Subscribe to Updates
Get the latest creative news from FooBar about art, design and business.
- ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
- ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
- ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
- ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
- ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
- ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
- ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
Author: admin
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಗುಸುಗುಸು ಹಬ್ಬಿರುವ ಸಂದರ್ಭದಲ್ಲೇ ಸ್ಪಷ್ಟನೆ ನೀಡಿರುವ ಅವರು ಹಾಲಿ ಮುಖ್ಯಮಂತ್ರಿ ನಾಯಕ್ವದಲ್ಲೇ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ನನಸಾಗುವುದಿಲ್ಲ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. 2022 ಆಗಸ್ಟ್ 21ರಿಂದ ರಾಜ್ಯದ ಎಲ್ಲೆ ಕಡೆ ಪ್ರವಾಸ ಹಮ್ಮಿಕೊಳ್ಳಲಾಗುವುದು. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಹುಡುಕಿ ಕೆಲಸ ಮಾಡಲು ಹೈಕಮಾಂಡ್ ಸೂಚನೆ ನೀಡಿದ್ದು, ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡಲಾಗುವುದು ಎಂದರು. ಇತ್ತೀಚಿಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ಜತೆ ಚರ್ಚೆ ವೇಳೆ ರಾಜ್ಯ ರಾಜಕೀಯ ವಿದ್ಯಮಾನದ ಕುರಿತು ವಿಷಯ ಮಂಡನೆ ಮಾಡಲಾಗಿದೆ. ಸಾಮೂಹಿಕ ನೇತೃತ್ವದಲ್ಲೇ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು. ನಾನು ರಾಜೀನಾಮೆ ಕೊಟ್ಟ ನಂತರವೇ…
ಪ್ರೀತಿಯ ಅಮಲಿನಲ್ಲಿ ಮಗಳು ಪೋಷಕರನ್ನು ಕೊಂದಿದ್ದಾಳೆ. ಜಾರ್ಖಂಡ್ನ ಮ್ಯಾನಿಫಿಟ್ ಟೆಲ್ಕೊ ಪೊಲೀಸ್ ಠಾಣೆಯ ಜೆಮ್ಶೆಡ್ಪುರದಲ್ಲಿ ಭಾನುವಾರ ರಾತ್ರಿ ಈ ಭಯಾನಕ ಘಟನೆ ನಡೆದಿದೆ. 15 ವರ್ಷದ ಬಾಲಕಿಯೊಬ್ಬಳು 37 ವರ್ಷದ ಯುವಕನನ್ನು ಕೆಲ ದಿನಗಳಿಂದ ಪ್ರೀತಿಸುತ್ತಿದ್ದಳು. ಈ ಕ್ರಮದಲ್ಲಿ ಇಬ್ಬರೂ ಮದುವೆಯಾಗಲು ಬಯಸಿದ್ದರು. ಇದಕ್ಕಾಗಿ ಕಳೆದ ಭಾನುವಾರ ರಾತ್ರಿ ಬಾಲಕಿ ಮನೆಯಿಂದ ಓಡಿ ಹೋಗಲು ನಿರ್ಧರಿಸಿದ್ದಾಳೆ. ತಡರಾತ್ರಿ ತಂದೆ-ತಾಯಿ ಮಲಗಿದ ಬಳಿಕ ಮನೆಯಿಂದ ಹೊರಬರಲು ಯತ್ನಿಸಿದ್ದಾಳೆ. ಶಬ್ಧ ಕೇಳಿದ ಪೋಷಕರು ಎಚ್ಚರಗೊಂಡರು. ಮಗಳು ಹೊರಗೆ ಹೋಗಲು ಪ್ರಯತ್ನಿಸುತ್ತಿರುವುದನ್ನು ನೋಡಿ ಅವರು ಕೇಳಿದರು. ಆಗ ತನ್ನ ಪ್ರೀತಿಯ ಬಗ್ಗೆ ಹೇಳಿದ್ದಾಳೆ ಹಾಗೂ ತಾನು ಅವನನ್ನು ಮದುವೆಯಾಗಲಿದ್ದೇನೆ ಎಂದು ಹೇಳಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು ಮಗಳನ್ನು ತಡೆಯಲು ಯತ್ನಿಸಿದ್ದಾರೆ. ಬಾಲಕಿಯನ್ನು ಮನೆಯಿಂದ ಹೊರಗೆ ಹೋಗದಂತೆ ತಡೆದಿದ್ದಾರೆ. ತಡೆದಿದ್ದಕ್ಕೆ ಕೋಪಗೊಂಡ ಬಾಲಕಿ ಪೋಷಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾಳೆ. ಮನೆಯಲ್ಲಿದ್ದ ಸುತ್ತಿಗೆಯ ಜೊತೆಗೆ ಪ್ರೆಶರ್ ಕುಕ್ಕರ್ ನಿಂದ ಪೋಷಕರ ತಲೆಗೆ ಹೊಡೆದಿದ್ದಾಳೆ. ಇದರಿಂದ ಇಬ್ಬರೂ ಸ್ಥಳದಲ್ಲೇ…
ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ಘೋಷಿಸಿದ್ದು, ಬಿಜೆಪಿ ಜೊತೆಗಿನ ಮೈತ್ರಿಗೆ ಗುಡ್ ಬೈ ಹೇಳಿದ್ದಾರೆ. ಆರ್ಜೆಡಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಮತ್ತೊಮ್ಮೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿತೀಶ್ ಕುಮಾರ್ ಅವರು ಪ್ರಧಾನಿಯಾಗಲು ಸಾಧ್ಯವಾಗದೇ ಬೇರೆಯವರೊಂದಿಗೆ ಮೈತ್ರಿಗಾಗಿ ಬಿಜೆಪಿ ತೊರೆದಿದ್ದಾರೆ ಎಂದು ಕಮಲ ಪಕ್ಷ ಟೀಕಿಸಿದೆ. ತಾವು ಧರ್ಮದಲ್ಲಿ ನಂಬಿಕೆ ಇಟ್ಟಿದ್ದು, ನಿತೀಶ್ ಪಕ್ಷದೊಂದಿಗಿನ ಮೈತ್ರಿಯನ್ನು ಮುರಿಯುವುದಿಲ್ಲ ಎಂದು ಬಿಜೆಪಿ ಘೋಷಿಸಿದೆ. ಏತನ್ಮಧ್ಯೆ, ತಮ್ಮ ರಾಜಕೀಯ ಜೀವನದಲ್ಲಿ ಏನೇ ಏರಿಳಿತಗಳ ನಡುವೆಯೂ 8ನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಮೊದಲ ಬಾರಿಗೆ: ಮಾರ್ಚ್, 2000 ಎರಡನೇ ಬಾರಿ: ನವೆಂಬರ್, 2005 ಮೂರನೇ ಬಾರಿ: ನವೆಂಬರ್, 2010 ನಾಲ್ಕನೇ ಬಾರಿ: ಫೆಬ್ರವರಿ, 2015 ಐದನೇ ಬಾರಿ: ನವೆಂಬರ್, 2015 ಆರನೇ ಬಾರಿ: ಜುಲೈ, 2017 ಏಳನೇ ಬಾರಿ: ನವೆಂಬರ್, 2020 ಎಂಟನೇ ಬಾರಿ: 10, ಆಗಸ್ಟ್, 2022 ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಮಾಧ್ಯಮಗಳಿಗೆ…
ದೇಶದಲ್ಲಿ ಮಣ್ಣು ಮುಕ್ಕುತ್ತಿರುವ ಕಾಂಗ್ರೆಸ್ಗೆ ಬಿಜೆಪಿ ಬದಲಾವಣೆ ಬಗ್ಗೆ ಮಾತನಾಡಲು ಯಾವ ಅಧಿಕಾರವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ದೇಶದಲ್ಲಿ ತಳವಿಲ್ಲದಂತಾಗಿದೆ. ಆಗಿದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿಯಲ್ಲಿನ ಬದಲಾವಣೆ ಬಗ್ಗೆ ಮಾತನಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು. ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಮಾವೇಶದ ಬಳಿಕ ಕಾಂಗ್ರೆಸ್ನಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಸಿದ್ದರಾಮಯ್ಯ ಅವರ ನಡುವೆ ಒಳ ಜಗಳ ನಡೆಯುತ್ತಿದೆ. ಮೂಲ ಕಾಂಗ್ರೆಸಿಗರು ಸಭೆ ಮಾಡಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಹೇಳಿದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಒಳ ಜಗಳ ಸಮಾವೇಶದ ನಂತರ ಬೀದಿಗೆ ಬಂದಿದೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಮೇಶ್ಕುಮಾರ್, ಎಂ.ಬಿ.ಪಾಟೀಲ್ ಅವರ ನಡುವಿನ ಅಸಮಾಧಾನವೂ ಬಹಿರಂಗಗೊಂಡಿದೆ. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ ಎಂದರು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಗಜಪಡೆಗೆ ಇಂದು ಅರಮನೆ ಆವರಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆದಿದ್ದು, ನಗರದಲ್ಲಿನ ಅಶೋಕಾಪುರಂನಲ್ಲಿರುವ ಅರಣ್ಯ ಭವನದಲ್ಲಿ ಬೀಡುಬಿಟ್ಟಿದ್ದ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಣ್ಯ ಇಲಾಖೆ ವತಿಯಿಂದ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ನಂತರ ದಸರಾ ಗಜಪಡೆ ಅರಮನೆ ಆವರಣ ಪ್ರವೇಶಿಸಿತು. ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆ ಆವರಣಕ್ಕೆ ಅರಣ್ಯ ಭವನದಿಂದ 3.5 ಕಿಮೀ ಕಾಲ್ನಡಿಗೆ ಮೂಲಕ ಆಗಮಿಸಿವೆ. ಅರಮನೆ ಆಡಳಿತಮಂಡಳಿ ವತಿಯಿಂದ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. 9.20ರಿಂದ 10ರ ಶುಭ ಲಗ್ನದಲ್ಲಿ ದಸರಾ ಗಜಪಡೆಗಳಿಗೆ ಅರಮನೆ ಆಡಳಿತ ಮಂಡಳಿ ವತಿಯಿಂದ ಪೂಜೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕ ರಾಮದಾಸ್, ಡಿಸಿಎಫ್ ಡಾ.ಕರಿಕಾಳನ್ ಪೂಜೆಯಲ್ಲಿ ಭಾಗಿಯಾಗಿದ್ದರು. ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಜಿಲ್ಲಾಡಳಿತ ವತಿಯಿಂದ ಪುಷ್ಪಾರ್ಚನೆ ಸಲ್ಲಿಸಿ ದಸರಾ ಗಜಪಡೆಗಳಿಗೆ…
ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ 8 ಮಂದಿ ಮಹಿಳಾ ಕೃಷಿ ಕಾರ್ಮಿಕರು ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಬೀರ್ಭೂಮ್ನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಆಟೋ ರಿಕ್ಷಾದಲ್ಲಿ ಮಿತಿಗಿಂತ ಹೆಚ್ಚು ಜನರನ್ನು ತುಂಬಿಕೊಂಡು ಹೋಗುತ್ತಿದ್ದಾಗ ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬೀರ್ಭೂಮ್ ಜಿಲ್ಲೆಯಲ್ಲಿರುವ ಮಲ್ಲಾರಪುರ ಸಮೀಪದ ರಾಮ್ಪುರ್ ಹಟ್ನ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಚಾಲಕ ಸೇರಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಬೀರ್ಭೂಮ್ ಜಿಲ್ಲಾ ಎಸ್ಪಿ ನಾಗೇಂದ್ರನಾಥ್ ತ್ರಿಪಾಟಿ ತಿಳಿಸಿದ್ದಾರೆ. ಪ್ರಧಾನಿ ಪರಿಹಾರ: ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಜೀವ ಹಾನಿಯಾಗಿರುವುದು ಅತೀವ ವೇದನೆ ಉಂಟು ಮಾಡಿದೆ. ಮೃತಪಟ್ಟವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿರುವ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಯಿಂದ ಮೃತ ಕುಟುಂಬದವರಿಗೆ ತಲಾ ಎರಡು ಲಕ್ಷ ಪರಿಹಾರ…
ಖ್ಯಾತ ನಟಿ ಹಾಗೂ ಹಿರಿಯ ನಾಯಕಿ ಮೀನಾ ಅವರ ಪತಿ ಆರೋಗ್ಯ ಸಮಸ್ಯೆಯಿಂದ ತಿಂಗಳ ಹಿಂದೆ ನಿಧನರಾಗಿದ್ದಾರೆ. ಅಂದಿನಿಂದ ಮೀನಾ ತೀವ್ರ ದುಃಖದಲ್ಲಿದ್ದಾರೆ. ಇತ್ತೀಚೆಗಷ್ಟೇ ಹಿರಿಯ ನಾಯಕಿಯರಾದ ರಂಭಾ, ಸಂಗೀತಾ ಮತ್ತು ಸಾಂಘವಿ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮೀನಾ ಅವರ ಮನೆಗೆ ತೆರಳಿ ಮೀನಾ ಅವರನ್ನು ಭೇಟಿ ಮಾಡಿದ್ದರು. ಮೀನಾ ಜೊತೆಗೆ ಫೋಟೋಗಳನ್ನು ತೆಗೆದುಕೊಂಡರು. ಮೀನಾ ಅವರು ಸ್ನೇಹಿತರೊಂದಿಗೆ ಚಿತ್ರಗಳನ್ನು ತೆಗೆದುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ತನ್ನ ಗಂಡನ ಮರಣದ ನಂತರ, ಆಕೆಯ ಮುಖದಲ್ಲಿ ಮೊದಲ ಬಾರಿಗೆ ನಗುವನ್ನು ನೋಡಬಹುದಾಗಿದೆ. ರಂಭಾ, ಸಂಗೀತಾ, ಸಾಂಘವಿ ಮತ್ತು ಮೀನಾ ಒಟ್ಟಿಗೆ ಫೋಟೋ ತೆಗೆದುಕೊಂಡಿದ್ದು ಪತಿ ಮರಣದ ನಂತರ ಮೊದಲ ಬಾರಿಗೆ ಅವರ ಮುಖದಲ್ಲಿ ಮಂದಹಾಸ ಮೂಡಿದೆ ಮತ್ತು ಚಿತ್ರಗಳು ವೈರಲ್ ಆಗಿವೆ. ಮೀನಾ ಸದಾ ಹಾಗೆ ನಗುತ್ತಿರಲಿ ಎಂದು ನೆಟಿಜನ್ ಗಳು ಕಾಮೆಂಟ್ ಮಾಡುತ್ತಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಇತ್ತೀಚೆಗೆ, ಅಮೀರ್ ಖಾನ್ ಸಿನಿಮಾ ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಬಾಯ್ ಕಟ್ ಭೀತಿ ಎದುರಾಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದೆ. ಈ ಹಿಂದೆ ಅಮೀರ್ ಖಾನ್ ಅವರು ಭಾರತದ ಬಗ್ಗೆ ತಮ್ಮ ಕಾಮೆಂಟ್ಗಳಿಗಾಗಿ ಚಿತ್ರವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಅಭಿಯಾನ ಶುರುವಾಗಿದೆ. ಇದಕ್ಕೆ ಅಮೀರ್ ಖಾನ್ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗಷ್ಟೇ ಅಕ್ಷಯ್ ಕುಮಾರ್ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಕೂಡ ಲಾಲ್ ಸಿಂಗ್ ಚಡ್ಡಾ ಜೊತೆ ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರಚಾರದ ಭಾಗವಾಗಿ, ಅಕ್ಷಯ್ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಚಿತ್ರಗಳ ಬಾಯ್ ಕಟ್ ಮಾಡುವ ಬಗ್ಗೆ ಮಾತನಾಡಿದರು. ಅಕ್ಷಯ್ ಕುಮಾರ್ ಮಾತನಾಡಿ.. “ಭಾರತವು ವಿಶ್ವದ ಶ್ರೇಷ್ಠ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿರುವ ಸಮಯ ಇದು. ನಮ್ಮ ದೇಶದಲ್ಲಿ ಸ್ವಾತಂತ್ರ್ಯವಿದೆ. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ಹೊಂದಬಹುದು. ಇಂತಹ ಸಮಯದಲ್ಲಿ ಸಿನಿಮಾಗಳ ಬಗ್ಗೆ ನಾವೂ ಸಕಾರಾತ್ಮಕವಾಗಿ ಯೋಚಿಸಬೇಕು. ಸಿನಿಮಾ ಉದ್ಯಮವೂ ದೇಶದ ಆರ್ಥಿಕತೆಗೆ ಬೆಂಬಲ ನೀಡುತ್ತದೆ. ಸಿನಿಮಾ ಸಕ್ಸಸ್…
ಅನುಷ್ಕಾ ಶರ್ಮಾ ಬ್ಯೂಟಿ ಸೀಕ್ರೆಟ್: ನಾಯಕಿಯರಿಗೆ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಬಾಲಿವುಡ್ ಹೀರೋಯಿನ್, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಒಂದು ಮಗುವಿನ ತಾಯಿಯಾಗಿದ್ದರೂ ತನ್ನ ಸೌಂದರ್ಯವನ್ನು ಇನ್ನೂ ಕಾಪಾಡಿಕೊಂಡಿದ್ದಾರೆ. ಮದುವೆ ಮತ್ತು ಮಕ್ಕಳೊಂದಿಗೆ, ಅವರು ಕೆಲವು ವರ್ಷಗಳ ಕಾಲ ಚಲನಚಿತ್ರಗಳಿಗೆ ಗ್ಯಾಪ್ ನೀಡಿದರು… ಶೀಘ್ರದಲ್ಲೇ ಚಲನಚಿತ್ರಗಳಿಗೆ ಮರಳುತ್ತಾರೆ. ಕೆಲವು ವರ್ಷಗಳ ಅಂತರವಿದ್ದರೂ ಆಕೆಯ ಸೌಂದರ್ಯ ಮಾತ್ರ ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ತನ್ನ ಸೌಂದರ್ಯದ ಗುಟ್ಟನ್ನು ಹೇಳಿದ್ದಾಳೆ. ಅನುಷ್ಕಾ ಶರ್ಮಾ ಈ ಬಗ್ಗೆ ಮಾತನಾಡಿ.. ”ನನ್ನ ನಯವಾದ ಚರ್ಮಕ್ಕಾಗಿ ನಾನು ಅನುಸರಿಸುವ ಸಲಹೆ ಒಂದೇ. ನಾನು ಫೇಸ್ ಪ್ಯಾಕ್ ಬಳಸುತ್ತೇನೆ. ನಾನು ಸ್ವಲ್ಪ ಮೊಸರು, ರೋಸ್ ವಾಟರ್ ಮತ್ತು ಸ್ವಲ್ಪ ಬೇವಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಮುಖ ಮತ್ತು ಕುತ್ತಿಗೆಗೆ ಹಚ್ಚುತ್ತೇನೆ. ಅದು ಒಣಗಿದ ನಂತರ, ನಾನು ತಣ್ಣೀರಿನಿಂದ ನನ್ನ ಮುಖವನ್ನು ತೊಳೆಯುತ್ತೇನೆ. ನಾನು ಈ ಫೇಸ್ ಪ್ಯಾಕ್ ಅನ್ನು ನಿಯಮಿತವಾಗಿ ಬಳಸುತ್ತೇನೆ. ನಾನು ಚಿಕ್ಕವಳಿದ್ದಾಗ ನನಗೆ…
ವಿಧಾನಮಂಡಲದ ಅಧಿವೇಶನ ಕರೆಯಲು ಒತ್ತಾಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸದನಕ್ಕೆ ಬರಲ್ಲ ಎಲ್ಲಿದ್ಯಪ್ಪಾ ಕುಮಾರಸ್ವಾಮಿ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ವಿರುದ್ಧ ಕಿಡಿಕಾರಿ ನಕಲಿಸರ್ಟಿಫಿಕೇಟ್ ರಾಜಾ, ನಕಲಿ ಸರ್ಟಿಫಿಕೇಟ್ ಶೂರ, ನನ್ನನ್ನು ಹುಡುಕುತ್ತಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ, ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣಕುರುಡಾದರೂ ಇರಬೇಕು ಎಂದು ತಿರುಗೇಟು ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು ಕರಾವಳಿ ಕೊಲೆಗಳು, ಮಳೆ-ನೆರೆ, ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿರುವುದು ನಿಜ. ಇದರಿಂದ ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ, ತಮ್ಮ ಇಲಾಖೆಯ ಹುಳುಕು ಹೊರ ಬಂದಾವು ಎಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್ ಕೋರ್ಸ್ಗಿಂತ ಬೃಹತ್ ಚಾಪ್ಟರ್ ಬಿಚ್ಚಲೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ. ಕಲಾಪವೆಂದರೆ ಉನ್ನತ ಶಿಕ್ಷಣ ಸಚಿವರಿಗೆ ಮೈ ಬೆಚ್ಚಗಾಗುತ್ತದಾ? ಅವರ ಕೌಶಲ್ಯ ಗೊತ್ತಿದೆ. ಅಕ್ರಮ ಮುಚ್ಚಿ ಹಾಕಿಕೊಳ್ಳಲು ಅಕ್ರಮ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೆ ಬೆಂಕಿ ಹಾಕಿಸಿದ್ದು, ಆಪರೇಷನ್ ಕಮಲದಲ್ಲೂ…