Author: admin

ಇಸ್ರೇಲ್‍ನತ್ತ ಲೆಬನಾನ್ ರಾಕೆಟ್ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಇಸ್ರೇಲ್ ಸೋಮವಾರ ಮುಂಜಾನೆ ಗುಂಡಿನ ದಾಳಿ ನಡೆಸಿದೆ. ಉತ್ತರ ಇಸ್ರೇಲ್‍ನ ತೆರೆದ ಪ್ರದೇಶದಲ್ಲಿ ರಾಕೆಟ್ ಬಿದ್ದಿದೆ. ಇದರಿಂದ ಯಾವುದೇ ಹಾನಿ ಅಥವಾ ಗಾಯಗಳಾಗಿಲ್ಲ ಎಂದು ಸೇನೆ ಸ್ಪಷ್ಟ ಪಡಿಸಿದೆ. ರಾಕೆಟ್ ಉಡಾವಣೆಯಾದ ಸ್ವಲ್ಪ ಸಮಯದ ಬಳಿಕ ಇಸ್ರೇಲ್ ದಕ್ಷಿಣ ಲೆಬನಾನ್‍ನಲ್ಲಿ ಮೂಲಸೌಕರ್ಯಗಳ ಮೇಲೆ ಗುರಿಯಿಟ್ಟು ದಾಳಿ ನಡೆಸಿದೆ. ಉತ್ತರ ಇಸ್ರೇಲ್‍ನಲ್ಲಿ ವಾಡಿಕೆಯ ಚಟುವಟಿಕೆಗಳು ಮುಂದುವರೆದಿವೆ. ರಾಕೆಟ್ ದಾಳಿಯ ಜವಾಬ್ದಾರಿಗಳನ್ನು ತಕ್ಷಣವೇ ಯಾರು ಒಪ್ಪಿಕೊಂಡಿಲ್ಲ. ಇಸ್ರೇಲ್ ಮತ್ತು ಲೆಬನಾನ್‍ನ ಉಗ್ರಗಾಮಿ ಹಿಜ್ಬೊಲ್ಲಾ ಗುಂಪು ಕಡು ಶತ್ರುಗಳಾಗಿದ್ದು, 2006ರಿಂದಲೂ ಯುದ್ಧ ನಡೆಸುತ್ತಿವೆ. ಅಂದಿನಿಂದ ಗಡಿ ಪ್ರದೇಶವು ಉದ್ವಿಗ್ನವಾಗಿದೆ. ಆದರೆ ಬಹುತೇಕ ಶಾಂತವಾಗಿದೆ. ಸಣ್ಣ ಪ್ಯಾಲೇಸ್ಟಿನಿಯನ್ ಗುಂಪುಗಳು ಲೆಬನಾನ್‍ನಲ್ಲಿ ಸಕ್ರಿಯವಾಗಿವೆ. ಇತ್ತೀಚಿನ ವರ್ಷಗಳಲ್ಲಿ ಹಲವಾರು ರಾಕೆಟ್ ದಾಳಿಗಳನ್ನು ನಡೆಸಿರುವುದಾಗಿಯೂ ವರದಿಯಾಗಿದೆ. ಕಳೆದ ವರ್ಷ ಇಸ್ರೇಲ್ ಮತ್ತು ಗಾಜಾ ಉಗ್ರಗಾಮಿಗಳ ನಡುವಿನ 11 ದಿನಗಳ ಯುದ್ಧದ ನಂತರ ಈ ಪ್ರದೇಶವನ್ನು ಕೆಣಕಲು ಮತ್ತೆ ದುಸ್ಸಾಹಸ…

Read More

ಗುತ್ತಿಗೆದಾರರ ಬಿಲ್ ಪಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅನುಸರಿಸುತ್ತಿರುವ ಪದ್ಧತಿ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತು ಪದಾಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕೋಟಿ ರೂ. ಹಾಗೂ ಅದಕ್ಕಿಂತಲೂ ಕಡಿಮೆ ಮೊತ್ತದ ಸಣ್ಣ ಗುತ್ತಿಗೆದಾರರಿಗೆ ಹಿರಿತನದ ಮತ್ತು ಪ್ರೋರೇಟಾ ಸಮಾನಾಂತರ ಅನುಪಾತ ಆಧಾರದ ಮೇಲೆ ಬಿಲ್ ಪಾವತಿಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗುತ್ತಿಗೆದಾರರ ಸಮಸ್ಯೆ ಕುರಿತಂತೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಇನ್ನು ಮುಂದೆ ಸ್ಥಳೀಯ ಗುತ್ತಿಗೆದಾರರಿಗೆ ಆದ್ಯತೆ ನೀಡುವಂತೆ ಕೋರಿದ್ದಾರೆ. ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆಗಳಲ್ಲಿ ಆದ್ಯತೆ ಮೇರೆಗೆ ಬಿಲ್ ಪಾವತಿ ಆಗುತ್ತಿದ್ದು, ಸಣ್ಣ ಗುತ್ತಿಗೆದಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿದೆ. ಇದರಿಂದ ಸಣ್ಣ ಗುತ್ತಿಗೆದಾರರ ಬಾಕಿ ಮೊತ್ತದಲ್ಲಿ ಭಾರಿ ಪ್ರಮಾಣದ ಕಡಿತವಾಗಿದೆ. ತಾಲ್ಲೂಕು ಮಟ್ಟದ ಗುತ್ತಿಗೆಯನ್ನು ಜಿಲ್ಲಾ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿನ ಗುತ್ತಿಗೆಗಳನ್ನು ರಾಜ್ಯಮಟ್ಟದಲ್ಲಿ ನಿರ್ಧರಿಸುವ ಪದ್ಧತಿಯ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಒಟ್ಟಾರೆ ಗುತ್ತಿಗೆದಾರರ ಬಾಕಿ…

Read More

ಪಾವಗಡ: ಪಟ್ಟಣದ ಅಗಸರ ಕುಂಟೆಗೆ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಸೋಮವಾರ ಶಾಸಕ ವೆಂಕಟರವಣಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ  ಪುರಸಭಾ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಜಾಹ್ನವಿ, ಮುಖ್ಯಾಧಿಕಾರಿ ಅರ್ಚನಾ, ಸದಸ್ಯ ಸುದೇಶ್ ಬಾಬು, ರಾಜೇಶ್, ರವಿ, ವೇಲು, ವೆಂಕಟರವಣಪ್ಪ, ಗೀತಾ, ಸುಧಾಲಕ್ಷ್ಮಿ, ಮುಖಂಡ ಹನುಮಂತರಾಯಪ್ಪ, ಪ್ರಮೋದ್ ಕುಮಾರ್, ಎಂ.ಎಸ್. ವಿಶ್ವನಾಥ್, ಅವಿನಾಶ್, ಪರಮೇಶ್ವರ್, ಮೈಲಪ್ಪಎಂಬವರು ಉಪಸ್ಥಿತರಿದ್ದರು. ಅಗಸರ ಕುಂಟೆ ಅಭಿವೃದ್ಧಿಪಡಿಸುವ ಸಲುವಾಗಿ ಹಂತ ಹಂತವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ. ಕಾಮಗಾರಿ ಮುಕ್ತಾಯವಾದ ಮೇಲೆ ವಾರಾಂತ್ಯದ ದಿನಗಳಲ್ಲಿ ಜನತೆಯ ಮನರಂಜನೆ ದೃಷ್ಟಿಯಿಂದ ಬೋಟಿಂಗ್ ವ್ಯವಸ್ಥೆ ಮಾಡಿಸಲಾಗುವುದು. ಕಣಿವೆ ಬಳಿ ಆರಂಭವಾಗಿರುವ ಸಾಲುಮರದ ತಿಮ್ಮಕ್ಕ ಉದ್ಯಾನದಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ. ಇಲಾಖೆಗೆ ಆದಾಯವೂ ಬರುತ್ತಿದೆ. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ  ಮಾತನಾಡಿದ ಶಾಸಕ ವೆಂಕಟರವಣಪ್ಪ ಕುಂಟೆಗೆ ನಾಗಲಮಡಿಕೆಯಿಂದ ನೀರು ಹರಿಸಿರುವುದರಿಂದ ಪಟ್ಟಣದ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಿದೆ. ಈ ವರ್ಷ ಕೊಳವೆಬಾವಿಗಳಲ್ಲಿ ನೀರಿರುವುದರಿಂದ ಬೇಸಿಗೆಯಲ್ಲಿಯೂ ನೀರಿನ ಅಭಾವವಿಲ್ಲ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಚಿತ್ರದುರ್ಗ: ಆರೋಗ್ಯವಂತ ಕುಟುಂಬದಿಂದ ಮಾತ್ರ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ. ಯಾವ ಕುಟುಂಬದಲ್ಲಿ ಎಲ್ಲರ ಆರೋಗ್ಯ ಚೆನ್ನಾಗಿರುತ್ತಾದೇಯೋ,  ಆ ಕುಟುಂಬ  ಉತ್ತಮ ಅಭಿವೃದ್ದಿ ಕಾಣಲು ಸಾಧ್ಯ ಎಂದು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ  75ನೇ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಚಿತದುರ್ಗ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಸಾರ್ವಜನಿಕ ಆಸ್ಪತ್ರೆ ಹಿರಿಯೂರು ಹಾಗು ಈಸ್ಟ್ ಪಾಯಿಂಟ್ ಆಸ್ಪತ್ರೆ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಕಳೆದ ಎರಡು ವರ್ಷಗಳ ಕೊರೊನಾ ಮತ್ತು ಓಮಿಕ್ರೋನ್ ಎಂಬ ಸಾಂಕ್ರಾಮಿಕ ಕಾಯಿಲೆ ಹರಡುತ್ತಿದ್ದಂತಹ  ಸಂಕಷ್ಟ ಪರಿಸ್ಥಿಯಲ್ಲಿ ಹಣಕ್ಕಿಂತ ಆರೋಗ್ಯ ಎಷ್ಷು ಮುಖ್ಯ ಎಂಬುದು ನಮಗೆ ಗೊತ್ತಾಯಿತು . ಹಾಗಾಗಿ ಎಲ್ಲಾ ಆರೋಗ್ಯ ಸೌಲಭ್ಯಗಳು ಪ್ರತಿ ಗ್ರಾಮದ ನಾಗರಿಕರಿಗೆ…

Read More

ಹೆಚ್.ಡಿ.ಕೋಟೆ: ತಾಲ್ಲೂಕು ಆದಿಕರ್ನಾಟಕ ಮಹಾಸಭಾವತಿಯಿಂದ  ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 131 ನೇ ವರ್ಷದ ಜಯಂತಿಯನ್ನು ಅಂಬೇಡ್ಕರ್ ಹಬ್ಬ ಎಂದು ಅಚರಣೆ ಮಾಡಲಾಯಿತು. ಬೆಳ್ಳಿ ರಥೋತ್ಸವದ ಅಂಬೇಡ್ಕರ್ ಪುತ್ಥಳಿ ಭಾವಚಿತ್ರ ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮತ್ತು ಗಣ್ಯರು ಸೇರಿ ಮೆರವಣಿಗೆಗೆ ಚಾಲನೆ ನೀಡಿದರು. ತಾಲ್ಲೂಕಿನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ  ಬಸ್ ನಿಲ್ದಾಣ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆಡಸಿಕೊಂಡು ಅಂಬೇಡ್ಕರ್ ಭವನದವರಿಗೆ ಸೇರಿತ್ತು. ನಂತರ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಗೌತಮ ಬುದ್ದ ಅವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ.  ದೀಪ ಬೆಳಗಿಸುವ ಮೂಲಕ  ಶಾಸಕ ಅನೀಲ್ ಚಿಕ್ಕಮಾದು ಮತ್ತು ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆದಿಕರ್ನಾಟಕ ಮಹಾಸಭಾದ ನೂತನ ಅಧ್ಯಕ್ಷರಾದ ಹೆಚ್ .ಸಿ. ನರಸಿಂಹಮೂರ್ತಿ ಅವರ ಅದ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕಿನ ಎಲ್ಲಾ  ಸಂಘಟನೆಗಳು, ಪಕ್ಷಾತೀತವಾಗಿ, ಎಲ್ಲಾ ರಾಜಕೀಯ ‌ಹಿರಿಯ ಹಾಗೂ ಕಿರಿಯ ಮುಖಂಡರು ಮತ್ತು ತಾಲ್ಲೂಕಿನ ‌ಎಲ್ಲಾ ಗ್ರಾಮಗಳ ಪದಾಧಿಕಾರಿಗಳ ಸಮಕ್ಷಮದಲ್ಲಿ ಹಲವು ವರ್ಷಗಳ ನಂತರ ಈ ರೀತಿಯ ಕಾರ್ಯಕ್ರಮ…

Read More

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ನಗರದ  ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ  ಕಟ್ಟಡಗಳ ಉದ್ಘಾಟನೆ ಹಾಗೂ ಕೃಷಿ ಇಲಾಖೆಯ ಜಲಾನಯನ ಅಭಿವೃದ್ಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮ  ಹಿರಿಯೂರು ತಾಲ್ಲೂಕಿನ ಶಾಸಕಿ  ಪೂರ್ಣಿಮಾ ಶ್ರೀನಿವಾಸ್  ಅಧ್ಯಕ್ಷತೆಯಲ್ಲಿ ನಡೆಯಿತು. ಕೃಷಿ ಸಚಿವ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ  ಬಿ.ಸಿ.ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಹಿರಿಯೂರು ತಾಲ್ಲೂಕಿನಲ್ಲಿ ಜಲಾನಯನ ಅಭಿವೃದ್ಧಿಗೆ ಖಂಡೇನಹಳ್ಳಿ ಮತ್ತು ಪಿಡಿ ಕೋಟೆ, ಹೊಳಲ್ಕೆರೆ ತಾಲ್ಲೂಕಿನಲ್ಲಿ ಗುಂಡೇರಿ ಮತ್ತು ಶಿವಗಂಗಾ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಎಂದು ತಿಳಿಸಿದರು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಜ್ಯಕ್ಕೆ 600 ಕೋಟಿ ಅನುದಾನ ನೀಡಲಾಗಿದೆ. ಇದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿಗೆ ನಮ್ಮ ಇಲಾಖೆಯು ನೀಡಿರುವ  ಕೊಡುಗೆ. ವಿವಿಸಾಗರಕ್ಕೆ ಹೆಚ್ಚಿನ ನೀರು ಮೀಸಲಿಡುವ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಇದೇ ವೇಳೆ ಅವರು ತಿಳಿಸಿದರು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಜ್ಯಕ್ಕೆ 600 ಕೋಟಿ ಅನುದಾನ ದೊರೆಯಲಿದ್ದು, ಮುಂದಿನ…

Read More

ಕೊರಟಗೆರೆ:  ಕರುನಾಡಿನ 94 ನದಿಗಳಿಂದ ಜಲ ಸಂಗ್ರಹಣೆಯ ಜನತಾ ಜಲಧಾರೆ ರಥಯಾತ್ರೆಯು 184ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ನಡೆಸುತ್ತಿದೆ. ಕೊರಟಗೆರೆ ಕ್ಷೇತ್ರದಲ್ಲಿ ನಡೆಯುವ ಜನತಾ ಜಲಧಾರೆ ರಥಯಾತ್ರೆ ಸಮಾರಂಭ ಯಶಸ್ವಿಗೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ರೈತ ಬಾಂಧವರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಕೊರಟಗೆರೆ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಕೊರಟಗೆರೆ ಕ್ಷೇತ್ರಕ್ಕೆ ಏ.26ರ ಮಂಗಳವಾರ ಜನತಾ ಜಲಧಾರೆ ರಥಯಾತ್ರೆ ಆಗಮಿಸಿ 6 ಹೋಬಳಿಯಲ್ಲಿ ಸಂಚಾರ ನಡೆಸಲಿದೆ. ಏ.27ರ ಬುಧವಾರ ಪಪಂ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲಾ ನಾಯಕರು ಆಗಮಿಸಲಿದ್ದಾರೆ. ಕೊರಟಗೆರೆ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆಗಮಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ತುಮಕೂರು…

Read More

ನೈಜೀರಿಯಾ: ತೈಲ ಸಂಸ್ಕರಣಾ ಘಟಕ ಭಾರಿ ಸ್ಫೋಟ ಸಂಭವಿಸಿದ್ದು ಪರಿಣಾಮ ಘಟಕದಲ್ಲಿದ್ದ ಕನಿಷ್ಠ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ನೈಜೀರಿಯಾದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಈ ಸ್ಫೋಟ ಸಂಭವಿಸಿದ್ದು ಈ ವೇಳೆ ಘಟಕದಲ್ಲಿದ್ದವರ ಪೈಕಿ ಕನಿಷ್ಠ ನೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ತಡರಾತ್ರಿ ಸ್ಫೋಟ ಸಂಭವಿಸಿರುವ ಬಗ್ಗೆ ಪೊಲೀಸರು ಖಚಿತಪಡಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಸ್ಫೋಟದಲ್ಲಿ 100 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದು ಆಫ್ರಿಕಾದ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕ ನೈಜೀರಿಯಾದಲ್ಲಿ ಇತ್ತೀಚಿಗೆ ಸಂಭವಿಸಿರುವ ಅತಿ ದೊಡ್ಡ ದುರಂತವಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ತಡರಾತ್ರಿ ಅಕ್ರಮ ಸಂಸ್ಕರಣಾ ಘಟಕದಲ್ಲಿ ವ್ಯಾಪಾರಕ್ಕಾಗಿ ತೈಲ ಘಟಕದ ನಿರ್ವಾಹಕರು ಮತ್ತು ಗ್ರಾಹಕರು ಒಟ್ಟುಗೂಡಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತಿರುಪತ್ತೂರು: ಮೂವರು ವಿದ್ಯಾರ್ಥಿಗಳು ಕ್ಲಾಸ್ ರೂಮ್ ನಲ್ಲಿ ಶಿಕ್ಷಕರ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ  ಈ ಘಟನೆ ನಡೆದಿದ್ದು,  ಘಟನೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆಗಿದೆ.  ವಿದ್ಯಾರ್ಥಿಗಳ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾದನೂರ್ ಎಂಬ ಗ್ರಾಮದ ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಪಾಠ ನಡೆಯುತ್ತಿರುವಾಗ ಸಂಜಯ್ ಗಾಂಧಿ ಎನ್ನುವ ಶಿಕ್ಷಕರೊಬ್ಬರು 12 ನೇ ತರಗತಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಮಾರಿ ಎನ್ನುವ ಹುಡುಗ ನಿದ್ದೆ ಮಾಡುತ್ತಿದ್ದದ್ದನ್ನು ಗಾಂಧಿ ಪ್ರಶ್ನಿಸಿದ್ದರು. ಇದಕ್ಕೆ ಕುಪಿತಗೊಂಡ ಮಾರಿ ಹಾಗೂ ಆತನ ಸಂಗಡಿಗರು ಕ್ಲಾಸ್ ರೂಂನಲ್ಲೇ ತನ್ನ  ಬಟ್ಟೆ ಬಿಚ್ಚಿ ಶಿಕ್ಷಕ ಗಾಂಧಿ ಅವರಿಗೆ ಧಮ್ಕಿ ಹಾಕಿದ್ದಾನೆ.  ಅಲ್ಲದೇ ಹಲ್ಲೆಗೂ ಯತ್ನಿಸಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹಾವೇರಿ: ಸಾಮಾನ್ಯವಾಗಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಮಾಡುವುದನ್ನು ಸಾಮಾನ್ಯ. ಆದರೆ ಇಲ್ಲೊಬ್ಬರು ತಮ್ಮ ಪ್ರೀತಿಯ ಸಾಕು ನಾಯಿಗೆ ಸೀಮಂತ ಮಾಡುವ ಮೂಲಕ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ವಾಗೀಶ್ ನಗರದಲ್ಲಿ ಮನೆಯ ಮಾಲೀಕ ಅಕ್ಷಯ್​ ಕುಮಾರ್​ ಎಂಬುವವರು ತಮ್ಮ ಸಾಕು ನಾಯಿ ರೂಬಿಗೆ ಕುಂಕುಮ ಇಟ್ಟು,ಹೂ ಹಾಕಿ ಸೀರೆ ಉಡಿಸಿ, ಹೆಂಗೆಳೆಯರು ಆರತಿ ಬೆಳಗಿ, ಸೀಮಂತ ಶಾಸ್ರ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರಿಗೆ ಮಾಡುವಂತೆ ಸೀರೆ, ಬಳೆ ಹಾಗೂ ಕುಂಕಮವನ್ನು ಇಟ್ಟು ಅಲಂಕಾರ ಮಾಡಿ ಇಷ್ಟವಾದ ತಿಂಡಿಯನ್ನು ಇಟ್ಟು, ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯ ಮುಗಿಸಿದ್ದಾರೆ. ಮಾತ್ರವಲ್ಲದೆ ಸಂಬಂಧಿಕರನ್ನೂ ಕರೆದು ಊಟದ ವ್ಯವಸ್ಥೆಯನ್ನು ಮಾಡಿದ್ದರು. ಗರ್ಭಿಣಿ ಮಹಿಳೆಯರಿಗೆ ಮಾಡುವ ಹಾಗೇ ಸಾಕು ಪ್ರಾಣಿಗೆ ಸೀಮಂತ ಜನರ ಮೆಚ್ಚುಗೆ  ಪಡೆದಿದ್ದಾರೆ. ಸದ್ಯ ಸೀಮಂತ ಕಾರ್ಯದ  ದೃಶ್ಯಗಳು ಎಲ್ಲಡೆ ವೈರಲ್ ಆಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More