Subscribe to Updates
Get the latest creative news from FooBar about art, design and business.
- ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು
- ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ
- ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ
- ವಸತಿ ಯೋಜನೆಯಡಿ ಅರ್ಜಿ ಆಹ್ವಾನ
- ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ
- ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ
- ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ
- ಬೀದರ್ | ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಮನವಿ
Author: admin
ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಕಂದಾಯ ಇಲಾಖೆಯ ನಾಡಕಛೇರಿಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ ಆಚರಿಸಿದರು. ಕಂದಾಯ ಇಲಾಖೆಯ ಉಪತಹಶೀಲ್ದರ್ ಮುತ್ತು ರಾಜ್ ಧ್ಜಜರೋಹಣ ನೆರವೇರಿಸಿ ಬಳಿಕ ಮಾತನಾಡಿದ ಅವರು, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು. ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದರು. ಗಣರಾಜ್ಯೋತ್ಸವ ದಿನವನ್ನು ಭಾರತದ ಪ್ರತಿ ಸರ್ಕಾರಿ ಕಚೇರಿಗಳು, ಇಲಾಖೆಗಳು ಮತ್ತು ಸಂಸ್ಥೆಗಳು, ಹಾಗೂ ಎಲ್ಲಾ ಶಾಲಾ, ಕಾಲೇಜುಗಳು ಸೇರಿದಂತೆ ವಿಶ್ವವಿದ್ಯಾಲಯಗಳಲ್ಲಿ ಅತ್ಯಂತ ವಿಶೇಷವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು, ಅವರ…
ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜರಗಿತು. ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸಿ.ಸಿ.ಬಾರಕೇರ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಸಂವಿಧಾನಕ್ಕೆ ಅಪಾರವಾದ ಗೌರವವಿದೆ. ನಮ್ಮ ಸಂವಿಧಾನದಲ್ಲಿನ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಲ್ಲ ಭಾರತೀಯರಿಗೂ ನೀಡಿದ ಶುಭದಿನವಿದು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ದೇಶದ ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಮೂಲಕ ದೇಶ ಭಕ್ತಿಯನ್ನು ನಿತ್ಯ ಜೀವನದಲ್ಲಿ ಪಾಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು. ನಮ್ಮ ಕಾಲೇಜಿನಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಫಲಿತಾಂಶ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಚಿತ್ರ ಕಲಾ ಪದವಿ ರ್ಯಾಂಕ್ ಪಡೆಯುತ್ತಿದ್ದಾರೆ. ಆದರೆ, ಈ ಕಾಲೇಜಿಗೆ ಅನೇಕ ಮೂಲಭೂತ ಶೈಕ್ಷಣಿಕ…
ಇಂದಿನ ಕಾಲದಲ್ಲಿ ಎಲ್ಲರ ಬಳಿಯೂ ಮೊಬೈಲ್ ಇರುತ್ತದೆ.ಅದರಲ್ಲೂ ಇಂಟರ್ನೆಟ್ ಇರುವ ಮೊಬೈಲ್ ಇದ್ದರೆ ಮುಗಿದೇ ಹೋಯ್ತು. ಹಿಂದೂ ಮುಂದು ನೋಡದೇ ತಮಗೆ ಬಂದ ಸುದ್ಧಿಯನ್ನು ಇನ್ನೊಬ್ಬರಿಗೆ ಕಳಿಸುವುದೇ ಕೆಲಸವಾಗಿಬಿಟ್ಟಿದೆ. ಇದೇ ತರಹ ಇಲ್ಲೊಂದು ಸುಳ್ಳು ಸುದ್ಧಿ ಕಳೆದ ಎರಡು ದಿನಗಳಿಂದ ಸಖತ್ ವೈರಲ್ ಆಗಿದೆ” . ಗುಜರಾತ್’ನಲ್ಲಿ 12 ವರ್ಷದ ನಂತರ ಗಂಡು ಮಗುವಿಗೆ ಜನ್ಮ ಕೊಟ್ಟ ತಾಯಿಗೆ , ವೈದ್ಯರು ತಾಯಿ ಮತ್ತು ಮಗು ಇಬ್ಬರಲ್ಲಿ ಒಬ್ಬರನ್ನು ಮಾತ್ರ ಉಳಿಸಬಹುದು ಎಂದಾಗ , ತಾಯಿ ಮಗುವನ್ನು ಉಳಿಸಿ ಈ ಮಗು ಜಗತ್ತನ್ನು ನೋಡಲಿ ಎಂದು ಹೇಳಿ 2 ನಿಮಿಷ ಮಗುವನ್ನು ಮುದ್ದಾಡಿ ಪ್ರಾಣ ಬಿಟ್ಟಳು ” ಎಂಬ ಕಟ್ಟುಕಥೆಯ ಮತ್ತು ಸುಳ್ಳು ಸುದ್ಧಿಯ ಸತ್ಯಾಸತ್ಯತೆಯನ್ನು ಬೆನ್ನತ್ತಿದ್ದ ವೇಳೆ ಇಂದೊಂದು ಸುಳ್ಳು ಸುದ್ಧಿ ಎಂಬುದು ಖಚಿತವಾಗಿದೆ. ಹೌದು, ಈ ಫೋಟೋ ಬ್ರೆಜಿಲ್ ದೇಶದ್ದು, ಡಿಸೆಂಬರ್ 14, 2015ರಲ್ಲಿ Facebookನಲ್ಲಿ ಅಪ್ಲೋಡ್ ಆದ ಚಿತ್ರವಿದು. ಇದರ ಲಿಂಕ್ ಅನ್ನು ಕೆಳಗಡೆ ಹಾಕಲಾಗಿದೆ. ತಾಯಿಗಿಂತ…
ಬೆಂಗಳೂರು: ಬದಲಾವಣೆ ಜಗದ ನಿಯಮ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸ ವರ್ಷ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು. ಕಾಂಗ್ರೆಸ್ ನಾಯಕರ ಪಾದಯಾತ್ರೆಗೆ ಅವಕಾಶ ನೀಡಬಾರದಿತ್ತು. ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಸಿದ್ದರೆ ಎಲ್ಲಾ ಹಾರಿ ಹೋಗುತ್ತಿದ್ದರು ಎಂದು ಹೇಳಿದರು. ವೀಕೆಂಡ್ ಕರ್ಫ್ಯೂ ತೆರವು ಮಾಡಿದ್ದಕ್ಕಾಗಿ ಜನರ ಪರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕೊರೋನಾ ಕೇವಲ ಶುಕ್ರವಾರ ಸಂಜೆ ಬಂದು ಸೋಮವಾರ ಹೋಗುತ್ತದೆ ಎನ್ನುವ ಗೊಂದಲ ಜನರಲ್ಲಿ ಇತ್ತು. ನೈಟ್ ಕರ್ಫ್ಯೂ ಯಾಕೆ ಅಂದರೆ ಸ್ವಲ್ಪವಾದರು ಏನಾದರು ಇರಬೇಕು. ಏನೋ ಮಾಡಿದ್ದೇವೆ ಎನ್ನುವ ಕಾರಣಕ್ಕೆ ನೈಟ್ ಕರ್ಫ್ಯೂ ಮುಂದುವರಿಕೆ ಮಾಡಿದ್ದಾರೆ ಎಂದು ಸರಕಾರಕ್ಕೆ ವ್ಯಂಗ್ಯವಾಡಿದರು. ಇನ್ನೂ ಸೂರ್ಯ, ಚಂದ್ರ ಇರುವ ತನಕ ನಿರಾಣಿ ಮುಖ್ಯಂತ್ರಿಯಾಗಲ್ಲಾ. ಬ್ಲೆಜರ್ ಹೊಲಿಸಿ ಇಟ್ಟುಕೊಂಡರೆ ಮಾರಾಟಕ್ಕೆ ಇದೆ ಎಂದು ಎಂಜಿ ರಸ್ತೆಯಲ್ಲಿ ಮಾರಾಟಕ್ಕೆ ಹಾಕಬಹುದು.…
ನವದೆಹಲಿ : ಇದೇ ತಿಂಗಳ 31 ರಿಂದ ಸಂಸತ್ ನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಸಂಸತ್ ನ ಬಜೆಟ್ ಅಧಿವೇಶದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರು ದಿನ ಕೇಂದ್ರ ಬಜೆಟ್ ಮಂಡನೆ ಆಗಲಿದೆ. ಇನ್ನು ಈ ಬಾರಿಯ ಸಂಸತ್ ಅಧಿವೇಶನ 2 ಭಾಗಗಳಲ್ಲಿ ನಡೆಯಲಿದೆ. ಮೊದಲ ಭಾಗ ಫೆಬ್ರವರಿ 11 ರಂದು ಮುಕ್ತಾಯವಾಗಲಿದ್ದು, 2ನೇ ಭಾಗ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ : ಹಾಲಿನ ಕ್ಯಾಂಟರ್ ರಸ್ತೆಯಲ್ಲಿ ಪಲ್ಟಿಯಾಗುತ್ತಿದ್ದಂತೆ ಹಾಲಿಗಾಗಿ ಜನರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಗ್ರಾಮದಿಂದ ಹಾಲಿನ ಕ್ಯಾಂಟರ್ ಹಾಲನ್ನು ತುಂಬಿಕೊಂಡು ಬರುತ್ತಿತ್ತು. ಹೀಗೆ ಬರುತ್ತಿದ್ದ ಟ್ಯಾಂಕರ್, ಇಂಡುವಾಳು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಟ್ಯಾಂಕರ್ ಪಟ್ಟಿಯಾದ ಕೂಡಲೇ ಹಾಲು ರಸ್ತೆಪಾಲಾಗಿದೆ. ಇದನ್ನು ಕಂಡ ಸ್ಥಳೀಯರು ಬಿಂದಿಗೆ, ಕ್ಯಾನ್, ಪಾತ್ರೆಯನ್ನು ತಂದು ಹಾಲನ್ನು ತುಂಬಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಾವಣಗೆರೆ: ಸೋಮವಾರ ತಡರಾತ್ರಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿರುವ ಘಟನೆ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದ ಮನೆಯೊಂದರಲ್ಲಿ 80 ವರ್ಷದ ಗುರುಸಿದ್ದಯ್ಯ ಮತ್ತು ಇವರ ಪತ್ನಿ 75 ವರ್ಷದ ಸರೋಜಮ್ಮ ವಾಸವಾಗಿದ್ದರು. ಇವರಿಗೆ ಇಬ್ಬರೂ ಹೆಣ್ಣುಮಕ್ಕಳಿದ್ದು, ಮದುವೆ ಮಾಡಿದ್ದರು. ಹಾಗಾಗಿ ಇವರು ಇಬ್ಬರೇ ವಾಸವಾಗಿದ್ದರು. ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ದಂಪತಿಗಳು ಕೊಲೆಯಾಗಿರುವುದು ಯಾರಿಗೂ ತಿಳಿಯದಂತೆ ಆರೋಪಿಗಳು ಹೊರಗಿನಿಂದ ಮನೆ ಬಾಗಿಲನ್ನು ಹಾಕಿಕೊ0ಡು ಪರಾರಿಯಾಗಿದ್ದಾರೆ. ಇಂದು ಬೆಳೆಗ್ಗೆ ಪಕ್ಕದ ಮನೆಯವರು ಸರೋಜಮ್ಮರಿಗೆ ಭೇಟಿಯಾಗಲೆಂದು ಬಂದಿದ್ದಾರೆ. ಮನೆಯ ಬಾಗಿಲು ಹೊರಗಿನಿಂದ ಹಾಕಿರುವುದನ್ನು ಕಂಡು ಬಾಗಿಲನ್ನು ತೆಗೆದು ಒಳಗೆ ಹೋಗಿದ್ದಾರೆ. ಆಗ ವೃದ್ಧ ದಂಪತಿಗಳು ಕೊಲೆಯಾಗಿದ್ದು, ರಕ್ತದ ಮಡುವಿನಲ್ಲಿದ್ದಿದ್ದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇನ್ನೂ ದಂಪತಿ ಹತ್ಯೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ವರದಿ…
ನವದೆಹಲಿ : ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಫೋಟೋಗಳ ಬದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಅವರ ಫೋಟೋಗಳನ್ನು ಮಾತ್ರ ಅಳವಡಿಸಲಾಗುವುದು ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್, ಇನ್ಮುಂದೆ ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕಾರಣಿಗಳ ಫೋಟೋಗಳನ್ನು ಹಾಕುವುದಿಲ್ಲ. ಬದಲಿಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಫೋಟೋಗಳು ಮಾತ್ರ ಅಳವಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಅಂಬೇಡ್ಕರರು ಭಾರತ ಸಂವಿಧಾನ ಶಿಲ್ಪಿ ಮತ್ತು ಮೊದಲ ಕಾನೂನು ಮಂತ್ರಿ ಎಂಬುದು ನಮಗೆಲ್ಲ ತಿಳಿದಿದೆ. ಬಡವರಾಗಲಿ ಅಥವಾ ಶ್ರೀಮಂತರಾಗಿರಲಿ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬುದು ಅವರ ಕನಸಾಗಿತ್ತು. ಆ ಕನಸನ್ನು ನಮ್ಮ ಸರ್ಕಾರದಲ್ಲಿ ನನಸು ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ವರದಿ :ಆಂಟೋನಿ ಬೇಗೂರು
ಮಧುಗಿರಿ : ತಾಲ್ಲೂಕಿನಲ್ಲಿ ಅತೀ ಹೆಚ್ಚು ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅದನ್ನು ತಪ್ಪಿಸುವಂತೆ ಅನೇಕ ಬಾರಿ ಕರ್ನಾಟಕ ರಣಧೀರರ ವೇದಿಕೆ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೀಡಿದ್ದರು. ಆದರೆ ಆರೋಗ್ಯಾಧಿಕಾರಿಗಳು ನೆಪ ಮಾತ್ರಕ್ಕೆ 4-5 ನಕಲಿ ವೈದ್ಯರನ್ನು ಭೇಟಿ ಮಾಡಿ ನೋಟಿಸ್ ಕೊಟ್ಟು ಕಾನೂನು ಕ್ರಮ ಜರುಗಿಸಿದ್ದಾರೆ. ಇನ್ನುಳಿದ ನಕಲಿ ವೈದ್ಯರಿಗೆ ಅಭಯ ನೀಡಿ ಪೋಷಿಸುತ್ತಿರುವ ತಾಲ್ಲೂಕು ಆರೋಗ್ಯಾಧಿಕಾರಿಗಳು ಎಂದು ಸಾರ್ವಜನಿಕರೂ ಆರೋಪಿಸುತ್ತಿದ್ದಾರೆ. ಈ ವಿಚಾರವಾಗಿ ಮೇಲ್ನೋಟಕ್ಕೆ ನಮ್ಮಗಳಿಗೂ ಇದು ಸತ್ಯವೆನಿಸುತ್ತಿದೆ ಆದ ಕಾರಣ ಇಂದು ಮಧುಗಿರಿ ತಾಲ್ಲೂಕು ತಹಸೀಲ್ದಾರ್ ರವರು ರಜೆಯಲ್ಲಿ ಇರುವ ಕಾರಣ ಗ್ರೇಡ್ 2 ತಹಸೀಲ್ದಾರ್ ರಾದ ಪಿ.ಎಂ ಕಮಲಮ್ಮ ರವರನ್ನು ಭೇಟಿ ಮಾಡಿ ತಾಲ್ಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೇವೆ ಹಾಗೂ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಮಟ್ಟದ ಹೋರಾಟ ಮಾಡುತ್ತೇವೆ ಎಂದು…
ಪಾವಗಡ: ಯ ನಾ ಹೊಸಕೋಟೆ ಹೋಬಳಿಯ ದೊಡ್ಡಲಂಬಾಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕ ಆಂಜನೇಯಲು ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಆಂಜನೇಯಲು, SDMC ಅಧ್ಯಕ್ಷ ಸೀನ ನಾಯ್ಕ, ಅಂಗವಾಡಿ ಶಿಕ್ಷಕಿ ಶಾನಮ್ಮ, ಊರಿನ ಗ್ರಾಮಸ್ಥರಾದ ಹನುಮಂತ ನಾಯ್ಕ, ಲಾಲ ನಾಯ್ಕ, ಹಳೆಯ ವಿದ್ಯಾರ್ಥಿಗಳಾದ ಹರೀಶ್ ನಾಯ್ಕ, ನಾರಾಯಣ ನಾಯ್ಕ, ಚೇತನ್, ನಂದೀಶ್ ನಾಯ್ಕ, ಶ್ರೀಕಾಂತ್ ನಾಯ್ಕ, ಹಾಜರಿದ್ದರು, ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…