Author: admin

ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ‌ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು. ತಮ್ಮ ಸಹೋದರ ಸೇವೆಯಲ್ಲಿರುವಾಗ ನಿಧನ ಹೊಂದಿರುವುದರಿಂದ ಕುಟುಂಬ ನಿರ್ವಹಣೆಗಾಗಿ ತಮಗೆ ಅನುಕಂಪ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಬಸವರಾಜ ಮಹಾದೇವ ಬಾದುಲೆ ಅವರು ಅರ್ಜಿ ಸಲ್ಲಿಸಿದ್ದರು. ಸದರಿ ಅರ್ಜಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮೃತ ಸಚಿನ್ ಬಾದುಲೆ ಅವರ ಅವಲಂಬಿತ ಸಹೋದರ ಬಸವರಾಜ ಮಹಾದೇವ ಬಾದುಲೆ ಅವರನ್ನು ಕೇವಲ 24 ಗಂಟೆಗಳ ಅವಧಿಯಲ್ಲಿ ಗ್ರುಪ್ “ಸಿ” ಹುದ್ದೆಗೆ ನೇರ ನೇಮಕಾತಿ ಮಾಡುವ ಮೂಲಕ ಮಾನವಿಯತೆ ಮೆರೆದಿದ್ದಾರೆ. ಬಿ.ಎ.…

Read More

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ಮೃತ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜಿಲ್ಲೆ ತುರುವೇಕೆರೆ ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ನಡೆದ ಅಕ್ರಮ ಕಾಮಗಾರಿಗಳನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು. ಎಸ್.ಕೆ.ರಘು ನಂಜುಂಡಯ್ಯ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಲಿಂಗರಾಜು ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ರಘು, ಈ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಸುಮಾರು ವರ್ಷಗಳಿಂದಲೂ ಅಕ್ರಮವಾಗಿ ಕಂದಾಯ ಇಲಾಖೆಗೆ ಸೇರಿದ ಜಾಗಗಳನ್ನು ಯಾವುದೇ ಮಾಹಿತಿ ಇಲ್ಲದೆ ಕಂದಾಯ ಇಲಾಖೆಗೆ ಮಾಹಿತಿ ಕೊಡದೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದು, ಇದರ ವಿರುದ್ಧ ಮುಂದಿನ ದಿನಗಳಲ್ಲೂ ಕೂಡ ದೊಡ್ಡಮಟ್ಟದ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಹಾಗೂ ಪಂಚಾಯತಿ ಅಧ್ಯಕ್ಷರಾದ ಜಾಬಿರ್ ಹುಸೇನ್ ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು. ವರದಿ: ಸುರೇಶ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಹಲಗೂರು: ಹಣ ಮತ್ತು ಚಿನ್ನಾಭರಣದ ಆಸೆಗಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ಹಲಗೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ  ಅಂಚೆ ಪಾಳ್ಯ ಪೋಸ್ಟ್, ಚಳ್ಳಘಟ್ಟ ವಾಸಿ ಲಕ್ಷ್ಮಿ ಮತ್ತು  ಬೆಂಗಳೂರಿನ ಗೊಲ್ಲಹಳ್ಳಿ ನಾರಾಯಣ ಬಂಧಿತ ಆರೋಪಿಗಳಾಗಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಕೊಲೆ ನಡೆದಿತ್ತು. ಆದರೆ ಹತ್ಯೆಗೀಡಾದ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ.  ಹೀಗಾಗಿ  ಜಿಲ್ಲಾ ಪೊಲೀಸ್ ಅಧೀಕ್ಷಕರ ಮತ್ತು ಅಪರ ಜಿಲ್ಲಾ ಪೊಲೀಸ್ ಅಧಿಕ್ಷಕರ ಮಂಡ್ಯ ಜಿಲ್ಲೆ  ಮಾರ್ಗದರ್ಶನ ಮತ್ತು ಸೂಚನೆಯ ಮೇರೆಗೆ ನಾಪತ್ತೆಯಾದ ಮಹಿಳೆಯರ ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು. ಈ ವೇಳೆ ಬೆಂಗಳೂರು ನಗರ  ಚಾಮರಾಜಪೇಟೆ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಶೋಭಾ ಎಂಬ ಮಹಿಳೆಯ ಚಹರೆಗೆ ಹೋಲಿಕೆ ಕಂಡು ಬಂದಿತ್ತು. ತಕ್ಷಣವೇ ತನಿಖೆ ಚುರುಕುಗೊಳಿಸಿದ ಪೊಲೀಸರು ನಾಪತ್ತೆಯಾದ ಮಹಿಳೆಯ ಮೊಬೈಲ್ ನಂಬರ್ ಮಾಹಿತಿ ಪಡೆದುಕೊಂಡು  ಮೃತಳ ಕಾಲ್ ರೆಕಾರ್ಡ್ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಗಳ ಸುಳಿವು ಲಭ್ಯವಾಗಿತ್ತು. ಶೋಭಾ ಅವರಿಗೆ ಚಿನ್ನಾಭರಣಗಳನ್ನು…

Read More

ನಾಗಮಂಗಲ: ಬೆಳ್ಳೂರು ಪೊಲೀಸ್ ಠಾಣೆಯ ಜನ ವಿರೋಧಿ, ಕಾನೂನು ಬಾಹಿರ ನಡುವಳಿಕೆಯನ್ನು ಖಂಡಿಸಿ ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವ ಜನ ಸಮಾಜ ಮತ್ತು ಪ್ರಗತಿಪರ ಎಲ್ಲಾ ಸಂಘಟನೆಗಳ ಒಕ್ಕೂಟ ವತಿಯಿಂದ ಸಾಂಕೇತಿಕ ಕಪ್ಪು ಪಟ್ಟಿ ಧರಿಸಿ ಬೆಳ್ಳೂರು ಕ್ರಾಸ್ ನಿಂದ ಬೆಳ್ಳೂರು ಪೊಲೀಸ್ ಠಾಣೆಯ ತನಕವೂ ಕಾಲುನಡಿಗೆಯಲ್ಲಿ ಜಾಥಾ ನಡೆಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ  ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವ ಜನ ಸಮಾಜ ಮಂಡ್ಯ ಜಿಲ್ಲಾಧ್ಯಕ್ಷ ಡಿ. ವೆಂಕಟೇಶ್ ಮಾತನಾಡಿ,  ಬೆಳ್ಳೂರು ಪೊಲೀಸ್ ಠಾಣೆಗೆ ದೌರ್ಜನ್ಯಕ್ಕೆ ತುತ್ತಾದ ಸಾರ್ವಜನಿಕ ರು  ದೂರು ನೀಡಲು ಹೋದಾಗ ದೂರುದಾರರ ಮೇಲೆ ಪೊಲೀಸ್ ದರ್ಪ ತೋರಿಸಿ  ದೌರ್ಜನ್ಯಕೋರರ ಪರ ವಕಾಲತ್ತು ವಹಿಸಿ ಸುಳ್ಳು ಪ್ರಕರಣ ದಾಖಲಿಸಿ  ದೌರ್ಜನ್ಯ ಎಸಗುತ್ತಿರುವ ಬೆಳ್ಳೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಲೋಕೇಶ್,  ನಾಗರಾಜ್  ಕರ್ತವ್ಯ ಲೋಪ ಎಸಗುತ್ತೀದ್ದಾರೆ. ಆದ್ದರಿಂದ ಈ ಕೊಡಲೇ ಈ ಮೂವರನ್ನು ಅಮಾನತುಗೊಳಿಸ ಬೇಕೆಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಬೆಳ್ಳೂರು ಪೊಲೀಸ್ ಠಾಣೆಯ ಮುಂದೆ…

Read More

ತಿಪಟೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಮಾಜಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಮೊಟ್ಟೆ ಎಸೆದವ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರಂತೆ ಸುಳ್ಳು ಹೇಳುವ ಜಾಯಮಾನದವರು ನಾವಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯಾವ ರೀತಿ ಭದ್ರತೆ ಕೊಡಬೇಕೆಂಬುದನ್ನು ಗೃಹ ಸಚಿವ ಅರ್ಧಂಬರ್ಧ ಜ್ಞಾನೇಂದ್ರ ಮೊದಲು ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು, ನಗರಸಭಾ ಸದಸ್ಯ ವಿ.ಯೋಗೀಶ್ ಮೇಘಶ್ರೀ , ಲೋಕನಾಥ್ ಸಿಂಗ್, ಸುನಿಲ್ ಮೇಗಲಮನೆ, ಹಿರಿಯ ಕಾಂಗ್ರೆಸ್ ಮುಖಂಡ ಅಣ್ಣಯ್ಯ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ : ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಯ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಯ ಪ್ರವಾಸದ ಸಮಯದಲ್ಲಿ ಕಾರಿನ ಮೇಲೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆಯನ್ನು ಖಂಡಿಸಿ ಮಧುಗಿರಿ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿತು. ಮಧುಗಿರಿಯ ಪಾವಗಡ ವೃತ್ತದ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಇರುವ ಕಾಂಗ್ರೆಸ್ ಕಛೇರಿಯ ಬಳಿ ಸೇರಿದ ಪ್ರತಿಭಟನಾಕಾರರು, ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದು ದುರ್ವರ್ತನೆ ತೋರಿರುವುದನ್ನು ಖಂಡಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಹಿರಿಯ ಮುಖಂಡರುಗಳಾದ ಎನ್.ಗಂಗಣ್ಣ, ಬಿ.ವಿ.ನಾಗೇಶಬಾಬು, ಅಂಜಿನಪ್ಪ ಎಂ.ಕೆ.ನಂಜುಂಡಯ್ಯ, ಪಿ.ಟಿ.ಗೋವಿಂದಯ್ಯ, ಸಿದ್ದಾಪುರ ಈರಣ್ಣ ಆದಿನಾರಾಯಣರೆಡ್ಡಿ ಸಂಜೀವಗೌಡ, ರಂಗಧಾಮಯ್ಯ, ಪುರಸಭಾ ಉಪಾಧ್ಯಕ್ಷರಾದ ರಾಧಿಕಾ ಆನಂದ್, ಸದಸ್ಯರಾದ ಉಮೇಶ್, ಅಲೀಂ,ಎಂ.ಎಸ್. ಸಾಧಿಕ್ ಸೇರಿದಂತೆ ತಾಲೂಕಿನ ಪ್ರಮುಖ ಹಿರಿಯ ಮುಖಂಡರು ಯುವಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ : ಡಾ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಾರ್ಯಕರ್ತರು ,ಬೆಂಬಲರೊಂದಿಗೆ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡರು. ಕ್ಷೇತ್ರದ ಜನರು ಶುಭ ಹಾರೈಸಿದರು. ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಜನಮಂದಿ ದಿನದ ನಿಮಿತ್ತ ಡಾ. ಅಂಜಲಿತಾಯಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸನೆ ಶಿಬಿರ, ಮತ್ತು ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಅಲ್ಲದೇ ಸ್ವತಹ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಕ್ತದಾನ ಮಾಡಿ ರಕ್ತದಾನಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಬೇರೆ ಬೇರೆ ಗ್ರಾಮಗಳಿಂದ ಬಂದ ನೂರಾರು ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಹೇಮಂತ ನಿಂಬಾಳ್ಕರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯನವಲಗಟ್ಟಿ, ಬಿಜೆಪಿ ಮುಖಂಡ ಬಾಬುರಾವ್ ದೇಸಾಯಿ, ಮಾಜಿ ಶಾಸಕರಾದ ದಿಗಂಬರ್ ಪಾಟೀಲ್, ಶಾಸಕ ಆಪ್ತರ ಸಹಾಯಕ ಪ್ರಸನ್ನಕುಮಾರ್…

Read More

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ. ನಿನ್ನೆ ಸಾಯಂಕಾಲ 4:26, ರಾತ್ರಿ 9.22 ಮತ್ತು 11.04 ಗಂಟೆಯ ಸುಮಾರಿಗೆ ಭೂಮಿ ನಡುಗಿರುವ ಅನುಭವವಾಗಿದೆ. ನಗರದ ರೈಲ್ವೆ ನಿಲ್ದಾಣ, ಗೋಳಗುಮ್ಮಟ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭೂಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲಾಗಿತ್ತು. ಮೇಲಿಂದ ಮೇಲೆ ಜಿಲ್ಲೆಯಲ್ಲಿ ಭೂಕಂಪನವಾಗುತ್ತಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಶನಿವಾರ, ಭಾನುವಾರದಂದು ಕೂಡ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿಆರ್‍ಸೆಟಿ) ಬೆಳಗಾವಿಯಲ್ಲಿ, ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಪುರುಷ, ಮಹಿಳೆಯರಿಗೆ ಮತ್ತು ನಿರುದ್ಯೋಗಿಗಳಿಗೆ ಸುವರ್ಣಾವಕಾಶ. ಸೆಪ್ಟೆಂಬರ್ ಮೊದಲನೇ ವಾರದಲ್ಲಿ 10 ದಿನಗಳ ಉಪ್ಪಿನಕಾಯಿ, ಹಪ್ಪಳ ಮತ್ತು ಮಸಾಲೆ ಪೌಡರ ತಯಾರಿಕೆ ತರಬೇತಿ, ಪೇಪರ ಬ್ಯಾಗ್, ಏನವೇಲಪ್ ಮತ್ತು ಪೈಲ್ ತಯಾರಿಕೆ ತರಬೇತಿಗಳನ್ನು ಹಮ್ಮಿಕೊಂಡಿದ್ದೇವೆ. 13 ದಿನಗಳ ತರಬೇತಿಗಳಾದ ಸಾಪ್ಟ ಟಾಯ್ಸ್ ಮೇಕಿಂಗ್, (ಚಿಕ್ಕ ಮಕ್ಕಳ ಆಟಿಕೆಗಳ ತಯಾರಿಕೆ) ಜೂಟ್ ಬ್ಯಾಗ್  ತಯಾರಿಕೆ ತರಬೇತಿ, ಕೊಸ್ಟೂಮ್ ಜ್ವೇಲರಿ ತಯಾರಿಕೆ ತರಬೇತಿ(ಕೃತಕ ಆಭರಣಗಳ ತಯಾರಿಕೆ ತರಬೇತಿ)ಗಳನ್ನು ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು. ಭಾಗವಹಿಸಲಿರುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿ ಪಡೆದ ನಂತರ ಸ್ವ ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ನಮ್ಮ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ, ವಿದ್ಯಾಭ್ಯಾಸ,…

Read More