Subscribe to Updates
Get the latest creative news from FooBar about art, design and business.
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
- ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
Author: admin
ಗುಬ್ಬಿ: ದಲಿತ ಮುಖಂಡ ನರಸಿಂಹಮೂರ್ತಿ ಅವರ ಹತ್ಯೆಯನ್ನು ಖಂಡಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರಿಗೆ ದಲಿತ ಪರ ಸಂಘಟನೆಗಳು ಮುತ್ತಿಗೆ ಹಾಕಿದ ಘಟನೆ ಬುಧವಾರ ಸಂಜೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೊರ ಬರುತ್ತಿದ್ದಂತೆಯೇ ಗೃಹ ಸಚಿವರಿಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಸಿ.ಕಚೇರಿ ಮುಂಭಾಗವೇ ಸಚಿವರ ಬೆಂಗಾವಲು ವಾಹನವನ್ನು ತಡೆದು ಪ್ರತಿಭಟನೆ ನಡೆಸಿದರು. ಅರಗಜ್ಞಾನೇಂದ್ರ ದಲಿತ ವಿರೋಧಿ ಗೃಹ ಸಚಿವ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳ ಬಳಿ ಪ್ರತಿಭಟನಾಕಾರರು ನ್ಯಾಯಕ್ಕಾಗಿ ಆಗ್ರಹಿಸಿದರು. ಪ್ರತಿಭಟನೆ ವೇಳೆ, ಕೆಲ ಕಾಲ ಅರಗಜ್ಞಾನೇಂದ್ರ ಅವರ ಕಾರು ಸ್ಥಳದಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೊನೆಗೆ ಪ್ರತಿಭಟನಾಕಾರರ ತೀವ್ರ ಆಕ್ರೋಶದ ನಡುವೆಯೇ ಜನ ಸಂದಣಿ ದಾಟಿಕೊಂಡು ಸಚಿವರ ಕಾರು ತೆರಳಿತು. ಈ ವೇಳೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ನಮ್ಮತುಮಕೂರು.ಕಾಂನ ಕ್ಷಣ…
ತುಮಕೂರು: ತುಮಕೂರು- ತಿಪಟೂರು- ಅರಸೀಕೆರೆ ಹಾಗೂ ತುಮಕೂರು- ಯಶವಂತಪುರ- ಬಾಣಸವಾಡಿ ನಡುವೆ ಹೊಸದಾಗಿ ಪ್ಯಾಸೆಂಜರ್ ರೈಲು ಸಂಚಾರ ಜೂನ್ 20ರಿಂದ ಆರಂಭವಾಗಲಿದೆ. ನವದೆಹಲಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ತ್ರಿಪಾಠಿ ಅವರನ್ನು ಸಂಸದ ಜಿ.ಎಸ್.ಬಸವರಾಜು ಭೇಟಿಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ. ಹೊಸದಾಗಿ ಎರಡು ರೈಲುಗಳ ಸಂಚಾರ ಆರಂಭಿಸುವ ಭರವಸೆಯನ್ನು ರೈಲ್ವೆ ಮಂಡಳಿ ಅಧಿಕಾರಿಗಳು ನೀಡಿದ್ದಾರೆ. ಜೂನ್ 20ರಂದು ನಗರದ ರೈಲು ನಿಲ್ದಾಣದಲ್ಲಿ ನೂತನ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ, , ಪ.ಪಂ. ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 50 ವರ್ಷ ವಯಸ್ಸಿನ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರರು ಟೀ ಅಂಗಡಿ ಬಳಿಯಲ್ಲಿ ಕುಳಿತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿತ್ತು. ನರಸಿಂಹಮೂರ್ತಿ ಅವರ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಆದರೆ, ಈ ಘಟನೆ ಗುಬ್ಬಿ ಜನತೆಯನ್ನು ಬೆಚ್ಚಿಬೀಳಿಸಿದೆ. ನರಸಿಂಹ ಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಮನಬಂದಂತೆ ಮಾರಕಾಸ್ತ್ರಗಳಿಂದ ಚುಚ್ಚಿದ್ದರು. ಮುಖದ ಗುರುತೇ ಸಿಗದಂತೆ ಕೊಚ್ಚಿದ್ದು, ಅಂಗೈಯನ್ನು ಕತ್ತರಿಸಿದ್ದಾರೆ. ಇದೊಂದು ಅತ್ಯಂತ ಭಯಾನಕ ಕೊಲೆಯಾಗಿದ್ದು, ಸಾರ್ವಜನಿಕರು ಈ ಕೊಲೆಯಿಂದಾಗಿ ತೀವ್ರ ಆತಂಕಕ್ಕೊಳಗಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಿರಣ್, ಧೀರಜ್, ಬಸವರಾಜ್, ಫಯಾಜ್ ಸೇರಿದಂತೆ ಐವರನ್ನು ಬುಧವಾರ ರಾತ್ರಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಗಳಿಂದ…
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ನ ೪೦ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ನಾಯಕರಿಗೆ ನ್ಯಾಯಾಲಯಕ್ಕೆ ಖುದ್ಧು ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆ ವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಇದೇ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ರೈತರು ಮತ್ತು ನಮ್ಮ ನೀರಿನ ಹಕ್ಕಿಗಾಗಿ ನಾವು ಹೋರಾಟ ಮಾಡಿದ್ದೇವು. ಕಾಂಗ್ರೆಸ್ನ ೪೦ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ನ್ಯಾಯಾಲಯ ವಿಚಾರಣೆಗೆ ಆದೇಶಿಸಿತ್ತು .ಅದರಂತೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದರು. ಬಿಜೆಪಿ ನಾಯಕರುಗಳು ವಿಧಾನಸೌಧದಲ್ಲಿ, ಹೊರಗಡೆ ಕೋವಿಡ್ ಮಾರ್ಗಸೂಚಿಗಳನ್ನು…
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಎ- ತಯಬಾ (ಎಲ್ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಇತ್ತೀಚೆಗಷ್ಟೇ ಕುಲ್ಗಾಮ್ನಲ್ಲಿ ನಡೆದಿದ್ದ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಜಾನ್ ಮೊಹಮ್ಮದ್ ಲೋನ್ ನನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಭದ್ರತಾ ಪಡೆಗಳು ಇಂದು ಮುಂಜಾನೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯದ ವಲಸಿಗರು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಗುರಿಯಾಗಿಸಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ. ಹತ್ಯೆಯಾಗಿರುವ ಉಗ್ರ ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಭಯೋತ್ಪಾದನಾ ಚಟುವಟಿಕೆಗಳ ಜೊತೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಕಳೆದ ಜೂ.೨ ರಂದು ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ’ ಎಂದು ಕಾಶ್ಮೀರ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಅಮರನಾಥ ಯಾತ್ರೆ ವೇಳೆ ದಾಳಿಗೆ ಸಂಚು ರೂಪಿಸಿದ್ದ…
ದೇಶೀಯವಾಗಿ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಹೋರಾಟ ಮಾಡುವ ಲಸಿಕೆಯನ್ನು ಭಾರತೀಯ ಸೆರಂ ಸಂಸ್ಥೆ ಅಭಿವೃದ್ದಿ ಪಡಿಸಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ ಮೊದಲ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆಯ ಸಾಧಕ-ಬಾಧಕಗಳ ಕುರಿತು ನಿರ್ಧಾರ ಕೈಗೊಳ್ಳಲು ತಜ್ಞರ ಸಮಿತಿ ಮುಂದಾಗಿದೆ. ಕ್ಯೂಎಚ್ಪಿವಿ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಅನುಮತಿ ಕೋರಿ ಜೂನ್ ೮ ರಂದು ಭಾರತೀಯ ಔಷಧ ಮಹಾ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಲಾಗಿದ್ದು ಅನುಮತಿ ನೀಡಲಾಗುತ್ತಿದೆ. ಡಿಜಿಸಿಐನ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅನುಮತಿಗೆ ಅರ್ಜಿ ಸಲ್ಲಿಸಿದ್ದು ಈ ಲಸಿಕೆ ಎಲ್ಲಾ ವಯೋಮಾನದವರಲ್ಲಿ ದೇಹದಲ್ಲಿ ಪ್ರತಿಕಾಯ ಶಕ್ತಿ ಹೆಚ್ಚು ಹೊಂದಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಲಸಿಕೆಯನ್ನು 2022ರ ವರ್ಷದ ಅಂತ್ಯದ ಮೊದಲು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ದೇಶದಲ್ಲಿ ಲಸಿಕೆ ಆರಂಭಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಜೈವಿಕ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಹಂತದ ಎರಡು ಮೂರು…
ತೆರಿಗೆ ವಂಚನೆಯ ಹಿನ್ನೆಲೆಯಲ್ಲಿ ಎಂಜಿಎಂ ಗ್ರೂಪ್ ನ ನಗರದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಮ್ಯೂಸ್?ಮೆಂಟ್ ಪಾರ್ಕ್ ಸೇರಿದಂತೆ ಇನ್ನೂ ಹಲವಾರು ವ್ಯಾಪಾರ ವ್ಯವಹಾರಗಳನ್ನು ನಡೆಸುವ ಎಂಜಿಎಂ ಗ್ರೂಪ್?ನ ಕಚೇರಿಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಲಾಗಿದೆ. ಕಂಪನಿಯಿಂದ ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಚೆನ್ನೈ, ನೆಲ್ಲೈ ಹಾಗೂ ಬೆಂಗಳೂರು ಸೇರಿದಂತೆ ಸುಮಾರು ೪೦ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಕುರಿತಂತೆ ವಿಸ್ತೃತ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. ಎನ್ಐಎ ದಾಳಿ: ಶಂಕಿತ ಭಯೋತ್ಪಾದನೆಯ ಸಂಪರ್ಕದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್?ಐಎ) ತಮಿಳುನಾಡಿನ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ. ಚೆನ್ನೈ, ಮೈಲಾದುತ್ತುರೈ, ಕಾರೈಕಲ್ ಸೇರಿದಂತೆ ಇನ್ನೂ ಐದು ಸ್ಥಳಗಳಲ್ಲಿ ಎನ್?ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವಾಹನಗಳ ತಪಾಸಣೆಯ ಸಂದರ್ಭದಲ್ಲಿ ಕೆಲವರು ಪೊಲೀಸರಿಗೆ ಬೆದರಿಸಿದ ಹಿನ್ನೆಲೆಯಲ್ಲಿ ಅವರಿಗೆ ಉಗ್ರಗಾಮಿ ಸಂಘಟನೆ ಐಸಿಸ್ ಸಂಪರ್ಕ ಇರುವ ಶಂಕೆಯಿಂದ ಪ್ರಕರಣದ…
ಕೋವಿಡ್ ನಾಲ್ಕನೇ ಅಲೆ ದಿನದಿಂದ ದಿನಕ್ಕೆ ತುಸು ಏರಿಕೆಯಾಗುವ ಮಧ್ಯೆಯೇ ಬೆಂಗಳೂರಿನ ಎರಡು ಶಾಲೆಗಳ ೩೧ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿಗೆ ಒಳಗಾಗಿರುವ ಮಕ್ಕಳ ಆರೋಗ್ಯದ ಮೇಲೆ ಬಿಬಿಎಂಪಿ ನಿಗಾ ವಹಿಸುವುದರ ಜತೆಗೆ ಎರಡೂ ಶಾಲೆಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಷಿ ಶಾಲೆಗೆ ರಜೆ ನೀಡಲಾಗಿದೆ. ನಗರದ ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ೫ ಮತ್ತು ೬ ನೇ ತರಗತಿಯಲ್ಲಿ ಓದುತ್ತಿದ್ದ ೨೧ ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಎಂಇಎಸ್ ಪಬ್ಲಿಕ್ ಸ್ಕೂಲ್ನಲ್ಲಿ ೫ ನೇ ತರಗತಿಯಲ್ಲಿ ಓದುತ್ತಿದ್ದ ೧೦ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಶಾಲೆಗಳನ್ನು ಕಂಟೈನ್ಮೆಂಟ್ ಅಂತ ಘೋಷಣೆ ಮಾಡಲಾಗಿದ್ದು, ಕೊರೋನಾ ಪಾಸಿಟಿವ್ ಬಂದಿರುವ…
ತಿರುಪತಿ: ಸ್ವಂತ ಅಣ್ಣನ ನಿರಂತರ ಅತ್ಯಾಚಾರದಿಂದ ತಂಗಿ ಗರ್ಭಿಣಿಯಾದ ಘಟನೆ ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಅಪ್ರಾಪ್ತ ವಯಸ್ಕರಾಗಗಿದ್ದಾರೆ. ಇಲ್ಲಿನ ಉಪನಗರ ಕಾಲೋನಿಯ ವ್ಯಕ್ತಿಯೊಬ್ಬ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಈತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಆಕೆ ಗಂಡನನ್ನು ತೊರೆದು ಮನೆ ಬಿಟ್ಟು ಹೋಗಿದ್ದಳಂತೆ. ನಂತರ ಈ ವ್ಯಕ್ತಿ ಇನ್ನೊಂದು ಮದುವೆಯಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಆರು ತಿಂಗಳಿಂದ ಮೊದಲ ಹೆಂಡತಿಯ ಮಗ 17ವಯಸ್ಸಿನ ಬಾಲಕ, ತನ್ನ ತಂದೆಯ ಎರಡನೇ ಹೆಂಡತಿ (ಚಿಕ್ಕಮ್ಮ)ನ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 16 ವರ್ಷದ ತನ್ನ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿಯೂ ಆತ ಬೆದರಿಕೆ ಹಾಕಿರುವ ವಿಚಾರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಕೆಲವು…
ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿ ಕ್ರಾಸ್ನಲ್ಲಿ ನಡೆದಿದೆ. ಕೊರಟಗೆರೆ ಪಟ್ಟಣ ನಿವಾಸಿ ಅಲಿಂಪಾಷ್ ಮೃತ ಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ತಮ್ಮ ಪತ್ನಿಯ ಜೊತೆಗೆ ಕೊರಟಗೆರೆಯಿಂದ ತೋವಿನಕೆರೆಗೆ ಅಕ್ಕನ ಮನೆಗೆ ಹೊಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದ ವೇಳೆ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಅಲಿಂಪಾಷ್ ಪತ್ನಿಗೆ ಕೂಡ ಗಾಯವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz