Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಚಿತ್ರದುರ್ಗ: ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ಕೊಡ ಮಾಡುವಂತ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಇಂದು ಪ್ರದಾನ ಮಾಡಲಾಗುತ್ತದೆ. ಬಸವ ಜಯಂತಿಯ ದಿನವಾದ ಇಂದು, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುರುಘಾ ಶ್ರೀಗಳು ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ರಾಜ್ ಕುಟುಂಬ ಪ್ರಶಸ್ತಿಯನ್ನು ಸ್ವೀಕರಿಸಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಅಂಬೇಡ್ಕರ್ ಅವರ ಕಾಲದಲ್ಲಿ ಅನುಭವಿಸಿದ ಶೋಷಣೆಗಳು ಇಂದಿಗೂ ಮುಂದು ವರೆದಿವೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಂದಿಗೂ ಶೋಷಣೆ ಅನುಭವಿಸುತ್ತಿದ್ದೇವೆ.ಇದು ಅಂತ್ಯ ಕಾಣಬೇಕಾದರೆ ನಾವೆಲ್ಲರೂ ರಾಜಕೀಯ ಅಧಿಕಾರ ಪಡೆದಾಗ ಮಾತ್ರ ಸಾಧ್ಯ.ಸಿದ್ದಾಂತಗಳನ್ನು ನಮ್ಮ ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು. ನಗರದ ಎಂಪ್ರೆಸ್ ಶಾಲೆಯ ಸಭಾಂಗಣದಲ್ಲಿ ವಿವಿಧ ಪ್ರಗತಿಪರ,ದಲಿತ ಪರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಬುದ್ದ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದಾಂತಗಳನ್ನು ಸ್ವಾರ್ಥಕ್ಕೆ ಬಳಸದೇ ಸಮಾಜದ ಒಳಿತಿಗೆ ಬಳಕೆ ಮಾಡಿಕೊಳ್ಳಬೇಕಿದೆ. ದಲಿತರಲ್ಲಿ ಜಾಗೃತಿ ಮೂಡದ ಹೊರತು ಶೋಷಣೆಯಿಂದ ಹೊರ ಬರಲು ಸಾಧ್ಯವಿಲ್ಲ.ನಮ್ಮ ಹಕ್ಕು,ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿ ಬದುಕನ್ನು ಕಂಡುಕೊಳ್ಳಲು ನಾವೆಲ್ಲರೂ ಬದ್ದರಾಗಬೇಕು ಎಂದರು. ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ,ಇದೊಂದು ಆರೋಗ್ಯ ಪೂರ್ಣ ಬೆಳವಣಿಗೆ,ಬುದ್ದ, ಬಸವ, ಅಂಬೇಡ್ಕರ್ ಜಯಂತಿಗೆ ಎಲ್ಲಾ ಸಮಾಜದ ಯುವಜನತೆ ಪಾಲ್ಗೊಂಡಿರುವುದು ಸಂತೋಷ ತಂದಿದೆ.ಈ ರೀತಿಯ ಬೆಳವಣಿಗೆ ರಾಜ್ಯದ ಎಲ್ಲೆಡೆ ಆಗಬೇಕಿದೆ.ಎಲ್ಲಾ ಕಾಲದಲ್ಲಿ ಸಮಾಜದ ಒಳಿತಿಗಾಗಿ ದುಡಿದ…
ಹಿರಿಯೂರು: ಮುಸ್ಲಿಂ ಭಾಂಧವರ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಿರಿಯೂರು ನಗರದ ವಾರ್ಡ್ ನಂ.06 ರಲ್ಲಿನ ಜಾಮೀಯ ಮಸೀದಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಏರ್ಪಾಡಿಸಲಾಗಿದ್ದ ಸೌಹಾರ್ದದ ಇಪ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಬಾಂಧವರು ಏರ್ಪಡಿಸಿದ್ದ ಈ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಭಾಗವಹಿಸಿದ್ದು ನಿಜಕ್ಕೂ ಸಹ ನನಗೆ ಸಂತೋಷ ತಂದಿದೆ. ಅದರಲ್ಲೂ ಸಹ ಅಂದಿನಿಂದ ಇಂದಿನವರೆಗೂ ಈ ಹಿರಿಯೂರು ತಾಲ್ಲೂಕಿನ ಮುಸ್ಲಿಂ ಬಾಂಧವರು ನನ್ನ ಮೇಲೆ ಇಟ್ಟಿರುವಂತಹ ಪ್ರೀತಿ, ವಾತ್ಸಲ್ಯವನ್ನು ನಾನು ಎಂದಿಗೂ ಸಹ ಮರೆಯಲು ಸಾಧ್ಯವಿಲ್ಲ ಎಂದ ಅವರು, ಇದೇ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಭಾಂಧವರಿಗೂ ರಂಜಾನ್ ಹಬ್ಬದ ಶುಭಾಶಯ ತಿಳಿಸಿದರು. ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸದಸ್ಯರಾದ ಮಹಮ್ಮದ್ ಫಕೃದ್ದಿನ್ ನವರು ಮಾತನಾಡಿ, ಇಂದಿನ ಸೌಹಾರ್ದದ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು…
ತುಮಕೂರು: ನಗರದ ಎಂಪ್ರೆಸ್ ಶಾಲೆಯ ಸಭಾಂಗಣದಲ್ಲಿ ವಿವಿಧ ಪ್ರಗತಿಪರ, ದಲಿತ ಪರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಬುದ್ದ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಕಷ್ಟಗಳಿಗೆ ದೇವರು ಪರಿಹಾರ ನೀಡುತ್ತಾನೆ ಎಂಬುದಾಗಿದ್ದರೆ, ಸಾಲ ಮಾಡಿಕೊಂಡ ರೈತರು,ಸಾಲ ಮನ್ನಾಕ್ಕಾಗಿ ದೇವರ ಮುಂದೆ ಬೇಡುವ ಬದಲು ಸರಕಾರಗಳಿಗೆ ಮನವಿ ಸಲ್ಲಿಸುವ ಅಗತ್ಯವೆನಿತ್ತು ಎಂದು ಪ್ರಶ್ನಿಸಿದರು. ಇಂದು ದೇವರು ಎಂಬುದು ಒಂದು ಉದ್ಯೋಗವಾಗಿದೆ. ಜನತೆಗೆ ಇನ್ನಿಲ್ಲದ ಭಯ ಹುಟ್ಟಿಸಿ, ಅವರಿಂದು, ಒಂದಿಲ್ಲೊಂದು ಪೂಜೆ ಮಾಡಿಸಿ, ತಾವು ಹೊಟ್ಟೆ ಹೊರೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಅರಿಯದೆ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆ, ಪುನಸ್ಕಾರಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸವೇ ಸರಿ. ಮೈಮೇಲೆ ಬರುವ ದೇವರುಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಅದರಲ್ಲಿಯೂ ಕೆಳವರ್ಗದವರ ಮೇಲೆ ದೇವರುಗಳ ಬರುತ್ತಿರುವುದು ದುರದೃಷ್ಟಕರ ಎಂದರು. ತಂದೆ, ತಾಯಿ, ಗುರು, ಹಿರಿಯರು ದೇವರು ಎಂದು ಹಿರಿಯರು ಹೇಳಿದ್ದಾರೆ.ಆದರೆ ನಮ್ಮ ಜನರು ಎಂದಿಗೂ ತಂದೆ, ತಾಯಿಯಲ್ಲಿ, ಗುರುಗಳಲ್ಲಿ ದೇವರನ್ನು ಕಾಣಲಿಲ್ಲ. ಒಂದು ವೇಳೆ…
ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ವರ್ಷದಲ್ಲಿ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯಹೇಳಿದ್ದಾರೆ. ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರತಿ ವರ್ಷ ₹ 10 ಸಾವಿರ ಕೋಟಿಯಂತೆ 5 ವರ್ಷದಲ್ಲಿ ₹ 50 ಸಾವಿರ ಕೋಟಿ ನೀಡುವುದಾಗಿ ಭರವಸೆ ನೀಡಿದ್ದೆವು. ಆ ಪ್ರಕಾರ ನಾನು ಸಿಎಂ ಆಗಿದ್ದ ವೇಳೆ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ ಪ್ರಾಮಾಣಿಕವಾಗಿ ಕೆಲಸ ಮಾಡಿ, ಹಳ್ಳಿ ಹಳ್ಳಿಗೆ ನೀರು ಹರಿಯುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಬಲೇಶ್ವರ ತಾಲ್ಲೂಕಿನ ಸುಕ್ಷೇತ್ರ ಸಂಗಾಪೂರ ಎಸ್.ಎಚ್.ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಹಾಗೂ ಯಾತ್ರಿ ನಿವಾಸ ಉದ್ಘಾಟಿಸಿದ ಮಾತನಾಡಿದ ಅವರು ಭಾರತೀಯ ಸಮಾಜದಲ್ಲಿ ಜಾತ್ರೆ, ಹಬ್ಬ, ಹರಿದಿನ ಅಚರಣೆ ಪ್ರಾಚೀನ ಕಾಲದಿಂದಲೂ ಒಟ್ಟಿಗೆ ನಡೆಸಿಕೊಂಡು ಬರುವುದು…
ಒಡಿಶಾ:ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಕೊಂದು ಬಾವಿಗೆ ಎಸೆದಿರುವ ಘಟನೆ ಒಡಿಶಾದ ಸುಂದರ್ಗಢ ಜಿಲ್ಲೆಯ ಕೊಯಿಡಾ ಪೊಲೀಸ್ ವ್ಯಾಪ್ತಿಯ ಕುಲಾ ಗ್ರಾಮದಲ್ಲಿ ನಡೆದಿದೆ. ಆರೋಪಿಯ ಪಾಂಡು ಮುಂಡ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯಾಗಿದ್ದು ಈತ ಕೂಲಿ ಕಾರ್ಮಿಕನಾಗಿದ್ದಾನೆ. ಈತ ಶನಿವಾರ ರಾತ್ರಿ ಕುಡಿದು ಮನೆಗೆ ಬಂದು ಕ್ಷುಲ್ಲಕಾರಣಕ್ಕೆ ಹೆಂಡತಿ ದುಬುಲಿ ಮುಂಡಾ ಅವರೊಂದಿಗೆ ಜಗಳವಾಡಿದ್ದು, ಕೋಪ ಅತೀರೇಕ್ಕೆ ಏರೀದ್ದು ಆರೋಪಿಯು ಮೊದಲು ಕೊಡಲಿಯಿಂದ ಪತ್ನಿಯ ಮೇಲೆ ಹಲ್ಲೆ ಮಾಡಲು ಯತ್ನಿಸಿದನು.ಆದರೆ ಭಯಗೊಂಡ ಪತ್ನಿ ಆರೋಪಿಯ ಕೈಯಿಂದ ತಪ್ಪಿಸಿಕೊಂಡು ಮನೆಯ ಸಮೀಪದ ಪೊದೆಗಳಲ್ಲಿ ಅವಿತುಕೊಂಡಳು. ಈ ವೇಳೆ ಆರೋಪಿಯು 5 ವರ್ಷದ ಮಗಳು ಸೀಮಾ, 2 ವರ್ಷದ ಮಗ ರಾಜು, ಎರಡು ತಿಂಗಳ ಮಗು ಮೇಲೆ ಹಲ್ಲೆ ನಡೆಸಿ ಕೊಂದಿದ್ದಲ್ಲದೇ, ಅವರನ್ನು ಬಾವಿಗೆ ಎಸೆದು ಪರಾರಿಯಾಗಿದ್ದಾನೆ.ಭಾನುವಾರ ಬೆಳಗ್ಗೆ ದುಬುಲಿ ಹೊರ ಬಂದು ಮಕ್ಕಳನ್ನು ಹುಡುಕಿದ್ದಾಳೆ. ಈ ವೇಳೆ ಎಷ್ಟು ಹುಡುಕಿದರೂ ಮಕ್ಕಳು ಕಾಣಲಿಲ್ಲ. ಬಾವಿಯ ಬಳಿ ಬಿದ್ದಿದ್ದ ತನ್ನ ಮನೆಯ ಹೊದಿಕೆ…
ಬೆಂಗಳೂರು, ಸ್ವಯಂ ಘೋಷಣೆಯ ಆಧಾರಿತ ಭೂ ಪರಿವರ್ತನೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎರಡು ಮೂರು ದಿನಗಳಲ್ಲಿ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ತಿದ್ದುಪಡಿಗೆ ಸರ್ಕಾರ ಮುಂದಾಗಿರುವ ಬಗ್ಗೆ ರೈತರು ಆಕ್ರೋಶಗೊಂಡಿದ್ದು ಭೂ ಪರಿವರ್ತನೆ ತಿದ್ದುಪಡಿ ಮಾಡಿದಲ್ಲಿ ಉಗ್ರ ಹೋರಾಟ ಮಾಡುವ ಬಗ್ಗೆ ರೈತರು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಪರಿಚ್ಛೇದ 95 ರಲ್ಲಿ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ. ಈ ತಿದ್ದುಪಡಿ ಪ್ರಕಾರ ಯಾವುದೇ ಬಳಕೆಗಾಗಿ ಸ್ವಯಂ ಘೋಷಣೆಯನ್ನು ನೀಡುವ ಮೂಲಕ ಕೃಷಿ ಭೂಮಿಯ ಮಾಲೀಕರು ತಮ್ಮ ಭೂಮಿಯನ್ನು ಕೃಷಿಯೇತರ ಕಾರ್ಯಕ್ಕೆ ಬಳಕೆ ಮಾಡಲು ಸಾಧ್ಯವಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈಗಿರುವ ನಿಯಮದಂತೆ ಭೂ ಪರಿವರ್ತನೆಯ ಅರ್ಜಿಯನ್ನು ಕಂದಾಯ ಇಲಾಖೆ ಜಿಲ್ಲಾಧಿಕಾರಿಗಳ ಮೂಲಕ ಯೋಜನಾ ಪ್ರಾಧಿಕಾರಕ್ಕೆ ರವಾನಿಸುತ್ತದೆ. ಅಲ್ಲಿಂದ ಎಲ್ಲಾ ಭೂಸ್ಸಾಧಿನ ಅಧಿಕಾರಿಗಳು, ತಹಶೀಲ್ದಾರ್, ರೆವಿನ್ಯೂ ಇನ್ಸ್ಪೆಕ್ಟರ್ ಮೂಲಕ ಕೊನೆಯದಾಗಿ ಗ್ರಾಮ ಲೆಕ್ಕಾಕಾರಿಗೆ ಅರ್ಜಿ ತಲುಪುತ್ತದೆ.…
ನವದೆಹಲಿ: ಮುಸ್ಲಿಂಮರು ಮೇ ಒಂದರಂದು ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲು ನಿರ್ಧರಿಸಿದ್ದರು. ಆದರೆ ಚಂದ್ರನ ದರ್ಶನವಾಗದ ಕಾರಣ ಈದ್-ಉಲ್-ಫಿತರ್ ಅನ್ನು ಮೇ 3 ರಂದು ಆಚರಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಸೇರಿದಂತೆ ಉತ್ತರ ಪ್ರದೇಶ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಹಿಲಾಲ್ ಸಮಿತಿಗಳು ಈದ್-ಉಲ್-ಫಿತರ್ ಅನ್ನು ಮಂಗಳವಾರ ಆಚರಿಸಲು ನಿರ್ಧರಿಸಿದ್ದು, ಈ ಕುರಿತು ಮಾಹಿತಿ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯೂ ಚಂದ್ರನ ದರ್ಶನವಾಗಿಲ್ಲ ಎಂದು ತಿಳಿದುಬಂದಿದೆ. ಇಸ್ಲಾಂ ಧರ್ಮದವರ ಪ್ರಕಾರ ಜನರು ಅಲ್ಲಾಹನಿಂದ ಶಾಂತಿ ಮತ್ತು ಆಶೀರ್ವಾದ ಪಡೆಯಲು ಧನ್ಯವಾದಗಳನ್ನು ಅರ್ಪಿಸಲು ಇಡೀ ತಿಂಗಳನ್ನು ಮೀಸಲಿಡುತ್ತಾರೆ. ರೋಜಾ ಎಂದು ಕರೆಯಲ್ಪಡುವ ಉಪವಾಸವು ಸಾಮಾನ್ಯವಾಗಿ ರಂಜಾನ್ನ 30ನೇ ದಿನದಂದು ಅರ್ಧಚಂದ್ರನ ರಾತ್ರಿಯ ಆಚರಣೆಗಳೊಂದಿಗೆ ಕೊನೆಗೊಳ್ಳುತ್ತವೆ. ಈದ್ ಹಬ್ಬವನ್ನು ಇಸ್ಲಾಮಿಕ್ ಕ್ಯಾಲೆಂಡರ್ ನ ಹತ್ತನೇ ತಿಂಗಳ ಮೊದಲ ದಿನದಂದು ಆಚರಿಸಲಾಗುತ್ತದೆ. ಇದನ್ನು ಶವ್ವಾಲ್ ಎಂದು ಕರೆಯಲಾಗುತ್ತದೆ. ಈ ಹಬ್ಬವನ್ನು ರಂಜಾನ್ ಕೊನೆಯಲ್ಲಿ ತಿಂಗಳ ಉಪವಾಸವನ್ನು ಮುರಿಯುವ ಹಬ್ಬ ಎಂದೂ ಕರೆಯುತ್ತಾರೆ. . ರಂಜಾನ್ನ ಕೊನೆಯ ದಿನವಾದ…
ಮೈಸೂರು: ಪಿಎಸ್ ಐ ಪರೀಕ್ಷೆ ಹಗರಣವನ್ನು ಸರಿಯಾದ ರೀತಿಯಲ್ಲಿ ತನಿಖೆಮಾಡಬೇಕು ಈ ಹಗರಣವು ಕೇವಲ ಕಲುಬುರ್ಗಿಗೆ ಮಾತ್ರ ಸೀಮಿತವಾಗಬಾರದು.ಈವಿಷಯಕ್ಕೆ ಸಂಬಂಧಿಸಿದಂತೆ ಸರಿಯಾದ ಸರ್ಕಾರ ರೀತಿಯಲ್ಲಿ ತನಿಖೆ ನಡೆತಯುತ್ತಿಲ್ಲ ಕೇವಲ ಒಂದೇ ಪರೀಕ್ಷಾ ಕೇಂದ್ರದ ಬಗ್ಗೆ ಎಫ್ಐಆರ್ ಮಾಡಿದ್ದಾರೆ, ಬೇರೆ ಬೇರೆ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಪರೀಕ್ಷಾ ಅಭ್ಯರ್ಥಿಗಳು ಹಲವು ಪರೀಕ್ಷಾ ಕೇಂದ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಆದರೆ ತನಿಖೆ ಮಾತ್ರ ನಡೆಯುತ್ತಿಲ್ಲ ಎಂದರು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಮರು ಪರೀಕ್ಷೆ ಮಾಡಬೇಕೆಂದಿರುವ ಸರ್ಕಾರ 545 ಮಂದಿಯ ಒಎಂಆರ್ ಶೀಟ್ ತರಿಸಿಕೊಂಡಿದ್ದಾದರೂ ಯಾಕೆ? ಇಲ್ಲಿ ಸರ್ಕಾರದ ದಡ್ಡತನ ಎದ್ದು ಕಾಣುತ್ತಿದ್ದೆ. 300 ಜನರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಅವರೇ ಹೇಳಿದ್ದಾರೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಜನರನ್ನು ಬಂಧಿಸಿದೆ? ಒಂದೆರಡು ಕಿಂಗ್ ಪಿನ್ ಸಿಕ್ಕರೆ ಅದರಲ್ಲೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಮೈಸೂರಿನಲ್ಲಿ ಮಾತನಾಡಿದ…
ದೆಹಲಿ: `ಕೊವಿಡ್ ಲಸಿಕೆ ಪಡೆಯುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸಬಾರದುʼ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋವಿಡ್ ಸಾರ್ವಜನಿಕ ಹಿತಾಸಕ್ತಿಯಲ್ಲಿ ಸರ್ಕಾರವು ಜನರನ್ನು ಜಾಗೃತಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರೋಗವನ್ನು ತಡೆಗಟ್ಟಲು ನಿರ್ಬಂಧಗಳನ್ನು ವಿಧಿಸಬಹುದು. ಆದರೆ, ಲಸಿಕೆಯನ್ನು ಪಡೆಯಲು ಮತ್ತು ಯಾವುದೇ ರೀತಿಯ ವಿಶೇಷ ಔಷಧವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಸಾಂಕ್ರಾಮಿಕ ಸಮಯದಲ್ಲಿ ವ್ಯಾಕ್ಸಿನೇಷನ್ ಅಗತ್ಯದ ಬಗ್ಗೆ ಕೆಲವು ಸರ್ಕಾರಗಳು ವಿಧಿಸಿರುವ ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಸುಪ್ರೀಂ ಕೋರ್ಟ್ ಸಾರ್ವಜನಿಕರು ಮತ್ತು ವೈದ್ಯರೊಂದಿಗೆ ಮಾತನಾಡಿದ ನಂತರ ವರದಿಯನ್ನು ಪ್ರಕಟಿಸಲು ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಕೇಂದ್ರ ಸರ್ಕಾರವನ್ನು ಕೇಳಿದೆ. ಲಸಿಕೆ ಪರಿಣಾಮ ಮತ್ತು ದುಷ್ಪರಿಣಾಮಗಳ ಬಗ್ಗೆ ಸಂಶೋಧನಾ ಸಮೀಕ್ಷೆ ಇರಬೇಕು. ಕೇಂದ್ರ ಸರ್ಕಾರದ ಕೋವಿಡ್ ಲಸಿಕೆ ನೀತಿಯನ್ನು ಸೂಕ್ತವೆಂದು ವಿವರಿಸಿದ ಸುಪ್ರೀಂ ಕೋರ್ಟ್, ಲಸಿಕೆ ಹಾಕಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸಿದೆ. ಯಾವುದೇ ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸಲಾಗುವುದಿಲ್ಲ ಎಂದಿದೆ. ಕೊರೋನಾ ಸೋಂಕಿನ ಹರಡುವಿಕೆ…