Author: admin

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ನೀಡವಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ತೊಂಡಗೆರೆ ಗ್ರಾಮದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಗುಡಿಸಲಲ್ಲಿ ವಾಸ ಮಾಡುತ್ತಿದ್ದ ನಿರ್ಗತಿಕ ಕುಟುಂಬಕ್ಕೆ ಯಾವುದೇ ನಿವೇಶನ ಮತ್ತು ಸೂರು ಇಲ್ಲದೆ ಸರ್ಕಾರದಿಂದ ಯಾವುದೇ ಸೌಲಭ್ಯ ವಿಲ್ಲದೆ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿತ್ತು. ಈ ಕುಟುಂಬದ ಪರವಾಗಿ ಕಳೆದ 2014 ರಿಂದ ಸತತ ಎಂಟು ವರ್ಷಗಳಿಂದ ‘ಗುಡಿಸಲು ಮುಕ್ತ’ ಅಭಿಯಾನದಡಿ ಸಾಹಿತಿ ಮತ್ತು ಹೋರಾಟಗಾರರಾದ “ರವಿ ತೊಂಡಗೆರೆ” ಅವರು ಹೋರಾಟ ಮಾಡುತ್ತಿದ್ದಾರೆ. ಈ ವಿಚಾರ ರಾಜ್ಯಮಟ್ಟದ ಸುದ್ದಿವಾಹಿನಿಗಳಲ್ಲಿಯೂ ಪ್ರಸಾರವಾಗಿ ರಾಜ್ಯ ಸರ್ಕಾರ ಗಮನ ಸೆಳೆದಿತ್ತು. ಇದಾದ ಬಳಿಕ ಸ್ಥಳಕ್ಕೆ ಜಿಲ್ಲಾಡಳಿತ ತಾಲ್ಲೂಕು ಆಡಳಿತ ಪಂಚಾಯ್ತಿ ಆಡಳಿತ ಅಧಿಕಾರಿಗಳೊಂದಿಗೆ ಆಗಮಿಸಿದ ತುಮಕೂರು ಗ್ರಾಮಾಂತರದ ಶಾಸಕ ಡಿ.ಸಿ.ಗೌರಿಶಂಕರ್ ಅವರು ಸ್ಥಳಕ್ಕೆ ಆಗಮಿಸಿ ನಿರ್ಗತಿಕರಿಗೆ ೨೪ ಗಂಟೆ ಒಳಗಾಗಿ ವಸತಿ ಮತ್ತು ನಿವೇಶನ ಮಂಜೂರು ಮೂಡುವಂತೆ ಆದೇಶ ಮಾಡಿದ್ದರು. ಹಾಗೂ ವಸತಿ ಸಚಿವರಾಗಿದ್ದ ಸೊಮ್ಮಣ್ಣನವರ ಆದೇಶವೂ ಕೂಡ ಆಗಿತ್ತು. ಇಷ್ಟಾಗಿಯೂ ಇಲ್ಲಿವರೆಗೂ ನಿರ್ಗತಿಕರಿಗೆ ನಿವೇಶನದ ಹಕ್ಕು…

Read More

ಪಾವಗಡ: ಕ್ರೀಡೆ ಎಂಬುದು ಮನುಷ್ಯನ ನಡುವೆ ಬಾಂಧವ್ಯ ಬೆಳೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಸಮಾಜ ಸೇವಕ ನಾಗೇಂದ್ರ ಕುಮಾರ್ ತಿಳಿಸಿದರು. ತಾಲ್ಲೂಕಿನ ಸಿ.ಕೆ.ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಕ್ರೀಡಾಂಗಣದಲ್ಲಿ ಲಯನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಎರಡು ವರ್ಷದಿಂದ ಕೋವಿಡ್ 19 ಕಾರಣದಿಂದ ಕ್ರೀಡೆಗೆ ತೆರೆಬಿದ್ದಿದ್ದು, ಈಗ ಚಾಲನೆಯಾಗಿದೆ ಹರಿಹರಪುರದ ಮೈದಾನದಲ್ಲಿ ಆಯೋಜಿಸಿದ್ದ ಲಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರರು ಮತ್ತು ಗ್ರಾಮಸ್ಥರು ಉತ್ತಮ ಸಹಕಾರ ನೀಡಿ, ರಾಜ್ಯಮಟ್ಟದಲ್ಲಿ ವಿಜೃಂಭಿಸಬೇಕು ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಲಕ್ಷ್ಮಮ್ಮ ಈರಣ್ಣ, ಗ್ರಾ.ಪಂ. ಸದಸ್ಯರಾದ ದೊಡ್ಡಣ್ಣ, ಗಿರೀಶ್, ವಸಂತ್ , ಗುತ್ತಿಗೆದಾರ ವೆಂಕಟೇಶ್, ಡಾಕ್ಟರ್ ರಮೇಶ್, ಕಲಾವಿದ ಹನುಮಂತ ರಾಯಪ್ಪ, ಬೆರಳಚ್ಚುಗಾರ ರಂಗನಾಥ್, ಓಂಕಾರ ಆರ್ಟ್ಸ್ ನಾಗರಾಜು, ತಿಪ್ಪೇಶ್, ರಾಮೇಗೌಡ, ನಲಿಗಾನಹಳ್ಳಿ ಮಂಜುನಾಥ್ ,ಸೋಲಾರ್ ಅಶ್ವತ್, ಗುತ್ತಿಗೆದಾರ ಹನುಮಂತರಾಯ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕ್ರೀಡಾ ಪ್ರೇಮಿಗಳೆಲ್ಲ…

Read More

ಪಾವಗಡ: ನಿಡಗಲ್ ಹೋಬಳಿ ದೇವರಾಯನ ಕೊಪ್ಪ ಗ್ರಾಮದ ಮುಸ್ಲಿಂ ಜನಾಂಗಕ್ಕೆ ಸೇರಿದ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಅಸುನೀಗಿರುವ ಘಟನೆ ನಡೆದಿದೆ. ತಾಲೂಕಿನ ದೇವರಾಯನರಪ್ಪ ಗ್ರಾಮದ ಭಾಷಾ ಸಾಬ್ ಎಂಬುವರ ಮೂವರು ಮಕ್ಕಳು ಮೇಕೆ ಮೇಯಿಸಲು ಹೋಗಿದ್ದ ವೇಳೆ ತಮ್ಮ ಪಕ್ಕದ ಗ್ರಾಮವಾದ ಎಸ್.ಆರ್.ಪಾಳ್ಯ ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಶರೀಫ (4ನೇ ತರಗತಿ), ಚಾಂದಬಿ (8ನೇ ತರಗತಿ), ಭಾನವಿ (7ನೇ ತರಗತಿ) ಮೃತರು ಎಂದು ತಿಳಿದು ಬಂದಿದೆ. ಮಕ್ಕಳ ಸಾವಿನ ಹಿನ್ನೆಲೆಯಲ್ಲಿ  ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆ ಸಿಬ್ಬಂದಿ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಅಸುನೀಗಿದ ವಿದ್ಯಾರ್ಥಿಗಳ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ವಾಲ್ಮೀಕಿ ಪೀಠಾಧ್ಯಕ್ಷ ಶ್ರೀ ಸಂಜೆ ಕುಮಾರ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ವರದಿ: ರಾಮಪ್ಪ ಸಿ.ಕೆ.ಪುರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಜ.26ರಂದು ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆವನ್ನು ಕಾರ್ಯಕ್ರಮದ ವೇದಿಕೆಯಿಂದ ತೆಗೆಸಿ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ರಾಯಚೂರು ಜಿಲ್ಲಾನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು . ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಬಿ.ಹೆಚ್.ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿಮುಂದೆ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಿದರು. ತಹಸೀಲ್ದಾರ್ ಚಂದ್ರಶೇಖರಯ್ಯ ಮನವಿಪತ್ರ ಸ್ವೀಕರಿಸಿದರು ಪ್ರತಿಭಟನಾ ನಿರತರನ್ನ ಉದೇಶಿಸಿ ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ…

Read More

ಬೆಂಗಳೂರು : ಕೊರೊನಾ ಸೋಂಕು ಮೂರನೇ ಅಲೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ 50 : 50 ರೂಲ್ಸ್ ಜಾರಿ ಮಾಡಿತ್ತು. ಈ ರೂಲ್ಸ್ ಸಡಿಲಿಕೆ ಮಾಡುವಂತೆ ಹೋಟೆಲ್​ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್ ಸಭೆಯಲ್ಲಿ ತೆಗೆದುಕೊಳ್ಳಲಾಗದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ಯಾವುದಕ್ಕೆ ನಿರ್ಬಂಧ ಇಲ್ಲ: ಜನವರಿ 31 ರಿಂದ ನೈಟ್ ಕರ್ಫ್ಯೂ ಇರಲ್ಲ ಹೋಟೆಲ್, ರೆಸ್ಟೋರೆಂಟ್ ಗಳಿಗೆ 100% ಸೀಟಿಂಗ್ ಬೆಂಗಳೂರಿನಲ್ಲಿ 1 ರಿಂದ 9 ಶಾಲೆಗಳು ಓಪನ್ ದೇವಾಲಗಳಲ್ಲಿ ಸೇವೆಗಳಿಗೆ ಅವಕಾಶ ಕಚೇರಿಗಳಲ್ಲಿ ಶೇ.100 ಸಿಬ್ಬಂದಿಗೆ ಅವಕಾಶ…

Read More

ಮೈಸೂರು: ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಶಿಕ್ಷಕನ್ನು ಶಾಲೆಯಿಂದ ವಜಾ ಮಾಡಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಮುಖ್ಯಶಿಕ್ಷಕರಾದ ಆರ್ ಎಂ ಅನಿಲ್‌ಕುಮಾರ್. ಇವರು ವಿದ್ಯಾರ್ಥಿನಿಯ ಜೊತೆ ಶಾಲೆ ಕೊಠಡಿಯೊಂದರಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಬಳಿಕ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಹಾಗಾಗಿ, ಆ ಖಾಸಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿತು. ಮುಖ್ಯಶಿಕ್ಷಕ ಆರ್ ಎಂ ಅನಿಲ್​ಕುಮಾರ್​ನನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರೊನಾ ವೈರಸ್ ಸಂಬಂಧಿಸಿದಂತಹದ್ದೇ ನಿಯೋಕೋವ್ ಎಂಬ ಹೊಸ ವೈರಸ್ ಅನ್ನ ಆಫ್ರಿಕಾದ ಬಾವಲಿಗಳಲ್ಲಿ ಪತ್ತೆ ಹಚ್ಚಲಾಗಿರೋದಾಗಿ ಚೀನಾದ ವುಹಾನ್ ವಿಜ್ಞಾನಿಗಳು ತಿಳಿಸಿದ್ದಾರೆ.. ಇದು SARs-CoV-2 ಅಥವಾ ಅದರ ರೂಪಾಂತರವಲ್ಲ. ಇದು MERS ಕೊರೊನಾವೈರಸ್‌ಗೆ ಸಂಬಂಧಿಸಿದೆ. ಅಲ್ಲದೇ ಈ ವೈರಸ್‌ ರೂಪಾಂತರಗೊಂಡಿದ್ದೇ ಆದಲ್ಲಿ ಮುಂಬರುವ ದಿನಗಳಲ್ಲಿ ಮನುಷ್ಯರಿಗೆ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಮಿಡಲ್‌ ಈಸ್ಟ್‌ ರೆಸ್ಪಿರೇಟರಿ ಸಿಂಡ್ರೋಮ್‌ ಎಂಬ ಉಸಿರಾಟ ತೊಂದರೆ ಕಾಯಿಲೆಗೆ ಕಾರಣವಾಗುವ ವೈರಸ್‌ ಗೆ ಇರುವಂತಹ ಗುಣಲಕ್ಷಣಗಳನ್ನೇ ನಿಯೊಕೋವ್‌ ವೈರಾಣು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಈ ವೈರಸ್‌ ಕುರಿತು ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ವೈರಸ್ ರೂಪಾಂತರಗೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಅಲ್ಲದೇ ಇದು ಎಷ್ಟು ಅಪಾಯಕಾರಿ ಎಂಬುದನ್ನ ತಿಳಿಯಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…

Read More

ಕನಕಪುರ: ಪತ್ನಿ ನನ್ನೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ಮಗಳು ಕೂಡ ನನ್ನನ್ನು ಅಪ್ಪ ಎಂದು ಕರೆಯುತ್ತಿಲ್ಲ ಎಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಪುರದಲ್ಲಿ ನಡೆದಿದೆ. 55 ವರ್ಷದ ಈಶ್ವರಪ್ಪ ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಆರ್ಟ್ ಆಫ್ ಲಿವಿಂಗ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಪತ್ನಿ ನನ್ನ ಜೊತೆ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಮಗಳಿಗೂ ನನ್ನ ಮೇಲೆ ಪ್ರೀತಿ ಇರಲಿಲ್ಲ. ಅವಳು ನನ್ನನ್ನು ಅಪ್ಪ ಎಂದು ಕರೆಯುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ನನ್ನ ಪತ್ನಿ ನನ್ನ ವಿರುದ್ಧ ಸುಳ್ಳು ದೂರು ದಾಖಲಿಸದ್ದರು. ಆಗ ಜಯನಗರ ಪೊಲೀಸ ಠಾಣೆ ಎಸಿಪಿ ಸರಿಯಾಗಿ ವಿಚಾರಣೆ ನಡೆಸದೆ, ನನ್ನನ್ನು ಠಾಣೆಗೆ ಕರೆಯಿಸಿದ್ದರು. ಹೀಗಾಗಿಯೇ ನಾನು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾರೆ. ಹಾಗೇ ಇವರು ಡೆತ್ ನೋಟ್ ನಲ್ಲಿ ಪತ್ನಿ, ಸ್ನೇಹಿತರು, ಜಯನಗರ ಎಸಿಪಿ ಸೇರಿದಂತೆ 12 ಜನರ ಹೆಸರನ್ನು ಬರೆದಿದ್ದಾರೆ. ಮೃತ ಈಶ್ವರ್ ಅವರ…

Read More

ಕೋವಿಡ್ ಸಾಂಕ್ರಾಮಿಕ, ಆಡಳಿತದಲ್ಲಿನ ಅವ್ಯವಸ್ಥೆ, ವ್ಯಾಪಕ ಭ್ರಷ್ಟಾಚಾರದಿಂದಾಗಿ ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳಿಂದ ಮಾರ್ಚ್ ಅಂತ್ಯದ ವೇಳೆ 2,130 ಕೋಟಿ ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಮೂಲಗಳ ಪ್ರಕಾರ ಸಾರಿಗೆ ನಿಗಮಗಳ ನಷ್ಟ ದೂರವಾಗಿಸಿ, ಲಾಭದಾಯಕ ಹಾದಿ ಕಂಡುಕೊಳ್ಳಲು ವರದಿ ನೀಡುವಂತೆ ರಚಿಸಲಾದ ಸಮಿತಿಗೆ ಅಧ್ಯಕ್ಷರಾಗಿರುವ ನಿವೃತ್ತ ಅಧಿಕಾರಿ ಎಂ. ಆರ್.ಶ್ರೀನಿವಾಸ ಮೂರ್ತಿ ಅವರು, ಜನವರಿ 31ರವರೆಗೆ ಸಾರ್ವಜನಿಕ ಪ್ರತಿಕ್ರಿಯೆಗಳಿಗೆ ಕರೆ ನೀಡಿದ್ದಾರೆ.ಕಳೆದ ಒಂದು ತಿಂಗಳಿನಲ್ಲೇ ಸಾಕಷ್ಟು ಸಭೆಗಳನ್ನು ನಡೆಸಿದ್ದಾರೆ. ಮೂರು ತಿಂಗಳಲ್ಲಿ ಸಮಿತಿಯ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಮಾರ್ಚ್ 28ರೊಳಗೆ ವರದಿ ಸಿದ್ಧಪಡಿಸಲು ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ಸಲಹೆಗಳು ಬರುತ್ತಿದ್ದು, ಅವುಗಳನ್ನು ಪರಿಗಣಿಸಲಾಗುತ್ತಿದೆ ಎಂದು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ತಿಳಿಸಿದ್ದಾರೆ.ಸಾರಿಗೆ ನಿಗಮಗಳ ಪುನರ್ ರಚನೆ ಮಾಡುವಾಗ ಸಾಂಸ್ಥಿಕ ಶಕ್ತಿಯನ್ನು ಗಮನದಲ್ಲಿಟ್ಟುಕೊಳ್ಳು ವುದು ಮುಖ್ಯವಾಗುತ್ತದೆ. ಸೇವೆ ಸಲ್ಲಿಸಲು ನಾವಿಲ್ಲಿದ್ದೇವೆ. ಲಾಭಕ್ಕೆ ಹೆಚ್ಚಿನ ಆದ್ಯತೆ ನೀಡುವ ಘಟಕ ನಮ್ಮದಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ವರದಿ: ಆಂಟೋನಿ ಬೇಗೂರು…

Read More

ತುಮಕೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ಒಂದುಗೂಡಿಸಿದ್ದು ಒಂದು ದೊಡ್ಡ ಸಾಧನೆ ಎಂದು ಉಮೇರಾ ಬೇಗಂ ತಿಳಿಸಿದರು. ನಗರದ ಹೊರವಲಯದ ಗೂಳೂರು ಸಮೀಪದ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ನಮ್ಮ ಭಾರತ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿವಿಧ ಧರ್ಮ, ಜಾತಿ ಮತ್ತು ನಾನಾ ಭಾಷೆಗಳನ್ನಾಡುವ ಜನರಿದ್ದಾರೆ. ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿ ಸಾಮಾಜಿಕವಾಗಿ,  ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯ ಸಂವಿಧಾನಾತ್ಮಕವಾಗಿ ಕೆಲವು ಸವಲತ್ತುಗಳನ್ನು ನೀಡುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅದ್ಭುತವಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಕೆಲವರಿಗೆ ಮಾತ್ರ ಮೀಸಲಾತಿಯ ಸೌಲಭ್ಯವನ್ನು ಕೊಡದೆ ಎಲ್ಲಾ ವರ್ಗದ ಎಲ್ಲಾ ಜಾತಿಯವರಿಗೆ ಮೀಸಲಾತಿಯ ಸೌಲಭ್ಯವನ್ನು ನೀಡಿದ್ದಾರೆ. ವಿಧವೆಯರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ, ಅಲ್ಪಸಂಖ್ಯಾತರುಗಳಿಗೆ ಮೀಸಲಾತಿ ಸೌಲಭ್ಯವನ್ನು ನೀಡಲಾಗಿದೆ. ಇಂತಹ ಸಂವಿಧಾನವನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಇತ್ತೀಚೆಗೆ ಕೆಲವು ತಿಳಿಗೇಡಿಗಳು ಸಂವಿಧಾನಕ್ಕೆ ಅಗೌರವ…

Read More