Author: admin

ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ  ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ. ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ  ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು  ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ  ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ. ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ…

Read More

ಮಧುಗಿರಿ: ಕೊವಿಡ್ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ವಚ್ಛತೆಗೆ ಜನರು ಹೆಚ್ಚಿನ ಮಹತ್ವ ನೀಡುವ ನಿಟ್ಟಿನಲ್ಲಿ ತಾಲೂಕಿನ ಬೇಡತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಲೋಕೇಶ್ ತಮ್ಮ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿಯೂ ಗಿಡಗಂಟಿಗಳನ್ನು ತೆರವುಗೊಳಿಸಿ, ಚರಂಡಿ ಸ್ವಚ್ಛಗೊಳಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಕೈಗೊಂಡರು. ನೀರಿನ ತೊಟ್ಟಿ ಸ್ವಚ್ಛಗೊಳಿಸಿ, ಚರಂಡಿಗಳ ಹೂಳು ತೆಗೆದು ನೀರು ಸುಗಮವಾಗಿ ಹರಿಯುವಂತೆ ಮಾಡಲಾಯಿತು. ಇನ್ನು ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಸಿಂಗ್, ಸಮಾಜದಲ್ಲಿ ಗೌರವ ಇರಬೇಕಾದರೆ ನಾವು ಆರೋಗ್ಯಕರ ಮತ್ತು ನೈರ್ಮಲ್ಯದಿಂದ ಬದುಕಬೇಕು. ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೈಜೋಡಿಸಿದ ಅನಿತಾ ಲೋಕೇಶ್ ಅಧ್ಯಕ್ಷರು ಸ್ವಚ್ಛತೆಗೆ ಕಾರಣೀಭೂತರಾಗಿದ್ದಾರೆ ಎಂದು ಹೇಳಿದರು. ಇನ್ನೂ ಕಾರ್ಯಕ್ರಮದ ಸಂದರ್ಭ ಮಾತನಾಡಿದ ಅನಿತಾ ಲೋಕೇಶ್, ಓಮಿಕ್ರಾನ್ ಸೋಂಕು ಸೌಮ್ಯ ಸ್ವಭಾವದ್ದು ಎಂದು ಕೆಲವರು ಭಾವಿಸಿದ್ದಾರೆ. ಆದರೆ, ಇದು ವೇಗವಾಗಿ ಕಾಡ್ಗಿಚ್ಚಿನಂತೆ ಇಡೀ ವಿಶ್ವವನ್ನೇ ಆವರಿಸುತ್ತಿದೆ. ಈ ಹೊಸ ರೂಪಾಂತರವು ಹಿಂದಿನ ತಳಿಗಿಂತ ಸಾಂಕ್ರಾಮಿಕವಾಗಿದೆ. ಗಂಭೀರವಾದ ರೋಗವನ್ನುಂಟು ಮಾಡುತ್ತದೆ. ಹಾಗಾಗಿ ಇದನ್ನು…

Read More

ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆಯ ಕಳಪೆ ಕಾಮಗಾರಿಯಿಂದಾಗಿ ಜನರು ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ನಮ್ಮತುಮಕೂರು.ಕಾಂ ವರದಿ ಮಾಡಿದ್ದು, ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಮತ್ತು ಇಂಜಿನಿಯರ್ ಇದೀಗ ಕಾಮಗಾರಿ ಮತ್ತೆ ಆರಂಭಿಸಿದ್ದಾರೆ. ಈ ಬಗ್ಗೆ ನಮ್ಮತುಮಕೂರು.ಕಾಂ ಜೊತೆಗೆ ಮಾತನಾಡಿದ ಗ್ರಾಮದ ಸುರೇಶ್ ಅವರು,  ಸುಮಾರು ಒಂದು ವರ್ಷಗಳ ಹಿಂದೆ ಕಾಮಗಾರಿ ಆರಂಭವಾಗಿದ್ದರೂ, ಈವರೆಗೆ ಪೂರ್ಣಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮತುಮಕೂರು.ಕಾಂ ಪ್ರತಿನಿಧಿ ಚಂದ್ರ ಹಾದನೂರು ಅವರಿಗೆ ನಾವು ಮಾಹಿತಿ ನೀಡಿದ್ದು, ವರದಿಯ ಪ್ರಕಟಗೊಂಡ ಬೆನ್ನಲ್ಲೇ ಇದೀಗ ತೊಂಬೆ ಕಾಮಕಾರಿ ಆರಂಭಗೊಂಡಿದೆ ಎಂದು ತಿಳಿಸಿದರು. ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ  ಕಂಗೆಟ್ಟಿದ್ದರು. ಈ ಸಂಬಂಧ “ನೀರಿನ ತೊಂಬೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ: ನೀರಿಲ್ಲದೇ…

Read More

ಮುರುಳಿಧರನ್ ಆರ್.,  ಚಿತ್ರದುರ್ಗ ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್  ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ  ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ  ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್‍ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು.  ಜಿಲ್ಲಾಡಳಿತ ಕೂಡ ಈ…

Read More

ತುಮಕೂರು: ಇಂದು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲೆಯ ನಗರ ವ್ಯಾಪ್ತಿ ಕೊಳಚೆ ಪ್ರದೇಶ ನಿವಾಸಿಗಳ ಮತ್ತು ನಿವೇಶನ ರಹಿತ ಕುಂದುಕೊರತೆ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ, ಮಾರ್ಚ್ 5 -2021ರಂದು ನಡೆದ ಸಭೆಯ ಅನುಪಾಲನಾ ವರದಿ ಮೇಲೆ ಇಲಾಖೆವಾರು ತೆಗೆದುಕೊಂಡ ಪರಿಹಾರೋಪಾಯಗಳ ಮೇಲೆ ಚರ್ಚಿಸಿ ಜಿಲ್ಲೆಯಲ್ಲಿರುವ ಆಘೋಷಿತ ಸ್ಲಂಗಳನ್ನು ನಿಗದಿತ ಕಾಲಮಿತಿಯೊಳಗೆ ಸ್ಲಂ ಕಾಯಿದೆ 1973 ಮತ್ತು ಸ್ಲಂ ನೀತಿ 2016ರ ಅನ್ವಯ ಸ್ಥಳೀಯ ಸಂಸ್ಥೆಗಳು ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿ ಸ್ಲಂ ಘೋಷಣೆಗೆ ಕ್ರಮವಹಿಸಲು ಸಭೆಯಲ್ಲಿ ಸೂಚಿಸಲಾಯಿತು. ಸ್ಲಂ ಪ್ರದೇಶದ ನಿವೇಶನ ರಹಿತರಿಗೆ ಪ್ರತ್ಯೇಕವಾಗಿ ವಸತಿ ಸಮುಚ್ಛಯ ನಿರ್ಮಿಸಲು 4 ಎಕರೆ ಭೂಮಿ ಮೀಸಲು ಈ ಹಿಂದಿನ ಸಭೆಯಲ್ಲಿ ಸ್ಲಂಗಳಲ್ಲಿರುವ ನಿವೇಶನ ರಹಿತ 398 ಕುಟುಂಬಗಳಿಗೆ ಅಗತ್ಯವಿರುವ ಭೂಮಿಯ ಪ್ರಸ್ತಾವನೆ ಸಲ್ಲಿಸಲು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಸೂಚಿಸಲಾಗಿತ್ತು. ಅದರಂತೆ ದಿನಾಂಕ: 29-9-2021ರಂದು ಜಿಲ್ಲಾಧಿಕಾರಿಗಳಿಗೆ ಮಂಡಳಿಯಿಂದ ಪ್ರಸ್ತಾವನೆ ಸಲ್ಲಿಸಿ ನಗರ ಪ್ರದೇಶದಲ್ಲಿ 12 ಎಕರೆ ಅಥವಾ…

Read More

ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆ ಆವರಣದಲ್ಲಿ ತಾಲೂಕು ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಬೆಂಗಳೂರು ನಗರ ಜಯ ಕರ್ನಾಟಕ ಜನಪದ ವೇದಿಕೆ, ಆಟೋ ಘಟಕದ ಜಿಲ್ಲಾಧ್ಯಕ್ಷರಾದ ಆಟೋ ಮಿತ್ರ ಜಯರಾಮ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ದಲಿತ ನೌಕರರ ಮುಖಂಡ ನರಸಿಂಹಯ್ಯ, ತಿಪಟೂರು ಘಟಕದ ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಮಾತನಾಡಿದರು. ಹಿಂಡಿಸ್ಕೆರೆ ರವಿ, ದಲಿತ ಸಂಘಟನೆಯ ಕಲ್ಲೇಶ್, ಉಮಾಶಂಕರ್, ಉಪಾಧ್ಯಕ್ಷ ಸಿದ್ದೇಶ್, ವಿದ್ಯಾರ್ಥಿ ಘಟಕದ ಕಲಂದರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿ ಮಸ್ಕಲ್ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಮಂಜುಳಾ ವೀರೇಶ್ ಅವರನ್ನು ಗ್ರಾಮದ ಗ್ರಾಮಸ್ಥರು ಇಂದು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಜುಳಾ ವೀರೇಶ್,  ಈ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮೊದಲನೆಯದಾಗಿ ಕೋವಿಡ್ ನಿಯಂತ್ರಣಕ್ಕೆ ಒತ್ತು ಕೊಡುವುದು ಮತ್ತು ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ, ಬೆಳಕು(ವಿದ್ಯುತ್)  ಒದಗಿಸಿಕೊಡುತ್ತೇನೆ. ಸರ್ಕಾರದಿಂದ ಬರುವ  ಎಲ್ಲಾ ಮೂಲಭೂತ ಸೌಕರ್ಯಗಳನ್ನು ಎಲ್ಲ  ಗ್ರಾಮಸ್ಥರಿಗೂ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ  ಮಸ್ಕಲ್ ಗ್ರಾಮದ ಉಪಾಧ್ಯಕ್ಷರಾದ  ವೈ .ನಾಗರಾಜು ಮಾತನಾಡಿದರು. ಬಳಿಕ ಅಧ್ಯಕ್ಷೆ ಮಂಜುಳಾ ವೀರೇಶ್ ಅವರನ್ನು ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭ ಸದಸ್ಯರಾದ ಕಲಾವತಿ, ತಿಪ್ಪೇಸ್ವಾಮಿ, ಕೊಲ್ಲಮ್ಮ, ರಮ್ಯ, ಹನುಮಂತಪ್ಪ, ಗೋವಿಂದರಾಜು, ಕಲಾವತಿ, ವಿ.ಎಲ್.ಗೌಡ, ಹರೀಶ್, ಸುಜಾತ, ಪದ್ಮಾವತಿ, ಮಣಿಮೇಗಲೈ, ಗಿರಿಜಮ್ಮ, ಪದ್ಮಾವತಿ ನೂತನ ಅಧ್ಯಕ್ಷರಿಗೆ  ಅಭಿನಂದನೆಗಳನ್ನು ಸಲ್ಲಿಸಿದರು. ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿಯ ಅಧ್ಯಕ್ಷೆ…

Read More

ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ಹಳೆಯ ಪಾದರಕ್ಷೆಗಳನ್ನು ನೀಡಿ ಹೇಳಿದ, “ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯ ಕ್ರಿಯೆ ನೆರವೇರಿಸು!” ಎಂದು ಹೇಳುತ್ತಾನೆ. ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ. ಆದರೆ ಪಂಡಿತರು ಸಾಧ್ಯವೇ ಇಲ್ಲ ಇದು ನಮ್ಮ ಅಂತ್ಯಕ್ರಿಯೆ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರು ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ! ಈ ವಿಚಾರವಾಗಿ…

Read More

ಕುಣಿಗಲ್: ಮನೆಯೊಂದರ ಕಾಂಪೌಂಡ್ ನಲ್ಲಿದ್ದ ಹಾವು ಹಾಗೂ ಮೊಟ್ಟೆಯನ್ನು ಉರಗತಜ್ಞ ಮಹಂತೇಶ್ ರಕ್ಷಿಸಿದ್ದಾರೆ. ಕುಣಿಗಲ್ ನ ಮಹಂತೇಶ್ ಅವರಿಗೆ ಅಗ್ರಹಾರದ ಮುಜಾಹಿದ್ ಖಾನ್ ಎಂಬವರು ಕರೆ ಮಾಡಿ ಮನೆಯ ಕಾಂಪೌಂಡ್ ನಲ್ಲಿ ಹಾವು ಇದೆ ಎಂದು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ಮನೆಯ ಕಾಂಪೌಂಡ್ ನಲ್ಲಿದ್ದ ನೀರು ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಮೊಟ್ಟೆಯಿಟ್ಟಿದ್ದು, ಮೊಟ್ಟೆ ಹಾಗೂ ಹಾವನ್ನು ಸುರಕ್ಷತೆ ಬಾಕ್ಸ್ ನಲ್ಲಿ ಹಾಕಿ ಇಟ್ಟಿದ್ದಾರೆ. ಇದೇ ವೇಳೆ ಈ ಹಾವಿನ ಬಗ್ಗೆ ವಿವರಣೆ ನೀಡಿದ ಅವರು, ಹಾವು ಮೊಟ್ಟೆ ಹಾಕಿದ ನಂತರ ಸುರಕ್ಷಿತವಾಗಿ ಮೊಟ್ಟೆಗಳನ್ನು ಮರಳಿನಲ್ಲಿ ಇಟ್ಟು ಅದಕ್ಕೆ ಬೆಚ್ಚಗಿನ ಶಾಖ ಬರುವ ಹಾಗೆ ವ್ಯವಸ್ಥೆ ಮಾಡಿ ಅಲ್ಲೇ ಮರಿ ಮಾಡಿಸಬೇಕಾಗುತ್ತದೆ. ಮೊಟ್ಟೆ ಹೊಡೆದು ಮರಿಗಳು ಹೊರಬರುವುದಕ್ಕೆ 45 ದಿನ ಆಗಬಹುದು. ತದನಂತರ ಮರಿಗಳನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅವರು ತಿಳಿಸಿದರು. ಇದುವರೆಗೂ 3 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಹಾವುಗಳನ್ನು ಸ್ನೇಕ್ ಮಹಂತೇಶ್ ರಕ್ಷಿಸಿದ್ದಾರೆ. ವರದಿ:…

Read More

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 21 ರಲ್ಲಿರುವ ಶ್ರೀ ಮುರುಗನ್ ( ಸುಬ್ರಮಣ್ಯಂ) ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಕ್ರಾಂತಿ ಸಂದರ್ಭದಲ್ಲಿ ತಮಿಳರು ಪ್ರಮುಖ ತೈಮಾಸಂ ಎಂದು ಸಂಕ್ರಾಂತಿ ಹಬ್ಬವನ್ನು  ಪೊಂಗಲ್ ಎಂದು ಆಚರಿಸುತ್ತಾರೆ. ಈ ತಿಂಗಳಲ್ಲಿ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.  ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ಈ ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟಿತು. ಪೂಜೆಯ ವೇಳೆ ಸ್ವಾಮಿ ಶ್ರೀ ಸುಬ್ರಮಣ್ಯಂ ( ಮುರುಗನ್ ) ದೇವರಿಗೆ ಹೂವಿನ ಅಲಂಕಾರ, ಕರ್ಪೂರದಾರತಿ, ಮಹಾಮಂಗಳಾರತಿ ಕಾರ್ಯಕ್ರಮಗಳು ಸರಳವಾಗಿ ಆಚರಿಸಲ್ಪಟ್ಟಿತ್ತು. ಈ ಸಂದರ್ಭದಲ್ಲಿ ಸಕಲ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿಸಲ್ಪಟ್ಟಿತ್ತು .  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು, ದೇವಸ್ಥಾನದ ಅರ್ಚಕರು ಹಾಗೂ ಕುಟುಂಬಸ್ಥರು  ಸುಬ್ರಮಣ್ಯಂ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More