Author: admin

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ಮಧ್ಯಭಾಗದಲ್ಲಿರುವ  ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ದೇವಸ್ಥಾನ ಹಾಗೂ ಮಸ್ಕಲ್ ನ ಶ್ರೀ ಚಿಕ್ಕ ಮೈಲಾರಲಿಂಗೇಶ್ವರ ದೇವಸ್ಥಾನದ ಬಾಗಿಲು ಮುರಿದು ದೇವಸ್ಥಾನದಲ್ಲಿದ್ದ ಬೆಳ್ಳಿ ಆಭರಣಗಳು ಹಾಗೂ ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಆರೋಪಿಗಳು ಕೊನೆಗೂ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಚಿತ್ರದುರ್ಗ ಪೋಲೀಸ್ ಅಧೀಕ್ಷಕರಾದ ಪರಶುರಾಮ್ ಹಾಗೂ ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಎಚ್.ಕೆ.ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಹಿರಿಯೂರು ಉಪವಿಭಾಗ ಪೋಲೀಸ್ ಉಪಅಧೀಕ್ಷಕರಾದ ಸೈಯದ್ ರೋಷನ್ ಜಮೀರ್  ರವರ ಉಸ್ತುವಾರಿಯಲ್ಲಿ, ನಗರ ಪೋಲೀಸ್ ನಿರೀಕ್ಷಕರಾದ ವಿ.ಎಸ್.ಶಿವಕುಮಾರ್, ಐಮಂಗಲ ವೃತ್ತ ನಿರೀಕ್ಷಕರಾದ ಕೆ.ಆರ್.ರಾಘವೇಂದ್ರ, ಹೊಸದುರ್ಗ ಠಾಣೆಯ ಪೋಲೀಸ್ ನಿರೀಕ್ಷಕರಾದ ಎಂ.ಡಿ.ಫೈಜುಲ್ಲಾ ನೇತೃತ್ವದಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ.ಅನುಸೂಯ ಸೇರಿದಂತೆ ವಿವಿಧ ಪೋಲೀಸ್ ಇಲಾಖೆಯ ಸಿಬ್ಬಂದಿಗಳ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶ ಮೂಲದ ರಮೇಶ್ ತಂದೆ ರಾಮು, ಗುರುಪ್ರಸಾದ್ ತಂದೆ ನಾಗರಾಜಪ್ಪ  ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.  ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಿಂದ ಆರೋಪಿಗಳು ಕಳವು ಮಾಡಿದ್ದ…

Read More

ಬೆಂಗಳೂರು: ರವಿಚಂದ್ರನ್ ಅವರನ್ನು ಹೋಲುತ್ತಿದ್ದ ತುಮಕೂರಿನ ಆರ್ಕೆಸ್ಟ್ರಾ ಕಲಾವಿದ  ಜೂನಿಯರ್ ರವಿಚಂದ್ರನ್ ಎಂದೇ ಪರಿಚಿತರಾಗಿದ್ದ ಲಕ್ಷ್ಮಿ ನಾರಾಯಣ ಅವರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.’ ಮಂಗಳವಾರದಂದು ಸಂಪ್‌ ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡಿದಾಗ ವಿದ್ಯುತ್ ಪ್ರವಹಿಸಿ ಲಕ್ಷ್ಮಿ ನಾರಾಯಣ್ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಜೂ ರವಿಚಂದ್ರನ್ ಎಂದೇ ಖ್ಯಾತರಾಗಿದ್ದ ಲಕ್ಷ್ಮಿ ನಾರಾಯಣ್ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದವರಾಗಿದ್ದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ರವಿಚಂದ್ರನ್ ಅವರ ಅಪ್ಪಟ ಅಭಿಮಾನಿ ಆಗಿದ್ದ ಲಕ್ಷ್ಮಿನಾರಾಯಣ್, ಹಲವು ವೇದಿಕೆಗಳಲ್ಲಿ, ರವಿಚಂದ್ರನ್ ಅವರ ಹಲವು ಸಿನಿಮಾಗಳ ವಿವಿಧ ಗೆಟಪ್‌ ಗಳನ್ನು ಧರಿಸಿ ಅವರಂತೆ ಫೋಸು ನೀಡಿ ಫೋಟೊಗಳನ್ನು ತೆಗೆಸಿಕೊಂಡಿದ್ದರು. ಸದಾ ಅವರಂತೆ ಮಾತನಾಡುತ್ತಿದ್ದರು. ಘಟನೆ ಹಿನ್ನೆಲೆಯಲ್ಲಿ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿದ್ದ ಅಕ್ಕ-ತಮ್ಮ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಆಗರದಹಳ್ಳಿಯಲ್ಲಿ ನಡೆದಿದ್ದು, ಇನ್ನೂ ಬಾಳಿ ಬದುಕಬೇಕಾದ ಅಪ್ರಾಪ್ತ ವಯಸ್ಸಿನ ಸಹೋದರ, ಸಹೋದರಿ ದಾರುಣವಾಗಿ ಸಾವನ್ನಪ್ಪಿದ್ದಾರೆ 15 ವರ್ಷ ವಯಸ್ಸಿನ ಚಂದು ಹಾಗೂ 11 ವರ್ಷ ವಯಸ್ಸಿನ ಹರ್ಷ ನೀರುಪಾಲಾದವರು ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಈಜಲು ನೀರಿಗಿಳಿದಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಮೃತದೇಹಗಳಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಮನೆಯಲ್ಲೇ ಸಾನಿಟೈಸರ್​ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿರುವ ಘಟನೆ ಆರ್​.ಟಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಠದಹಳ್ಳಿಯಲ್ಲಿ ನಡೆದಿದೆ.  ಮೃತ ವ್ಯಕ್ತಿಯನ್ನು ಶಾಜಿಯಾ ಬಾನು ಎಂದು ಗುರುತಿಸಲಾಗಿದೆ. ಮದುವೆಯಾಗಿ 8 ವರ್ಷಗಳಾಗಿದ್ದು ದಂಪತಿಗಳು ಮೂರು ಮಂದಿ ಮಕ್ಕಳನ್ನು ಹೊಂದಿದ್ದಾರೆ. ಸುಖವಾಗಿಯೆ ಸಾಗುತ್ತಿದ್ದ ಸಂಸಾರ ಆದರೆ ಇತ್ತೀಚಿಗೆ ‘ನೀನು ಕಪ್ಪಗಿದ್ದೀಯಾ, ಸುಂದರವಾಗಿಲ್ಲ ‘ ಎಂದು ಪತ್ನಿಗೆ  ಕಿರುಕುಳ ಕೊಡುತ್ತಿದ್ದ . ಮಗನ ಕಿರುಕುಳ ಸಾಥ್ ಕೊಟ್ಟ ಆತನ ತಾಯಿಯೂ ಸೊಸೆಗೆ ಹಿಂಸಿಸುತ್ತಿದ್ದಳು. ಇಷ್ಟಕ್ಕೆ ನಿಲ್ಲದ ಕಿರುಕುಳ ಆಕೆ ಹೆತ್ತ ಮೂರು ಮಕ್ಕಳನ್ನೂ ಹತ್ತಿರ ಬೀಡುತ್ತಿರಲಿಲ್ಲ ಗಂಡನ ಈ ದುರ್ವತನೆಗೆ ಬೇಸತ್ತು ಪತ್ನಿ, ಏಪ್ರಿಲ್ 20ರಂದು ಮನೆಯಲ್ಲೇ ಸಾನಿಟೈಸರ್​ ಸುರಿದುಕೊಂಡು ಶಾಜಿಯಾ ಬೆಂಕಿ ಹಚ್ಚಿಕೊಂಡಿದ್ದಳು. ಸುಟ್ಟ ಗಾಯದಿಂದ ಬಳಲುತ್ತಿದ್ದ ಶಾಜಿಯಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದಿದ್ದಾಳೆ. ಆಕೆಯ ಸಾವಿಗೆ ಗಂಡ-ಅತ್ತೆಯೇ ಕಾರಣ’ ಎಂದು ಮೃತಳ ಪೋಷಕರು ದೂರಿದ್ದಾರೆ. ಆರ್​ಟಿ ನಗರ…

Read More

ಪಾವಗಡ: ಪಾವಗಡ ತಾಲ್ಲೂಕಿನ ಮುರಾರಯನಹಳ್ಳಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿನಿಗೆ ಹೆಚ್ಚಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ವಿದ್ಯಾರ್ಥಿನಿ ಮನೆಗೆ ತೆರಳಿ ಆರ್ಥಿಕ ಹಣಕಾಸು ನೆರವು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿನಿ ಗೌತಮಿ ಪೋಷಕರು, ನನ್ನ ಮಗಳು ಪಿ ಯು ಸಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳಲು ಆಸಕ್ತಿ ವಹಿಸಿದ್ದು, ಮನೆಯಲ್ಲಿ ಅರ್ಥಿಕ ತೊಂದರೆಯಿಂದ ಪೋಷಕರಾದ ನಮಗೆ ಚಿಂತೆಗೀಡಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹೆಲ್ಪ್ ಸೊಸೈಟಿ ವಿದ್ಯಾಭ್ಯಾಸಕ್ಕೆ ಬಹಳಷ್ಟು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದನ್ನು ಕಂಡು ನಾವು ಸಹ ಹೆಲ್ಪ್ ಸೊಸೈಟಿ ಅದ್ಯಕ್ಷರಲ್ಲಿ ಅರ್ಥಿಕ ಸಹಾಯಕ್ಕೆ ಮನವಿ ಮಾಡಲಾಗಿ ಕೂಡಲೇ ಸ್ಪಂದಿಸಿ ನಮ್ಮ ಮಗಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನಮ್ಮ ಮನೆಗೆ ಭೇಟಿ ನೀಡಿ ಅರ್ಥಿಕ ಹಣಕಾಸು ನೆರವನ್ನು ನೀಡಿ ವಿದ್ಯಾರ್ಥಿನಿಗೆ ದಾರಿದೀಪವಾಗಿದ್ದರೆ ಎಂದು ಕೃತಜ್ಞತೆ ಸಲ್ಲಿಸಿದರು ಈ ಸಂದರ್ಭದಲ್ಲಿ ವೀರಮ್ಮನಹಳ್ಳಿ ಲೋಕೇಶ್, ಶ್ರೀಕಾಂತ್, ಗೌತಮ್  ಹಾಜರಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ,…

Read More

ಬೆಂಗಳೂರು ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಯೆಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಎರಡು ದಿನಗಳ ಕಾಲ ಮಳೆ ಮುಂದುವರಿಯುವ  ಸಾದ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ . ಅಸಾನಿ ಚಂಡಮಾರುತ ಹಿನ್ನೆಲೆ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜನರಿಗೆ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರ ಇಳಿಯದಂತೆ ತಿಳಿಸಲಾಗಿದೆ. ಇದೇ ವೇಳೆ ಆಂಧ್ರಪ್ರದೇಶ ತೀರಕ್ಕೆ ಚಿನ್ನದ ರಥವೊಂದು ಕೊಚ್ಚಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನು ಚಂಡಮಾರುತ ಆಸಾನಿ ಎಫೆಕ್ಟ್ ಎನ್ನಲಾಗುತ್ತಿದೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯ ಗ್ರಾಮಗಳ ನಿವಾಸಿಗಳು ಮಂಗಳವಾರ (ಮೇ 10) ಚಿನ್ನದ ಬಣ್ಣದ ರಥವನ್ನು ದಡದಲ್ಲಿ ಕಂಡು…

Read More

ಕೊರಟಗೆರೆ : ತಾಲ್ಲೂಕಿನಲ್ಲಿ ಈಗಾಗಲೇ ಅನೇಕ ಭಾಗಗಳಲ್ಲಿ ಭೀಮ್ ಸಂಸ್ಥೆಯ ಅಡಿಯಲ್ಲಿ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ . ಇದೀಗ ಭೀಮ್ ಸಂಸ್ಥೆ ಮತ್ತೊಂದು ಹೆಜ್ಜೆ ಇಟ್ಟಿದ್ದು, ಕರ್ನಾಟಕದ ಗಡಿಭಾಗದ  ಬ್ಯಾಲ್ಯ ಗ್ರಾಮ ಮತ್ತು ಹಕ್ಕಿಪಿಕ್ಕಿ ಕಾಲೋನಿಯಲ್ಲಿ  ನೂತನವಾಗಿ ಉದ್ಘಾಟನೆಗೊಂಡು  ಪ್ರಾರಂಭವಾಗಿರುವ  ಭೀಮ್ ರೂರಲ್  ಡೆವಲಪ್ ಮೆಂಟ್ ಆರ್ಗನೈಸೇಷನ್ ಈ ಸಂಸ್ಥೆ ಅಡಿಯಲ್ಲಿ  ಕಂಪ್ಯೂಟರ್ ಬೇಸಿಕ್ , ಡಾಟಾ ಎಂಟ್ರಿ, ಟ್ಯಾಲಿ ವಿಥ್ ಜಿಎಸ್ ಟಿ ,ಫೋಟೋಶಾಪ್ ಮತ್ತು ಎಡಿಟಿಂಗ್ ಡಿಟಿಪಿ ಟೈಲರಿ, ಎಂಬ್ರಾಯಿಡಿಂಗ್ ಇನ್ನು ಮುಂತಾದ ಅನೇಕ ತರಬೇತಿಗಳನ್ನು  ಗ್ರಾಮೀಣ ಭಾಗದ ಬಡ ನಿರುದ್ಯೋಗಿ ಯುವಕ ಯುವತಿಯರಿಗೆ  ಉಚಿತವಾಗಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಸಂದರ್ಭವನ್ನುದ್ದೇಶಿಸಿ ಮಾತನಾಡಿದ  ಮೈಂಡ್ಟ್ರೀ ಫೌಂಡೇಷನ್ ಗ್ಲೋಬಲ್ ಹೆಡ್  ಪಣೀಶ್ ರಾವ್,  ಅನೇಕ ಗ್ರಾಮೀಣ ಭಾಗದಲ್ಲಿ  ಹೆಣ್ಣು ಮಕ್ಕಳು ಹಾಗೂ ಯುವಕರು  ಶಿಕ್ಷಣವನ್ನು ಮುಗಿಸಿ ಮನೆಯಲ್ಲಿಯೇ ಇದ್ದಾರೆ ಇನ್ನೂ ಕೆಲ ಹೆಣ್ಣುಮಕ್ಕಳು ಮದುವೆಯಾದರೂ ಕೂಡ ಗಂಡನ ಮನೆಯಲ್ಲಿ ಸುಮ್ಮನೆ ಕೂರುವ…

Read More

ತುಮಕೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ದಂಪತಿ ಸಾವಿಗೀಡಾದ ಘಟನೆ ಮಲ್ಲಸಂದ್ರ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಗುಬ್ಬಿ ತಾಲೂಕಿನ ದಂಪತಿ 52 ವರ್ಷ ವಯಸ್ಸಿನ ಈಶ್ವರಪ್ಪ, 48 ವರ್ಷ ವಯಸ್ಸಿನ ಕಲ್ಪನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ದಂಪತಿ ಇಬ್ಬರೂ ಶಿಕ್ಷಕರಾಗಿದ್ದರು. ಗುಬ್ಬಿಯ ಖಾಸಗಿ ಶಾಲೆಯಲ್ಲಿ ಈಶ್ವರಪ್ಪ, ಗುಬ್ಬಿ ಸರ್ಕಾರಿ ಶಾಲೆಯಲ್ಲಿ ಕಲ್ಪನಾ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬುಧವಾರ ತುಮಕೂರು ಕಡೆಯಿಂದ ಗುಬ್ಬಿ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಕೊರಟಗೆರೆ: ಎಣ್ಣೆಯ ಏಟಿಗೆ ಯುವಕನೋರ್ವ ಮೃತಪಟ್ಟ ಘಟನೆ ತಾಲ್ಲೂಕಿನ ಕೋಳಾಲ ಹೋಬಳಿಯ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಡು ದಾರಿಯಲ್ಲಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಎಲೆರಾಂಪುರ ಗ್ರಾಮದ ಯೋಗೀಶ್ ಬಿನ್ ಶಿವರಾಜ್ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಮೇ ೯ರಂದು ಸಂಜೆ ಕೆಲಸದಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕಂಠಮಟ್ಟ ಮದ್ಯ ಸೇವಿಸಿದ್ದ ಈತ, ಮದ್ಯ ಓವರ್ ಡೋಸ್ ಆದ ಕಾರಣ ನಿಶಕ್ತನಾಗಿ ದಾರಿಯಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಸಂಭವಿಸಿದ ಸ್ಥಳಕ್ಕೆ ಕೋಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಹಾಲಕ್ಷ್ಮಮ್ಮ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗೆ ಹೋಲಿಸಿದರೆ ಕೊಂಚ ಹೆಚ್ಚಳವಾಗಿದೆ. 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,157 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 19,494 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,986 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,66,935 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More