Author: admin

ರೋಗನಿರೋಧಕ ಶಕ್ತಿ ಎಂದರೆ ಥಟ್ಟನೆ ನೆನಪಾಗುವುದು ಬೆಳ್ಳುಳ್ಳಿ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಅನೇಕ ಪೋಷಕಾಂಶಗಳನ್ನು ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವು ಔಷಧೀಯ ಗುಣಗಳು ಕೂಡ ಇವೆ. ಬೆಳ್ಳುಳ್ಳಿಯು  ರಕ್ತದೊತ್ತಡವನ್ನು ತಡೆಯುತ್ತದೆ. ಈ ಮೂಲಕ ನಮ್ಮ ದೇಹದಲ್ಲಿರುವ ರಕ್ತನಾಳಗಳಿಗೆ ಆಗಬಹುದಾಗಿರುವ ಸಾಮಾನ್ಯ ಹಾನಿಗಳನ್ನು ತಡೆಯುತ್ತದೆ. ನಮ್ಮ ದೇಹದಲ್ಲಿರುವ ಅನಗತ್ಯ ಕೊಬ್ಬುಗಳನ್ನು ತೆಗೆದು ಹಾಕಲು ಇದು ಸಹಾಯಕವಾಗಿದೆ. ಮುಖ್ಯವಾಗಿ ಬೆಳ್ಳುಳ್ಳಿ ಸೇವೆಯು ಹೃದಯ ಸಂಬಂಧಿ ಕಾಯಿಲೆಗಳಿಂದ ಉಂಟಾಗಬಹುದಾಗಿರುವ ಅಪಾಯವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಬಿ 6, ಸಿ, ಫೈಬರ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳನ್ನು ಬೆಳ್ಳುಳ್ಳಿ ಹೊಂದಿದೆ. ನಮ್ಮ ದೇಹವು ಸುಸ್ಥಿತಿಯಲ್ಲಿರಲು, ನಮ್ಮ ಜೀರ್ಣಕ್ರಿಯೆಯಲ್ಲಿಯೂ ಬೆಳ್ಳುಳ್ಳಿ ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಆಹಾರದಲ್ಲಿ ಬೆಳ್ಳುಳ್ಳಿಯನ್ನು ನಮ್ಮ ಮಿತಿಯೊಳಗೆ ಬಳಸುವುದು ಉತ್ತಮ.

Read More

ಸತೀಶ್ ಕಕ್ಕೆಪದವು ಸುಮಾರು 450 ವರ್ಷಗಳ ಹಿಂದೆ ಇಟ್ಟೆ ಕೊಪ್ಪ ಪೆರಿಯ ಮಂಜವು ಕಾಲುವೆ ಯೊಂದರ ಇಕ್ಕೆಡೆಗಳಲ್ಲಿ ಎರಡು ಊರುಗಳ ಜೋಡಣೆಯಾಗಿದ್ದು, “ಮನ್ಸರ” ( ಸಂವಿಧಾನ ಜಾರಿಯಾದ ನಂತರ/ ಜಾತಿ ದೃಢೀಕರಣ ಪಡೆಯುವ ಪ್ರಕ್ರಿಯೆ ಆರಂಭವಾದ ಮೇಲೆ ಪ್ರಸ್ತುತ ಜಾತಿಪಟ್ಟಿಯ ಪ್ರಕಾರ ಹೊಲೆಯ, ಹಸಲರು, ಪಾಲೆ, ತೋಟಿ, ಆದಿ ದ್ರಾವಿಡ, ಆದಿ ಕರ್ನಾಟಕ ) ಸಾವಿರಾರು ಒಕ್ಕಲುಗಳು/ ಬಿಡಾರಗಳು ಈ ಪ್ರದೇಶದಲ್ಲಿ ಇದ್ದವು ಎಂಬುದನ್ನು ತಲೆಮಾರುಗಳಿಂದ ಕೇಳಿ ತಿಳಿಯಬಹುದಾಗಿದೆ. ಮೂಲತಃ ಪ್ರಕೃತಿ ಆರಾಧಕರಾಗಿದ್ದ ಇವರು ಮೂಡಣ ದಿಕ್ಕಿಗೆ ನಮಿಸಿ ಸೂರ್ಯ ನಮಸ್ಕಾರ ದೊಂದಿಗೆ ದಿನಚರಿಯನ್ನು ಆರಂಭಿಸುವುದು ವಾಡಿಕೆಯಾಗಿತ್ತು. ಮನ್ಸರ ಸಾಮಾಜಿಕ ಸಾಂಸ್ಕೃತಿಕ ರಾಜಕೀಯ ಚಟುವಟಿಕೆಗಳು  ಇಟ್ಟೆಕೊಪ್ಪ ಪೆರಿಯ ಮಂಜದಲ್ಲೇ ಕೇಂದ್ರೀಕೃತವಾಗಿತ್ತು. ಕಡಲ ಕಿನಾರೆಯಿಂದ ಸಹ್ಯಾದ್ರಿ ಬೆಟ್ಟಗಳ ಆಚೆಗೂ ಹತ್ತವ್ವ ಮಕ್ಕಳಿಗೂ ಹದಿನಾರು ಬರಿಯರಿಗೂ ಕೇಂದ್ರ ಇದಾಗಿತ್ತು. ಜಾತಿಯೊಳಗಿನ ಆಚಾರ ವಿಚಾರಗಳು ಏಕಾಭಿಪ್ರಾಯವಾಗಿ ಇಲ್ಲಿಂದಲೇ ನಿಯಂತ್ರಿತವಾಗುತ್ತಿತ್ತು. ಆಂತರಿಕ ಕಲಹ ಉದ್ಭವಿಸಿದಾಗ ಸಾರ್ವಜನಿಕ ಪಂಚಾಯತಿ ಕಟ್ಟೆಗೆ ತಲುಪುವ ಮುನ್ನ ಜಾತಿ ಕೂಡುಗಟ್ಟಿನ ಪಂಚಾಯತಿ ಕಟ್ಟೆಯಲ್ಲಿ…

Read More

ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು: ಸಂಚಿಕೆ: 2 ಲೇಖಕರು ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿದಾರರನ್ನು ಸಂದರ್ಶನ ಮಾಡಿ ಅವರು ಕೊಟ್ಟ ಮಾಹಿತಿಗಳನ್ನು ಅಧ್ಯಯನದಲ್ಲಿ ಬಳಕೆ ಮಾಡಲಾಗಿದೆ ) ಕರಂಗೋಲು ಪಾಡ್ದನ ಪಠ್ಯಗಳನ್ನು ಗಂಭೀರವಾಗಿ ವಿಶ್ಲೇಷಣೆಗಳಿಗೆ ಒಳಪಡಿಸಿದರೆ ಅದರ ಸಾಮಾಜಿಕ, ಧಾರ್ಮಿಕತೆ, ಐತಿಹಾಸಿಕ ಹಾಗೂ ಜನಾಂಗೀಕ ನೆಲೆಗಳ ಅರ್ಥ ಮತ್ತು ಮಹತ್ವಗಳು ನಮ್ಮ ಅರಿವಿಗೆ ಗೋಚರಿಸಬಹುದು. ಇಲ್ಲದಿದ್ದರೆ ಬರೀ ಅದರ ಆಚರಣಾತ್ಮಕ ವಿಧಾನಗಳ ವಿವರಗಳಿಗೆ ತ್ರಪ್ತಿಪಟ್ಟುಕೊಳ್ಳಬಹುದು. ಡಾ.ವಾಮನ ನಂದಾವರರು ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಸಂಪಾದಿಸಿದ ಕರಂಗೋಲು ಹಾಡನ್ನು ಉಲ್ಲೇಖಿಸುತ್ತಾರೆ. ಆ ಹಾಡು ಹೀಗೆ ಸಾಗುತ್ತದೆ; ಓ ಪೊಲಿಯೇ ಪೊಲ್ಯರೆ ಪೋ ಪುವ್ವೆ ಪೊಂಡುಲ್ಲಯ ಓ ಮಾಯಿತ ಪುಣ್ಣಮೆ ಮಾಯಿಡೇ ಪೋತುಂಡೇ ಓ ಸುಗ್ಗಿದ ಪುಣಮೆ ಸುಗ್ಗಿಢೇ…

Read More

ಮಹಾನಾಯಕ ಡಾಟ್ ಇನ್(www.mahanayaka.in) ಅಂತರ್ಜಾಲ ಮಾಧ್ಯಮವು 2020 ಅಕ್ಟೋಬರ್ 20ರಂದು ಓದುಗರಿಂದಲೇ ಲೋಕಾರ್ಪಣೆಯಾಯಿತು. ಇದೀಗ ಮಹಾನಾಯಕ ಅಂತರ್ಜಾಲ ಮಾಧ್ಯಮ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮಹಾನಾಯಕ ಮಾಧ್ಯಮವನ್ನು ಬಹಳಷ್ಟು ಪ್ರೀತಿಯಿಂದ ಜನರು ಸ್ವೀಕರಿಸಿದ್ದಾರೆ. ಮಾಧ್ಯಮದ ಉತ್ತಮ ಅಂಶಗಳನ್ನು ಗಮನಿಸಿ ನಮ್ಮನ್ನು ಪ್ರೋತ್ಸಾಹಿಸಿದ್ದಾರೆ. ತಪ್ಪುಗಳು ಕಂಡು ಬಂದಾಗ ನಮ್ಮ ಗಮನಕ್ಕೆ ತಂದು ಅವುಗಳನ್ನು ತಿದ್ದುವ ಕೆಲಸವನ್ನೂ ಮಾಡಿದ್ದಾರೆ. ಹೀಗೆ ಓದುಗರಿಂದಲೇ ಉದ್ಘಾಟನೆಗೊಂಡ ಮಹಾನಾಯಕ ಮಾಧ್ಯಮ ಕೇವಲ ಒಂದೇ ವರ್ಷಗಳಲ್ಲಿ ಲಕ್ಷಾಂತರ ಓದುಗರ ಅಚ್ಚುಮೆಚ್ಚಿನ ತಾಣವಾಗಿದೆ. ಓದುಗರ ಈ ಪ್ರೀತಿ ವಿಶ್ವಾಸಕ್ಕೆ ಮಹಾನಾಯಕ ಬಳಗ ಆಭಾರಿಯಾಗಿದೆ. ಈ ಒಂದು ವರ್ಷಗಳ ಅವಧಿಯಲ್ಲಿ ಸಾವಿರಾರು ಆನ್ ಲೈನ್ ಮಾಧ್ಯಮಗಳ ನಡುವೆಯೇ ಮಹಾನಾಯಕ ಮಾಧ್ಯಮವನ್ನು ಓದುಗರು ಪ್ರತ್ಯೇಕವಾಗಿ ಗುರುತಿಸಿದ್ದಾರೆ. ಸರ್ಕಾರದ, ಜನಪ್ರತಿನಿಧಿಗಳ ತಪ್ಪುಗಳನ್ನು ಎತ್ತಿತೋರಿಸಲು ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೋಷಿತ ಜನರ ಸಂಕಷ್ಟಗಳು, ದಲಿತ ದೌರ್ಜನ್ಯಗಳು, ಅಸ್ಪೃಷ್ಯತೆ ಆಚರಣೆ, ಕೋಮುವಾದ, ಧಾರ್ಮಿಕ ಅಸಮಾನತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮೊದಲಾದ ಘಟನೆಗಳ ಸಂದರ್ಭದಲ್ಲಿ ಜಾತಿ,…

Read More

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಸಂದರ್ಭದಲ್ಲಿ  ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ವೈದ್ಯರ ನಿರಂತರ ಚಿಕಿತ್ಸೆಯ ಬಳಿಕವೂ ಪುನೀತ್ ರಾಜ್ ಕುಮಾರ್ ಅವರು ಚೇತರಿಸಿಕೊಳ್ಳದೇ ನಿಧನರಾಗಿದ್ದಾರೆ.

Read More

ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ  ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ )  ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಹೊನ್ನವಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ, ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ಈ…

Read More

ಮಂಗಳೂರು: ನಗರದಲ್ಲಿರುವ ಪಬ್ ಗಳು ನಿಯಮ ಮೀರಿ ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿಯ ಮಂಗಳೂರು ಪೊಲೀಸರು ಗುರುವಾರ ಏಕಾಏಕಿ ಪಬ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಕೊವಿಡ್ ನಿಯಮಗಳ ಉಲ್ಲಂಘನೆ, ಪಬ್ ನೊಳಗೆ ಬೆಳಕಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಪಬ್ ಗೆ ದಾಳಿ ನಡೆಸಿದ ಪೊಲೀಸರು, ನಿಯಮ ಪಾಲನೆ ಮಾಡುವಂತೆ  ಮೇಲ್ವಿಚಾರಕರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

Read More

ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿಯಯನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ ಎಂದು ಗುರುತಿಸಲಾಗಿದೆ. ಘಟನೆಯು ಅಕ್ಟೋಬರ್ 16ರಂದು ಉಡುಪಿಯ ಇಂದ್ರಾಳಿ ಫ್ಲ್ಯಾಟ್ ನಲ್ಲಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಗೆಳತಿಯ ಮೇಲೆ ಆರೋಪಿ ಆರ್ಯನ್ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ. ಈ ವಿದ್ಯಾರ್ಥಿಯು ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಎನ್ನಲಾಗಿದೆ. ಅ.26ರಂದು ಸಂಜೆ ವೇಳೆ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗೆ ಮೆಸೇಜ್ ಹಾಕಿದ ಕಿಶೋರ್, “ ಮಿಸ್ ಯೂ ಫ್ರೆಂಡ್ಸ್, ನಾನು ಹೋಗ್ತಿದ್ದೀನಿ… ನನ್ನದು ಬ್ಯಾನರ್ ಹಾಕಿ” ಎಂದು ಸಂದೇಶ ಕಳುಹಿಸಿದ್ದಾನೆ. ಆತ್ಮಹತ್ಯೆಗೂ ಮೊದಲು ಕೆರೆಯ ಫೋಟೋವನ್ನು ಗ್ರೂಪ್ ಗೆ ಶೇರ್ ಮಾಡಿದ್ದಾನೆ ಎಂದು ಹೇಳಲಾಗಿದೆ.  ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಇನ್ನೂ ಕಾಲೇಜು ಪ್ರಾಂಶುಪಾಲ ಸುಗ್ರಮಣಿ ಅವರು ಬೈದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು  ಪೋಷಕರು ಆರೋಪಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ  ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವಯಸ್ಸಿನ ಅನಂತ್ ಭಟ್,  ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಎಂದು ಆರೋಪಿಸಲಾಗಿದೆ. ಆರೋಪಿ ರಾಜೇಶ್ ಭಟ್ ಬಳಸುತ್ತಿದ್ದ ಕಾರು ಮತ್ತು ಮೊಬೈಲ್ ಫೋನ್ ನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದ ಎಂದು ಹೇಳಲಾಗಿದೆ. ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ತನ್ನ ಕಚೇರಿಯಲ್ಲಿ ತರಬೇತಿಗಾಗಿ ಬಂದಿದ್ದ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ಭಟ್ ತಲೆ ಮರೆಸಿಕೊಂಡಿದ್ದಾನೆ.

Read More