Author: admin

ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಅಳವಡಿಸಿದ್ದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ  ತಿಪಟೂರು ತಾಲ್ಲೂಕಿನ ಕೆರೆಗೋಡಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಈ ಕೃತ್ಯವನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.  ತಿಪಟೂರು ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಅರ್ಥಪೂರ್ಣವಾಗಿ, ದ್ದೂರಿಯಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರಾದ ಲೋಕೇಶ್ ರವರು, ಇಡೀ ರಾಷ್ಟ್ರವೇ ತಿರುಗಿ ನೋಡುವಂತಹ, ಸಂವಿಧಾನ ಶಿಲ್ಪಿ ವಿಶ್ವ ಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಂವಿಧಾನ ನೀಡಿದಂತಹ ಮಹಾ ನಾಯಕನಿಗೆ ನಾವೆಲ್ಲರೂ ಸಹ ಗೌರವಿಸಬೇಕು. ಅವರ ತತ್ವ ಸಿದ್ಧಾಂತಗಳನ್ನು ಪಾಲಿಸಬೇಕು. ಶಿಕ್ಷಣ, ಸಂಘಟನೆ, ಹೋರಾಟ, ಎಂಬ ಮೂರು ಸೂತ್ರಗಳನ್ನು ನಾವೆಲ್ಲರೂ ಅನುಸರಿಸಬೇಕೆಂದು ತಿಳಿಸಿದರು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಬಹಳ ವಿಶೇಷವಾಗಿ ಪ್ರತಿಯೊಬ್ಬರು ಗೌರವ ಸೂಚಿತ ಸಮವಸ್ತ್ರಗಳನ್ನು ಧರಿಸಿ, ಜೈ ಭೀಮ್ ಘೋಷಣೆ ಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ, ಬೆಳ್ಳಿ ರಥದ ವಾಹನದ ಮೂಲಕ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜೊತೆಗೆ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಯನ್ನು ಸಹ ಆಚರಿಸಿ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ,…

Read More

ಕುಣಿಗಲ್: ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಸ್ಪೋಟಿಸಿ ನೆಲದ ಕಂಪನದ ಪರಿಕ್ಷೇಗೆ ಬಂದಿದ್ದ ಅಧಿಕಾರಿಗಳಿಗೆ  ತಡೆಯೊಡ್ಡಿದ  ರೈತ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಪಿಹೆಚ್ ಹಳ್ಳಿಯ ಸರ್ವೆ ನಂ 82 ರಲ್ಲಿ ನಡೆಯುತ್ತಿರುವ  ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಸ್ಪೋಟಿಸಿ ನೆಲದ ಕಂಪನದ ಪರಿಕ್ಷೇಗೆ ಬಂದಿದ್ದ ಅಧಿಕಾರಿಗಳಿಗೆ  ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ ನೇತೃತ್ವದಲ್ಲಿ ತಡೆಯೊಡ್ಡಲಾಗಿತ್ತು. ಈ ವೇಳೆ ಹುಲಿಕಟ್ಟೆ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಸ್ಪೋಟಿಸಿ ನೆಲದ ಕಂಪನದ ಪರೀಕ್ಷೆಗೆ ಬಂದಿದ್ದ ಅಧಿಕಾರಿಗಳಿಗೆ  ರೈತರು ತಡೆಯೊಡ್ಡಿದರು. ಈ ವೇಳೆ ಸುಮಾರು 40ರಿಂದ 50 ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹಿರಿಯೂರು: ಅಂಬೇಡ್ಕರ್ ಸಂಘಟನೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಹಿರಿಯೂರು ತಾಲ್ಲೂಕಿನಲ್ಲಿ ವಿಜೃಂಭಣೆಯಿಂದ ನಡೆಯಿತು. ತಾಲ್ಲೂಕಿನ ಟಿ.ಬಿ.ಸರ್ಕಲ್ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಸಲ್ಲಿಸಿ ಟಿ.ಬಿ. ಸರ್ಕಲ್ ವೃತ್ತದಿಂದ ಹಿರಿಯೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸುವ ಮೂಲಕ ವಿಶೇಷ ಗೌರವ ನೀಡಲಾಯಿತು. ಈ ವೇಳೆ ಯುವ ಸಮೂಹ ಕುಣಿದು, ಜೈಕಾರ ಹಾಕುತ್ತಾ ಸಂಭ್ರಮಿಸಿತು. ಈ ವೇಳೆ ನಮ್ಮ ತುಮಕೂರು ಜೊತೆಗೆ  ಮಾತನಾಡಿದ ಹಿರಿಯೂರು ತಾಲ್ಲೂಕಿನ ರಂಗನಾಥಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗನಾಥಪುರ ಗ್ರಾಮದ ಉಪಾಧ್ಯಕ್ಷರಾದ ಮಂಜುನಾಥ್, ಅಂಬೇಡ್ಕರ್ ರವರು ಹೆಸರಿಗೆ ಮಾತ್ರ ಸೀಮಿತವಾದ ವ್ಯಕ್ತಿಯಲ್ಲ, ಅವರ ಹೆಸರಿನಲ್ಲಿಯೇ ಒಂದು ಮಹತ್ವವಾದ ಶಕ್ತಿ ಇದೆ.  ಅಂಬೇಡ್ಕರ್ ರವರು ರಚಿಸಿದಂತಹ ಸಂವಿಧಾನವು ಕೇವಲ ಎಸ್ ಸಿ, ಎಸ್ ಟಿ ಮಾತ್ರ ಸೀಮಿತವಾಗಿಲ್ಲ ಪ್ರತಿಯೊಬ್ಬ ವ್ಯಕ್ತಿಯೂ ಸಹ ಇಂದು ಶಿಕ್ಷಣ ಪಡೆಯಲು ಕಾರಣವೇ ಡಾ.ಬಿ.ಆರ್. ಅಂಬೇಡ್ಕರ್  ರಚಿಸಿದ ಸಂವಿಧಾನ ಎಂದು ತಿಳಿಸಿದರು. ದಲಿತ ಸಂಘಟನೆಯ ರಮೇಶ್ ಕುಮಾರ್ ಮಾತನಾಡಿದರು. ಈ ಸಂಧರ್ಭದಲ್ಲಿ ದಲಿತ…

Read More

ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಶ್ರೀ ಸಿದ್ದಾರ್ಥ ಗ್ರಾಮಾಂತರ ಪ್ರೌಢಶಾಲೆ ದಂಡಿನದಿಬ್ಬ ಇಲ್ಲಿ 1999-2002 ನೇ ಸಾಲಿನ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಗಳಾದ KNS, HMK, CSR, MGR ,THS, SS ಇವರನ್ನು ಹಳೇ ವಿದ್ಯಾರ್ಥಿಗಳು ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವೇದಮೂರ್ತಿಯವರು ವಹಿಸಿಕೊಂಡರು. ಪ್ರಾರ್ಥನೆಯನ್ನು ಕುಸುಮ ಮತ್ತು ಚೈತ್ರ ನೆರವೇರಿಸಿದರು. ಕೆ ಸಾವಿತ್ರಿ ಎಲ್ಲರನ್ನೂ ಸ್ವಾಗತಿಸಿದರು, ಕೆಂಚರಾಜು ಎಲ್ಲರನ್ನು ವಂದಿಸಿದರು. ಕಾರ್ಯಕ್ರಮವನ್ನು ಓಬಳೇಶ ಶಿಕ್ಷಕರು ನಿರ್ವಹಿಸಿದರು. ವರದಿ: ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಬೆಂಗಳೂರಿಗೆ ಹೋಗುವ ಮಾರ್ಗಮಧ್ಯೆ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ರವರ ಮನೆಗೆ ಭೇಟಿ ನೀಡಿದರು ಚಹಾ ಸೇವನೆ ಮಾಡಿ ನಂತರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಪತ್ರಕರ್ತರ ಪ್ರಶ್ನೆ. ನೀವು ರಾಜೀನಾಮೆಯನ್ನು ಯಾವಾಗ ನೀಡುತ್ತೀರಿ? ಉತ್ತರ: ನಾನು ಆಪಾದನೆಯಿಂದ ಮುಕ್ತನಾಗಬೇಕು ಎಂಬ ಒಂದೇ ಒಂದು ಉದ್ದೇಶದಿಂದ ಹಾಗೂ ನಮ್ಮ ಪಕ್ಷಕ್ಕೆ ಕಾರ್ಯಕರ್ತರಿಗೆ ಹಿರಿಯರಿಗೆ ಕಿರಿಕಿರಿ ಆಗಬಾರದೆಂದು ಮುಖ್ಯಮಂತ್ರಿಯವರ ಜೊತೆ ಮಾತನಾಡಿದ್ದೇನೆ ಈ  ದಿನ (15.04.22)ರಂದು ಸಂಜೆ ಬೆಂಗಳೂರಿಗೆ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು. ಪ್ರಶ್ನೆ: ನಿಮ್ಮ ಅಭಿಮಾನಿ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ ಇದಕ್ಕೆ ನೀವು ಏನು ಹೇಳುತ್ತೀರಿ? ಉತ್ತರ: ಇಲ್ಲ ಅಭಿಮಾನಿಗಳಿಗೆ ನಾನು ಬುದ್ಧಿವಾದ ಹೇಳಿದ್ದೇನೆ. ಆ ರೀತಿ ಯಾರು ಮಾಡಿಕೊಳ್ಳುವುದಿಲ್ಲ ಆಪಾದನೆಯಿಂದ ಮುಕ್ತರಾಗಿರುವ ಮುಖ್ಯವಾಗಿದೆ ಎಂದರು. ಪ್ರಶ್ನೆ:  ಪ್ರಿಯಾಂಕ ಖರ್ಗೆಯವರು ಈ ಸರ್ಕಾರದಲ್ಲಿ ಇನ್ನೂ ನಾಲ್ಕು ಜನರ ಮೇಲೆ 40% ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ?…

Read More

ಚಿತ್ರದುರ್ಗ: ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಎಂಬ ಹೆಮ್ಮೆಗೆ ಪಾತ್ರವಾಗಿದೆ. ಈ ಸಂವಿಧಾನದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜೊತೆಗೆ ದೇಶ ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್ ಹೇಳಿದರು. ಚಿತ್ರದುರ್ಗ ನಗರದಲ್ಲಿ ಜೆ.ಜೆ.ಹಟ್ಟಿ ಬಳಗದ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ರವರು ತಮ್ಮ ಇಡೀ ಜೀವನವನ್ನು ದೀನದಲಿತರ ರಕ್ಷಣೆಗಾಗಿ ಮುಡಿಪಾಗಿಟ್ಟರು. ಇವರ ಪರಿಶ್ರಮದ ಫಲವಾಗಿ ಇಂದು ದೇಶದ ಜನರಲ್ಲಿ ಸಾಮಾಜಿಕ ಸಮಾನತೆಯ ಅರಿವು ಮೂಡುವಂತಾಗಿದೆ.  ಇಂದಿನ ವಿದ್ಯಾರ್ಥಿಗಳು, ನಾಗರಿಕರು ಸಂವಿಧಾನದ ನಿಯಮಗಳನ್ನು ಗೌರವಿಸುವ ಜೊತೆಗೆ ಅವುಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂಬುದಾಗಿ ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್ ಮುಖಂಡರಾದ ಗೋಪಾಲಕೃಷ್ಣ, ದುರ್ಗೇಶ್, ಮಹಾನಾಯಕ ಕನ್ನಡ ಪತ್ರಿಕೆಯ ಸಂಪಾದಕರಾದ ಶಿವಕುಮಾರ್, ಮಲ್ಲಿಕಾರ್ಜುನ್, ನೆಲ್ಸನ್ ಮಂಡೇಲಾ, ಅರವಿಂದ, ಸ್ವಾಮಿ, ಪ್ರಸಾದ, ಅನಿಲ…

Read More

ಕೊರಟಗೆರೆ: ಕೊರಟಗೆರೆ ಮತ್ತು ಮಧುಗಿರಿ ರಾಜ್ಯ ಹೆದ್ದಾರಿ ರಸ್ತೆಯ ಸಿದ್ದೇಶ್ವರ ಸಮುದಾಯ ಭವನದ ಹತ್ತಿರ ಬೈಪಸ್ ರಸ್ತೆ ನಿರ್ಮಾಣ ಮಾಡಿದ್ದು, ಬೈಪಾಸ್ ರಸ್ತೆಗೂ ಕೊರಟಗೆರೆ ಪಟ್ಟಣ ಸಂಪರ್ಕಿಸುವ ರಸ್ತೆಯು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಮಾಡಲಾಗಿದೆ. ಇದರಿಂದಾಗಿ ಇದೀಗ ಇಲ್ಲಿ ಪ್ರತಿನಿತ್ಯ ಸಣ್ಣ ಪುಟ್ಟ ಅಪಘಾತಗಳು ನಡೆಯುತ್ತಲೇ ಇವೆ. ಇಂದು ಈ  ರಸ್ತೆಯ ಪಕ್ಕದಲ್ಲೇ ಹೋಗುತ್ತಿದ್ದ  ದ್ವಿಚಕ್ರವಾಹನ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ ಗುದ್ದಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗಳಿಗೆ ಸಣ್ಣಪುಟ್ಟ  ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ  ಪೊಲೀಸ್ ಅಧಿಕಾರಿ ಎಎಸ್ ಐ  ಯೋಗೇಶ್   ಹಾಗೂ ಅವರ ತಂಡ ಸರ್ಕಾರಿ ಆಸ್ಪತ್ರೆಗೆ ತಮ್ಮ 112 ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ . ಕೊರಟಗೆರೆ ಪಟ್ಟಣದಿಂದ ಮಧುಗಿರಿಗೆ ಹಾದು ಹೋಗುವ ರಸ್ತೆಯಲ್ಲಿ ಹಾಂಪ್ ನಿರ್ಮಾಣವಾಗಿದ್ದು, ಮಧುಗಿರಿ ಕಡೆಗೆ ಹೋಗುವ ಲಘು ವಾಹನಗಳು ಹಾಗೂ ಭಾರಿ ವಾಹನ  ಸೇರಿದಂತೆ ಪ್ರತಿನಿತ್ಯ ಸಂಚರಿಸುವ ಬೆಂಗಳೂರು-ಪಾವಗಡ ಮತ್ತು ತುಮಕೂರು-ಪಾವಗಡ…

Read More

ತಿಪಟೂರು: ಮನುಷ್ಯರಲ್ಲಿ ಇರುವ ಅಸಮಾನತೆ ಜಾತಿ ವ್ಯವಸ್ಥೆಯನ್ನು ಕೊನೆಗಾಣಿಸಬೇಕೆಂದು ಡಾ.ಬಿ.ಆರ್. ಅಂಬೇಡ್ಕರ್ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ತಿಪಟೂರು ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಏರ್ಪಡಿಸಿದ ಡಾ.ಬಿಆರ್ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾವ್ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎಂಬ ಸಮಾನತೆ ಮೂಡಿಸಬೇಕೆಂದು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ ಜಾತ್ಯತೀತ ವ್ಯಕ್ತಿ ಅಂಬೇಡ್ಕರ್ ಎಂದು ಸಚಿವರು ತಿಳಿಸಿದರು. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಇಡೀ ದೇಶದ ಪ್ರಜೆಗಳಿಗೆ ಹಕ್ಕುಗಳನ್ನು ತಿಳಿಸಿ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರಮಿಸಿದರು. ಇಂತಹವರ ವಿಚಾರಧಾರೆಗಳು ಪ್ರಸ್ತುತವಾಗಿದ್ದು, ಪ್ರತಿಯೊಬ್ಬರು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು. ಉಪನ್ಯಾಸ ನೀಡಿದ ರೇಣುಕಯ್ಯ,  ಡಾ. ಅಂಬೇಡ್ಕರ್ ಅವರು, ನಮ್ಮ ದೇಶದ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ…

Read More

ಹಿರಿಯೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಬರೆಯದೇ ಇದ್ದಿದ್ದರೆ, ಇಂದು ಈ ದೇಶವನ್ನು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯಂದು ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ನಮ್ಮತುಮಕೂರು ಜೊತೆಗೆ ಅವರು ಮಾತನಾಡಿದರು. ನಾನು ಒಬ್ಬಳು ಮಹಿಳೆಯಾಗಿ ಶಾಸಕಿಯಾಗಿ ಆಡಳಿತ ನಡೆಸುತ್ತಿದ್ದರೆ, ಅದು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪ್ರತಿಫಲ. ಇಂತಹ ವ್ಯಕ್ತಿಗಳು ನಮ್ಮ ಭಾರತ ದೇಶದಲ್ಲಿ ಇನ್ನೂ ಹುಟ್ಟಬೇಕು ಎಂದು ಅವರು ಇದೇ ಅಭಿಮಾನ ವ್ಯಕ್ತಪಡಿಸಿದರು. ಪ್ರವರ್ಗ -1ರ ಒಕ್ಕೂಟದ ರಾಜ್ಯಾದ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಪ್ರಪಂಚದಲ್ಲಿ ಮೊದಲು ಪಿಹೆಚ್ ಡಿ ಪದವಿಯನ್ನು ಪಡೆದ ಮೊದಲ ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದು,  ಕೊಲಂಬಿಯಾ ಯುನಿವರ್ಸಿಟಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಲೈಬ್ರೆರಿಯಲ್ಲಿ ಹಾಕಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ನಮ್ಮ ದೇಶದ ವಿಭಿನ್ನ ಸಂಸ್ಕೃತಿ, ಭಾಷಾ ವೈವಿಧ್ಯತೆಗಳೆಲ್ಲವನ್ನು ಸಮನಾಗಿಸಿ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ…

Read More