Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಭಾರತವು ಮತ್ತೊಮ್ಮೆ ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದ್ದಂತೆ, ಔಷಧ ನಿಯಂತ್ರಕ ಮಹಾನಿರ್ದೇಶಕರು 6 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವಾಕ್ಸಿನ್ ಗೆ ಲಸಿಕೆಯನ್ನು ನಿರ್ಬಂಧಿತ ತುರ್ತು ಬಳಕೆಗೆ ಮಂಗಳವಾರ ಅಂಗೀಕಾರ ನೀಡಿದ್ದಾರೆ. 2021ರ ಡಿಸೆಂಬರ್ ನಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗಾಗಿ ಕೋವಾಕ್ಸಿನ್ ನೀಡಲು ಕೇಂದ್ರ ಸರ್ಕಾರದ ಸಮಿತಿ ಅನುಮೋದಿಸಿತು. ಈಗ 6ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಅನುಮತಿ ನೀಡಲಾಗಿದೆ. ಮೊದಲ ಎರಡು ತಿಂಗಳವರೆಗೆ ಪ್ರತಿ 15 ದಿನಗಳಿಗೊಮ್ಮೆ, ಐದು ತಿಂಗಳ ಬಳಿಕ ಮಾಸಿಕ ವಿಶ್ಲೇಷಣೆಗಳೊಂದಿಗೆ ಪ್ರತಿಕೂಲ ಘಟನೆಗಳು ಸೇರಿದಂತೆ ಸುರಕ್ಷತಾ ದತ್ತಾಂಶವನ್ನು ಸಲ್ಲಿಸಲು ಕಂಪನಿಗೆ ಸೂಚನೆ ನೀಡಲಾಗಿದೆ. ಔಷಧ ನಿಯಂತ್ರಕ ಮಹಾನಿರ್ದೇಶಕರ ವಿಷಯ ತಜ್ಞರ ಸಮಿತಿ ಏಪ್ರಿಲ್ 21ರಂದು 2-12 ವರ್ಷ ವಯಸ್ಸಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ನೀಡಲು ಬಯಸಿದ್ದ ಭಾರತ್ ಬಯೋಟೆಕ್ ಸಂಸ್ಥೆಯಿಂದ ಹೆಚ್ಚುವರಿ ಮಾಹಿತಿ ಒದಗಿಸುವಂತೆ ಕೇಳಿತ್ತು. ಆ ಸಮಯದಲ್ಲಿ ಐದು ರಿಂದ 11…
ಮಧುಗಿರಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕು ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಪೆದ್ದನಹಳ್ಳಿ ಗ್ರಾಮದ ದಲಿತ ಮಾದಿಗ ಸಮುದಾಯಕ್ಕೆ ಸೇರಿದ ಗಿರೀಶ್, ಹಾಗೂ ಮಂಚಲದೊರೆ ಗ್ರಾಮದ ಅನಿಲ್ ಇಬ್ಬರು ಸ್ನೇಹಿತರಾಗಿದ್ದು, ಇಬ್ಬರ ಮೇಲೆ ಕಳ್ಳತನ ಆರೋಪ ವರಿಸಿ ತೋಟದ ಮನೆಯಲ್ಲಿ ಇಬ್ಬರನ್ನು ಕೂಡಿ ಹಾಕಿ ಬಟ್ಟೆ ಬಿಚ್ಚಿಸಿ ಇಡೀ ರಾತ್ರಿ ಮನಬಂದಂತೆ, ಅಮಾನುಷವಾಗಿ, ಚಿತ್ರಹಿಂಸೆ ನೀಡಿ,ಕೊಲೆ ಮಾಡಿರುವುದು ನಾಗರಿಗ ಸಮಾಜದಲ್ಲಿ ತಲೆ ತಗ್ಗಿಸುವಂತೆ ಆಗಿದೆ ಎಂದು ದಲಿತ ಪರ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಇಂದಿಗೂ ಜಾತಿ ಬೇಧ ಹಾಗೂ ಬಡತನ ಇನ್ನು ಹಳ್ಳಿಗಳಲ್ಲಿ ಜೀವಂತವಾಗಿದ್ದು, ದಲಿತರ ಮೇಲೆ ಸವರ್ಣಿಯರು ಇಂದಿಗೂ ದೌರ್ಜನ್ಯ ಎಸಗುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಬಡ ದಲಿತ ಮಾದಿಗ ಸಮುದಾಯದ ಬಡಕುಟುಂಬಕ್ಕೆ ಆಸರೆಯಾಗಿದ್ದ ಯುವಕರನ್ನು ಹಿಂಸಿಸಿ “ಕೊಲೆ ಮಾಡಿದ “ಪಾಪಿಗಳಿಗೆ ಕಾನೂನಿ ನಡಿ ಶಿಕ್ಷೆ ನೀಡಬೇಕು. ಕೊಲೆಯಾದ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂ. ಅನುದಾನವನ್ನು ಸರ್ಕಾರದಲ್ಲಿ ನೀಡಬೇಕು ಮಾತು ಕೊಲೆಯಾದ ಕುಟುಂಬದವರ ಸದಸ್ಯರಿಗೆ ಸರ್ಕಾರಿ ಹುದ್ದೆ ನೀಡಬೇಕೆಂದು ದಲಿತ…
ಗುಬ್ಬಿ: ದೇಶದಲ್ಲಿ ಶೇ. 3ರಷ್ಟಿರುವ ಜನರು ಅಧಿಕಾರ ಹಿಡಿದು ಶೇ. 87ರಷ್ಟಿರುವ ಬಹುಸಂಖ್ಯಾತರ ಮೇಲೆ ಅಧಿಕಾರ ಚಲಾಯಿಸುತ್ತಿರುವುದು ವಿಪರ್ಯಾಸ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕಿ ಅಕ್ಷತಾ ವಿಷಾದಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಯಲ್ಲಿ ಫಲಾಪೇಕ್ಷೆ ಇಲ್ಲದೆ ಪಾಲ್ಗೊಂಡಾಗ ಮಾತ್ರ ಹೋರಾಟಗಳು ಯಶಸ್ವಿಯಾಗಲು ಸಾಧ್ಯ. ತನ್ನ ಜ್ಞಾನದಿಂದಲೇ ಉನ್ನತ ಸ್ಥಾನ ಪಡೆದ ಅಂಬೇಡ್ಕರ್ ಅವರು ಮನುವಾದಿ ವ್ಯವಸ್ಥೆ ವಿರುದ್ಧ ಶೋಷಿತರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ಹೋರಾಟದ ಪ್ರತಿಫಲ ಅನುಭವಿಸುತ್ತಿರುವ ಪರಿಶಿಷ್ಟರು ಅವರ ಚಿಂತನೆಗಳನ್ನು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿದರು. ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಉತ್ತಮವಾದ ಸಂವಿಧಾನ ನೀಡಿದ್ದಾರೆ. ಇಂಥ ಮಹಾನ್ ವ್ಯಕ್ತಿಗಳನ್ನು ಕೆಲವೇ ಸಮುದಾಯಕ್ಕೆ ಸೀಮಿತಗೊಳಿಸುವುದು ತರವಲ್ಲ. ಅವರ ಆದರ್ಶ, ಚಿಂತನೆಗಳು ನಮಗೆ ಮಾರ್ಗದರ್ಶಕವಾಗಿವೆ ಎಂದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದರಾಜು, ಮುಖಂಡ ಕೊಟ್ಟ…
ಕುಣಿಗಲ್: ಪಟ್ಟಣದ ಎಪಿಎಂಸಿ ಕಚೇರಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ಸೋಮವಾರ ಪ್ರಾರಂಭವಾಗಬೇಕಾಗಿದ್ದ ನೋಂದಣಿ ಪ್ರಕ್ರಿಯೆಯು ತಾಂತ್ರಿಕ ಕಾರಣದಿಂದ ವಿಳಂಬವಾದ ಪರಿಣಾಮ ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರು, ರಾಷ್ಟ್ರೀಯ ಹೆದ್ದಾರಿ 48ಕ್ಕೆ ಕಲ್ಲುಗಳನ್ನು ಅಡ್ಡಲಾಗಿ ಇಟ್ಟು ಪ್ರತಿಭಟನೆ ನಡೆಸಿದರು. ಬೆಂಗಳೂರು- ಮಂಗಳೂರು ರಸ್ತೆಯಲ್ಲಿ ರೈತರು ಜಮಾವಣೆಗೊಂಡಿದ್ದರಿಂದ ಎರಡೂ ಕಡೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿತ್ತು. ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ ಪ್ರತ್ಯೇಕವಾಗಿ ಸಭೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ತಾತ್ಕಾಲಿಕ ಪರಿಹಾರದ ವ್ಯವಸ್ಥೆ ಮಾಡಿದರು. ರೈತರು ಭಾನುವಾರ ರಾತ್ರಿಯಿಂದಲೇ ಕೇಂದ್ರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ಮಧ್ಯಾಹ್ನವಾದರೂ ತಾಂತ್ರಿಕ ಕಾರಣಗಳಿಂದ ನೋಂದಣಿ ಕಾರ್ಯ ಪ್ರಾರಂಭವಾಗುವ ಲಕ್ಷಣ ಕಂಡುಬರಲಿಲ್ಲ. ಮತ್ತೊಂದೆಡೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದೆ ಬಿಸಿಲಿನಲ್ಲಿ ಬಳಲಿದ ರೈತರು, ಅಧಿಕಾರಶಾಹಿಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫೋಟೋ ವೈರಲ್ ಆಗಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಫೋಟೋ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿದ್ದು, ತನಿಖಾಧಿಕಾರಿಗಳು ನನಗೆ ನೊಟೀಸ್ ನೀಡಿ ಕರೆದು, ತನಿಖೆ ಮಾಡಲಿ ಸವಾಲು ಹಾಕಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ನನ್ನನ್ನು ಬಹಳ ಮಂದಿ ಭೇಟಿ ಮಾಡುತ್ತಾರೆ. ಈ ಫೋಟೋ ಯಾವುದು ಎಂದು ನನಗೆ ಗೊತ್ತಿಲ್ಲ. ಈಗ ನಮ್ಮ ಸ್ನೇಹಿತರು ಈ ವಿಚಾರದ ಬಗ್ಗೆ ಹೇಳಿದ್ದಾರೆ ಎಂದು ಹೇಳಿದರು. ಪೊಲೀಸ್ ಅಧಿಕಾರಿಗಳು ಮೊದಲು ನನಗೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯಲಿ. ನಾನು ಮಂತ್ರಿಯಾಗಿ ಕೆಲಸ ಮಾಡಿದವನು. ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ನಿಯೋಗದೊಂದಿಗೆ ಬಂದಿದ್ದರು, ತಮ್ಮ ಸಮಸ್ಯೆ…
ಹಾವೇರಿ: ಬಸ್ಸೊಂದು ಉರುಳಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚಿಕ್ಕೊಣತಿ ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ರಾಣೇ ಬೆನ್ನೂರಿಂದ ಹಾನಗಲ್ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಮಗುಚಿ ಬಿದ್ದಿದ್ದು, ಪರಿಣಾಮವಾಗಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,483 ಹೊಸ ಕರೋನ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳು 15,636 ಕ್ಕೆ ಇಳಿದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ,ಸೋಂಕಿನಿಂದ ಅಸ್ಸಾಂ ಮತ್ತು ಕೇರಳದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏರಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಬಿಡುಗಡೆಯಾಗಿರುವ ಡೇಟಾದಲ್ಲಿ ದೇಶದಲ್ಲಿ ಮತ್ತೆ ಕೊರೊನಾ ಬಾದಿಸುವ ಎಚ್ಚರಿಕೆ ನೀಡಲಾಗಿದೆ.ದಕ್ಷಿಣದ ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 47 ಜನರು ಸಾವನ್ನಪ್ಪಿದ್ದಾರೆ.ಸೊಂಕಿನಿಂದ ಸಾವಿನ ಪ್ರಮಾಣ ಶೇಕಡಾ 1.22 ರಷ್ಟಿದ್ದು ಅಲರ್ಟ್ ಘೊಷಿಸಲಾಗಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದಡಿ 187.95 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. 4ನೇ ಅಲೆ ಕಾರಣ ಎಲ್ಲರಿಗೂ ಬೂಸ್ಟರ್ ಲಸಿಕೆ ನೀಡುವಂತೆ ಆರೋಗ್ಯ ಪರಿಣಿತರು ಸೂಚಿಸಿದ್ದಾರೆ. ವರದಿ ಆಂಟೋನಿ ಬೇಗೂರು
ನೈಸ್ ಯೋಜನೆಗೆ ನೀಡಲಾಗಿದ್ದ 543 ಎಕರೆ ಭೂಮಿ ವಾಪಸ್ನೈಸ್ ಯೋಜನೆಗೆ ನೀಡಲಾಗಿದ್ದ 543 ಎಕರೆ ಭೂಮಿ ವಾಪಸ್ನಿಗದಿತ ಅವಯಲ್ಲಿ ಬಿಎಂಐಸಿ ಯೋಜನೆಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ನೈಸ್ ಯೋಜನೆಗೆ ನೀಡಲಾಗಿದ್ದ 543 ಎಕರೆ ಹೆಚ್ಚುವರಿ ಭೂಮಿಯನ್ನು ಹಿಂಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಉಪಸಮಿತಿ ತೆಗೆದುಕೊಂಡಿದೆ.ಕಂದಾಯ ಸಚಿವ ಆರ್.ಅಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎನ್.ರವಿಕುಮಾರ್ ನೇತೃತ್ವದ ಉಪಸಮಿತಿಯು ಸಭೆ ನಡೆಸಿ ಯೋಜನೆಗೆ ನೀಡಿದ್ದ 543 ಎಕರೆ ಹೆಚ್ಚುವರಿ ಭೂಮಿಯನ್ನು ಪುನಃ ಸರ್ಕಾರ ವಶಕ್ಕೆ ಪಡೆಯುವ ನಿರ್ಧಾರವನ್ನು ತೆಗೆದುಕೊಂಡಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದಿಂದ ಹೆಚ್ಚುವರಿಯಾಗಿ ಭೂಮಿ ಪಡೆದು ನಿಗದಿತ ಅವಯೊಳಗೆ ಯೋಜನೆಯನ್ನು ಪೂರ್ಣಗೊಳಿಸಿಲ್ಲ. ಹೀಗಾಗಿ ನಾವು ಭೂಮಿಯನ್ನು ವಾಪಸ್ ಪಡೆಯುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು. ನೈಸ್ ಕಂಪನಿಯು ಬಿಎಂಐಸಿ ಯೋಜನೆಯನ್ನು ನಿಗದಿತ ಅವಯೊಳಗೆ ಪೂರ್ಣಗೊಳಿಸಿಲ್ಲ. ಕಾಂಕ್ರೀಟ್ ರಸ್ತೆ, ಮೇಲ್ಸೇತುವೆ ಮಾಡಬೇಕಿತ್ತು. ಅದಾವುದನ್ನೂ ಸರಿಯಾಗಿ ಮಾಡದೆ ಬಹಳಷ್ಟು ನಿಯಮಗಳನ್ನು…
ರಾಜ್ಯಾದ್ಯಂತ ವಿವಾದ ಎಬ್ಬಿಸಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಸಂಬಂಧ, ಬ್ಲೂಟೂತ್ ಬಳಸಿ ಪರೀಕ್ಷೆ ಬರೆದು ಪಿಎಸ್ಐ ಆಗಿ ಆಯ್ಕೆಯಾಗಿರುವವರ ಜನ್ಮ ಜಾಲಾಡಲು ಸಿಐಡಿ ಪೊಲೀಸರು ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಒಂದು ವೇಳೆ ಯಾರಾದರೂ ಈ ಹಿಂದೆ ಬ್ಲೂಟೂತ್ ಬಳಿಸಿ ಪರೀಕ್ಷೆ ಬರೆದು ಪಿಎಸ್ಐ ಹುದ್ದೆ ಗಿಟ್ಟಿಸಿದ್ದರೆ, ಕಾನೂನಿನ ಕುಣಿಕೆ ಬೀಳುವುದು ಖಚಿತ ಎನ್ನಲಾಗುತ್ತಿದೆ. ಯಾರಿಗೂ ಕಾಣದಂತೆ ಕಿವಿಯೊಳಗೆ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದು ಅಕ್ರಮ ಎಸಗುತ್ತಿರುವುದು ಮೊದಲಿನಿಂದಲೂ ಕೇಳಿ ಬರುತ್ತಿದೆ. ಈ ರೀತಿ ಪರೀಕ್ಷೆ ಬರೆದು ಪಿಎಸ್ಐ ಹುದ್ದೆ ಗಿಟ್ಟಿಸಿರುವ ಅಭ್ಯರ್ಥಿಗಳನ್ನು ಪತ್ತೆ ಮಾಡಲು ಸಿಐಡಿ ಪೊಲೀಸರು ಈಗ ಸ್ಮಾರ್ಟ್ ಐಡಿಯಾ ಬಳಸುತ್ತಿದ್ದು, ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಪರೀಕ್ಷೆ ನಡೆದ ಸಮಯದಲ್ಲಿ ಅಭ್ಯರ್ಥಿಗಳ ಮೊಬೈಲ್ಗೆ ಯಾವುದಾದರೂ ಕರೆ ಹೋಗಿದೆಯಾ? ಕರೆ ಯಾವ ನಂಬರ್ನಿಂದ ಹೋಗಿದೆ? ಎಷ್ಟು ನಿಮಿಷ ಮಾತನಾಡಿದ್ದಾರೆ? ಎಂಬುದರ ತಾಂತ್ರಿಕ ವಿವರಗಳನ್ನು ಸಿಐಡಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಪರೀಕ್ಷೆ ಸಮಯದಲ್ಲಿ ಯಾವೆಲ್ಲಾ…
ರಾಜ್ಯದ ಸುಮಾರು ಅರ್ಧದಷ್ಟು ಬರಪೀಡಿತ 33 ಕೌಂಟಿಗಳಲ್ಲಿ 20 ಕಾಡ್ಗಿಚ್ಚುಗಳು ಹತ್ತಿ ಉರಿಯುತ್ತಿರುವುದರಿಂದ ನ್ಯೂ ಮೆಕ್ಸಿಕೋ ಗವರ್ನರ್ ಮಿಚೆಲ್ ಲುಜನ್ ಗ್ರಿಶಮ್ ತುರ್ತು ಘೋಷಣೆಗಳಿಗೆ ಸಹಿ ಹಾಕಿದ್ದಾರೆ. ಉತ್ತರ ನ್ಯೂ ಮೆಕ್ಸಿಕೋದಲ್ಲಿ ಏಪ್ರಿಲ್ 6 ರಂದು ಪ್ರಾರಂಭವಾದ ಒಂದು ಕಾಳ್ಗಿಚ್ಚು ಶನಿವಾರದಂದು ಹೊಸ ಬೆಂಕಿಯೊಂದಿಗೆ ವಿಲೀನಗೊಂಡು ರಾಜ್ಯದಲ್ಲಿ ಅತಿದೊಡ್ಡ ಜ್ವಾಲೆಯನ್ನು ಸೃಷ್ಟಿಸಿದೆ. ಇದರಿಂದಾಗಿ ಮೋರಾ ಮತ್ತು ಸ್ಯಾನ್ ಮಿಗುಯೆಲ್ ಕೌಂಟಿಗಳಲ್ಲಿ ವ್ಯಾಪಕವಾದ ಸ್ಥಳಾಂತರ ನಡೆದಿದೆ. ಭಾನುವಾರ 84 ಚದರ ಮೈಲಿ (217 ಚದರ ಕಿಲೋಮೀಟರ್) ಬೆಂಕಿ ಉರಿಯುತ್ತಿತ್ತು. ಉತ್ತರ ನ್ಯೂ ಮೆಕ್ಸಿಕೋದಲ್ಲಿ ಏಪ್ರಿಲ್ 17 ರಂದು ಪ್ರಾರಂಭವಾದ ಕಾಡ್ಗಿಚ್ಚು ಅನಿಯಂತ್ರಿತ ಗಾಳಿಯಿಂದ ಪೆÇಂಡೆರೋಸಾ ಪೈನ್, ಓಕ್ ಬ್ರಷ್, ಓಕೇಟ್ನ ಉತ್ತರ ಮತ್ತು ಮೊರಾ ಕೌಂಟಿಯ ಹುಲ್ಲಿನ ಪ್ರದೇಶ 81 ಚದರ ಮೈಲುಗಳಷ್ಟು ಬೆಂಕಿಗೆ ಸುಟ್ಟು ಹೋಗಿದೆ. ಕಾಡ್ಗಿಚ್ಚಿನ ಕಾರಣದಿಂದ ಬಲವಂತವಾಗಿ ಸ್ಥಳಾಂತರಿಸಲಾಗಿದ್ದ ಅರಿಝೋನಾದಲ್ಲಿ, ಫ್ಲಾಗ್ಸ್ಟಾಫ್ ಪ್ರದೇಶದ ಕೆಲವು ಜನರನ್ನು ಭಾನುವಾರ ಬೆಳಿಗ್ಗೆ ಮನೆಗೆ ಮರಳಲು ಅನುಮತಿಸಲಾಗಿದೆ. ನೆಬ್ರಸ್ಕಾದ ಕೆಲವು ಭಾಗಗಳಲ್ಲಿ ಗಾಳಿಯಿಂದ…