Subscribe to Updates
Get the latest creative news from FooBar about art, design and business.
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
Author: admin
ಮಧುಗಿರಿ: ತಾಲೂಕಿನ ದೊಡ್ಡೇರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಸಾರ್ವಜನಿಕರು ಪರದಾಡುತ್ತಿರುವ ಸ್ಥಿತಿಯಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಡ್ಯೂಟಿಯಲ್ಲಿರುವ ವೈದ್ಯರು ಹಾಗೂ ನರ್ಸ್ ಗಳು 3 ಗಂಟೆಗಳ ಡ್ಯೂಟಿ ಮುಗಿಸಿಕೊಂಡು ಹೋಗುತ್ತಿದ್ದಾರೆ. ಆ ಬಳಿಕ ಇಡೀ ಆಸ್ಪತ್ರೆ ವೈದ್ಯರು, ನರ್ಸ್ ಇಲ್ಲದೇ ಖಾಲಿ ಖಾಲಿಯಾಗಿರುವ ಪರಿಸ್ಥಿತಿ ಕಂಡು ಬಂದಿದೆ. ಇನ್ನೂ ಚಿಕಿತ್ಸೆ ಪಡೆಯಲು ಬರುವ ರೋಗಿಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೇವಲ ಹೆಸರಿಗಷ್ಟೇ ಆಸ್ಪತ್ರೆ ಇದ್ದಂತಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಈ ಭಾಗದ ಜನರಿಗೆ ಸರಿಯಾದ ಆರೋಗ್ಯ ಸೇವೆಗಳನ್ನು ಒದಗಿಸಲು ಮುಂದಾಗಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು: ಬಂಡಿಹಾಳದ ಎಪಿಎಂಸಿ ಆವರಣದಲ್ಲಿ ಸಹಕಾರ ಇಲಾಖೆಯಿಂದ ನೂತನವಾಗಿ ಆರಂಭಿಸಿರುವ ಕ್ಯಾಂಟೀನ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಶ್ರೀ ಅನ್ನಪೂರ್ಣ ಕ್ಯಾಂಟೀನ್ ನ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಕ್ಯಾಂಟೀನ್ ನಲ್ಲಿ ದಸರಾವರೆಗೆ ಉಚಿತ ಊಟ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಹತ್ತು ರೂಪಾಯಿಗೆ ಊಟ ನೀಡಲಾಗುತ್ತದೆ ಎಂದರು. ದಾನಿಗಳ ನೆರವಿನಿಂದ ರೈತ ಬಾಂಧವರಿಗೆ ರುಚಿ ಮತ್ತು ಶುಚಿಯಾದ ಊಟ ನೀಡುವ ಕೆಲಸವನ್ನು ವರ್ತಕರು ಮಾಡುತ್ತಿದ್ದಾರೆ. ಸಹಕಾರ ಕ್ಷೇತ್ರದಿಂದ ಈ ಕ್ಯಾಂಟೀನ್ ಆರಂಭಿಸಲಾಗಿದೆ. ದಾನಿಗಳು ಮುಂದೆ ಬಂದರೆ ರಾಜ್ಯದ ವಿವಿಧೆಡೆಯ ಎಪಿಎಂಸಿಗಳಲ್ಲಿ ಕೂಡ ಕ್ಯಾಂಟೀನ್ ತೆರೆಯುವ ಚಿಂತನೆ ಮಾಡಲಾಗುವುದು ಎಂದರು. ಇದೇ ವೇಳೆ ದಸರಾ ಜಂಬೂಸವಾರಿಯಲ್ಲಿ ಸಾಗಲಿರುವ ಸ್ತಬ್ಧಚಿತ್ರಗಳನ್ನು ವೀಕ್ಷಿಸಿದರು. ಪ್ರತಿ ಜಿಲ್ಲೆಯಿಂದ ಸ್ತಬ್ಧಚಿತ್ರಗಳು ಆಗಮಿಸಿವೆ. ಆಯಾ ಜಿಲ್ಲೆಯ ಕಲೆ, ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಜಂಬೂಸವಾರಿ ತಯಾರಿ ಅಂತಿಮ ಹಂತದಲ್ಲಿದೆ. ಯಾವುದೇ ಕೊರತೆ ಇಲ್ಲ. ಕಲಾತಂಡಗಳ ಆಗಮನವಾಗಿದೆ…
ಹಿರಿಯೂರು: ಆಯುಧ ಪೂಜೆ ದಿನವೂ ಹಿರಿಯೂರಿನ ಜನತೆಗೆ ಬೆಲೆ ಏರಿಕೆಯ ಬಿಸಿ ತಾಗಿದ್ದು, ಹೂವು ಹಾಗೂ ಹಣ್ಣುಗಳ ಬೆಲೆ ಕೇಳಿ ಸಾರ್ವಜನಿಕರು ಸುಸ್ತಾಗಿದ್ದಾರೆ. ಮಂಗಳವಾರ ಆಯುಧ ಪೂಜೆ ನಡೆಯುತ್ತಿದ್ದು, ಬುಧವಾರ ವಿಜಯದಶಮಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಜನರು ಹೂವು, ಹಣ್ಣು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿಗೆ ಮುಂದಾಗಿದ್ದಾರೆ. ಆದರೆ ಹಿರಿಯೂರು ತಾಲ್ಲೂಕಿನ ಗಾಂಧಿ ಸರ್ಕಲ್ ಬಳಿ ಇರುವ ನಗರದ ನೆಹರು ಮಾರುಕಟ್ಟೆಯಲ್ಲಿ ಹೂವಿನ ದರ ಜನರ ಕೈ ಸುಟ್ಟಿದೆ. ಸ್ವಚ್ಛತೆ ಹೆಸರಿನಲ್ಲಿ ಹಣ ವಸೂಲಿ: ಒಂದೆಡೆ ಬೆಲೆ ಏರಿಕೆಯಿಂದಾಗಿ ವ್ಯಾಪಾರದಲ್ಲಿ ಕೂಡ ನಷ್ಟದಲ್ಲಿರುವ ವ್ಯಾಪಾರಿಗಳಿಂದ ನಗರ ಸಭೆ ಅಧಿಕಾರಿಗಳು ಸ್ವಚ್ಛತೆ ನೆಪದಲ್ಲಿ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂತು. ಈ ಪ್ರದೇಶದಲ್ಲಿ ವಾಹನ ನಿಲುಗಡೆ ಸೇರಿದಂತೆ ಯಾವುದೇ ವ್ಯವಸ್ಥೆಗಳನ್ನು ಕಲ್ಪಿಸಿಕೊಡದ ನಗರ ಸಭೆಯಿಂದಾಗಿ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದರೆ, ಹಣ ವಸೂಲಿ ಮಾತ್ರ ಮಾಡಿ, ತನ್ನ ಕರ್ತವ್ಯ ಮರೆತಿರುವ ನಗರ ಸಭೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಾಹನದ ನಿಲುಗಡೆಯ…
ಚಿತ್ರದುರ್ಗ: ಬೈಕ್ ಗಳ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಳಲ್ಕೆರೆಯ ಕುಕ್ಕವಾಡೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ರಂಗಾಪುರ ಗ್ರಾಮದ ಚಂದು(32), ಮಾಳೇನಹಳ್ಳಿ ಮನು, ಸತೀಶ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ಬರುತ್ತಿದ್ದವರ ಮೇಲೆ ಕೆ.ಎಸ್ ಆರ್ ಟಿಸಿ ಬಸ್ ಹರಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತ್ ಜೋಡೋ ಯಾತ್ರೆಯನ್ನು ಬಿಟ್ಟು ಮೊದಲು ತಮ್ಮ ಪಕ್ಷವನ್ನು ಜೋಡಿಸಿಕೊಳ್ಳುವಂತೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿಗೆ ನಮ್ಮ ಪಕ್ಷದ ಬಗ್ಗೆ ಯೋಚಿಸುವ ಅಗತ್ಯವಿಲ್ಲ. ತಮ್ಮಲ್ಲಿರುವ ಪ್ರಮಾದಗಳನ್ನು ಅವರು ಸರಿಪಡಿಸಿಕೊಳ್ಳಲಿ, ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ. ಅವರನ್ನ ಸಮಾಧಾನಪಡಿಸಲಿ ಎಂದು ಲೇವಡಿ ಮಾಡಿದರು. ಅಕ್ಟೋಬರ್ 6 ರಂದು ನಡೆಯುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಹಬ್ಬ ಹಿನ್ನೆಲೆಯಲ್ಲಿ 2 ದಿನ ವಿಶ್ರಾಂತಿ ಪಡೆಯುತ್ತಾರೆ. ಅಲ್ಲಿಗೆ ಯಾವ ಕಾರ್ಯಕರ್ತ, ಮುಖಂಡರಿಗೂ ಅವಕಾಶ ಇಲ್ಲ. ಅ. 5 ರಂದು ಮೈಸೂರಿಗೆ ಖರ್ಗೆ ಬರಲಿದ್ದಾರೆ. ಅ.6 ರಂದು ಖರ್ಗೆ ಕೂಡ ಭಾಗಿಯಾಗಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು ದೂರು ನೀಡಿದ್ದಾರೆ. ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಮಿತಾ ಎಂಬುವವರು ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ. ಯುವದಸರಾ ಕಾರ್ಯಕ್ರಮಕ್ಕೆ ಬಂದೋಬಸ್ತ್ ಗಾಗಿ ನನ್ನನ್ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಯ್ದಿರಿಸಿದ ಜಾಗವನ್ನ ತೋರಿಸಿ ಕಳುಹಿಸಿದೆ. ಈ ಸಮಯದಲ್ಲಿ ಅಪ್ಪಣ್ಣ ಮತ್ತು ಬೆಂಬಲಿಗರನ್ನ ತಡೆದಾಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಅಪ್ಪಣ್ಣ ಮತ್ತು ಸಹಚರರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪಿಎಸ್ ಐ ಸ್ಮಿತಾ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಳಗಾವಿ: ಕಳೆದ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಬೆಳಗಾವಿ ಜಿಲ್ಲೆಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಡಿಸಿಪಿ ರವೀಂದ್ರ ಗಡಾಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ ಅವರು 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಒಬ್ಬೊಬ್ಬರಿಂದ 50 ಸಾವಿರ ರೂ. ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ ,ಎಸ್ ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಸಲ್ಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ್ ಪಟೇಲ್, ಸಮೀವುಲ್ಲಾ, ಜಹೀರ್ ಘೀವಾಲೆ, ರೆಹಮಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ನೌಕರಿಯು ಹಕ್ಕಲ್ಲ ಎಂದು ಅಭಿಪ್ರಾಯಪಟ್ಟಿದೆ. ಅನುಕಂಪದನ ನೌಕರಿ ಒಂದು ರೀತಿಯ ವಿನಾಯ್ತಿಯೇ ವಿನಃ ಅದು ಹಕ್ಕು ಅಲ್ಲ. ಕುಟುಂಬದ ಸದಸ್ಯ ಹಠಾತ್ ನಿಧನರಾದಾಗ ಆದ ಹಾನಿಯಿಂದ ಚೇತರಿಸಿಕೊಳ್ಳಲು ಕುಟುಂಬಕ್ಕೆ ಅವಕಾಶ ನೀಡುವ ಉದ್ದೇಶದಿಂದ ಮಾತ್ರ ಅನುಕಂಪದ ಉದ್ಯೋಗ ನೀಡಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಹಿಳೆಯೊಬ್ಬರು ಅನುಕಂಪದ ಆಧಾರದಲ್ಲಿ ನೇಮಿಸಿಕೊಳ್ಳಬೇಕು ಎಂದು ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಹಾಗೂ ರಾಸಾಯನಿಕ ಕಂಪನಿ ಟ್ರಾವಂಕೋರ್ ಲಿ.ಗೆ ಕೇರಳ ಹೈಕೋರ್ಟ್ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ. ಎ. ಆರ್. ಶಾ ಹಾಗೂ ನ್ಯಾ. ಕೃಷ್ಣ ಮುರಾರಿ ಅವರಿದ್ದ ಪೀಠ, ಟ್ರಾವಂಕೋರ್ ಲಿ. ಉದ್ಯೋಗಿಯಾಗಿದ್ದ ಮಹಿಳೆಯ ತಂದೆ ತೀರಿಕೊಂಡು 2 ದಶಕಗಳೇ ಕಳೆದಿವೆ. ಹೀಗಾಗಿ ಅರ್ಜಿದಾರ ಮಹಿಳೆ ಅನುಕಂಪದ ನೌಕರಿ ಪಡೆಯಲು ಅರ್ಹಳಲ್ಲ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ ಎಸ್ ಯಡಿಯೂರಪ್ಪ ಒಳ್ಳೆಯವರು ಇದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy