Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಅರಿಶಿನಗುಂಡಿ ಗ್ರಾಮದಲ್ಲಿ ಕಣಿವೆ ಮಾರಮ್ಮ ದೇವಿಯ ಜಾತ್ರೆ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು. ಶೇಷಪ್ಪನಹಳ್ಳಿ , ಸುಬ್ಬರಾಯರ ಸ್ವಾಮಿ, ಹಟ್ಟಿಲಕ್ಕಮ್ಮ ದೇವಿ , ಹುಳುವಿನಾಳ್ ಕರಿಯಮ್ಮ ದೇವಿ ದೇವರುಗಳ ಸಮ್ಮಖದಲ್ಲಿ ಅರಿಶಿನಗುಂಡಿಯ ಪ್ರಮುಖ ಬೀದಿಗಳಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿಯ ಬ್ರಹ್ಮ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಕಾಡುಗೊಲ್ಲ ಸಮುದಾಯದ ಮುಖಂಡರಾದ ಸಿ.ಬಿ. ಪಾಪಣ್ಣ, ಅರಿಶಿನಗುಂಡಿ ಪಬ್ಲಿಕ್ ಆ್ಯಪ್ ಶಿವಕುಮಾರ್, ರಮೇಶ್ ಕುಮಾರಪ್ಪ, ನಾಗರಾಜ್ ಕಣುಮಪ್ಪ, ರಮೇಶ್, ತ್ಯಾರಪ್ಪ,ರಾಜಪ್ಪ, ಮಂಜುನಾಥ, ರಂಗನಾಥ, ಕಣುಮೇಶ್, ಕಾಳಪ್ಪ, ಸಿದ್ದಪ್ಪ ಕೋಡಪ್ಪ, ಕೆಂಚ್ಚಪ್ಪ ಸೇರಿದಂತೆ ಅರಿಶಿನಗುಂಡಿ , ಹಾಲ್ ಮಾದೇನಹಳ್ಳಿ, ಯಲ್ಲದಕೆರೆ.ಕೆ.ಕೆ ಹಟ್ಟಿ, ಚಿಕ್ಕಬ್ಯಾಲದಕೆರೆ ಗೋಕುಲನಗರ ಶೇಷಪ್ಪನಹಳ್ಳಿ , ಕಾಟಿಹಟ್ಟಿ. ಅಮ್ಮನಹಟ್ಟಿ ಜೆ.ಎಸ್.ಪುರ. ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಸಕಲ ಭಕ್ತರು ಸಹ ಅರಿಶಿನಗುಂಡಿ ಗ್ರಾಮದ ಕಣಿವೆ ಮಾರಮ್ಮ ದೇವಿ ಜಾತ್ರೆಗೆ ಆಗಮುಸಿ ದೇವಿಯ ದರ್ಶನ…
ಸರಗೂರು: ಸಕಾಲಕ್ಕೆ 10 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಕಛೇರಿಯಿಂದ ಸಾರ್ವಜನಿಕರ ಆಸ್ಪತ್ರೆವರೆಗೆ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಭಾಗಿಯಾಗಿ ಮೆರವಣಿಗೆ ಮೂಲಕ ಜಾಥಾ ನಡೆಸುವ ಮೂಲಕ ದಶಮಾನೋತ್ಸವ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ ಚಲುವರಾಜು, ಸಕಾಲ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಶಮಾನೋತ್ಸವದ ಅಂಗವಾಗಿ ಜನರಿಗೆ ಸಕಾಲದ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು, ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಹಕಾರ ಪಡೆದು ಸಕಾಲ ಜಾಥಾ ಮತ್ತು ಮೆರವಣಿಗೆ ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ತಿಳಿಸಿದರು. ಸಕಾಲ 2.0 ಅಡಿಯಲ್ಲಿ ಹೊಸ ಕಾರ್ಯಕ್ರಮ ಸಕಾಲ ಮೇಲ್ಮನವಿ ಕುರಿತು ಸಂದೇಶ: ಸಕಾಲದಡಿ ಅರ್ಜಿ ಸಲ್ಲಿಸಿದ ನಾಗರಿಕರ ಅರ್ಜಿಗಳು ವಿಲೇವಾರಿ ವಿಳಂಬವಾದಲ್ಲಿ ಅಥವಾ ತಿರಸ್ಕೃತವಾದಲ್ಲಿ ಮೇಲ್ಮನವಿ ಅವಕಾಶ ಲಭ್ಯವಿರುವ ಬಗ್ಗೆ ನಾಗರಿಕರಿಗೆ ಎಸ್ ಎಮ್ ಎಸ್ ಸಂದೇಶ ಕಳುಹಿಸಲ್ಪಡುತ್ತದೆ.ಸಕಾಲದಲ್ಲಿ ಮೇಲ್ಮನವಿ ಹೆಚ್ಚಿಸಲು ಈ ಕ್ರಮವನ್ನು ಜಾರಿಗೆ ತರಲಾಗಿದೆ. Tesz ನಲ್ಲಿ ಸಕಾಲ: ಸರ್ಕಾರ ದಿಂದ ನಾಗರಿಕರಿಗೆ…
ಹೋರಿ ಹಬ್ಬದಲ್ಲಿ ಯುವಕನೊಬ್ಬ ಹೋರಿಯ ತಿವಿತಕ್ಕೊಳಗಾಗಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಹೊಸಳ್ಳಿ ಗ್ರಾಮದ ನಿವಾಸಿ ಷಣ್ಮುಖ (22) ಎಂದು ಗುರುತಿಸಲಾಗಿದೆ. ಹಿರೇಕೆರೂರು ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಡೆಯುತ್ತಿದ್ದ ಹೋರಿ ಹಬ್ಬ ನೋಡಲು ಬಂದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ರಾಜ್ಯಮಟ್ಟದ ಹೋರಿಗಳನ್ನು ಬೆದರಿಸುವ ಈ ಸ್ಪರ್ಧೆಗೆ ರಾಜ್ಯದ ಅನೇಕ ಕಡೆಗಳಿಂದ ಕೊಬ್ಬಿದ ಹೋರಿಗಳನ್ನು ತರಿಸಲಾಗಿತ್ತು. ಅಖಾಡದಲ್ಲಿ ಓಡುತ್ತಿದ್ದ ಹೋರಿಯನ್ನು ಷಣ್ಮುಖ ನೋಡುತ್ತಿದ್ದು, ಈ ಸಂದರ್ಭದಲ್ಲಿ ಹೋರಿಯೊಂದು ಈತನಿಗೆ ತಿವಿದಿದ್ದು, ಹೊರಿ ತಿವಿದ ರಭಸಕ್ಕೆ ಕೊಂಬು ಹೊಟ್ಟೆಗೇ ಹೊಕ್ಕಿದ್ದರಿಂದ ಸ್ಥಳದಲ್ಲೇ ಯುವಕ ಸಾವಿಗೀಡಾಗಿದ್ದಾನೆ. ಹಂಸಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು : ಬರೋಬರಿ 2 ಕೋಟಿ ಮೌಲ್ಯದ ಹೈಟೆಕ್ ಸರ್ಕಾರಿ ಶಾಲೆ ನಿರ್ಮಿಸಿ ತಾಯಿಯ ಶಾಲೆಯ ಋಣ ತೀರಿಸಿರುವ ಘಟನೆ ತುಮಕೂರಿನ ಹೊರವಲಯದ ಕೋರಾ ಎಂಬ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆ ಎಂದರೆ ನಿರ್ಲಕ್ಯ ತೋರಿಸುವ ಜನರಿಗೆ ಈ ಶಾಲೆ ಮಾದರಿ ಶಾಲೆಯಾಗಿದೆ. ಇದು ಸರ್ಕಾರ ನಿರ್ಮಾಣ ಮಾಡಿದ ಶಾಲೆಯಲ್ಲ, ಬದಲಿಗೆ ತನ್ನ ತಾಯಿಗಾಗಿ ಉದ್ಯಮಿಯೊಬ್ಬರು ನಿರ್ಮಿಸಿದ ಕೊಡುಗೆ. ಈ ಶಾಲೆ ನಿರ್ಮಿಸಿದ ಉದ್ಯಮಿಯ ಹೆಸರು ಹರ್ಷ, ಮತ್ತು ಮಮತ ದಂಪತಿ.ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯಮ ನಡೆಸುತ್ತಿರುವಾಗ ಒಮ್ಮೆ ಕೋರಾ ಮಾರ್ಗವಾಗಿ ಶಿರಾಗೆ ತೆರಳುತ್ತಿದ್ದಾಗ ತಾಯಿಯ ಊರು ಎಂಬ ಅಭಿಮಾನದಿಂದ ಕಾರು ನಿಲ್ಲಿಸಿ ಇಳಿದಿದ್ದೇ ಈ ಮಹತ್ಕಾರ್ಯಕ್ಕೆ ಕಾರಣವಾಯಿತು. ಊರ ಮೊಮ್ಮಗ ಹರ್ಷ ಈ ಊರಿಗೆ ಕಾಲಿಟ್ಟಾಗ ಹಳೇ ಶಾಲೆಯ ಭಾಗಶಃ ಕಟ್ಟಡವನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಕೆಡವಲಾಗಿತ್ತು. ಇದನ್ನು ಗಮನಿಸಿದ ಹರ್ಷ ಅವರು ತಮ್ಮ ತಾಯಿಯ ನೆನಪಿಗಾಗಿ ಶಾಲೆಗೆ ಹೊಸ ಕಟ್ಟಡ ಕಟ್ಟಿಸಿ ಕೊಡಲು ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳನ್ನು…
ಚಿತ್ರದುರ್ಗ: ಬಿಜೆಪಿಯು ವಾಮಮಾರ್ಗದಿಂದ ಸರ್ಕಾರ ರಚಿಸಿದ್ದು, ಇದೀಗ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯೂರು ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಸಿ.ಪಾಪಣ್ಣ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭ ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ಬಿಜೆಪಿಯು ಎಂ ಎಲ್ ಎಗಳನ್ನು ಖರೀದಿಸುವ ಮೂಲಕ ವಾಮಮಾರ್ಗದಲ್ಲಿ ಸರ್ಕಾರ ರಚಿಸಿತು. 2008ರಲ್ಲಿಯೂ ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆ ಸಂದರ್ಭದಲ್ಲಿ 3 ಮುಖ್ಯಮಂತ್ರಿಗಳು ಆಡಳಿತ ನಡೆಸುವಂತಾಗಿತ್ತು ಎಂದರು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯವರು ಮಾಡಿರುವ ಸಾಧನೆ ಎಂದರೆ, ಅಕ್ರಮ ಗಣಿಗಾರಿಕೆ ಮಾಡಿ ಜೈಲಿಗೆ ಹೋಗಿರುವುದು ಎಂದರು. ಚುನಾವಣೆಗೆ ಹಣ ಹಾಕಿ ಅಧಿಕಾರ ಗಿಟ್ಟಿಸಿಕೊಳ್ಳುವುದು ಬಳಿಕ ವ್ಯಾಪಾರ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು 40 % ಕಮಿಷನ್ ಕೇಳುವ ಮೂಲಕ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಶ್ವರಪ್ಪನ ವಿರುದ್ಧ ಎಫ್ ಐಆರ್…
ತುಮಕೂರು: ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವಿಳಂಬ ನಡೆಸಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಅತಂತ್ರವಾಗಿದೆ ಎಂದು ಎಐಡಿಎಸ್ ಒ ನ ಅಧ್ಯಕ್ಷರಾದ ಅಶ್ವಿನಿ ಟಿ ಹೇಳಿದರು. ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಪದವಿ ಪಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಇದುವರೆಗೂ ಪರೀಕ್ಷಾ ಶುಲ್ಕ ಕೂಡ ಪಾವತಿಸಲು ಯಾವುದೇ ಸೂಚನೆ ಹೊರಡಿಸಿಲ್ಲ. ಆದರೆ ತರಗತಿಗಳು ಮುಗಿದು ಪರೀಕ್ಷಾ ಸಿದ್ಧತೆಗೆಂದು ಕಳೆದ ಒಂದು ತಿಂಗಳಿಂದ ರಜಾ ನೀಡಲಾಗಿದೆ. ಇನ್ನೊಂದು ಕಡೆ ದ್ವಿತೀಯ ಮತ್ತು ತೃತಿಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೇ ತಿಂಗಳ 23 ರಂದು ಮುಗಿಯುತ್ತದೆ. ಕೊರೋನಾ ಸಾಂಕಾಮಿಕದ ಮೊದಲನೇಯ ಮತ್ತು ಎರಡನೇಯ ಅಲೆಯಿಂದಾಗಿ ಕಳೆದ ಶೈಕ್ಷಣಿಕ ವರ್ಷವು ಗೊಂದಲದಲ್ಲೇ ಕಳೆದು ಹೋಗಿದೆ. ವರ್ಷವು ಕೂಡ ಶೈಕ್ಷಣಿಕ ಚಟುವಟಿಕೆಗಳು ಸಮರ್ಪಕವಾಗಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಆತಂತ್ರ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಒಂದು ಕಡೆ ರಾಜ್ಯ ಸರ್ಕಾರ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಯಾವುದೇ ಪೂರ್ವಭಾವಿ ಸಿದ್ಧತೆಯಿಲ್ಲದೆ ಹಠಾತ್ತನೆ 4 ವರ್ಷದ ಪದವಿ ಜಾರಿಗೊಳಿಸಿರುವುದು…
ತುರುವೇಕೆರೆ: ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮದೇವತೆ ಶ್ರೀ ಕಾಲಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿರುವ ಘಟನೆ ನಡೆದಿದೆ. ಜಾತ್ರೆಯ ವೇಳೆ ಸುಶೀಲಮ್ಮ ಎಂಬವರ ಗಮನವನ್ನು ಕಳ್ಳರ ತಂಡ ಬೇರೆಡೆಗೆ ಸೆಳೆದಿದ್ದು, ಈ ವೇಳೆ ಮಹಿಳೆಯರ ಗುಂಪಿನಲ್ಲಿದ್ದ ಕಳ್ಳರ ತಂಡದ ಮಹಿಳೆ ಸರ ಎಗರಿಸಿದ್ದು, ಈ ವೇಳೆ ಮಹಿಳೆಯನ್ನು ಇತರ ಮಹಿಳೆಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳರ ತಂಡದಲ್ಲಿ 4ರಿಂದ 5 ಜನರಿದ್ದರು ಎನ್ನಲಾಗಿದೆ. ಸರ ಎಳೆದ ಮಹಿಳೆಯನ್ನು ಹಿಡಿದುಕೊಂಡ ವೇಳೆ ಜೊತೆಗಿದ್ದವರು ಚಿನ್ನದ ಸರದೊಂದಿಗೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನೂ ಮೂರು ವರ್ಷಗಳ ಹಿಂದೆ ತಾನು 31 ಗ್ರಾಂ ಚಿನ್ನದ ಸರ ಮಾಡಿಸಿಕೊಂಡಿದ್ದೆ. ಅದರ ಬೆಲೆ 1 ಲಕ್ಷದ 20 ಸಾವಿರ ಆಗಿರುತ್ತದೆ ಎಂದು ದೂರಿನಲ್ಲಿ ಸುಶೀಲ ತಿಳಿಸಿದ್ದಾರೆ. ವರದಿ: ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತಿಪಟೂರು: ತಾಲೂಕು ಹೊನವಳ್ಳಿ ಹೋಬಳಿ ಪಟ್ರೆ ಹಳ್ಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯ ಪ್ರಾರಂಭ ಸಮಾರಂಭ ನಡೆಯಿತು. ಸಾನಿಧ್ಯ ವಹಿಸಿದ್ದ ಸಿರಿಗೆರೆ ತರಳಬಾಳು ಬೃಹನ್ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮನುಷ್ಯ ನಾಗಿ ಹುಟ್ಟಿದಮೇಲೆ ಒಳ್ಳೆಯ ಮನಸ್ಸಿನಿಂದ ಒಳ್ಳೆ ಒಳ್ಳೆ ಕೆಲಸ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ತಿಳಿಸಿದರು. ಮನುಷ್ಯ ಮೊದಲು ದೂಷಿಸುವ ಗುಣವನ್ನು ಮೊದಲು ಬಿಡಬೇಕು. ನಾನು ಸರಿಯಾಗಿ ಇದ್ದೇನೆ ಎಂಬ ಪ್ರಶ್ನೆ ಹಾಕಿಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಸಮಾಜದಲ್ಲಿ ಕೆಟ್ಟವರು, ಒಳ್ಳೆಯವರು ಇದ್ದೇ ಇರುತ್ತಾರೆ ಮನುಷ್ಯನ ಸ್ವಭಾವ ಒಬ್ಬರಿಗೆ ನೋವು ಉಂಟು ಮಾಡುವ ಕೆಲಸ ಮಾಡದೆ ಒಳ್ಳೆಯದಾಗಿ ಕೆಲಸ ಮಾಡಿದಾಗ ಶಾಂತಿ ನೆಮ್ಮದಿಯನ್ನು ಕಾಣಬಹುದು ಎಂದರು. ಕೆರಗೋಡಿ ರಂಗಾಪುರ ಸುಕ್ಷೇತ್ರದ ಗುರುಪರಂಪರೆ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ದೇವಾಲಯ ನಿರ್ಮಾಣದಿಂದ ಮನುಷ್ಯನಿಗೆ ಜೀವನದಲ್ಲಿ ಶಾಂತಿ ನೆಮ್ಮದಿ ಲಭಿಸಲಿದೆ. ಧಾರ್ಮಿಕ ನಂಬಿಕೆಯಿಂದ ಆತ್ಮ ಜಾಗೃತಗೊಳ್ಳುತ್ತದೆ. ಒಡೆದು ಹೋಗಿರುವ ಮನಸ್ಸುಗಳನ್ನು ಒಗ್ಗೂಡಿಸಲಿದೆ ಎಂದರು. ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ನಮ್ಮ ದೇಶದ…
ಗುಬ್ಬಿ: ಇಬ್ಬರು ಯುವಕರನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡ ರಾತ್ರಿ ಕೃತ್ಯ ನಡೆಸಲಾಗಿದ್ದು, ಪೆದ್ದನಹಳ್ಳಿ ದಲಿತ ಕಾಲೋನಿ ನಿವಾಸಿ ಗಿರೀಶ್ ಹಾಗೂ ಮತ್ತೋರ್ವ ಯುವಕ ಬರ್ಬರವಾಗಿ ಹತ್ಯೆಯಾದವರು ಎಂದು ತಿಳಿದು ಬಂದಿದೆ. ಪೆದ್ದನ ಹಳ್ಳಿಯ ನಿರ್ಜನ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಒಬ್ಬನ ಮೃತದೇಹ ನೀರಿನಲ್ಲಿದ್ದು, ಮತ್ತೋರ್ವನ ಮೃತದೇಹ ನೀರಿನಿಂದ ಮೇಲೆ ಪತ್ತೆಯಾಗಿದೆ. ಹತ್ಯೆ ಮಾಡಿದವರು ಹಾಗೂ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ತಿಳಿದು ಬರಬೇಕಿದೆ. ವರದಿ: ಡಿ.ಮಂಜುನಾಥ್ , ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ಮೂಲ ಸೌಕರ್ಯ ಕೇಳಿದ ಯುವಕನಿಗೆ ತಾಲೂಕು ಕಚೇರಿ ಆವರಣದಲ್ಲಿಯೇ ಕಪಾಳ ಮೋಕ್ಷ ಮಾಡಿ, ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ವಿರುದ್ಧ ಪಾವಗಡ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು. ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದ ಯುವಕನಿಗೆ ಸ್ಪಂದಿಸುವ ಬದಲು ಶಾಸಕರು ದರ್ಪದಿಂದ ವರ್ತಿಸಿದ್ದು, ಯುವಕನಿಗೆ ಕಪಾಳ ಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕರ ವಿರುದ್ಧ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ದಂಡಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಂಡಲ ಅಧ್ಯಕ್ಷರು ರವಿಶಂಕರ್ ನಾಯ್ಕ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ, ಕಾರ್ಯದರ್ಶಿ ಹನುಮಂತರಾಯಪ್ಪ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಒಬಯ್ಯ, ಕೃಷ್ಣಾ ನಾಯ್ಕ್, ಎಸ್.ಟಿ.ಮೋರ್ಚಾ ಅಧ್ಯಕ್ಷರು ಶಿವಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷಿಣಿ ಸರೋಜಮ್ಮ, ಓ.ಬಿ.ಸಿ. ಮೋರ್ಚಾ ಪ್ರದಾನ ಕಾರ್ಯದರ್ಶಿ ವೆಂಕಟೇಶ್, ಎಸ್.ಸಿ .ಮೋರ್ಚಾ ಉಪಾಧ್ಯಕ್ಷರು ರಾಮಾಂಜಿನಪ್ಪ, ರೈತಮೋರ್ಚಾ ಕಾರ್ಯದರ್ಶಿ ಭೀಮಪ್ಪ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರು ಪವನ್ ಕುಮಾರ್, ಸುಧೀರ್, ಮಂಡಲ ಉಪಾಧ್ಯಕ್ಷರು…