Author: admin

ತಿಪಟೂರು: ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 73 ನೇ  ಗಣರಾಜ್ಯೋತ್ಸವ  ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿರುವ ಜಯಕರ್ನಾಟಕ ವೃತ್ತದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಯೋಗೇಶ್, ನಗರ ಪೋಲಿಸ್ ಠಾಣೆಯ ಎಎಸ್ಸೈ ನಿಸಾರ್ ಅಹಮದ್ ಮತ್ತು ನಿವೃತ್ತ ಶಿಕ್ಷಕ ಸೋಮಶೇಖರ್ ಮಾತನಾಡಿದರು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಿವೃತ್ತ ಎಎಸ್ ಐ ಹಮೀರ್, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಿ. ಬಿ.ಬಸವರಾಜ್, ಎಐಟಿಯುಸಿ ಸಂಚಾಲಕ ಗೋವಿಂದರಾಜ್, ಹಿರಿಯ ಪತ್ರಕರ್ತ ಉಜ್ಜಜ್ಜಿ ರಾಜಣ್ಣ, ತಾ.ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಸಿದ್ದೇಶ್, ನಗರ ಗೌರವ ಅಧ್ಯಕ್ಷ ಡಾ.ಭಾಸ್ಕರ್, ಕಾರ್ಯದರ್ಶಿ ಲೋಕೇಶ್, ಸಹ ಕಾರ್ಯದರ್ಶಿ ವಿಜಯಕುಮಾರ್, ಮಹಿಳಾ ಘಟಕದ ಶುಭ, ಮುಖಂಡ ಅಂಗಡಿ ಕಿಟ್ಟಪ್ಪ, ಸಂಘಟನೆಯ ಪವನ್ ಮತ್ತು ಕಲಾ ಸೇರಿದಂತೆ ಸಂಘಟನೆಯ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಯಶಸ್ವಿನಿ ವೃದ್ಧಾಶ್ರಮಕ್ಕೆ ಸಿಹಿಯನ್ನು ವಿತರಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಪಾವಗಡ:  ಇಲ್ಲಿನ ಸರ್ಕಾರಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದ  ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ,  ತಾಲೂಕಿನ, ಶಾಸಕರಾದ ವೆಂಕಟರಮಣಪ್ಪ, ವಿದ್ಯಾರ್ಥಿಗಳು ಮತ್ತು ಮಕ್ಕಳು  ಕೊವಿಡ್  ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು ಜಾಗೃತಿ ವಹಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಇನ್ನೂರಕ್ಕೂ ಅಧಿಕ ಜನ ಕೊವಿಡ್ ನಿಂದ  ಮರಣಹೊಂದಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ, ತಾಲೂಕು ದಂಡಾಧಿಕಾರಿಗಳಾದ ಅಧಿಕಾರಿಗಳಾದ ನಾಗರಾಜು, ಪುರಸಭೆ ಸದಸ್ಯರುಗಳು, ಯುವಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತದಲ್ಲಿ ಹೊಸದಾಗಿ 2,86,384 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 4,03,71,500ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ 8 ಗಂಟೆಗೆ ತಾಜಾ ಅಂಕಿ-ಅಂಶ ನೀಡಿದೆ. ನಿನ್ನೆ ಒಂದು ದಿನದಲ್ಲಿ 573 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಕೋವಿಡ್-19 ಮರಣಗಳ ಸಂಖ್ಯೆ 4,91,700ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಗ್ಗಿದೆ ಮತ್ತು ಸಮಗ್ರ ಸೋಂಕಿನ ಶೇ.5.46ರಷ್ಟಿದೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ.93.33ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 20,546ರಷ್ಟು ಕಡಿಮೆಯಾಗಿವೆ ಎಂದು ಸಚಿವಾಲಯ ಮಾಹಿತಿ ಕೊಟ್ಟಿದೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರಗೂರು: ತಾಲ್ಲೂಕಿನ ಕಚೇರಿ ಮುಂಭಾಗದಲ್ಲಿ 73ನೇ ಸಂವಿಧಾನ ದಿನಾಚರಣೆ  ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹಾಗೂ ತಹಶೀಲ್ದಾರ್ ಚಲುವರಾಜು  ಧ್ವಜಾರೋಹಣ ನೆರವೇರಿಸಿದರು. ಬಳಿಕ ಅಂಬೇಡ್ಕರ್ ಹಾಗೂ ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು. ಪ್ರಥನುಡಿಗಳನ್ನಾಡಿದ  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೈ.ಡಿ.ರಾಜಣ್ಣ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಸಂವಿಧಾನ ಮಹತ್ವದ ಬಗ್ಗೆ ವಿವರಿಸಿದರು. ಅನೀಲ್ ಚಿಕ್ಕಮಾದು ಮಾತನಾಡಿ, ಅಂಬೇಡ್ಕರ್ ರವರು ಸಂವಿಧಾನ ರಚನೆ ಮಾಡಿರಲಿಲ್ಲವಾದರೆ  ಜನ ಸಾಮಾನ್ಯರು ಪಾರ್ಲಿಮೆಂಟ್ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ.  ಇಂತಹ ಮಹತ್ವದ ದಿನವನ್ನು ನಾವು ಸಂವಿಧಾನೋತ್ಸವ ಎಂದು ಮುಂದಿನ ದಿನಗಳಲ್ಲಿ ಆಚರಿಸೋಣ ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಚಲುವರಾಜು ಮಾತನಾಡಿ, ಸಂವಿಧಾನದ ರಚನೆ ಕರಡು ಸಮಿತಿಯಲ್ಲಿ ಅಂಬೇಡ್ಕರ್ ಅವರ ಪಾತ್ರದ ಬಗ್ಗೆ ವಿವರಿಸಿದರು. ಇದೇ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರು ಕೊವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಿದರು. ಈ…

Read More

ರಾಯಚೂರು: ಗಣರಾಜ್ಯೋತ್ಸವ ದಿನ, ಸಂವಿಧಾನ ದಿನಾಚರಣೆಯಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಧೀಶರೊಬ್ಬರು ತನ್ನ ಘನತೆ ಮರೆತು ವರ್ತಿಸಿದ ಘಟನೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋವನ್ನು ತೆರವುಗೊಳಿಸಿದರೆ ಮಾತ್ರ ತಾನು ಧ್ವಜರೋಹಣ ಮಾಡುವುದಾಗಿ ಹೇಳಿರುವುದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಗಣರಾಜ್ಯೋತ್ಸವ ಆಚರಣೆಯ ವೇಳೆ ಗಾಂಧೀಜಿ ಭಾವ ಚಿತ್ರದ ಜೊತೆಗೆ ಅಂಬೇಡ್ಕರ್ ಚಿತ್ರವನ್ನು ಕೂಡ ಇರಿಸಲಾಗಿತ್ತು. ಕಾರ್ಯಕ್ರಮದ ವೇಳೆ ಅಂಬೇಡ್ಕರ್ ಫೋಟೋಗೆ ಪುಷ್ಪಾರ್ಚನೆ ಮಾಡಲು ಒಪ್ಪದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋ ತೆಗೆದು ಹಾಕಲು ಪಟ್ಟು ಹಿಡಿದಿದ್ದು, ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್ ಫೋಟೋವನ್ನು ತೆಗೆದು ಹಾಕುವ ಮೂಲಕ ಅಂಬೇಡ್ಕರ್ ಅವರಿಗೆ ಸಂವಿಧಾನ…

Read More

ಮಧುಗಿರಿ : ಎಲ್ಲರೂ ಸಮಾನತೆಯಿಂದ ಬದುಕು ಸಾಗಿಸಲು ಡಾ.ಬಿ.ಆರ್ ಅಂಬೇಡ್ಕರ್ ರವರು ಬರೆದಿರುವ ಸಂವಿಧಾನವೇ ಮೂಲ ಕಾರಣ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹೆಚ್. ಕೆಂಚಮಾರಯ್ಯ ಹೇಳಿದರು ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದ ಸಂತೆ ಮೈದಾನದಲ್ಲಿ ಮಾನವ ಹಕ್ಕುಗಳ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ದಿನಾಚರಣೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಕೆ. ಎ.ಎಸ್. ಅಧಿಕಾರಿ ಎಲ್.ಸಿ.ನಾಗರಾಜ ಮಾತನಾಡಿ, ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು  ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು ಅವರ ಸೇವೆಯನ್ನು ನಾವು  ಸದಾಕಾಲ ಸ್ಮರಿಸಬೇಕು, ನಾನು ಬಡತನದಿಂದ ಓದಿಕೊಂಡು ಗ್ರಾಮೀಣ ಭಾಗದ ಕೂಲಿ ಕೆಲಸ ಮಾಡುವ ಕುಟುಂಬದಿಂದ ಬಂದಿದ್ದು ನಾನು ಇಂದು ಕೆ.ಎ.ಎಸ್. ಅಧಿಕಾರಿ ಯಾಗಲು ಸಂವಿಧಾನವೇ ಮೂಲ ಕಾರಣವಾಗಿದ್ದು ಇಂದು ನಾನು ಅಧಿಕಾರಿ ಯಾಗಿದ್ದೇನೆ ಎಂದು  ತಿಳಿಸಿದರು. ವಕೀಲ…

Read More

ಕೊರಟಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ಹೆಸರು ಹೇಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪರಮೇಶ್ವರ್ ಬೆಂಬಲಿಗ ಬಟ್ಟೆ ಬಿಚ್ಚಿ ಪ್ರತಿಭಟಿಸಲು ಯತ್ನಿಸಿದ ಘಟನೆ ನಡೆದಿದೆ. ಗಣರಾಜ್ಯೋತ್ಸವ ಆಚರಣೆ ವೇಳೆ ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಮತ್ತು ಶಿಕ್ಷಣಾಧಿಕಾರಿ ಸುಧಾಕರ್ ವಿರುದ್ದ  ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರಾದ ಚಿಕ್ಕರಂಗಯ್ಯ ಮತ್ತು ನಾಗೇಶ್ ಸೇರಿದಂತೆ ಇತರೇ ಮುಖಂಡರುಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಏಕವಚನದಲ್ಲೇ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡ ಚಿಕ್ಕರಂಗಯ್ಯ ತರಾಟೆಗೆತ್ತಿಕೊಂಡರು. ಈ ವೇಳೆ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿ ವರ್ಗ ಮೌನಕ್ಕೆ ಶರಣಾದರು. ಇನ್ನೂ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಶಿಕ್ಷಣಾಧಿಕಾರಿ ಸುಧಾಕರ್ ಗೆ ವೇದಿಕೆಯಿಂದ ಇಳಿಯುವಂತೆ ಎಚ್ಚರಿಕೆ ನೀಡಿದರು. ಅನಾರೋಗ್ಯ ಕಾರಣ ಗಣರಾಜ್ಯೋತ್ಸವಕ್ಕೆ ಶಾಸಕ ಡಾ.ಜಿ.ಪರಮೇಶ್ವರ್ ಗೈರಾಗಿದ್ದರು. ಅವರಿಗೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ ವೇಳೆ ಕೇವಲ ಶಾಸಕರು ಎಂದು ಮಾತ್ರವೇ ಹೇಳಲಾಗಿದೆ. ಅವರನ್ನು ಮಾಜಿ…

Read More

ಸರಗೂರು: ಇಂದು ತಾಲೂಕಿನ ಪುರಸಭೆ ಕಚೇರಿಯ ಮುಂಭಾಗ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಯ ಸಹಯೋಗದಲ್ಲಿ ಕರಪತ್ರ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ಮತಾಂತರ ಕಾಯ್ದೆಯನ್ನು ವಿರೋಧಿಸಿ ಇಂದು ಕರಪತ್ರವನ್ನು ಬಿಡುಗಡೆ ಮಾಡಿ ಚಳುವಳಿಯನ್ನು ಆರಂಭಿಸಿದರು.  ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಕರಪತ್ರವನ್ನು ಬಿಡುಗಡೆಗೊಳಿಸಿದರು. ಭಾರತ ಸಂವಿಧಾನವನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಇಂದು ಕರಪತ್ರವನ್ನು ಬಿಡುಗಡೆ ಮಾಡಿ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡುದ ಮುಖಂಡರಾದ ಮಹೇಶ್, ಸಂವಿಧಾನವನ್ನು ಬದಲಾವಣೆ ಮಾಡುವ ಸಲುವಾಗಿ ಹಲವಾರು ಕಾಣದ ಕೈಗಳು ಕೆಲಸ ನಡೆಸುತ್ತಿದೆ. ಇದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ.  ಭಾರತ ಸಂವಿಧಾನವು ಕೇವಲ ಎಸ್.ಸಿ. ಮತ್ತು ಎಸ್.ಟಿ ಸಮುದಾಯಕ್ಕೆ ಸೀಮಿತವಾಗಿದೆ ಎಂದು ಕೆಲವು ವರ್ಗಗಳ ಜನರು ಬಿಂಬಿಸುತ್ತಿದ್ದಾರೆ. ಇದು ತಪ್ಪು ಕಲ್ಪನೆ ಸಂವಿಧಾನವು ಎಲ್ಲಾ ವರ್ಗದ ಅಭಿವೃದ್ಧಿಗೆ ಇರುವ ಆಸ್ತ್ರ ಎಂದರು. ಸಾಮಾಜಿಕ ಹೋರಾಟಗಾರರಾದ…

Read More

5ಜಿ ತಂತ್ರಜ್ಞಾನದ ವಿರುದ್ಧ ಸಂಬಂಧಿಸಿದ ಕೇಸ್ ನಲ್ಲಿ ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರಿಗೆ ಹೈಕೋರ್ಟ್ 20 ಲಕ್ಷ ರೂ. ದಂಡ ವಿಧಿಸಿತ್ತು. ಇದನ್ನ ಮರು ಪರಿಶೀಲಿಸಿರುವ ಈಗ ಹೈಕೋರ್ಟ್ 2 ಲಕ್ಷಕ್ಕೆ ಇಳಿಸಿದೆ. ಭಾರತದಲ್ಲಿ 5ಜಿ ಅಳವಡಿಕೆ ವಿರುದ್ಧದ ಜೂಯ್ಲಿ ಚಾವ್ಲಾ ಕೋರ್ಟ್ ಮೆಟ್ಟಿಲೇರಿದ್ದರು, ಈ ಮೊಕದ್ದಮೆಗಾಗಿ ನಟಿ ಜೂಹಿ ಚಾವ್ಲಾ ಅವರಿಗೆ ಹೈಕೋರ್ಟ್ ವಿಧಿಸಿದ್ದ ದಂಡವನ್ನು 20 ಲಕ್ಷದಿಂದ 2 ಲಕ್ಷಕ್ಕೆ ಇಳಿಸಲು ದೆಹಲಿ ಹೈಕೋರ್ಟ್ ಮುಂದಾಗಿದೆ. ಈ ಬಾರಿ ಕೋರ್ಟ್ ಷರತ್ತೊಂದನ್ನ ವಿಧಿಸಿದೆ ಸಾರ್ವಜನಿಕರಿಗಾಗಿ ಒಂದಿಷ್ಟು ಸೇವೆ ಮಾಡಬೇಕು ಎಂದು ತಾಕೀತು ಮಾಡಿದೆ. ನ್ಯಾಯಾಂಗದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಜೂಹಿ ಚಾವ್ಲಾ ಸೇರಿದಂತೆ ಇತರ ಇಬ್ಬರ ಮೇಲೆ ದಂಡ ವಿಧಿಸಿದೆ. Delhi High Court to reduce Juhi Chawla’s fine in 5G suit to Rs 2 lakh ಭಾರತದಲ್ಲಿ 5ಜಿ ತಂತ್ರಜ್ಞಾನದ ರೋಲ್ ಔಟ್ ವಿರುದ್ಧ ಜೂಹಿ ಚಾವ್ಲಾ ಅವರ ಸಿವಿಲ್ ಮೊಕದ್ದಮೆಯನ್ನು…

Read More

ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ೭೩ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಸ್ವಾತಂತ್ರö್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಸಂವಿಧಾನ ರಚನಾ ಸಮಿತಿಯು ೨ ವರ್ಷಗಳ ಕಾಲ ನಿರಂತರ ಶ್ರಮವಹಿಸಿ ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ನಂತರ ಸಂವಿಧಾನದ ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ವಿಧಿಗಳು, ಅನುಸೂಚಿಗಳು ಹಾಗೂ ಅಧ್ಯಾಯಗಳನ್ನೊಳಗೊಂಡ ಭಾರತ ಸಂವಿಧಾನವು ೧೯೫೦ರ ಜನವರಿ ೨೬ರಂದು ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ…

Read More