Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ನರಗುಂದ: ಯಾವುದೇ ರಾಜಕಾರಣಿಗಳು ಮಠಾಧೀಶರ ಬಗ್ಗೆ ಹಗುರವಾಗಿ ಮಾತನಾಡಿದರೆ ವ್ಯವಸ್ಥಿತ ಹೋರಾಟ ಮಾಡಬೇಕಾಗುತ್ತದೆ ಎಂದು ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆಯನ್ನು ನೀಡಿದ್ದಾರೆ. ಸಚಿವ ಸಿ.ಸಿ. ಪಾಟೀಲ ಅವರು ವಿಧಾನಸೌಧದಲ್ಲಿ ಕುಳಿತ ನಮ್ಮ ತೇಜೋವಧೆ ಸುದ್ದಿಗೋಷ್ಠಿ ನಡೆಸಿದ್ದರು. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಾನು ಮಾತನಾಡಿದ್ದೆ. ಅದನ್ನು ಚರ್ಚೆಗೆ ಒಳಪಡಿಸಬೇಕಿತ್ತು. ನಮ್ಮ ಮಾತಿನ ಬಗ್ಗೆ ಚರ್ಚೆ ಆಗಬೇಕಿತ್ತು. ಆದರೆ ನಮ್ಮ ಬಗ್ಗೆ ಸಚಿವ ಸಿ.ಸಿ. ಪಾಟೀಲ ಚರ್ಚೆ ಮಾಡಿದ್ದರಿಂದ ರೋಷ, ಹಠ ಮರೆತು ನ್ಯಾಯ ಕೇಳಲು ಬಂದಿದ್ದೆ. ಆದರೆ ಪೊಲೀಸರ ವಿನಂತಿ ಮೇರೆಗೆ ಇಲ್ಲಿಂದ ಮರಳಿ ನಿರ್ಗಮಿಸುತ್ತಿದ್ದೇವೆ ಎಂದು ಶ್ರೀಗಳು ಹೇಳಿದರು. ಬುಧವಾರ ನರಗುಂದ ಸಚಿವರ ಮನೆ ಮುಂದೆ ಧರಣಿ ನಡೆಸಲು ಆಗಮಿಸಿದ್ದ ಶ್ರೀಗಳನ್ನು ತಾಲೂಕಿನ ಸರಹದ್ದು ಬಳಿ ಪೊಲೀಸರು ತಡೆದು ನಿಲ್ಲಿಸಿದ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈತರೊಬ್ಬರ ಜಮೀನೊಂದರಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀಗಳು ಶೀಘ್ರದಲ್ಲಿ ಮಠದ ಭಕ್ತರ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದು ಶ್ರೀ…
ಚಿಕ್ಕಮಗಳೂರು: ಶೆಡ್ ನಲ್ಲಿದ್ದ ಮೇಕೆ ಮರಿಯನ್ನು ಹೆಬ್ಬಾವು ನುಂಗಿರುವ ಘಟನೆ ಚಿಕ್ಕಮಗಳೂರು ನಗರದ ಕಾಫಿ ಮಂಡಳಿ ಸಮೀಪ ನಡೆದಿದೆ. ಮನೆ ಮಾಲಿಕ ವೆಂಕಟಪ್ಪ ಎಂಬವರ ಮನೆಯ ಹತ್ತಿರದ ಶೆಡ್ ಗೆ ನುಗ್ಗಿದ್ದ ಹೆಬ್ಬಾವು ವೆಂಕಟಪ್ಪನ ಎದುರಿನಲ್ಲಿ ಮೇಕೆ ಮರಿಯ ಮೇಲೆ ದಾಳಿ ನಡೆಸಿದ್ದು ಹೆಬ್ಬಾವನ್ನು ಓಡಿಸಲು ಪ್ರಯತ್ನಿಸಿದರು ಪ್ರಯೋಜನವಾಗಲಿಲ್ಲ. ವೆಂಕಟಪ್ಪನಿಗೆ ಜಗ್ಗದ ಹೆಬ್ಬಾವು ಅವರ ಕಣ್ಣಮುಂದೆಯೇ ಮೇಕೆ ಮರಿಯನ್ನು ನುಂಗಿಹಾಕಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಉರಗ ತಜ್ಞ ಸ್ನೇಕ್ ನರೇಶ್ ಮೇಕೆ ಮರಿಯನ್ನು ನುಂಗಿರುವ ಹೆಬ್ಬಾವನ್ನು ಸೆರೆ ಹಿಡಿದಿದ್ದು. ಚುರ್ಚೆ ಗುಡ್ಡ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಬಿಜೆಪಿ, ಕಾಂಗ್ರೆಸ್ನವರು ಆಡಳಿತ ನಡೆಸದಂತೆ ತೊಂದರೆ ಕೊಟ್ಟರು. ತುಮಕೂರಿಗೆ ದೇವೇಗೌಡರನ್ನು ಕರೆತಂದು ನಿಲ್ಲಿಸಿ ಸೋಲಿಸದವರು ಕಾಂಗ್ರೆಸ್ನವರೇ. ಕುಮಾರಸ್ವಾಮಿ ಸರ್ಕಾರವನ್ನು ಕಾಂಗ್ರೆಸ್ನವರು ಬೀಳಿಸಿಲ್ಲ ಎಂದು ಡಾ.ಜಿ.ಪರಮೇಶ್ವರ ಅವರು ಸಿದ್ಧಗಂಗಾ ಮಠದ ಗದ್ದುಗೆ ಮೇಲೆ ಪ್ರಮಾಣ ಮಾಡಿ ಹೇಳಲಿ ಎಂದು ಜಿಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸವಾಲು ಹಾಕಿದರು. ‘ಕಳೆದ ಬಾರಿ ತುಮಕೂರು ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಒತ್ತಾಯ ಮಾಡಿ ಕಾಂಗ್ರೆಸ್ನವರೇ ನಿಲ್ಲಿಸಿದ್ರು, ಎಸ್.ಪಿ.ಮುದ್ದಹನುಮೇಗೌಡರನ್ನು ಅನ್ಯಾಯವಾಗಿ ರಾಜಕೀಯವಾಗಿ ಕೊಂದ್ರು’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜನತಾ ಜಲಧಾರೆ ರಥಯಾತ್ರೆಗೆ ತುಮಕೂರಿಗೆ ಆಗಮಿಸಿ ನಗರದ ಗಾಜಿನ ಮನೆಯಲ್ಲಿ ಮಾತನಾಡಿದ ದೇವೇಗೌಡ, ಇತ್ತೀಚೆಗೆ ಮಧುಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕೂಡ ನನ್ನ ಮೇಲಿನ ದ್ವೇಷದಿಂದ ಜಿಲ್ಲೆಯ ಒಕ್ಕಲಿಗ ಸಮುದಾಯದ ಮುಖಂಡರೇ ದೇವೇಗೌಡರನ್ನು ಬಲವಂತವಾಗಿ ಕರೆತಂದು ಸ್ಪರ್ಧಿಸುವಂತೆ ಮಾಡಿದ್ದರು ಎಂದು ಆರೋಪಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕಳಪೆ ಫಾರ್ಮ್ನಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಐಪಿಎಲ್ನಿಂದ ಕೈ ಬಿಡಿ ಎಂದು ಮಾಜಿ ತರಬೇತುದಾರ ರವಿಶಾಸ್ತ್ರಿ ಹೇಳಿದ್ದಾರೆ. ಖಾಸಗಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ವಿರಾಟ್ ಕೊಹ್ಲಿ ಅವರು ಸತತ ಪಂದ್ಯಗಳನ್ನು ಆಡುತ್ತಿರುವುದರಿಂದ ಅವರು ತುಂಬಾ ಬಳಲಿದ್ದಾರೆ, ಆದ್ದರಿಂದೇ ಅವರಿಂದ ಕಳಪೆ ಪ್ರದರ್ಶನ ಬರುತ್ತಿದೆ. ಆದ್ದರಿಂದ ಅವರು ಐಪಿಎಲ್ನ ಉಳಿದ ಪಂದ್ಯಗಳಿಂದ ಕೈಬಿಟ್ಟು ಇದುವರೆಗೂ ಅವರು ಆಡಿರುವ ಪಂದ್ಯಗಳ ವರಮಾನವನ್ನು ನೀಡುವಂತೆ ಆರ್ಸಿಬಿ ಫ್ರಾಂಚೈಸಿಗಳಿಗೆ ರವಿಶಾಸ್ತ್ರಿ ಸಲಹೆ ನೀಡಿದ್ದಾರೆ.ವಿರಾಟ್ ಕೊಹ್ಲಿ ಅವರಿಗೆ ಒತ್ತಡವಿದ್ದ ಪರಿಣಾಮದಿಂದಲೇ ಅವರು ಎಲ್ಲ ಮಾದರಿಯ ಕ್ರಿಕೆಟ್ಗೆ ರಾಜೀನಾಮೆಯನ್ನು ನೀಡಿದ್ದಾರೆ, ಆದರೂ ಸತತ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ತುಂಬಾ ಬಳಲಿರುವುದರಿಂದ ಅವರು ಮುಂದಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದರೆ ಅವರಿಗೆ ಈಗ ವಿಶ್ರಾಂತಿ ಅವಶ್ಯಕವಾಗಿದೆ ಎಂದು ರವಿಶಾಸ್ತ್ರಿ ಅವರು ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಮಾತ್ರವಲ್ಲ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಸೇರಿದಂತೆ ಕೆಲವು ಶ್ರೇಷ್ಠ…
ದಿನೇ ದಿನೇ ಕಚ್ಛಾ ಕಾಗದ ಹಾಗೂ ಮುದ್ರಣ ಸಾಮಾಗ್ರಿಗಳ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಮುದ್ರಣಕ್ಕೆ ಎದುರಾಗಿರುವ ಸಮಸ್ಯೆಯನ್ನು ರಾಜ್ಯ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಪರಿಹರಿಸಬೇಕು ಎಂದು ಕರ್ನಾಟಕ ಪಠ್ಯ ಪುಸ್ತಕ ಮುದ್ರಕರ ಸಂಘ ಇಂದು ಪ್ರತಿಭಟನೆ ನಡೆಸಿತು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ(ಫ್ರೀಡಂಪಾರ್ಕ್) ಅಸೋಸಿಯೇಷನ್ ಅಧ್ಯಕ್ಷರಾದ ಸತ್ಯಕುಮಾರ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ, ಖಜಾ0ಚಿ ನಾಗಸುಂದರ್ , ವಿ.ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುದ್ರಣ ವಿಭಾಗದ ನೂರಾರು ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಪಠ್ಯ ಪುಸ್ತಕ ಮುದ್ರಕರ ಸಂಘದ ಅಧ್ಯಕ್ಷ ಸತ್ಯಕುಮಾರ್ ಅವರು, ಒಂದು ಟನ್ ಕಾಗದದ ಬೆಲೆ ಸುಮಾರು 60 ಸಾವಿರ ರೂ.ನಿಂದ 90 ಸಾವಿರ ರೂ.ಗಳಿಗೆ ಏರಿಕೆಯಾಗಿದೆ. ಹೀಗಾದರೆ ನಾವು ಉದ್ಯಮ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.ಮುದ್ರಣದ ಮೂಲ ಸಾಮಗ್ರಿಗಳಾದ ಇಂಕು, ಪ್ಲೇಟ್, ಕೆಮಿಕಲ್ಸ್, ಕಾಗದ ಸೇರಿದಂತೆ ಎಲ್ಲಾ ಕಚ್ಚಾ ಸಾಮಗ್ರಿಗಳ ಬೆಲೆ ದುಬಾರಿಯಾಗಿದ್ದು, ಪಠ್ಯ ಪುಸ್ತಕ, ವೃತ್ತ ಪತ್ರಿಕೆ ಹಾಗೂ ಲೇಖನ ಸಾಮಗ್ರಿಗಳನ್ನು ಮುದ್ರಣ ಮಾಡಲಾಗದಂತಹ ತೀವ್ರ…
ದೇಶದಲ್ಲಿ ಕೊರೊನಾ ಅಲೆ ನಮ್ಮನ್ನು ಸಂಪೂಣವಾಗಿ ಬಿಟ್ಟು ಹೋಗಿಲ್ಲ. ನಮ್ಮಲ್ಲಿ ಪರಿಸ್ಥಿತಿ ಹದಗೆಟ್ಟಿಲ್ಲವಾದರೂ ನಿರ್ಲಕ್ಷ್ಯವಹಿಸದೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.ಈ ಹಿಂದೆ ಅನುಸರಿಸಿದ್ದ ತ್ರಿ-ಟಿ (ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್) ತಂತ್ರವನ್ನು ಎಲ್ಲಾ ರಾಜ್ಯಗಳು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಕೋವಿಡ್ ಹೋಗಿದೆ ಎಂದು ಯಾರೂ ಭಾವಿಸಬೇಡಿ. ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಪರಿಸ್ಥಿತಿ ಉತ್ತಮವಾಗಿದೆ ಆದರೂ ನಿರ್ಲಕ್ಷ್ಯ ಬೇಡ ಎಂದು ಅವರು ಕಿವಿಮಾತು ಹೇಳಿದರು. ಇಂದು ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಮೋದಿ ಅವರು, ಇತರೆ ದೇಶಗಳಿಗೆ ಹೋಲಿಸಿದರೆ ನಾವು ಸುರಕ್ಷಿತವಾಗಿದ್ದೇವೆ. ಈ ಹಿಂದೆ 1, 2 ಮತ್ತು 3ನೇ ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಓಮಿಕ್ರಾನ್ ಎದುರಿಸಿರುವಾಗ 4ನೇ ಅಲೆ ನಮಗೇನು ದೊಡ್ಡ ಸಮಸ್ಯೆಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಒಂದನೇ ಲಸಿಕೆಯನ್ನು ಬಹುತೇಕ ಎಲ್ಲರೂ ಪಡೆದಿದ್ದಾರೆ. ಕೆಲವರು…
ರಾಜ್ಯದಲ್ಲಿ 4ನೇ ಅಲೆ ಕಾಣಿಸಿಕೊಂಡರೂ ಸದ್ಯಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ಈ ಮೂಲಕ 4ನೇ ಅಲೆ ಬಂದರೆ ಲಾಕ್ಡೌನ್ ಸೇರಿದಂತೆ ಕೆಲವು ಕಠಿಣ ನಿಯಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ವದಂತಿಗೆ ಖುದ್ದು ಸಚಿವರೇ ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಕೋವಿಡ್ ಅಲೆ ಬರಬಹುದೆಂದು ತಜ್ಞರು ಹೇಳಿದ್ದಾರೆ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಇದಕ್ಕಿಂತ ಹೆಚ್ಚಿನ ಕ್ರಮ ಅಗತ್ಯವಿಲ್ಲ ಎಂದು ಹೇಳಿದರು. 60 ವರ್ಷ ಮೇಲ್ಪಟ್ಟು ಉಚಿತ ಬೂಸ್ಟರ್ ಡೋಸ್ ಕೊಡುತ್ತಿದ್ದೇವೆ. 18 ವರ್ಷದವರು ಎರಡನೇ ಲಸಿಕೆ ಪಡೆದು 9 ತಿಂಗಳು ಆದವರೂ ಕೂಡ ಲಸಿಕೆ ಪಡೆಯಬಹುದು ಎಂದು ಸಲಹೆ ಮಾಡಿದರು.ಈ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ಕರೆದಿದ್ದು , ಕೆಲವು ಸಲಹೆ , ಸೂಚನೆಗಳನ್ನು ನೀಡಲಿದ್ದಾರೆ. ಈಗ ತೆಗೆದುಕೊಂಡಿರುವ ಕ್ರಮಕ್ಕಿಂತ ಹೆಚ್ಚಿನ…
ಮುಂಬರುವ ದಿನಗಳಲ್ಲಿ ಕಾಣಿಸಿಕೊಳ್ಳಲಿರುವ ಕೊರೊನಾ ನಾಲ್ಕನೇ ಅಲೆಯಿಂದ ಬಚಾವಾಗಬೇಕಾದರೆ ಬೂಸ್ಟರ್ ಡೋಸ್ ಪಡೆದುಕೊಳ್ಳುವುದು ಅನಿವಾರ್ಯ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಸಿಗದಿರುವುದು ಆತಂಕಕ್ಕೆ ಕಾರಣವಾಗಿದೆ.ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಸಿಗುತ್ತಿಲ್ಲ. ಬದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಎಷ್ಟು ಬೇಕೋ ಅಷ್ಟು ಬೂಸ್ಟರ್ ಡೋಸ್ ಸಿಗುತಿದೆ. ಬೂಸ್ಟರ್ ಡೋಸ್ ಹೆಸರಿನಲ್ಲಿ ಲೂಟಿಗೆ ಇಳಿದಿರುವ ಖಾಸಗೀ ಆಸ್ಪತ್ರೆಗಳು ಡೋಸ್ಗಳನ್ನು ಹಣಕ್ಕೆ ಮಾರಾಟ ಕೊಳ್ಳುತ್ತಿವೆ. ಉಳ್ಳವರು ಖಾಸಗೀ ಆಸ್ಪತ್ರೆಗಳಿಗೆ ತೆರಳಿ ನಿಗಪಡಿಸಿರುವ ಹಣ ಪಾವತಿಸಿ ಬೂಸ್ಟರ್ ಡೋಸ್ ಪಡೆದುಕೊಳ್ಳುತ್ತಿದ್ದಾರೆ. ಹಣ ಇಲ್ಲದವರು ಬೂಸ್ಟರ್ ಡೋಸ್ ಸಿಗದೆ ಪರದಾಡುವಂತಾಗಿದೆ. ಕೊರೊನಾ ನಾಲ್ಕನೆ ಅಲೆ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲೆ ಸರ್ಕಾರ ಬೂಸ್ಟರ್ ಡೋಸ್ಗಳನ್ನು ಖಾಸಗೀ ಆಸ್ಪತ್ರೆಗಳಿಗೆ ನೀಡಿ ಸಾಮಾನ್ಯ ನಾಗರೀಕರಿಗೆ ಉಚಿತ ಬೂಸ್ಟರ್ ನೀಡದಿರುವುದು ಜನ ಸಾಮಾನ್ಯರನ್ನು ಕಂಗೇಡಿಸಿದೆ. ಒಂದು ಹಾಗೂ ಎರಡನೆ ಹಂತದ ಕೊರೊನಾ ಸಂದರ್ಭದಲ್ಲಿ ಉಚಿತ ಕೊರೊನಾ ಲಸಿಕೆ ನೀಡಿದ್ದ ಸರ್ಕಾರ ಈಗ ಮಾತ್ರ ಮೂರನೇ ಡೋಸ್ಗೆ ಹಣ ನಿಗ ಮಾಡುವುದು ಎಷ್ಟು ಸರಿ ಎನ್ನುವುದು…
ಕೊರಟಗೆರೆ: 3 ಬಾರಿ ಜಿಪಂ ಸದಸ್ಯ, 2013ರಲ್ಲಿ ಶಾಸಕನಾಗಿ 5ವರ್ಷ ಸೇವೆ ಸಲ್ಲಿಸಿರುವ ಬಡಜನರ ಒಡನಾಡಿ, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತರು ಸಹ ಬಡಜನರ ಸೇವೆಯನ್ನು ಮಾಡುತ್ತೀರುವ ಪಿ.ಆರ್.ಸುಧಾಕರಲಾಲ್ ಕೊರಟಗೆರೆ ಕ್ಷೇತ್ರದ ನಿಜವಾದ ಜನನಾಯಕ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಣ್ಣಿಸಿದರು. ಕೊರಟಗೆರೆ ಪಟ್ಟಣದ ಪಪಂ ಆವರಣದಲ್ಲಿ ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಜನತಾ ಜಲಧಾರೆ ರಥಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಾಜ್ಯದ ರೈತಾಪಿವರ್ಗ ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಎತ್ತಿನಹೊಳೆ ಯೋಜನೆಯ ಕಾಮಗಾರಿ ತೂಗಿಗತ್ತಿ ಮೇಲೆ ನಿಂತಿದೆ. ಕರ್ನಾಟಕ ರಾಜ್ಯದ ರೈತರಿಗೆ ಸಮರ್ಪಕ ನೀರಾವರಿ ಯೋಜನೆ ರೂಪಿಸುವುದೇ ಜನತಾ ಜಲಧಾರೆಯ ಉದ್ದೇಶ. ರೈತಾಪಿವರ್ಗ ಮತ್ತು ಬಡಜನರ ಅಭಿವೃದ್ದಿಗೆ ಸದಾ ಚಿಂತಿಸುವ ಪ್ರಾದೇಶಿಕ ಪಕ್ಷಕ್ಕೆ ನಿಮ್ಮೇಲ್ಲರ ಸಹಕಾರ ಇರಲಿ ಎಂದು ತಿಳಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ಕೊರಟಗೆರೆ ಕ್ಷೇತ್ರದ ಜನಸಾಮಾನ್ಯರ ಧ್ವನಿ ನಮ್ಮ ಪಿ.ಆರ್.ಸುಧಾಕರಲಾಲ್. ಕಾಂಗ್ರೇಸ್ ನಾಯಕರ ಆಮಿಷ ಮತ್ತು ಒತ್ತಡಗಳಿಗೆ ಜೆಡಿಎಸ್ ಪಕ್ಷ…
ತುರುವೇಕೆರೆ: ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುರುವೇಕೆರೆ ತಾಲೂಕಿನ ದೊಡ್ಡಶೆಟ್ಟಿಕೆರೆ ಬಳಿ ನಡೆದಿದೆ. ಕಾರು ಚಾಲಕ ಸೇರಿದಂತೆ ಇಬ್ಬರು ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಮೃತರು ಆನೆಕಲ್ ಮೂಲದವರು ಎಂದು ತಿಳಿದು ಬಂದಿದೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5