Author: admin

ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್‍’ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್‍’ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್‍’ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್‍ಗಳು ಸೇರಿದಂತೆ ಒಟ್ಟು 87 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೊಲೀಸರು 14, ಕಬ್ಬನ್‍ ಪಾರ್ಕ್ 4, ಎಸ್‍ ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ. ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು…

Read More

ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್‍ನ್ನು ಮಂಜೂರು ಮಾಡಿಸಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, ಈ ಭಾಗದ ಜನತೆಗೆ ಅತ್ಯಗತ್ಯ ವಾದ ಸೌಲಭ್ಯ ದೊರಕಿದೆ ಹಾಗೂ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ತಿಳಿಸಿದರು. ಕಳೆದ ನಾಲ್ಕು ವರ್ಷದಲ್ಲಿ ನೆರಟುರು ಪಂಚಾಯ್ತಿ ವ್ಯಾಪ್ತಿ ಯಲ್ಲಿ ಸುಮಾರು 6.8 ಕೋಟಿ ರೂ. ವಿವಿಧ ಅಭಿವೃದ್ದಿ ಕಾರ್ಯ ಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣ ಗೊಂಡಿವೆ. ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಹಾಗೂ ಅದನ್ನು ತೀರಿಸಲು ಕತಿಬದ್ದನಾಗಿದ್ದೇನೆ ಎಂದು…

Read More

ವಿದೇಶದಿಂದ ಅಕ್ರಮವಾಗಿ ವಿಮಾನದಲ್ಲಿ ಚಿನ್ನ ಸಾಗಣೆ ಮಾಡಿಕೊಂಡು ಬಂದ ಇಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, 90 ಲಕ್ಷ ಮೌಲ್ಯದ 1.7 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್ ದೇಶದ ಫುಕೆಟ್ ನಿಂದ ವಿಮಾನದಲ್ಲಿ ಬೆಂಗಳೂರು ನಿಲ್ದಾಣಕ್ಕೆ ಬಂದಿಳಿದ 28 ವರ್ಷದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ ಧರಿಸಿದ ಬಟ್ಟೆಯೊಳಗೆ ಚಿನ್ನದ 18 ಬಿಸ್ಕತ್‍ಗಳು ಪತ್ತೆಯಾಗಿದೆ. ಬಟ್ಟೆಯೊಳಗೆ ಮರೆಮಾಚಿ ಚಿನ್ನವನ್ನಿಟ್ಟು ನಂತರ ಹೊಲಿಗೆ ಹಾಕಿ ಅಕ್ರಮ ಚಿನ್ನ ಸಾಗಣೆಗೆ ಮುಂದಾಗಿದ್ದ. ಬಂಧಿತ ಆರೋಪಿಯಿಂದ 63 ಲಕ್ಷ ಮೌಲ್ಯದ 1.199 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬಹ್ರೈನ ದೇಶದ ಮನಮದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಈತನ ಅನುಮಾನಾಸ್ಪದ ನಡಿಗೆಯಿಂದ ಸಂಶಯಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ ವಿಲಕ್ಷಣವಾದ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯಿಂದ 27 ಲಕ್ಷ…

Read More

ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್‍ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್‍ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್‍ಗಳು ಸೇರಿದಂತೆ ಒಟ್ಟು 87 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೆÇಲೀಸರು 14, ಕಬ್ಬನ್‍ಪಾರ್ಕ್ 4, ಎಸ್‍ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ. ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು 44 ಗ್ರಾಂ…

Read More

ಚಾಮರಾಜಪೇಟೆ ಮೈದಾನದ ವಿವಾದ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮೈದಾನದಲ್ಲಿ ಗಣೇಶ ಹಬ್ಬ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು ಎಂದು ಹೇಳಿಕೆ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಮುಗಿಬಿದ್ದಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಮತ್ತು ರಾಜ್ಯ ಹಬ್ಬಗಳನ್ನು ಚಾಮರಾಜಪೇಟೆ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು. ಇದಕ್ಕೆ ನಮ್ಮ ಸಮ್ಮತಿಯೂ ಇಲ್ಲ ಎಂದು ಶಾಸಕರು ಹೇಳಿಕೆ ನೀಡಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ನಿನ್ನೆ ಮೈದಾನಕ್ಕೆ ಶಾಸಕರು ಭೇಟಿ ನೀಡಿದ್ದಾದರೂ ಏಕೆ, ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಯ ಪರಿಶೀಲನೆ ಎಂದು ಹೇಳಿ ಬೇರೆ ವಿಚಾರಕ್ಕೆ ಬಂದಿದ್ದರಾ ಎಂಬ ಹಲವು ಅನುಮಾನಗಳು ಕಾಡುತ್ತಿದ್ದು, ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲ ಎನ್ನಲು ಅವರ್ಯಾರು, ಮೈದಾನವೇನಾದರೂ ಅವರ ಸ್ವಂತ ಆಸ್ತಿಯೇ, ಅವರೇ ಗಳಿಸಿದ್ದಾ ಅಥವಾ ಅವರ ಪೂರ್ವಿಕರ ಆಸ್ತೀನಾ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಕೆಂಡ ಕಾರಿದ್ದಾರೆ. ಆ.15ರಂದೇ…

Read More

ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕನಿಗೆ ಖ್ಯಾತ ನಟರೊಬ್ಬರು ಬೆದರಿಕೆ ಹಾಕಿದ್ದು, ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್‍ಸಿಆರ್ ದಾಖಲಾಗಿದೆ. ನಿರ್ಮಾಪಕ ಭರತ್ ವಿಷ್ಣುಕಾಂತ್ ಎಂಬುವರು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಎಂಬ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಧ್ರುವನ್ ಎಂಬುವರು ನಾಯಕ ನಟನಾಗಿ ನಟಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್ ಅವರು ಈ ಚಿತ್ರದ ಚಿತ್ರೀಕರಣವನ್ನು ತಡವಾಗಿ ಮಾಡುತ್ತಿರುವುದರಿಂದ ಬೇಸರಗೊಂಡ ಧ್ರುವನ್ ಈ ಬಗ್ಗೆ ನಟ ದರ್ಶನ್ ಅವರ ಬಳಿ ಹೋಗಿ ಹೇಳಿಕೊಂಡು ಅವರಿಂದ ಭರತ್‍ಗೆ ಫೋನ್ ಮಾಡಿಸಿದ್ದಾರೆ. ದರ್ಶನ್ ಅವರು ಕರೆ ಮಾಡಿ ಬೆದರಿಕೆ ಹಾಕಿದ್ದು, ಈ ಬಗ್ಗೆ ಭರತ್ ಅವರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದರ್ಶನ್ ಅವರು ಧ್ರುವನ್ ಮೊಬೈಲ್‍ನಿಂದಲೇ ಭರತ್‍ಗೆ ಕರೆ ಮಾಡಿರುವುದು ಗೊತ್ತಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More

ಬಿಬಿಎಂಪಿಯ 243 ವಾರ್ಡ್‍ಗಳಿಗೆ ಕಲ್ಪಿಸಿರುವ ಮೀಸಲಾತಿಗೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಈಗಾಗಲೇ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇಂದು ಸಂಜೆವರೆಗೆ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಪರಿಗಣಿಸಿ ಮೂರ್ನಾಲ್ಕು ದಿನಗಳ ಒಳಗೆ ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ. 7 ದಿನಗಳ ಹಿಂದೆ ಪ್ರಕಟಿಸಿದ್ದ ಮೀಸಲಾತಿಗೆ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿರುವುದರಿಂದ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ತೀವ್ರ ವಿರೋಧ ವ್ಯಕ್ತವಾಗಿರುವ ವಾರ್ಡ್‍ಗಳ ಮೀಸಲು ಬದಲು ಮಾಡುವ ಸಾಧ್ಯತೆಗಳಿವೆ. ಸರ್ಕಾರ ಸೂಚಿಸಿರುವ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಕಾನೂನು ಹೋರಾಟ ನಡೆಸಲಾಗುವುದು ಎಂದು ಆ ಪಕ್ಷದ ಹಲವಾರು ಮುಖಂಡರು ತಿಳಿಸಿದ್ದಾರೆ. ಹೀಗಾಗಿ ಮೀಸಲಾತಿಯಲ್ಲಿ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಿ ಯಥಾವತ್ ಮೀಸಲು ಕಲ್ಪಿಸಿದರೆ ಕಾಂಗ್ರೆಸ್ ಮುಖಂಡರು ಮತ್ತೆ ನ್ಯಾಯಾಲಯದ ಕದ ತಟ್ಟುವ ಸಾಧ್ಯತೆಗಳಿವೆ. ಫ್ರೀ ಪ್ಲಾನ್: ಸುಪ್ರೀಂ ಕೋರ್ಟ್ ಎಂಟು ವಾರಗಳ ಒಳಗೆ ವಾರ್ಡ್ ಪುನರ್‍ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸ್ಪಷ್ಟ ಸೂಚನೆ…

Read More

ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಮಹಿಳೆ ಮೇಲೆ ದಾಳಿ ಮಾಡಿ ತುಳಿದು ಸಾಯಿಸಿರುವ ಘಟನೆ ಚೆನ್ನಮ್ಮನ ಹೊಸ ಹಳ್ಳಿ ಬಳಿ ನಡೆದಿದೆ. ಸಿದ್ದಪ್ಪಾಜಿ ದೇವಾಲಯ ಅರ್ಚಕ ಚೆನ್ನಪ್ಪ ಅವರ ಪತ್ನಿ ಚೆನ್ನಮ್ಮ(65) ಆನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ಮಹಿಳೆ. ಎಂದಿನಂತೆ ಇಂದು ಬೆಳಗಿನ ಜಾವ 5.30ರ ಸುಮಾರಿನಲ್ಲಿ ಚೆನ್ನಮ್ಮ ಅವರು ತೋಟಕ್ಕೆ ಹೋಗಿ ಹಸುವಿನ ಹಾಲು ಕರೆಯುತ್ತಿದ್ದಾಗ ಏಕಾಏಕಿ ಅವರ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿ ತುಳಿದಿದೆ. ಮಹಿಳೆಯ ಕೂಗಾಟ, ಚೀರಾಟ ಕೇಳಿ ಅಕ್ಕ-ಪಕ್ಕದವರು ಸ್ಥಳಕ್ಕೆ ಬಂದು ಆನೆಯನ್ನು ಓಡಿಸುವಷ್ಟರೊಳಗೆ ಚೆನ್ನಮ್ಮ ಮೃತಪಟ್ಟಿದ್ದರು. ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ವಿಷಯ ತಿಳಿದು ಸುತ್ತ-ಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಮಹಿಳೆಯ ಕುಟುಂಬಸ್ಥರ ರೋದನ ಹೇಳತೀರದಾಗಿತ್ತು. ಸುದ್ದಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದಾಗ ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭರವಸೆಯಾಗಿಯೇ ಉಳಿದ ಆಶ್ವಾಸನೆ: ಕಳೆದ ಐದು ವರ್ಷಗಳಿಂದಲೂ ಆನೆಗಳ ಉಪಟಳದಿಂದ ಇದುವರೆಗೂ ಲಕ್ಷಾಂತರ ರೂ. ಬೆಲೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ.…

Read More

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಮಾಡಲು ಸಿದ್ದತೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು 75ನೇ ವರ್ಷದ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಹೊಸ ಮಾದರಿಯ 75 ಎಲೆಕ್ಟ್ರಿಕ್ ಬಸ್ಸುಗಳನ್ನು ರಸ್ತೆಗಿಳಿಸಲು ಬಿಎಂಟಿಸಿ ಸಿದ್ಧತೆ ಮಾಡಿಕೊಂಡಿದೆ. ಸ್ವಿಚ್ ಮೊಬಿಲಿಟಿ ಲಿಮಿಟೆಡ್ ನಿಂದ 12ಮೀಟರ್ ಉದ್ದದ ನಾನ್ ಎಸಿ ಇ ಬಸ್ಸುಗಳು ಇವಾಗಿವೆ. ಎಲ್ಲಾ ಅಂದುಕೊಂಡಂತೆ ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಬಸ್ಸುಗಳಿಗೆ ವಿಧಾನಸೌಧದ ಮುಂದೆ ಹಸಿರು ನಿಶಾನೆ ತೋರಲಿದ್ದಾರೆ. ಬಿಎಂಟಿಸಿಯೂ ಕೇಂದ್ರ ಸರ್ಕಾರದ ಫೇಮ್ -2 ಯೋಜನೆಯಡಿ 300 ಇ ಬಸ್ ಗಳ ಖರೀದಿಗೆ ಟೆಂಡರ್ ಆಹ್ವಾನಿಸಿತ್ತು. ಕಿ. ಲೋ ಮೀಟರ್ ಗೆ 48.95ಯಂತೆ ಸ್ವಿಚ್ ಕಂಪನಿ ಟೆಂಡರ್ ಪಡೆದು ಗುತ್ತಿಗೆ ಆಧಾರದ ಮೇಲೆ 300 ಬಸ್ಸುಗಳನ್ನ ಬಿಎಂಟಿಸಿಗೆ ಒದಗಿಸಲಿದೆ. ಈ ಬಸ್ಸುಗಳಿಗೆ ಟೆಂಡರ್ ಪಡೆದ ಕಂಪನಿಯೇ ಚಾಲಕರನ್ನ ಒದಗಿಸಲಿದೆ, ನಿರ್ವಹಣೆ ಮತ್ತು ಚಾರ್ಜ್ ಮಾಡಲು ಬೇಕಾದ ಮೂಲ ಸೌಕರ್ಯವನ್ನು…

Read More

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವಿಶೇಷವಾಗಿ ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಮತ್ತು ಡಾ.ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ವಾರ್ಷಿಕ ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ರಾಜಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಎಲ್ಲರ ಪ್ರೀತಿಗೆ ಸದಾ ಚಿರಋಣಿ ಎಂದಿದ್ದಾರೆ. ಸಣ್ಣ ವಿಡಿಯೋ ತುಣುಕಿನೊಂದಿಗೆ ಟ್ವೀಟ್ ಮಾಡಿರುವ ಡಾ. ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಕರ್ನಾಟಕ ಸರ್ಕಾರ, ಲಾಲ್‌ಬಾಗ್‌ ಅಧಿಕಾರಿಗಳು ಹಾಗೂ ಎಲ್ಲಾ ಅಭಿಮಾನಿ ದೇವರುಗಳು ಅಪ್ಪು ಅವರ ಮೇಲೆ ಇಟ್ಟಿರುವ ಅಪರಿಮಿತ ಪ್ರೀತಿಗೆ ನಾನು ಸದಾ ಚಿರಋಣಿ ಎಂದು ಬರೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಕರೋನಾವೈರಸ್ ಕಾರಣದಿಂದಾಗಿ ಕಳೆಗುಂದಿದ್ದ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನವನ್ನು ಈ ವರ್ಷ ಆಗಸ್ಟ್ 5 ರಿಂದ 15 ರವರೆಗೆ ಆಯೋಜಿಸಲಾಗಿದೆ. ಈ ವರ್ಷ ಲಾಲ್‌ಬಾಗ್‌ನ ಫಲಪುಷ್ಪ ಪ್ರದರ್ಶನದಲ್ಲಿ ಡಾ ರಾಜ್‌ಕುಮಾರ್, ಅವರ ಪತ್ನಿ ಪಾರ್ವತಮ್ಮ…

Read More