Author: admin

ಸ್ವಾತಂತ್ರ್ಯೊತ್ಸವ ದಿನದಂದು ಕಚೇರಿಗಳ ಮೇಲೆ ಧ್ವಜ ಹಾರಿಸದ ಆರ್‌ ಎಸ್‌ ಎಸ್‌ ನಿಜವಾಗಿಯೂ ಅವರು ದೇಶದ್ರೋಹಿಗಳಿರುವ ಸಂಘಟನೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಕಾಂಗ್ರೆಸ್‌ ವತಿಯಿಂದ ಆಯೋಜಿಸಿಲಾದ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಿರಂಗಾ ಅಪಶಕುನವೆಂದು ಹೇಳಿ ಆರ್‌ ಎಸ್‌ ಎಸ್‌ ಧ್ವಜಾರೋಹಣ ಮಾಡಿಲ್ಲ. ಕೋಮುವಾದಿಗಳು ಇತ್ತೀಚೆಗೆ ದೇಶಭಕ್ತಿಯ ಮಾತನಾಡಲು ಆರಂಭಿಸಿದ್ದಾರೆ. ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್‌ ಕೊಡುಗೆಯನ್ನು ಜನತೆ ಮರೆತಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಮಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಪಶ್ಚಾತಾಪವಾಗಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ಅನೇಕರು ನನ್ನ ದಾರಿ ತಪ್ಪಿಸಿದ್ದಾರೆ. ಆ ಬಗ್ಗೆ ನನಗೆ ಪಶ್ಚತ್ಥಾಪ ಇರೋದಾಗಿ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ಬಾಳೆಹೊನ್ನೂರು ಶ್ರೀಗಳು ಹೇಳಿದ್ದಾರೆ. ಇಂದು ಸಿದ್ಧರಾಮಯ್ಯ ಅವರು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಮಠಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ರಂಭಾಪುರಿ ಶ್ರೀಗಳು, ನಾನು ಈ ಹಿಂದೆ ಸಿದ್ಧರಾಮಯ್ಯ ಅವರಿಗೆ ಆಹ್ವಾನ ನೀಡಿದ್ದೆ. ಆ ಆಹ್ವಾನದ ಮೇರೆಗೆ ಇಂದು ಕೊಟ್ಟ ಮಾತಿನಂತೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದಾರೆ ಎಂದರು. ಇದೇ ವೇಳೆಯಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ನಮ್ಮ ಜೊತೆ ಮಾತನಾಡಿದ ಅವರು. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯನವರಿಗೆ ಪಶ್ಚಾತಾಪವಾಗಿರೋದನ್ನು ಹೇಳಿಕೊಂಡಿದ್ದಾರೆ. ಅವರನ್ನು ದಾರಿತಪ್ಪಿಸಿದ ಬಗ್ಗೆಯೂ ಮಾತನಾಡಿರೋದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶ್ರಾವಸ್ತಿಯಲ್ಲಿ 250 ರೂ. ಶಾಲಾ ಶುಲ್ಕಕ್ಕಾಗಿ 3ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಕೊಂದಿದ್ದಾರೆ. ಸಿರ್ಸಿಯಾದ ಪಂಡಿತ್ ಬ್ರಹ್ಮದತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದ ಬಾಲಕನನ್ನು ಶಿಕ್ಷಕರು ಹೊಡೆದು ಕೊಂದಿದ್ದಾರೆ. ಶಾಲಾ ಶುಲ್ಕವಾಗಿ 250 ರೂಪಾಯಿ ಪಾವತಿಸದ ಕಾರಣಕ್ಕೆ ಆರೋಪಿ ಅನುಪಮ್ ಪಾಠಕ್, ಬಾಲಕನಿಗೆ ಥಳಿಸಿದ್ದಾನೆ. ಈ ಘಟನೆ ಆಗಸ್ಟ್ 8 ರಂದು ನಡೆದಿದೆ. ಬ್ರಿಜೇಶ್ ಕುಮಾರ್ ಎಂದು ಗುರುತಿಸಲಾದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ತಪ್ಪಿತಸ್ಥ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಾಲಕನ ಹಿರಿಯ ಸಹೋದರ ಬ್ರಿಜೇಶ್ ಕಳೆದ ಎರಡು ತಿಂಗಳ ಹಿಂದೆ ಶಾಲೆಗೆ ದಾಖಲಾಗಿದ್ದು, ಮೊದಲ ತಿಂಗಳ ಶುಲ್ಕವನ್ನು ಪಾವತಿಸಿದ್ದರು. ಕುಟುಂಬಕ್ಕೆ ಆಧಾರವಾಗಿರುವ ಅವರ ಸಹೋದರ ಕೆಲಸದಿಂದ ಹೊರಗುಳಿದಿದ್ದರಿಂದ ಎರಡನೇ ತಿಂಗಳು ಶುಲ್ಕ ಪಾವತಿಸಲು ವಿಳಂಬವಾಗಿತ್ತು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಅನುದಾನ ತಂದಿರುವ ಸಮಾಧಾನ ನನಗಿದೆ. ಹಾಗಂತ ನನಗಿನ್ನೂ ಸಂಪೂರ್ಣ ತೃಪ್ತಿ ಇಲ್ಲ. ಇನ್ನಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಗ್ರಾಮದ ರಸ್ತೆಗಳ ಹಾಗೂ ಒಳಚರಂಡಿಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2.5 ಕೋಟಿ ರೂ,ಗಳನ್ನು ಮಂಜೂರು ಮಾಡಿಸಿರುವ ಲಕ್ಷ್ಮೀ ಹೆಬ್ಬಾಳಕರ್, ಶುಕ್ರವಾರ ಕಾಂಕ್ರೀಟ್ ರಸ್ತೆಗಳ ಹಾಗೂ ಒಳಚರಂಡಿಗಳ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದರು. ಜನರಿಗೆ ತುರ್ತು ಅಗತ್ಯದ ಕೆಲಸಗಳನ್ನು ಮಾಡಿಸಿದ್ದೇನೆ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡಿದ್ದೇನೆ. ಆರೋಗ್ಯ ಕ್ಷೇತ್ರದಲ್ಲಿ ಒಂದಿಷ್ಟು ಕೆಲಸಗಳನ್ನು ಮಾಡಿಸಿದ್ದೇನೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕೆಲಸಗಳಾಗಿವೆ. ನೀರಾವರಿ ಯೋಜನೆಗಳು ಬಂದಿವೆ. ಆದರೆ ಇವಿಷ್ಟರಿಂದಲೇ ನಾನು ತೃಪ್ತಿಪಡುವವಳಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ದೊಡ್ಡ ಯೋಜನೆಗಳನ್ನು ತರುವ, ಯುವಕರಿಗೆ ಉದ್ದೋಗ ಸೃಷ್ಟಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ. ಮುಂದಿನ ದಿನಗಳಲ್ಲಿ ಅವನ್ನೆಲ್ಲ ಕ್ಷೇತ್ರದ ಜನರು ಕಾಣಲು ಸಾಧ್ಯ ಎಂದು…

Read More

ಶಾಲಾ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಅಥಣಿಯ ತಾಲೂಕಿನ ವಿಜಯಪುರ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶಾಲಾ ವಾಹನ ನಜ್ಜುಗುಜ್ಜಾಗಿದ್ದು, ಇಬ್ಬರು ಚಾಲಕರು ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ: ನಿಮ್ಮ ಕ್ರೆಡಿಟ್‌ ಕಾರ್ಡ್‌ ಕ್ಯಾಶ್‌ ಬ್ಯಾಕ್‌ ಬಂದಿದೆ ಎಂದು ನಗರದ ಉಣಕಲ್‌ನ ಬ್ಯಾಂಕ್‌ ಉದ್ಯೋಗಿಗೆ ಮೊಬೈಲ್‌ಗೆ ಲಿಂಕ್‌ ಕಳುಹಿಸಿ ಬ್ಯಾಂಕ್‌ ಮಾಹಿತಿ ಪಡೆದ ವಂಚಕರು 3.12 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾನೆ. ಕ್ರೆಡಿಟ್‌ ಕಾರ್ಡ್‌ಗೆ 6 ಸಾವಿರ ಕ್ಯಾಶ್‌ ಬ್ಯಾಕ್‌ ಬಂದಿದ್ದು, ಅದನ್ನು ಪಡೆಯಲು ಲಿಂಕ್‌ ಒತ್ತಿ ಮಾಹಿತಿ ಭರ್ತಿ ಮಾಡಬೇಕು ಎಂದು ಮಹಾಂತೇಶ ಅವರ ಮೊಬೈಲ್‌ಗೆ ವಂಚಕ ಲಿಂಕ್‌ ಸಮೇತ ಸಂದೇಶ ಕಳುಹಿಸಿದ್ದ. ಅದನ್ನು ನಂಬಿದ ಅವರು ಆನ್‌ಲೈನ್‌ನಲ್ಲಿ ಈ-ಮೇಲ್‌ ಐಡಿ, ಫೋನ್‌ ನಂಬರ್‌, ಕ್ರೆಡಿಟ್‌ ಕಾರ್ಡ್‌ ನಂಬರ್‌ ಭರ್ತಿ ಮಾಡಿದ್ದಾರೆ. ಅದಾದ ಕೆಲವೇ ಸಮಯದಲ್ಲಿ ವಂಚಕ ಅವರ ಬ್ಯಾಂಕ್‌ ಖಾತೆಯಿಂದ ಏಳು ಬಾರಿ ಹಣ ವರ್ಗಾಯಿಸಿಕೊಂಡಿದ್ದಾನೆ. ಹುಬ್ಬಳ್ಳಿ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾವರ್ಕರ್ ವಾರ್ ಶುರುವಾಗಿದೆ. ಇದರ ನಡುವೆ ಈಗ ಮತ್ತೊಂದು ಹೊಸ ಗಲಾಟೆ ಶುರುವಾಗಿದೆ. ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ. ತಡರಾತ್ರಿ ಕೆಲ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ದರ್ಪ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ಹೆಸರಿಡಿ ಎಂದು ಫೋಟೋ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ನಗರದಲ್ಲಿ ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ ಸಂಬಂಧಿಸಿ ಕಾಂಗ್ರೆಸ್‌ ನ 12 ಕಾರ್ಯಕರ್ತರ FIR ದಾಖಲಿಸಲಾಗಿದೆ. ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ, ಸುಟ್ಟು ಹಾಕಿದರು. ಕಾಂಗ್ರೆಸ್ ಕಾರ್ಯಕರ್ತರಿಂದ ವೀರ್ ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡದ ಉಪ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದಾರೆ. ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸುವಂತೆ ಧಾರವಾಡ-ಬೆಳಗಾವಿ ರಸ್ತೆ ತಡೆದು ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಶಿವಾನಂದ ಸತ್ತಿಗೇರಿ ಧಾರವಾಡ ಉಪಠಾಣೆಗೆ ದೂರು ನೀಡಿದ್ದರು. ಇಂದು ಧಾರವಾಡ ಉಪಠಾಣೆಯಲ್ಲಿ ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ತುಮಕೂರು: ರಾಜಕೀಯ ದುರುದ್ದೇಶ ಇಟ್ಟುಕೊಂಡು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿದೆ. ಹೀಗೆ ಮುಂದುವರೆದರೆ ಬಿಜೆಪಿಯವರು ಕಾರ್ಯಕ್ರಮ ಮಾಡಲು ಕೂಡ ಬಿಡೋದಿಲ್ಲ ಎಂದು ಕೆ.ಎನ್.ರಾಜಣ್ಣ ಎಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಸಂತ್ರಸ್ಥರನ್ನ ವಿಚಾರಿಸಲು ಸಿದ್ದರಾಮಯ್ಯ ಹೋಗಿದ್ರು. ಬಡವರ, ನಿರಾಶ್ರಿತರ ಪರವಾಗಿ ಪರಿಶೀಲನೆಗೆ ತೆರಳಿದ್ದರು. ರಾಜಕೀಯ ದುರುದ್ದೇಶ ಇಟ್ಟುಕೊಂಡು ಮಾಡಿರೋದು ಅನಾಗರಿಕ ವರ್ತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲೆಲ್ಲೋ ಊರಲ್ಲಿ 50 ಜನ ಇರಬಹುದು. ಸಿದ್ದರಾಮಯ್ಯ ತಂಟೆಗೆ ಬಂದ್ರೆ ರಾಜ್ಯವೇ ಉರಿದು ಹೋಗಲಿದೆ. ಹೀಗೆ ಮುಂದುವರೆದರೆ ಬಿಜೆಪಿಯವರು ಕಾರ್ಯಕ್ರಮ ಮಾಡಲು ಕೂಡ ಬಿಡೋದಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸುಮ್ಮನಿದ್ದೇವೆ. ಈ ಘಟನೆಯನ್ನ ನಾವೆಲ್ಲ ಖಂಡಿಸುತ್ತೇವೆ ಎಂದರು. ಬಿಜೆಪಿಯಲ್ಲಿ ನಾಯಿ ಕೊಡೆಗಳಂತೆ ಹುಟ್ಟಿಕೊಂಡಿರುವ ಸಂಘಟನೆಗಳು ಕಾನೂನು ಕೈಗೆತ್ತಿಕೊಂಡ್ರೆ ಪರಿಣಾಮ ನೆಟ್ಟಗಿರಲ್ಲ. ಮಡಿಕೇರಿಯಲ್ಲಿ ಸಿದ್ದರಾಮಯ್ಯನವರು 26 ರಂದು ಪ್ರತಿಭಟನೆ ಮಾಡ್ತೀವಿ ಅಂತಾ ಹೇಳಿದ್ದಾರೆ. ನಾವು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗ್ತೀವಿ. ಭದ್ರತಾ ಲೋಪದ ಬಗ್ಗೆ ಸರ್ಕಾರನೇ ಒಪ್ಪಿಕೊಂಡಿದೆ. ಮೊದಲೇ ಭದ್ರತೆ ಯಾಕ್ ಕೊಡಬಾರದಿತ್ತು.…

Read More

ತಿಪಟೂರು: ಪರೀಕ್ಷಾ ಶುಲ್ಕ ಹೆಚ್ಚಳ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್ ಎಸ್ ಯು ಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಪೈ ಹೋಟೆಲ್ ವೃತ್ತದಲ್ಲಿ ಸಮಾವೇಶಗೊಂಡು, ಪರೀಕ್ಷಾ ಶುಲ್ಕ ಹೆಚ್ಚಳ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸ್ಕಾಲರ್ ಶಿಪ್ ಗಳನ್ನು ನೀಡುತ್ತಿದ್ದವು. ಬಡ ಮಕ್ಕಳು ಓದಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಶುಲ್ಕವನ್ನು ದಿಢೀರ್ 1 ಸಾವಿರ ಹೆಚ್ಚಳ ಮಾಡಲಾಗಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನಾ ರ್ಯಾಲಿಯಲ್ಲಿ ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಮಂತ್ ನಗರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ…

Read More