Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಇಸ್ರೇಲ್ ನಲ್ಲಿ ಭಾರತದ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿತ್ತು. ಇವರೆಲ್ಲರೂ 13 ರಿಂದ 15 ವರ್ಷದೊಳಗಿನವರು. 18 ವರ್ಷದ ಯೊಯೆಲ್ ಲೆಹಿಂಗ್ಹಾಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಚಾಕು ಹೊಡೆದಾಟಕ್ಕೆ ಬಲಿಯಾಗಿದ್ದಾನೆ. ಇಸ್ರೇಲ್ನ ಕಿರ್ಯಾತ್ ಸೊಮೊನಾ ನಗರದಲ್ಲಿ ಈ ಘಟನೆ ನಡೆದಿದೆ. ಯೊಯೆಲ್ ಒಂದು ವರ್ಷದ ಹಿಂದೆ ತನ್ನ ಕುಟುಂಬದೊಂದಿಗೆ ಭಾರತದಿಂದ ಇಸ್ರೇಲ್ಗೆ ವಲಸೆ ಬಂದಿದ್ದ. ಅವರು ನೋಫ್ ಹಗಲಿಲ್ ಎಂಬ ಊರಿನಲ್ಲಿದ್ದಾರೆ. ಹುಟ್ಟುಹಬ್ಬದ ಸಮಾರಂಭದಲ್ಲಿ ಸುಮಾರು 20 ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಯೊಯೆಲ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಬಿನೈ ಮಿನಾಶೆ ಯಹೂದಿ ಸಮುದಾಯವು ಭಾರತದ ಮಣಿಪುರ ಮತ್ತು ಮಿಜೋರಾಂ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಗುಂಪಿಗೆ ಸೇರಿದ ಜನರು ಕಳೆದ ಎರಡು ದಶಕಗಳಿಂದ ಇಸ್ರೇಲ್ಗೆ ವಲಸೆ ಬರುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಕೋಲಾರಮ್ಮ ಕೆರೆ ಬಳಿ ಈ ಘಟನೆ ನಡೆದಿದೆ. ಶಬ್ಬಿ ಉಲ್ಲಾ ಬೇಗ್( 41) ಇರ್ಷಾದ್ ಉಲ್ಲಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರು ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ನಿವಾಸಿಗಳಾಗಿದ್ದಾರೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಕೋಲಾರ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಚೆನ್ನೈನ ಮೈಲಾಪುರ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನುಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೆನ್ನೈ ಭೇಟಿಯ ವೇಳೆ ವಿತ್ತ ಸಚಿವೆ ನಿರ್ಮಾಲಾ ಅವರು ಮೈಲಾಪುರ ಮಾರುಕಟ್ಟೆಗೆ ತೆರಳಿದ್ದಲ್ಲದೆ ಕೆಲವು ಮಾರಾಟಗಾರರು, ಗ್ರಾಹಕರೊಂದಿಗೆ ಮಾತನಾಡಿದ್ದರು. ಭಾರತದಲ್ಲಿ ಹಣದುಬ್ಬರದಲ್ಲಿ ಒಳಪಟ್ಟಿರುವ ಪ್ರಮುಖ ವಸ್ತುಗಳಲ್ಲಿ ತರಕಾರಿ ಕೂಡ ಒಂದು. ಇದು ನಿರ್ಮಲಾ ಸೀತಾರಾಮನ್ ಅವರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಒಂದಾಗಿದೆ. ವೀಡಿಯೋದಲ್ಲಿ ಅವರು ಮಾರುಕಟ್ಟೆಯಲ್ಲಿ ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದು ಕಂಡುಬಂತು. ಜತೆಗೆ ಅದರ ದರದ ಕುರಿತು ವಿಚಾರಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2024ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡಿಯನ್ ರೋಡ್ ಕಾಂಗ್ರೆಸ್ 81 ನೇ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಚಿವರು ತಮ್ಮ ಭಾಷಣದಲ್ಲಿ ಉತ್ತರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. 8,000 ಕೋಟಿ ಮೌಲ್ಯದ ರಸ್ತೆ ಯೋಜನೆಗಳನ್ನು ಉತ್ತರ ಪ್ರದೇಶಕ್ಕೆ ಉಡುಗೊರೆಯಾಗಿ ನೀಡಿದ್ದು, 2024 ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಮೋದಿ ಸರ್ಕಾರವು ಮುಂಬರುವ ದಿನಗಳಲ್ಲಿ ಯುಪಿಗೆ ಐದು ಲಕ್ಷ ಕೋಟಿ ರೂಪಾಯಿಗಳನ್ನು ಅನುಮೋದಿಸಲಿದೆ. ಪ್ರಸ್ತುತ ಎಂಟು ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಇಂದು ನೀಡಲಾಗುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2022 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರು ಆಯ್ಕೆಯಾಗಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಸಾಮಾಜಿಕ ಕ್ಷೇತ್ರದಿಂದ ಬೆಂಗಳೂರಿನ ಎನ್ ಮುನಿಸ್ವಾಮಿ, ಕೃಷಿ ಕ್ಷೇತ್ರದಿಂದ ಚಿಕ್ಕಬಳ್ಳಾಪುರದ ಜಿ.ಎನ್.ನಾಗಪ್ಪ, ಬೆಳಗಾವಿಯ ಸಮಾಜ ಸೇವಕ ನಾಗಪ್ಪ ಎಚ್.ಕೋಣಿ, ಕಲಬುರಗಿಯ ರಂಗ ಕಲಾವಿದೆ ಪಿ.ಪದ್ಮಾ, ಮೈಸೂರಿನ ಸಮಾಜ ಸೇವಕ ಎಸ್. ಎಚ್ ಸುಭಾಷ್, ಕಲೆ ಮತ್ತು ಸಮಾಜ ಸೇವೆ ಕ್ಷೇತ್ರದಿಂದ ಬಳ್ಳಾರಿಯ ಉಷಾರಾಣಿ ಅವರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರವು ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಮೂಲಕ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ ಅಸಮಾಧಾನ ಶಮನಗೊಳಿಸಿದೆ. ಇಂದು ವಿಧಾನಸೌಧದಲ್ಲಿ ಸ್ವಾಮೀಜಿಗಳ ಉಪಸ್ಥಿತಿಯಲ್ಲೇ ಅದ್ಧೂರಿ ಮಹರ್ಷಿ ವಾಲ್ಮೀಕಿ ಜಯಂತಿ ನಡೆಸಲು ಸಜ್ಜಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಮುಂಡಿ ಬೆಟ್ಟದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ದಿವ್ಯ ರಥೋತ್ಸವ ಸಂಭ್ರಮದಿಂದ ನಡೆದಿದ್ದು ಆಶ್ವಯುಜ ಶುಕ್ಲ ಪೂರ್ಣಮಿ ಉತ್ತರ ಭಾದ್ರ ನಕ್ಷತ್ರ ಬೆಳಗ್ಗೆ 7.50 ರಿಂದ 8.10 ರ ಒಳಗೆ ಸಲ್ಲುವ ಶುಭ ಮಹೂರ್ತದಲ್ಲಿ ರಥಾರೋಹಣ ಮಂಟಪೋತ್ಸವ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ದೇವಿ ದರ್ಶನ ಪಡೆದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಸ್.ಎ.ರಾಮದಾಸ್ ಇತರರು ಭಾಗವಹಿಸಿದ್ದರು. ಇನ್ನು ಧಾರ್ಮಿಕ ದತ್ತಿ ಇಲಾಖೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ ಈ ಸಾಲಿನಲ್ಲಿ ಅ. 8 ರಿಂದ 14 ರವರೆಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಮಹಾ ರಥೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ಶನಿವಾರ ದೇವಿಯ ದೇವಾ ಲಯದಲ್ಲಿ ಬೆಳಗ್ಗೆಯಿಂದಲೇ ಆಶ್ವಯುಜ ಶುಕ್ಲ ಚತುರ್ದಶಿ ಪೂರ್ವಭಾದ್ರ ನಕ್ಷತ್ರ, ಕಳಶಾರೋಹಣದ, ಗಜಾರೋಹಣ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮ ನಡೆದಿದ್ದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆಯಲಾಗಿದೆ. ಮೈಸೂರಿನ ಮುನೇಶ್ವರ ನಗರದ ನಿವಾಸಿ ಮದನ್ ಕುಮಾರ್(೨೫) ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬದವರ ಒಪ್ಪಿಗೆ ಮೇರೆಗೆ ಪಡೆದ ಹೃದಯ, ಶ್ವಾಸಕೋಶಗಳು, ೨ ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳಿಂದ 9 ಮಂದಿಯ ಜೀವವನ್ನು ಆಸ್ಪತ್ರೆಯ ವೈದ್ಯರು ಉಳಿಸಿದ್ದಾರೆ. ಅ.5 ರಂದು ಸಿದ್ದಾರ್ಥ ಬಡಾವಣೆಯಲ್ಲಿ ರಸ್ತೆ ಅಪಘಾತದಿಂದ ಗಾಯಗೊಂಡು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ಮದನ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಮದನ್ ಕುಮಾರ್ನನ್ನು ಎರಡು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಮೆದುಳು ನಿಷ್ಕ್ರಿಯವಾಗಿರುವುದನ್ನು ಗಮನಿಸಿದ ಆಸ್ಪತ್ರೆ ವೈದ್ಯರು, ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ಅಂಗಾಂಗದ ದಾನದ ಬಗ್ಗೆ ಮದನ್ ಪತ್ನಿಗೆ ಮಾಹಿತಿ ನೀಡಿ ಅವರ ಒಪ್ಪಿಗೆ ನೀಡಿದ ಬಳಿಕ ಒಂಬತ್ತು ರೋಗಿಗಳಿಗೆ ಅಂಗಾಂಗವನ್ನು ರವಾನಿಸಿ ಅಳವಡಿಸಲಾಗಿದೆ. ನಮ್ಮತುಮಕೂರು.ಕಾಂನ…
ತುಮಕೂರು : ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎದುರೇ ಹೇಳಿದರು. ಈ ಮೂಲಕ ಮುಂದಿನ ಮುಖ್ಯಮಂತ್ರಿ ಯಾರೆಂಬ ವಿವಾದಕ್ಕೆ ತೆರೆಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ನಗರದಲ್ಲಿ ಅರಣ್ಯ ಇಲಾಖೆ ವತಿಯಿಂದ 68ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ ನಿಮಿತವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಚವ್ಹಾಣ್ ಅವರು ಸೈಕಲಿಂಗ್ ಸ್ಪರ್ಧೆಗೆ ಚಾಲನೆ ನೀಡಿದರು. ಬೆಳಗಾವಿ ಅರಣ್ಯ ವೃತ್ತದಿಂದ ರಾಣಿ ಚೆನ್ನಮ್ಮ ವನ್ಯಜೀವಿ ಬುತರಾಮನಹಟ್ಟಿ ಉದ್ಯಾನದದಿಂದ 14 ಕಿಲೋ ಮೀಟರ್ ಸೈಕಲ್ ಮೂಲಕ ಸಂಚಾರಿಸಿ ವನ್ಯಜೀವಿ ಸಂರಕ್ಷಣೆ ಮತ್ತು ವನ್ಯಜೀವಿಯ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ 12 ವರ್ಷದ ಮಕ್ಕಳಿಂದ 60 ವರ್ಷದ ವೃದ್ಧರದವರೆಗೂ ಸೈಕ್ಲಿಂಗ್ ನಲ್ಲಿ ಭಾಗವಹಿಸಿದ್ದರು. ಸುಮಾರು 65 ಜನ ಈ ಸ್ಪರ್ಧೆಯಲ್ಲಿದ್ದರು. ಆರ್ ಎಫ್ ಓ ಶ್ರೀನಾಥ್ ಕಡೋಲ್ಕರ , ಪ್ರಕಾಶ್ ಸುನಿವಾಗಲೇಕರ್, ಸಂಜು ದೇಶಪಾಂಡೆ, ಇನಾಮ್ದಾರ್ ರಾಜು ನಾಯಕ್ ಇತರರು ಸ್ಪರ್ಧೆಯಲ್ಲಿ ಭಾಗವಹಿಸಿ ವನ್ಯಜೀವಿ ಸಂರಕ್ಷಣೆ ಮತ್ತು ವನ್ಯಜೀವಿಯ ಜನಜಾಗೃತಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಕಲ್ಲೋಳ್ಕರ್, ಸಹಾಯಕ ಸಂರಕ್ಷಣಾಧಿಕಾರಿ ಬೆಳಗಾವಿ ಉಪ ವಿಭಾಗ ಎಂ.ಬಿ.…