Author: admin

ತಿಪಟೂರು: ಶುಂಠಿ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ತಡರಾತ್ರಿ 10 ಗಂಟೆಯ ವೇಳೆಗೆ ಇಲ್ಲಿನ ತಡಸೂರು ಗೇಟ್ ಬಳಿ ನಡೆದಿದೆ. ಹಾಸನ ಮಾರ್ಗವಾಗಿ ಬರುತ್ತಿದ್ದ ಲಾರಿ ತಡಸೂರು ಗೇಟ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿ ನೆಲಕ್ಕುಳಿದ ಪರಿಣಾಮ ಲಾರಿಯಲ್ಲಿದ್ದ ಶುಂಠಿ ನೆಲಕ್ಕೆ ಉರುಳಿದೆ. ಅಕ್ಕಪಕ್ಕದಲ್ಲಿ ಯಾವುದೇ ವಾಹನಗಳು ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದಂತಾಗಿದೆ. ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಅಲೆಮಾರಿ ಅರೆ ಅಲೆಮಾರಿ ಸಮುದಾಯದವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಮಧುಗಿರಿಯಲ್ಲಿ ನಡೆಯಿತು. ಹೊಸಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಉಪಾಧ್ಯಕ್ಷರಾದ ಶ್ರೀ ರಂಗನಾಥ ಡಿ., ಪಂಚಾಯಿತಿ ಅಭಿವೃದ್ಧಿ  ಅಧಿಕಾರಿ ಶಿವಕುಮಾರ್ ಹಾಗೂ ಹೊಸಕೆರೆ ಗ್ರಾ. ಪಂ.ನ ಎಲ್ಲಾ ಸದಸ್ಯರು ಮತ್ತು ಮಾಜಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಕೆ.ಎಂ.ಜಯರಾಮ್,  ಸಿಬ್ಬಂದಿಗಳಾದ ಓಬಳೇಶ ಎನ್., ರಾಮಮೋಹನ್ ಎಂ.ಎನ್. ನವೀನ್ ಕುಮಾರ್ ಹೆಚ್.ಬಿ., ಸಣ್ಣಪ್ಪ ಲಕ್ಷ್ಮೀ ರಂಗನಾಥ್  ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹೇಶ್ (ACDPO) ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ  ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರಿ ನಿಯಮಿತದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆಯಾಗಿದೆ ಎಂದು ಆಡಳಿತ ಮಂಡಳಿಯ ನಿರ್ದೇಶಕ ನಾಗರಾಜ್, ಪ್ರಕಾಶ್ ಯಾದವ್ ಉಪಾಧ್ಯಕ್ಷ ವಿನಯ್  ಅವರ ಆರೋಪವು ಸತ್ಯಕ್ಕೆ ದೂರವಾದದ್ದು ಎಂದು  ನಿಯಮಿತದ ಅಧ್ಯಕ್ಷ ಅಮರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಗರದ ಖಾಸಗಿ  ಹೋಟೆಲ್ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯನ್ನು ಆಡಳಿತ ಮಂಡಳಿಯ ಆದೇಶದಂತೆ ಮತ್ತು ಸಹಕಾರ ಇಲಾಖೆಯ  ಅನುಮತಿ ಕೋರಿ ಕಲ್ಕೆರೆಯಲ್ಲಿ ಮಹಾಸಭೆಯನ್ನು  ಆಯೋಜಿಸಿದ್ದು, ನಿಯಮ  ಉಲ್ಲಂಘನೆ ಮಾಡಿಲ್ಲ. ಕೋಟ್ಯಂತರ ಹಗರಣದ ಬಗ್ಗೆ ಮಾತನಾಡಿರುವ ನಿರ್ದೇಶಕರುಗಳು ದಾಖಲೆ ಸಮೇತ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು. ಹಿಂದಿನ ಕಾರ್ಯದರ್ಶಿಗಳ ಅವಧಿಯಲ್ಲಿ ನಡೆದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಸಿಇಓ ಒಬ್ಬ ಮಹಿಳೆಯಾಗಿದ್ದು,ನಿರಂತರ ದಬ್ಬಾಳಿಕೆ ಮತ್ತು ದೌರ್ಜನ್ಯ ಎಸಗುತ್ತಿದ್ದಾರೆ ಹಾಗೂ ಮುಂದಿನ ಸಭೆಯಲ್ಲಿ ಚರ್ಚಿಸಿ, ಇವರುಗಳ ಮೇಲೆ ಕ್ರಮ ಜರುಗಿಸಲು ಕಾನೂನು ಹೋರಾಟ ಮತ್ತು ಸಹಕಾರ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ…

Read More

ತುಮಕೂರು:  ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯಲ್ಲಿ  ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಡಾ.ರಮೇಶ್ ನಾಯ್ಕ್, ಬಂಜಾರ ಸಮುದಾಯದ ಆಚಾರ-ವಿಚಾರ ನಡೆ-ನುಡಿ ಉಡುಗೆ-ತೊಡುಗೆಗಳು ಬೇರೊಂದು ಸಮಾಜಕ್ಕಿಂತ ಯಾವುದಕ್ಕೂ ಕಡಿಮೆಯಿಲ್ಲ ಹೇಳಿದರು. ಕಾರ್ಯಕ್ರಮದಲ್ಲಿ ಲೋಹಿತಬಾಯಿ ಗುರುನಾಥ್ ನಾಯ್ಕ್,  ಮೋಹನ್ ಕುಮಾರ್ ಸೇರಿದಂತೆ ಬೇರೆ ಜಿಲ್ಲೆಯ ತೀರ್ಪುಗಾರರು, ಹಲವಾರು ತಾಲ್ಲೂಕು ಮಟ್ಟದ ಕಲಾವಿದರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ರಸ್ತೆಯ ಸಿದ್ಧಾಪುರ ಗ್ರಾಮದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ  ವಿದ್ಯಾರ್ಥಿಗಳಿಗೆ ಉಚಿತ ಊಟದ ತಟ್ಟೆ ಮತ್ತು ನೀರಿನ ಲೋಟ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್.M.B.A. ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಮ್., ಜಿಲ್ಲಾ ಕಾರ್ಯದರ್ಶಿ ಟಿ.ಸಿ.ಚಂದ್ರಣ್ಣ,  ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಮೊಹಮ್ಮದ್ ರಫಿ, ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ದಾದಾಪೀರ್.ಎಸ್., ತಾಲ್ಲೂಕು ಉಪಾಧ್ಯಕ್ಷರಾದ ದುರ್ಗೇಶ್ ಮತ್ತಿತರರು ಉಪಸ್ಥಿತರಿದ್ದರು. ವರದಿ:  ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಗುಬ್ಬಿ: ಸಿ.ಎಸ್.ಪುರ ನಾಡ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ ನಾಡ ಕಛೇರಿಯ ಉಪತಹಶೀಲ್ದಾರ್ ಮುತ್ತುರಾಜ್ , ಕಂದಾಯ ಇಲಾಖೆ ಹಾಗೂ ಪಿಂಚಣಿ ನಿರ್ದೇಶನಾಲಯದ ಆದೇಶದಂತೆ ಜನತೆಯ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮ ಮಾಡಲಾಗುತ್ತಿದ್ದು,  ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳೇ ವಯೋವೃದ್ದರ ಮನೆ ಬಾಗಿಲಿಗೆ ತೆರಳಿ ಸಂಬಂಧ ಪಟ್ಟ ವಯಸ್ಸಿನ ದೃಢೀಕರಣ ಪಡೆದು ಮೊಬೈಲ್ ಆಪ್ ಮೂಲಕ ದಾಖಲೆ ಕ್ರೋಢೀಕರಿಸಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡುತ್ತಾರೆ ಎಂದರು. ಸಾರ್ವಜನಿಕ ಮತ್ತು ವಯೋವೃದ್ದರು ಇನ್ನೂ ಮುಂದೆ ಕಛೇರಿಗಳಿಗೆ ಭೇಟಿ ನೀಡುವ ಮತ್ತು ದಾಖಲೆ ಒದಗಿಸುವ ತೊಂದರೆ ತಪ್ಪಲಿದ್ದು,  ನಮ್ಮ ಹೋಬಳಿಯ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿಗಳು ಆಯಾ ವೃತ್ತಗಳಿಗೆ ಭೇಟಿ ನೀಡಿ ಸರ್ಕಾರದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದಾರೆ ಎಂದು ತಿಳಿಸಿದರು. ಈ ವೇಳೆಯಲ್ಲಿ ಕೆಲ ಹೋಬಳಿಯ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ವಿತರಣೆ ಮಾಡಿದರು.…

Read More

ಮಾಯಸಂದ್ರ: 2022ನೇ ವರ್ಷದ ಮೊದಲ ಮಾಯಸಂದ್ರ ಗ್ರಾಮ ಸಭೆಯನ್ನು ಮಾಯಸಂದ್ರ ಗ್ರಾ.ಪಂ. ಆವರಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಗ್ರಾಮ ನೈರ್ಮಲ್ಯ, ನೀರು ಸರಬರಾಜು ಮತ್ತು ಮೀಟರ್ ಅಳವಡಿಕೆ, ವಿದ್ಯುತ್ ಸಂಪರ್ಕ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಂಗಳ ಗೌರಮ್ಮ ಹೊನ್ನಪ್ಪ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತ್ ನ PDO ಶ್ರೀನಿವಾಸ ಮೂರ್ತಿ, ಸೆಕ್ರೆಟರಿ ಸುರೇಶ್’, ಗ್ರಾ.ಪಂ. ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಗಳೂರು: ಉರಾಳಾಸ್ ವೆರಿಕೋಸ್ ವೇನ್ಸ್(Varicose Veins) ಆಯುರ್ವೇದ ಮಂಗಳೂರು ವತಿಯಿಂದ, ಖ್ಯಾತ ವೆರಿಕೋಸ್ ವೇನ್ಸ್ ವೈದ್ಯರಾದ ಡಾ.ಎಂ.ವಿ.ಉರಾಳ,ರವರ ನಿರ್ದೇಶನದಲ್ಲಿ ಮಂಗಳೂರು ನಗರದ ಪೊಲೀಸರಿಗೆ ಒಂದು ದಿನದ ಅರಿವು ಕಾರ್ಯಕ್ರಮ ಮತ್ತು ಉಚಿತ ವೆರಿಕೋಸ್ ವೇನ್ಸ್ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಿಬಿರವನ್ನು ಕುರಿತು ಮಂಗಳೂರು ಡಿಸಿಪಿಗಳಾದ ಹರಿರಾಂ ಶಂಕರ್ ಹಾಗೂ ದಿನೇಶ್ ಕುಮಾರ್ ಮಾತನಾಡಿ, ವೆರಿಕೋಸ್ ವೇನ್ಸ್ ಸಮಸ್ಯೆಯಿಂದ ರಾಜ್ಯದ ಹಲವಾರು ಪೊಲೀಸ್ ಸಿಬ್ಬಂದಿ ಕೂಡ ಬಳಲುತ್ತಿದ್ದಾರೆ ಎಂದು ತಿಳಿಸಿದರು. ಖ್ಯಾತ ತಜ್ಞ ವೈದ್ಯರಾದ ಡಾ.ಎಂ.ವಿ.ಉರಾಳ ಮಾತನಾಡಿ, ನಮ್ಮ ವೆರಿಕೋಸ್ ವೇನ್ಸ್ ಆಯುರ್ವೇದ ಔಷಧಿ ಅತ್ಯಂತ ಪರಿಣಾಮಕಾರಿಯಾಗಿದ್ದು, ಸಾವಿರಾರು ಮಂದಿ ಔಷಧೀಯ ಸದುಪಯೋಗ ಪಡೆದುಕೊಂಡು ಆಪರೇಷನ್ ರಹಿತ ಗುಣಮುಖವಾಗಿದ್ದಾರೆ. ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಉರಾಳಾಸ್ ವೆರಿಕೋಸ್ ವೇನ್ಸ್ ಆಯುರ್ವೇದ ಚಿಕಿತ್ಸೆ ಶಾಖೆಗಳು ತೆರೆದು, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಬೆಂಗಳೂರು ಸಿಟಿ ಪೊಲೀಸ್ ಯೋಗಕ್ಷೇಮ ಅಧಿಕಾರಿ ಸುಶ್ಮಿತಾ, ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತ ನಟರಾಜ್ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ…

Read More

ತಿಪಟೂರು: ತಾಲ್ಲೂಕು ನೊಣವಿನಕೆ ಹೋಬಳಿ ಮಸವನಘಟ್ಟ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಕಾವ್ಯ ಹರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಹಸೀಲ್ದಾರ್ ಚಂದ್ರಶೇಖರ್ ಸಹ ಸಹಾಯಕಿಯಾಗಿ ಅರುಣ್ ಕುಮಾರ್ ಅವರು ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಿಸಿಲಲ್ಲಿ ಜಗದೀಶ್,  ತಾಲೂಕು ಅಧ್ಯಕ್ಷ ಸುರೇಶ್,  ತಾಲೂಕು ಪ್ರಧಾನ ಕಾರ್ಯದರ್ಶಿ ಉಮಾಶಂಕರ್,  ಬಿಜೆಪಿ ಮುಖಂಡರಾದ ಮಂಜೇಗೌಡ,  ಗಿರೀಶ್ ಕುಮಾರ್ ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಎಂ.ಎನ್.ಕೋಟೆ ಗ್ರಾಮದಲ್ಲಿ ಎಂ.ಎನ್.ಕೋಟೆ ವಲಯದ ಪದಾಧಿಕಾರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಮಾಜಕ್ಕೆ ದೊರೆಯುವ ಸೌಲಭ್ಯಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಂ.ಎನ್.ಕೋಟೆ ಗ್ರಾಮದ ಉದ್ಯಮಿ ಬಿ.ಎನ್.ಮಾರುತಿ ದೀಪ ಬೆಳಗಿಸುವ ಮುಖಾಂತರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದಿಂದ ಪಡೆದುಕೊಂಡ ಪ್ರಗತಿನಿಧಿಯನ್ನು ಉತ್ಪಾದನೆ ಬರುವ ಉದ್ದೇಶಗಳಿಗೆ ಉಪಯೋಗಿಸಿ , ತಾನು ಸ್ವ-ಉದ್ಯೋಗಿ ಯಾಗುವ ಮೂಲಕ ಮತ್ತೊಬ್ಬರಿಗೆ ಕಾಯಕ ಕಲ್ಲಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು. ಆಗ ಮಾತ್ರ ಶ್ರೀ ಕ್ಷೇತ್ರದಿಂದ ಪಡೆದ ಪ್ರಗತಿ ನಿಧಿಗೆ ಒಂದು ಅರ್ಥ ಬಂದಂತೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಎಂ.ಎನ್.ಕೋಟೆ ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕ್ ನ ಚಂದನ್, ತುಮಕೂರು ಜಿಲ್ಲಾ ರಿಕವರಿ ಯೋಜನಾಧಿಕಾರಿ ಪುರಂದರ್ ಗುಬ್ಬಿ ತಾಲೂಕಿನ ಯೋಜನಾಧಿಕಾರಿಗಳಾದ ಹರೀಶ್ ಆರ್.ಎಸ್. ಜನಜಾಗೃತಿ ವೇದಿಕೆಯ ಸದಸ್ಯರಾದ ರಂಗಸ್ವಾಮಿ, ಒಕ್ಕೂಟದ…

Read More