Subscribe to Updates
Get the latest creative news from FooBar about art, design and business.
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
- ಒಳಮೀಸಲಾತಿ: “ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
- ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
- ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
- ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
Author: admin
ಶೀಘ್ರದಲ್ಲೇ ಕೇಂದ್ರ ಸರ್ಕಾರ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಲಿದೆ. ಇದರರ್ಥ ಇನ್ನು ಮುಂದೆ ಟೋಲ್ ಸಂಗ್ರಹ ಇರುವುದಿಲ್ಲವೆ? ಅಲ್ಲ, ಆದರೆ ಟೋಲ್ ಗೇಟ್ ಇರುವುದಿಲ್ಲ.. ಟೋಲ್ ಸಂಗ್ರಹ ಇರುತ್ತದೆ. ಮತ್ತು ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿದರೆ, ಸಂಗ್ರಹಗಳು ಹೇಗೆ ಮಾಡುತ್ತವೆ ಎಂಬ ಅನುಮಾನ ಬರಬಹುದು. ಆದರೆ ತಂತ್ರಜ್ಞಾನ ಅಭಿವೃದ್ಧಿಯ ಭಾಗವಾಗಿ ಏನು ಬೇಕಾದರೂ ಆಗಬಹುದು. ಸರಕಾರವು ಅದರ ಭಾಗವಾಗಿ FASTAG ವ್ಯವಸ್ಥೆಯನ್ನು ಲಭ್ಯಗೊಳಿಸಿದೆ. ಆದರೆ ಇದು ಇನ್ನು ಮುಂದೆ ಇರುವುದಿಲ್ಲ. ಆದರೆ, ನೇರವಾಗಿ ಬ್ಯಾಂಕ್ ಖಾತೆಯಿಂದ ಟೋಲ್ ಸಂಗ್ರಹ ಮಾಡಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ. ಟೋಲ್ ಪ್ಲಾಜಾಗಳಿಲ್ಲದೆ ದಟ್ಟಣೆ ಕಡಿಮೆಯಾಗಲಿದೆ. ಟೋಲ್ ಪ್ಲಾಜಾಗಳಿಲ್ಲದಿದ್ದರೆ ಏನಾಗಬಹುದು? ಇದರಿಂದ ವಾಹನ ಸವಾರರಿಗೆ ಸಾಕಷ್ಟು ಸಮಯ ಉಳಿತಾಯವಾಗುತ್ತದೆ. ಅದೇ ಪ್ರೇರಣೆಯಿಂದ ಕೇಂದ್ರ ಸರ್ಕಾರವು ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಯೋಜನೆಗೆ ಹೆಜ್ಜೆ ಹಾಕುತ್ತಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಕುರಿತು ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಟೋಲ್ ಪ್ಲಾಜಾಗಳಿಲ್ಲದಿದ್ದರೆ, ಟೋಲ್…
ವಡಗಾವಿಯ ತೆಗ್ಗಿನಗಲ್ಲಿ ನಿವಾಸಿ ಶೋಭಾ ವಲ್ಲೇಪೂರಕರ ಅನ್ನುವ 40 ವರ್ಷದ ಮಹಿಳೆ ಆಗಸ್ಟ್ 21 ರಂದು ಬೆಳಿಗ್ಗೆ 8:7 ಗಂಟೆಗೆ ಶಹಾಪೂರದಲ್ಲಿರುವ ಚಂದ್ರಕಲಾ ಹೇಡಾ ಇವರ ಮನೆಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಮಹಿಳೆ ಚಹರೆ:4 ಅಡಿ 8 ಇಂಚು ಎತ್ತರ, ದುಂಡು ಮುಖ, ಗಿಡ್ಡ ಮೂಗು, ಸಡಪಾತಾಳ ಮೈಕಟ್ಟು, ಗೋದಿಗೆಂಪು ಮೈಬಣ್ಣ ಹೊಂದಿರುವ ಮಹಿಳೆ ನಾಪತ್ತೆ ವೇಳೆಯಲ್ಲಿ ಬಿಳಿ ಮತ್ತು ಕೆಂಪು ಬಣ್ಣದ ಸಾಡಿ ಹಳದಿ ಬಣ್ಣದ ಜಂಪರ್ ಧರಿಸಿದ್ದಳು.. ಕನ್ನಡ, ಹಿಂದಿ, ತೆಲಗು, ಮರಾಠಿ ಭಾಷೆ ಬಲ್ಲ ಮಹಿಳೆ ಸುಳಿವು ಸಿಕ್ಕವರು ತಕ್ಷಣವೇ ಶಹಾಪೂರ ಪೊಲೀಸ್ ಠಾಣೆ ದೂರವಾಣ ಸಂಖ್ಯೆ 9480804046, 0831-2405233 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ರಾಜ್ಯ ಸರ್ಕಾರದ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಎಲ್ಲ ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಸುತ್ತಿದ್ದು, ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಕೆಂಪಣ್ಣ ಹೇಳಿದ್ದು ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿರುವ ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು,ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದರು. ಸರ್ಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ 1 ಮತ್ತು 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ. ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು…
ಬೆಳಗಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳು ಸ್ಥಾಪನೆಗೊಂಡಾಗಿನಿಂದ ಬಡವರಿಗೆ ಅಕ್ಷಯ ಪಾತ್ರೆಯಾಗಿ ಹೊರಹೊಮ್ಮಿದೆ. ಲಕ್ಷಾಂತರ ಬಡಜನರು ಈ ಗ್ರಾಮಾಭಿವೃದ್ಧಿ ಸಂಘಗಳ ಮೂಲಕ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇತ್ತಿಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಶಾಖೆಗಳು ರಾಜ್ಯಾದ್ಯಂತ ಹರಡಿ ಜನರ ಸೇವೆ ಮಾಡುತ್ತಿವೆ. ತನ್ಮೂಲಕ ಸಮಾಜಕ್ಕೆ ಆದರ್ಶವಾಗಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೊದಗಾ ಹಾಗೂ ಸುಳೇಭಾವಿ ಕಾರ್ಯಕ್ಷೇತ್ರದ ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮೀ ಪೂಜಾ ಹಾಗೂ ಧಾರ್ಮಿಕ ಸಭೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಈ ಸಮಯದಲ್ಲಿ ದತ್ತಾ ಬಂಡಿಗಿಣಿ, ಶಂಕರಗೌಡ ಪಾಟೀಲ, ಲಕ್ಷ್ಮೀ ನಾರಾಯಣ ಕಲ್ಲೂರ, ವಿಠ್ಠಲ ಬಂಡಿಗಿಣಿ, ರುದ್ರಪ್ಪ, ಮಹೇಶ ಸುಗಣೆನ್ನವರ, ದುಗ್ಗೇಗೌಡ, ಪ್ರದೀಪ ಶೆಟ್ಟಿ, ಮಹಾಂತೇಶ ಬಸ್ಸಾಪುರ, ಗೀತ ಹಣಗೋಜಿ, ಶೈಲಾ ವಠಾರೆ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬೆಂಗಳೂರು : ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ತಿಳಿಸಿರುವಂತೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ. ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮಗಾಂಧಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ್ ನೀಡಲು ಮತ್ತು ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಆದೇಶಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ.ಅವರ ಆಪ್ತ ಸಹಾಯಕ ಈ ಕುರಿತಾಗಿ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಡಿದ ಟಿಪ್ಪು ಸುಲ್ತಾನ್ ಬಗ್ಗೆ ನೀನು ಮುಸ್ಲಿಂ ಗೂಂಡಾ ಎಂದು ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬೇಕು. ಆದರೆ, ಮುಸ್ಲಿಂ ಸಮುದಾಯ ಬೇಡ, ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ. ಹುಷಾರ್, ಬಾಲ ಬಿಚ್ಚಬೇಡ ಎಂದು ಪತ್ರದಲ್ಲಿ ಬೆದರಿಕೆ ಬರೆಯಲಾಗಿದೆ. ಇನ್ನು ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನಾನು ಎಲ್ಲಾ ಮುಸ್ಲಿಂ ಸಮುದಾಯದವರನ್ನು ಬೈದಿಲ್ಲ. ಹರ್ಷ, ಪ್ರವೀಣ್ ನೆಟ್ಟಾರು, ಪ್ರೇಮ್ ಸಿಂಗ್ ಅವರ ಮೇಲೆ ದಾಳಿ ಮಾಡಿದವರು ಮುಸ್ಲಿಂ ಗೂಂಡಾಗಳು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತಮಿಳುನಾಡು : ಹೋಂ ವರ್ಕ್ ಒತ್ತಡ ಹೆಚ್ಚಾಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವರುರ್ ಜಿಲ್ಲೆಯ ಪೆರಲಂನಲ್ಲಿ ಘಟನೆ ನಡೆದಿದೆ. 14 ವರ್ಷದ ಸಂಜಯ್ ಮೃತ ವಿದ್ಯಾರ್ಥಿಯಾಗಿದ್ದಾನೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೋಮ್ ವರ್ಕ್ ಕಾರಣಕ್ಕೆ ಸಾಕಾಗಿ ಹೋಗಿದ್ದ ಎನ್ನಲಾಗಿದೆ. ಹೀಗಾಗಿ ಶಾಲೆಯನ್ನು ಬದಲಿಸುವಂತೆ ತನ್ನ ಪೋಷಕರಿಗೆ ಪದೇ ಪದೇ ಹೇಳುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಪೋಷಕರು ಶಾಲೆ ಬದಲಿಸಲು ನಿರಾಕರಿಸಿದಾಗ ಇನ್ನಷ್ಟು ಒತ್ತಡಕ್ಕೊಳಗಾದ ಸಂಜಯ್ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆತನನ್ನು ತಿರುವುರ್ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು : ನ್ಯಾಷನಲ್ ಹೈವೇ 4 ರಲ್ಲಿ ಬೆಳಗಿನ ಜಾವ ಸರಿ ಸುಮಾರು 4ಗಂಟೆ ಸಮಯದಲ್ಲಿ ಕಳ್ಳಂಬೆಳ್ಳ ಮತ್ತು ಚಿಕ್ಕನಹಳ್ಳಿಯ ಸಮೀಪದ ಬಾಳೇನಹಳ್ಳಿಯ ಬಳಿ ಬೀಕರ ಅಪಘಾತ ನಡೆದಿದೆ. ಕ್ರೂಜರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕ್ರೂಜರ್ ನಲ್ಲಿದ್ದ ಒಂಬತ್ತು ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಕೂಲಿ ಕಾರ್ಮಿಕರು ರಾಯಚೂರು ಮತ್ತು ಮಾನ್ವಿಯ ಭಾಗದವರಂದು ತಿಳಿದು ಬಂದಿದೆ. ಕ್ರೂಜರ್ ವಾಹನದಲ್ಲಿ ಒಟ್ಟು 23 ಜನ ಕೂಲಿ ಕಾರ್ಮಿಕರು ಮಾನ್ವಿಯಿಂದ ಬೆಂಗಳೂರಿನ ಕಡೆಗೆ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 9 ಜನ ಕಾರ್ಮಿಕರು ಸ್ಥಳದಲ್ಲೇ ಮೃತರಾಗಿದ್ದು, ಉಳಿದ 14 ಜನ ಕಾರ್ಮಿಕರನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅದರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂದರ್ಭದಲ್ಲಿ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್, ಎಸ್.ಪಿ. ರಾಹುಲ್ ಕುಮಾರ್ ಶಹಪುರ್ ವಾಡ್, ಅಡಿಷನಲ್ ಎಸ್ಪಿ ಉದ್ದೇಶ್,…
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರು ಮಾನ್ವಿಗೆ ಸೇರಿದವರು ಎನ್ನಲಾಗಿದ್ದು,ಮೃತರ ಪೈಕಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಡವಟ್ಟಿ ಗ್ರಾಮದ ವಾಹನ ಚಾಲಕ ಕೃಷ್ಣಪ್ಪ(35) ಹಾಗೂ ಇದೇ ಗ್ರಾಮದ ಲಕ್ಷ್ಮೀ ಎಂಬ ಇಬ್ಬರ ಗುರುತು ಪತ್ತೆಯಾಗಿದ್ದು, ಉಳಿದ 7 ಮಂದಿಯ ಗುರುಪತ್ತೆ ಕಾರ್ಯ ಮುಂದುವರಿದಿದೆ. ಘಟನೆಯಲ್ಲಿ ದುರ್ಗಮ್ಮ, ಬಾಲಾಜಿ, ಸಂದೀಪ್, ಉಮೇಶ್, ಯಲ್ಲಮ್ಮ, ಅನಿಲ್ ದೇವರಾಜು, ಮೋನಿಕಾ, ನಾಗಪ್ಪ, ವಸಂತ, ವೈಶಾಲಿ, ವಿರೂಪಾಕ್ಷ, ಲತಾ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಸ್ಪಷ್ಟ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ…
ತುಮಕೂರು: ಹಾಸನ ಮಂಡ್ಯದ ಜೊತೆಗೆ ತುಮಕೂರು ಗ್ರಾಮಾಂತರ ಕ್ಷೇತ್ರವನ್ನ ಮುಂದಿನ ಚುನಾವಣಾ ಭವಿಷ್ಯದ ಹಿತ ದೃಷ್ಟಿಯಿಂದ. ಒಬ್ಬೊಬ್ಬ ಸಚಿವರಿಗೆ ಒಂದೊಂದು ಕ್ಷೇತ್ರವನ್ನ ಕೊಟ್ಟಿದೆ. ನಾನು ಸಂತೋಷದಿಂದ ಈ ಕ್ಷೇತ್ರ ಮತ್ತು ಕುಣಿಗಲ್ ಕ್ಷೇತ್ರವನ್ನ ಕೊಡ್ಬೇಕು ಅಂತ ಕೇಳ್ದೆ. ಪಕ್ಷದ ಅಧ್ಯಕ್ಷರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಸಚಿವ ಗೋಪಾಲಯ್ಯ ಹೇಳಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಾಜಿ ಶಾಸಕರು ನನ್ನ ಸ್ನೇಹಿತರು ಸುರೇಶ್ ಗೌಡ, ಈಗ ನಮ್ಮ ಎಲ್ಲಾ ಕಾರ್ಯಕರ್ತರ ಜೊತೆ ಸಭೆ ಮಾಡ್ಬೇಕು ಅಂತ ಬಂದಿದಿನಿ. ಈ ಕ್ಷೇತ್ರ ನನ್ನ ತಾಯಿ ಹುಟ್ಟೂರು, ಈ ಭಾಗದಲ್ಲಿ ಬಹಳಷ್ಟು ನನ್ನ ಸಂಬಂಧಿಕರು ಇದ್ದಾರೆ. ಸುರೇಶ್ ಗೌಡ ಶಾಸಕರಾಗಿದ್ದಂತಹ ಕಾಲದಲ್ಲಿ ಈ ಕ್ಷೇತ್ರ ಅಭಿವೃದ್ಧಿಯಾಗಿದೆ. ಯಡಿಯೂರಪ್ಪ ನವರು ಸಿಎಂ ಆಗಿದ್ದಾಗ ಅತಿ ಹೆಚ್ಚು ಅನುದಾನ ತಂದು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ ಎಂದರು. ಕಳೆದ ಚುನಾವಣೆಯಲ್ಲಿ ಇವರು ಗೆದ್ದಿದ್ರೆ ಬಹಳಷ್ಟು ಅಭಿವೃದ್ಧಿಯಾಗ್ತಿತ್ತು. ಕಾರಣಾಂತರಗಳಿಂದ ಕಳೆದ ಬಾರಿ ಸೋತಿದ್ದಾರೆ.…