Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಕಂಪನಿ ವೆಬ್ ಸೈಟ್ ಡೇಟಾ ಅಳಿಸಿ ಹೋಗಿ ಲಕ್ಷಾಂತರ ರೂಪಾಯಿ ನಷ್ಟಕ್ಕೆ ಕಾರಣವಾಗಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ ಸುಲಿಗೆ ಮಾಡಿದ ಆರೋಪದಡಿ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಕಿಡ್ನಾಪ್ ಒಳಗಾದ ಅಜಯ್ ಪಾಂಡೆ ಎಂಬಾತ ದೂರು ನೀಡಿದ ಮೇರೆಗೆ ಚೈತನ್ಯ ಶರ್ಮಾ, ವೈಭವ್ ಹಾಗೂ ಅಮಿತ್ ಎಂಬಾತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ನಾಲ್ವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಚೈತನ್ಯ ಬಾಣಸವಾಡಿಯಲ್ಲಿ ಲ್ಯಾಂಪ್ಸ್ ಕಾರ್ಟ್ ಕಂಪನಿಯ ಮಾಲೀಕನಾಗಿದ್ದ. ಉದ್ಯಮಕ್ಕೆ ವೆಬ್ ಸೈಟ್ ಸಿದ್ದಪಡಿಸುವಂತೆ ಅಜಯ್ ಪಾಂಡೆಗೆ ಸೂಚಿಸಿದ್ದ. ಇದರಂತೆ ಪಾಂಡೆ ವೆಬ್ ಡಿಸೈನ್ ಮಾಡಿಕೊಟ್ಟಿದ್ದ. ಒಂದು ವರ್ಷ ತರುವಾಯ ನವೀಕರಣ ಹಾಗೂ ವೆಬ್ ನಿರ್ವಹಣೆಗಾಗಿ ಚೈತನ್ಯಗೆ ಹೆಚ್ಚುವರಿ ಹಣ ಕೇಳಿದ್ದ. ಆದರೆ ಹಣ ಚೈತನ್ಯ ಕೊಟ್ಟಿರಲಿಲ್ಲ. ಇದರಿಂದ ಅಸಮಾನಧಾನಗೊಂಡು ವೆಬ್ ಸೈಟ್ ನಲ್ಲಿರುವ ಡೇಟಾ ಅಳಿಸಿ ಕಂಪ್ಲೀಟ್ ಶಟ್ಡೌನ್ ಆಗುವಂತೆ ಪಾಂಡೆ ನೋಡಿಕೊಂಡಿದ್ದ. ಇದರಿಂದ ವ್ಯವಹಾರದಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಚೈತ್ಯನ ಕೆಂಡಕಾರಿದ್ದ. ಅಲ್ಲದೆ ಒಂದು ವರ್ಷಗಳಿಂದ…
ಎಲ್ಲೆಲ್ಲೂ ಭಾಷೆಯ ವಿಚಾರ ಚರ್ಚೆಯಾಗುತ್ತಿದೆ. ದಕ್ಷಿಣ ಭಾರತದ ಚಿತ್ರಗಳ ವಿರುದ್ಧ ಬಾಲಿವುಡ್ ನಟರ ಆಕ್ರೋಶ ಹೆಚ್ಚಾಗುತ್ತಿದೆ. ಆದರೆ ಈ ಹೊತ್ತಲ್ಲೇ ಬಾಲಿವುಡ್ ಸ್ಟಾರ್ಸ್ ವಿರುದ್ಧ ಐಎಎಸ್ ಅಧಿಕಾರಿಗಳು ಕೂಡ ರೊಚ್ಚಿಗೆದ್ದಿದ್ದಾರೆ. ಈ ಕೋಪಕ್ಕೆ ಕಾರಣ ಮಾತ್ರ ಗುಟ್ಕಾ ಜಾಹೀರಾತು. ಅಜಯ್ ದೇವಗನ್, ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ಒಟ್ಟಾಗಿ ನಟಿಸಿರುವ ಪಾನ್ ಮಸಾಲ ಜಾಹೀರಾತಿನ ವಿರುದ್ಧ ದಿನದಿಂದ ದಿನಕ್ಕೆ ಆಕ್ರೋಶ ಹೆಚ್ಚಾಗುತ್ತಿದೆ. ಈ ಹೊತ್ತಲ್ಲೇ ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿಯೊಬ್ಬರು ಈ ಮೂವರು ನಟರಿಗೆ ಟ್ವೀಟ್ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಅವನೀಶ್ ಶರಣ್ ಎಂಬ ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿ ಹೀಗೆ ಬಾಲಿವುಡ್ ಸ್ಟಾರ್ಗಳ ಗುಟ್ಕಾ ಪ್ರೀತಿ ವಿರುದ್ಧ ರೊಚ್ಚಿಗೆದ್ದವರು.ಅವನೀಶ್ ಶರಣ್ ಕೋಲ್ಕತ್ತಾದ ಹೌರಾ ಸೇತುವೆಯ ಚಿತ್ರವನ್ನು ಟ್ವೀಟ್ ಮಾಡಿ, ಗುಟ್ಕಾ ತಿನ್ನುವವರಿಂದಲೇ ಈ ಸೇತುವೆ ಹಾಳಾಗುತ್ತಿದೆ ಎಂದು ಬರೆದುಕೊಂಡಿದ್ದರು.ಅವನೀಶ್ ಶರಣ್ ಹಂಚಿಕೊಂಡಿದ್ದ ಫೋಟೋದಲ್ಲಿ ಸೇತುವೆಯ ಮೇಲೆ ಗುಟ್ಕಾ ತಿಂದು, ಸೇತುವೆ ಹಾಳು ಮಾಡಿರುವ ದೃಶ್ಯವಿದೆ.ಅಲ್ಲದೆ ಟ್ವೀಟ್ನಲ್ಲಿ ಅಜಯ್ ದೇವಗನ್,…
ಹೆಚ್.ಡಿ.ಕೋಟೆ: ಪತ್ರಕರ್ತರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆಗೆ ಯತ್ನಿಸಿದ್ದಲ್ಲದೇ ಜೀವ ಬೆದರಿಕೆಯೊಡ್ಡಿದ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ತಾಲ್ಲೂಕಿನ ಪಟ್ಟಣದ ವಾಯುವಿಹಾರ ಹೋಗಿದ್ದ ಸಮಯದಲ್ಲಿ ಪತ್ರಕರ್ತ ಹಾದನೂರು ದೊಡ್ಡಸಿದ್ದು ಅವರಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗಿರಿಗೌಡ ಮತ್ತು ಕುಟುಂಬದವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತ ತಾಲ್ಲೂಕು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಸದಸ್ಯರು ಹುಣಸೂರು ಡಿವೈಎಸ್ಪಿ ರವಿಪ್ರಸಾದ್ ಮತ್ತು ತಹಶೀಲ್ದಾರ್ ರತ್ನಾಂಬಿಕೆಯವರನ್ನು ಭೇಟಿ ಮಾಡಿ, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದು, ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆ ವಿವರ: ಏಪ್ರಿಲ್ ಕಳೆದ 27ರ ಶುಕ್ರವಾರ ಬೆಳಿಗ್ಗೆ 6:20 ಸಮಯದಲ್ಲಿ ಪತ್ರಕರ್ತ ಹಾದನೂರು ದೊಡ್ಡಸಿದ್ದು, ತಮ್ಮ ಪತ್ನಿಯೊಂದಿಗೆ ವಾಯುವಿಹಾರಕ್ಕೆ ತೆರಳಿದ ಸಂದರ್ಭ , ಹುಣಸೂರು ಬೇಗೂರು ಹೆದ್ದಾರಿಯ ಹೆಬ್ಬಳ ಸಮೀಪದ ರಾಜಗೋಪಾಲ್ ಮನೆಯ ಹತ್ತಿರ ಎದುರಾದ…
ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂಸದೆ ಸುಮಲತಾ, ಕಳೆದ ಎರಡು ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಈ ಕಾರಣದಿಂದ ಮುಖಂಡರನ್ನು ನಿಧಿ ಬಗ್ಗೆ ತಿಳಿಸುತ್ತಿದ್ದೇನೆ. ಮುಖಂಡರು ಹಿಂದೆ ಫಂಡ್ ಬಗ್ಗೆ ಕೇಳಿದ್ರು. ಈ ಬಗ್ಗೆ ಪ್ರಸ್ತಾಪ ಮಾಡಲು ಅವರನ್ನು ಸಭೆ ಕರೆದಿದ್ದೇನೆ. ಈ ಸಭೆ ಬಿಜೆಪಿ ಸೇರುವ ಬಗ್ಗೆ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ, ಈಗ ಈ ಪ್ರಸ್ತಾಪ ಇಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಇದನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಜನರು ಏನು ಅಭಿಪ್ರಾಯ ಹೇಳಿದ್ದಾರೆ ಅದನ್ನು…
ಬೆಲೆಬಾಳುವ ಶ್ರೀಗಂಧದ ಮರವನ್ನ ಕಳ್ಳರ ತಂಡ ತಂಡ ರಾತ್ರೋ ರಾತ್ರಿ, ಕಟಾವು ಮಾಡಿ ಹೊತ್ತೊಕೊಂಡು ಹೀಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದಲ್ಲಿ ನಡೆದಿದೆ. ಚಿಮ್ಮಡ ಗ್ರಾಮದ ಧರೆಪ್ಪ ಉಳ್ಳಾಗಡ್ಡಿ ಎಂಬುವರ ತೋಟದಲ್ಲಿ ಕೆಲವು ದಿನಗಳ ಹಿಂದೆ ರಾತ್ರಿ ಈ ಘಟನೆ ನಡೆದಿದ್ದು, ಯಾರೂ ಇಲ್ಲದ ಸಮಯದಲ್ಲಿ ಬೃಹತ್ ಗಾತ್ರದ ಶ್ರೀಗಂಧ ಮರವನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಸುಮಾರು 10 ವರ್ಷದ ಶ್ರೀಗಂಧದ ಮರ ಕಳವಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಬನಹಟ್ಟಿ ಸಿಪಿಐ ಜೆ. ಕರುಣೇಶಗೌಡ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.ಇದೇ ಸಂದರ್ಭ ಕ್ರೈಂ ಪಿಎಸ್ ಐ ಪುರಂದರ ಪೂಜಾರಿ, ಅರಣ್ಯಾಧಿಕಾರಿ ಮಲ್ಲೇಶ ನಾವಿ, ಲಕ್ಷ್ಮಣ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈಚೆಗೆ ಗಂಧದ ಮರ ಸೇರಿದಂತೆ ಮನೆಗಳ್ಳತನ ಜಾಸ್ತಿ ನಡೆಯುತ್ತಿದ್ದು, ಕಳ್ಳತನ ಮಾಡುವ ಡಕಾಯಿತಿ ತಂಡವನ್ನು ತಕ್ಷಣವೇ ಪತ್ತೆ ಹೆಚ್ಚುವಂತೆ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ…
ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದೆ. ದಿವ್ಯಾ ಹಾಗರಗಿ ಬಂಧನದ ಬಳಿಕ ಇಂದು ಡಿಜಿಪಿ ಪ್ರವೀಣ್ ಸೂದ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಅವರ ಆರ್.ಟಿ.ನಗರದ ನಿವಾಸದಲ್ಲಿ ಭೇಟಿಯಾಗಿ, ದಿವ್ಯಾ ಹಾಗರಗಿ ಬಂಧನದ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ. 9 ರಂದು ಎಫ್ ಐಆರ್ ದಾಖಲಾಗುತ್ತಿದ್ದಂತೆ ದಿವ್ಯಾ ಪರಾರಿಯಾಗಿದ್ದಳು. ಇದೀಗ ಕೊನೆಗೂ ಈಕೆಯನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಈ ರೈಲು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗಡಿಯಲ್ಲಿ ಚಲಿಸುತ್ತದೆ. ನೀವು ಭಾಕ್ರಾ ನಾಗಲ್ ಅಣೆಕಟ್ಟನ್ನು ನೋಡಲು ಹೋದರೆ, ನೀವು ಈ ರೈಲು ಪ್ರಯಾಣವನ್ನು ಉಚಿತವಾಗಿ ಆನಂದಿಸಬಹುದು. ವಾಸ್ತವವಾಗಿ ಈ ರೈಲು ನಾಗಲ್ನಿಂದ ಭಾಕ್ರಾ ಅಣೆಕಟ್ಟಿಗೆ ಚಲಿಸುತ್ತದೆ. ಕಳೆದ 73 ವರ್ಷಗಳಿಂದ 25 ಹಳ್ಳಿಗಳ ಜನರು ಈ ರೈಲಿನಿಂದ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಒಂದೆಡೆ ದೇಶದ ಎಲ್ಲಾ ರೈಲುಗಳ ಟಿಕೆಟ್ ದರವನ್ನು ಹೆಚ್ಚಿಸುತ್ತಿದ್ದರೆ, ಮತ್ತೊಂದೆಡೆ ಜನರು ಈ ರೈಲಿನಲ್ಲಿ ಏಕೆ ಉಚಿತವಾಗಿ ಪ್ರಯಾಣಿಸುತ್ತಾರೆ ಮತ್ತು ಅದನ್ನು ರೈಲ್ವೆ ಹೇಗೆ ಅನುಮತಿಸುತ್ತದೆ ಎಂದು ನೀವು ಯೋಚಿಸುತ್ತಿರಬೇಕು? ಭಗ್ರಾ ಅಣೆಕಟ್ಟಿನ ಬಗ್ಗೆ ಮಾಹಿತಿಗಾಗಿ ರೈಲು ಓಡಾಟ ವಾಸ್ತವವಾಗಿ, ಈ ರೈಲನ್ನು ಭಗ್ರಾ ಅಣೆಕಟ್ಟಿನ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಓಡಿಸಲಾಗಿದೆ. ಇದರಿಂದ ದೇಶದ ಭವಿಷ್ಯದ ಪೀಳಿಗೆಗೆ ದೇಶದ ಅತಿದೊಡ್ಡ ಭಾಕ್ರಾ ಅಣೆಕಟ್ಟು ಹೇಗೆ ನಿರ್ಮಾಣವಾಯಿತು ಎಂದು ತಿಳಿಯಬಹುದು. ಈ ಅಣೆಕಟ್ಟನ್ನು ನಿರ್ಮಿಸಲು ಅವರು ಎದುರಿಸಿದ ತೊಂದರೆಗಳೇನು ಎಂಬುದರ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ. ಭಾಕ್ರಾ ಬಿಯಾಸ್ ಆಡಳಿತ…
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಸಿ, ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ನೀಡಿದ ರಾಷ್ಟ್ರಹಿತದ ಕರೆಗೆ ಬಿಜೆಪಿಯೇತರ ರಾಜ್ಯ ಸರಕಾರಗಳು ಸ್ಪಂದಿಸುವ ಅವಕಾಶವನ್ನು ಕ್ಷುಲ್ಲಕ ರಾಜಕಾರಣಕ್ಕಾಗಿ ಕೈಚೆಲ್ಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಆರೋಪಿಸಿದರು. ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಪ್ರತಿಪಕ್ಷಗಳು ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆ ಗಂಭೀರವಾಗಿಲ್ಲ. ಬದಲಿಗೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಅವು ಮುಳುಗಿವೆ ಎಂದು ಆರೋಪಿಸಿದರು. ಕೋವಿಡ್ ಸಂಕಷ್ಟದ ನಡುವೆಯೂ ಮೋದಿಯವರು ಅಭಿವೃದ್ಧಿಪರ ರಾಜಕಾರಣಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ. ಹಿಂದೊಮ್ಮೆ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿತ್ತು. ಆಗ ಕರ್ನಾಟಕ ಸರಕಾರ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿ, ತನ್ನ ಜನಪರತೆಯನ್ನು ತೋರಿಸಿತ್ತು ಎಂದರು. ದೇಶವು ಕಳೆದ ಎಂಟು ವರ್ಷಗಳಲ್ಲಿ ವಿಶ್ವದ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 10 ಟ್ರಿಲಿಯನ್ ಮೊತ್ತದ ಆರ್ಥಿಕತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದೆ. ಇದು ಕೆಲವೇ ವರ್ಷಗಳಲ್ಲಿ…
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಸೇರುತ್ತಾರೆ ವದಂತಿಗೆ ಪ್ರತಿಕ್ರಿಯಿಸಿದ ಅವರು ನಾನು ಯಾವ ಪಕ್ಷದ ಬಗ್ಗೆಯೂ ಆಲೋಚಿಸಿಲ್ಲ.ಯಾವುದಾದ್ರೂ ಪಕ್ಷಕ್ಕೆ ಸೇರಬೇಕು ಅನ್ನೋ ಉದ್ದೇಶವಿದೆ.ಮಂಡ್ಯದ ಜನ ಮತ್ತು ಮಂಡ್ಯದ ಅಭಿವೃದ್ಧಿ ಕಾಳಜಿ ಇರೋ ಪಕ್ಷಕ್ಕೆ ಸೇರುತ್ತೇನೆ ಎಂದು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿ ಸುಮಲತಾ ಅಂಬರೀಶ್ ಮಂಡ್ಯದ ಜನರನ್ನೂ ಕೇಳದೇ ನಾನು ಏನೂ ತೀರ್ಮಾನ ಮಾಡಲ್ಲ. ಗೃಹಸಚಿವ ಅಮಿತ್ ಶಾ ಬರೋ ದಿನ ನಾನು ಮಂಡ್ಯದಲ್ಲೇ ಇರಲ್ಲ ಎಂದು ಹೇಳಿದ್ದಾರೆ.ಎರಡು ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಈ ಕಾರಣದಿಂದ ಮುಖಂಡರಿಗೆ ಸಂಸದರ ನಿಧಿ ಬಗ್ಗೆ ತಿಳಿಸುತ್ತಿದ್ದೇನೆ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಇದರ ಬಗ್ಗೆ ಬಹಿರಂಗವಾಗಿ ಹೇಳಲು ಸಾದ್ಯವಿಲ್ಲ. ಎಲ್ಲರೂ ಸ್ವತಂತ್ರರು, ಯಾವ ಪಕ್ಷಕ್ಕಾದ್ರು ಸೇರಬಹುದು. ನನ್ನ ಚುನಾವಣೆ ವೇಳೆ ಎಲ್ಲಾ ಪಕ್ಷದವರು ದುಡಿದಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಎಚ್.ಡಿ. ಕೋಟೆ: ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ 115ನೇ ಹುಟ್ಟುಹಬ್ಬ ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಬು ಜಗಜೀವನ ರಾಂ ವಿಚಾರ ವೇದಿಕೆಯ ಅಧ್ಯಕ್ಷ ಪಿ.ನಾಗರಾಜು ತಿಳಿಸಿದರು. ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಟ್ಟಣದ ಕೃಷ್ಣಾಪುರ ಬಾಪೂಜಿ ವೃತ್ತದಿಂದ ಅಂಬೇಡ್ಕರ್ ಭವನದ ವರೆಗೆ ಮೆರವಣಿಗೆ ಮೂಲಕ ತಾಲ್ಲೂಕಿನ ವಿವಿಧ ಗ್ರಾಮ ಗಳಿಂದ ವಾಹನಗಳು ಭಾಗವಹಿಸಲಿವೆ. ಸತ್ತಿಗೆ, ತಮಟೆ, ನಗಾಕಿ, ನಂದಿಕಂಬ, ಮಂಗಳ ವಾದ್ಯ ಸಮೇತವಾಗಿ ಮೆರವಣಿಗೆ ನಡೆಯಲಿದೆ ಎಂದರು. ಅಂಬೇಡ್ಕರ್ ಭವನದ ಮುಂಭಾಗದ ಆವರಣದಲ್ಲಿ ಬಾಬು ಜಗಜೀವನರಾಮ್ ಮತ್ತು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುವುದು ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಡಪ ಸಿಂಹಾಸನ ಕೋಡಿಹಳ್ಳಿ ಆದಿಜಾಂಭವ ಮಹಾಸಂಸ್ಥಾನಮಠದ ಸಡಕ್ಷರ ಮುನಿ ದೇಶಿಕೇಂದ್ರಸ್ವಾಮೀಜಿ, ಹರಳಯ್ಯ ಮಠದ ಗುರುರುದ್ರಪ್ಪ ಹರಳಯ್ಯ ಸ್ವಾಮೀಜಿ, ಮಾಜಿ ಕೇಂದ್ರ ಸಚಿವ ರಾದ ಕೆ.ಎಚ್. ಮುನಿಯಪ್ಪ, ಶಾಸಕ ಅನಿಲ್ ಚಿಕ್ಕಮಾದು, ಸಂಸದರಾದ…