Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ಹುಳಿಯಾರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಚಿಕ್ಕನಾಯಕನಹಳ್ಳಿ ಇವರ ವತಿಯಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿಗೆ ಸೇರಿದ ಸಬ್ಬೇನಹಳ್ಳಿ, ಹರೇನಹಳ್ಳಿ, ಚೌಳಕಟ್ಟೆ ಗ್ರಾಮಗಳಲ್ಲಿನ ಮಿಶ್ರತಳಿ ಹಸುಗಳ ಹಾಲು ಕರೆಯುವ ಸ್ಪರ್ಧೆಯನ್ನು ಡಿಸೆಂಬರ್ 1 ಮತ್ತು 2 ರಂದು ಏರ್ಪಡಿಸಲಾಗಿದೆ. ಡಿ.1 ರಂದು ಸಂಜೆ 5 ರಿಂದ 6 ಗಂಟೆಯವರೆಗೆ ಸಬ್ಬೇನಹಳ್ಳಿ, ಹರೇನಹಳ್ಳಿ, ಚೌಳಕಟ್ಟೆ ಹಾಗೂ ಡಿ.2 ರಂದು ಬೆಳಗ್ಗೆ 6 ರಿಂದ 7ಗಂಟೆಯವರೆಗೆ ಸಬ್ಬೇನಹಳ್ಳಿ, ಹರೇನಹಳ್ಳಿ, ಚೌಳಕಟ್ಟೆಯಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಆಸಕ್ತ ಹಾಲು ಉತ್ಪಾದಕರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರಥಮ ಬಹುಮಾನವಾಗಿ 11 ಸಾವಿರ ರೂ., ಪ್ರಶಸ್ತಿ ಪತ್ರ ಮತ್ತು ಟ್ರೋಪಿ, ದ್ವಿತೀಯ ಬಹುಮಾನ 8,500 ರೂ., ಪ್ರಶಸ್ತಿ ಪತ್ರ ಮತ್ತು ಟ್ರೋಪಿ ಹಾಗೂ ತೃತೀಯ ಬಹುಮಾನವಾಗಿ 6,500 ರೂ., ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 20 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ವಿಷಯ ತಿಳಿಸಿದ್ದು, 17.40 ಕೋಟಿ ರೂ ಕಟ್ಟಡ ಕಾಮಗಾರಿ ಹಾಗೂ 2.10 ಕೋಟಿ ರೂ ಉಪಕರಣಗಳ ಖರೀದಿ ಮತ್ತು ಲಘು ಪರಿಕರಗಳ ಖರೀದಾಗಿ 20 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: 2028ರ ಎಚ್.ಡಿ.ಕೋಟೆ ವಿಧಾನಸಭಾ ಮೀಸಲು ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿ ಸ್ಪರ್ಧೆ ಮಾಡುತ್ತಿದ್ದಾನೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಹಿನಕಲ್ ಕೆಂಪನಾಯಕ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಈಗಾಗಲೇ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಎಲ್ಲಾ ಸಮುದಾಯದ ಮುಖಂಡರ ಮಾತುಕತೆ ನಡೆಸಿದ್ದಾನೆ. ಕಳೆದ ತಿಂಗಳು ತಾಲೂಕಿನ ಬಡಗಲಪುರ, ಬೆಣ್ಣೆಗೆರೆ, ಕೂಡಗಿ, ಹಳೆಹೇಗ್ಗುಡಿಲು ಗ್ರಾಮಗಳಲ್ಲಿ ಹುಲಿ ಬಾಯಿಗೆ ತುತ್ತುಯಾಗಿರುವ ಮೃತಪಟ್ಟ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ನನ್ನ ಕೈಲಾದ ಸಹಾಯ ಮಾಡಿ ಬಂದಿದ್ದಾನೆ ಎಂದು ತಿಳಿಸಿದರು. ಪಕ್ಷದ ವರಿಷ್ಠರ ಜೊತೆ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಗ್ಗೆ ಮಾತುಕತೆ ನಡೆಸಲಾಗಿದೆ. ಅವರು ಕ್ಷೇತ್ರದಲ್ಲಿ ಹೋಗಿ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಸಂಘಟನೆ ಮಾಡಿ ಎಂದು ತಿಳಿಸಿದ್ದಾರೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಹಿಳೆಯರು ಮತ್ತು ಮುಖಂಡರು ನಿಮಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಅದರಂತೆ…
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯ ಸುವರ್ಣ ಮಹೋತ್ಸವವನ್ನು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ, ಅಕ್ಕಾಪಡೆ ಹಾಗೂ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ–-ಯುಕೆಜಿ ತರಗತಿಗಳ ಆರಂಭಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ, ಸಚಿವರಾದ ಎಚ್.ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎಚ್. ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಜಯಮಾಲ ರಾಮಚಂದ್ರ, ಶಾಸಕರಾದ ರೂಪಕಲಾ ಶಶಿಧರ್, ಉದಯ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಲ್ಕಿಷ್ ಬಾನು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ,…
ಬೆಂಗಳೂರು: ಅರಮನೆ ಮೈದಾನದಲ್ಲಿ ಇಂದು ICDS (Integrated Child Development Services) ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಧಿಕಾರಿಗಳು ಮತ್ತು ಗಣ್ಯರು ಈ ಭವ್ಯ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ, ICDS ಯೋಜನೆ 50 ವರ್ಷಗಳಲ್ಲಿ ರಾಜ್ಯದ ಪೌಷ್ಠಿಕತೆ, ಮಕ್ಕಳ ಆರೋಗ್ಯ, ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಲಾಗುತ್ತಿದೆ. ಹೈಲೈಟ್ ಗಳು: ICDS ಯೋಜನೆಯ 50 ವರ್ಷಗಳ ಸಾಧನೆಗಳ ಸ್ಮರಣೆ. ಅಂಗನವಾಡಿ ಸಿಬ್ಬಂದಿಗಳಿಗೆ ಗೌರವ. ಮಕ್ಕಳ ಪೌಷ್ಠಿಕತೆ ಮತ್ತು ಮಹಿಳಾ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಗಳು. ರಾಜ್ಯದ ವಿವಿಧ ಘಟಕಗಳಿಂದ ದೊಡ್ಡ ಮಟ್ಟದ ಭಾಗಿಯಾಗಿರುವುದು. LIVE VIDEO: ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಸರ್ಕಾರಿ ಭೂಮಿ ಆಸ್ತಿ ರಕ್ಷಣೆಗೆ ಮುಂದಾದ ತುಮಕೂರು ಉಪ ವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ರವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಸುಳ್ಳು ಆರೋಪಗಳನ್ನು ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಮುಖಂಡರು, ಎರಡು, ಮೂರು ದಿನಗಳಿಂದ ಸಾಮಾಜಿಕ ಜಾಲತಾಣ ಮತ್ತು ಕೆಲವೊಂದು ಪತ್ರಿಕೆಗಳಲ್ಲಿ ಪ್ರಸಾರ ಆಗುತ್ತಿರುವಂತೆ ಹೆಚ್.ಜಿ.ರಮೇಶ್ ಎಂಬುವರು ತುಮಕೂರು ಉಪ ವಿಭಾಗದ ಆಡಳಿತ ಕಚೇರಿ ಮುಂದೆ ಹಣದ ನೋಟುಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತ ಅನವಶ್ಯಕ ಸಮಾಜಕ್ಕೆ ತಪ್ಪು ಸಂದೇಶ ರವಾನೆ ಮಾಡಿರುತ್ತಾರೆ. ಇದರ ಬಗ್ಗೆ ಉಪ ವಿಭಾಗ ಕಚೇರಿಯಲ್ಲಿ ಮಾಹಿತಿ ಪಡೆದಾಗ ನಿಖರ ಮಾಹಿತಿ ಬಹಿರಂಗವಾಗಿದೆ ಎಂದಿದ್ದಾರೆ. ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಕುಂದೂರು ಗ್ರಾಮದ ಸರ್ವೇ ನಂಬರ್ 19 ರಲ್ಲಿ ದರಖಾಸ್ತು ಜಮೀನು ಮಂಜೂರಾಗಿರುತ್ತದೆ. ಈ ಪಹಣಿಯಲ್ಲಿ ನಮೂದು ಮಾಡಲಾಗಿದ್ದ ಸರ್ಕಾರಿ ನಿಬಂಧನೆ ತೆಗೆಯಲು ಕುಣಿಗಲ್ ತಾಲ್ಲೂಕು ಕಚೇರಿಗೆ ಪಹಣಿದಾರರು ಅರ್ಜಿ ಸಲ್ಲಿಸಿದ್ದರ ಮೇರೆಗೆ ಕಡತವನ್ನು…
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ವೇಷಭೂಷಣ ಖರೀದಿ ಹಾಗೂ ಚಿತ್ರಕಲೆ/ ಶಿಲ್ಪ ಕಲಾಕೃತಿಗಳ ಪ್ರದರ್ಶಕ್ಕಾಗಿ ಧನ ಸಹಾಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಾಮಾನ್ಯ /ವಿಶೇಷ ಘಟಕ / ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್ ಸೈಟ್ www.sevasindhu.karnataka.gov.in ಮೂಲಕ ಡಿಸೆಂಬರ್ 1 ರಿಂದ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816- 2275204, 9986276869, 9916891939 ಅಥವಾ 080-222135300ನ್ನು ಸಂಪರ್ಕಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ. ಧನ ಸಹಾಯಕ್ಕೆ ಅರ್ಜಿ ಸಲ್ಲಿಕೆಗೆ ಅನ್ವಯಿಸುವ ಮಾರ್ಗಸೂಚಿಗಳನ್ನು ಸೇವಾ ಸಿಂಧು ಪೋರ್ಟಲ್ ಮತ್ತು ಇಲಾಖೆಯ ವೆಬ್…
ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಹೊರಡಿಸಿರುವ ವೇಳಾಪಟ್ಟಿಯನ್ವಯ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಡಿಸೆಂಬರ್ 10 ಕಡೆಯ ದಿನವಾಗಿದೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಆಯೋಗದ ವೇಳಾಪಟ್ಟಿಯನ್ವಯ De–novo ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಈಗಾಗಲೇ ನಿಗದಿತ ನಮೂನೆ–18 ಅನ್ನು ವಿತರಿಸುವ ಕಾರ್ಯ ಆರಂಭವಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಅರ್ಹ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಲು ನಿಗದಿತ ನಮೂನೆ 18ನ್ನು ಭರ್ತಿ ಮಾಡಿ ತುಮಕೂರು ಮಹಾನಗರಪಾಲಿಕೆಯ ಚುನಾವಣಾ ಶಾಖೆಯಲ್ಲಿ ನಿಗದಿಪಡಿಸಿರುವ ನಿಯೋಜಿತ ಅಧಿಕಾರಿ/ಸಿಬ್ಬಂದಿಗೆ ಡಿಸೆಂಬರ್ 10ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಮತದಾರರ ಪಟ್ಟಿಗೆ ನೋಂದಾಯಿಸಲು ನಿಗದಿತ ನಮೂನೆ–18ನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಸಬೇಕು. ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು. ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಪ್ರಮಾಣ ಪತ್ರ/ಕಾನೊಕೇಶನ್ ಸರ್ಟಿಫಿಕೇಟ್ (ದೃಢೀಕೃತ), ಚುನಾವಣಾ ಗುರುತಿನ…
ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಇವರ ವತಿಯಿಂದ ನ.28 ರಂದು ಬೆಳಗ್ಗೆ 11.30ಕ್ಕೆ ಪತ್ರಿಕಾ ಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಪತ್ರಿಕಾ ವಿತರಕರ ಕ್ರೀಡಾಕೂಟದಲ್ಲಿ ವಿಜೇತರಾದ ಪತ್ರಿಕಾ ವಿತರಕರ ಕುಟುಂಬದವರಿಗೆ ಬಹುಮಾನ ವಿತರಣೆ ಸಮಾರಂಭ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ವಹಿಸುವರು. ಮುಖ್ಯ ಅತಿಥಿಗಳಾಗಿ ಶಿವಾನ೦ದ ತಗಡೂರು, ಯೋಗೀಶ್, ಡಾ.ಎಸ್.ನಾಗಣ್ಣ, ಶಶಿಧರ್ ದೋಣಿಹಕ್ಕು, ಸೊಗಡು ವೆಂಕಟೇಶ್, ರಾಜೇಶ್ವರಿ ರುದ್ರಪ್ಪ, ವಿಶೇಷ ಆಹ್ವಾನಿತರಾಗಿ ಪ್ರಶಾಂತ್ ಕುಮಾರ್ ಎನ್., ಸುರೇಶ್ ಪಿ, ಶಿವಶಾತ್, ಜಗದೀಶ್, ಎಂ.ಟಿ.ಗೋಪಾಲ್, ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅನು ಶಾಂತರಾಜ್, ಜಿಲ್ಲಾ ಹಾಗೂ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದವರನ್ನು ಗೌರವಿಸಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ಶ್ರೀಅಭಯ ಆಂಜನೇಯಸ್ವಾಮಿ ದೇವಸ್ಥಾನ, ಅಭಯಪುರಿ ಪುಣ್ಯ ಕ್ಷೇತ್ರ, ಮೆಳೇಕೋಟೆ, ತುಮಕೂರು ಇವರ ವತಿಯಿಂದ ಡಿ.6 ಮತ್ತು 7ರಂದು ಶ್ರೀಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ. ಡಿ.6 ರಂದು ಬೆಳಗ್ಗೆ 6ಗಂಟೆಗೆ ಗೋಪೂಜೆ, 7ಕ್ಕೆ ಶ್ರೀ ಅಭಯ ಆಂಜನೇಯಸ್ವಾಮಿಗೆ ಸುಪ್ರಭಾತ ಸೇವೆ, ಮಹಾಸಂಕಲ್ಪ, ಪಂಚಾಮೃತ ಅಭಿಷೇಕ, ಮಹಾನೈವೇದ್ಯ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅಲಂಕಾರ, ಯೋಗ, ಸಂಜೆ 4 ಗಂಟೆಗೆ ಮಹಾಗಣಪತಿ ಪೂಜೆ, ಅನುಜ್ಞೆ, ಗಂಗಾಪೂಜೆ, ಪುಣ್ಯಾಹ, ರಕ್ಷಾ ಬಂಧನ, ಅಂಕುರಾರ್ಪಣ, ಕಳರಾರಾಧನೆ, ಆದಿವಾಸ ಸಂಜೆ 6 ಗಂಟೆಗೆ ಯಕ್ಷದೀವಿಗೆ ತುಮಕೂರು ಇವರಿಂದ ಡಾ.ಆರತಿ ಪಟ್ರಮೆಯವರ ನಿರ್ದೇಶನದಲ್ಲಿ ಶಬರಿಮಲೈ ಸ್ವಾಮಿ ಅಯ್ಯಪ್ಪರವರ ಯಕ್ಷಗಾನ ಪ್ರಸ್ತುತ ಪಡಿಸಲಾಗುವುದು. ನಂತರ ಮಹಾ ನೈವೇದ್ಯ, ಮಹಾ ಮಂಗಳಾರತಿ ನಡೆಯಲಿದೆ. ಡಿ.7 ರಂದು ಬೆಳಗ್ಗೆ 5.30ಕ್ಕೆ ಅಯ್ಯಪ್ಪಸ್ವಾಮಿಗೆ ಸುಪ್ರಭಾತ ಸೇವೆ, ಕಳಪಾರಾಧನೆ, ಮೂಲಮಂತ್ರ ಹೋಮ, 8 ರಿಂದ 9ರವರೆಗೆ ಸ್ವಾಮಿಗೆ ಪ್ರಾಣ ಪ್ರತಿಷ್ಠಾಪನೆ, ನೇತ್ರೋಲನ ಹಾಗೂ ಶ್ರೀ ಡಾ. ಶಿವಾನಂದ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮಹಾ ಪೂರ್ಣಾಹುತಿ,…