Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಕನಕದಾಸ ಜಯಂತಿ, ಗುರುನಾನಕ್ ಜಯಂತಿ ಸೇರಿದಂತೆ ಹಲವು ಹಬ್ಬಗಳ ಹಿನ್ನೆಲೆಯಲ್ಲಿ ನಾಳೆಯಿಂದ ದೇಶದಲ್ಲಿ ಸತತ 5 ದಿನಗಳ ಕಾಲ ಬ್ಯಾಂಕುಗಳಿಗೆ ರಜೆ ಇರಲಿವೆ. ನವೆಂಬರ್ 6 : ಭಾನುವಾರ (ವಾರದ ರಜೆ), ನವೆಂಬರ್ 8 : ಗುರುನಾನಕ್ ಜಯಂತಿ, ವಂಗ್ಲಾ ಉತ್ಸವ, ನವೆಂಬರ್ 11 : ಕನಕದಾಸ ಜಯಂತಿ, ನವೆಂಬರ್ 12 : ಶನಿವಾರ (ತಿಂಗಳ ಎರಡನೇ ಶನಿವಾರ), ನವೆಂಬರ್ 13 : ಭಾನುವಾರ (ವಾರದ ರಜೆ), ನವೆಂಬರ್ 20 : ಭಾನುವಾರ (ವಾರದ ರಜೆ) ಹೀಗೆ ಸರಣಿ ರಜೆ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಕೆಲಸಗಳನ್ನು ಮುಂಚಿತವಾಗಿ ಪ್ಲಾನ್ ಮಾಡಿಕೊಳ್ಳಬೇಕಿದೆ. ಇವುಗಳ ಹೊರತಾಗಿ, ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರದಂದು ಬ್ಯಾಂಕುಗಳು ಮುಚ್ಚಿರುತ್ತವೆ. ನವೆಂಬರ್ 12, ನವೆಂಬರ್ 13, ನವೆಂಬರ್ 20, ನವೆಂಬರ್ 26 ಮತ್ತು ನವೆಂಬರ್ 27 ಈ ದಿನಗಳಲ್ಲಿ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ತಿರುಮಣಿ ಗ್ರಾ.ಪಂ. ವ್ಯಾಪ್ತಿಯ ಆರ್.ಅಚ್ಚಮ್ಮನಹಳ್ಳಿ ಗ್ರಾಮದ ಬಳಿ ಬೆಳೆಯಲಾಗಿದ್ದ ಸುಮಾರು 61 ಕೆ.ಜಿ. ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ಗ್ರಾಮದ ಸಿದ್ದಪ್ಪ(67) ಅವರನ್ನು ಬಂಧಿಸಲಾಗಿದೆ. ಸೋಲಾರ್ ಪ್ಲಾಂಟ್ ಬ್ಲಾಕ್ 34 ಪಕ್ಕದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಮಾಹಿತಿ ಆಧರಿಸಿ ಸರ್ಕಲ್ ಇನ್ ಸ್ಪೆಕ್ಟರ್ ಕಾಂತರೆಡ್ಡಿ ನೇತ್ರತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದೆ. ಆರೋಪಿಯನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುಮಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಖರ್ಗೆ ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೆಪಿಸಿಸಿ ವತಿಯಿಂದ ಇಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. ಬೆಂಗಳೂರಿನ ವಕೀಲರ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಶನಿವಾರ ನಡೆದ ವಕೀಲರ ಭವನದ 5, 6 ಮತ್ತು 7ನೇ ಮಹಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸಮಾಜದಲ್ಲಿ ಬಹಳಷ್ಟು ವ್ಯಾಜ್ಯಗಳಿವೆ. ಇಲ್ಲಿ ನ್ಯಾಯ ದೊರೆಯುವ ವ್ಯವಸ್ಥೆಯಲ್ಲಿಯೂ ಬದಲಾವಣೆ ಆಗಬೇಕಿದೆ. ಇದಕ್ಕಾಗಿ ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆಯಿಂದ ವ್ಯಾಜ್ಯಗಳನ್ನು ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು. ಬೆಂಗಳೂರು ವಕೀಲರ ಲೈಬ್ರರಿ ಡಿಜಿಟಲೀಕರಣಕ್ಕೆ ಸಹಕಾರ : ವಕೀಲರ ಭವನ ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿ, ಕುವೆಂಪು ರವರ ಹೆಸರಿಟ್ಟಿರುವುದು ಸಂತೋಷ ತಂದಿದೆ. ವಕೀಲರ ಭವನದಲ್ಲಿ ಮಹಿಳಾ ವಕೀಲರಿಗೆ ಪ್ರತ್ಯೆಕ ಕೊಠಡಿ ಮಾಡಿರುವುದು ಸಂತಸ ತಂದಿದೆ. ಮೊದಲು ದೊಡ್ಡ ಲೈಬ್ರರಿ ಇದ್ದರೆ ದೊಡ್ಡ ವಕೀಲ ಅಂತ ಭಾವಿಸುತ್ತಿದ್ದರು.ಇಂದು ಸಣ್ಣ ಗ್ರಾಮಪಂಚಾಯತಿಯ ಲೈಬ್ರರಿಯೂ ಡಿಜಿಟಲೈಸ್ ಆಗಿದೆ. ಬೆಂಗಳೂರು ವಕೀಲರ ಲೈಬ್ರರಿಯನ್ನು…
ತಿಂಗಳಿಗೆ 3 ಸಾವಿರ ರೂಪಾಯಿ ಸಂಬಳಕ್ಕಾಗಿ ಟೀಚರ್ ಆಗಿ ಕೆಲಸ ಮಾಡಿದ್ದೆ ಎಂದು ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರ ಪುತ್ರಿ ಶ್ವೇತಾ ಬಚ್ಚನ್ ಬಹಿರಂಗಪಡಿಸಿದ್ದಾರೆ. ನವ್ಯಾ ನವೇಲಿ ನಂದಾ ಅವರ ವಾಟ್ ದ ಹೆಲ್ ನವ್ಯಾ ಕಾರ್ಯಕ್ರಮದಲ್ಲಿ ಹಣಕಾಸಿನ ವ್ಯವಹಾರ ಹಾಗೂ ತಮ್ಮ ಸಂಬಂಧಗಳ ಕುರಿತು ಮೊದಲ ಬಾರಿ ಶ್ವೇತಾ ಬಚ್ಚನ್ ಬಹಿರಂಗಪಡಿಸಿದ್ದಾರೆ. ನನಗೆ ಹಣಕಾಸಿನ ವ್ಯವಹಾರಗಳನ್ನು ನಿಭಾಯಿಸುವ ಕುರಿತು ತಾಯಿ ಜಯಾ ಬಚ್ಚನ್ ತಿಳುವಳಿಕೆ ನೀಡದೇ ಇರುವುದಕ್ಕೆ ಶ್ವೇತಾ ಬಚ್ಚನ್ ಅಸಮಾಧಾನ ಹೊರಹಾಕಿದ್ದಾರೆ. ಪ್ರಸ್ತುತ ಅಂಕಣಗಾರ್ತಿ, ಉದ್ಯಮಿ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಶ್ವೇತಾ ಬಚ್ಚನ್, ಮದುವೆ ನಂತರದ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಕಿಂಗರ್ ಗಾರ್ಡನ್ ನಲ್ಲಿ ಸಹಾಯಕ ಅಧ್ಯಾಪಕಿಯಾಗಿ ಕೆಲಸ ಮಾಡುವಾಗ ಬರುತ್ತಿದ್ದ ತಿಂಗಳಿಗೆ 3 ಸಾವಿರ ಸಂಬಳದಲ್ಲಿ ಖರ್ಚು ನಿಭಾಯಿಸುವುದು ಎಷ್ಟು ಕಷ್ಟ ಎಂದು ಹೇಳಿದರು. ಕಾಲೇಜು ದಿನಗಳಲ್ಲಿ ನಾನು ತಮ್ಮ ಅಭಿಷೇಕ್ ಬಚ್ಚನ್ ಅವರಿಂದ ಸಾಲ ಪಡೆಯುತ್ತಿದ್ದೆ. ಕಾಲೇಜು ಮಾತ್ರವಲ್ಲದೇ ಶಾಲೆಗೆ ಹೋಗುವಾಗಲೂ ತಮ್ಮನಿಂದ…
ಟ್ವಿಟರ್ ಖರೀದಿಸಿದ ಬೆನ್ನಲ್ಲೇ ಎಲಾನ್ ಮಸ್ಕ್ ಉದ್ಯೋಗಿಗಳ ವಜಾ ಮಾಡುತ್ತಿರುವುದಕ್ಕೆ ಟ್ವಿಟರ್ ಸಂಸ್ಥಾಪಕ ಜಾಕ್ ಡ್ರೊಸೆ ಕ್ಷಮೆಯಾಚಿಸಿದ್ದಾರೆ. ಟ್ವಿಟರ್ ಖರೀದಿಸಿದ ಬೆನ್ನಲ್ಲೇ ಎಲಾನ್ ಮಸ್ಕ್ ಜಗತ್ತಿನಾದ್ಯಂತ ಸುಮಾರು 7,500 ಉದ್ಯೋಗಿಗಳನ್ನು ವಜಾ ಮಾಡಿದ್ದು, ಶೇಕಡಾ 50ರಷ್ಟು ಉದ್ಯೋಗ ಕಡಿತ ನಂತರವೂ ಇನ್ನೂ ಹಲವರನ್ನು ವಜಾಗೊಳಿಸಲು ಮುಂದಾಗಿದ್ದಾರೆ. ಟ್ವಿಟರ್ ಹಿಂದೆ ಮತ್ತು ಭವಿಷ್ಯದಲ್ಲಿ ಹಾಡುತ್ತಿರುತ್ತದೆ. ಆದರೆ ಹಲವರಿಗೆ ನಮ್ಮ ಮೇಲೆ ಕೋಪವಿದೆ ಎಂಬುದು ನನಗೆ ಗೊತ್ತು. ಈ ಪರಿಸ್ಥಿತಿಯಿಂದ ಯಾಕೆ ಎಲ್ಲರೂ ಕೋಪಗೊಂಡಿರುವ ಬಗ್ಗೆ ಜವಾಬ್ದಾರಿ ಹೊರುತ್ತೇನೆ. ಅತ್ಯಂತ ಕಡಿಮೆ ಅವಧಿಯಲ್ಲಿ ಬೆಳೆದ ಈ ಕಂಪನಿಯಿಂದ ಆದ ಸಮಸ್ಯೆಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ ಎಂದರು. ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5, 41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ,” ಎಂದು ಅವರು ವಿವಿರ ನೀಡಿದರು. “ವಿವಿಧ ಉದ್ಯಮಿಗಳು 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು. ಆದರೆ, ಈ ಯೋಜನೆಗಳಿಗೆ ಭೂಮಿ,…
ರೈತರ ಸಾಲದ ಮೇಲೆ ಜಪ್ತಿ ಆಗಲಿ ಹರಾಜಾಗಲಿ ಮಾಡಬಾರದು ಎಂಬ ಕಾನೂನನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ರೈತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ರೈತರ ಸಾಲ ಮಾರುಪಾವತಿಯಾಗದಿದ್ದಾಗ ಸಮಯಾವಕಾಶ ಕೊಟ್ಟು, ಸಹಾಯ ಮಾಡಬೇಕೇ ಹೊರತಾಗಿ ಯಾವುದೇ ಜಪ್ತಿ/ ಹರಾಜು ಮಾಡುವುದು ಮಾಡಬಾರದೆಂದು ಸಹಕಾರ ಹಾಗೂ ಇತರೆ ಇಲಾಖೆಗಳಿಗೆ ಸೂಚನೆ ನೀಡಿದ್ದು, ಇಲಾಖೆಗಳು ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿವೆ ಎಂದರು. ದುಡಿಯುವ ವರ್ಗಕ್ಕೆ ಬಲ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಜಾರಿಯಾಗಿದೆ. 10 ಲಕ್ಷ ರೈತ ಕುಟುಂಬಗಳಿಗೆ ಈ ವರ್ಷ ಮುಟ್ಟಿದೆ. ರೈತ ಕೂಲಿಕಾರರ ಮಕ್ಕಳು, ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ಯೋಜನೆಯನ್ನು ವಿಸ್ತರಿಸಲಾಗಿದೆ. ದುಡಿಯುವ ವರ್ಗಕ್ಕೆ ಬಲ ತುಂಬಲಾಗುತ್ತಿದೆ. ದುಡಿಮೆ ಮಾಡುವವರಿಗೆ ಶಕ್ತಿ ತುಂಬುತ್ತಿದ್ದೇವೆ. ಆರ್ಥಿಕ ಬೆಳವಣಿಗೆಗೆ ಕಾರಣರಾಗುವವರು ಕೆಳಹಂತದ ಜನ. ದುಡಿಯುವವರಿಂದ ಮಾತ್ರ ಇದು ಸಾಧ್ಯ. ಅವರು ಆರ್ಥಿಕವಾಗಿ…
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದು, ನಗರದಲ್ಲಿನ 31 ಸಾವಿರ ಗುಂಡಿಗಳನ್ನು ಕೂಡಲೇ ಮುಚ್ಚಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ರಾಕೇಶ್ ಸಿಂಗ್ ಎಚ್ಚರಿಸಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಶನಿವಾರ ದಿಢೀರ್ ಸಭೆ ನಡೆಸಿ ರಸ್ತೆ ಗುಂಡಿ ಮುಚ್ಚುವುದರಲ್ಲಿ ನಿರ್ಲಕ್ಷ್ಯ ವಹಿಸಿದರೆ ವಲಯ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಗುರುವಾರ ಮಲ್ಲೇಶ್ವರದಲ್ಲಿ ದಂಪತಿ ರಸ್ತೆ ಗುಂಡಿ ಮುಚ್ಚುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಮತ್ತು ರಸ್ತೆ ಗುಂಡಿಯಿಂದ ಸಂಭವಿಸುತ್ತಿರುವ ಸಾವು-ನೋವು ಕುರಿತು ನಿರಂತರವಾಗಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಬೆಳಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ಕರೆಸಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಶುಕ್ರವಾರ ವಿಕಾಸಸೌಧದಲ್ಲಿ ಬಿಬಿಎಂಪಿಯ 8 ವಲಯ ಆಯುಕ್ತರು, ಜಂಟಿ ಆಯುಕ್ತರು…
ಬೆಂಗಳೂರು : ಶೀಘ್ರದಲ್ಲೇ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz