Subscribe to Updates
Get the latest creative news from FooBar about art, design and business.
- ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು
- ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ
- ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ
- ವಸತಿ ಯೋಜನೆಯಡಿ ಅರ್ಜಿ ಆಹ್ವಾನ
- ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ
- ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ
- ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ
- ಬೀದರ್ | ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಮನವಿ
Author: admin
ಪುಣೆ : ಕುಡಿತದ ಚಟಕ್ಕೆ ಬಿದ್ದಿದ್ದ ಗಂಡನ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ತನ್ನ ಸೋದರಮಾವನ ಸಹಾಯದಿಂದ ಆತನನ್ನ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.. ಪತಿಯ ಕುಡಿತದಿಂದ ಬೇಸತ್ತು ಪತ್ನಿ ಸೋದರಮಾವನ ಸಹಾಯದಿಂದ ಕೊಲೆ ಮಾಡಿದ ಘಟನೆಯೊಂದು ಪುಣೆಯಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಮೃತನನ್ನ 37 ವರ್ಷದ ಕಪ್ತಾನ್ ಸಿಂಗ್ ನಾಯಕ್ ಎಂದು ಗುರುತಿಸಲಾಗಿದೆ. 32 ವರ್ಷದ ಅಂಜಲಿ ಚವ್ಹಾಣ್ ನಾಯಕ್ ಮತ್ತು 36 ವರ್ಷದ ಗಜೇಂದ್ರ ಚಿತ್ತಾರಸಿಂಗ್ ನಾಯಕ್ ಆರೋಪಿಗಳು.. ಸದ್ಯ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಪ್ತಾನ್ಸಿಂಗ್ ಮತ್ತು ಅವರ ಪತ್ನಿ ಅಂಜಲಿ ಚವ್ಹಾಣ್ ನಾಯಕ್ ಮುಂಡ್ವಾದ ಕೇಶವನಗರ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಕಪ್ತಾನ್ಸಿಂಗ್ ದಿನಗೂಲಿ ಕೆಲಸ ಮಾಡುತ್ತಿದ್ದ.. ಆದ್ರೀತ ಕುಡಿತದ ಚಟಕ್ಕೆ ಬಿದ್ದು , ಪ್ರತಿನಿತ್ಯ ಪತ್ನಿ ಅಂಜಲಿಗೆ ಕಿರುಕುಳ ನೀಡುವುದು ಹಲ್ಲೆ ಮಾಡುವುದನ್ನ ಖಾಯಂ ಮಾಡಿಕೊಂಡಿದ್ದ.. ಪತಿಯ ಕಿರುಕುಳದಿಂದ ಬೇಸತ್ತ ಅಂಜಲಿ ತನ್ನ ಸಹೋದರಿಯ ಪತಿಯಿಂದ ಸಹಾಯ ಕೇಳಿದ್ದಾಳೆ. ನಂತರ ಇಬ್ಬರು ಸೇರಿ…
ಛತ್ತೀಸ್ ಗಢ : ಬಾಲಕೊಬ್ಬ ಯುವಕನ ಜೊತೆಗೆ ಅಸಹಜ ಲೈಂಗಿಕ ಕ್ರಿಯೆಗೆ ವಿರೋಧಿಸಿದಕ್ಕೆ ಆತನನ್ನ 20 ವರ್ಷದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬೆಮೆತಾರಾದಲ್ಲಿ ನಡೆದಿದೆ. ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಮೊದಲಿಗೆ ಲೈಂಗಿಕ ಕ್ರಿಯೆಗೆ ಪ್ರಯತ್ನಿಸಿ ಒಪ್ಪದೇ ಹೋದಾಗ ಆತನನ್ನ ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬೆಮೆತಾರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಹಲವು ಸೇವೆಗಳನ್ನು ಒಂದೇ ಸೂರಿನಡಿ ನಗರ ಪ್ರದೇಶಗಳಲ್ಲಿ ಒದಗಿಸಲಾಗುತ್ತಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲೂ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಜಾರಿಗೆ ತರಲಾಗಿದೆ. ಇದರಿಂದ ತಾಲ್ಲೂಕು ಕಚೇರಿಗಳಿಗೆ ಜನರು ಅಲೆದಾಡುವುದು ತಪ್ಪಲಿದೆ. ಸಮಯ ಉಳಿತಾಯವಾಗಲಿದೆ. ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ರಾಜ್ಯದ 326 ಗ್ರಾ.ಪಂ.ಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಇದಕ್ಕೂ ಮುನ್ನ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದು ಲೋಪದೋಷಗಳನ್ನು ಸರಿಪಡಿಸಲಾಗಿದೆ ಎಂದರು. ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ, ಸುಲಭವಾಗಿ ಜನರಿಗೆ ತಲುಪಿಸಿ ವಿಶ್ವಾಸ ಮೂಡಿಸಬೇಕು. ಮಹಾತ್ಮ ಗಾಂಧೀಜಿ ಯವರು ಹೇಳಿದಂತೆ ಗ್ರಾಮ ಸ್ವರಾಜ್ಯದಿಂದ, ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದಂತೆ…
ದೆಹಲಿ: 90ರ ಹರೆಯದ ಹಿರಿಯ ಗಾಯಕಿ singer ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ ಸಂಧ್ಯಾ ಮುಖರ್ಜಿ Sandhya Mukherjee ಅವರು ಮಂಗಳವಾರ ಪದ್ಮಶ್ರೀ ಪ್ರಶಸ್ತಿಯ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಗಣರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯಲ್ಲಿ ಪದ್ಮಶ್ರೀ Padma Shri ಎಂದು ಹೆಸರಿಸಲು ಒಪ್ಪಿಗೆ ಕೋರಿ ಅವರನ್ನು ಸಂಪರ್ಕಿಸಲಾಗಿತ್ತು ಆಗ ಸಂಧ್ಯಾ ಮುಖರ್ಜಿ ಪ್ರಶಸ್ತಿಯನ್ನು ತಿರಸ್ಕರಿಸುವುದನ್ನು ಅವರ ಪುತ್ರಿ ಸೆನ್ಗುಪ್ತಾ ಹೇಳಿದ್ದಾರೆ. ಸೇನ್ ಗುಪ್ತಾ ಅವರಿಗೆ ಕರೆ ಮಾಡಿದ ಹಿರಿಯ ಅಧಿಕಾರಿಗೆ ತನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಹೆಸರಿಸಲು ಇಚ್ಛಿಸುವುದಿಲ್ಲ ಮತ್ತು ಇಳಿ ವಯಸ್ಸಿನಲ್ಲಿ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ “ಅವಮಾನ” ಅನುಭವಿಸಿದೆ. ಅಲ್ಲದೇ ಇದು ಕಿರಿಯ ಕಲಾವಿದರಿಗೆ ಹೆಚ್ಚು ಅರ್ಹವಾಗಿದೆ ಮತ್ತು ತಮ್ಮಂತವರಿಗೆ ಅಲ್ಲ. ತಮ್ಮ ತಾಯಿಯ ನಿರ್ಧಾರಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸೆನ್ಗುಪ್ತಾ ಎಂದು ಹೇಳಿದ್ದಾರೆ. ಇವರಿಗಿಂತ ಮೊದಲು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಮಂಗಳವಾರ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು. ಪದ್ಮಭೂಷಣ ಎಂದು ಹೆಸರಿಸಿದ್ದು ನನಗೆ ತಿಳಿದಿಲ್ಲ, ಹಾಗಾಗಿ…
ಶಾಲೆಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡುವಾಗ ಭಾವುಟದ ಕಂಬ ದಿಢೀರ್ ಆಗಿ ವಿದ್ಯುತ್ ತಂತಿ ಮೇಲೆ ಬಿದ್ದು ಓರ್ವ ಮಗು ಸಾವನ್ನಪ್ಪಿರುವ ಘಟನೆ . ಬಿಹಾರದ ಬಕ್ಸಾರ್ನ ಇಟಾರ್ಹಿ ಬ್ಲಾಕ್ನ ನಾಥ್ಪುರ ಶಾಲೆಯಲ್ಲಿ ಈ ಘಟನೆ ನಡೆದಿದೆ. ಓರ್ವ ಮಗು ಸಾವನ್ನಪ್ಪಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ತಕ್ಷಣ ಮೂವರು ಮಕ್ಕಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಮುಂದುವರೆದಿದ್ದು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ನಂತರ ಪೊಲಿಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ಅನಾರೋಗ್ಯಕ್ಕೆ ತುತ್ತಾಗಿದ್ದ ತಾಯಿಗೆ ಸಹಾಯಕ್ಕಾಗಿ ಕೋರಿದ ಬಾಲಕಿಯ ಮೇಲೆ ನೆರೆಮನೆಯಾತ ಅತ್ಯಾಚಾರವೆಸಗಿರುವ ಹೇಯ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಜನವರಿ 22ರಂದು ಸಂಭವಿಸಿದ್ದು, ಮರುದಿನ ದೆಹಲಿಯ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಬಾಲಕಿ ದೂರು ದಾಖಲಿಸಿದ್ದಾಳೆ. ಗ್ರಾಮಕ್ಕೆ ಹೋಗಿದ್ದ ಬಾಲಕಿ ತನ್ನ ಅಸ್ವಸ್ಥ ತಾಯಿಯೊಂದಿಗೆ ಮನೆಯಲ್ಲಿ ಒಬ್ಬಳೆ ಇದ್ದಳು. ತಾಯಿಯ ಆರೋಗ್ಯ ಹದಗೆಟ್ಟ ಹಿನ್ನೆಲೆ ಬಾಲಕಿ ನೆರೆಹೊರೆಯವರ ಬಳಿ ಸಹಾಯ ಕೇಳಿದ್ದಾಳೆ. ಈ ವೇಳೆ ಔಷಧಿ ಕೊಡಿಸಿ ಸಹಾಯ ಮಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಆಕೆಗೆ ಜೀವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಬಾಲಿಕಯು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯಲ್ಲಿರುವ ಪರಿಶಿಷ್ಠ ಜಾತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಓಂ ಶೆಕ್ಯೂರಿಟಿ ಸರ್ವಿಸಸ್ ಹಾಗೂ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅಸ್ಪೃಶ್ಯತೆ ಆಚರಣೆಗೆ ಬೆಂಬಲಿಸುತ್ತಿದ್ದಾರೆ, ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿರುವ ಅಂಬೇಡ್ಕರ್ ಸ್ವಾಭಿಮಾನಿ ಸೇನೆ, ಆಸ್ಪೃಶ್ಯತೆ ಆಚರಣೆ ಕುಮ್ಮುಕ್ಕು ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ಸೇವೆಯಿಂದ ವಜಾಗೊಳಿಸಬೇಕು, ಮುರಾರ್ಜಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಮಾಜ ಕಲ್ಯಾಣ ಇಲಾಖೆ ವಿಫಲವಾಗಿದ್ದು , ರೂಪ ಬಿ. ಅವರನ್ನು ಚಿತ್ರಹಳ್ಳಿ ವಸತಿ ಶಾಲೆಗೆ ಡಿ ಗ್ರೂಪ್ ಜವಾನರ ಹುದ್ದೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ. ಮೂರು – ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿರುವ ಶ್ರಮ ಜೀವಿಗಳನ್ನು ಖಾಯಂಗೊಳಿಸಿ ಹಾಗೂ ಇವರುಗಳಿಗೆ ತಿಂಗಳ ವೇತನವು ಸಹ ನೇರವಾಗಿ ಅವರ ಕೈ…
ಮಾಯಸಂದ್ರದ ಕೃಷಿ ಇಲಾಖೆಯಲ್ಲಿ ರೈತರು ಬೆಳೆದ ರಾಗಿಯನ್ನು ಬೆಂಬಲ ಬೆಲೆಗೆ ಮಾರಲು FIDಯಲ್ಲಿ ದಾಖಲಾದ ತಪ್ಪು ಮಾಹಿತಿಯು ಇದೀಗ ತೊಂದರೆಯಾಗಿ ಪರಿಣಮಿಸಿದೆ. ಬೆಂಬಲ ಬೆಲೆಗೆ ಮಾರುವ ಪ್ರತಿಯೊಬ್ಬ ರೈತನು FID ಹೊಂದಿರಬೇಕೆಂದು ಸರ್ಕಾರ ಕಾನೂನು ಮಾಡಿತ್ತು. ಈ ಕಾನೂನೇ ರೈತರಿಗೆ ಮುಳುವಾಗಿದೆ. ಒಂದು ಎಕರೆ , ಒಂದೂವರೆ ಎಕರೆ ಇರುವ ರೈತರಿಗೆ ತಾವು ಮಾಡಿಸಿದ FIDಯಲ್ಲಿ 10 ಎಕರೆ , 12 ಎಕರೆ ಜಮೀನು ತೋರಿಸುತ್ತಿದೆ. ಇದರಿಂದ ಕೇವಲ ಒಂದು ಎಕರೆ ಹೊಂದಿರುವ ರೈತರನ್ನು ” BIG FORMER ” ಎಂದು ಕೃಷಿ ಇಲಾಖೆ ಅವರಿಂದ ರಾಗಿ ಕೊಳ್ಳಲು ನಿರಾಕರಿಸಿದೆ. ಸ್ಥಳೀಯ ನಿವಾಸಿಯಾದ ಗಿರೀಶ್ ಎಂಬುವರ ಹೆಸರಿನಲ್ಲಿ ಯಾವುದೇ ಪಹಣಿ ಇಲ್ಲದಿದ್ದರೂ ಸಹ ಸುಮಾರು ಹತ್ತು ಜನರ ಪಹಣಿಯನ್ನು ಅವರ FID ಸೇರಿಸಲಾಗಿದೆ. ಮಾಯಸಂದ್ರದ ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ” ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ( ರಿ )” ಸಂಘದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ನೇತೃತ್ವದಲ್ಲಿ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ, ಮಾಜಿ ಶಾಸಕರಾದ ಡಿ.ಸುಧಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನಡೆಸಿದರು. ಬಳಿಕ ಮಾತನಾಡಿದ ಅವರು, ಜನವರಿ 26, 1950ರಂದು ಡಾ.ಬಿ.ಆರ್. ಅಂಬೇಡ್ಕರ್ ರವರು ನಮ್ಮ ಭಾರತ ದೇಶಕ್ಕೆ ಸಂವಿಧಾನವನ್ನು ಕೊಟ್ಟರು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಡಿ.ಸುಧಾಕರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ನಗರಸಭೆ ಅಧ್ಯಕ್ಷರಾದ ಶಂಶದ್ ಉನ್ನಿಸಾ, ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಜ್ಯೋತಿಲಕ್ಷ್ಮಿ, ರವಿಚಂದ್ರನಾಯ್ಕ, ನಗರ ಸಭೆ ಸದಸ್ಯರಾದ ಜಗದೀಶ್ , ಸುರೇಖಾಮಣಿ, ಒಡ್ರು ಮಂಜುನಾಥ್, ಸನಾವುಲ್ಲಾ , ಶಿವರಂಜನಿ,ರಾಜೇಶ್ ಆಪ್ಟಿಕಲ್ ಹಾಗೂ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರ , ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಿದರು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಹೈದರಾಬಾದ್ : ತೆಲಂಗಾಣದ ಹೈದ್ರಾಬಾದ್ ನಲ್ಲಿ ಮಗನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿಯನ್ನ ಕೊಲೆಗೈದ ಘಟನೆ ನಡೆದಿದೆ.. ವ್ಯಾಯಾಮ ಮಾಡಿದ್ದು ಸಾಕು ನಿಲ್ಲಿಸು ಎಂದು ಹೇಳಿದ್ದಕ್ಕೇ… 24 ವರ್ಷದ ಯುವಕ ತಾಯಿಯನ್ನು ಹೊಡೆದು ಕೊಂದಿದ್ದಾನೆ.. ಈ ಘಟನೆ ಸುಲ್ತಾನ್ ಬಜಾರ್ನಲ್ಲಿ ನಡೆದಿದೆ. ಕೊಂಡಾ ಪಾಪಮ್ಮ ಮೃತ ತಾಯಿಯಾಗಿದ್ದಾರೆ. 24 ವರ್ಷದ ಕೊಂಡಾ ಸುಧೀರ್ ಕುಮಾರ್ ಆರೋಪಿಯಾಗಿದ್ದಾನೆ. ಸುಧೀರ್ ಕುಮಾರ್ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಸದ್ಯ ಈತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 24ರ ತಡರಾತ್ರಿ 2 ಗಂಟೆಗೆ ಈತ ವ್ಯಾಯಾಮ ಮಾಡುತ್ತಿದ್ದನಂತೆ. ಈ ವೇಳೆ ಸುಧೀರ್ ಕುಮಾರ್ ಗೆ ಆತನ ತಾಯಿ ಮಗನನ್ನು ಮಲಗುವಂತೆ ಹೇಳಿದ್ದಾರೆ. ಆದರೆ ಕೋಪಗೊಂಡ ಸುಧೀರ್ ತನ್ನ ಕೈಯಲ್ಲಿ ಹಿಡಿದಿದ್ದ ಡಂಬಲ್ಸ್ನಿಂದ ಆಕೆಗೆ ಹೊಡೆದು ಕೊಂದಿದ್ದಾನೆ. ಕೊಂಡಾ ಸುಧೀರ್ ಶಿಕ್ಷಣ ಮುಗಿಸಿದ ಬಳಿಕ ಒಂದು ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ವರ್ಷದ ಹಿಂದೆ ಆ ಕೆಲಸವನ್ನೂ ಬಿಟ್ಟು ಮನೆಯಲ್ಲೇ ಇರುತ್ತಿದ್ದ ಎನ್ನಲಾಗಿದೆ. ಮಾನಸಿಕ ಸ್ಥಿತಿ…