Author: admin

ಕೊರಟಗೆರೆ : ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಹೂಲೀಕುಂಟೆ ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣವನ್ನು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಹೂಲೀಕುಂಟೆ ಗ್ರಾಪಂ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ತಂಗುದಾಣ ಸ್ವಚ್ಚತೆ ಇಲ್ಲದ ಕಾರಣ ಮಳೆ ಬಂದಾಗ ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಹೋಗುವಂತಹ ಅನಿವಾರ್ಯತೆ ಎದುರಾಗಿತ್ತು , ಆದ್ದರಿಂದ ಗಾಂಧಿ ಜಯಂತಿ ಅಂಗವಾಗಿ ಗ್ರಾ.ಪಂ.ನ ಸದಸ್ಯರು ಹಾಗೂ ಅಧಿಕಾರಿ ವರ್ಗದೊಂದಿಗೆ ತಂಗುದಾಣವನ್ನು ಸ್ವಚ್ಚತೆ ಮಾಡಿದ್ದೇವೆ ಎಂದರು. ಪ್ರಯಾಣಿಕರು ಪ್ರಯಾಣಿಸುವಾಗ ಉಗುಳುವುದು, ಗಲೀಜು ಮಾಡುವಂತಹ ಕೆಲಸ ಯಾರು ಮಾಡಬಾರದು, ಇದನ್ನು ನಿರ್ಮಿಸಿರುವುದೇ ನಿಮಗಾಗಿ ಆಗಾಗಿ ಗಲೀಜು ಮಾಡದಂತೆ ಗ್ರಾ.ಪಂ.ಯವರ ಜೊತೆ ಕೈಜೋಡಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಿಡಿಓ ಪೃಥ್ವಿಭಾ, ಸದಸ್ಯರಾದ ಪ್ರೇಮಲತಾ, ಜಯಮ್ಮ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್ .,  ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರನ್ನು ಜೋಡಿಸಲು ಸಾಧ್ಯವಿಲ್ಲ ಇನ್ನು ದೇಶವನ್ನು ಜೋಡಿಸಲು ಸಾಧ್ಯವೇ? ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಟೀಕಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟು ಹುಬ್ಬದ ಅಂಗವಾಗಿ ಕೊರಟಗೆರೆ ವಿಧಾನ ಸಭಾ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಡಾ.ಲಕ್ಷೀಕಾಂತ್ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯವಾಳಿಗಳ ಕಾರ್ಯಕ್ರಮದ ಉದ್ಘಾಟನೆಗೂ ಮುಂಚಿತವಾಗಿ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದರು. ಭಾರತ್ ಜೋಡೋ ಕಾರ್ಯಕ್ರಮ ರಾಹುಲ್ ಗಾಂಧಿಯವರು ಯಾವ ಕಾರಣಕ್ಕಾಗಿ ಮಾಡುತ್ತಿದ್ದರೂ ತಿಳಿಯುತ್ತಿಲ್ಲ,ಕರ್ನಾಟಕದಲ್ಲೇ ಕಾಂಗ್ರೆಸ್ ಪಕ್ಷನ್ನು ಜೋಡಿಸಲಾಗದ ಸ್ಥಿತಿ ಇದ್ದು ದೇಶ ಜೋಡಿಸಲು ಹೋಗುವುದು ಪ್ರಯೋಜನವಿದೆಯಾ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬೆಳ್ಳಿಗೆ ಎದ್ದಾಗ ಅವರು ಮೊದಲು ಜಪ ಮಾಡುವುದು ಆರ್.ಎಸ್.ಎಸ್. ಸಂಘಟನೆ  ಬಗ್ಗೆಯೇ, ಈ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರ ಅವಧಿಗಳಲ್ಲಿ ದುರುದ್ದೇಶ ಪೂರ್ವಕವಾಗಿ…

Read More

ಚಾಮರಾಜನಗರ: ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಚಾಮರಾಜನಗರ ಆರಂಭಗೊಂಡಿದೆ. ಆದರೆ ಮೊದಲವೇ ದಿನ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾರೆ. ತಮಿಳುನಾಡಿನಿಂದ ಆಗಮಿಸಿದ ರಾಹುಲ್ ಗಾಂಧಿ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನವನದ ಒಳಗಡೆ ಅರಣ್ಯ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಚಾಮರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ಡಿ.ಪಿ. ಜಗದೀಶ್ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳಿಗೆ ದೂರು ನೀಡೆಲಾಗಿದೆ. ಬಂಡೀಪುರದಿಂದ ಗುಂಡ್ಲುಪೇಟೆಗೆ ಬರುವ ಹುಣಸೆಮರದ ರಸ್ತೆಯ ಬಳಿ ಅರಣ್ಯದೊಳಗೆ ನಿಂತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್, ಎಚ್. ಸಿ. ಮಹದೇವಪ್ಪ, ರಾಹುಲ್ ಗಾಂಧಿ ಅರಣ್ಯ ನಿಯಮವನ್ನು ಗಾಳಿಗೆ ತೂರಿದ್ದಾರೆ ಎಂದು ದೂರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಅಕ್ಟೋಬರ್ 7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈಗಾಗಲೇ ರಾಜ್ಯದ ಸಮಸ್ಯೆ ಕುರಿತಂತೆ ಚರ್ಚಿಸೋ ಸಂಬಂಧ ಸರ್ವಪಕ್ಷಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅಧಿವೇಶನದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರಿಗೆ ಭರವಸೆಯನ್ನು ನೀಡಿದ್ದರು. ತಾವು ನೀಡಿದಂತ ಭರವಸೆಯಂತೆ ಅಕ್ಟೋಬರ್ 7ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕರು, ಕಾಂಗ್ರೆಸ್, ಜೆಡಿಎಸ್ ನಾಯಕರು, ಪರಿಷತ್ ವಿಪಕ್ಷ ನಾಯಕರು ಭಾಗವಹಿಸಲಿದ್ದಾರೆ. ಈ ಸರ್ವಪಕ್ಷಗಳ ಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಮೋಹನ್ ದಾಸ್ ಸಮಿತಿ ಸಲ್ಲಿಸಿದ್ದಂತ ವರದಿಯ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವೃದ್ಧೆಯನ್ನು ಆಸ್ಪತ್ರೆ ಐಸಿಯುನಿಂದ ಸಹಿ ಮಾಡಲು ಸಬ್​ ರಿಜಿಸ್ಟ್ರಾರ್ ಕಚೇರಿಗೆ ಸಿಬ್ಬಂದಿ ಕರೆಸಿಕೊಂಡಂತಹ ಅಮಾನವೀಯ ಘಟನೆ ಬೆಳಗಾವಿ ದಕ್ಷಿಣ ವಿಭಾಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದೆ. ಆಸ್ತಿಹಂಚಿಕೆ ಪತ್ರಕ್ಕೆ ಸಹಿ ಹಾಕುವ ವಿಚಾರಕ್ಕೆ ಐಸಿಯುನಿಂದ ಸ್ಟ್ರೆಚರ್​ನಲ್ಲೇ 80 ವರ್ಷದ ವೃದ್ಧೆ ಮಹಾದೇವಿಯನ್ನು ಕುಟುಂಬಸ್ಥರು ಕರೆತಂದಿದ್ದಾರೆ. ವೃದ್ಧೆ ಐಸಿಯುನಲ್ಲಿದ್ದ ಕಾರಣ ಆಸ್ಪತ್ರೆಗೆ ಬರಲು ಉಪನೋಂದಣಾಧಿಕಾರಿ ಪದ್ಮನಾಭ್ ಗುಡಿ ಅವರಿಗೆ ಮನವಿ ಮಾಡಲಾಗಿದೆ. ಆದರೆ ಮನವಿ ನಿರಾಕರಿಸಿದ್ದಾರೆ. ಆಸ್ಪತ್ರೆಗೆ ಬಂದು ವೃದ್ಧೆ ಸಹಿ ಪಡೆಯಲು ಹಣಕ್ಕೆ ಬೇಡಿಕೆ ಆರೋಪ ಮಾಡಿದ್ದು, ಹಣ ನೀಡಲು ಒಪ್ಪದೇ ವೃದ್ಧೆಯನ್ನು ಕುಟುಂಬಸ್ಥರು ಕಚೇರಿಗೆ ಕರೆತಂದಿದ್ದಾರೆ. ಅಂಧ ಅಧಿಕಾರಿಯ ನಡುವಳಿಕೆಯಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಬೆಳಗಾವಿಗಷ್ಟೇ ಸೀಮಿತವಾಗಿದ್ದ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಈ ಬಾರಿ ರಾಜ್ಯ ಮಟ್ಟದ ಮನ್ನಣೆ ಸಿಕ್ಕಿದ್ದು, ಅಕ್ಟೋಬರ್​​ 23ರಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದೆ. ಈ ಹಿನ್ನೆಲೆ ಐತಿಹಾಸಿಕ ಕೇಂದ್ರಗಳಿಗೆ ವೀರಜ್ಯೋತಿ ಸಂಚರಿಸಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಪುರಭವನದಲ್ಲಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಕಿತ್ತೂರು ಉತ್ಸವಕ್ಕೆ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕನ್ನಡ & ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಹಯೋಗದಲ್ಲಿ ಅಕ್ಟೋಬರ್​​ 23, 24, 25ರಂದು ಕಿತ್ತೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದರು. ಕಿತ್ತೂರು ಉತ್ಸವದ ವೀರಜ್ಯೋತಿ ಯಾತ್ರೆಯು ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುತ್ತಿತ್ತು. ಆದರೆ ಈ ವರ್ಷ ವಿಶೇಷವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಕೇಂದ್ರ ಸ್ಥಾನಗಳಿಗೆ ವೀರಜ್ಯೋತಿ ಯಾತ್ರೆ ತಲುಪಲಿದ್ದು, ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More

ಕೊರಟಗೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಕುಂದು-ಕೊರತೆಗಳ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರು. ತಾಲ್ಲೂಕಿನ ಸುತ್ತಮುತ್ತ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಲೋಕಾಯುಕ್ತ ಸರ್ಕಲ್ ಇನ್ಸ್ ಪೆಕ್ಟರ್ ವಾಲಿಬಾಷಾ, ಸಾರ್ವಜನಿಕರ ಕುಂದುಕೊರತೆಗಳಿಗೆ  ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ಉಳಿದ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಕೂಡಲೇ ಜನರ ಸಮಸ್ಯೆಗಳನ್ನು  ಬಗೆಹರಿಸುವಂತೆ ಸ್ಥಳದಲ್ಲಿಯೇ ತಿಳಿಸಿದರು. ಬಳಿಕ ಮಾತನಾಡಿದ ಅವರು,  ಸಾರ್ವಜನಿಕರ ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳೀಯ ಅಧಿಕಾರಿಗಳು ಆದಷ್ಟು ಬೇಗ ಬಗೆಹರಿಸಿ ಕೊಡಿ, ಜನರು ಪದೇಪದೆ ಅಧಿಕಾರಿಗಳ ಬಲಿ ಅಲೆದಾಡುವುದು ಬೇಡ. ಹಾಗೆಯೇ ಸಾರ್ವಜನಿಕರು ಅಧಿಕಾರಿಗಳ ಬಳಿ ಹೋಗಬೇಕಾದರೆ ಸಂಬಂಧಪಟ್ಟ ದಾಖಲಾತಿಗಳ ಸಮೇತ ಹೋಗಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು. ಲೋಕಾಯುಕ್ತರ ಸಭೆಯಲ್ಲಿ ಸುಮಾರು 15 ಕ್ಕೂ ಹೆಚ್ಚು ಸಮಸ್ಯೆಗಳನ್ನು ದಾಖಲಿಸಿಕೊಂಡು ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಖೇನ ಸಮಸ್ಯೆಗಳನ್ನ ಬಗೆಹರಿಸುವುದಾಗಿ ತಿಳಿಸಿದರು . ಲೋಕಾಯುಕ್ತ ಡಿ.ಎಸ್ ಪಿ ರವೀಶ್ ಮಾತನಾಡಿ, ಲೋಕಾಯುಕ್ತ ಅಧಿಕಾರಿಗಳ ಬಳಿ…

Read More

ಮಧುಗಿರಿ: ಧಾರಾಕಾರ ಮಳೆಯಿಂದಾಗಿ ದೊಡ್ಡೇರಿ ಹೋಬಳಿಯ ಕೈಮಾರದಲ್ಲಿ ಪ್ರತಿ ಶನಿವಾರ ನಡೆಯುವ ಸಂತೆ ಜಲಾವೃತವಾದ ಘಟನೆ ನಡೆಯಿತು. ಕೈಮಾರ ರಸ್ತೆ ಕವಣದಾಲ ಹಾದುಹೋಗುವ ರಸ್ತೆ ಜಲಾವೃತವಾಗಿದ್ದು, ರೈತರು ತಾವು ಬೆಳೆದ ತರಕಾರಿಗಳನ್ನು  ಮಾರಾಟ ಮಾಡಲಾಗದೇ ಪರದಾಡಿದ ಘಟನೆ ನಡೆದಿದ್ದು, ತಮ್ಮ ತರಕಾರಿಗಳನ್ನು ರಕ್ಷಿಸಿಕೊಳ್ಳುವುದೇ ದುಸ್ಸಾಹಸವಾಗಿ ಮಾರ್ಪಟ್ಟಿತು. ತರಕಾರಿ, ದವಸ ಧಾನ್ಯಗಳಿಗೆ ಗೋಣಿಚೀಲ ಟಾರ್ಪಲ್ ಒದಿಸಿ ಸಂರಕ್ಷಿಸಿಕೊಳ್ಳಲು ರೈತರು ಪರದಾಡುತ್ತಿರುವ ದೃಶ್ಯ ಕಂಡು ಬಂತು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕರ್ನಾಟಕ ಹೈಕೋರ್ಟ್​​ ನ ಮುಖ್ಯ ನ್ಯಾಯಾಧೀಶರಾಗಿ ಪ್ರಸನ್ನ ಬಿ ವರಾಳೆ ಅವರು ನೇಮಕವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಪ್ರೀಂಕೋರ್ಟ್​​ ಕೊಲಿಜಿಯಂ ಶಿಫಾರಸು ಆಧರಿಸಿ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಾಧೀಶರಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ. ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ಬೈಚಾಪುರ ಗ್ರಾಮ ಪಂಚಾಯಿತಿಯ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಶೋಭಾ ಮತ್ತು ಉಪಾಧ್ಯಕ್ಷರಾಗಿ ವೆಂಕಟರೆಡ್ಡಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನ ತೆರವಾಗಿತ್ತು. ಅಧ್ಯಕ್ಷೆ ಸ್ಥಾನಕ್ಕೆ ಸಾಮಾನ್ಯ ಮಹಿಳಾ ವರ್ಗ ಮೀಸಲಿದ್ದು, ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಪುರುಷ(ಸಾಮಾನ್ಯ ವರ್ಗ) ಮೀಸಲು ಇತ್ತು ಅದರಂತೆ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಎಸ್ ನವೀನ್ ನಾಮಪತ್ರ ಸಲ್ಲಿಸಿದರು, ಉಪಾಧ್ಯಕ್ಷರ ಸ್ಥಾನಕ್ಕೆ ಬಿ.ಎಸ್.ವೆಂಕಟರೆಡ್ಡಿ ನಾಮಪತ್ರ ಸಲ್ಲಿಸಿದರು. ಈ ಚುನಾವಣೆಯಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಪ್ರತಿ ಸ್ಪರ್ಧಿಯಾಗಿ ಯಾರು ನಾಮಪತ್ರ ಸಲ್ಲಿಕೆ ಮಾಡದೆ ಇರುವರರಿಂದ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ನಹೀದ ಜಮ್ ಜಮ್ ತಿಳಿಸಿದರು. ನೂತನ ಅಧ್ಯಕ್ಷೆ ಶೋಭಾ ನವೀನ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಅಭಿವೃದ್ದಿ ಪಡಿಸಿ ಯಾವುದೇ ತೊಂದರೆ ತೊಡಕುಗಳು ಇಲ್ಲದೆ ಎಲ್ಲ ಸದಸ್ಯರ ವಿಶ್ವಾಸದಿಂದ ಉತ್ತಮವಾದ ಕೆಲಸ ಮಾಡುತ್ತೇನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿಯೇ…

Read More