Subscribe to Updates
Get the latest creative news from FooBar about art, design and business.
- ಕುಣಿಗಲ್ | ಬೈಕ್ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
Author: admin
ಮಧುಗಿರಿ: ತಾಲೂಕಿನ ಐ. ಡಿ ಹಳ್ಳಿ ಹೋಬಳಿಯಲ್ಲಿ ನೂತನ ರೈತ ಸಂಪರ್ಕ ಕಟ್ಟಡಕ್ಕೆ ಜನಪ್ರಿಯ ಶಾಸಕರಾದ ಎಂ.ವಿ ವೀರಭದ್ರಯ್ಯ ನವರು ಭೂಮಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ನಾನು ಐಡಿಹಳ್ಳಿ ಹೋಬಳಿಗೆ ಮುಂದುವರೆದು ಹೆಚ್ಚಿನ ಅನುದಾನ ಕೊಟ್ಟು ಅಭಿವೃದ್ಧಿ ಪಡಿಸಿದ್ದೇನೆ. ಈ ಅಭಿವೃದ್ಧಿ ವಿಚಾರಕ್ಕೆ ಬಂದರೆ ಸಿಸಿ ರಸ್ತೆ, ಶಾಲೆಗಳಿಗೆ ಕಾಂಪೌಂಡ್, ಸ್ಕೂಲ್ ರಂಗಮಂದಿರ , ಬಸ್ ಸ್ಟಾಂಡ್ ಮುಂಭಾಗ 30 ಲಕ್ಷ ರೂಪಾಯಿ ಸಿಸಿ ರಸ್ತೆ ಕಾಮಗಾರಿ, ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದು, ಮತ್ತು ಶೀಘ್ರದಲ್ಲಿಯೇ ಬಸ್ ಸ್ಟಾಂಡ್ ನಲ್ಲಿ ಶೌಚಾಲಯ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಮುಖಂಡರುಗಳಾದ ವೆಂಕಟರಂಗಾರೆಡ್ಡಿ ಆರ್. ಕೆ ರೆಡ್ಡಿ, ರಿಯಾಜ್ ಅಹಮದ್, ಲಿಂಗಪ್ಪ ಎಲ್. ಐ. ಸಿ. ಮಂಜುನಾಥ್, ಜಿಲಾನ್ , ವಕೀಲರಾದ ನರಸಿಂಹಮೂರ್ತಿ , ವಜೀರ್ ಬಾಷಾ , ಕೃಷಿಕ ಸಮಾಜದ ಅಧ್ಯಕ್ಷರಾದ, ಚನ್ನ ಲಿಂಗಪ್ಪ ಸದಸ್ಯರಾದ ಸಿದ್ಧಾರೆಡ್ಡಿ , ಉಮೇಶ್ ಕೃಷಿ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಕೃಷಿ ಅಧಿಕಾರಿ…
ತುಮಕೂರು: ನಾವು ನ್ಯಾಯ ಮತ್ತು ಧರ್ಮಕ್ಕೆ ಹೆಸರಾದ ಶ್ರೀರಾಮನ ಯಾವ ಗುಣಗಳನ್ನು ಪಾಲಿಸುತ್ತಿದ್ದೇವೆ ಎಂಬ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಹಾಗೂ ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸವ್ಯಸಾಚಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಚಿಕಾಗೋ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮೀ ವಿವೇಕಾನಂದರು ಪ್ರತಿಪಾದಿಸಿದ, ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದೂ ಧರ್ಮವಾಗಿ ಈಗ ಉಳಿದಿದೆಯೇ ಎಂಬುದನ್ನು ನಾವು ಹಿಂದಿರುಗಿ ನೋಡಬೇಕಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಪಾದಿಸಿದ ಸಮಾನತೆ, ಸಾಮರಸ್ಯ, ಬಾತೃತ್ವವನ್ನು ಒಳಗೊಂಡ ಧರ್ಮದ ಅಗತ್ಯವಿದೆ ಎಂದರು. ಭಾರತ ಒಂದು ಕಾಲದಲ್ಲಿ ಪಾಶ್ಚಿಮಾತ್ಯರಿಗೆ ಮಾದರಿಯಾಗಿದ್ದ ದೇಶ. ನಳಂದ, ತಕ್ಷಶಿಲೆಯಂತಹ ವಿಶ್ವವಿದ್ಯಾಲಯಗಳಿಗೆ ದೇಶ, ವಿದೇಶಗಳ ಜನರು ಕಲಿಯಲು ಬರುತ್ತಿದ್ದರು.ಸಹಿಷ್ಣತೆ ಮತ್ತು ಶಾಂತಿ ಭಯಸುವ ಭಾರತ ಇಂದಿಗೆ ಅಗತ್ಯವಾಗಿದೆ. ವಿನೋಧ ಭಾವೆಯವರ ಒಂದು ಮಾತಿಗೆ ಬೆಲೆ ಕೊಟ್ಟು,ಶಿಕ್ಷಣದಿಂದ ಬದಲಾವಣೆ ಸಾಧ್ಯ ಎಂದು ನಂಬಿ ನನ್ನ…
ಜಲಶ್ಯಾಮಲದಿಂದ ಸಸ್ಯಶಾಮಲ ಎಂಬ ಧ್ಯೇಯದೊಂದಿಗೆ ಜೆಡಿಎಸ್ ಹಮ್ಮಿಕೊಳ್ಳಲಿರುವ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮದ ಸಿದ್ಧತೆ ಪೂರ್ಣ ಗೊಂಡಿದ್ದು, ಏ.12ರಂದು ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಚಾಲನೆ ನೀಡಲಾಗುತ್ತದೆ. ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರು ಜನತಾ ಜಲಧಾರೆ ಯಾತ್ರಾ ರಥಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶೇಷವಾಗಿ ವಿನ್ಯಾಸಗೊಳಿಸಿರುವ 15 ಗಂಗಾರಥಗಳು 31 ಜಿಲ್ಲೆಗಳ 184 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ರಾಮನಗರದಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ರಥಗಳು ಏ.16ರಂದು ನಿಗದಿ ಮಾಡಿರುವ ಸ್ಥಳಗಳಲ್ಲಿ ಜಲಸಂಗ್ರಹ ಮಾಡಲಿವೆ.15 ನದಿಗಳಿಂದ ಏಕಕಾಲದಲ್ಲಿ ಪವಿತ್ರ ಜಲವನ್ನು ಸಂಗ್ರಹ ಮಾಡಲಾಗುತ್ತದೆ. ಔರಾದ್ ತಾಲ್ಲೂಕಿನ ಮಾಂಜ್ರಾ, ಆಲಮಟ್ಟಿ , ತುಂಗಭದ್ರಾ ಅಣೆಕಟ್ಟೆ, ಕೆಆರ್ ಎಸ್, ಕಬಿನಿ, ಎತ್ತಿನ…
ಪೊಲೀಸ್ ಇಲಾಖೆಯ 545 ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಪರೀಕ್ಷೆ ನಡೆದು ತಾತ್ಕಾಲಿಕ ನೇಮಕಾತಿ ಪಟ್ಟಿಯೂ ಪ್ರಕಟವಾಗಿದೆ.ಆದಾದ ನಂತರ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಫ್ ಐಆರ್ ಸಹ ದಾಖಲಾಗಿದೆ. ಕಲಬುರ್ಗಿಯ ಜ್ಞಾನಜ್ಯೋತಿ ಪ್ರೌಢಶಾಲೆಯ ಕೇಂದ್ರದಲ್ಲಿ ಅಕ್ರಮ ನಡೆದಿರುವ ಅನುಮಾನವಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಸಿಐಡಿಯ ಒಂದು ತಂಡವನ್ನು ಕಲಬುರ್ಗಿಗೆ ಕಳುಹಿಸಲಾಗಿದೆ ಎಂದರು. ವಿರೇಶ್ ಎಂಬ ಅಭ್ಯರ್ಥಿ ಬರೆದಿದ್ದ ಪರೀಕ್ಷೆಯ ಅಭ್ಯರ್ಥಿಯ ಒಎಂಆರ್ ಶೀಟ್ನಲ್ಲಿ 21 ಅಂಕ ಬಂದಿದ್ದರೆ, ಮೌಲ್ಯಮಾಪನ ಮಾಡಿದ ಮೂಲ ಪ್ರತಿಯಲ್ಲಿ 101 ಅಂಕಗಳು ಬಂದಿದೆ. ಈ ಸಂಬಂಧ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಪ್ರತಿಭಾವಂತರು ಕಷ್ಟಪಟ್ಟು…
ರಾಜಾಜಿನಗರದ ಶ್ರೀ ರಾಮಮಂದಿರ ಆಟದ ಮೈದಾನದಲ್ಲಿ ಜನರು ಕುಳಿತುಕೊಳ್ಳುವ ಗ್ಯಾಲರಿ, ಟೆನ್ಸಿಲ್ ರೂಫ್, ರಕ್ಷಣಾ ಬೇಲಿ, ಹೊನಲು ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು 6ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಸುರೇಶ್ಕುಮಾರ್ ಹೇಳಿದರು. ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆಟದ ಮೈದಾನದ ನವೀಕರಣ ಕಾಮಗಾರಿಯನ್ನು ಐದು ತಿಂಗಳಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಆಟದ ಮೈದಾನವನ್ನು ಲೋಕರ್ಪಣೆ ಮಾಡಲಾಗುವುದು ಎಂದು ಹೇಳಿದರು. ಶ್ರೀ ರಾಮಮಂದಿರ ಆಟದ ಮೈದಾನ ರಾಮಲೀಲಾ ಮೈದಾನದಷ್ಟೆ ಪ್ರಸಿದ್ಧಿ ಪಡೆದಿದೆ. ರಾಷ್ಟದ ಮಹಾನ್ ನಾಯಕರು ಶ್ರೀ ರಾಮಮಂದಿರ ಆಟದ ಮೈದಾನಕ್ಕೆ ಭೇಟಿ ನೀಡಿದ್ದಾರೆ. ಈ ಜಾಗವನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಿಗದಿತ ಅವಯಲ್ಲಿ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗುವುದು ಎಂದರು. ಸಂಸದ ಪಿ.ಸಿ.ಮೋಹನ್ ಮಾತನಾಡಿ, ಶ್ರೀ ರಾಮಮಂದಿರ ಆಟದ ಮೈದಾನ ಇತಿಹಾಸವುಳ್ಳ ಕ್ರೀಡಾಂಗಣವಾಗಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರಂತಹ ನಾಯಕರು ಈ ಆಟದ ಮೈದಾನದಲ್ಲಿ ಬಹಿರಂಗ ಸಭೆ ಮಾಡಿದ ಇತಿಹಾಸವಿದೆ. ಕ್ರೀಡಾ…
ತಿಪಟೂರು : ನಗರದ ವಿನೋದ ಚಿತ್ರಮಂದಿರದ ಪಕ್ಕದಲ್ಲಿನ ವೀರ ಆಂಜನೇಯ ದೇವಾಲಯದ ಮೇಲ್ಚಾವಣಿಯನನ್ನು ಮುರಿದು ತಡ ರಾತ್ರಿ ಕಳ್ಳತನ ಮಾಡಿರುವ ಘಟನೆ ನಡೆದಿದೆ. ದೇವಾಲಯದ ಅರ್ಚಕ ದರ್ಶನ್ ಹೇಳುವ ಪ್ರಕಾರ, ಭಾನುವಾರ ಭಕ್ತಾಧಿಗಳು ಸೇರಿ ರಾಮನವಮಿ ಆಚರಣೆಯನ್ನು ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಿದ್ದು ಪ್ರಸಾದ, ಪಾನಕ-ಫಲಹಾರವನ್ನು ನೀಡಲಾಗಿತ್ತು. ಇಂದು ಬೆಳಿಗ್ಗೆ ಪೂಜೆಗೆ ಬಂದಾಗ ದೇವಸ್ಥಾನದ ಮೇಲ್ಛಾವಣಿಯನ್ನು ಒಡೆದುಕಳ್ಳರು ಹುಂಡಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಹುಂಡಿ ಬಿಟ್ಟರೆ ಬೇರೆ ಯಾವುದೇ ಬೆಲೆ ಬಾಳುವ ಆಭರಣಗಳು ದೇವಸ್ಥಾನದಲ್ಲಿರಲಿಲ್ಲ. ಹುಂಡಿಯಲ್ಲಿ ಸುಮಾರು 5-6 ಸಾವಿರ ನಗದು ಹಣ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. ಹುಂಡಿಯೂ ದೇವಾಲಯದ ಪಕ್ಕದಲ್ಲಿ ಬಿದ್ದಿದ್ದು ಕಲ್ಲಿನಿಂದ ಹೊಡೆದು ಹಣ ತೆಗೆದುಕೊಂಡು ಹೋಗಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೇಂದ್ರಸರ್ಕಾರಿ ಕಚೇರಿಗಳ ಬಹು ಕಾರ್ಯ ಸಿಬ್ಬಂದಿ (ಎಂಟಿಸಿ) ನೇಮಕಾತಿಯಲ್ಲಿ ಕನ್ನಡಿಗರಿಗೆ ವಂಚನೆಯಾಗುತ್ತಿದೆ ಎಂದು ಕನ್ನಡ ಗೆಳೆಯರ ಬಳಗ ಆರೋಪಿಸಿದೆ. ಕೋರಮಂಗಲದಲ್ಲಿರುವ ಕೇಂದ್ರೀಯ ಸದನಕ್ಕೆ ಇತ್ತೀಚೆಗೆ ಬಂದಿರುವ ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಬಾಲಕ ಮತ್ತು ಎಂಟಿಎಸ್ (ಬಹು ಕಾರ್ಯ ಸಿಬ್ಬಂದಿ) ಹುದ್ದೆಗೆ ಬೆಂಗಳೂರಿನ ಉದ್ಯೋಗ ವಿನಿಮಯ ಕೇಂದ್ರದಿಂದ ಅಭ್ಯರ್ಥಿಗಳ ಪಟ್ಟಿಯನ್ನು ತರಿಸಿಕೊಂಡು ಆಯ್ಕೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಇತರೆ ಇಲಾಖೆಯವರು ಈ ನ್ಯಾಯವಾದ ಮಾರ್ಗ ಅನುಸರಿಸದೆ, ಸಿಬ್ಬಂದಿ ಆಯ್ಕೆ ಆಯೋಗದ (ಎಸ್ಎಸ್ಸಿ) ಮೂಲಕ ಆಯ್ಕೆ ಮಾಡಿ ಕನ್ನಡಿಗರಿಗೆ ಈ ಕೆಲಸ ಸಿಗದ0ತೆ ಮಾಡುತ್ತಿದ್ದಾರೆ. ವಾಸ್ತವವಾಗಿ ರೂಡಿಗತವಾಗಿ ಗುರುತಿಸುವ ಜವಾನ, ಇಲಾಖೆ ಸಹಾಯಕ ಹುದ್ದೆಯನ್ನೇ ಬಹುಕಾರ್ಯ ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಪ್) ಎಂದು ಹೆಸರಿಸಿ, ಲಿಖಿತ ಪರೀಕ್ಷೆ ನಡೆಸುವ ಮೂಲಕ ಪ್ರತಿ ವರ್ಷ ಕನಿಷ್ಠ 500 ಕನ್ನಡಿಗರನ್ನು ಉದ್ಯೋಗ ವಂಚಿತರಾಗಿ ಮಾಡುತ್ತಿದ್ದಾರೆ. ನೀರು ತರುವುದಕ್ಕೆ, ಕಚೇರಿ ಶುಚಿಗೊಳಿಸುವುದಕ್ಕೆ ಪತ್ರ ವಿತರಣೆ ಮಾಡುವಂತಹ ಕೆಲಸಗಳಿಗೆ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪರೀಕ್ಷೆ ನಡೆಸಿ, ಕನ್ನಡಿಗರನ್ನು ವಂಚಿಸುತ್ತಿರುವುದನ್ನು…
14 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಹುಸಿ ಎಂಬುದು ಪೊಲೀಸರ ತನಿಖೆಯಿಂದ ದೃಢಪಟ್ಟಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಹುಸಿ ಬಾಂಬ್ ಬೆದರಿಕೆ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗಳು ಗಂಭೀರವಾಗಿ ತನಿಖೆ ನಡೆಸುತ್ತಿವೆ ಎಂದರು. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಹಿಂದೂ ಸಂಘಟನೆಗಳ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದೆ. ಈ ಶೋಭಾಯಾತ್ರೆ ವೇಳೆ ಕರೆಂಟ್ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು. ಪರಪ್ಪನ ಅಗ್ರಹಾರದಲ್ಲಿ ಆರೋಪಿ ಖಾತೆಯಿಂದ ಹಣ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಖಂಡಿತವಾಗಿಯೂ ಈ ಪ್ರಕರಣವಲ್ಲಿ ಗಂಭೀರವಾಗಿ ಪರಿಗಣಿಸಿದ್ದೇವೆ. ಇದರ ಹಿಂದೆ ಯಾರೇ ಅಧಿಕಾರಿಗಳಿದ್ದರೂ ಕ್ರಮ ಕೈಗೊಳ್ಳುತ್ತೇವೆ. ಬಹಳ ದಿನಗಳಿಂದ ಇದು ನಡೆಯುತ್ತಿದೆ. ಜಾಮೀನು ತಂದು ಹಣ ಬೇಡಿಕೆ ಇಡುತ್ತಾರೆ. ಆರೋಪಿಗಳು…
ಪಾಕಿಸ್ತಾನ ರಾಜಕೀಯದಲ್ಲಿ ನಿನ್ನೆ ತಡರಾತ್ರಿವರೆಗೂ ನಡೆದ ರಾಜಕೀಯ ಐ ಡ್ರಾಮಾದಲ್ಲಿ ಇಮ್ರಾನ್ಖಾನ್ ನೇತೃತ್ವದ ಸರ್ಕಾರ ಪತನಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ನಾಯಕನ ಪ್ರಕ್ರಿಯೆ ಚುರುಕುಗೊಂಡಿದೆ. ಶಹಬಾಜ್ ಶರೀಫ್ ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಲು ಇದೀಗ ವೇದಿಕೆಕೆ ಸಜ್ಜುಗೊಂಡಿದೆ. ಮೂರುವರೆ ವರ್ಷಗಳ ಕಾಲ ಪಾಕ್ ಪ್ರಧಾನಿಯಾಗಿದ್ದ ಮಾಜಿ ಕ್ರಿಕೆಟಿಗ ಹಾಗೂ ಇಮ್ರಾನ್ಖಾನ್ ವಿರುದ್ಧ ಪಾಕ್ ಅಸೆಂಬ್ಲಿಯಲ್ಲಿ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಸೋಲನುಭವಿಸಿ ಪದಚ್ಯುತಗೊಂಡಿದ್ದಾರೆ. 342 ಸದಸ್ಯ ಬಲದ ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯ ಪರವಾಗಿ ಚಲಾವಣೆಗೊಂಡವು. ಇದರೊಂದಿಗೆ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳ್ಳಬೇಕಾಯಿತು. ಪಾಕಿಸ್ತಾನದ ಅಸೆಂಬ್ಲಿಯಲ್ಲಿ ನಾಳೆ ಹೊಸ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಹೊಸದಾಗಿ ಪಾಕಿಸ್ತಾನ ಸಂಸತ್ತು ಸಮಾವೇಶಗೊಂಡು ಪ್ರತಿಪಕ್ಷ ನಾಯಕ ಶಹಬಾಜ್ ಶರೀಫ್ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಶಹಬಾಜ್ ಶರೀಫ್ ಪಾಕಿಸ್ತಾನದಿಂದ ಹೊರಗೆ, ಬೇರೆ ದೇಶಗಳಿಗೆ ಅಷ್ಟಾಗಿ ಪರಿಚಿತರಲ್ಲ. ಪಾಕಿಸ್ತಾನದಲ್ಲಿ ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದಾರೆ. ಮೂರು ಬಾರಿ…
ಕೆ.ಆರ್. ಪುರ: ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕೆ.ಆರ್.ಪುರದ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು, ಪ್ರತಿನಿತ್ಯ ಮೂಲಭೂತ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನ ಜೀವನ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ನಡುವೆ ಬೆಲೆ ಏರಿಕೆ ಬಡವರ ಮೇಲೆ ಬರೆ ಎಳೆದಂತಾಗಿದ್ದು, ಜೀವನ ಸಾಗಿಸುವುದು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ, ಜನವಿರೋಧಿ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ನುಡಿದರು.ದಿನಬಳಕೆಯ ಸಾಮಾಗ್ರಿಗಳ ಬೆಲೆ ಗಗಕ್ಕೆರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆ ವಿರುದ್ಧ ಜನಸಾಮಾನ್ಯರು ನಲುಗಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿ ಡಿ.ಕೆ.ಮೋಹನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್,ಅರಳಪ್ಪ, ಮಹಿಳಾ ಅಧ್ಯಕ್ಷೆ ಸಾಕಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ…