Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ತುಮಕೂರು: ಜಿಲ್ಲೆಯ ಸಿರಾ ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಜೆ.ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜುಂಜಪ್ಪ ಸ್ವಾಮಿ, ಚಿತ್ರಲಿಂಗೇಶ್ವರ, ಗೊಡ್ಢಗಾಳಮ್ಮದೇವಿ, ಕರಿಯಮ್ಮ ದೇವಿ ಮತ್ತು ಭೂತಪ್ಪ ಸ್ವಾಮಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದರು. ಇದೇ ವೇಳೆ ಮುಂಬರುವ 2022ರ ಸಾರ್ವತ್ರಿಕ ಚುನಾವಣೆಯ ಕುರಿತು ಪಕ್ಷ ಸಂಘಟನೆ ಮಾಡುವುದರ ಬಗ್ಗೆ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎನ್.ರಾಜು, ಗೋವಿಂದರಾಜು, ಯುವ ಮುಖಂಡ ಸಂದೀಪ್ ಜಯಚಂದ್ರ,ನಗರಸಭಾ ಸದಸ್ಯ ಶಿವಶಂಕರ್, ಪೆದ್ದರಾಜು, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾರೋಗೆರೆ ಮಹೇಶ್, ಗೌಡಗೆರೆ ಗ್ರಾ.ಪಂ.ಉಪಾಧ್ಯಕ್ಷ ವಿವೇಕ್, ಗೌಡಗೆರೆ ವಸಂತ್, ಹನುಮಂತೆಗೌಡ,ಎಚ್. ಎಲ್.ರಂಗನಾಥ್,ವಾಜರಹಳ್ಳಿ ರಮೇಶ್,ಗ್ರಾ.ಪಂ.ಸದಸ್ಯ ಸಂಕಾಪುರ ಚಿದಾನಂದ್,ಪರಶುರಾಮನಾಯ್ಕ, ಸೇರಿದಂತೆ ಅನೇಕ ಗಣ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ತುಮಕೂರು: ಮಾಜಿ ಸಚಿವ ಹಾಗೂ ಶಿರಾ ಕ್ಷೇತ್ರದ ಮಾಜಿ ಶಾಸಕರಾದ ಟಿ.ಬಿ.ಜಯಚಂದ್ರ ಅವರು ತೆರಳುತ್ತಿದ್ದ ಕಾರು ಸೋಮವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಅವರಿಗೆ ತೀವ್ರ ತರಹದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಿನಿಂದ ಸಿರಾಕ್ಕೆ ತೆರಳುತ್ತಿದ್ದ ಜಯಚಂದ್ರರವರ ಟೊಯೋಟಾ ಫಾರ್ಚೂನರ್ ಕಾರು ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಹೈವೇ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಪರಿಣಾಮವಾಗಿ ಜಯಚಂದ್ರ ಅವರ ಬಲಭುಜಕ್ಕೆ ಗಂಭಿರವಾದ ಏಟು ಬಿದ್ದಿದ್ದು. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾ ತಾಲೂಕಿನ ಸಿಬಿ ಬಳಿ ಈ ಅಪಘಾತ ನಡೆದಿದ್ದು, ಕಾರಿನೊಳಗೆ ಸಿಲುಕಿದ್ದ ಜಯಚಂದ್ರ ಅವರನ್ನು ಕಾರಿನ ಗಾಜು ಒಡೆದು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಪಘಾತದ ವೇಳೆ ಕಾರಿನಲ್ಲಿ ಟಿ.ಬಿ ಜಯಚಂದ್ರ ಅವರ ಆಪ್ತ ಸಹಾಯಕ ಹಾಗೂ ಗನ್ ಮ್ಯಾನ್ ಇದ್ದರು ಮಾಜಿ ಸಚಿವರ ಬಲಭುಜಕ್ಕೆ ತೀವ್ರ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರತ್ಯಕ್ಷದರ್ಶಿ ಸೈಯದ್ ಯಾಸೀರ್, ಮಾಜಿ ಸಚಿವರ ಕಾರು ಅಪಘಾತಕ್ಕೀಡಾದ ಕೂಡಲೇ ಕಾರಿನ ಗಾಜು…
ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮೀಷನ್ ದಂಧೆ ಖಂಡಿಸಿ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್ಹಾಲ್ ವೃತ್ತದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಎಫ್ಐಆರ್ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಪಕ್ಷದ ಮುಖಂಡನಾಗಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಇದು ಆ ಪಕ್ಷ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು. ಭ್ರಷ್ಟಾಚಾರದ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪನವರ ಬಗ್ಗೆ ಮುಖ್ಯಮಂತ್ರಿಗಳು ನೀಡುತ್ತಿರುವ…
ಎಚ್.ಡಿ.ಕೋಟೆ: ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎಪ್ರಿಲ್ 21 ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ತಾಲ್ಲೂಕು ಆರೋಗ್ಯಧಿಕಾರಿ ಟಿ. ರವಿಕುಮಾರ್ ತಿಳಿಸಿದರು. ಪಟ್ಟಣದ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿದ್ದು, ಸ್ವಾತಂತ್ರೋತ್ಸವದ 75ನೇ ಅಮೃತ ಮಹೋತ್ಸವದ ಅಂಗವಾಗಿ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದರು. ಶಿಬಿರದಲ್ಲಿ 50 ನುರಿತ ವೈದ್ಯರುಗಳು, ಸುಮಾರು 450 ಸಿಬ್ಬಂದಿಗಳು ತಪಾಸಣಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಸಂಸದ ಶ್ರೀನಿವಾಸ್ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಸಂತಾನೋತ್ಪತ್ತಿ, ಮಕ್ಕಳ ಆರೋಗ್ಯ, ಹದಿಹರೆಯದವರ ಸಮಗ್ರ ಆರೋಗ್ಯ, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆ, ಸಾಂಕ್ರಾಮಿಕ ರೋಗಗಳ ಚಿಕಿತ್ಸೆ, ಸಾಂಕ್ರಾಮಿಕ ರೋಗಗಳ ಚಿಕಿತ್ಸೆ, ಸಾಮಾನ್ಯ ಸೇವೆಗಳು, ಭಾರತೀಯ ಚಿಕಿತ್ಸಾ ಪದ್ಧತಿ, ಸರ್ಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯಗಳು, ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ, ಹರಿವು…
ತುರುವೇಕೆರೆ: ಈ ದೃಶ್ಯ ನೋಡಿದರೆ ನಗಬೇಕೋ, ಅಳಬೇಕೋ ಅಂತ ತಿಳಿಯುತ್ತಿಲ್ಲ. ತಾಲೂಕು ಪಂಚಾಯತ್ ನ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ತಾಲೂಕು ಪಂಚಾಯಿತಿ ಒಳಗಿರುವ ಅಧಿಕಾರಿಗಳ ಹಗಲು ಕುರುಡುತನ ಕಂಡು ಜನರು ಬೇಸತ್ತು ಹೋಗಿದ್ದಾರೆ. ಹೌದು..! ತುರುವೇಕೆರೆ ತಾಲೂಕು ಪಂಚಾಯತ್ ನ ಸಭಾಂಗಣದ ಮುಂದೆಯೇ ಕಸದ ರಾಶಿ ಇದ್ದು, ಸರಿಯಾಗಿ ಕಸ ವಿಲೇವಾರಿ ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಇದೇ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿರುತ್ತದೆ. ಅಧಿಕಾರಿಗಳು ಸಭೆ ನಡೆಸಿ ತಮ್ಮಷ್ಟಕ್ಕೆ ತೆರಳುತ್ತಾರೆ. ಇಷ್ಟೊಂದು ದೊಡ್ಡ ಪ್ರಮಾಣದ ಕಸದ ರಾಶಿ ಅಧಿಕಾರಿಗಳ ಕಣ್ಣಿಗೆ ಬೀಳುವುದಿಲ್ಲವೇ? ಏನು ಕೆಲಸ ಮಾಡುತ್ತಿದ್ದಾರೆಂದು ಅಧಿಕಾರಿಗಳು ಸರ್ಕಾರಿ ಸಂಬಳ ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೆ ಸ್ವಚ್ಛತೆಯ ಭಾಷಣ ಬಿಗಿಯುವ ಅಧಿಕಾರಿಗಳಿಗೆ ತಾಲೂಕು ಪಂಚಾಯತ್ ಸಭಾಂಗಣದ ಎದುರು ಇರುವ ಕಸದ ರಾಶಿ ಕಾಣದಿರುವುದು 8ನೇ ಅದ್ಭುತವೇ ಸರಿ. ಇನ್ನೂ ದುರಂತದ ವಿಚಾರ ಏನು ಗೊತ್ತಾ? ಶಾಸಕ ಮಸಾಲೆ ಜಯರಾಮ್ ಅವರ ಕಚೇರಿ ಕೂಡ ಇದೇ ಸ್ಥಳದಲ್ಲಿದ್ದು, ಶಾಸಕರೂ…
ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಶ್ರೀ ಮುತ್ತಿನ ಅಂಬೆ ದೇವಿಯ ಜಾತ್ರಾ ಮಹೋತ್ಸವವು ಏಪ್ರಿಲ್ 19ರಿಂದ 21ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಗುಡಿಗೌಡ ಚಂದ್ರೇಗೌಡ ಹೇಳಿದರು. ತಾಲೂಕಿನ ಬಾಣಸಂದ್ರ ಗ್ರಾಮದಲ್ಲಿ ಪುರಾತನ ಕಾಲದಿಂದ ನಡೆಯುತ್ತಿರುವ ಶ್ರೀ ಮುತ್ತಿನ ಅಂಬೆ ಗ್ರಾಮದೇವತೆಯ ವಿಜೃಂಭಣೆ ಜಾತ್ರಾ ಮಹೋತ್ಸವದ ಕುರಿತು ಅವರು ಮಾಹಿತಿ ನೀಡಿದರು. ಮಲ್ಲಘಟ್ಟ ಕೆರೆಯಲ್ಲಿ ದೇವತೆಗೆ ಪುಣ್ಯ ಸ್ನಾನ, ಗಿರೀಶ್ ಭಟ್ ವೇದಘೋಷಗಳ ಜೊತೆಗೆ ಊರ ಹಬ್ಬಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರೆಲ್ಲರೂ ಒಗ್ಗೂಡಿ ಗ್ರಾಮದೇವತೆಯ ಹಬ್ಬವನ್ನು ಯಶಸ್ವಿಯಾಗಿ ನಡೆಸುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಊರಿನ ದೇವಸ್ಥಾನದ ವ್ಯವಸ್ಥಾಪಕರಾದ ರಂಗೇಗೌಡ ಬಿ.ಎಂ. ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಜಮಖಂಡಿ ನಗರದ ಐತಿಹಾಸಿಕ ತಾಲೂಕಾ ಕ್ರೀಡಾಂಗಣದಲ್ಲಿ ಹುಬ್ಬಳ್ಳಿ ದೇಶಪಾಂಡೆ ಫೌಂಡೇಶನ್, ಯು.ಎಸ್.ಕಮ್ಯೂನಿಕೇಷನ, ಕೃಷಿ,ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ, ಜಿಲ್ಲಾಡಳಿತ, ಜಿಲ್ಲಾ ರಕ್ಷಣಾ ಇಲಾಖೆ, ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ಜಿಲ್ಲೆಯ ಜಮಖಂಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಕೃಷಿ ಮೇಳ ನಡೆಯಿತು. ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಆನಂದ ನ್ಯಾಮಗೌಡ, ದ್ರಾಕ್ಷಿ ಕೃಷಿ ಮೇಳ ಮಾಡಲು ಸಲಹೆ ನೀಡಿದರು. ತಾಳ್ಮೆ, ವಿಶ್ವಾಸದಿಂದ ಕೃಷಿ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಸಾವಯವ ಕೃಷಿ ಅಳವಡಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ, ಬೆಳೆ ಮತ್ತು ಉತ್ತಮ ದರ ಪಡೆಯಲು ಸಾಧ್ಯವಾಗುವುದು ಎಂದರು. ಮುತ್ತಿನಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿ, ದೇಶ ರಕ್ಷಣೆ ಮಾಡುವ ಸೈನಿಕ, ದೇಶಕ್ಕೆ ಅನ್ನ ನೀಡುವ ಕೃಷಿಕ ದೇಶದ ಆಸ್ತಿ ಮತ್ತು ಶಕ್ತಿಗಳಾಗಿದ್ದಾರೆ. ರೈತರು ಆಧುನಿಕ ಕೃಷಿಯನ್ನು ಅಳವಡಿಸಿಕೊಂಡು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಬೇಕು ಎಂದರು. ಶ್ರೀ ಷಟಸ್ತಲ ಬ್ರಹ್ಮ ಶ್ರೀ ಶಿವಲಿಂಗ, ಪಂಡಿತಾರಾದ್ಯ ಶಿವಾಚಾರ್ಯರು,…
ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಪ್ರಬಲ ಗೃಹಸಚಿವರ ಅವಶ್ಯಕತೆಯಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಹುಬ್ಬಳ್ಳಿಯ ಗಲಭೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ರಾಜ್ಯದಲ್ಲಿನ ಇತ್ತೀಚಿನ ಗಲಭೆಗಳ ಬಗ್ಗೆ ಹಾಲಿ ಗೃಹ ಸಚಿವರಿಗೆ ಸಾಫ್ಟ್ ಕಾರ್ನರ್ ಇದ್ದಂತಿದೆ ಎಂದು ಆರೋಪಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟ ಸ್ಥಳಗಳಲ್ಲಿ ಹಿಂಸಾಚಾರ ನಡೆಯುತ್ತಿದೆ ಹೀಗಾಗಿ, ರಾಜ್ಯಕ್ಕೆ ಬಲಿಷ್ಠ ಗೃಹ ಸಚಿವರ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ನಟರಾಜು ಎಂಬವರ ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಕಂಡು ಬಂದಂತೆ ಮನೆಯ ಮುಂದೆ ಪ್ರತ್ಯಕ್ಷವಾದ ಚಿರತೆ ಕೆಲಕಾಲ ಹೊಂಚು ಹಾಕಿ ನಿಂತಿದ್ದು, ನಾಯಿಯನ್ನು ಹೊತ್ತುಕೊಂಡು ಸಾಗಿದೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಚಿರತೆಯನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ತಾಲ್ಲೂಕಿನ ಬಾಣಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ‘ಅಂಬೇಡ್ಕರ್ ಚಿಂತನ – ಮಂಥನ’ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ರಥವು ಜೈ ಭೀಮ್ ಘೋಷಣೆಯೊಂದಿಗೆ ದಲಿತ ಕೇರಿಯಿಂದ ಹೊರಟು ಊರಿನ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಜನತೆಯನ್ನು ಆಕರ್ಷಿಸಿತು. ಮುಸ್ಲಿಮರು ಕೂಡ ಕೂಡಾ ಜೈ ಭೀಮ್ ಮೆರವಣಿಗೆಯಲ್ಲಿ ಪಾಲ್ಗೊಂಡು ಅಂಬೇಡ್ಕರ್ ರಥಕ್ಕೆ ಗೌರವ ಸಲ್ಲಿಸಿದರು. ಚಿಂತನ – ಮಂಥನ ವೇದಿಕೆಯಲ್ಲಿ ಶಾಖ್ಯಗೌತಮ್ ರವರು ಮಾತನಾಡಿ, ಅಂಬೇಡ್ಕರ್ ಚಿಂತನೆಯ ಜೊತೆ ಜೊತೆಗೆ ಆದಿ ಕರ್ನಾಟಕ ಮತ್ತು ಆದಿದ್ರಾವಿಡ ಮತ್ತು ಮುಸಾಲ್ಮಾನ್ ಬಾಂಧವರ ಇತಿಹಾಸವನ್ನು ತೆರದಿಟ್ಟರು. ಭಾರತವನ್ನು ಆಳಿದ ಮೊದಲಿಗರು ನಾವು. ರಾಜವಂಶಸ್ಥರು ಇಂದು ಈ ಮನುವಾದಿಗಳ ಸೃಷ್ಟಿಸಿದ ಶಾಸ್ತ್ರ ಪುರಾಣಗಳಿಂದ ನಾವು ಅಸ್ಪೃಶ್ಯರಾದೆವು. ಇಂದು ನಾವುಗಳು ನಮ್ಮ ಇತಿಹಾಸವನ್ನು ಮರು ಕಟ್ಟಬೇಕಾಗಿದೆ. ಮತ್ತೆ ನಾವು ರಾಜರಾಗಬೇಕಿದೆ. ಅದಕ್ಕಾಗಿ ನಾವು ಎಲ್ಲಾರು ಅಂಬೇಡ್ಕರ್ ಕೊಟ್ಟ ಚಿಂತನೆಯನ್ನು ನಮ್ಮದಾಗಿಸಿಕೊಳ್ಳಬೇಕಿದೆ. ಶತಮಾನದಿಂದ ಅಕ್ಷರವಂಚಿತರಾದ ನಮಗೆ ಶಿಕ್ಷಣವನ್ನು ಕೊಟ್ಟಿದ್ ಬ್ರಿಟಿಷರು. ಮೂರನೇ ಮಾರಾಠ್-ಆಂಗ್ಲೋ ಯುದ್ಧದಲ್ಲಿ ಮಹರ್ ಜನಾಂಗದ 500 ಸೈನಿಕರು ವೀರವೇಶದಿಂದ…