Author: admin

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಒಂದು ವರ್ಷದ ಪ್ರಗತಿಯ ಮಾಹಿತಿಯನ್ನು ಹಂಚಿಕೊಂಡಿರುವ ಅವರು, ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದರು. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಆಗಸ್ಟ್ ೭ ಕ್ಕೆ ಒಂದು ವರ್ಷ ಪೂರೈಸಿದ್ದೇನೆ. ಈ ಒಂದು ವರ್ಷದಲ್ಲಿ ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಅವರು ಹೇಳಿ, ಸಾಧನೆಯ ಪಟ್ಟಿಯನ್ನು ಜನರ ಮುಂದಿಟ್ಟಿದ್ದಾರೆ. ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ ೩೧ರ ಪೂರ್ವದಲ್ಲಿ ಖಾಲಿಯಾಗಿರುವ ಬೋಧಕರ ಹುದ್ದೆಗಳ ಭರ್ತಿಗೂ ಅನುಮತಿ ನೀಡಲಾಗಿದೆ. 2ಸಾವಿರಕ್ಕೂ ಹೆಚ್ಚು…

Read More

ನವದೆಹಲಿ: ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮೊಣಕಾಲಿನ ಸಮಸ್ಯೆಗೆ ಒಳಗಾಗಿರುವ ಶೋಯೇಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿರುವ ವಿಡಿಯೋ ಹಂಚಿಕೊಂಡಿದ್ದಾರೆ. ರೋಗಿಗಳ ಡ್ರೇಸ್‍ ಹಾಕಿಕೊಂಡು ಆಸ್ಪತ್ರೆಯ ಬೇಡ್‍ ಮೇಲೆ ಮಲಗಿರುವ ವಿಡಿಯೋವನ್ನು ಅಖ್ತರ್ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಸದ್ಯ ಮೊಣಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬೋರ್ನ್​ನ ಆಸ್ಪತ್ರೆಗೆ ದಾಖಲಾಗಿರುವ 46 ವರ್ಷದ ಅಖ್ತರ್ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಎರಡೂ ಮೊಣಕಾಲಿಗೆ 5-6 ಗಂಟೆಗಳ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನೀವೆಲ್ಲರೂ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಚೇತರಿಸಿಕೊಳ್ಳುವಂತೆ ನನಗಾಗಿ ನೀವು ಪ್ರಾರ್ಥಿಸಬೇಕೆಂದು ಅಖ್ತರ್ ಮನವಿ ಮಾಡಿಕೊಂಡಿದ್ದಾರೆ. ಕ್ರಿಕೆಟ್‍ನಿಂದ ನಿವೃತ್ತಿಯಾಗಿ 11 ವರ್ಷ ಕಳೆದರೂ ನಾನು ಈಗಲೂ ಸಂಕಷ್ಟದಲ್ಲಿದ್ದೇನೆ. ನಾನು ಇನ್ನೂ ನಾಲ್ಕೈದು ವರ್ಷ ಆಡಬಹುದಿತ್ತು. ಆದರೆ ಹಾಗೆ ಮಾಡಿದರೆ ನಾನು ವೀಲ್…

Read More

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಧ್ವಜ ವಿತರಣೆ ಕಾರ್ಯ ನಡೆಯುತ್ತಿದೆ. ಆಗಸ್ಟ್ 13ರಂದೇ ಧ್ವಜ ಹಾರಿಸುವ ಮೂಲಕ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಚಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ 3 ದಿನಗಳಂದು ಪ್ರತಿದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಮನೆಗಳಲ್ಲಿ ಆಗಸ್ಟ್ 13ರಂದು ಧ್ವಜಾರೋಹಣ ಮಾಡಿದರೆ, 15ರವರೆಗೆ ಇರಿಸಬಹುದಾಗಿದೆ ಎಂದು ತಿಳಿಸಿದರು. ಮುಖ್ಯ…

Read More

ಬೆಂಗಳೂರು: ರಿಯಾಲಿಟಿ ಶೋ ಮೂಲಕ ರಾಜ್ಯದಲ್ಲಿ ಖ್ಯಾತಿ ಪಡೆದು ಬಳಿಕ ಬಾರ್ ಗಲಾಟೆ, ಕಿಡ್ನ್ಯಾಪ್ ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿದ್ದ ಸುನಾಮಿ ಕಿಟ್ಟಿ ಆತನ ಮೇಲೆ ಬಂದಿರುವ ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾನೆ. ಪಬ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯಿಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಸುನಾಮಿ ಕಿಟ್ಟಿ ಮತ್ತು ಸ್ನೇಹಿತ ಚೇತನ್ ಗೌಡ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ‌ ಪ್ರತಿಯಾಗಿ ಪ್ರಶಾಂತ್ ಎಂಬುವರಿಂದ ಪ್ರತಿ ದೂರು ದಾಖಲಾಗಿತ್ತು. ಮಾಧ್ಯಮಗಳಲ್ಲಿ ಈ ಸುದ್ದಿ ವರದಿಯಾಗುತ್ತಿದ್ದಂತೆ ಸುನಾಮಿ‌ ಕಿಟ್ಟಿ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾನೆ. ಜುಲೈ 24ರ ರಾತ್ರಿ ಚರ್ಚ್ ಸ್ಟ್ರೀಟ್​ನ ಪಬ್​​ ವೊಂದರಲ್ಲಿ ಪಾರ್ಟಿಗೆ ಸ್ನೇಹಿತ ಚೇತನ್ ಗೌಡ ಜೊತೆ ಹೋದಾಗ ಶ್ಯಾಂಪೆನ್ ಓಪನ್ ಮಾಡುವ ವಿಚಾರದಲ್ಲಿ‌‌ ಮಾತುಕತೆಯಾಗಿತ್ತು. ಅಲ್ಲಿ ಬೇರೆ ಏನು ಆಗಿಲ್ಲ. ಯಾವುದೇ ಗಲಾಟೆಯಲ್ಲಿ ನಾನು ಭಾಗಿಯಾಗಿಲ್ಲ. ಸ್ಟೇಷನ್ ಬೆಲ್‌ ಪಡೆದುಕೊಂಡು ಬಂದಿದ್ದೇನೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನೂ…

Read More

30 ವರ್ಷದ ಭಾರತೀಯ ಮೂಲದ ಮಹಿಳೆ ಮಂದೀಪ್ ಕೌರ್ ಮದುವೆಯ ನಂತರ ಉತ್ತಮ ಜೀವನವನ್ನು ಹುಡುಕಿಕೊಂಡು ನ್ಯೂಯಾರ್ಕ್‌ಗೆ ಹೋಗಿದ್ದರು. ಆದರೆ ತನ್ನ ಜೀವನ ಅಲ್ಲಿ ಮುಕ್ತಾಯವಾಗುತ್ತದೆ ಎಂದು ಅವರು ಭಾವಿಸಿರಲಿಲ್ಲ. ಕಳೆದ ದಿನ ವಿಡಿಯೋ ಮಾಡಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದರು. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿತ್ತು. ಆದರೆ ಇದೀಗ ಮಹತ್ವದ ಮಾಹಿತಿ ಲಭಿಸಿದ್ದು, ಗಂಡು ಮಗುವಿಗೆ ಜನ್ಮ ನೀಡುವಂತೆ ಮಾನಸಿಕ ಹಿಂಸೆಯನ್ನೂ ಸಹ ಪತಿ ಆಕೆಗೆ ನೀಡುತ್ತಿದ್ದ ಎನ್ನಲಾಗಿದೆ. ಕೌರ್ ನೇಣು ಬಿಗಿದುಕೊಂಡು ತನ್ನ ಜೀವನವನ್ನು ಕೊನೆಗೊಳಿಸಿದ್ದಾಳೆ. ಆದರೆ ಪತಿ ರಂಜೋತ್ವೀರ್ ಸಿಂಗ್ ಸಂಧು ಅವರ ಕೈಯಲ್ಲಿ ಅವಳು ಎದುರಿಸಿದ ಚಿತ್ರಹಿಂಸೆಯ ನೋವಿನ ವಿವರಗಳನ್ನು ವಿವರಿಸುವ ಹೃದಯ ವಿದ್ರಾವಕ ವೀಡಿಯೊವನ್ನು ಬಿಡುಗಡೆ ಮಾಡಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ಈ ಪ್ರಕರಣ ಸಂಬಂಧ ಭಾರತ ಮತ್ತು ಅಮೆರಿಕಾದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಧ್ಯಮ ಸಂಸ್ಥೆ ಎಎನ್‍ಐ ಜೊತೆ ಮಾತನಾಡಿದ ಸಂತ್ರಸ್ತೆಯ ಸಹೋದರಿ ಕುಲದೀಪ್ ಕೌರ್,…

Read More

ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗ್ವೆ, ಕಿಡ್ನಿ ನಮಗೆ ನಮ್ಮ ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.ಆದ್ದರಿಂದ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ತುಂಬಾ ಮಹತ್ವದ್ದಾಗಿದೆ. ಮತ್ತೊಂದೆಡೆ, ಆರೋಗ್ಯಕರ ಆಹಾರ ಮತ್ತು ಸಾಕಷ್ಟು ನೀರು ಕುಡಿಯುವ ಮೂಲಕ ಮೂತ್ರಪಿಂಡವನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಕಿಡ್ನಿ ಹಾಳಾಗುವ ಅಪಾಯ ಕಡಿಮೆಯಾಗುತ್ತದೆ. ಇನ್ನೊಂದೆಡೆ ಕಿಡ್ನಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಕಿಡ್ನಿಯನ್ನು ಡಿಟಾಕ್ಸ್ ಮಾಡುವುದು ಕೂಡ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರದಲ್ಲಿ ನೀವು ಕೆಲವು ಪಾನೀಯಗಳನ್ನು ಶಾಮೀಲುಗೊಳಿಸಬೇಕು . ನಿಮ್ಮ ಕಿಡ್ನಿಯನ್ನು ನೀವು ಹೇಗೆ ಡಿಟಾಕ್ಸ್ ಮಾಡಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಕಿಡ್ನಿ ಡಿಟಾಕ್ಸ್ ಪಾನೀಯಗಳು ಸೇಬು-ವಿನೆಗರ್ ನಿಂದ ತಯಾರಿಸಿದ ಪಾನೀಯ: ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಸಿಡ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಮತ್ತು ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದನ್ನು ಬಳಸಿ ಡಿಟಾಕ್ಸ್ ಪಾನೀಯವನ್ನು ತಯಾರಿಸಬಹುದು, ಇದಕ್ಕಾಗಿ ನೀವು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್…

Read More

ಸಾಗರ: ಹರ್ ಘರ್ ತಿರಂಗ ಅಭಿಯಾನಕ್ಕಾಗಿ ಸಾವಿರಕ್ಕೂ ಅಧಿಕ ರಾಷ್ಟ್ರ ಧ್ವಜ ಸಿದ್ಧವಾಗುತ್ತಿದೆ. ಇದೇ ಸಂದರ್ಬದಲ್ಲಿ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಕಚೇರಿಗೆ ರವಾನೆಯಾದ ಧ್ವಜವೊಂದರಲ್ಲಿನ ಅಶೋಕ ಚಕ್ರದ ಸಂಕೇತ ಧ್ವಜದ ಬದಿಗೆ ಸರಿದಿದ್ದು, ಅವಮಾನಕರವಾಗಿ ಕಂದು ಬಂದಿದೆ. ಮನೆ ಮನೆಗೆ ರಾಷ್ಟ್ರಧ್ವಜ ಹಂಚುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಚಾಲನೆ ನೀಡಿದ ಜನಪ್ರತಿನಿಧಿಗಳು ರಾಷ್ಟ್ರ ಧ್ವಜಗಳನ್ನು ಪ್ರದರ್ಶಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೇಳೆ ಈ ದೋಷವನ್ನು ಗುರುತಿಸಲಾಗಿದೆ. ಧ್ವಜದ ಬಿಳಿ ಬಣ್ಣದ ಸ್ಥಳದ ಮಧ್ಯದಲ್ಲಿರಬೇಕಾದ ಅಶೋಕ ಚಕ್ರ ಪಕ್ಕದಲ್ಲಿದೆ ಎಂಬ ಆಕ್ಷೇಪದ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಅರಳಗೋಡು ಗ್ರಾಪಂ ಅಧ್ಯಕ್ಷ ಮೇಘರಾಜ್ ಅರೋಡಿ ಮಾತನಾಡಿ, ಧ್ವಜ ಸಂಬಂಧ ನಿರ್ದಿಷ್ಟ ನಿಯಮಗಳಿರುವ ಹಿನ್ನೆಲೆಯಲ್ಲಿ ದೋಷಪೂರಿತ ಧ್ವಜಗಳ ಬಳಕೆಯಾಗದಂತೆ ಕಟ್ಟೆಚ್ಚರ ಅಗತ್ಯ. ದೋಷಗಳಿರುವ ರಾಷ್ಟ್ರಧ್ವಜ ಬಳಕೆಯಾಗದಂತೆ ನಿಗಾ ವಹಿಸಲಾಗಿದೆ. ಸಿದ್ಧಪಡಿಸಲಾದ ಬಾವುಟಗಳಲ್ಲಿ ದೋಷಗಳಿರದಂತೆ ಪರಿಶೀಲನೆ ನಡೆಸಲಾಗುತ್ತಿದೆ. ಸೋಮವಾರ ಸಹ ಗ್ರಾಪಂ ಕಚೇರಿಯಲ್ಲಿ ಧ್ವಜಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.…

Read More

ವಾಷಿಂಗ್ಟನ್: ಫ್ಲೋರಿಡಾದಲ್ಲಿರುವ ತನ್ನ ಮಾರ್-ಎ-ಲಾಗೊ ನಿವಾಸದ ಮೇಲೆ ಎಫ್‌ಬಿಐ ಏಜೆಂಟ್‌ಗಳು ಸೋಮವಾರ ದಾಳಿ ನಡೆಸಿದ್ದಾರೆಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಘೋಷಿತ ದಾಳಿ ನಡೆಸುವ ಮೂಲಕ ಎಫ್‌ಬಿಐ ಏಜೆಂಟ್‌ಗಳು ದುರ್ನಡತೆ ತೋರಿದ್ದಾರೆಂದು ಟ್ರಂಪ್ ಆರೋಪಿಸಿದ್ದಾರೆ. ಇದು ನಮ್ಮ ರಾಷ್ಟ್ರಕ್ಕೆ ಕರಾಳ ಸಮಯವಾಗಿದೆ, ಏಕೆಂದರೆ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿರುವ ನನ್ನ ಸುಂದರ ಮಾರ್-ಎ-ಲಾಗೊ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಎಫ್‌ಬಿಐ ಏಜೆಂಟ್‌ಗಳ ದೊಡ್ಡ ಗುಂಪು ಮನೆಯನ್ನು ಆಕ್ರಮಿಸಿಕೊಂಡು ಶೋಧಕಾರ್ಯಾಚರಣೆ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷ ಹುದ್ದೆಯಲ್ಲಿದ್ದವರಿಗೆ ಈ ಹಿಂದೆ ಎಂದೂ ಇಂತಹ ಪರಿಸ್ಥಿತಿ ಬಂದಿರಲಿಲ್ಲ’ವೆಂದು ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಫ್‌ಬಿಐ ದಾಳಿ ವೇಳೆ ನನ್ನ ಸುರಕ್ಷಿತ ನೆಲೆಯ ಬಾಗಿಲನ್ನು ಒಡೆದು ತೆರೆಯಲಾಗಿದೆ. ತೃತೀಯ ಜಗತ್ತಿನ ದೇಶಗಳಲ್ಲಿ ಮಾತ್ರ ಇಂತಹ ದಾಳಿ ನಡೆಯುತ್ತದೆ. ಸರ್ಕಾರಿ ತನಿಖಾ ಏಜೆನ್ಸಿಗಳೊಂದಿಗೆ ಸಹಕರಿಸಿದ ನಂತರವೂ, ನನ್ನ ಮನೆ ಮೇಲೆ ಈ ಅಘೋಷಿತ ದಾಳಿ ಅಗತ್ಯವಿರಲಿಲ್ಲ’ ಅಂತಾ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.…

Read More

ಶಿವಮೊಗ್ಗ: ತಮ್ಮ ಗ್ರಾಮಕ್ಕೆ ರಸ್ತೆ ಹಾಗೂ ವಿದ್ಯುತ್ ಸೌಲಭ್ಯ ನೀಡುವಂತೆ ಪುಟ್ಟ ಬಾಲಕಿಯೊಬ್ಬಳು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾಳೆ. ಶಿವಮೊಗ್ಗದ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ ಬಾಲಕಿ ಸಾನ್ವಿ ಡಿಸಿಗೆ ಮನವಿ ಮಾಡಿ ಗಮನ ಸೆಳೆದಿದ್ದಾಳೆ. ಅಂಗನವಾಡಿಗೆ ಹೋಗಿ ಬರಲು ರಸ್ತೆ ಸಂಪರ್ಕ ಕಲ್ಪಿಸುವಂತೆ 5 ವರ್ಷದ ಬಾಲಕಿ ಸಾನ್ವಿ ಮನವಿ ಮಾಡಿಕೊಂಡಿದ್ದಾಳೆ. ಶಿವಮೊಗ್ಗದ ಕುಗ್ರಾಮ ವಾಗಿರುವ ಕಾರ್ಗಲ್ ನ ಉರುಳುಗಲ್ಲುವಿನಲ್ಲಿ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ತಮ್ಮ ಗ್ರಾಮಕ್ಕೆ ರಸ್ತೆ ಹಾಗೂ ವಿದ್ಯುತ್ ಸೌಲಭ್ಯ ಕಲ್ಪಿಸುಂತೆ ಈ ಹಿಂದೆ ಸಹ ಗ್ರಾಮಸ್ಥರು ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಕೆಲವು ದಿನಗಳ ಹಿಂದಷ್ಟೇ ರಸ್ತೆ ನಿರ್ಮಿಸಲು ಗ್ರಾಮಸ್ಥರೇ ಮುಂದಾಗಿದ್ದರು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರ ಮೇಲೆ ಅರಣ್ಯ ಇಲಾಖೆಯ ಕೇಸ್ ಕೂಡ ಹಾಕಿತ್ತು. ಈ ಹಿನ್ನೆಲೆ ಕೆಲ ದಿನಗಳ ಹಿಂದೆ ಸ್ಥಳೀಯರು ಅರಣ್ಯ ಸಿಬ್ಬಂದಿ ವರ್ತನೆ ವಿರೋಧಿಸಿ ಪಾದಯಾತ್ರೆ ಕೂಡ ಮಾಡಿದ್ದರು. ಈಗ…

Read More

ತುಮಕೂರು: ಸ್ಮಾರ್ಟ್‌ಸಿಟಿ ತುಮಕೂರಲ್ಲಿ ರಸ್ತೆಗುಂಡಿಗಳೇ ಇಲ್ಲ! ಗುಂಡಿ ಮುಕ್ತ ಮಹಾನಗರ! ಹೀಗಂತ ಸ್ವತಃ ಮಹಾನಗರ ಪಾಲಿಕೆ ಘೋಷಿಸಿದೆ. ಇದು ಬರೀ ಘೋಷಣೆಯಲ್ಲ ಹೈಕೋರ್ಟ್‌ಗೆ ಸಲ್ಲಿಸಿರುವ ವರದಿ! ಆದರೆ, ಮಹಾನಗರ ಪಾಲಿಕೆ ಒಮ್ಮೆ ಬಿಡುವು ಮಾಡಿಕೊಂಡು ನಗರ ಪರ್ಯಟನೆ ಮಾಡಿದರೆ ಗುಂಡಿಗಳ ದಿಗ್ದರ್ಶನವಾಗುತ್ತದೆ. ಆದರೂ ಯಾವ ಮಾನದಂಡದಡಿ ಬಣ್ಣ-ಬಣ್ಣ ಛಾಯಾಚಿತ್ರಗಳ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತು ಎಂಬುದು ಪ್ರಶ್ನೆ. ಮಹಾನಗರ ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಯಾವುದೇ ಗುಂಡಿಗಳು ಕಂಡುಬಂದರೆ ಸಾರ್ವಜನಿಕರು ಗಮನಕ್ಕೆ ತಂದರೆ ಕೂಡಲೇ ಬಗೆಹರಿಸುವುದಾಗಿ ಪಾಲಿಕೆ ಹೇಳಿದೆ. ನಗರದ ಕುಣಿಗಲ್‌ ರಸ್ತೆ ಸೇರಿದಂತೆ ನಾನಾ ಮುಖ್ಯ ರಸ್ತೆಗಳು, ರಸ್ತೆಗಳು ಗುಂಡಿಮಯವಾಗಿವೆ. ಇದು ಪಾಲಿಕೆ ಕಣ್ಣಿಗೆ ಕಾಣದಿರುವುದು ಆಶ್ಚರ್ಯ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸುವ ಸಂಬಂಧ ಕದರನಹಳ್ಳಿ ತಾಂಡ್ಯದ ವಕೀಲ, ಜನಪರ ಹೋರಾಟಗಾರ ರಮೇಶ್‌ನಾಯಕ್‌. ಎಲ್‌. 2021 ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ…

Read More