Subscribe to Updates
Get the latest creative news from FooBar about art, design and business.
- ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕ
- ಕಾಲುವೆಯ ಸೇತುವೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು
- ಹೃದಯಾಘಾತಕ್ಕೆ ಕೋವಿಡ್ ಲಸಿಕೆ ನೇರ ಕಾರಣ ಅಲ್ಲ: ಸಚಿವ ದಿನೇಶ್ ಗುಂಡೂರಾವ್
- ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ: ಡಿ.ಕೆ.ಶಿವಕುಮಾರ್
- ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ: 2 ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಜೋಡಿ!
- ನಾಲ್ಕು ತಿಂಗಳುಗಳಿಂದ ಭೀತಿ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
- ಉತ್ತಮ ರಸ್ತೆಗಳು ಬೇಕು ಅಂದ್ರೆ, ಗ್ಯಾರೆಂಟಿ ಬಂದ್: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ!
- ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ ಕರೆ
Author: admin
ಬೆಂಗಳೂರು: ಕೊವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಉಳಿದೆಲ್ಲ ನಿರ್ಬಂಧಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಶನಿವಾರ ಹಾಗೂ ಭಾನುವಾರದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ತಜ್ಞರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಳವಾದರೆ, ಮತ್ತೆ ವೀಕೆಂಡ್ ಕರ್ಫ್ಯೂ ಹಾಕಬೇಕಾಗುತ್ತದೆ ಎಂದು ಅವರು ಹೇಳಿದರು. ಪ್ರತಿಭಟನೆ, ರ್ಯಾಲಿ, ಜಾತ್ರೆ ಮೊದಲಾದವುಗಳಿಗೆ ಹಾಕಿರುವ ನಿರ್ಬಂಧಗಳು ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.
ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗವಹಿಸಿ, ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಮಠದ ದಾಸೋಹ ನಿಲಯದಲ್ಲಿ ಮಕ್ಕಳಿಗೆ ಪ್ರಸಾದ ಬಡಿಸುವ ಮೂಲಕ ದಾಸೋಹ ದಿವಸಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದ ಬಸವರಾಜ, ಶಾಸಕ ಜ್ಯೋತಿ ಗಣೇಶ್ , ಮಾಜಿ ಶಾಸಕ ಸುರೇಶ್ ಗೌಡ ಉಪಸ್ಥಿತರಿದ್ದರು. ಕೊವಿಡ್ ಹಿನ್ನೆಲೆಯಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಗದ್ದುಗೆ ಪೂಜೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ. ಉತ್ಸವ, ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮ ಮಾಡಿದರೆ ಮಠದ ವಿದ್ಯಾರ್ಥಿಗಳು, ಭಕ್ತಾದಿಗಳು ಸೇರುತ್ತಾರೆ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ, ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮಠದ…
ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಡುಗೊಲ್ಲರ ನಿಗಮದ ವಿಚಾರವಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಅವರ ಪತಿ ಡಿ.ಟಿ.ಶ್ರೀನಿವಾಸ್ ಆಂತರಿಕ ವಿರೋಧದ ಧೋರಣೆಯನ್ನು ಹೊಂದಿದ್ದಾರೆಂದು ಬಿ ಜೆ ಪಿ ಪಕ್ಷದ ತಾಲ್ಲೂಕಿನ ಅಧ್ಯಕ್ಷರಾದ ವಿಶ್ವನಾಥ್ ಯಾದವ್ ಅಭಿಪ್ರಾಯಪಟ್ಟರು. ಹಿರಿಯೂರು ನಗರದ ಹೊರವಲಯದಲ್ಲಿರುವ ಕೋಳಿ ಪ್ರಭುಯಾದವ್ , ರವರ ತೋಟದ ಮನೆಯಲ್ಲಿ ಆಯೋಜಿಸಿದ್ದ ಕಾಡುಗೊಲ್ಲರ ಚಿಂತನ-ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಶಾಸಕರು, ಮತ್ತು ಅವರ ಪತಿ ಸೇರಿ ಅಧಿಕಾರ ಪಡೆಯಲು ನಮ್ಮನ್ನ ಬಳಸಿಕೊಂಡು ಸಿಕ್ಕಅಧಿಕಾರದ ಅಮಲಿನಲ್ಲಿ ಕಾಡುಗೊಲ್ಲರಿಗೆ ದ್ರೋಹ ಬಗೆಯುವುದರಲ್ಲಿ ನಿರಂತರವಾಗಿದ್ದಾರೆ ಎಂದು ಆರೋಪಿಸಿದರು. ಬುಡಕಟ್ಟು ಪರಂಪರೆಯನ್ನು ಹೊಂದಿರುವ ಕಾಡುಗೊಲ್ಲ ಸಮಾಜ ಸರ್ಕಾರದ ಹಲವಾರು ಸಲತ್ತುಗಳಿಂದ ವಂಚಿತವಾಗಿದೆ. ಸಮಾಜದಲ್ಲಿನ ಪಟ್ಟಭದ್ರರು ಸಮಾಜವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಆದರೆ ಶಾಸಕಿ ಪೂರ್ಣಿಮಾ ಅವರು ಕುಲಶಾಸ್ತ್ರ ಅಧ್ಯಯನವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ . ಕಾಡುಗೊಲ್ಲ ಅಭಿವೃದ್ದಿ ನಿಗಮದ ಘೋಷಣೆಗೆ ತಡೆಯೊಡ್ಡಿ ವಿಳಂಭ ಧೋರಣೆಗಳೊಂದಿಗೆ ದಿನಗಳನ್ನು ಮಾಡುತ್ತಿದ್ದಾರೆ ಎಂಬುದಾಗಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಾಡುಗೊಲ್ಲ ಸಮಾಜದ…
ಸೇಂಟ್ ಪಾಲ್(ಅಮೆರಿಕ): ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದ ಫೆಡರಲ್ ವಿಚಾರಣೆಗೆಂದು ನೇಮಿಸಲಾದ 18 ಮಂದಿ ಜ್ಯೂರಿಗಳ ತಂಡದಲ್ಲಿ ಹೆಚ್ಚಿನ ಶ್ವೇತ ವರ್ಣೀಯರನ್ನು ಆಯ್ಕೆ ಮಾಡಲಾಗಿದೆ. ಈ ಜ್ಯೂರಿಗಳನ್ನು ಟೌ ತಾವೋ, ಥಾಮಸ್ ಲೇನ್ ಮತ್ತು ಜೆ.ಕುಯೆಂಗ್ ಈ ಅಧಿಕಾರಿಗಳ ವಿರುದ್ಧದ ತನಿಖೆಗಾಗಿ ನೇಮಿಸಲಾಗಿದೆ. 12 ಜ್ಯೂರಿಗಳ ಪೈಕಿ ಓರ್ವ ಏಷ್ಯನ್ ಮೂಲದವರೂ ಸೇರಿದ್ದಾರೆ. ಯಾವುದೇ ಪರ್ಯಾಯ ವ್ಯಕ್ತಿಗಳ ಅಗತ್ಯವಿಲ್ಲದಿದ್ದರೆ ಏಷ್ಯನ್ ಮೂಲದ ಎರಡನೇ ವ್ಯಕ್ತಿಯು ಆರು ಬದಲಿ ಜ್ಯೂರಿಗಳಲ್ಲಿರಲಿದ್ದಾರೆ. ಉಳಿದೆಲ್ಲರೂ ಶ್ವೇತ ವರ್ಣೀಯರಾಗಿದ್ದಾರೆ. ನ್ಯಾಯಾಲಯವು ಜನಾಂಗೀಯ ಮಾಹಿತಿ ನೀಡಲು ನಿರಾಕರಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪ್ರಸಕ್ತ ಸಾಲಿನ ವೈದ್ಯಕೀಯ ಶಿಕ್ಷಣ ಪ್ರವೇಶದ ವೇಳೆ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು, ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಶೇ.10ರಷ್ಟು ಮೀಸಲಾತಿ ಪಾಲನೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.ರಾಜ್ಯ ಸರ್ಕಾರಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ, ಜನವರಿ 7ರಂದು ನೀಡಲಾದ ಆದೇಶವನ್ನು ಎತ್ತಿ ಹಿಡಿದಿದೆ. 2021-22ರ ಎನ್ಇಇಟಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿಯನ್ನು ಅನುಮತಿಸುವ ಕೇಂದ್ರ ಸರ್ಕಾರದ ನಿರ್ಧಾರ ಸಾಂವಿಧಾನ ಬದ್ಧವಾಗಿದೆ ಎಂದು ಅಕೃತ ಮುದ್ರೆ ಒತ್ತಿದೆ.ಹೆಚ್ಚಿನ ಅಂಕಗಳು ಅರ್ಹತೆಯ ಏಕೈಕ ಮಾನದಂಡವಲ್ಲ . ಜೇಷ್ಠತೆ ಪರಿಗಣನೆಯ ವೇಳೆ ಸಾಮಾಜಿಕ ಮತ್ತು ಆರ್ಥಿಕ ಹಿನ್ನೆಲೆಯನ್ನು ಸಂದರ್ಭೋಚಿತವಾಗಿ ಗಣನೆಗೆ ತೆಗೆದುಕೊಳ್ಳಬೇಕು. ದುಳಿದಿರುವಿಕೆಯನ್ನು ನಿವಾರಿಸುವಲ್ಲಿ ಮೀಸಲಾತಿಯ ಪಾತ್ರವನ್ನು ನಿರಾಕರಿಸಲಾಗುವುದಿಲ್ಲ. ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ, ಬದಲಾಗಿ ಸಾಮಾಜಿಕ ನ್ಯಾಯದ ಪರಿಣಾಮಗಳನ್ನು ಹೆಚ್ಚಿಸುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ.ಎಂಟು ಲಕ್ಷ ವಾರ್ಷಿಕ ಆದಾಯ ಹೊಂದಿರುವವ ಆರ್ಥಿಕ ದುರ್ಬಲ ವರ್ಗದವರು ಈ ಬಾರಿ…
ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂ ದ ಕೊರೊನಾ ತಪಾಸಣೆ ನಡೆಸಿದ ಕೇವಲ 24 ಗಂಟೆಯೊಳಗೆ ತಪಾಸಣಾ ವರದಿ ಕೈಸೇರುವಂತೆ ಹೊಸ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಪಾಸಣೆಗೆ 318 ಟ್ರಯಾಜನ್ ಟೀಮ್ ಗಳನ್ನು ರಚಿಸಲಾಗಿದೆ. ತಂಡದಲ್ಲಿ 3,000ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ವಿವರಣೆ ನೀಡಿದರು. ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿರುವುದರಿಂದ ನಾವು ಸೋಂಕು ತಡೆಗಟ್ಟಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು. ನಗರದಲ್ಲಿ ಮೊಬೈಲ್ ಟೆಸ್ಟಿಂಗ್ ಹಾಗೂ ಮೊಬೈಲ್ ಟ್ರಯಾಜನ್ ಸೆಂಟರ್ ವ್ಯವಸ್ಥೆ ಮಾಡಲಾಗಿದೆ. ತಪಾಸಣೆ ನಡೆಸಿದ 24 ಗಂಟೆಯೊಳಗೆ ವರದಿ ನಮ್ಮ ಕೈ ಸೇರಲಿದೆ ಎಂದು ಗೌರವ್ ಗುಪ್ತಾ ತಿಳಿಸಿದರು. ಸೋಂಕಿತರಿಗೆ ಹಾಸಿಗೆ ಬೇಡಿಕೆ ಈಗಲೂ ಇದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿಯ ಟ್ರಯಾಜನ್ ಕೇಂದ್ರಗಳಲ್ಲಿ…
ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಪಾಕಿಸ್ತಾನ ನ್ಯಾಯಾಲಯ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಫಾರೂಕ್ ಹಸ್ಸಂತ್ ಅವರು ಮಹಿಳೆಯ ವಿರುದ್ಧ ದೂರು ದಾಖಲಿಸಿದರು. ಅನಿಕಾ ವಾಟ್ಸಾಪ್ ನಲ್ಲಿ ಪ್ರವಾದಿ ಮಹಮ್ಮದ್ ವ್ಯಂಗ್ಯ ಚಿತ್ರಗಳನ್ನು ರವಾನೆ ಮಾಡಿ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಮತ್ತು ಸೈಬರ್ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ದಾಖಲಾಗಿತು. ವಿಚಿತ್ರವೆಂದರೆ ದೂರುದಾರ ಫಾರೂಕ್ ಮತ್ತು ಆರೋಪಿತೆ ಅನಿಕಾ ಪರಸ್ಪರ ಸ್ನೇಹಿತರಾಗಿದ್ದರು. ಆದರೆ ಇಬ್ಬರ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಫಾರೂಕ್ ಮಹಿಳೆಯ ವಿರುದ್ಧ ದೂರು ನೀಡಿದ್ದು, ಆಕೆ ಉದ್ದೇಶಪೂರ್ವಕವಾಗಿ ಪ್ರವಾದಿ ಅವರ ಅವಹೇಳನ ಮಾಡಿದ್ದಾಳೆ, ಫೆಸ್ಬುಕ್ ಖಾತೆಯಲ್ಲೂ ಧರ್ಮನಿಂದನೆಯ ಸಂದೇಶಗಳನ್ನು ಹರಡಿದ್ದಾಳೆ. ನೀತಿವಂತ ಧರ್ಮಿಯರನ್ನು ಅಪಮಾನಿಸಿ, ಮುಸ್ಲಿಂರ ಭಾವನೆಗಳನ್ನು ಅಗೌರವಿಸಿದ್ದಾರೆ ಎಂದು ಆರೋಪಿಸಿದ್ದರು. ಸಂದೇಶಗಳನ್ನು ಡಿಲಿಟ್ ಮಾಡಿ, ಕ್ಷಮೆ ಕೇಳುವಂತೆ ತಾವು ಆಗ್ರಹಿಸಿದ್ದು,…
ಭಾರತದಲ್ಲಿ ಹೊಸದಾಗಿ 3,47,254 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,85,66,027ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಾಜಾ ಮಾಹಿತಿ ನೀಡಿದೆ. ಈ ಪೈಕಿ 9,692 ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಸೇರಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೇರಿದೆ. ಇದು 235 ದಿನಗಳಲ್ಲೇ ಅತ್ಯಕ ಪ್ರಮಾಣವಾಗಿದೆ. ಕಳೆದ 24 ಗಂಟೆಗಳಲ್ಲಿ 703 ಮಂದಿ ಕೋವಿಡ್ಗೆ ಬಲಿಯಾಗುವುದರೊಂದಿಗೆ ಒಟ್ಟಾರೆ ಕೋವಿಡ್ ಮರಣಗಳ ಪ್ರಮಾಣ 4,88,396ಕ್ಕೆ ತಲುಪಿದೆ. ಗುರುವಾರದಿಂದೀಚೆಗೆ ಓಮಿಕ್ರಾನ್ ಪ್ರಕರಣಗಳಲ್ಲಿ ಶೇ.4.36ರಷ್ಟು ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟಾರೆ ಸೋಂಕಿನ ಪ್ರಕರಣಗಳಲ್ಲಿ ಶೇ.5.23ರಷ್ಟು ಸಕ್ರಿಯ ಪ್ರಕರಣಗಳಿವೆ.ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ.93.50ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿದೆ. ಕಳೆದ ಒಂದು ದಿನದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 94,774ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವಿವರಿಸಿದೆ. ವರದಿ : ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು, ಮಾಜಿ ಸಚಿವ ಡಿ.ಸುಧಾಕರ್ ಅವರು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಪಕ್ಷ ಸಂಘಟನೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷರಾದ ದೃವನಾರಾಯಣ್ ಹಾಗೂ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಖಾದಿ ರಮೇಶ್ ರವರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ನಿರ್ವಾಣ ಹೊಂದಿ ಇವತ್ತಿಗೆ ಮೂರು ವರ್ಷಗಳು ತುಂಬಿದವು. ಮೂರು ವರ್ಷಗಳ ಹಿಂದೆ ಅವರು ನಿರ್ವಾಣ ಹೊಂದಿದ ದಿನದಂದು ನಾನು ಬರೆದಿದ್ದ ಹಳೆಯ ಲೇಖನವನ್ನು ಮತ್ತೊಮ್ಮೆ ಹಂಚಿಕೊಳ್ಳುತ್ತಿದ್ದೇನೆ. ನಾನು ತುಮಕೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯದ ವಿದ್ಯಾರ್ಥಿಯಾಗಿ ಬಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳು. ಸಿದ್ಧಗಂಗಾ ಮಠದಲ್ಲಿ ಆಗಾಗ ನಡೆಯುತ್ತಿದ್ದ ಶಿವಾನುಭವ ಗೋಷ್ಠಿಗಳಲ್ಲಿ ಪಾಲ್ಗೊಂಡು ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ತುಂಬಾ ಹತ್ತಿರದಿಂದ ಕಂಡುಂಡ ಕೆಲವು ಅನುಭವಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿಚ್ಚಿಸುತ್ತೇನೆ. ಶ್ರೀಮಠದ ಹಳೆಯ ಕಲ್ಯಾಣಿ ದಂಡೆಯ ರೂಮಿನಲ್ಲಿ ನನ್ನ ಆತ್ಮೀಯ ಗೆಳೆಯರಾದ ಎಚ್.ಎನ್.ವೆಂಕಟೇಶ್, ಡಿಸ್ಕೋ ಮಲ್ಲಿಕಾರ್ಜುನ, ಶಂಭುಲಿಂಗಯ್ಯ, ಶಿವಶಂಕರ್, ಶಾಂತರಾಜು ಮುಂತಾದ ಮಠದ ವಿದ್ಯಾರ್ಥಿಗಳ ಸಹವಾಸದಿಂದಾಗಿ ನನಗೂ ಶ್ರೀಮಠಕ್ಕೂ ತುಂಬಾ ನಿಕಟ ಬಾಂಧವ್ಯ ಏರ್ಪಟ್ಟಿತು. ಸರ್ಕಾರಿ ಕಲಾ ಕಾಲೇಜಿನ, ಬೆಂಗಳೂರು ಗೇಟಿನ ಸೆಕೆಂಡ್ ಹಾಸ್ಟೆಲಿನಲ್ಲಿ ನಿಲಯಾರ್ಥಿಯಾಗಿದ್ದ ನಾನು, ದಲಿತ ವಿದ್ಯಾರ್ಥಿ ಒಕ್ಕೂಟದ ನಾಯಕನಾಗಿದ್ದೆ. ನಮಗಾಗ ಬೇಸಿಗೆ ರಜೆ ಬಂತೆಂದರೆ ಹಾಸ್ಟೆಲ್ ನಿಲ್ಲಿಸಿಬಿಡುತ್ತಿದ್ದರು. ಹಾಸ್ಟೆಲ್ ನಿಲ್ಲಿಸಿದರೆಂದರೆ ನಿಲಯಾರ್ಥಿಗಳಿಗೆ…