Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ಗದಗ: ಭಾರತದಾದ್ಯಂತ ಕಾಂಗ್ರೆಸ್ ‘ಬೆಲೆ ಏರಿಕೆ ಮುಕ್ತ ಭಾರತ’ ಎಂಬ ಅಭಿಯಾನದಡಿಯಲ್ಲಿ ವಿನೂತನ ಹೋರಾಟವನ್ನು ನರಗುಂದ ತಾಲೂಕಿನ ಸೋಮಾಪೂರ ಓಣಿಯ ಐದು ಮತ್ತು ಹದಿನೆಂಟನೆಯ ವಾರ್ಡ್ ನ ಜನರು ಹಮ್ಮಿಕೊಂಡರು. ಎಐಸಿಸಿ ಮಾನವ ಹಕ್ಕುಗಳ ಘಟಕದಿಂದ ಅಧ್ಯಕ್ಷರಾದ ಶಿವಾನಂದ ಮಾಯಣ್ಣ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿ, ಬಿಜೆಪಿ ಸರಕಾರ ಹತ್ತೇದಿನದಲ್ಲಿ ಹನ್ನೊಂದು ಬಾರಿ ಪೆಟ್ರೊಲ್ ಬೆಲೆಯನ್ನು ಏರಿಕೆ ಮಾಡಿದೆ. ಇದೊಂದು ಸುಳಿಗೆ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರಗಳ ವರ್ಷಕ್ಕೆ ಎರಡು ಕೋಟಿ ಇಪ್ಪತ್ತು ಲಕ್ಷ ಟನ್ ಅವಶ್ಯವಿದ್ದು, 2300ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ರೈತರಿಂದ ವಸೂಲಿ ಮಾಡಿದೆ. ಇದೊಂದು ಜನವಿರೋಧಿ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ಪೆಟ್ರೋಲ್ ಡಿಸೇಲ್ ಗ್ಯಾಸ್ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ನರಗುಂದ ತಾಲೂಕಿನ ಸೋಮಾಪೂರ ಓಣಿಯ5 ಮತ್ತು 18ನೇಯ ವಾರ್ಡಿನ ಹಿರಿಯರಾದ ಬಸನಗೌಡ ಕ ಪಾಟೀಲ, ಚನ್ನಬಸುವ ಹುಲಜೋಗಿ, ಪಕ್ರುಸಾಬ ಬಿಳಗಿ, ವಿಠ್ಠಲ ಬಾರಕೇರ, ಶರಣಪ್ಪ ಹುಲಜೋಗಿ,…
ಸರಗೂರು: ತಾಲ್ಲೂಕಿನ ಕೆ ಬೆಳ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಹುಂಡಿ ಗ್ರಾಮದಲ್ಲಿ ಸಾಲುಂಡಿ ಗ್ರಾಮದ ಚಿಕ್ಕಣ್ಣ ಎಂಬುವರು ಸರ್ಕಾರಿ ಜಾಗ ಗೋಮಾಳ ವನ್ನು ಒತ್ತುವರಿ ಮಾಡಿಕೊಂಡು ಅಲ್ಲಿಂದ ಮಣ್ಣು ಸಾಗಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಣ್ಣ ಅವರು ತನ್ನ ಜಮೀನು ಪಕ್ಕದಲ್ಲಿರುವ ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡು, ಅಲ್ಲಿದ ಗೋಮಾಳ ಜಾಗದ ಬೆಟ್ಟದಿಂದ ಅಕ್ರಮ ವಾಗಿ ಮಣ್ಣು ತೆಗೆದು ತಮ್ಮ ಜಮೀನಿಗೆ ತೆಗೆದುಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ವಿಚಾರವನ್ನು ಗ್ರಾಮಸ್ಥರು ಪ್ರಶ್ನಿಸಿದರೆ, ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.. ಚಿಕ್ಕಣ್ಣ ಪೋಲಿಸ್ ಇಲಾಖೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಪ್ರಭಾವ ಬಳಸಿ ಅವರು ಈ ಕೆಲಸ ಮಾಡುತ್ತಿದ್ದಾರೆ. ಸರಗೂರು ತಾಲ್ಲೂಕಿನ ತಹಶೀಲ್ದಾರ್ ಹಾಗೂ ಅರಣ್ಯ ಇಲಾಖೆಯವರು ಮತ್ತು ಚಿಕ್ಕಣ್ಣನ ಈ ವಿಚಾರಕ್ಕೆ ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮಣ್ಣು ಅಕ್ರಮ ಗಣಿಗಾರಿಕೆ ನಡೆಸಿದರೂ ಕಂದಾಯ ಮತ್ತು ಅರಣ್ಯ…
ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಗೆ ಆರ್ ಟಿಒ ಅಧಿಕಾರಿಯೊಬ್ಬರು ನೆರವಾಗಿದ್ದು, ತಮ್ಮ ಜೀಪಿನಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆರ್ ಟಿ ಓ ಇನ್ಸ್ ಪೆಕ್ಟರ್ ಇದಾಯತ್ ಷರೀಫ್ ಮಾನವೀಯತೆ ಮೆರೆದ ಅಧಿಕಾರಿಯಾಗಿದ್ದಾರೆ. ತುಮಕೂರು ತಾಲೂಕಿನ ಬೆಳದರ ಬಳಿ ಅಪಘಾತವಾಗಿ ಬಿಹಾರ ಮೂಲದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಅವರ ಕಾಲಿಗೆ ತೀವ್ರವಾದ ಏಟು ತಗಲಿತ್ತು. ಆಂಬುಲೆನ್ಸ್ ಬರುವುದು ತಡವಾದ ಹಿನ್ನೆಲೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ನರಳುತ್ತಿದ್ದ. ಇದನ್ನು ಕಂಡ ಇದಾಯತ್ ಷರೀಫ್ ತಡಮಾಡದೇ ತಮ್ಮ ಜೀಪಿನಲ್ಲೇ ಗಾಯಾಳುವನ್ನು ಕೂರಿಸಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದು, ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇನ್ನೂ ಇದಾಯತ್ ಷರೀಫ್ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಂಬುಲೆನ್ಸ್ ಗೆ ಕಾಯದೇ, ಯಾವುದೇ ಅಡೆತಡೆಗಳನ್ನು ಗಮನಿಸಿದೇ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಅವರು ಸಾರ್ವಜನಿಕರಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ಈ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಮೊದಲ ಬಾರಿಗೆ ಜಗನ್ ಜೀವನ್ ರಾಮ್ ಅವರ 115ನೇ ಜನ್ಮ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದಂತೆ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾ. ಮಾಜಿ ಸಚಿವರಾದ ಡಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಹೆಚ್.ಆಂಜನೇಯ ಮಾರ್ಗದರ್ಶನ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗಿದ್ದು, ರಾಜ್ಯಮಟ್ಟದ ಕಾಂಗ್ರೆಸ್ ನಾಯಕರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಕಾಂಗ್ರೆಸ್ ನಾಯಕರ ಕಟೌಟ್ ಗಳು ರಾರಾಜಿಸುತ್ತಿವೆ. ಇನ್ನೊಂದೆಡೆ ಕಾರ್ಯಕ್ರಮಕ್ಕೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕಾರಣ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಇನ್ನೂ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಮಾಜಿ ಜಿಲ್ಲಾ ಜಿಲ್ಲಾಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಕೂಡ ಆಗಮಿಸಲಿದ್ದಾರೆ. ಈಗಾಗಲೇ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. …
ಕುಣಿಗಲ್: ಎಸೆಸೆಲ್ಸಿ ಪರೀಕ್ಷೆಗೆ ಸ್ನೇಹಿತರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಂದು ಬೆಳಗ್ಗೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿಯ ನವೀನ್ ಎಂಬಾತ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ . ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಕಳೆದ ಐದು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಸಂಬಂಧ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಬೆನ್ನಲ್ಲೇ ಹೃದಯಾಘಾತಕ್ಕೆ ಈಡಾಗಿ ಅಸುನೀಗಿದಳು, ಇನ್ನು ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ವರದಿ: ಮಾರುತಿ ಪ್ರಸಾದ್ ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಎಚ್.ಡಿ.ಕೋಟೆ: ಚಿಕ್ಕದೇವಮ್ಮ ಜಾತ್ರೆಯಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಶತ-ಶತಮಾನಗಳ ಮೌಢ್ಯ-ಅಂಧ ಸಂಪ್ರದಾಯಕ್ಕೆ ಅಂತಿಮ ವಿದಾಯ, ಭಾರತೀಯ ಧಾರ್ಮಿಕ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲುಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ, ಪಶು ಪ್ರಾಣಿ ಬಲಿ ನಿರ್ಮೂಲನಾ ಜಾಗೃತಿ ಮಹಾಸಂಘ ಮತ್ತು ಬಸವ ಧರ್ಮ ಜ್ಞಾನಪೀಠದ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ತಿಳಿಸಿದರು. ಪಟ್ಟಣದ ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕದೇವಮ್ಮ ಬೆಟ್ಟದ ದೇವಾಲಯದ ಪರಿಸರ, ಪಾದಗಟ್ಟೆ ಹಾಗೂ ಹಾಲುಗಡ ಪರಿಸರದಲ್ಲಿ, ಕಪಿಲಾನದಿ ತೀರದಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದೆ ಎಂದರು. ಇಟ್ನ ಗ್ರಾಮದ ಕಪಿಲಾ ನದಿ ತೀರದಲ್ಲಿ ಸಾವಿರಾರು ಭಕ್ತಾಧಿಗಳಿಗೆ ಶುದ್ಧ ಸಸ್ಯಾಹಾರ ಹಾಗೂ ಸಿಹಿ ಊಟದ-ಅನ್ನ ದಾಸೋಹ ನೆರವೇರಿಸಲಾಯಿತು. ಸಾಗರೆ ಮಾರಮ್ಮದೇವಿ (ತ್ರಿಪುರಸುಂದರಿ ಲಲಿತಾದೇವಿ) ಜಾತ್ರೆಯಲ್ಲಿಯೂ ಪ್ರಾಣಿಬಲಿ ತಡೆ ಬಹುತೇಕ ಯಶಸ್ವಿ ಕುರಿತು ಮತ್ತು ಪ್ರಾಣಿಬಲಿ ತಡೆ ಯಶಸ್ವಿಯಾಗಿದೆ ಎಂದರು. ಇದೇ 7, 8ರ ಏಪ್ರಿಲ್ 2022 ರಂದು ನಡೆಯಲಿರುವ ತೆರಣಿಮುಂಟಿ ಮಾಂಕಾಳಮ್ಮದೇವಿ ಹಬ್ಬ-ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯಲು ಸರ್ಕಾರ …
ತುಮಕೂರು: ಡಾ.ಜಿ.ಪರಮೇಶ್ವರ್ ರವರ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಮಾಜಿ ಶಾಸಕ ರಫೀಕ್ ಅಹ್ಮದ್ ಅವರು ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಿದರು. ಆಹ್ವಾನ ನೀಡಿದ ಬಳಿಕ ಮಾತನಾಡಿದ ರಫೀಕ್ ಅಹ್ಮದ್, ಕರ್ನಾಟಕದ ಮಾಜಿ ಮಂತ್ರಿಗಳು ಹಾಗೂ ಹಿರಿಯರಾದ ಡಾ. ಜಿ.ಪರಮೇಶ್ವರ್ ಅವರ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಸಮಾರಂಭ ಇದೇ ಏಪ್ರಿಲ್ 10ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಆವರಣ ಅಗಲಕೋಟೆ ತುಮಕೂರು ನಗರದಲ್ಲಿ ಅವರ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಅವರು ಮನವಿ ಮಾಡಿದರು. ಡಾ.ಜಿ.ಪರಮೇಶ್ವರ್ ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ಕೊಟ್ಟು ಮುಂದಿನ ದಿನಗಳಲ್ಲಿ ಅವರಿಗೆ ರಾಜಕೀಯದಲ್ಲಿ ಹಾಗೂ ಸಮಾಜದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುವಂತಹ ಸ್ಪೂರ್ತಿಯನ್ನು ಅವರಿಗೆ ಕೊಡೋಣ ಎಂದು ಮನವಿ ಮಾಡಿಕೊಂಡರು. ವರದಿ: ಎ.ಎನ್. ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಮಾಯಸಂದ್ರ: ಮಾರ್ಚ್ 29 ರಿಂದ 31ರವರೆಗೆ ಬಿಜಾಪುರದಲ್ಲಿ ನಡೆದ ಪೈಕಾ ಕ್ರೀಡಾಕೂಟದಲ್ಲಿ ಹ್ಯಾಂಡ್ಬಾಲ್ ಪಂದ್ಯದಲ್ಲಿ ಆದಿಚುಂಚನಗಿರಿ ಮಠದ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮಾಯಸಂದ್ರ TB ಕ್ರಾಸ್’ನಾ SBG ವಿದ್ಯಾಲಯವು ಭರ್ಜರಿ ಜಯಭೇರಿ ಬಾರಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದೆ. ಶಾಲೆಯ ದೈಹಿಕ ತರಬೇತುದಾರಾದ CP ಉದಯ್ ಕುಮಾರ್, ಗಿರಿಧರ್ ಕೆ.ಎಸ್. ಮತ್ತು ಶಂಕರ್ ಎಂ.ಎಸ್.ರವರ ಸಾರಥ್ಯದಲ್ಲಿ ಪಳಗುತ್ತಿರುವ ವಿದ್ಯಾರ್ಥಿಗಳು , ಭಾಗವಹಿಸಿದ ಕ್ರೀಡಾಕೂಟಗಳಲೆಲ್ಲಾ ಜಯಭೇರಿ ಬಾರಿಸುತ್ತಿದ್ದಾರೆ. SBG ಮಕ್ಕಳ ಈ ಸಾಧನೆ ಕಂಡು ಶ್ರೀ ಶ್ರೀ ಪ್ರಸನ್ನ ಸ್ವಾಮೀಜಿ ಅವರು , ಆಡಳಿತಾಧಿಕಾರಿಗಳಾದ ರಾಜಣ್ಣ, ಮುಖ್ಯ ಶಿಕ್ಷಕರಾದಂತಹ ಗಿರೀಶ್ ಮತ್ತು ಎಲ್ಲಾ ಶಿಕ್ಷಕ ಬಳಗ ಶುಭಕೋರಿದ್ದಾರೆ. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಮಾಜಿ ಶಾಸಕ ಡಾ.ರಫೀಕ್ ಅಹ್ಮದ್ ಸ್ನೇಹಕೂಟ ವತಿಯಿಂದ ಗರ್ಭಿಣಿಯರಿಗೆ ಹಾಗೂ ವಿಕಲಚೇತನರಿಗೆ ಎರಡು ಆಟೋಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಡಾ. ರಫೀಕ್ ಅಹ್ಮದ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಗೋಕುಲ ಬಡಾವಣೆಯ ಗಂಗರಾಜು ಹಾಗೂ ನಗರಸಭೆ ಅಧ್ಯಕ್ಷ ರಾಜುರವರ ಸಂಗಡಿಗರ ಸಹಾಯದಿಂದ ಇವತ್ತು 2 ಆಟೋಗಳಲ್ಲಿ ಚಾಲಕರಾದ ಶಿವಕುಮಾರ್ ಮತ್ತು ನಾರಾಯಣ್ ರವರು ಉಚಿತವಾಗಿ ಗರ್ಭಿಣಿಯರಿಗೆ ಹಾಗೂ ವಿಕಲಚೇತನರಿಗೆ ಉಚಿತ ಸೇವೆಯನ್ನು ಕೊಡಲು ಮುಂದೆ ಬಂದಿದ್ದಾರೆ. ಈ ಸೇವೆಯನ್ನು ಇವತ್ತಿನಿಂದ ಪ್ರಾರಂಭ ಮಾಡಿದ್ದಾರೆ ಎಂದು ತಿಳಿಸಿದರು. ಈ ಇಬ್ಬರು ಆಟೋ ಚಾಲಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈಗಿನ ಕಾಲದಲ್ಲಿ ಈ ರೀತಿಯ ಸೇವೆ ಮಾಡುತ್ತಿರುವುದು ಬಹಳ ಕಡಿಮೆ ಅದರಲ್ಲೂ, ಇಬ್ಬರು ಆಟೋ ಚಾಲಕರು ಸಮಾಜ ಸೇವೆಗೆ ಮುಂದೆ ಬಂದಿದ್ದಾರೆ. ಇಂತಹ ಸೇವೆ ಗರ್ಭಿಣಿಯರಿಗೆ ಮತ್ತು ವಿಕಲಚೇತನರಿಗೆ ಬಹಳ ಅವಶ್ಯಕವಾಗಿದೆ ಎಂದು ಹೇಳಿದರು. ಉಚಿತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಅವರು…
ತುಮಕೂರು : ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಬೆಳಗಿನ ಜಾವ 3:50ರ ಸುಮಾರಿಗೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ರಂಗಪುರಬಳಿ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ. ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5