Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ದೇಶದಲ್ಲಿ ಕೇಂದ್ರದ ಗೃಹ ಸಚಿವರು ಹಲವಾರು ಭಾಷೆಗಳ ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಈಗಾಗಲೇ ತಮಿಳುನಾಡಿನ ಸಿಎಂ ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಇನ್ನೊಂದು ಕಡೆ ಭಾಷೆಯ ದಬ್ಬಾಳಿಕೆ ಪ್ರಾರಂಭ ಆಗಿದೆ. ಒಂದು ರಾಷ್ಟ್ರ ಮಾಡಬೇಕು ಎಂದು ಬಿಜೆಪಿ ಹೇಳ್ತಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಕೇಂದ್ರದ ಧೋರಣೆ ಸಂಪೂರ್ಣವಾಗಿ ಸ್ಥಗಿತಗೊಳಿಸಿ. ದೇಶದಲ್ಲಿ ಇರುವ ಸಮಸ್ಯೆ ಬಗೆಹರಿಸಿ ಎಂದು ಕಿಡಿಕಾರಿದರು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕ. ಒಂದೇ ನಾಣ್ಯದ ಎರಡೂ ಮುಖ. ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಬಾಗಿಲು ಹಾಕಿದ್ದಾರೆ. ಕರ್ನಾಟಕದಲ್ಲೂ ಅದು ಬಹಳ…
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿದಂತೆ 332 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ 166 ಸಿವಿಲ್, 3 ಮೆಕ್ಯಾನಿಕಲ್ ಹುದ್ದೆಗಳ ಬರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳು, 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು. ಅಕ್ಟೋಬರ್ 19 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ತೊಂದರೆಯಾದಲ್ಲಿ 18005728707 ಸಂಪರ್ಕಿಸುಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ನವದೆಹಲಿ: ಮಕ್ಕಳ ಜನನ ಪ್ರಮಾಣದ ಜೊತೆಗೆ ಆಧಾರ್ ಕಾರ್ಡ್ ಕೂಡ ನೀಡಲು ಮುಂದಾಗಿದ್ದು, ಈಗಾಗಲೇ 16 ರಾಜ್ಯಗಳಲ್ಲಿ ನವಜಾತ ಶಿಶುಗಳ ಜನನ ಪ್ರಮಾಣದ ಜೊತೆಗೇ ಆಧಾರ್ ಕಾರ್ಡ್ ನೀಡಲಾಗುತ್ತಿದ್ದು, ಶೀಘ್ರವೇ ಎಲ್ಲಾ ರಾಜ್ಯಗಳಲ್ಲೂ ಜಾರಿಗೆ ಬರಲಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಜನನ ಪ್ರಮಾಣ ಪತ್ರಕ್ಕೆ ಆಧಾರ್ ಅನ್ನು ಲಿಂಕ್ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಮಗುವಿನ ಜನನ ಪ್ರಮಾಣ ಪತ್ರ ವಿತರಣೆಯಾದ ಕೂಡಲೇ ಮಗುವಿನ ಹೆಸರಿನಲ್ಲಿ ಹೊಸ ಗುರುತಿನ ಸಂಖ್ಯೆ ನೋಂದಣಿಯಾಗಲಿದ್ದು, ಬಳಿಕ ಮಗುವಿನ ವಿಳಾಸವು ರವಾನೆ ಆದ ಕೂಡಲೇ ಆಧಾರ್ ಸಂಖ್ಯೆ ಸೃಷ್ಟಿಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನಲ್ಲಿ ತಡರಾತ್ರಿ ಸುರಿದ ಭಾrI ಮಳೆಯಿಂದ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೇಗೌಡನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಹೊಂಗೆ ಹಳ್ಳದಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಆಹಾರ ಅರಸಿ ಬಂದ ಕರಡಿ ಮರಿ ಹಳ್ಳ ದಾಟಲು ಸಾಧ್ಯವಾಗದೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಎಲ್ಲ ಹಳ್ಳ ಕೊಳ್ಳಗಳು ಕೆರೆಗಳು ತುಂಬಿ ಹರಿಯುತ್ತಿವೆ. ಹಳ್ಳದ ಹೆಚ್ಚಿನ ನೀರಿನ ರಭಸಕ್ಕೆ ಕೊಚ್ಚಿ ಹೋದ ಕರಡಿ ಮರಿ ದಾರುಣವಾಗಿ ಸಾವನ್ನಪ್ಪಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ “ಕರಡಿ 2 ವರ್ಷದ ಮರಿಯಾಗಿರುವುದರಿಂದ ಈಜು ಬರದೆ ಮುಳುಗಿ ಸಾವನ್ನಪ್ಪಿದೆ” ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ದೂರದ ಬೆಟ್ಟದಲ್ಲಿ ಕರಡಿ ಮರಿ ಮೃತ ದೇಹವನ್ನ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬೆಳಗಾವಿ : ಲಿಂಗಾಯತ ಸಂಸ್ಥೆ ಬೆಳೆಯಲು ಕೋರೆ ಅವರು ಪಟ್ಟಿರುವ ಶ್ರಮ ರಾಜಕೀಯದ ರಂಗಕ್ಕೆ ನೀಡಿದ್ದರೆ ದೊಡ್ಡ ನಾಯಕರಾಗಿ ಹೊರಹೊಮ್ಮುತ್ತಿದ್ದರು. ಆದರೆ ಅವರು ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರನ್ನು ದೊಡ್ಡವರನ್ನಾಗಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಡಾ. ಪ್ರಭಾಕರ ಕೋರೆ ಅವರು 75 ವರ್ಷದ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಕೋರೆ ಅವರು ಆದರ್ಶ ಜೀವನ ನಡೆಸಿದ್ದಾರೆ. ಕೆಎಲ್ ಇ ಸಂಸ್ಥೆ ಅವರ ಮುಂದಾಳತ್ವದಲ್ಲಿ ಗುಣಮಟ್ಟ ಉಳಿಸಿಕೊಂಡು ಮುನ್ನಡೆಸಿದರು. ಎಲ್ಲ ಸವಾಲುಗಳನ್ನು ಎದುರುರಿಸಿ ದೊಡ್ಡ ವಿಶ್ವ ವಿದ್ಯಾಲಯಯಾಗಿ ಕೆಎಲ್ಇಯನ್ನು ಪರಿವರ್ತಿಸಿದರು. ಗ್ರಾಮೀಣ ಭಾಗದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ದೊಡ್ಡವರನ್ನಾಗಿ ಮಾಡಿದ್ದಾರೆ. ಕೆಎಲ್ಇ ಸಂಸ್ಥೆ ಸರಕಾರ ಮಾಡದ ಕೆಲಸ ಮಾಡುತ್ತಿದೆ. ಕೆಎಲ್ಇ ಸಂಸ್ಥೆಯ ಪ್ರೇರಣೆಯಿಂದ ಬೇರೆ ಜಿಲ್ಲೆಯಲ್ಲಿ ಬೇರೆ ಸಂಸ್ಥೆಗಳು ಕಾರ್ಯ ಮಾಡುತ್ತಿವೆ. ಅದಕ್ಕೆ ಕೆಎಲ್ಇ ಆದರ್ಶ ಕಾರಣ ಎಂದರು.…
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಜನಸಂಕಲ್ಪ ಯಾತ್ರೆ ನಡುವೆಯೇ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ದೀಪಾಲಿ ಶೀತಲ್ ಖಂಗರ್ (28) ಮತ್ತು ಮೂರು ಹಾಗೂ ಎರಡು ವರ್ಷದ ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಇವರು ಭಂಡಾರ ತಾಲೂಕಿನ ತಿದ್ದಿ ಗ್ರಾಮದ ನಿವಾಸಿಗಳು ಎಂದು ಗೊತ್ತಾಗಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೀಪಾಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನದಿಯಲ್ಲಿ ಶವಗಳು ತೇಲಿಬಂದಿದ್ದು, ಆಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕರು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಸಜ್ಜಾಗಿದ್ದು, ನವೆಂಬರ್ 1ರಿಂದ ರಾಜ್ಯಾದ್ಯಂತ 15 ದಿನಗಳ ಕಾಲ ಕನ್ನಡ ಬಾವುಟ ಅಭಿಯಾನ ನಡೆಯಲಿದೆ. ರಾಷ್ಟ್ರಪ್ರೇಮದ ಜೊತೆಗೆ ರಾಜ್ಯ ಪ್ರೀತಿ ಸಂದೇಶ ಸಾರುವುದೇ ನಮ್ಮ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದ ಮಾದರಿಯಲ್ಲೇ ಮನೆ ಮನೆಗೂ ಕನ್ನಡ ಬಾವುಟ ಅಭಿಯಾನ ಆರಂಭಿಸಲಾಗುತ್ತಿದೆ. ನವೆಂಬರ್. 1 ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಂದಿನಿಂದ ನ.15ರವರೆಗೆ ಮನೆ ಮನೆಗೆ ಕನ್ನಡ ಬಾವುಟ ವಿತರಿಸಲಾಗುವುದು ಎಂದು ಹೇಳಿದ್ದಾರೆ. ಒಂದು ರಾಷ್ಟ್ರ ಒಂದು ಭಾಷೆ ಎಂಬ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಎಲ್ಲಾ ಭಾಷೆಗಳನ್ನು ನಾಶ ಮಾಡಿ ಒಂದು ಭಾಷೆ ಎಂದು ಮಾಡಲು ಹೊರಟಂತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕವಾಗಿವೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ…
ಕೊರಟಗೆರೆ : ಇಸ್ಲಾಂ ಧರ್ಮದ ಮುಸ್ಲಿಂ ಸಮುದಾಯದಲ್ಲಿರುವ ಉಪ ಜಾತಿಯಾದ ಪಿಂಜಾರ/ನದಾಫ್ ಜನಾಂಗದವರಿಗೆ ಪ್ರವರ್ಗ -1ರ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಕೊರಟಗೆರೆ ತಹಶೀಲ್ದಾರ್ ನಹಿದ ಜಂ ಜಂ ರವರಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ಜಿಲ್ಲಾ ಪಿಂಜಾರ/ನದಾಫ್ ಸಂಘದ ಜಿಲ್ಲಾಧ್ಯಕ್ಷರಾದ ಬಶೀರ್ ಅಹಮದ್ ಮಾತನಾಡಿ, 1993-94ರ ಹಿಂದೆ ಧಾರ್ಮಿಕವಾಗಿ ಇಸ್ಲಾಂ ಧರ್ಮದ ಅನುಯಾಯಿಗಳು ಆಗಿರುವ ಪಿಂಜಾರ ನದಾಫ್ ಸಮುದಾಯದ ಸದಸ್ಯರುಗಳು ಶಾಲಾ ದಾಖಲಾತಿ ವೇಳೆ ಹಾಗೂ ಇತರೆ ದಾಖಲಾತಿಗಳನ್ನು ಪಡೆಯುವ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರದಲ್ಲಿ ಉಪಜಾತಿ ಕಾಲಂ ಇಲ್ಲದೆ ಇದ್ದದ್ದರಿಂದ ಇಸ್ಲಾಂ ಅಥವಾ ಮುಸ್ಲಿಂ ಎಂದು ನಮೂದಿಸಿದ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಮತ್ತು ಸರ್ಕಾರ ನಿರ್ವಹಿಸುತ್ತಿದ್ದು ಕಂಡುಬಂದಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದೇಶದಂತೆ ಪಿಂಜಾರ ನದಾಫ್ ಪಂಗಡದ ಸದಸ್ಯರು ಪ್ರವರ್ಗ -೧ರ ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಹರಾಗಿರುತ್ತಾರೆ ಎಂದರು. ಸಮುದಾಯದ ಏಳಿಗೆಗಾಗಿ ಮತ್ತು ಅಭಿವೃದ್ಧಿಗಾಗಿ ಪಿಂಜಾರ/ನದಾಫ್ ಸಂಘದ ಹಾಗೂ ಸ್ಥಳೀಯ ಸಾಕ್ಷಿ ಮತ್ತು ಆಧಾರದ ಮೇರೆಗೆ…
ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯಲ್ಲಿ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ವೆಂಕಟರಮಣಪ್ಪ (38)ವರ್ಷ ಕೊರಟಗೆರೆಯ ಬೈಪಾಸ್ ರಸ್ತೆಯಲ್ಲಿರುವ ನವೀನ್ ಬಾರ್&ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟರಮಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಬೈಕ್ ಸವಾರ ಸಾವನ್ನಪ್ಪಿದ ಕೂಡಲೇ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಬಂದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕೊರಟಗೆರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವೆಂಕಟರಮಣಪ್ಪನವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ…