Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಬೆಂಗಳೂರು: ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ.ರಾಜಶೇಖರ ಮನಸೂರ ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರರಾಗಿರುವ ಡಾ. ರಾಜಶೇಖರ ಮನಸೂರ ಅವರು ಜೈಪುರ ಅತ್ರೌಲಿ ಘರಾಣೆ ಸಂಗೀತದ ಮೇರು ಗಾಯಕರಾಗಿದ್ದರು.ಇಂಗ್ಲೆಂಡ್ ನಲ್ಲಿ ಶಿಕ್ಷಣ ಪೂರೈಸಿ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಆಲ್ ಇಂಡಿಯಾ ರೇಡಿಯೊದ ಉನ್ನತ ಶ್ರೇಣಿಯ ಕಲಾವಿದರಾಗಿದ್ದ ಇವರು ಬಹಳಷ್ಟು ಪ್ರಮುಖ ವೇದಿಕೆಯಲ್ಲಿ ಕಛೇರಿ ನೀಡಿದ್ದಾರೆ. ಇವರ ಗಾಯನದ ಧ್ವನಿಮುದ್ರಿಕೆಗಳನ್ನು ಭೋಪಾಲ್ ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಮನುಕುಲ ಸಂಗ್ರಹಾಲಯದಲ್ಲಿ ಸಂಗ್ರಹಿಸಿಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಹಿರಿಯೂರು: ಮೇ 1 ವಿಶ್ವದಾದ್ಯಂತ ಕಾರ್ಮಿಕರ ದಿನಾಚರಣೆ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಕನ್ನಡದ ಚಲನಚಿತ್ರ ನಟಿ, ನಿರ್ಮಾಪಕಿ, ಹಾಗೂ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ರಾಜ್ಯಧ್ಯಕ್ಷರಾದ ಮುನಿರತ್ನ ಯಾದವ್ ಅವರು ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ ಕಾರ್ಮಿಕರ ದಿನಾಚರಣೆಯ ಶುಭಾಶಯ ತಿಳಿಸಿದರು. ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಮಹತ್ವವಾದ ಸಾದನೆಗಳು ಕಾರ್ಮಿಕರಿಗೆ ಸಿಗಬೇಕಾಗಿರುವಂತಹ ಪಿ ಎಫ್ ಇ ಎಸ್ ಐ ಯಂತಹ ಕಾರ್ಮಿಕರಿಗೆ ಸಿಗಬೇಕಾಗಿರುವ ಮೂಲಭೂತ ಸೌಕರ್ಯಗಳು ಸಹ ಇಂದಿನ ದುರಾಡಳಿತ ಬಿ ಜೆ ಪಿ ಸರ್ಕಾರದಲ್ಲಿ ಮುಳುಗಿಹೋಗಿರುವುದು ನಿಜಕ್ಕೂ ಸಹ ಇದು ಅಮಾನವೀಯ ವಿಷಯವಾಗಿದೆ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿರು. ಇಂದಿನ ದಿನಗಳಲ್ಲಿ ರೈತರು ಮತ್ತು ಕಾರ್ಮಿಕರು ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಹಾಗೂ ಕನಿಷ್ಟ ತಿಂಗಳ ವೇತನವು ಸಹ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ ಹಾಗಾಗಿ ಅವರು ಜೀವನ ನಿರ್ವಾಹಣೆ ಹೇಗೆ ಸಾಧ್ಯ , ಇಂದಿನ ದಿನಗಳಲ್ಲಿ ಈ ಬಿ ಜೆ ಪಿ ಸರ್ಕಾರದ ಆಡಳಿತದಿಂದ ಕಾರ್ಮಿಕರಿಗೆ ಯಾವುದೆ ತರಹದ ಸವಲತ್ತುಗಳು…
ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ವತಿಯಿಂದ ತಾಯಿಟೊಣಿ ಗ್ರಾಮ ಜಗಳೂರು ತಾಲ್ಲೂಕು ದಾವಣಗೆರೆ ಜಿಲ್ಲೆ ಗ್ರಾಮ ಶಾಖೆ ಉದ್ಘಾಟನೆ ಮತ್ತು ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು. ತಾಯಿಟೊಣಿ ಗ್ರಾಮದ S.C. ಮತ್ತುS.T. ಸಮುದಾಯದವರು ಹಾಗೂ ರೆಡ್ಡಿ ಸಮುದಾಯದವರು ಒಟ್ಟಾಗಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ.ಕೆ ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಪಿ.ಎಮ್.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್.ವೃಷಬೆಂದ್ರಬಾಬು.ಬಿ.ರೊಪ್ಪ ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ.ಟಿ.ಸಿ ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ.ಆರ್.ಗ್ರಾಮಸ್ಥರಾದ ಪ್ರಹ್ಲಾದ ರೆಡ್ಡಿ ಕುಬೇಂದ್ರ ರೆಡ್ಡಿ ಮೋಹನ್ ರೆಡ್ಡಿ ರಘು ರೆಡ್ಡಿ ಮಂಜುನಾಥ್ ರೆಡ್ಡಿ ಬಾಬು ರಾಜೇಂದ್ರ ಪ್ರಸಾದ್ ಟಿ.ಸಿ.ನಾಗೇಂದ್ರ.ಟಿ.ಸಿ ಪಂಚಾಕ್ಷರಿ ಎ.ಯಲ್ಲಪ್ಪ ಪ್ರಶಂತ್ ನಿವೃತ್ತ ಪೊಲೀಸ್ ಹೊನ್ನೂರಪ್ಪ ಟಿ ಮತ್ತು ಮುಂತಾದ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆಡೆಸಿಕೊಟ್ಟರು . ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ತುಮಕೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾರ್ಮಿಕರ ದಿನಾಚರಣೆ ಅಂಗವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವಿಭಾಗದ ವತಿಯಿಂದ ಸುಮಾರು 200 ಜನ ಪದಾಧಿಕಾರಿಗಳು ಈ ಕಾರ್ಯಕ್ರಮಕ್ಕೆ ಹೊರಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆರ್. ರಾಮಕೃಷ್ಣ ಹಾಗೂ ಮಾಜಿ ಶಾಸಕರು ಡಾ.ರಫೀಕ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಪ್ರಯಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕೆಪಿಸಿಸಿ ಕಾರ್ಮಿಕರ ವಿಭಾಗದ ವಿ.ಎಸ್.ಸೈಯದ್ ದಾದಾಪೀರ್, ಅಬ್ದುಲ್ ರಹೀಮ್ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಹಾಗೂ ಕಾರ್ಮಿಕರ ವಿಭಾಗದ ಜಿಲ್ಲಾ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ : ಹಿಂದೂ ಮುಸ್ಲಿಂ ಎಂದಿಗೂ ಸಹೋದರರಿದ್ದಂತೆ ನಾವೆಲ್ಲ ಭಾರತೀಯರು, ಪಾವಗಡದ ಅಳಿಯನಾಗಿ ಇಂದು ಪವಿತ್ರವಾದ ರಂಜಾನ್ ಹಬ್ಬದ ಪ್ರಯುಕ್ತ ಹೆಲ್ಪ್ ಸೊಸೈಟಿ ವತಿಯಿಂದ ಮಹಿಳೆಯರಿಗೆ ಸೀರೆ ಹಾಗೂ ದಿನಸಿ ಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿ ನನ್ನ ಕೈ ಇಂದ ವಿತರಿಸುತ್ತಿರುವುದು ನನಗೆ ತುಂಬಾ ಖುಷಿ ಉಂಟಾಗುತ್ತಿದೆ ಎಂದು ಖ್ಯಾತ ತೆಲುಗು ಚಿತ್ರ ನಟ ಸಾಯಿರಾಮ್ ಶಂಕರ್ ಅಭಿಪ್ರಾಯಪಟ್ಟರು. ಪಾವಗಡ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಇಂದು ರಂಜಾನ್ ಪ್ರಯುಕ್ತ ಸುಮಾರು 50ಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರಿಗೆ ಸೀರೆ ಹಾಗೂ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡುತ್ತ ಹೆಲ್ಪ್ ಸೊಸೈಟಿ ಸಂಸ್ಥೆ ಮೂಲಕ ಮಾನಂ ಶಶಿಕಿರಣ್ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಇಮ್ರಾನ್,ಮಾತನಾಡುತ್ತ ಪ್ರತಿವರ್ಷ ಎಲ್ಲಾ ಹಬ್ಬ ಹರಿದಿನಗಳಿಗೆ ಸಹಾಯ ಹಸ್ತ ನೀಡುತ್ತಿರುವ ಹೆಲ್ಪ್ ಸೊಸೈಟಿ ಮತ್ತಷ್ಟು ಸೇವಾ ಕಾರ್ಯ ನಡೆಸಲು ಭಗವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಈ ಸರಳ ಕಾರ್ಯಕ್ರಮದಲ್ಲಿ…
ತುಮಕೂರು : ತುಮಕೂರು ಜಿಲ್ಲಾ ಕಾಂಗ್ರೆಸ್ಸಮಿತಿ ಕಾರ್ಮಿಕರ ವಿಭಾಗ ವತಿಯಿಂದ ದಿವಂಗತ ಪ್ರಕಾಶಂ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಕೆಪಿಸಿಸಿ, ಐಎಂಟಿ ಸಿಯು ರಾಜ್ಯ ಅಧ್ಯಕ್ಷರಾಗಿದ್ದ ಪ್ರಕಾಶಂರವರು ನೆನ್ನೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ವಿಭಾಗದ ವತಿಯಿಂದ ಮೌನ ಆಚರಣೆಯ ಮೂಲಕ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಸೈಯದ್ ದಾದಾಪೀರ್, ಅಬ್ದುಲ್ ರಹೀಂ ಅಧ್ಯಕ್ಷರು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಎ.ಎನ್. ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ನಗರದ ಎನ್. ಆರ್. ಕಾಲೋನಿಯಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿ, ನಾವೆಲ್ಲರೂ ಒಂದೇ ಎಂದು ಭಾವೈಕ್ಯತೆ ತೋರಿಸಿದ್ದಾರೆ ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ನರಸಿಂಹ ಮೂರ್ತಿ, ಇಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರಂಗೆ ಇದ್ದೇವೆ. ಕೆಲವು ಕಿಡಿಗೇಡಿಗಳು ಜಾತಿ ಜಾತಿ ಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಾವು ಗಳು ಇದ್ಯಾವುದಕ್ಕೂ ಗಮನ ಕೊಡಬಾರದು ನಾವುಗಳು ಹಿಂದೂ ಮುಸ್ಲಿಂ ಒಂದೇ ಎಂದು ತೋರಿಸಬೇಕು ಎಂದರು . ಈ ಸಂದರ್ಭದಲ್ಲಿ ತುಮಕೂರು ನಗರ ಮಾಜಿ ಶಾಸಕ ರಫೀಕ್ ಅಹಮದ್, ದೊರೆಸ್ವಾಮಿ, ಡಾ.ಚಿದಾನಂದ್ ಮೂರ್ತಿ, ನರಸಿಂಹ ಮೂರ್ತಿ, ನಾಗಣ್ಣ, ರೂಪಶ್ರೀ, ಸಯ್ಯದ್ ನಯಾಜ್, ತಾಜುದ್ದೀನ್ ಶರೀಫ್ ಉಪಸ್ಥಿತರಿದ್ದರು ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ವ್ಯವಸ್ಥಿತವಾಗಿ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದುರುದ್ದೇಶದಿಂದಲೇ ಈಶ್ವರಪ್ಪನವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ದೂರಿದರು. ತುಮಕೂರು ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿಗೆ ಸಂಬಂಧಿಸಿದ ಅಕ್ರಮದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿರುವುದು ಬಿಜೆಪಿ ಸರ್ಕಾರ. ಅಕ್ರಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಪರಾಧ ಹೇಗಾಗುತ್ತದೆ. ಅಕ್ರಮವನ್ನು ಮುಚ್ಚಿ ಹಾಕಿದರೆ ಅಕ್ರಮ ಆಗುತ್ತದೆ. ಈ ಅಕ್ರಮದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಅವರನ್ನು ಪತ್ತೆಹಚ್ಚಿ ಬಂಧಿಸಿದರೆ ಅಪರಾಧವಾಗುತ್ತದೆಯೇ ಎಂದು ಪ್ರಶ್ನಿಸಿದರು. ಅಕ್ರಮವನ್ನು ಮುಚ್ಚಿ ಹಾಕುವ ಕೆಲಸವನ್ನು ಬಹಳ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಮಾಡುತ್ತಾ ಬಂದಿದೆ. ಆರ್ಕಾವತಿ ಹಗರಣ, ಹ್ಯೂಬ್ಲೆಟ್ ವಾಚ್ ಹಗರಣವನ್ನು ಮುಚ್ಚಿ ಹಾಕಿದ್ದು ಯಾರು ಎಂದು ಸಿ.ಟಿ. ರವಿ ಪ್ರಶ್ನಿಸಿದರು. ಯಾವ ಗುತ್ತಿಗೆದಾರರು 40 ಪರ್ಸಂಟೇಜ್ ಕಮೀಷನ್ ಕೊಟ್ಟು ಕೆಲಸ ಮಾಡಲು ಸಾಧ್ಯವಿದೆ. ಇದೆಲ್ಲ…
ತಿಪಟೂರು: ತೆಂಗುಕಲ್ಪತರು ನಾಡಿನ ಕೊಬ್ಬರಿ ಮಾರುಕಟ್ಟೆಯ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ಕುಡುಕರು ಅನೈತಿಕ ಚಟುವಟಿಕೆಗಳ ತಾಣವಾಗಿದೆ ತುಮಕೂರು ವಿಶ್ವವಿದ್ಯಾನಿಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರಾರಂಭ ಮಾಡಿದ್ದ ತೆಂಗು ಹಾಗೂ ತೆಂಗಿನ ಉತ್ಪನ್ನಗಳ ಸಂಸ್ಕರಣ ಪ್ರಯೋಗಗಾಲಯ ಪ್ರಾರಂಭದಿಂದಲೂ ಗ್ರಹಣ ಹಿಡಿದಿದೆ . ಕಲ್ಪತರು ನಾಡು ತಿಪಟೂರು ತುರುವೇಕೆರೆ ಚಿಕ್ಕನಾಯ್ಕನಹಳ್ಳಿ ಹಾಸನ ಸೇರಿದಂತೆ ರಾಜ್ಯದ ಹಲವಾರು ಭಾಗಗಳ ತೆಂಗು ಬೆಳೆಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ವಿಶ್ವವಿಖ್ಯಾತ ಒಣಕೊಬ್ಬರಿ ಮಾರುಕಟ್ಟೆಯನ್ನು ಸಹ ಹೊಂದಿದೆ ಒಂದೆಡೆ ತೆಂಗಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೆಂಗಿನ ಮೌಲ್ಯವರ್ಧನೆಗಾಗಿ ಕ್ರಮವಹಿಸಬೇಕು ಎನ್ನುವ ಕೂಗು ತಿಪಟೂರಿನಲ್ಲಿ ಹಲವಾರು ವರ್ಷಗಳಿಂದ ಕೇಳಿ ಬಂದಿತ್ತು. ಆದರೆ, ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಎಪಿಎಂಸಿ ಅವರಣದಲ್ಲಿ ಪ್ರಾರಂಭಿಸಿರುವ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ತಾಲ್ಲೂಕಿನ ತೆಂಗುಬೆಳೆಗಾರರಲ್ಲಿ ಹೊಸ ಬರವಸೆ ಉಂಟುಮಾಡಿತ್ತು. ತೆಂಗು ಹಾಗೂ ತೆಂಗು ಉತ್ಪನ್ನಗಳ ಮೇಲೆ ಹೊಸ ಹೊಸ ಪ್ರಯೋಗ ನಡೆಯಬಹುದು ಎನ್ನುವ ಆಸೆ ಚಿಗುರೊಡೆಯುವಂತೆ…
ಕುಣಿಗಲ್: ಜನತಾ ಜಲಧಾರೆಗೆ ತೆರಳುತ್ತಿದ್ದ ಬಸ್ ಹಾಗೂ ಆಟೋವೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂದ ಘಟನೆ ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಳಿಯೂರು ದುರ್ಗ ಸಮೀಪದ ಅರ್ಜುನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೆಡಿಎಸ್ ನ ಜನತಾ ಜಲಧಾರೆ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರುತ್ತಿದ್ದ ಬಸ್ ಮತ್ತು ಒಂದೇ ಕುಟುಂಬದ ಐವರನ್ನು ದೇಗುಲಕ್ಕೆ ಕರೆದೊಯ್ಯುತ್ತಿದ್ದ ಆಟೋ ನಡುವೆ ಮಾರ್ಗಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಸಮೀಪದ ಗದ್ದೆಗೆ ಉರುಳಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಗೌಡಗೆರೆ ಗ್ರಾಮದ ರಾಮಯ್ಯ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5