Subscribe to Updates
Get the latest creative news from FooBar about art, design and business.
- ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
- ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
- ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
- ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
- ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
- ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
- ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
Author: admin
ಸರಗೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಹೆಚ್.ಡಿ.ಕೋಟೆಯ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಚಿಕ್ಕಣ್ಣನವರ ಪುತ್ರರಾದ ಜಯಪ್ರಕಾಶ್ ಚಿಕ್ಕಣ್ಣ ಸ್ನೇಹ ಬಳಗದ ವತಿಯಿಂದ, ಜೆಡಿಎಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಿನೋದ್ ಪ್ರಸಾದ್ ಕೆ.ಟಿ.ಎಸ್ ರವರ ನೇತೃತ್ವದಲ್ಲಿ ವಿಶೇಷ ಚೇತನ ಶಾಲೆಯ ಮಕ್ಕಳಿಗೆ ಸಿಹಿ ಹಂಚಿದರು. ಶಾಲೆಯ ಆವರಣದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಮಕ್ಕಳಿಗೆ ರಾತ್ರಿಯ ಊಟದ ವ್ಯವಸ್ಥೆ ಮಾಡುವುದರ ಮೂಲಕ ಅತ್ಯಂತ ಸರಳವಾಗಿ, ಅರ್ಥಪೂರ್ಣವಾಗಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ವೇಳೆ ಶಾಲೆಯ ಮುಖ್ಯಸ್ಥರಾದ ಸತೀಶ್ ಕ್ಯಾತನಹಳ್ಳಿ ರವರು ಆನ್ ಲೈನ್ ಮೂಲಕ ಮಕ್ಕಳೊಂದಿಗೆ ಹೆಚ್.ಡಿ.ದೇವೇಗೌಡ ರವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಮುಖಂಡರು, ಜೆಡಿಎಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಿನೋದ್ ಪ್ರಸಾದ್ ಕೆ.ಟಿ.ಎಸ್ ಮಾತನಾಡಿದರು. ಈ ಸಂದರ್ಭದಲ್ಲಿ H.D.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಯುವ ಮುಖಂಡರುಗಳಾದ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ವಿನೋದ್ ಪ್ರಸಾದ್ ಕುರ್ಣೇಗಾಲ, ಚೇತನ್, ಸಿದ್ದರಾಜು, ಹೊಮ್ಮರಗಳ್ಳಿ ಜಗದೀಶ್,…
ಗುಬ್ಬಿ: ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ಮಗನ ಮನೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಒಮ್ಮೆ ತುರುವೇಕೆರೆ ತಾಲ್ಲೂಕು ಬೋರ್ಡ್ ಸದಸ್ಯರಾಗಿದ್ದರು. ಡಿಪ್ಲೊಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶಿವಣ್ಣ ಅವರು ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ…
ಗುಬ್ಬಿ: ಬಿಜೆಪಿ ಪಕ್ಷ ಕೋಮುಪ್ರಚೋದನೆ ಸೃಷ್ಟಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅತೀಕ್ ಅಹಮದ್ ಒತ್ತಾಯಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ದಲ್ಲಿರುವ ಬಿಜೆಪಿ ಸರ್ಕಾರ ನಿತ್ಯ ವು ಕೋಮುಪ್ರಚೋದನೆ ನೀಡುವ ಮೂಲಕ ಗಲಭೆ ಸೃಷ್ಟಿಸುವುದು ನಿಲ್ಲಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಗುಬ್ಬಿ ನಗರದ ಪ್ರವಾಸಿ ಮಂದಿರದಲ್ಲಿ ದಿ.22ರಂದು ತುಮಕೂರಿನ ಗಾಜಿನಮನೆಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಸಮಾವೇಶ ದ ಕುರಿತು ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುಪ್ರಚೋದನೆ ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಗಲಭೆ ಉಂಟು ಮಾಡುವ ಬದಲು ರಾಜ್ಯ ದ ಅಭಿವೃದ್ಧಿ ಗೆ ಹೆಚ್ಚಿನ ಒತ್ತು ನೀಡುವ ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಮನಹರಿಸಲಿ ಎಂದರು. ಕೇವಲ ಒಂದು ಸಮುದಾಯವನ್ನು ರಾಜ್ಯದ ಲ್ಲಿ ಶೋಷಣೆಗೆ ಒಳಗಾಗುವಂತೆ ಮಾಡಿದರೆ, ಅದು ರಾಜ್ಯದ ಅಭಿವೃದ್ಧಿ ಗೆ ಮಾರಕವಾಗುತ್ತದೆ. ಇಂದು ನಿತ್ಯವೂ ಒಂದಲ್ಲ ಒಂದು ರೀತಿಯಲ್ಲಿ ಮುಸ್ಲಿಂ. ದಲಿತ. ಕ್ರೈಸ್ತ. ಹಾಗೂ ಇತರೆ ಹಿಂದುಳಿದವರು ಅಲ್ಪ ಸಂಖ್ಯಾತರ ಮೇಲೆ…
ಖ್ಯಾತ ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಸ್ನೇಹಿತ ಶರತ್ ಜಿ. ನಾಯರ್ ರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ. ನಾಯರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ. ನಾಯರ್ ಭೇಟಿ ನೀಡಿದ್ದಾರೆ ಎಂಬ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಅವರು, ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಂಚು ರೂಪಿಸಿದ್ದ ಆಡಿಯೋ ಟಿವಿಗಳಲ್ಲಿ ಪ್ರಸಾರವಾದ ಬಳಿಕ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಉದ್ದೇಶಪೂರ್ವಕವಾಗಿ ತನ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ತನಿಖಾಧಿಕಾರಿ ಯತ್ನಿಸಿದ್ದಾರೆ ಎಂದು ದಿಲೀಪ್ ಆರೋಪಿಸಿದ್ದರು. ತಮಿಳು, ತೆಲುಗು, ಮಲಯಾಳಂ, ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಖ್ಯಾತಿ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ…
ತೀವ್ರ ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರುವ ಶ್ರೀಲಂಕಾಕ್ಕೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಕ್ಕೆ ಪೆಟ್ರೋಲ್ ಸರಬರಾಜು ಮಾಡುತ್ತಿದ್ದು ಇದರಿಂದಾಗಿ ಸ್ವಲ್ಪ ಮಟ್ಟಿಗೆ ಸರ್ಕಾರ ಮತ್ತು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದ್ದು, ಜನರು ಪರಿತಪಿಸುವಂತಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಮಾತ್ರ ಪೆಟ್ರೋಲ್ ಇದೇ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿನ್ನೆಯಷ್ಟೇ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತ ಪೆಟ್ರೋಲ್ ಸರಬರಾಜು ಮಾಡುತ್ತಿದೆ. ಎರಡು ಹಂತಗಳಲ್ಲಿ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ. ಇದು ಭಾರತೀಯ ಕ್ರೆಡಿಟ್ ಲೈನ್ಯಡಿಯಲ್ಲಿ ಮೇ ೧೮ ಮತ್ತು 19 ರಂದು ಬರಲಿದೆ ಎಂದು ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು 75 ದಶಲಕ್ಷ ಅಮೆರಿಕನ್ ಡಾಲರ್ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯ ಡಾಲರ್ಗಳನ್ನು ಪಡೆಯಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಅವರು ತಿಳಿಸಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1 ಕೆ.ಜಿ. ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಹಾಗೂ ಆಕೆಯ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ಮಗಳು ದೀಪ್ತಿ ಹಾಗೂ ಮದನ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ. ಬಂಧಿತರಿಂದ 36 ಲಕ್ಷ ಮೌಲ್ಯದ 725 ಗ್ರಾಂ. ತೂಕದ ವಿವಿಧ ಚಿನ್ನದ ಆಭರಣಗಳು ಹಾಗೂ ಕಳವು ಮಾಡಿದ ಆಭರಣಗಳ ಮಾರಾಟದಿಂದ ಬಂದ ಹಣದಿಂದ ಖರೀದಿಸಿದ್ದ ಸುಮಾರು 6 ಲಕ್ಷ ರೂ. ಬೆಲೆಬಾಳುವ 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಕ್ಕೂರು ಲೇಔಟ್ ನಲ್ಲಿ ರತ್ನಮ್ಮ ಹಾಗೂ ಪುತ್ರಿ ದೀಪ್ತಿ ವಾಸವಾಗಿದ್ದರು. ರತ್ನಮ್ಮ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ಈಗಾಗಲೇ ವಿವಾಹವಾಗಿದ್ದ ದೀಪ್ತಿಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಳು. ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್ ಗೆ…
ರಾಜ್ಯದಲ್ಲಿ ಉದ್ಯಮಸ್ನೇಹಿ, ಕೈಗಾರಿಕಾ ಸ್ನೇಹಿ ವಾತಾವರಣ ಇದ್ದು, ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತ ಆಹ್ವಾನ ನೀಡಿದ್ದಾರೆ. ಬೆಂಗಳೂರು-ತುಮಕೂರು ರಸ್ತೆಯ ನೆಲಮಂಗಲದ ಮಾದಾವರ ಬಳಿ ಇರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿಂದು ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸೋಕಾನ್ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ಸರ್ಕಾರ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸಲಿದೆ ಎಂದರು. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಉದ್ಯಮಸ್ನೇಹಿ ವಾತಾವರಣವಿದೆ. ಹಾಗಾಗಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಅವರು ಆಹ್ವಾನ ನೀಡಿದರು. ಉದ್ಯಮಿಗಳಿಗಾಗಿ ಸರ್ಕಾರದ ರಿಯಾಯ್ತಿ ಸೌಲಭ್ಯಗಳು, ಸವಲತ್ತುಗಳು, ಕೌಶಲ್ಯಯುತ ಉದ್ಯೋಗಿಗಳ ಲಭ್ಯತೆ ಎಲ್ಲವನ್ನು ಎಳೆ ಎಳೆಯಾಗಿ ವಿವರಿಸಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ತಮ ವಾತಾವರಣ ಇದೆ ಎಂದರು. ಕರ್ನಾಟಕ ಮೊದಲಿನಿಂದಲೂ ಬಂಡವಾಳ ಹೂಡಿಕೆದಾರರಿಗೆ ಉತ್ತಮ ನೆಲೆಯಾಗಿದೆ. ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂಡವಾಳಗಾರರು ಹೂಡಿಕೆಗಾಗಿ ಬರುತ್ತಿದ್ದಾರೆ ಎಂದರು. ರಾಜ್ಯಕ್ಕೆ ಹೆಚ್ಚಿನ ಬಂಡವಾಳವನ್ನು ಆಕರ್ಷಿಸಲು ರಾಜ್ಯ ಸರ್ಕಾರ ಬರುವ ನವೆಂಬರ್ನಲ್ಲಿ ಬಂಡವಾಳ ಹೂಡಿಕೆ…
ಸರಗೂರು: ರಾಜ್ಯದಲ್ಲಿ ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಒಗ್ಗಟ್ಟಾಗಿ ಒಂದು ವೇದಿಕೆಯನ್ನು ಸೃಷ್ಟಿಸಿಕೊಂಡು ಪ.ಜಾತಿ ಮತ್ತು ಪ.ಪಂಗಡಗಳ ಜನರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸರಗೂರು ಸಂವಿಧಾನ ರಕ್ಷಣಾ ಸಮಿತಿ ಪತ್ರ ಚಳುವಳಿಯ ಮೂಲಕ ಎಚ್ಚರಿಕೆ ನೀಡಿದೆ. ಪಟ್ಟಣದ ಅಂಚೆ ಕಛೇರಿ ಆವರಣದಲ್ಲಿ ಜಮಾಯಿಸಿದ ಸಂವಿಧಾನ ರಕ್ಷಣಾ ಸಮಿತಿಯ ಸದಸ್ಯರು, ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರುಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಪ.ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಪಕ್ಷಭೇದವನ್ನು ಮರೆತು ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂವಿಧಾನ ರಕ್ಷಣಾ ಸಮಿತಿಯ ಖಜಾಂಚಿ ಗ್ರಾಮೀಣ ಮಹೇಶ್, ರಾಜ್ಯದಲ್ಲಿ ಸಂವಿಧಾನದ ಮೂಲ ಆಶಯ ಬುಡಮೇಲಾಗುತ್ತಿದ್ದು, ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿ ದೂರದ ಮಾತಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಮೀಸಲಾತಿಯಿಂದ ಗೆದ್ದಂತಹ ರಾಜ್ಯದ ಶಾಸಕರು ಪಕ್ಷಕ್ಕಾಗಿ ದುಡಿಯುವುದನ್ನು ಬಿಟ್ಟು ಪಕ್ಷಭೇದ ಮರೆತು ಒಗ್ಗಟ್ಟಾಗಿ ಶೋಷಿತರ ಅಭಿವೃದ್ಧಿಯ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಮೇಲ್ವರ್ಗದವರಿಗೆ ಜಾತಿಗೊಂದು…
ಹಿರಿಯೂರು : ಭಾರತ ಸ್ವತಂತ್ರ್ಯ ಪಡೆದು 75 ವರ್ಷಗಳು ಕಳೆದಿದ್ದು, ಈ ಅಮೃತ ಮಹೋತ್ಸವದ ಸಂಭ್ರಮದ ಅಂಗವಾಗಿ ಶಿಕ್ಷಣ, ಆರೋಗ್ಯ, ಕೃಷಿ ಈ ಮೂರು ಕ್ಷೇತ್ರಗಳಿಗೆ ಆದ್ಯತೆ ನೀಡಬೇಕೆಂಬ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲ್ಲೂಕಿನ ಐಮಂಗಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮೊದಲು ಹೋಬಳಿ ಮಟ್ಟದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲು ಸರ್ಕಾರ ಮುಂದಾಗಿದ್ದು, ಜೀವನದಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಮುಂದೂಡಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಐಮಂಗಲ, ಮರಡಿಹಳ್ಳಿ, ಬುರುಜಿನರೊಪ್ಪ, ಸೂರಗೊಂಡನಹಳ್ಳಿ, ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಕೆಇಬಿ ಕಚೇರಿ ಮುಂಭಾಗ ದೊಡ್ಡ ಆಲದಮರ ಬಿದ್ದು, ಹುಳಿಯಾರು – ತಿಪಟೂರು ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ವಿದ್ಯುತ್ ತಂತಿಯ ಮೇಲೆಯೇ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿರುವುದಲ್ಲದೇ ಈ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿದೆ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಈ ಮಾರ್ಗದ ಬದಿಯಲ್ಲಿ ಹಳೆಯ ಕಾಲದ ಸಾಕಷ್ಟು ಮರಗಳಿದ್ದು, ಗಾಳಿ, ಮಳೆಗಳ ಸಂದರ್ಭದಲ್ಲಿ ರಸ್ತೆಗೆ ಬೀಳುತ್ತಿವೆ. ಪದೇ ಪದೇ ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಸಂಬಂಧ ಪಟ್ಟವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚಲಿಸುತ್ತಿರುವ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು, ಸಾವು ನೋವು ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ವರದಿ: ಆನಂದ ತಿಪಟೂರು…