Author: admin

ಹಾಡಹಗಲೇ ಮನೆಯಲ್ಲಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಕಬ್ಬಿಣದ ರಾಡ್‍ನಿಂದ ಹೊಡೆದು ಕೃತ್ಯವೆಸಗಲಾಗಿದೆ. ಸಂಪತ್ ಕುಮಾರ್ (63) ಮೃತ ದುರ್ದೈವಿ. ಮನೆಗೆ ನುಗ್ಗಿ ಕೃತ್ಯವೆಸಗಿದ ಹಂತಕ ಪರಾರಿಯಾಗಿದ್ದಾನೆ. ಮೈಸೂರಿನ ಬೃಂದಾವನ ಬಡಾವಣೆಯ 1ನೆ ಹಂತದ ನಿವಾಸದಲ್ಲಿ ಘಟನೆ ನಡೆದಿದೆ. ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿದನೆಂದು ಮೃತನ ಪುತ್ರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ರಿಯಲ್ ಎಸ್ಟೇಟ್ ಹಾಗೂ ಅಗರ್‍ಬತ್ತಿ ವಹಿವಾಟು ನಡೆಸುತ್ತಿದ್ದ ಸಂಪತ್ ಕುಮಾರ್ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪತ್ನಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಪತ್ನಿ ಶಾಲೆಗೆ ತೆರಳಿದ್ದ ಸಂದರ್ಭದಲ್ಲಿ ಹತ್ಯೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಹಬ್ಬದ ಜೋಶ್‌ನಲ್ಲಿ ಡಿಜೆ ಕಾರಿನ ಮೇಲ್ಭಾಗದಲ್ಲಿ ಡ್ಯಾನ್ಸ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಡಿಜೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಸಮಯದಲ್ಲಿ, ಅವರು ಡಿಜೆ ಕಾರಿನ ಮೇಲೆ ನೃತ್ಯ ಮಾಡುತ್ತಿದ್ದರು. ಈ ವೇಳೆ ಹೈಟೆನ್ಷನ್ ವೈರ್‌ ತಗುಲಿ ಒಬ್ಬರ ನಂತರ ಒಬ್ಬರು ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡವರೆಲ್ಲರೂ ಇಂದೋರ್‌ನ ಮಹಾರಾಜ ಯಶವಂತ್ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಇಬ್ಬರು ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಡಾ.ಅಂಬೇಡ್ಕರ್‌ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಭಗವಂತ್ ಸಿಂಗ್ ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಪಶ್ಚಿಮ ಬಂಗಾಳದಲ್ಲಿ ಭೀಕರ ಅಪಘಾತವೊಂದು ತಪ್ಪಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದರಿಂದ ದೊಡ್ಡ ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ಹೌರಾ ಜಿಲ್ಲೆಯ ಬಗ್ನಾನ್‌ನಲ್ಲಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 16ರಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಿಘಾಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 70 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಆದರೆ, ಬಸ್ ಪಲ್ಟಿಯಾಗಲು ಕಾರಣ ತಿಳಿದುಬಂದಿಲ್ಲ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಶ್ಮಿಕಾ ಮಂದಣ್ಣ ಪ್ರಸ್ತುತ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ವಾರಿಸು ಚಿತ್ರದಲ್ಲಿ ವಿಜಯ್ ಜೊತೆ ಕೆಲಸ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮುಂಚೂಣಿ ನಾಯಕಿಯಾಗಿ ಏರಿದ್ದಾರೆ. ತೆಲುಗಿನಲ್ಲಿ ಚಿತ್ರೀಕರಣಗೊಂಡು ಹಲವು ಭಾಷೆಗಳಿಗೆ ಡಬ್ ಆಗಿದ್ದ ಪುಷ್ಪಾ ಚಿತ್ರ ರಶ್ಮಿಕಾಗೆ ಟರ್ನಿಂಗ್ ಪಾಯಿಂಟ್ ಆಗಿತ್ತು. ಸದ್ಯ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಸೀತಾರಾಮಂ ಚಿತ್ರದಲ್ಲಿ ರಶ್ಮಿಕಾ ಅಭಿನಯಕ್ಕೆ ಪ್ರಶಂಸೆಯೂ ಸಿಕ್ಕಿದೆ. ಹಿಂದಿಯಲ್ಲಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಮಿಷನ್ ಮಜ್ನು, ಅಮಿತಾಬ್ ಬಚ್ಚನ್ ಅವರೊಂದಿಗೆ ಗುಡ್ ಬೈ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಅನಿಮಲ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗ ರಶ್ಮಿಕಾ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಪುಷ್ಪ ಚಿತ್ರದಲ್ಲಿ ನಟಿಸಲು ಈಗಾಗಲೇ 1 ಕೋಟಿ ಸಂಭಾವನೆ ಪಡೆದಿದ್ದು, ಇದೀಗ ಪುಷ್ಪ 2 ಚಿತ್ರದಲ್ಲಿ ನಟಿಸಲು 4 ಕೋಟಿ ಕೇಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ಕಾರಣಕ್ಕೆ ರಶ್ಮಿಕಾ ಮಂದಣ್ಣ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ…

Read More

ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರಿದಿದ್ದು ಇದುವರೆಗೂ ಒಂದು ವಾರದ ಅವಧಿಯಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ ೩೪ಕ್ಕೆ ಏರಿದೆ. ಅಪಾರ ಆಸ್ತಿಪಾಸ್ತಿ ಹಾನಿಗೀಡಾಗಿ ಅನ್ನದಾತರ ಬದುಕು ದುಸ್ಥರವಾಗಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ಬೆಳೆದಿದ್ದ ಬೆಳೆಗಳು ನೀರು ಪಾಲಾಗಿವೆ. ಇನ್ನು ಮೂರು ದಿನಗಳ ಕಾಲ ರಾಜ್ಯದ 11  ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಎಚ್ಚರಿಕೆ ಸಂದೇಶ ರವಾನಿಸಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಪ್ರವಾಹ ಮಾತ್ರ ಕಡಿಮೆಯಾಗಿಲ್ಲ. ಇದರಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಕೆಆರ್‌ಎಸ್ ಜಲಾಶಯ ತುಂಬಿ ಹರಿಯುತ್ತಿದ್ದು, ೧ ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಆಸುಪಾಸಿನ ಗ್ರಾಮಗಳು ಜಲಾವೃತಗೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಕಾವೇರಿ ನದಿ ಪ್ರವಾಹದಿಂದಾಗಿ ಶವಸಂಸ್ಕಾರಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದಲ್ಲಿ ಕ್ಯಾನ್ಸರ್ ನಿಂದ ಮೃತಪಟ್ಟಿದ್ದ ಸುಲೋಚನರವರ ಶವವನ್ನು ನೀರಿನಲ್ಲೇ ಗ್ರಾಮಸ್ಥರು ಶವಹೊತ್ತು ಮಸಣಕ್ಕೆ ತೆರಳಿ…

Read More

ಮಹಾರಾಷ್ಟ್ರದ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಕಲ್ಲಿದ್ದಲು ಇಲಾಖೆ ಕಾರ್ಯದರ್ಶಿ ಎಚ್‌ ಸಿ ಗುಪ್ತಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕಲ್ಲಿದ್ದಲು ಹಗರಣದ ಪ್ರಕರಣದಲ್ಲಿ ಮಾಜಿ ಜಂಟಿ ಕಾರ್ಯದರ್ಶಿ ಕೆ.ಎಸ್. ಕ್ರೋಫಾ ಅವರಿಗೆ ಎರಡು ವರ್ಷ ಮತ್ತು ನಾಗ್ಪುರ ಮೂಲದ ಎಂ,ಎಸ್ ಗ್ರೇಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿರ್ದೇಶಕ ಮುಖೇಶ್ ಗುಪ್ತಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ನ್ಯಾಯಾಲಯ ವಿಧಿಸಿದೆ. ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಶಿಕ್ಷೆಯ ತೀರ್ಪು ಪ್ರಕಟಿಸುವಾಗ ಎಚ್‌ಸಿ ಗುಪ್ತಾಗೆ ಒಂದು ಲಕ್ಷ ರೂಪಾಯಿ, ಕೆಎಸ್ ಕ್ರೋಫಾಗೆ ೫೦,೦೦೦ ರೂಪಾಯಿ, ಮುಖೇಶ್ ಗುಪ್ತಾಗೆ ೨ ಲಕ್ಷ ರೂಪಾಯಿ ಮತ್ತು ನಾಗ್ಪುರ ಮೂಲದ ಸಂಸ್ಥೆಗೆ ೨ ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಿಸ್ಸಸ್ ಗ್ರೇಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ ದಂಡ ವಿಧಿಸಿದೆ. ಮಹಾರಾಷ್ಟ್ರದ ಲೋಹರಾ ಪೂರ್ವ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ನ್ಯಾಯಾಲಯ ಅವರನ್ನು…

Read More

ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿರುವ ಬೆನ್ನಲ್ಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಸಂಸದರು ಹಾಗೂ ಶಾಸಕರ ಮಹತ್ವದ ಸಭೆ ಕರೆದಿದ್ದಾರೆ. ಜೆಡಿಯುಗೆ ಆರ್‌.ಪಿ.ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಈ ಸಭೆ ಕರೆದಿರುವುದು ಕುತೂಹಲ ಕೆರಳಿಸಿದೆ. ಜೆಡಿಯು, ಎನ್‌ಡಿಎ ಅಂಗಪಕ್ಷವಾಗಿದ್ದರೂ ಸರ್ಕಾರದಿಂದ ದೂರ ಉಳಿದಿದೆ. ನಿತೀಶ್ ಕುಮಾರ್ ಅವರು ಕೇಂದ್ರ ಸರ್ಕಾರ ಸರ್ಕಾರ ನೀಡುತ್ತಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ನಿನ್ನೆ ದೆಹಲಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೂ ನಿತೀಶ್ ಕುಮಾರ್ ಗೈರು ಹಾಜರಾಗಿದ್ದರು. ಇದು ರಾಜಕೀಯ ವಲಯಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮತ್ತೊಂದೆಡೆ ಜೆಡಿಯುಗೆ ಆರ್‌.ಪಿ .ಸಿಂಗ್ ಗುಡ್ ಬೈ ಹೇಳಿದ್ದು ಬಿಹಾರ ಸಿಎಂ ವಿರುದ್ಧ ಆರೋಪ ಮಾಡಿದ್ದು ಕಳೆದ ವರ್ಷ ತಮ್ಮನ್ನು ಸಂಪರ್ಕಿಸದೆ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು ಎಂದು ಆರೋಪಿಸಿದ್ದಾರೆ. ಜೆಡಿಯು ಪಕ್ಷದ ಅಂತರಿಕ ಜಗಳವನ್ನು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ. ತಮ್ಮ ಮತ್ತು ಜೆಡಿಯು ನಡುವೆ…

Read More

ಬಾಲಿವುಡ್ ನಟ ಅಮೀರ್ ಖಾನ್ ಇತ್ತೀಚೆಗೆ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಸಾಲಬಾಧೆಯಿಂದ ಶಾಲಾ ಶುಲ್ಕ ಪಾವತಿಸಲು ಪೋಷಕರು ವಿಫಲರಾಗಿದ್ದನ್ನು ಸ್ಮರಿಸಿದ್ದಾರೆ. ಅಮೀರ್ ಖಾನ್ ಈಗ ದೊಡ್ಡ ಸೂಪರ್‌ಸ್ಟಾರ್ ಆಗಿರಬಹುದು, ಆದರೆ ಅವರು ಉದ್ಯಮದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವ ಮೊದಲು ಕಷ್ದ ದ ದಿನಗಳನ್ನು ನೋಡಿದ್ದಾರೆ. ಜಗತ್ತು ಅವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ಮೊದಲು ಹೋರಾಟದ ಬದುಕಿನ ಬಗ್ಗೆ ಬಹಿರಂಗಪಡಿಸಿದ್ದಾರೆ. ಹೊಸ ಹ್ಯೂಮನ್ಸ್ ಆಫ್ ಬಾಂಬೆ ಸಂದರ್ಶನದಲ್ಲಿ, ಅಮೀರ್ ಖಾನ್ ಅವರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಾಗ ಅವರು ತಮ್ಮ ಕುಟುಂಬ ಸಾಲದಲ್ಲಿದ್ದಾಗ ಮತ್ತು ಶಾಲೆಯಲ್ಲಿ ಕಷ್ಟಗಳನ್ನು ಎದುರಿಸಿದರು. ಅವರು ಮತ್ತು ಅವರ ಒಡಹುಟ್ಟಿದವರು ಶಾಲಾ ಶುಲ್ಕವನ್ನು ಪಾವತಿಸಲು ತಡವಾದಾಗ ಅನುಭವಿಸಿದ ಮಾನಸಿಕಯಾತನೆ ಕುರಿತು ಅವರು ಮಾತನಾಡಿದ್ದಾರೆ. ಶಾಲಾ ಅಸೆಂಬ್ಲಿಯಲ್ಲಿ ಪ್ರಾಂಶುಪಾಲರು ಶುಲ್ಕ ಪಾವತಿಸದ ಬಗ್ಗೆ ಹೆಸರನ್ನು ಘೋಷಿಸುತ್ತಿದ್ದಾಗ ಮುಜುಗರ ಅನುಭವಿಸುತ್ತಿದ್ದುದ್ದನ್ನು ಉಲ್ಲೇಖಿಸಿದ್ದರು. ಸಂದರ್ಶನದಲ್ಲಿ, ಅಮೀರ್ ಖಾನ್ ತಮ್ಮ ಕುಟುಂಬವು ಸಾಲದಲ್ಲಿ ಸಿಲುಕಿದ ಸಮಯದಲ್ಲಿ ಅವರ ಶಾಲಾ ದಿನಗಳಲ್ಲಿ ೬ನೇ ತರಗತಿಗೆ ೬…

Read More

ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ ಆದರೂ ದಿನದ ಪಾಸಿಟಿವಿಟಿ ಪ್ರಮಾಣ ಶೇಕಡ ೬ರ ಗಡಿದಾಟಿದೆ. ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧೬,೧೬೭ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ ಚೇತರಿಸಿಕೊಂಡು ಬಿಡುಗಡೆಯಾದವರ ಸಂಖ್ಯೆ ೧೫,೫೪೯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕು ಸಂಖ್ಯೆಯ ಏರಿಳಿತದ ನಡುವೆಯೂ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ. ೬,೧೪ ರಷ್ಟು ಇದೆ. ಜೊತೆಗೆ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೩೫,೫೧೦ ಮಂದಿಯಲ್ಲಿ ಇದೆ ಎಂದು ಸಚಿವಾಲಯ ತಿಳಿಸಿದೆ. ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿನ ಸಂಖ್ಯೆ ೪.೪೦ ಕೋಟಿ ಸನಿಹದಲ್ಲಿದೆ. ಅಲ್ಲದೆ ಇಲ್ಲಿಯತನಕ ಚೇತರಿಸಿಕೊಂಡು ಬಿಡುಗಡೆಯಾದವರ ಒಟ್ಟು ಸಂಖ್ಯೆ ೪,೩೪,೯೯,೬೫೯ ಮಂದಿಗೆ ಏರಿಕೆಯಾಗಿದೆ.ಜೊತೆಗೆ ಸೋಂಕಿನಿಂದ ೫,೨೬,೭೩೦ ಮಂದಿ ಸಾವನ್ನಪ್ಪಿದ್ದಾರೆ. ಸೋಂಕು ಏರಿಳಿತ ಹಿನ್ನೆಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೩೫,೫೧೦ ಮಂದಿಯಲ್ಲಿ ಇದೆ.ಜೊತೆಗೆ ಪಾಸಿಟಿವಿಟಿ…

Read More

ಸುಪ್ರೀಂ ಕೋರ್ಟ್ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ, ಸೂಕ್ಷ್ಮ ಪ್ರಕರಣಗಳನ್ನು ಕೆಲವು ನ್ಯಾಯಾಧೀಶರಿಗೆ ಮಾತ್ರ ನಿಯೋಜಿಸಲಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ದೆಹಲಿಯಲ್ಲಿ ಆಯೋಜಿಸಿದ್ದ ಪೀಪಲ್ಸ್ ಟ್ರಿಬ್ಯೂನಲ್‌ನಲ್ಲಿ “ನ್ಯಾಯಾಂಗ ದ ರೋಲ್ ಕುರಿತು ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸುಪ್ರೀಂ ಕೋರ್ಟ್‌ನಿಂದ ನಿಮಗೆ ಪರಿಹಾರ ಸಿಗುತ್ತದೆ ಎಂದು ನೀವು ಭಾವಿಸಿದರೆ, ನೀವು ತುಂಬಾ ತಪ್ಪಾಗಿ ಭಾವಿಸುತ್ತೀರಿ. ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ೫೦ ವರ್ಷಗಳ ಅಭ್ಯಾಸ ಮಾಡಿದ ನಂತರ ಇದನ್ನು ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದರೂ ಅದು ನೆಲದ ವಾಸ್ತವತೆ ಬದಲಾಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ ಆದರೆ ವಾಸ್ತವಕ್ಕೆ ಭಾರಿ ವ್ಯತ್ಯಾಸವಿದೆ. . ಸುಪ್ರೀಂ ಕೋರ್ಟ್ ಗೌಪ್ಯತೆಯ ತೀರ್ಪು ನೀಡಿದರೆ ಇಡಿ ಅಧಿಕಾರಿಗಳು ನಿಮ್ಮ ಮನೆಗೆ…

Read More