Subscribe to Updates
Get the latest creative news from FooBar about art, design and business.
- ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
Author: admin
ತಿಪಟೂರು: ವೀರಶೈವ – ಲಿಂಗಾಯಿತ ಎಂಬ ಪ್ರತ್ಯೇಕ ಧರ್ಮ ಸ್ಥಾಪನೆಗೆ ಮುಂದಾಗದೇ ವೀರಶೈವ ಲಿಂಗಾಯಿತ ಧರ್ಮ ಸ್ಥಾಪನೆಗೆ ಎಲ್ಲಾರೂ ಒಂದಾಗಿ ಸರ್ಕಾರದಿಂದ ಮಾನ್ಯತೆ ಪಡೆಯಬೇಕಿದೆ ಎಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಚರಪಟ್ಟಾಧ್ಯಕ್ಷ ಮೃತ್ಯುಂಜಯದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು. ನಗರದ ಬಯಲುರಂಗ ಮಂದಿರದಲ್ಲಿ ಬುಧವಾರ ಲಿಂಗಾಯಿತ ವೀರಶೈವ ಸಮಾಜದ ವತಿಯಿಂದ ಆಯೋಜಿಸಿದ್ದ ಬಸವೇಶ್ವರ ಹಾಗೂ ರೇಣುಕಾಚಾರ್ಯರ ಜಯಂತೋತ್ಸವವದ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವೀರಶೈವ ಲಿಂಗಾಯಿತ ಧರ್ಮ ವಿಶ್ವದಲ್ಲಿಯೇ ಶ್ರೇಷ್ಠವಾದಂತಹ ಧರ್ಮವಾಗಿದ್ದು, ವೀರಶೈವ, ಲಿಂಗಾಯಿತ ಎಂಬ ಪ್ರತ್ಯೇಕ ಧರ್ಮಗಳ ರಚನೆಗೆ ಮುಂದಾಗುವ ಬದಲು ವೀರಶೈವ ಲಿಂಗಾಯಿತ ಧರ್ಮದ ಸ್ಥಾಪನೆಗೆ ದೇಶದಾದ್ಯಂತ ಒಂದಾಗಬೇಕಿದೆ. ಇಸ್ಲಾಂ, ಕೈಸ್ತ, ಬೌದ್ಧ ಧರ್ಮದಂತೆಯೇ ವೀರಶೈವ ಲಿಂಗಾಯಿತ ಧರ್ಮದಲ್ಲಿಯೂ ಆರ್ಥಿಕವಾಗಿ ಸದೃಢತೆ ಇಲ್ಲವರು ಅನೇಕರಿದ್ದಾರೆ. ಇತರೆ ಧರ್ಮಗಳಂತೆಯೇ ನಮ್ಮ ಧರ್ಮದ ಜನಾಂಗದವರಿಗೂ ಸಹ ಮೀಸಲಾತಿ ದೊರೆತರೆ ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಲು ಅನುಕೂಲವಾಗುತ್ತದೆ. ಇದೀಗ ಯಾವುದೇ ಸೌಲಭ್ಯ ದೊರಕೆ ಜನಾಂಗದ ಯುವಜನತೆ ಶಿಕ್ಷಣ, ಉದ್ಯೋಗ ಇತರೆ ಕ್ಷೇತ್ರದಲ್ಲಿ ಹಿನ್ನೆಡೆಯನ್ನು ಅನುಭವಿಸಿದ್ದಾರೆ. ಸರ್ಕಾರದ…
ತುಮಕೂರು: ತುಮಕೂರು ನಗರದ ಮಹಿಳಾ ಪೊಲೀಸ್ ಠಾಣೆಯ ನೂತನ ಸಬ್ ಇನ್ಸ್ ಪೆಕ್ಟರ್ ಮಂಗಳಾಮ್ಮ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಭೇಟಿಯಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ವಿ.ಎಸ್.ಸೈಯದ್ ದಾದಾಪೀರ್, ಕಾರ್ಮಿಕ ವಿಭಾಗದ ತುಮಕೂರು ಜಿಲ್ಲಾಧ್ಯಕ್ಷ ಅಬ್ದುಲ್ ರಹೀಂ ಜಿ. ಹಾಗೂ ಕಾರ್ಮಿಕ ವಿಭಾಗದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು ವರದಿ: ಎ.ಎನ್. ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹಮದ್ ಅವರ ಹುಟ್ಟು ಹಬ್ಬದ ಪ್ರಯುಕ್ತ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳಾದ ವಿ.ಎಸ್. ಸೈಯದ್ ದಾದಾಪೀರ್ ಅವರು ಈ ವೇಳೆ ಮಾತನಾಡಿ, ಡಾ. ರಫೀಕ್ ಅಹಮದ್ ರವರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಶಾಸಕರಾದ ಡಾ.ರಫೀಕ್ ಅಹಮದ್ ರವರು ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ತುಂಬಾ ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲೂ ಸಹ ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ತುಮಕೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮ ಪ್ರೋತ್ಸಾಹ ಸದಾ ಕಾಲ ಪ್ರೋತ್ಸಾಹ ನೀಡಲಿ ಎಂದು ಅವರು ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಕಾರ್ಮಿಕ…
ಅಕ್ಷಯ ತೃತೀಯ ನಂತರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಸತತ ಐದನೇ ದಿನವೂ ಚಿನ್ನದ ದರದಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದ್ದು, ಪ್ರತಿ 10 ಗ್ರಾಂಗೆ 51, 280 ಆಗಿದೆ. ಇನ್ನು ಬೆಳ್ಳಿಯ ಬೆಲೆಯಲ್ಲಿ ಶೇ.0.26ರಷ್ಟು ಕುಸಿತ ಕಂಡಿದ್ದು, ಪ್ರತಿ ಕೆಜಿಗೆ 62,882 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ : IBJA ಯ ವೆಬ್ಸೈಟ್ ಪ್ರಕಾರ, 24-ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 230 ರೂ ಕುಸಿತ ಕಂಡಿದ್ದು, 10 ಗ್ರಾಂಗೆ 51, 280 ರೂ. ಆಗಿದೆ ಇದಲ್ಲದೇ 22ಕ್ಯಾರೆಟ್ ಚಿನ್ನದ ಬೆಲೆ 47,000 ರೂ. ಆಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದೆ : ನಗರ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಚೆನ್ನೈ …
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ರೆಪೊ ದರವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. RBI ರೆಪೋ ದರವನ್ನು 0.40% ಹೆಚ್ಚಿಸಿದೆ. ಇದರೊಂದಿಗೆ ರೆಪೋ ದರ ಶೇ.4ರಿಂದ ಶೇ.4.40ಕ್ಕೆ ಏರಿಕೆಯಾಗಿದೆ. ಈ ಹಿಂದೆ, RBI ಕೊನೆಯ ಬಾರಿಗೆ ರೆಪೊ ದರವನ್ನು 22 ಮೇ 2020 ರಂದು ಬದಲಾಯಿಸಿತು. ಸಾಲದ EMI ಹೆಚ್ಚಾಗುತ್ತದೆ ರೆಪೊ ದರದಲ್ಲಿ ಆರ್ಬಿಐ ಬದಲಾವಣೆ ಮಾಡಿರುವುದು ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ದಾರಿ ಮಾಡಿಕೊಟ್ಟಿದೆ. ರೆಪೋ ದರ ಹೆಚ್ಚಳದಿಂದ ಮುಂದಿನ ದಿನಗಳಲ್ಲಿ ನಿಮ್ಮ ಗೃಹ ಸಾಲ, ಕಾರು ಸಾಲದ ಇಎಂಐ ಹೆಚ್ಚಾಗಲಿದೆ. ಈ ಹಿಂದೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ವಿತ್ತೀಯ ಪರಿಶೀಲನಾ ಸಭೆಯಲ್ಲಿ (ಎಂಪಿಸಿ) ಆರ್ಬಿಐ ಸತತ 11 ನೇ ಬಾರಿಗೆ ರೆಪೊ ದರವನ್ನು ಬದಲಾಯಿಸಲಿಲ್ಲ. ಷೇರು ಮಾರುಕಟ್ಟೆಯಲ್ಲೂ ಮಾರಾಟದ ಹಂತ: ಆರ್ಬಿಐ ಗವರ್ನರ್ ತಮ್ಮ ಭಾಷಣದಲ್ಲಿ, ಜಾಗತಿಕ ಆರ್ಥಿಕತೆಯ ಪರಿಸ್ಥಿತಿ ಹದಗೆಡುತ್ತಿದೆ. ಆರ್ಥಿಕತೆಯ ಮೇಲೆ ಹಣದುಬ್ಬರದ ಒತ್ತಡ ಮುಂದುವರಿದಿದೆ. ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರ…
ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್ವುಡ್ ‘ಭೀಮ’ನಿಂದ ಅನಾವರಣಗೊಳಿಸಿದೆ ಚಿತ್ರತಂಡ. ಬೈರಾಗಿ ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು, ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ. ‘ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ..’ ‘ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ…’ ಎಂಬ ಹಾಡನ್ನು ಅಕ್ಷಯ ತೃತೀಯ ವಿಶೇಷ ದಿನದಂದು ವಿಜಯ್ ಕುಮಾರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ’ ಅನ್ನೋದು ವಿಜಿ ಮಾತು. ‘ನೂರಾರು ಡಾನ್ಸರ್ಸ್, ಬೃಹತ್ ಸೆಟ್,…
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ 2022ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್ಗಳಿಂದ ಜಯ ಸಾಧಿಸಿದೆ. ಈ ಋತುವಿನಲ್ಲಿ ಧೋನಿ ನಾಯಕತ್ವ ವಹಿಸಿಕೊಂಡ ನಂತರ ಚೆನ್ನೈಗೆ ಮೊದಲ ಸೋಲು ಇದಾಗಿದೆ. ಗುರಿ ಬೆನ್ನತ್ತಿದ ಚೆನ್ನೈ ಪರ ಡೆವೊನ್ ಕಾನ್ವೆ ಅರ್ಧಶತಕ ಗಳಿಸಿದರು. ರುತುರಾಜ್ ಗಾಯಕ್ವಾಡ್ (28 ರನ್) ಮತ್ತು ಮೊಯಿನ್ ಅಲಿ (34 ರನ್) ಹೊರತುಪಡಿಸಿ, ಯಾವುದೇ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಚೆನ್ನೈ ಗುರಿ ಮುಟ್ಟುವಲ್ಲಿ ಹಿಂದೆ ಬಿದ್ದಿತು. ಬೆಂಗಳೂರು ಪರ ಹರ್ಷಲ್ ಪಟೇಲ್ 3 ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದರು. ಬೆಂಗಳೂರು ತಂಡಕ್ಕೆ 174 ರನ್ ಟಾರ್ಗೆಟ್ ಇದಕ್ಕೂ ಮೊದಲು ಮಹಿಪಾಲ್ ಲೊಮ್ರೊರ್ (42) ಮತ್ತು ನಾಯಕ ಫಾಫ್ ಡು ಪ್ಲೆಸಿಸ್ (38) ಅವರ ಅದ್ಭುತ ಬ್ಯಾಟಿಂಗ್ನಿಂದಾಗಿ ಆರ್ಸಿಬಿ ಚೆನ್ನೈಗೆ 174 ರನ್ಗಳ ಗುರಿಯನ್ನು ನೀಡಿತ್ತು. ಬೆಂಗಳೂರು 20 ಓವರ್ಗಳಲ್ಲಿ ಎಂಟು…
ಈಗ ಎಲ್ಲೆಲ್ಲೂ IPL ಫೀವರ್ ಶುರುವಾಗಿದೆ. ಈ ಐಪಿಎಲ್ ಹಂಗಾಮದ ನಡುವೆ YPL ಟೂರ್ನಿ ಶುರುವಾಗ್ತಿದೆ. ನಾವು ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) ಸಿಸಿಎಲ್ ಸೆಲೆಬ್ರಿಟಿ ಪ್ರೀಮಿಯರ್ ಲೀಗ್) ಕೇಳಿದ್ದೇವೆ ಇದು ಯಾವುದು YPL ಅನ್ನೋ ಪ್ರಶ್ನೆಗೆ ಉತ್ತರ ಯಜಮಾನ ಪ್ರೀಮಿಯರ್ ಲೀಗ್. ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಲಾಗಿರುವ ಈ ಟೂರ್ನಿಯ ಸಂಪೂರ್ಣ ಜವಾಬ್ದಾರಿಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ಇದೇ 7 ಮತ್ತು 8ರಂದು ನಡೆಯಲಿರುವ YPL ಟೂರ್ನಿಮೆಂಟ್ ಗಾಗಿ ವಿಷ್ಣುಸೇನಾ ಸಮಿತಿ ಇವತ್ತು ಥೀಮ್ ಸಾಂಗ್ ಬಿಡುಗಡೆಯಾಗಿದೆ. ಥೀಮ್ ಸಾಂಗ್ ಸಾಂಗ್ ಪ್ರಮೋದ್ ಮರವಂತೆ ಸಾಹಿತ್ಯ ನೀಡಿದ್ದು, ಹೇಮಂತ್ ಜೋಯಿಸ್ ಮ್ಯೂಸಿಕ್ , ಚೇತನ್ ನಾಯ್ಕ್ ಕಂಠ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಈ ಪ್ರೀಮಿಯರ್ ಲೀಗ್ ಜವಾಬ್ದಾರಿಯನ್ನು ಬೆಂಗಳೂರು ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ಯದುನಂದನ್ ಗೌಡ , ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಆನಂದ್ ವಹಿಸಿಕೊಂಡಿದ್ದಾರೆ. ಕ್ರಿಕೆಟ್ ಅನ್ನೋದನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡಿಸಿದ್ದು…
ಸಿರಾ: ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸಿರಾ ನಗರದ ಜ್ಯೋತಿ ನಗರದಲ್ಲಿ ನಡೆದ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಬೇಕೆಂದು ಜನತಾ ಜಲಧಾರೆ ಯಾತ್ರೆ ಹಮ್ಮಿಕೊಂಡಿಲ್ಲ. ಬಹುಮತ ಬರದಿದ್ದರೂ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಅವರು ಹೇಳಿದರು. ರಾಜ್ಯದಲ್ಲಿ 2023ಕ್ಕೆ ಜೆಡಿಎಸ್ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದರೆ ಪ್ರತಿ ಗ್ರಾಮ ಪಂಚಾಯಿತಿಯ ಕೇಂದ್ರದಲ್ಲಿ ಎಲ್ ಕೆಜಿಯಿಂದ 12ನೇ ತರಗತಿಯವರೆಗೆ ಇಂಗ್ಲಿಷ್ ಮತ್ತು ಕನ್ನಡ ಎರಡೂ ಮಾಧ್ಯಮದಲ್ಲಿ ಹೈಟೆಕ್ ಶಾಲೆಗಳನ್ನು ತೆರೆದು ಉಚಿತವಾಗಿ ಶಿಕ್ಷಣ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ. ರಾಜ್ಯದ ಜನತೆ…
ತುಮಕೂರು : ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಗೃಹ ಸಚಿವ ಅರಗ ಜ್ಞಾನೆಂದ್ರ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳೊಂದಗೆ ಮಾತನಾಡಿದ ಅವರು, ನಾನು ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಪ್ರಗತಿ ಬಗ್ಗೆ ಕೆಲವು ಅಧಿಕಾರಿಗಳನ್ನು ಕರೆದು ಅವರ ಜೊತೆ ಚರ್ಚೆ ಮಾಡಿದ್ದೇನೆ. ವಿಶೇಷವಾಗಿ ಕುಡಿಯುವ ನೀರು, ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಪ್ರಗತಿ ಚೆನ್ನಾಗಿದೆ. ಅಧಿಕಾರಿಗಳು ವಿಶೇಷವಾದ ಪ್ರಯತ್ನ ಮಾಡುತ್ತಿದ್ದಾರೆ ಹಾಗೂ ಕೋವಿಡ್ ಗೆ ಯಾವ ರೀತಿ ಪ್ರಿಪೇರ್ ಆಗಿದೆ, ನಾಲ್ಕನೇ ಅಲೆ ಬಂದರೆ ನಮ್ಮ ತಯಾರಿ ಏನು ಎಂಬುದರ ಬಗ್ಗೆ ಎಲ್ಲವನ್ನೂ ಮಾತನಾಡಿದ್ದೇವೆ ಎಂದರು. ಪಿಎಸ್ ಐ ಅಕ್ರಮ ಪರೀಕ್ಷೆ ಬಗ್ಗೆ ಸ್ಪಷ್ಟನೆಕೊಟ್ಟ ಗೃಹ ಸಚಿವರು, ಎಲ್ಲಾ ಕಾಲದಲ್ಲಿಯೂ ಇದು ಆಗಿದೆ ಎಂಬುದು ಹೊರಗೆ ಬರುತ್ತಿದೆ. ನನಗೆ ಮಾಹಿತಿ ಲಭ್ಯ ಆದ ತಕ್ಷಣ ಒಂದು ಸಣ್ಣ ಸುಳಿವು ಸಿಕ್ಕಿತು. ಕೇವಲ ಎರಡು ಗಂಟೆಗಳಲ್ಲಿ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಸಿ ಓ ಡಿ…