Author: admin

ಮಧುಗಿರಿ:  2021- 22ನೇ ಸಾಲಿನ ರಾಷ್ಟ್ರೀಯ ವಿಕಾಸ ಯೋಜನೆಯಡಿ ರಸಮೇವು ಘಟಕ ಸ್ಥಾಪಿಸಲು ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಮೇ 10ರೊಳಗೆ ತಮ್ಮ ಹತ್ತಿರದ ಪಶು ಆಸ್ಪತ್ರೆಗಳಿಂದ ಅರ್ಜಿ ಪಡೆದು ನಿಗದಿತ ದಾಖಲಾತಿಯೊಂದಿಗೆ ಹತ್ತಿರದ ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಧುಗಿರಿ ತಾಲೂಕಿನ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಜಿ.ಗಿರೀಶ್ ಬಾಬು ರೆಡ್ಡಿ ತಿಳಿಸಿದ್ದಾರೆ. ಮಧುಗಿರಿ ತಾಲೂಕಿನಿಂದ 47 ಸಾಮನ್ಯ ವರ್ಗ, 18 ಪರಿಶಿಷ್ಟ ಜಾತಿ, 9 ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿನ  ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು. ಆಯ್ಕೆ ಮಾಡಲಾದ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಆಫ್ರಿಕನ್ ಟಾಲ್ ಮೇವಿನ ಬೀಜ, ಒಂದು ಪ್ಲಾಸ್ಟಿಕ್ ಶೀಟ್, 100 ಕೆ.ಜಿ.ಸಾಮರ್ಥ್ಯದ 20 ಸೈಲೋ ಬ್ಯಾಗ್ ಗಳು ಅಥವಾ 500 ಕೆಜಿ ಸಾಮರ್ಥ್ಯದ 4 ಸೈಲೋ ಬ್ಯಾಕ್ ಗಳನ್ನು ಉಚಿತವಾಗಿ ನೀಡಲಾಗುವುದು. ಅರ್ಜಿದಾರರು ಮೇವು ಬೆಳೆಯಲು ಭೂಮಿ ಹೊಂದಿರಬೇಕು. Fruits ID ಹೊಂದಿರಬೇಕು. ಕಡ್ಡಾಯವಾಗಿ 2…

Read More

ವಿಶೇಷ ವರದಿ: ತುಮಕೂರು: ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರ ಹತ್ಯೆ ತುಮಕೂರು ತಾಲೂಕಿನ  ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಯ ನಂತರ ಗ್ರಾಮದಲ್ಲಿ ಇದೀಗ ಮೌನ ಆವರಿಸಿದ್ದು,  ಸ್ಥಳೀಯ ಜನರು ಭೀತಿಗೊಂಡಿದ್ದಾರೆ. ಪೆದ್ದನಹಳ್ಳಿಯ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್‌ (33) ಕೊಲೆಯಾದವರು. ಇದೇ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ನಂದೀಶ್‌ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.  ಶುಕ್ರವಾರ  ಬೆಳಗ್ಗೆ ಗ್ರಾಮದ ನೀರಿನ ಕಟ್ಟೆಯ ಬಳಿಯಲ್ಲಿ ಈ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ದಾರಿಹೋಕರು ನೀಡಿದ ಮಾಹಿತಿಯಿಂದಾಗಿ ಕುಟುಂಬಸ್ಥರಿಗೆ ವಿಚಾರ ತಿಳಿದು ಬಂದಿತ್ತು. ಇಬ್ಬರ ದೇಹದ ಮೇಲೆಯೂ ಗಂಭೀರವಾದ ಗಾಯಗಳಿದ್ದು, ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಕರೆಸಲಾಗಿದ್ದು. ಶ್ವಾನಗಳು ಹಲವು ಮನೆಗಳ ಬಳಿಗೆ ಹೋಗಿದ್ದವು. ಇದರಿಂದ ಆತಂಕಗೊಂಡ ಪೆದ್ದನಹಳ್ಳಿಯ ಕೆಲವು ಪುರುಷರು ಮನೆಗಳನ್ನು ತೊರೆದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಮೌನ ಆವರಿಸಿದೆ. ಕೃಷಿ ಪಂಪ್…

Read More

ಸರಗೂರು: ತಾಲ್ಲೂಕಿನ ಮೂಳ್ಳೂರು ಗ್ರಾ.ಪಂ. ಹಳೆಹೆಗ್ಗುಡಿಲು  ಗ್ರಾಮದಲ್ಲಿ  ಆನೆ ಹಾವಳಿ ಹೆಚ್ಚುತ್ತಿದ್ದು, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಮಹದೇವನಾಯಕ ಅವರು ನೀರು ತರಲೆಂದು ಹೋಗುತ್ತಿದ್ದ ವೇಳೆ ಆನೆಗಳನ್ನು ಕಂಡು ಬೆಚ್ಚಿ ಬಿದ್ದು ಬೈಕ್ ನಿಂದ ಬಿದ್ದಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಗೆ ಹಾನಿಯಾಗಿದೆ. ಇಲ್ಲಿನ ಜನರಿಗೆ ಹಲವು ಬಾರಿ ಆನೆಗಳು ಎದುರಾಗಿವೆ ಎನ್ನಲಾಗುತ್ತಿದ್ದು,  ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ಜನರು ಆನೆ ಹಾವಳಿಯ ಬಗ್ಗೆ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತಿಳಿಸಿದರೆ , ಅವರು ಸರಗೂರಿನ ಅರಣ್ಯ ಅಧಿಕಾರಿಗಳಿಗೆ ಹೇಳಿ ಎಂದು ಹೇಳುತ್ತಾರೆ. ಸರಗೂರು ಅರಣ್ಯ ಇಲಾಖೆ ಅಧಿಕಾರಿಗಳು ನಾವು ಆನೆ ಕಾವಲುಗಾರರನ್ನು ಹಾಕಿದ್ದೇವೆ ಎಂದು ಹೇಳುತ್ತಾರೆ.  ಆದರೆ ಆನೆ ಕಾವಲುಗಾರರು ಯಾವುದೇ ಕೆಲಸವನ್ನು ಮಾಡುತ್ತಿಲ್ಲ . ಮತ್ತೆ ಅರಣ್ಯ ಅಧಿಕಾರಿಗಳು ವ್ಯಾಪ್ತಿ ಸರಗೂರು ಭಾಗಕ್ಕೆ ಬರುವುದಿಲ್ಲ ಎಂದು ಹೇಳುತ್ತಾರೆ.  ನಾವು ಕೇವಲ ಆನೆ ಕಾವಲುಗಾರರನ್ನು ಮಾತ್ರ ಹಾಕಬಹುದು ಎಂದು…

Read More

ಪಟ್ನಾ: ಇಫ್ತಾರ್‌ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಶನಿವಾರ ಸ್ಪಷ್ಟಪಡಿಸಿದರು.  ಸ್ವಾತಂತ್ರ್ಯ ಹೋರಾಟಗಾರ ವೀರ್‌ ಕುನ್ವರ್‌ ಸಿಂಗ್‌ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್‌ ಜೆಡಿ ಮುಖಂಡರಾದ ರಾಬ್ಡಿದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್‌ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೂಡ ಇಫ್ತಾರ್‌ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಂಗಳೂರು: 545 ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದ್ದು, ಅದಕ್ಕೆ ಮುಕ್ತ ಅಧಿಕಾರ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಜಿಎಂಐಟಿ ಕಾಲೇಜಿನ ಆವರಣದಲ್ಲಿರುವ ಹೆಲಿಪ್ಯಾಡ್‌ ನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರು, ಯಾವ ಮಟ್ಟದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪರೀಕ್ಷಾ ಕೇಂದ್ರ, ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಸೂಪರ್‌ ವೈಸರ್‌ ಗಳನ್ನು ಪತ್ತೆ ಹಚ್ಚಿ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುವುದು. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಯಾರು, ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಚನ್ನಪ್ಪ, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ, ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಎಸ್ಪಿ ಸಿ.ಬಿ.ರಿಷ್ಯಂತ್ ಇದ್ದರು. ನಮ್ಮತುಮಕೂರು.ಕಾಂನ…

Read More

ಸರಗೂರು:  ತಾಲ್ಲೂಕಿನ ಹಾದನೂರು ಗ್ರಾಮದ ಗ್ರಾಮಸ್ಥರು ಆದಿ ಕರ್ನಾಟಕ ಸಮಾಜದಿಂದ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಅಂಬೇಡ್ಕರ್ ಹಬ್ಬ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅಂಬೇಡ್ಕರ್ ಪುತ್ಥಳಿ ಹೊತ್ತ ಜಾಥಾ ರಥಕ್ಕೆ ಚಾಲನೆ ನೀಡಲಾಯಿತು. ಸಮುದಾಯ ಭವನದಿಂದ ಹೊರಟ ಜಾಥಾವು ಹೆಡಿಯಾಲ ಮತ್ತು ಚಿಕ್ಕಬರಗಿ ರಸ್ತೆಯ ಮೂಲಕ ಸಂಚರಿಸಿ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ  ನಂತರ ಅದೇ ಮಾರ್ಗವಾಗಿ ಸಮುದಾಯ ಭವನದಲ್ಲಿ ಕೊನೆಗೊಂಡಿತು. ಜಾಥಾ ಹೊರಟ ಮಾರ್ಗ ಮಧ್ಯೆ ಯುವಕರು ಅಂಬೇಡ್ಕರ್ ಹಾಡುಗಳನ್ನು ಹೇಳಿಕೊಂಡು ನೃತೃ ಪ್ರದರ್ಶಿಸಿದರು. ಮಂಗಳವಾದ್ಯ, ಸತ್ತಿಗೆಯು ಮೆರವಣಿಗೆಯಲ್ಲಿ ಸಾಗಿತ್ತು. ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ  ದಿನ ದಲಿತರ ಬಂಧು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಎಲ್ಲರೂ ಮೈಗೂಢಿಸಿಕೊಳ್ಳಬೇಕು. ವಿದ್ಯಾವಂತರಾಗಿ, ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಮೂಲಕ ಎಲ್ಲರೂ ಸಂಘಟನೆ-ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು…

Read More

ಬೆಂಗಳೂರು: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ. ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಪ್ರವಾಸವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.  ಬೆಂಗಳೂರಿನ ಜಯನಗರದ ದಿ ಪ್ರೆಸಿಡೆಂಟ್ ಹೋಟೆಲ್‍ನ ಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ- ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ, ಪೇಜ್ ಕಮಿಟಿ ಹೆಚ್ಚು ಸದೃಢಗೊಳಿಸಲಾಗುತ್ತಿದೆ ಎಂದು ವಿವರಿಸಿದರು. ಪ್ರತಿ ಪೇಜ್‍ಗೆ ಆರು ಜನರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.  ಒಂದು ಮಂಡಲದಿಂದ ಇನ್ನೊಂದು ಮಂಡಲಕ್ಕೆ ತೆರಳಿ ಪೇಜ್ ಕಮಿಟಿ ಕಾರ್ಯದ ಪರಿಶೀಲನೆ ನಡೆದಿದೆ. ಬೂತ್ ಅಧ್ಯಕ್ಷರ ನಾಮಫಲಕ ಜೋಡಣೆ ದೇಶದಲ್ಲೇ ಮೊದಲ ಬಾರಿಗೆ ನಡೆದಿದ್ದು, ಶೇ.90ರಷ್ಟು…

Read More

ಕೊರಟಗೆರೆ:  ಮಾಜಿ ಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಕ್ಷೇತ್ರಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. * ಬೆಳಗ್ಗೆ 10 ಗಂಟೆಗೆ ಪುರವರ ಹೋಬಳಿಯ ಗೊಂದಿಹಳ್ಳಿ ಗ್ರಾಪಂ ವ್ಯಾಪ್ತಿಯ ತಿಮ್ಮಲಾಪುರ ತಾಂಡದಿಂದ ಗೊಲ್ಲರಹಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ, 40 ಲಕ್ಷ * ಬೆಳಗ್ಗೆ 10:30ಕ್ಕೆ ಗೊಂದಿಹಳ್ಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ. * ಬೆಳಗ್ಗೆ 11:00 ಕ್ಕೆ ಗೊಂದಿಹಳ್ಳಿ ಗ್ರಾಪಂ ವ್ಯಾಪ್ತಿಯ ಚುಂಚೇನಹಳ್ಳಿ ಗ್ರಾಮದಲ್ಲಿ TSP ಯೋಜನೆಯಡಿಯಲ್ಲಿ ಸಿಸಿ ರಸ್ತೆ ಚರಂಡಿ ಉದ್ಘಾಟನೆ, 8 ಲಕ್ಷ * ಬೆಳಗ್ಗೆ 11:30 ಕ್ಕೆ ಪುರವರ ಗ್ರಾಪಂ ವ್ಯಾಪ್ತಿಯ ದೊಡ್ಡಹೊಸಹಳ್ಳಿ ಇಂದ ತಗ್ಗಿಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ. 48 ಲಕ್ಷ ರೂಪಾಯಿ. * ಬೆಳಗ್ಗೆ 12:00ಕ್ಕೆ ಬ್ಯಾಲ್ಯ ಗ್ರಾಮದಿಂದ ಹಂದ್ರಾಳುವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿಪೂಜೆ. 40 ಲಕ್ಷ * 12:30ಕ್ಕೆ ಬ್ಯಾಲ್ಯ ಗ್ರಾಮದಿಂದ ಹನುಮಂತಪುರದ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ.…

Read More

ತಿಪಟೂರು : ನಮ್ಮ ಪೂರ್ವಜರು ಜಾತ್ರೆ, ಉತ್ಸವ, ಹಬ್ಬ ಮೊದಲಾದ ಆಚರಣೆಗಳ ಮೂಲಕ ಸಂಘ ಜೀವನದ ಸಾಮರಸ್ಯಗಳನ್ನು, ಬಂಧು ಬಾಂದವರ ಬಾಂಧವ್ಯಗಳನ್ನು, ಸಂಸ್ಕøತಿ, ಆಚಾರ-ವಿಚಾರ, ಸುಖ, ಶಾಂತಿ, ನೆಮ್ಮದಿಯನ್ನು ಕಾಣುತ್ತಿದ್ದರು ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಬುಧವಾರ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾಮಹೋತ್ಸವದ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ನಡೆದ ರಥೋತ್ಸವಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು. ಸಂಸಾರದ ಸಾಗರದಲ್ಲಿ ಸಹ ಕಷ್ಟಗಳು ನಿವಾರಣೆಯಾಗಲು ದೈವೀಭಕ್ತಿ ಅಗತ್ಯ. ಸುಖ ಹಾಗೂ ದುಃಖಗಳು ಬಂದಾಗ ದೇವರ ಸ್ಮರಣೆ ಮಾಡಬೇಕು. ಜಗತ್ತಿನ ಸೃಷ್ಠಿಕರ್ತ ಪರಮಾತ್ಮನಾದ್ದರಿಂದ ಮನುಷ್ಯನಾದವನು ಧರ್ಮದಾನಗಳಿಂದ ಬದುಕಬೇಕು. ಮನುಷ್ಯನಲ್ಲಿ ಕಷ್ಟಕಾರ್ಪಣ್ಯಗಳು ದೂರವಾಗಲು ಭಗವಂತನ ನಾಮಸ್ಮರಣೆ ಅತಿಮುಖ್ಯವಾಗಿದೆ. ಹಿರಿಯರಲ್ಲಿ ಗೌರವ, ಗುರುಗಳಲ್ಲಿ ಭಕ್ತಿ ಭಾವಗಳನ್ನು ಬೆಳೆಸಿಕೊಂಡು ಇಳಿವಯಸ್ಸಿನ ತಂದೆ-ತಾಯಿಗಳಿಗೆ ಆಸರೆಯಾಗಿರುತ್ತಿದ್ದರು. ನಾಗರೀಕತೆ ಬೆಳೆದಂತೆ…

Read More

ತಿಪಟೂರು ಕಲ್ಪತರು ಇಂಜಿನಿಯರಿಂಗ್ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಜನ್ಮ ತಿಂಗಳ ಅಂಗವಾಗಿ ಅಂಬೇಡ್ಕರ್ ನಮನ ಎಂಬ ಕಾರ್ಯಕ್ರಮವನ್ನು ಏಪ್ರಿಲ್ 24 ಭಾನುವಾರದಂದು ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆ ಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಶ್ರೀ ಬಿ ಶಶಿಧರ್ ಅವರು ತಿಳಿಸಿದರು . ಈ ಕಾರ್ಯಕ್ರಮದಲ್ಲಿ ಚಿಂತಕರು ಹಾಗೂ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ವಹಿಸಲಿದ್ದು, ಉಪನ್ಯಾಸವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ನೀಡಲಿದ್ದು ,ಮುಖ್ಯ ಅತಿಥಿಗಳಾಗಿ ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಅನೇಕ ಚಿಂತಕರು ಹಾಗೂ ಜನಸ್ಪಂದನ ಅಧ್ಯಕ್ಷರು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ರವರು ಈ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More