Author: admin

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ನಿಗದಿಪಡಿಸುವಂತೆ ಚೆನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಬೀದಿಗಿಳಿದ ರೈತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ತಮನೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆಗಮಿಸದ ಹಿನ್ನೆಲೆ, ರೈತರು ಕಾಂಪೌಂಡ್ ಹಾರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಸಣ್ಣ ಭೂಮಿಯಲ್ಲಿ ಉತ್ತಮ ಆದಾಯ ಪಡೆಯುವುದು ತೀರಾ ಕಡಿಮೆ ಅನ್ನುವ ಮಾತು ರೈತರಲ್ಲಿದೆ. ಅದೇ ಚಿಕ್ಕ ಭೂಮಿಯಲ್ಲಿ ಉತ್ತಮ ಆದಾಯ ಪಡೆದು ಯಶ್ವಸಿಯಾದವರ ಸಂಖ್ಯೆಯೂ ಕಡಿಮೆ ಇಲ್ಲ. ಹೀಗೆ ಒಂದು ಏಕರೆ ಭೂಮಿಯಲ್ಲಿ ಏನು ಆದಾಯ ಬರುತ್ತೆ, ಕೆಲಸಕ್ಕೆ ಬರುವ ಕೆಲಸಗಾರರಿಗೆ ಸಾಲುವುದಿಲ್ಲ ಎಂದು ಸುಮ್ಮನಾಗಿದ್ದ ರೈತ ಬಸಪ್ಪ ಗಂಜಿಹಾಳ, ಒಂದು ಎಕರೆ ಭೂಮಿಯಲ್ಲಿ ಬದನೆಕಾಯಿ , ಮೆಣಸಿನಕಾಯಿ ಸೇರಿ ಕುಟುಂಬಕ್ಕೆ ಬೇಕಾಗುವಷ್ಟು ತರಕಾರಿ ಬೆಳೆದು ಸುಮ್ಮನಾಗುತ್ತಾನೆ. ಎಂಟು ಜನವಿರುವ ತಮ್ಮ ಕುಟುಂಬಕ್ಕೆ ಸಾಕಾಗಿ ಉಳಿದ ತರಕಾರಿಯನ್ನು ದಲ್ಲಾಳರ ಮೂಲಕ ಮಾರಾಟ ಮಾಡುತ್ತಿದ್ದರು. ಹೀಗೆ ಸಾಗಿದ ಕುಟುಂಬಕ್ಕೆ ಬರ ಸಿಡಿಲೊಂದು ಬಡದಿತ್ತು. ಬದನೆಕಾಯಿ ಹುಳು ಹತ್ತಿ ಸಂಪೂರ್ಣ ನಾಶವಾಗಿ ಹೋಗಿತ್ತು. ಇದರಿಂದ ರೈತ ಬಸಪ್ಪ ಕುಟುಂಬ ಕಂಗಾಲಾಗಿತ್ತು. ಹೀಗೆ ಸುಮ್ಮನೆ ಕುಳಿತರೇ ಕೆಲಸವಾಗದು ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಭೇಟಿಯಾಗಿ ನಡೆದ ಸಂಗತಿ ಬಗ್ಗೆ ತಿಳಿಸಿದರು. ಅಧಿಕಾರಿಗಳು ನರೇಗಾ ಯೋಜನೆಯಡಿ ಇರುವ ಹಲವು ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದರು. ಆಗ…

Read More

ಗೊಬ್ಬರ, ಡೀಸೆಲ್, ಪೆಟ್ರೋಲ್, ಸಿಮೆಂಟ್, ಗ್ಯಾಸ್, ಸೇರಿದಂತೆ ಎಲ್ಲ ಬೆಲೆಗಳ ಏರಿಕೆ ಆಗಿವೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಸರ್ಕಾರ ಬಡವರ, ರೈತರ ರಕ್ತ ಹೀರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ರಾಯಚೂರಿನ‌ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೀವೆ ಅಂದ್ರು, ರೈತರ ಖರ್ಚು ಮಾಡುವುದು ದುಪ್ಪಟ್ಟು ಆಯ್ತು ಹೊರೆತು, ಆದಾಯ ಆಗಲಿಲ್ಲ. ರಾಹುಲ್ ಗಾಂಧಿ ಪಾದಯಾತ್ರೆ ಕಂಡು ಬಿಜೆಪಿ ಅವರಿಗೆ ನಡುಕು ಶುರುವಾಗಿದೆ ಎಂದರು. SC, ST ಮೀಸಲಾತಿ ವಿಚಾರ. ಪ್ರಿಯಾಂಕ  ಖರ್ಗೆ ಅವರಿಗೆ ಒತ್ತಡ ಹಾಕಿ ನಾವು ಮಾಡಿಸಿದ್ದು.  ಕಾಂಗ್ರೆಸ್ ವರದಿ ಕೊಟ್ಟಿ2 ವರ್ಷ 3 ತಿಂಗಳ ಆಗಿದೆ. ಈಗ ಸರ್ಕಾರ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ ಎಂದು ಟೀಕಿಸಿದರು. ಭಾರತ್ ಜೋಡೋ ಪಾದಯಾತ್ರೆ ಮುಗಿದ ಮೇಲೆ ಮುಂದೆ ಎರಡು ಟೀಮ್ ಮಾಡಿ ಟ್ರ್ಯಾಕ್ಟರ್, ರಥಯಾತ್ರೆ ಅಂತ ಮಾಡುತ್ತಿದ್ದೇವೆ. ಎರಡು…

Read More

ಕೊರಟಗೆರೆ: ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ್ ಕೆ.ಎನ್. ಅವರನ್ನು  ಚಿಕ್ಕನಾಯಕನಹಳ್ಳಿಗೆ ಎತ್ತಂಗಡಿ ಮಾಡಲಾಗಿದೆ. ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ.ನವೀನ್ ಕೆ.ಎನ್. ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಾತ್ಕಾಲಿಕವಾಗಿ ಚಿಕ್ಕನಾಯಕನಹಳ್ಳಿಗೆ ವರ್ಗಾವಣೆ ಮಾಡಿದ್ದಾರೆ. ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ ಕೆ.ಎನ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತಾತ್ಕಾಲಿಕ ವರ್ಗಾವಣೆ ಮಾಡಿ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆದೇಶ‌ ಹೊರಡಿಸಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ, ಆಸ್ಪತ್ರೆಗಳಿಗೆ ಅಲೆದಾಡಬೇಕಿಲ್ಲ. ಕಂದಾಯ ಇಲಾಖೆ ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನುಮುಂದೆ ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್‌ನಲ್ಲಿ ನಿಮ್ಮ ಮನೆಗೆ ಬರಲಿದೆ. ಆನ್‌ಲೈನ್ & ಆಫ್‌ಲೈನ್‌ನಲ್ಲಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅಂಚೆ ಇಲಾಖೆಯೇ ಸಂಬಂಧಪಟ್ಟ ಕಚೇರಿಗಳಿಂದ ಅದನ್ನು ಸಂಗ್ರಹಿಸಿ ನಿಖರವಾದ ವಿಳಾಸಕ್ಕೆ ತಲುಪಿಸಲಿದೆ. ರಾಜ್ಯದ ಎಲ್ಲಾ ಅಂಚೆ ಕಚೇರಿಗಳು ಕೂಡ ಈ ಸೇವೆಯನ್ನು ಒದಗಿಸಲಿವೆ. ಹೇಗಿದೆ ಈ ಸೇವೆ? ಹಾಗೆಯೇ ವಿವಿಧ ಕಾರಣಗಳಿಗಾಗಿ ಒಂದೊಮ್ಮೆ ಮರಣ ಸಂಭವಿಸಿದ್ದಲ್ಲಿ, ಅಂತಹವರು ಮರಣ ಪ್ರಮಾಣ ಪತ್ರಕ್ಕಾಗಿ ನಗರದ ಸ್ಥಳೀಯ ಸಂಸ್ಥೆಗಳಿಂದಲೋ ಅಥವಾ ಸರಕಾರಿ ಆಸ್ಪತ್ರೆಯಿಂದಲೋ ಪ್ರಮಾಣ ಪತ್ರಗಳನ್ನು ಪಡೆಯಬೇಕಾಗಿರುತ್ತದೆ. ಇನ್ಮುಂದೆ ಇರಲ್ಲ ಅಲೆದಾಟ: ಆದರೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಇದಕ್ಕಾಗಿ ನಡೆಯುತ್ತಿದ್ದ ಅಲೆದಾಟವನ್ನು ತಪ್ಪಿಸಿದೆ. ಸುಲಭವಾಗಿ ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ವಿಳಾಸಕ್ಕೆ ಜನನ ಇಲ್ಲವೇ ಮರಣ ಪ್ರಮಾಣ ಪತ್ರಗಳನ್ನು ತಲುಪಿಸುತ್ತಿದೆ. ಅರ್ಜಿ ಸಲ್ಲಿಸುವುದು…

Read More

ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(RPI) ರಾಜ್ಯ ಮಂಡಳಿ ಸಭೆಯು ಅಕ್ಟೋಬರ್ 13ರ ಗುರುವಾರ ಬೆಂಗಳೂರಿನ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಆರ್ ಪಿಐ ಮುಖಂಡರು ತಿಳಿಸಿದರು. ಕಾರ್ಯಕ್ರಮದಲ್ಲಿ ಆರ್ ಪಿಐಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವರಾದ ರಾಂದಾಸ್ ಅಠವಳೆ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ರಾಜ್ಯ ಮಂಡಳಿಯ ನಿರ್ಣಯಗಳನ್ನು ಅಂಗೀಕರಿಸಲಿದ್ದಾರೆ. ಬೆಳಗ್ಗೆ 10:30ರಿಂದ 12ಗಂಟೆಯವರೆಗೆ ಸಕ್ರಿಯ ಸದಸ್ಯರ ನೋಂದಣಿ ನಡೆಯಲಿದೆ. ಮಧ್ಯಾಹ್ನ 12ರಿಂದ ಮಧ್ಯಾಹ್ನ 1:30ರವರೆಗೆ ಉದ್ಘಾಟನಾ ಗೋಷ್ಠಿ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮತ್ತೋರ್ವ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಜೆ.ಸಿ.ವೆಂಕಟರಮಣಪ್ಪ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರ ಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿಗಳಾಗಿ ಹೈಕೋರ್ಟ್ ವಕೀಲರಾದ ವಿ.ಉಮಾಶಂಕರ್ ಹಾಗೂ ಬೆಂಗಳೂರಿನ ಹಿರಿಯ ವಕೀಲರಾದ ಸಣ್ಣಾ…

Read More

ಬೆಳಗಾವಿ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದ ಗಾಂಧಿ ನಗರದಲ್ಲಿ ನಡೆದಿದೆ. ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್‌ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್​ನಿಂದ ಹಲ್ಲೆ ಮಾಡಲಾಗಿದೆ. ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹಾದೇವಪ್ಪ ಯಾದವಾಡ ಅವರು ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರ  ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಹಿತಾಶ್ವ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಶರತ್ ಲೋಹಿತಾಶ್ವ, ‘ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಯಾವ ರೀತಿ ಸ್ಪಂದನೆ ಮಾಡ್ತಾರೆ ಅನ್ನೋದು ಗೊತ್ತಾಗಬೇಕಿದೆ’ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿ, ತಾಯಿ ಹಾಗೂ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಹತ್ತಿರ ರವಿವಾರ ರಾತ್ರಿ ನಡೆದಿದೆ.‌ ಘಟನೆಯಲ್ಲಿ ಬೈಲಹೊಂಗಲ ತಾಲೂಕಿನ ಭಾರತಿ (28) ಹಾಗೂ ವೇದಾಂತ ಪೂಜೇರಿ (6) ಇವರಿಬ್ಬರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಇವರು ದ್ವಿಚಕ್ರ ವಾಹನ ಮೇಲೆ ಸಂಚರಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ಕಾರು ಘಟಪ್ರಭಾದಿಂದ ಹುಕ್ಕೇರಿ ಕಡೆ ಬರುತ್ತಿದ್ದವು ಒಂದು ಕಾರು ಗೋಕಾಕದಿಂದ ಹುಕ್ಕೇರಿ ಕಡೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ ಎಂದು ಸಚಿವ ಶ್ರೀರಾಮಲು ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂದು ನಾನು ಅವತ್ತೇ ಹೇಳಿದ್ದೆ. ಮೀಸಲಾತಿ ಹೆಚ್ಚಳ ಮಾಡುತ್ತೇನೆ ಎಂದು ಅದು ಈಗ ಈಡೇರಿದೆ ಎಂದರು. ಮೀಸಲಾತಿ ಕೊಡಲು ನಮ್ಮ ಸರ್ಕಾರ ಬರಬೇಕು ಅಂದಿದ್ದೆ. ಆದರೆ ನನ್ನನ್ನು ಕೆಲವರು ಗೇಲಿ ಮಾಡಿದರು. ಆದರೂ ತಾಳ್ಮೆಯಿಂದ ಇದ್ದಿದ್ದಕ್ಕೆ ನಮ್ಮ ಸಮಾಜಕ್ಕೆ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More