ಅವರು ಆಕೆಯನ್ನು ಸೊಸೆಯನ್ನಾಗಿ ಸ್ವೀಕರಿಸಲು ನಿರಾಕರಿಸಿದರು. ಹೀಗಾಗಿ ಯುವಕ ಕೂಡ ಬಾಲಕಿ ಜತೆಗಿನ ಸಂಪರ್ಕ ಕಡಿದುಕೊಂಡಿದ್ದಾನೆ.  ಇದರಿಂದಾಗಿ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ…

Read More

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ಅಕ್ಕಿ, ಔಷಧ, ಹಾಲಿನ ಪುಡಿ ಹೀಗೆ ಅಗತ್ಯ ವಸ್ತುಗಳನ್ನು ಕಳುಹಿಸಿದೆ. ಭಾನುವಾರ ದ್ವೀಪರಾಷ್ಟ್ರದ ರಾಜಧಾನಿ ಕೊಲಂಬೋ ತಲುಪಿದ ಹಡಗು, ಅಗತ್ಯ ವಸ್ತುಗಳನ್ನು ಶ್ರೀಲಂಕಾ ಸರ್ಕಾರಕ್ಕೆ ಹಸ್ತಾಂತರಿಸಿದ್ದು,  9,000 ಮೆಟ್ರಿಕ್ ಟನ್ ಅಕ್ಕಿ, 50 ಮೆಟ್ರಿಕ್ ಟನ್ ಹಾಲಿನ ಪುಡಿ ಹಾಗೂ 25 ಮೆಟ್ರಿಕ್ ಟನ್‌ ಗಿಂತ ಹೆಚ್ಚು ಔಷಧಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೆ ಲಂಕಾದ ವಿದೇಶಾಂಗ ಸಚಿವ ಜಿಎಲ್ ಪೀರಿಸ್ ಅವರಿಗೆ ಹಸ್ತಾಂತರಿಸಿದರು. ಹಾಲಿನ ಪುಡಿ, ಅಕ್ಕಿ ಹಾಗೂ ಔಷಧ ಸೇರಿದಂತೆ 200 ಕೋಟಿ ರೂ. ಮೌಲ್ಯದ ಮಾನವೀಯ ನೆರವು ನೀಡಲಾಗಿದೆ. ಈ ಸಹಾಯಕ್ಕೆ ತಮಿಳುನಾಡು ಮುಖ್ಯಮಂತ್ರಿಗೂ  ಹಾಗೂ ಭಾರತಕ್ಕೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಪಂಜಾಬ್: 6 ವರ್ಷದ ಮಗು ಕೊಳವೆ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್‌ ನ ಹೋಷಿಯಾರ್‌ ಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ರಿತಿಕ್ ರೋಷನ್  ಎಂಬ 6 ವರ್ಷ ವಯಸ್ಸಿನ ಬಾಲಕ ಆಟವಾಡುತ್ತಿದ್ದ ವೇಳೆ 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ಘಟನೆ ಸಂಬಂಧ ಸಂಬಂಧ ಹೊಲದ ಮಾಲೀಕನ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಹೊಲದಲ್ಲಿ ಆಟವಾಡುತ್ತಿದ್ದ ರಿತಿಕ್ ನನ್ನು ನಾಯಿಗಳು ಅಟ್ಟಿಸಿಕೊಂಡು ಬಂದಿದೆ. ಈ ವೇಳೆ ಆತ ಹೆದರಿ, ಸೆಣಬಿನ ಚೀಲ ಮುಚ್ಚಲಾಗಿದ್ದ 9 ಇಂಚಿನ ಅಗಲ ಇರುವ ಕೊಳವೆ ಬಾವಿಯನ್ನು ಹತ್ತಿದ್ದು,  ಈ ವೇಳೆ ಮಗು ಕೊಳವೆ ಬಾವಿಯೊಳಗೆ ಕುಸಿದು ಬಿದ್ದಿದ್ದಾನೆ. 7 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಮಗುವನ್ನು ಬಾವಿಯಿಂದ ಹೊರಗೆ ತರಲಾಗಿತ್ತು. ಆದರೆ, ಮಗುವಿನ ಶ್ವಾಸಕೋಶದಲ್ಲಿ ಹೆಚ್ಚು ನೀರು ಪ್ರವೇಶಿಸಿದ್ದರಿಂದ ಮಗು ಉಳಿಯಲಿಲ್ಲ ಎಂದು ಹಿರಿಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೋಲಾರ:  ಒಂದೂವರೆ ವರ್ಷದ ಮಗುವಿನೊಂದಿಗೆ  ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ  ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ನಡೆದಿದೆ. ತಾಯಿ ಕೀರ್ತಿ (23), ಹಾಗೂ ಮಗಳು ಯೋಗಾಶ್ರೀ ಮೃತಪಟ್ಟವರಾಗಿದ್ದಾರೆ. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ. ಈ ಮಧ್ಯೆ ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಕೀರ್ತಿಯ ಪತಿ ಸುಧಾಕರ್ ಎಂಬವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More