Author: admin

ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಜನಸಾಮಾನ್ಯರು ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮತ್ತೊಂದೆಡೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಕಟ್ಟಡ ಸಾಮಾಗ್ರಿಗಳು ದುಬಾರಿಯಾಗಿದ್ದು, ಪ್ರಶ್ನೆ ಮಾಡುವ ಜನರ ಮೇಲೆ ದಬ್ಬಾಳಿಕೆ, ದೌರ್ಜನ್ಯವನ್ನು ಸರ್ಕಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್ ಆರೋಪಿಸಿದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಲ್ಕೆರೆ, ಮಂಟಪ, ಹೊಸರೋಡ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಗಂಧದನಾಡು ಜನಪರವೇದಿಕೆ. ಆರ್.ಕೆ.ರಮೇಶ್ ಅಭಿಮಾನಿಗಳ ಬಳಗ, ವಿಜಯ ಶ್ರೀ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಪೌರಕಾರ್ಮಿಕರಿಗೆ ಸೀರೆ ವಿತರಣೆ ಮಾಡಿ ಮಾತನಾಡಿದ ಅವರು ಕೋವಿಡ್ ನಂತರ ಜನಸಾಮಾನ್ಯರ ಬದುಕು ದುಸ್ಥರವಾಗಿದ್ದು. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಬಡವರು ಜೀವನ ಸಾಗಿಸಲು ಪರದಾಡುತ್ತಿದ್ದು. ಅವರ ಕಷ್ಟಕ್ಕೆ ಸ್ಪಂದಿಸದೆ ಗಾಯದ ಮೇಲೆ ಬರೆ ಎಳೆಯುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಹಾಗಾಗಿ ಈ ಸರ್ಕಾರವನ್ನು ಕಿತ್ತೊಗೆಯಲು ಜನರು ಮುಂದಾಗಿದ್ದಾರೆ ಎಂದು ಹೇಳಿದರು. ಜಿ.ಪಂ.ಮಾಜಿ ಸದಸ್ಯ…

Read More

ರಾಜ್ಯದಲ್ಲಿ ನಡೆದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಳ ತಲುಪಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಅನ್ಯಾಯಕ್ಕೆ ಒಳಗಾಗಿ ಬೇಸರಗೊಂಡಿರುವ ಅಭ್ಯರ್ಥಿಗಳು ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಪರೀಕ್ಷೆಯಲ್ಲಿ ವಂಚನೊಳಗಾದವರಿಗೆ ನ್ಯಾಯ ದೊರಕಬೇಕು. ೨೦೨೧ರಲ್ಲಿ ನಡೆದ ಬಿಎ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ. ಈ ಬಗ್ಗೆಯೂ ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ಈ ವಿಚಾರದಲ್ಲಿ ಮೋದಿಯವರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಅಕ್ರಮದ ಬಗ್ಗೆ ತನಿಖೆ ನಡೆಸಿ, ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಪ್ರಧಾನಿಯವರಿಗೆ ಬರೆದ ಪತ್ರದಲ್ಲಿ ನೊಂದ ಅಭ್ಯರ್ಥಿಗಳು ಉಲ್ಲೇಖಿಸಿದ್ದಾರೆ. ಸರ್ಕಾರಿ ಹುದ್ದೆಗಳು ಹಣವಿದ್ದರೆ ಮಾತ್ರ ಎಂಬ ಅಭಿಪ್ರಾಯ ಮೂಡಿದೆ. ಸರ್ಕಾರದ ಈ ವ್ಯವಸ್ಥೆಯಿಂದ ವಂಚನೊಳಗಾಗಿರುವ ನಾವು ಮಾನಸಿಕವಾಗಿ ಸತ್ತು ಹೋಗಿದ್ದೇವೆ. ಆದ್ದರಿಂದ ಸರ್ಕಾರಿ ಹುದ್ದೆಗಳಿಗೆ ಇನ್ನು ಮುಂದೆ ಪರೀಕ್ಷೆ ಬರೆಯುವುದಿಲ್ಲ. ನಮಗೆ ನ್ಯಾಯ ದೊರಕದಿದ್ದರೆ ಉಗ್ರಗಾಮಿ ಸಂಘಟನೆ ಸೇರುವುದಾಗಿ ಹೇಳಿಕೊಂಡಿದ್ದಾರೆ. ವಂಚನೊಳಗಾಗಿರುವ ೮ ಮಂದಿಯಿದ್ದು, ನಾವೆಲ್ಲರೂ ಈ ನಿರ್ಧಾರ ಕೈಗೊಂಡಿರುವುದಾಗಿ ಪ್ರಧಾನಿಯವರಿಗೆ…

Read More

ಗುಡ್ಡಗಾಡು ರಾಜ್ಯ ಅಸ್ಶಾಂನಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಪರಿಸ್ಥಿತಿ ಅಯೋಮಯವಾಗಿದ್ದು, ೫೭,೦೦೦ ಜನರು ತೀವ್ರ ತೊಂದರೆಗೊಳಗಾಗಿದ್ದಾರೆ. ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆ ನೀರು ಪಾಲಾಗಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಂದಾಯ ವ್ಯಾಪ್ತಿಗೆ ಬರುವ ಸುಮಾರು ೨೨೨ ಗ್ರಾಮಗಳು ಜಲಾವೃತಗೊಂಡು ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಗಳು ನೀರುಪಾಲಾಗಿವೆ.ಪ್ರವಾಹಕ್ಕೆ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಪ್ರವಾಹದ ಬಿಸಿ ಕೇವಲ ಮನಷ್ಯರಿಗಷ್ಟೇ ಅಲ್ಲ. ಪ್ರಾಣಿಗಳಿಗೆ ತಟ್ಟಿವೆ. ೧೪೩೪ ಪ್ರಾಣಿಗಳು ಪ್ರವಾಠಹದ ಹೊಡೆತಕ್ಕೆ ಕೊಚ್ಚಿ ಹೋಗಿವೆ. ೨೦೨ ಮನೆಗಳು ಮನೆಗಳು ನೀರುಪಾಲಾಗಿವೆ. ಮನೆ-ಮಠ ಕಳೆದುಕೊಂಡು ಸಾವಿರಾರು ಜನರು ನಿರ್ಗತಿಕರಾಗಿದ್ದಾರೆ. ಸಂಕಷ್ಟಕ್ಸೆ ಸಿಲುಕಿವವರನ್ನು ರಕ್ಷಿಸಲು ರಾಜ್ಯ ಸರ್ಕಾರ ಅರೆ ಸೇನಾ ಪಡೆ, ಸೇನೆ,ತುರ್ತು ಸೇವೆಗಳನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ. ಭಾರೀ ಮಳೆ,ಪ್ರವಾಹದಿಂದಾಗಿ ಅನೇಕ ರಸ್ತೆಗಳು, ಸೇತುವೆಗಳು ಹಾಗೂ ನೀರಾವರಿ ನಾಲೆಗಳಿಗೆ ಅಪಾರ ಹಾನಿ ಸಂಭವಿಸಿದೆ. ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ೧೨ ಗ್ರಾಮಗಳಲ್ಲಿ ಭೂ ಕುಸಿತ ಉಂಟಾಗಿದೆ.…

Read More

ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆಯಿಂದ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಆಶಾ ಕಾರ್ಯಕರ್ತೆಯರು ನಾಳೆ ನಗರಕ್ಕೆ ಆಗಮಿಸುತ್ತಿರುವುದರಿಂದ ಸಿಲಿಕಾನ್ ಸಿಟಿ ಪಿಂಕ್ ಸಿಟಿಯಾಗಿ ಮಾರ್ಪಾಡಾಗಲಿದೆ. ತಮ್ಮ ಬೇಡಿಕೆ ಈಡೇರಿಸುವಂತೆ ಈಗಾಗಲೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗದಿರುವ ಹಿನ್ನಲೆಯಲ್ಲಿ ನಾಳೆಯಿಂದ ಬೃಹತ್ ಹೋರಾಟ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಲಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಎಐಟಿಯುಸಿ ಕಾರ್ಮಿಕ ಸಂಘಟನೆ ಮುಖಂಡರೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ. ನಾವು ಕಳೆದ ಹದಿನೈದು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರೂ ನಮ್ಮ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್‍ಗಳಾಗಿ ದಿನದ 24 ಗಂಟೆಗಳ ಕಾಲ ಸೇವೆ ಸಲ್ಲಿಸಿದ್ದೇವೆ.ಆದರೂ ನಮಗೆ ಕೆಲಸಕ್ಕೆ ತಕ್ಕ ಸಂಬಳ ಮಾತ್ರ ಕೊಡದೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರದಿಂದ ಐದು ಸಾವಿರ ಮತ್ತು ಕೇಂದ್ರ ಸರ್ಕಾರದಿಂದ ಮೂರು ಸಾವಿರ…

Read More

ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಪಠ್ಯಪುಸ್ತಕ ಮತ್ತು ಸೈಕಲ್‍ ಗಳನ್ನು ಸಕಾಲಕ್ಕೆ ವಿತರಣೆ ಮಾಡಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯಾದ್ಯಂತ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲೆಗಳನ್ನು ಎರಡು ವಾರ ಮುಂಚಿತವಾಗಿಯೇ ಆರಂಭಿಸುತ್ತಿದ್ದೇವೆ. ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಪಠ್ಯಪುಸ್ತಕ ಮತ್ತು ಸೈಕಲ್‍ಗಳನ್ನು ವಿತರಣೆ ಮಾಡಲು ಸಿದ್ದವಿದ್ದೇವೆ ಎಂದು ಹೇಳಿದರು. ಪಠ್ಯ ಪುಸ್ತಕ ಇಲ್ಲವೇ ಸೈಕಲ್ ವಿತರಣೆ ವಿಳಂಬವಾಗುತ್ತದೆ ಎಂಬ ಆತಂಕ ಯಾರಿಗೂ ಬೇಡ. ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳ ಕೈಗೆ ತಲುಪುವಂತೆ ವ್ಯವಸ್ಥೆ ಮಾಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ಸರಿಯಾಗಿ ಶಾಲೆಗಳನ್ನು ತೆರೆಯಲು ಸಾಧ್ಯವಾಗಿರಲಿಲ್ಲ. ಈ ಬಾರಿ ಕೋವಿಡ್ ಆತಂಕ ಇಲ್ಲದಿರುವ ಕಾರಣ ಮಕ್ಕಳು ವಾತಾವರಣಕ್ಕೆ ಹೊಂದಿಕೊಳ್ಳಲಿ ಎಂಬ ಕಾರಣಕ್ಕಾಗಿಯೇ ಮುಂಚಿತವಾಗಿ ಪ್ರಾರಂಭಿಸುತ್ತಿದ್ದೇವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.…

Read More

ಕೊರಟಗೆರೆ : ಕರ್ನಾಟಕದ ಸಂಜೀವಿನಿ ಬೆಟ್ಟವೆಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಪ್ರಕೃತಿ ಮಡಿಲಲ್ಲಿ ಸ್ವಾಸ್ಥ್ಯ ಮಾರ್ಗದ ವತಿಯಿಂದ ಎರಡು ದಿನಗಳ ಪ್ರಾಕೃತಿಕ ಸ್ವಾಸ್ಥ್ಯ ಜೀವನ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು. ಸ್ವಾಸ್ಥ್ಯ ಜೀವನ ಮಾರ್ಗ ಯೋಗ ಪ್ರತಿಷ್ಠಾನ, ನಾಗಮಂಗಲ ಇವರ ವತಿಯಿಂದ ಖ್ಯಾತ ಯೋಗ ಗುರು ಲಕ್ಷ್ಮಣ್ ಜೀ ಅವರ ಸಾರಥ್ಯದಲ್ಲಿ ನಡೆದ ಈ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಚಿಕಿತ್ಸೆ, ಸಸ್ಯೌಷಧಗಳ ಪರಿಚಯವನ್ನು ಒಳಗೊಂಡ ಸ್ವಾಸ್ಥ್ಯ ಚಿಂತನೆಯ ಜೊತೆಗೆ ಚಾರಣದ ಹೂರಣವನ್ನು ಒಳಗೊಂಡಿದ್ದು ಶಿಬಿರದ ವಿಶೇಷ. ಮೊದಲಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯರವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಸಂರಕ್ಷಣೆಯಲ್ಲಿ ಆಹಾರ ವಿಹಾರ ವ್ಯಾಯಾಮ ಅತೀ ಮುಖ್ಯ ಆ ನಿಟ್ಟಿನಲ್ಲಿ ಎಲ್ಲರೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಡೆ ಗಮನ ಹರಿಸಬೇಕಿದೆ ಎಂದರು. ತದನಂತರ ಮಾತನಾಡಿದ ಸ್ವಾಸ್ಥ್ಯ ಮಾರ್ಗ ಜೀವನ ಮಾರ್ಗ ಯೋಗ…

Read More

ಹುಡುಗಿಗೆ ಮೆಸೆಜ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ. ಗಣೇಶ ಎಂಬ ದಲಿತ ಯುವಕನು ಯುವತಿಗೆ ಮೆಸೇಜ್ ಮಾಡಿದ್ದ ಎಂದು ಆರೋಪಿಸಿ ಗ್ರಾಮ ಗ್ರಾ.ಪಂ ಸದಸ್ಯ ಬಾಬಣ್ಣ, ಕಾರ್ತೀಕ್ ಹಾಗೂ ಹರೀಶ್ ಸೇರಿ ಅರವತ್ತಕ್ಕೂ ಹೆಚ್ಚು ಜನ ಸವರ್ಣೀಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕನಿಗೆ ಎರಡು ದಿನಗಳ ಕಾಲ ಚಿತ್ರ ಹಿಂಸೆ ನೀಡಿ, ಅರೇ ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರಗಾಯಗೊಂಡ ದಲಿತ ಯುವಕನಿಗೆ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಗಣೇಶನನ್ನು ಹಾಗೂ ಆತನ ತಾಯಿಯನ್ನು ಎರಡು ದಿನಗಳ ಕಾಲ ಕಲ್ಯಾಣ ಮಂಟಪದಲ್ಲಿ ಕೂಡಿ ಹಾಕಿ ಹಿಂಸಿಸಲಾಗಿದೆ ಈ ಅಮಾನವೀಯ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನ ಸಂಬಂಧಿಕರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ವಾರಣಾಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ಕಾರ್ಯ ಮೂರನೇ ದಿನವಾದ ಇಂದು ಮುಂದುವರೆದಿದ್ದು, ಇಂದು ಸರ್ವೇಯಲ್ಲಿ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ ಎಂದು ವಕೀಲರಾದ ವಿಷ್ಣುಜೈನ್ ತಿಳಿಸಿದ್ದಾರೆ. ನಿನ್ನೆವರೆಗೂ ನಡೆದ ಸರ್ವೇಯಲ್ಲಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ. ವಕೀಲರಾದ ಹರೀಶಂಕರ್ ಜೈನ್, ವಿಷ್ಣು ಜೈನ್ ಅವರ ಪ್ರಕಾರ ಭಾನುವಾರ ಮಸೀದಿಯ ಪ್ರದೇಶದ ಸಮೀಕ್ಷೆ ವೇಳೆ ಕೆಲವು ಭಾಗಗಳು ದೇವಸ್ಥಾನವಾಗಿ ಬಳಕೆಯಾಗಿರುವುದು ಕಂಡು ಬಂದಿದೆ. ಮಸೀದಿ ಸಂಕೀರ್ಣದ ಪಶ್ಚಿಮ ಭಾಗದ ಗೋಡೆ ಮೇಲೆ ಹಿಂದು ದೇವರುಗಳ ಕುರುಹುಗಳು ಪತ್ತೆಯಾಗಿವೆ. ಇದು ದೊಡ್ಡ ಪುರಾವೆಯಾಗಿದೆ. ಶನಿವಾರದ ಸರ್ವೇಯಲ್ಲಿ ಮೂರು ಕೊಠಡಿಗಳನ್ನು ತೆರೆಯಲಾಗಿದೆ, ಇಂದು ನಾಲ್ಕನೇ ಕೊಠಡಿಯನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಮಸೀದಿಯು ವಾರಣಾಸಿ ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಸ್ಥಳೀಯ ನ್ಯಾಯಾಲಯವು ಅದರ ಹೊರಗಿನ ಗೋಡೆಗಳ ಮೇಲೆ ಪ್ರತಿನಿತ್ಯದ ಪ್ರಾರ್ಥನೆಗೆ ಅನುಮತಿ ಕೋರಿ ದೆಹಲಿ ಮೂಲದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಸೇರಿ ಐದು ಮಂದಿ ಮಹಿಳೆಯರು 2021ರ ಏಪ್ರಿಲ್ 18 ನ್ಯಾಯಾಲಯಕ್ಕೆ…

Read More

ಆ್ಯಸಿಡ್ ದಾಳಿ ನಡೆಸಿದ ನಂತರ ಆರೋಪಿ ನಾಗೇಶ್ ತನ್ನ ಅಣ್ಣನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಬಳಿಕ ತನ್ನ ಬೈಕ್‍ನಲ್ಲಿ ನ್ಯಾಯಾಲಯದ ಬಳಿ ಹೋಗಿ ವಕೀಲರೊಬ್ಬರನ್ನು ಸಂಪರ್ಕಿಸಿ ನಡೆದ ಘಟನೆ ಬಗ್ಗೆ ವಿವರಿಸಿದಾಗ ವಕೀಲರು ಪೊಲೀಸರಿಗೆ ಶರಣಾಗುವಂತೆ ಸೂಚಿಸಿದ್ದಾರೆ. ವಕೀಲರ ಮಾತನ್ನು ಅಲ್ಲಗಳೆದ ಆರೋಪಿ ಬೈಕನ್ನು ಅಲ್ಲೇ ಬಿಟ್ಟು ಬಸ್‍ನಲ್ಲಿ ಹೊಸಕೋಟೆಗೆ ಹೋಗಿದ್ದಾನೆ. ಅಲ್ಲಿಯ ಕೆರೆಯೊಂದರ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ನಾಗೇಶ್ ಮನಸ್ಸು ಬದಲಿಸಿಕೊಂಡು ತಿರುಪತಿಗೆ ಹೋಗಲು ನಿರ್ಧರಿಸಿ ತನ್ನ ಬಳಿ ಮೊಬೈಲ್ ಇದ್ದರೆ ಸಿಕ್ಕಿಬೀಳುತ್ತೇನೆಂದು ತಿಳಿದು ಆ ಮೊಬೈಲ್‍ಅನ್ನು ಕೆರೆಗೆ ಬಿಸಾಡಿದ್ದಾನೆ. ನಂತರ ತಿರುಪತಿಗೆ ಹೋದರೆ ಸಿಕ್ಕಿಹಾಕಿಕೊಳ್ಳಬಹುದೆಂದು ತಿಳಿದು ತಮಿಳುನಾಡಿಗೆ ಹೋಗಲು ನಿರ್ಧಾರ ಬದಲಿಸಿದ್ದಾನೆ. ಅದರಂತೆ ಹೊಸಕೋಟೆಯಿಂದ ಮಾಲೂರು ಮುಖಾಂತರ ತಮಿಳುನಾಡಿನ ತಿರುವಣ್ಣಾಮಲೈಗೆ ಹೋಗಿದ್ದಾನೆ. ಅಲ್ಲಿನ ರಮಣ ಆಶ್ರಮದ ಬಗ್ಗೆ ತಿಳಿದುಕೊಂಡು ಖಾವಿ ವಸ್ತ್ರ ಖರೀದಿಸಿ ಸನ್ಯಾಸಿಯಂತೆ ವೇಷ ಧರಿಸಿ ಅಲ್ಲಿನವರೊಂದಿಗೆ ಸೇರಿಕೊಂಡು ಧ್ಯಾನ, ಇನ್ನಿತರ…

Read More

ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. ದೆಹಲಿಯಿಂದ ವರಿಷ್ಠರ ಸಂದೇಶವನ್ನು ಹೊತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ ಸಂದರ್ಭದಲ್ಲೇ ಬೊಮ್ಮಾಯಿ ಅವರು ಪ್ರಮುಖರ ಜೊತೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮೂರ್ನಾಲ್ಕು ದಿನಗಳಲ್ಲಿ ಸಂದೇಶ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಸಂದೇಶ ದೆಹಲಿ ನಾಯಕರಿಂದ ಬಾರದಿರುವುದು ಸಚಿವ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. ಬೆಂಗಳೂರಿಗೆ ಆಗಮಿಸಿರುವ ಉಸ್ತುವಾರಿ ಅರುಣ್ ಸಿಂಗ್ ದೆಹಲಿ ನಾಯಕರಿಂದ ಶುಭ ಸುದ್ದಿಯನ್ನೇ ತಂದೇ ತರುತ್ತಾರೆ ಎಂಬ ಅಚಲವಾದ ವಿಶ್ವಾಸ ಬಿಜೆಪಿ ನಾಯಕರದ್ದು.…

Read More