Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಮಂಡ್ಯ: ಯುವಕನ ಜೊತೆ ಮಗಳು ಓಡಿ ಹೋಗಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಾಚಹಳ್ಳಿಯಲ್ಲಿ ನಡೆದಿದೆ. ಕೀರ್ತನಾ, ಅಭಿ ಕಳೆದ ಐದು ದಿನ ಹಿಂದೆ ಓಡಿ ಹೋಗಿದ್ದರು. ಪ್ರೇಮಿಗಳನ್ನ ಹುಡುಕಿಕೊಡುವಂತೆ ಕೆ.ಆರ್.ಪೇಟೆ ಠಾಣೆಗೆ ಪೋಷಕರು ದೂರು ನೀಡಿದ್ದರು. ಐದು ದಿನವಾದರೂ ಮಗಳು ಸಿಗದ ಕಾರಣ ಮರ್ಯಾದೆಗೆ ಅಂಜಿ ಯುವತಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ತಂದೆ ರವಿ (47) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ದೂರು ನೀಡಿದಾಗ ಕ್ರಮ ತೆಗೆದುಕೊಳ್ಳದಿದ್ಕೆ ಸಂಬಂಧಿಕರು ಕೆ.ಆರ್.ಪೇಟೆ ಪೊಲೀಸ್ ಠಾಣೆ ಮುಂದೆ ಮೃತ ರವಿ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್ ಭೂಸ್ವಾಧೀನಾಧಿಕಾರಿ ವಿಜಯ್ ಬಲೆಗೆ ಬಿದ್ದ ಅಧಿಕಾರಿಗಳು. ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಪ್ರದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಸಿಕ್ಕಿಬಿದ್ದ ಅಧಿಕಾರಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ನ ಪೇ ಸಿಎಂ ಅಭಿಯಾನ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಇದೊಂದು ವ್ಯವಸ್ಥಿತ ಷಡ್ಯಂತ್ರ. ಈ ರೀತಿ ಪೋಸ್ಟ್ ಹಾಕುವುದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಎಂದು ಕಿಡಿಕಾರಿದರು. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆಧಾರ ರಹಿತವಾಗಿ ಕ್ಯಾಂಪೇನ್ ಮಾಡಲಾಗುತ್ತಿದೆ. ಈ ರೀತಿ ಮಾಡುವುದಕ್ಕೆ ಎಲ್ಲರಿಗೂ ಬರುತ್ತದೆ. ವ್ಯವಸ್ಥಿತ ಅಪಪ್ರಚಾರದ ಬಗ್ಗೆ ಜನರಿಗೂ ಗೊತ್ತಾಗುತ್ತೆ. ಪೇಸಿಎಂ ಪೋಸ್ಟರ್ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಕಿಡಿಗೇಡಿಗಳು ಯಾರೇ ಇದ್ದರೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿದ್ದೇನೆ. ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ದಾಖಲಿಸಲು ಸೂಚನೆ ನೀಡಿದ್ದೇನೆ. ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಮರಾವತಿ, ಸೆ.22: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಎನ್ಟಿಆರ್ ಆರೋಗ್ಯ ವಿಶ್ವವಿದ್ಯಾಲಯಕ್ಕೆ ತಮ್ಮ ತಂದೆ ಮತ್ತು ದಿವಂಗತ ಮಾಜಿ ಮುಖ್ಯಮಂತ್ರಿ ಡಾ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರ ಬುಧವಾರ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಇಡೀ ದಿನ ಸದನದಲ್ಲಿ ಗದ್ದಲ ಸೃಷ್ಟಿಸಿತ್ತು. ಇದರ ನಡುವೆಯೂ ಎನ್ಟಿಆರ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಹೆಸರನ್ನು ಡಾ ವೈಎಸ್ಆರ್ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಎಂದು ಬದಲಿಸುವ ಮಸೂದೆಯನ್ನು ರಾಜ್ಯ ವಿಧಾನಸಭೆಯು ಅಂಗೀಕರಿಸಿತು. ಬುಧವಾರ ರಾಜ್ಯ ಆರೋಗ್ಯ ಸಚಿವ ವಿಡದಾಳ ರಜಿನಿ ಮಸೂದೆಯನ್ನು ಮಂಡಿಸಿದರು. ಈ ನಿರ್ಧಾರದ ವಿರುದ್ಧ ಟಿಡಿಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿ ಪ್ರಶ್ನೋತ್ತರ ಕಲಾಪಕ್ಕೆ ಅಡ್ಡಿಪಡಿಸಿದರು.ವಿಧಾನಸಭೆಯು ಮಸೂದೆಯನ್ನು ಅಂಗೀಕರಿಸಿದ ಕೂಡಲೇ ಟಿಡಿಪಿ ಕಾರ್ಯಕರ್ತರು ವಿಜಯವಾಡದಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು. ಆರೋಗ್ಯ ವಿಶ್ವವಿದ್ಯಾಲಯದ ಬಳಿ ಧರಣಿ ನಡೆಸುವ ಮೂಲಕ ರಸ್ತೆಗಳನ್ನು ತಡೆದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.…
ಗದಗ: ತಾಲೂಕಿನ ಡಂಬಳ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕಂಬಳಿ ಹುಳು ಆಕಾರದ ವಿಚಿತ್ರ ಕೀಟವೊಂದು ಹರಿದಾಡಿದ ಪರಿಣಾಮ ಆ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ತಮ್ಮ ಜಮೀನು ಕೆಲಸಕ್ಕೆ ಹೋಗಿದ್ದ ಸಿದ್ದಲಿಂಗಪ್ಪ ಕುರ್ತಕೋಟಿ ಮೈ ಮೇಲೆ ಈ ಹುಳು ಹರಿದಾಡಿದೆ. ಹಾಗಾಗಿ ಸಿದ್ದಲಿಂಗಪ್ಪ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಗುಣಮುಖರಾಗಿರುವ ಸಿದ್ದಲಿಂಗಪ್ಪ ಮನೆಯಲ್ಲಿದ್ದಾರೆ. ಅದೇ ಮಾದರಿಗೆ ಹುಳವೊಂದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹುಳು ಮೈ ಮೇಲೆ ಹರಿದ್ರೆ ಸಾವು ಸಂಭವಿಸುತ್ತದೆ ಎಂದು ಸಂದೇಶ ಹರಿಬಿಡಲಾಗುತ್ತಿದೆ. ಇದರಿಂದ ಆತಂಕಗೊಂಡಿರುವ ಹೊಂಬಳ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು, ಹುಳುವನ್ನು ಕೃಷಿ ಇಲಾಖೆ ಅಧಿಕಾರಿಗಳಿಗೆ ನೀಡಿ ಪರೀಕ್ಷೆ ಮಾಡಿಸುವಂತೆ ಆಗ್ರಹಿಸುತ್ತಿದ್ದಾರೆ. ಸುಳ್ಳು ಮಾಹಿತಿಯುಳ್ಳ ಫೊಟೋಗಳೊಂದಿಗೆ ಹರಿದಾಡುತ್ತಿರುವ ಸಂದೇಶದಿಂದ ಜನ ಭಯ ಭೀತರಾಗಿದ್ದಾರೆ. ಎರಡು ಮೃತ ದೇಹದ ಜೊತೆಗೆ ಒಂದು ವಿಚಿತ್ರ ಮಾದರಿಯ ಹುಳು ಫೋಟೋವನ್ನು ಶೇರ್ ಮಾಡುತ್ತಿದಾರೆ. ಈ ಭಯಾನಕ ಕೀಟ ದೇಹಕ್ಕೆ ಸ್ಪರ್ಶ ಮಾಡಿದ್ರೆ, ವಾಂತಿ ಬರುತ್ತದೆ. ಹಾಗೇ ಮೂರ್ಛೆ ಹೋಗುತ್ತಾರೆ…
ನವದೆಹಲಿ: ಪ್ರಧಾನ ಮಂತ್ರಿ ಕೇರ್ಸ್ ಫಂಡ್ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಕೆ.ಟಿ.ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ. ಹಾಗೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾಪ್ಸ್ ಮತ್ತು ಪಿರಮಲ್ ಫೌಂಡೇಶನ್ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿ.ಜೆ.ಪಿ ಸರ್ಕಾರವು ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರಾಗಿ ನೇಮಕಾತಿ ಮಾಡಲು ಸಮ್ಮತಿ ನೀಡಿದ ಪ್ರಯುಕ್ತ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ವ್ಯಯಕ್ತಿಕವಾಗಿ ಹಾಗೂ ಎಲ್ಲ ಪೌರಕಾರ್ಮಿಕರ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು. ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುತ್ತೀರುವ ರಾಜ್ಯ ಬಿ.ಜೆ.ಪಿ ಸರ್ಕಾರವು ಎಲ್ಲರ ಹಿತವನ್ನು ಕಾಯುತ್ತಿದ್ದು, ಪೌರಕಾರ್ಮಿಕರ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿರುವುದು ಅತೀ ಸಂತೋಷದ ಸಂಗತಿಯಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಇಂದು ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿ ಮಾಡಿ ವಿನಂತಿಸಲಾಗಿದೆ ಎಂದರು. ನಮ್ಮ ಮನವಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿವಾಸಕ್ಕೆ ಭೇಟಿ ನೀಡಿ ವಿಚಾರಿಸಿದರು. ಅನಾರೋಗ್ಯಕ್ಕೆ ಒಳಗಾಗಿರುವಂತ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ,ಕೆಲ ಕಾಲ ಮಾತುಕತೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಕೆ.ಗೋಪಾಲಯ್ಯ, ವಿ.ಸೋವಣ್ಣ, ವಿ. ಮುನಿರತ್ನ ಸೇರಿದಂತೆ ಅನೇಕರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದೆ. ಕರ್ನಾಟಕ ತಮಿಳುನಾಡು, ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್ ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಇನ್ನೂ, ಮಂಗಳೂರಿನ ಪಿಎಫ್ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ ಎನ್ಐಎ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ. ಈ ವೇಳೆ ಗೋ ಬ್ಯಾಕ್ ಎನ್ ಐಎ ಎಂದು ಪಿಎಫ್ ಐ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಎನ್ಐಎ ದಾಳಿ ಹಿನ್ನಲೆಯಲ್ಲಿ ಪೊಲೀಸರು…