Subscribe to Updates
Get the latest creative news from FooBar about art, design and business.
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
Author: admin
ತುಮಕೂರು: ಅರೆಕಾಲಿಕ (ಪಾರ್ಟ್ಟೈಮ್) ಕೆಲಸದ ಆಮಿಷಕ್ಕೆ ಒಳಗಾಗಿ ನಗರದ ಎಸ್ ಐಟಿ ಬಡಾವಣೆಯ ಮಹಿಳಾ ವೈದ್ಯೆಯೊಬ್ಬರು ಬರೋಬ್ಬರಿ ₹4,01,500 ಹಣವನ್ನು ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ನಗರದ ಎಸ್ ಐಟಿ ಬಡಾವಣೆಯ ನಿವಾಸಿಯಾದ ವೈದ್ಯೆ ಜಿ.ಯು. ಲಕ್ಷ್ಮಿನಾಗವಣಿ ವಂಚನೆಗೊಳಗಾದ ದುರ್ದೈವಿ. ಅಪರಿಚಿತ ಆರೋಪಿಗಳು ಲಕ್ಷ್ಮಿನಾಗವಣಿ ಅವರನ್ನು ಟೆಲಿಗ್ರಾಮ್ ಆ್ಯಪ್ ಮೂಲಕ ಸಂಪರ್ಕಿಸಿ, ಪಾರ್ಟ್ಟೈಮ್ ಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲವು ಸರಳ ಪ್ರಶ್ನೆಗಳಿಗೆ ಉತ್ತರ ನೀಡಿದರೆ ಹಣ ನೀಡುವುದಾಗಿ ನಂಬಿಸಿದ್ದಾರೆ. ಇದನ್ನು ನಂಬಿದ ಲಕ್ಷ್ಮಿ ಅವರು ಮೊದಲಿಗೆ ₹800 ವರ್ಗಾಯಿಸಿದ್ದು, ಅದಕ್ಕೆ ಪ್ರತಿಯಾಗಿ ಆರೋಪಿಗಳು ಅವರ ಖಾತೆಗೆ ₹1,040 ಜಮಾ ಮಾಡಿದ್ದಾರೆ. ಎರಡನೇ ಬಾರಿ ₹1,050 ವರ್ಗಾವಣೆ ಮಾಡಿದಾಗ ₹2,000 ಹಿಂದಿರುಗಿಸಿ ನಂಬಿಕೆ ಹುಟ್ಟಿಸಿದ್ದಾರೆ. ಇದಾದ ಬಳಿಕ, “ಇದೇ ರೀತಿಯಾಗಿ ಹೆಚ್ಚಿನ ಹಣ ಹೂಡಿಕೆ ಮಾಡಿ, ನಾವು ಕೇಳುವ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ದುಪ್ಪಟ್ಟು ಹಣ ನೀಡಲಾಗುವುದು” ಎಂದು ಆರೋಪಿಗಳು ಆಮಿಷ ಒಡ್ಡಿದ್ದಾರೆ. ಇದನ್ನು ನಿಜವೆಂದು ನಂಬಿದ ವೈದ್ಯೆ, ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ…
ಸಿರಾ: ನಗರದ ನಗರಸಭಾ ವ್ಯಾಪ್ತಿಗೆ ಒಳಪಡುವ 31ನೇ ವಾರ್ಡ್ನ ಬುಕ್ಕಾಪಟ್ಟಣ ವೃತ್ತದಲ್ಲಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಲಾದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟನೆ ಮಾಡದೆ ಕೈಚೆಲ್ಲಿ ಕೂರಲಾಗಿದ್ದು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಸಾರ್ವಜನಿಕರು, ಸದರಿ ಶೌಚಾಲಯವನ್ನು ಬೆಂಗಳೂರಿನ ಸೌಥರ್ನ್ ಫೌಂಡೇಶನ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು ಕಾಮಗಾರಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಸದರಿ ಶೌಚಾಲವು ಉದ್ಘಾಟನೆಯೇ ಆಗಿಲ್ಲ ಎಂದು ಆರೋಪಿಸಿದ್ದಾರೆ. ಶೌಚಾಲಯ ಕಾಮಗಾರಿ ಪೂರ್ಣಗೊಂಡು ಶೌಚಾಲಯದ ನೀರು ಶೇಖರಣೆಗೊಳ್ಳಲು ಪಿಟ್ ಗುಂಡಿಯನ್ನು ತೆರೆದು ಅದರ ಕಾಮಗಾರಿ ಮಾಡದೆ ಕೈಬಿಡಲಾಗಿದ್ದು ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ನಗರಸಭೆಯ ನಗರೋತ್ಥಾನ ಯೋಜನೆಯ ಅನುದಾನದಲ್ಲಿ ಈ ಕಾಮಗಾರಿ ಮಾಡಲಾಗಿದ್ದು ಈ ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ನಗರದ ಮಧುಗಿರಿ–ಪಾವಗಡ ಪ್ರಮುಖ ರಸ್ತೆಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳು ಹಾಗೂ ಜೀವಹಾನಿ ಪ್ರಕರಣಗಳಿಗೆ ಕೆ.ಶಿಪ್, ಮಹಾನಗರ ಪಾಲಿಕೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಂಭೀರ ನಿರ್ಲಕ್ಷ್ಯವೇ ನೇರ ಕಾರಣವಾಗಿದೆ. ರಸ್ತೆಗಳ ದುರಾವಸ್ಥೆ, ಸಮರ್ಪಕ ರಸ್ತೆ ದೀಪಗಳ ಕೊರತೆ, ಎಚ್ಚರಿಕೆ ಹಾಗೂ ದಿಕ್ಕು ಸೂಚನಾ ಫಲಕಗಳಿಲ್ಲದಿರುವುದು, ರಸ್ತೆಯ ಮಧ್ಯೆ ಡಿವೈಡರ್ ವ್ಯವಸ್ಥೆ ಇಲ್ಲದಿರುವುದು ಹಾಗೂ ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆಗಳಿಂದ ವಾಹನ ಸವಾರರು ಪ್ರತಿದಿನ ಜೀವ ಭಯದಲ್ಲೇ ಸಂಚರಿಸುವಂತಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್ ಖಂಡಿಸಿದರು. ಸಾರ್ವಜನಿಕರ ಜೀವ ಭದ್ರತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಸಂಬಂಧಿತ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಂತರಸನಹಳ್ಳಿ ಸೇತುವೆ ಬಳಿ ಮೇ 16ರ(ಶನಿವಾರ) ಸಂಜೆ 5 ಗಂಟೆಗೆ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸ್ಥಳೀಯ ಮುಖಂಡ ಯಲ್ಲಪ್ಪ ಮಾತನಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ದೀಪಗಳ ಕೊರತೆಯಿಂದ ರಾತ್ರಿ ವೇಳೆ ವಾಹನ ಸಂಚಾರ ಅತ್ಯಂತ ಅಪಾಯಕಾರಿಯಾಗಿದೆ. ಕೂಡಲೇ…
ಹುಳಿಯಾರು: ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಪೋಷಕ-ಶಿಕ್ಷಕ ಸಂಘದ ವತಿಯಿಂದ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಪೋಷಕ–ಶಿಕ್ಷಕ ಸಂಘದ ಸಭೆಯನ್ನು ಇದೇ ತಿಂಗಳ 20ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜಿನ ಎ.ವಿ. ಹಾಲ್ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವೀರಣ್ಣ ಎಸ್.ಸಿ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಿಡಿಸಿ ಸರ್ವ ಸದಸ್ಯರುಗಳು ಹಾಗೂ ಪೋಷಕರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಶಿಸ್ತು, ಪರೀಕ್ಷಾ ಫಲಿತಾಂಶ ಹಾಗೂ ಕಾಲೇಜಿನ ವಿವಿಧ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ತಾಯಂದಿರನ್ನು ಗೌರವಿಸುವ ಸಲುವಾಗಿ ವಿಶ್ವ ತಾಯಂದಿರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಧುಗಿರಿ: ಆರು ಜನರ ಗುಂಪೊಂದು ತೋಟದ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನಿಗೆ ಚಾಕು ತೋರಿಸಿ ಕೇಬಲ್ ಹಾಗೂ ಮೋಟಾರು ಪೈಪುಗಳನ್ನು ಕಳವು ಮಾಡಿರುವ ಶನಿವಾರ ಮಧ್ಯರಾತ್ರಿ ನಡೆದಿದೆ. ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹೊಸಕೆರೆ ಹಾಗೂ ನೆರೆಯ ಆಂಧ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ರತ್ನಗಿರಿ ರಸ್ತೆಯಲ್ಲಿ ಜಮೀನು ಮಾಲೀಕ ಸಚೀಂದ್ರ ರವರಿಗೆ ಸೇರಿದ ಜಮೀನಿನ ತೋಟದ ಮನೆಯ ಸಮೀಪ ಇಡಲಾಗಿದ್ದ ಸುಮಾರು 300 ಮೀಟರ್ ಮೋಟಾರು ಕೇಬಲ್ ಹಾಗೂ 35 ಲೆಂತ್ ಪೈಪುಗಳನ್ನು ಶನಿವಾರ ಸುಮಾರು ತಡ ರಾತ್ರಿ 1 ಗಂಟೆ ಸಮಯದಲ್ಲಿ 6 ಜನರಿದ್ದ ಕಳ್ಳರ ಗುಂಪು ಕಳ್ಳತನ ಮಾಡಿದೆ. ತೋಟದ ಮನೆಯಲ್ಲಿ ಮಲಗಿದ್ದ ನರಸಪ್ಪ ಎನ್ನುವವರಿಗೆ ಆರು ಜನರ ಕಳ್ಳರಲ್ಲಿ ಮುಸುಕುದಾರಿಗಳಲ್ಲೊಬ್ಬ ಚಾಕು ತೋರಿಸಿ ಬೆದರಿಸಿ ಮನೆಯ ಮುಂದೆ ಹಾಕಿದ್ದ ಕೇಬಲ್ ಹಾಗೂ ಪೈಪುಗಳನ್ನು ಅವರು ತಂದಿದ್ದ ವಾಹನಕ್ಕೆ ತುಂಬಿಕೊಂಡು ರತ್ನಗಿರಿ ಕಡೆ ಪರಾರಿಯಾಗಿದ್ದಾರೆ ನಂತರ ಬೆಳಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿ ಪೊಲೀಸರು ಸ್ಥಳ ಪರಿಶೀಲನೆ ಮಾಡಿ ಮುಂದಿನ ಕಾನೂನು ಕ್ರಮ…
ಸಿರಾ: ಹೆತ್ತ ಮಗಳನ್ನು ಕೊಂದು ಹಾಕಿ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಪೊಲೀಸರಿಗೆ ತಂದೆಯೇ ದೂರು ನೀಡಿದ ಘಟನೆ ಸಿರಾ ತಾಲೂಕು ಬುಕ್ಕಾಪಟ್ಟಣ ಹೊಬಳಿ ನಿಂಬೆ ಮರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘನಾ(17) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಸಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ನಿಂಬೆಮರದಹಳ್ಳಿ ಗ್ರಾಮದ ತಿಮ್ಮರಾಯಪ್ಪ ರವರ ಪುತ್ರಿ ಮೇಘನಾ(17) ತಾಯಿಯ ಸಂಬಂಧಿ ಹುಡುಗನನ್ನು ಪ್ರೀತಿಸುತ್ತಿದ್ದಳು. ಈ ವಿಚಾರಕ್ಕೆ ಮೇಘನಾ ತಂದೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಹಾಗೂ ಈ ವಿಚಾರಕ್ಕಾಗಿ ಎರಡು ಮೂರು ಬಾರಿ ಜಗಳ ಆಗಿತ್ತು ಎನ್ನಲಾಗಿದೆ. ಮಗಳು ಎಷ್ಟೇ ಹೇಳಿದರು ಕೇಳಲಿಲ್ಲ ಅನ್ನುವ ಕಾರಣಕ್ಕೆ ಏಪ್ರಿಲ್ 16 ರಂದು ಮನೆಯಲ್ಲಿ ಇದೇ ವಿಚಾರಕ್ಕೆ ಗಲಾಟೆಯೂ ನಡೆದಿದೆ. ಆಕ್ರೋಶದ ಬರದಲ್ಲಿ ತಿಮ್ಮರಾಯಪ್ಪ ಹುಣಿಸೇಹಣ್ಣನ್ನು ಆಯುವ ನೆಪದಲ್ಲಿ ಹೊಲಕ್ಕೆ ಕರೆದೊಯ್ದು ಮಗಳ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದನು. ಮೃತ ಶವವನ್ನು ಹಳ್ಳದಲ್ಲಿ ಹೂತು ಹಾಕಿ ತನಗೇನು ಗೊತ್ತಿಲ್ಲವೆಂಬಂತೆ ಇದ್ದನು. ಮಗಳು ಕಾಣೆಯಾಗಿದ್ದಾಳೆ ಎಂದು ಮೇಘನಾ ತಾಯಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ…
ತುಮಕೂರು: ಮೇ 19 ರಂದು ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ‘ಸಾಧನ ಸಮಾವೇಶ’ಕ್ಕೆ ಸರ್ಕಾರಿ ನೌಕರರನ್ನು ಬಳಸಿಕೊಳ್ಳುತ್ತಿರುವ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಬಿಜೆಪಿ ಮುಖಂಡ ಗೌಡೇಟಿ ಪ್ರಭಾಕರ ಗುಡುಗಿದ್ದಾರೆ. “ಕಾಂಗ್ರೆಸ್ ಪಕ್ಷ ತನ್ನ ಸಾಧನೆ ಹೇಳಿಕೊಳ್ಳಲು ಸಮಾವೇಶ ಮಾಡಿಕೊಳ್ಳಲಿ. ಆದರೆ ಡಿಸಿ, ಎಸಿ, ತಹಶೀಲ್ದಾರ್ ಸೇರಿ ಸರ್ಕಾರಿ ಸಂಬಳ ತೆಗೆದುಕೊಳ್ಳುವ ನೌಕರರನ್ನು ಪಕ್ಷದ ಕಾರ್ಯಕ್ರಮಕ್ಕೆ ದುಡಿಸಿಕೊಳ್ಳುವುದು ಕರ್ನಾಟಕ ನಾಗರಿಕ ಸೇವಾ ನಿಯಮ 1966 ಕ್ಕೆ ವಿರುದ್ಧ. ಇದು ನೇರವಾಗಿ ಸರ್ಕಾರಿ ಯಂತ್ರದ ದುರ್ಬಳಕೆ” ಎಂದು ಪ್ರಭಾಕರ ಆರೋಪಿಸಿದರು. “ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. ಅವರನ್ನು ಸಮಾವೇಶದ ಬ್ಯಾನರ್ ಕಟ್ಟೋದ್ರಿಂದ ಹಿಡಿದು ಜನ ಸೇರಿಸೋವರೆಗೂ ಬಳಸಲಾಗುತ್ತಿದೆ. ಇದರ ದಾಖಲೆಗಳನ್ನು ಕಲೆ ಹಾಕಿದ್ದೇವೆ. ವಕೀಲರ ತಂಡದ ಜೊತೆ ಚರ್ಚಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ಮೇ 19 ರಂದು ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ನ 3 ವರ್ಷದ ಸಾಧನ ಸಮಾವೇಶ…
ಬೀದರ್: ಜಿಲ್ಲೆಯ ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ವಿಶೇಷವಾಗಿ ರಚನೆಗೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆಯ ಹೆಮ್ಮೆಯ “ಅಕ್ಕ ಪಡೆ” ಈಗ ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳು ಹಾಗೂ ಕಾನೂನು ಅರಿವು ಮೂಡಿಸುವ ಮೂಲಕ ವಿಶೇಷ ಗಮನ ಸೆಳೆದಿದೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (ಐ.ಪಿ.ಎಸ್.) ಅವರು ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಕುರಿತು ವಿಶೇಷ ಮುತುವರ್ಜಿ ವಹಿಸಿ ನೀಡಿದ್ದ ಟಾಸ್ಕ್ ಹಿನ್ನೆಲೆಯಲ್ಲಿ, ಮಾನ್ಯರ ನೇರ ಮಾರ್ಗದರ್ಶನ ಮತ್ತು ನಿರ್ದೇಶನದಂತೆ ಚಿಟಗುಪ್ಪಾ ತಾಲೂಕಿನ ಅಕ್ಕ ಪಡೆಯು ಸಿಂದನಕೇರಾ ಗ್ರಾಮದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಯುವಕರಿಗೆ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಕ್ಕ ಪಡೆಯ ಕಾರ್ಯವೈಖರಿಯನ್ನು ಪರಿಚಯಿಸಿದ ಸಿಬ್ಬಂದಿ, ರಸ್ತೆ ಸುರಕ್ಷತೆಯ ಬಗ್ಗೆ ವಿಸ್ತಾರವಾಗಿ ಅರಿವು ಮೂಡಿಸಿದರು. ಹದಿನೆಂಟು ವರ್ಷದ ಒಳಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ನೀಡಬಾರದು ಎಂದು ಎಚ್ಚರಿಸಿದ ಅವರು, ದ್ವಿಚಕ್ರ ವಾಹನ ಚಲಾಯಿಸುವಾಗ ತಪ್ಪದೇ ಹೆಲ್ಮೆಟ್ ಹಾಗೂ ಕಾರು ಚಲಾಯಿಸುವಾಗ…
ಔರಾದ್ (ಬಿ): ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಾದಲಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯ ಭವಾನಿ ನಗರ ತಾಂಡಾದಲ್ಲಿ ಕುಡಿಯುವ ನೀರಿಗಾಗಿ ಜನತೆ ನಡೆಸುತ್ತಿರುವ ಹೋರಾಟ ಅಕ್ಷರಶಃ ನರಕಯಾತನೆಯಾಗಿದೆ. ಹನಿ ನೀರಿಗಾಗಿ ಮಧ್ಯಾಹ್ನದ ಕೆಂಡ ಕಾರುವ ಬಿಸಿಲಿನಲ್ಲಿ ಮಹಿಳೆಯರು ಮತ್ತು ಮಕ್ಕಳು 2-3 ಕಿಲೋಮೀಟರ್ ದೂರದ ಕೊಳವೆ ಬಾವಿಗಳಿಗೆ ಅಲೆದಾಡುತ್ತಿರುವುದು ಪಂಚಾಯತ್ ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇಒ (EO) ಸಾಹೇಬರೇ, ನಿದ್ದೆ ಸಾಕು ಮಾಡಿ! ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದರೂ ಸ್ಪಂದಿಸದ ಸ್ಥಳೀಯ ಅಧಿಕಾರಿಗಳ ವೈಫಲ್ಯದ ಹೊಣೆಯನ್ನು ಈಗ ತಾಲೂಕು ಪಂಚಾಯತ್ ಇಒ ವಹಿಸಿಕೊಳ್ಳಲೇಬೇಕು. ಕಚೇರಿಯಲ್ಲೇ ಕುಳಿತು ಎಸಿ ಗಾಳಿ ತಿನ್ನುವ ಅಧಿಕಾರಿಗಳಿಗೆ, ಬಿಸಿಲಿನಲ್ಲಿ ನೀರಿಗಾಗಿ ಕಿಲೋಮೀಟರ್ಗಟ್ಟಲೆ ಅಲೆಯುವ ಜನಸಾಮಾನ್ಯರ ನೋವು ಕಾಣುತ್ತಿಲ್ಲವೇ? ಇಒ ಅವರ ಮೌನ ಮತ್ತು ನಿರ್ಲಕ್ಷ್ಯವೇ ಈ ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ ಎಂದು ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಬಂಟಿ ದರ್ಬಾರೆ ಅವರು ನೇರವಾಗಿ ತಾಲೂಕು ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಜನರ…
ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ ಕಾರ್ಯಗಳನ್ನು ನಿರ್ವಹಿಸಲು ಅನುಕೂಲ ಮಾಡಿಕೊಡಬೇಕೆಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮದ ಕೆರೆಯ ದಂಡೆಯ ಬಳಿ ತಲತಲಾಂತರಗಳಿಂದ ತಮ್ಮ ಸಮುದಾಯದ ಹಿರಿಯರ ಅಂತ್ಯ ಸಂಸ್ಕಾರಗಳನ್ನು ನಡೆಸಿಕೊಂಡು ಬರುತ್ತಿರುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಕೆರೆ ಹೂಳೆತ್ತುವ ಕಾಮಗಾರಿಯ ವೇಳೆ ಸಮಾಧಿಗಳ ಸುತ್ತಮುತ್ತ ಮಣ್ಣನ್ನು ಆಳವಾಗಿ ತೆಗೆದ ಪರಿಣಾಮ, ಸಮಾಧಿಗಳ ಬಳಿ ತೆರಳಿ ಪೂಜಾ ವಿಧಿವಿಧಾನಗಳನ್ನು ನಡೆಸಲು ತೊಂದರೆ ಉಂಟಾಗಿದೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಧಿಗಳಿರುವ ಸ್ಥಳದ ಪಕ್ಕ ಮಣ್ಣು ತುಂಬಿಸಿ ಮೆಟ್ಟಿಲುಗಳನ್ನು ನಿರ್ಮಿಸಿ, ಯಥಾಸ್ಥಿತಿಯಲ್ಲಿ ಪೂಜಾ ಕಾರ್ಯಗಳನ್ನು ಸುಗಮವಾಗಿ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು. ಜೊತೆಗೆ ವೀರಾಪುರ ಗ್ರಾಮದ ದಲಿತ ಛಲವಾದಿ ಜನಾಂಗದವರಿಗೆ ಪ್ರತ್ಯೇಕ ರುದ್ರಭೂಮಿಯನ್ನು ಮಂಜೂರು ಮಾಡಿಕೊಡಬೇಕೆಂದು ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು ಗ್ರಾಮ ಪಂಚಾಯಿತಿ ನೇರಳೇಕೆರೆ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಿರುವ…