Subscribe to Updates
Get the latest creative news from FooBar about art, design and business.
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
- ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್ ಒ ಕಚೇರಿ ವ್ಯವಸ್ಥಾಪಕ
- ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
- ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
- ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
- ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
Author: admin
ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್ ಐಎ ತನಿಖೆಗೆ ವಹಿಸಲು ಯಾಕೆ ಹಿಂಜರಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಎಂದು ಟೀಕಿಸಿದ್ದಾರೆ. ಚುನಾವಣೆ ವರ್ಷದಲ್ಲಿ ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ! ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು…
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಖ್ಯಾತ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಹಾಗೂ ಭೀಮನ ಅಮಾವಾಸ್ಯೆ ಪ್ರಯುಕ್ತ ತಾಯಿ ದುರ್ಗಾ ಪರಮೇಶ್ವರಿ ದೇವಿಗೆ ಭಕ್ತಾದಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದುರ್ಗಾಪರಮೇಶ್ವರಿ ದೇವಿಗೆ ಹೂವಿನ ಅಲಂಕಾರ , ಪುಷ್ಪಾರ್ಚನೆ ನೆರವೇರಿಸಲ್ಪಟ್ಟಿತ್ತು . ವಿಶೇಷ ಪೂಜೆ ಬಗ್ಗೆ ಮಾಧ್ಯಮದ ಪ್ರತಿನಿಧಿಯೊಂದಿಗೆ ಮಾತನಾಡಿದ ದುರ್ಗಾ ಪರಮೇಶ್ವರಿ ದೇವಸ್ಥಾನ ಅರ್ಚಕರಾದ ಕೃಷ್ಷ ಅವರು, ದೇವಿಯ ವೈಶಿಷ್ಟ್ಯತೆ ಹಾಗೂ ಮಹತ್ವಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಭಕ್ತಾದಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು . ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕೃಷ್ಣ, ರವಿ ಸೇರಿದಂತೆ ಅನೇಕ ಭಕ್ತಾದಿಗಳು ಸಹ ಧೇವಿ ದುರ್ಗಾ ಪರಮೇಶ್ವರಿ ದೇವಿಯ ಪೂಜೆಯಲ್ಲಿ ಭಾಗವಹಿಸಿದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಮಿಷನ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ ಸಂಸ್ಥೆ ವತಿಯಿಂದ ಪೌಷ್ಠಿಕತೆಯ ಹಾದಿಯಲ್ಲಿ, ಆರೋಗ್ಯ ಮತ್ತು ಪೌಷ್ಠಿಕತೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಎಲ್ಲಾ ಮಕ್ಕಳು ಆರೋಗ್ಯಕರವಾದ ಬೆಳವಣಿಗೆಯನ್ನು ಹೊಂದಬೇಕು. ಜನರು ನಾಲಿಗೆಗೆ ರುಚಿ ನೀಡುವ ಜಂಕ್ ಫುಡ್ ಮರಳಾಗಿದ್ದಾರೆ ಎಂದರು. ಈ ಕಾರ್ಯಕ್ರಮದ ಸಂಯೋಜಕ ರು ಅಮಿತ್ ಕಾರ್ಣಿಕ್ ನಿವೃತ್ತ ಜಂಟಿ ಸಂಯೋಜಕ ತಿರುಮಲ ರಾವ್, ದಿವ್ಯ, ಕಾರ್ಣಿಕ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಪ್ರಭುಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ತೀರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಹೇಳಿದ್ದಾರೆ. ಪ್ರವೀಣ್ ಹತ್ಯೆಯನ್ನು ಖಂಡಿಸಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಕೊಲೆಗಳಾಗಿವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಸಿಎಂ ಬೊಮ್ಮಾಯಿ ಅವರು ಸಿದ್ಧರಾಮಯ್ಯ ನವರ ಆಡಳಿತದ ಸಮಯದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಸಿಎಂ ಪ್ರಶ್ನಿಸಿದರು. ಎಸ್ಡಿಪಿಐ, ಪಿಎಫ್ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ಇದು ಕಾಂಗ್ರೆಸ್ನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ತಾಲೂಕು ಜಕ್ಕನಹಳ್ಳಿ ಮತ್ತು ಚೌಡಲಾಪುರ ಗ್ರಾಮದ ರೈತರು ಗೋಮಾಳದಲ್ಲಿ ಉಳುಮೆ ಮಾಡಲು ಅರಣ್ಯಾಧಿಕಾರಿಗಳು ಅಡ್ಡಿಪಡಿಸುತ್ತಿದ್ದು, ರೈತರಿಗೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಿಪಟೂರು ತಾಲೂಕು ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮಾತನಾಡಿ, ತಾಲೂಕಿನ ಬಡ ರೈತರಿಗೂ ಸರ್ಕಾರಿ ಆದೇಶದಂತೆ ಸಾಗುವಳಿ ಚೀಟಿ ನೀಡಬೇಕು, ಅರ್ಜಿ ನಮೂನೆ 57ರಲ್ಲಿ ಸಲ್ಲಿಸಿದವರಿಗೂ ಅಕ್ರಮ ಸಕ್ರಮ ಯೋಜನೆ ಬಡವರಿಗೆ ಸಿಗಬೇಕು. ಉಳ್ಳವರಿಗಲ್ಲ, ರೈತರಿಗೆ ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದರು . ಈ ಪ್ರತಿಭಟನೆಯಲ್ಲಿ ರೈತ ಸೇವ್ ಸಂಘದ ಅಧ್ಯಕ್ಷ ಇಂದ್ರೇಶ್, ಉಪಾಧ್ಯಕ್ಷ ಎಚ್.ಆರ್. ಭೋಜರಾಜ್ , ಸೇವಾ ಸಹಕಾರ ಸಂಘದ ಗೊರಗಂಡನಹಳ್ಳಿಯ ಸುದರ್ಶನ್ ಸುತ್ತಮುತ್ತ ಹಳ್ಳಿಯ ರೈತರು ಭಾಗವಹಿಸಿದ್ದರು ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಗೊಂಡಾ : ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದು ಮತ್ತು ನಂತರ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಪತಿ ಮೊಹಮ್ಮದ್ ಅದ್ನಾನ್ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದರು ಮತ್ತು ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಆರೋಪಿಯ ಹಿಂಸೆಯಿಂದ ಬೇಸತ್ತು ತವರು ಮನೆಯಲ್ಲಿ ವಾಸಿಸಲು ಪ್ರಾರಂಭಿಸಿರುವುದಾಗಿ ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ. ಮಂಗಳವಾರ ಆರೋಪಿ ಅದ್ನಾನ್ ಮತ್ತು ಅವರ ಸೋದರಸಂಬಂಧಿ ತನ್ನ ಅತ್ತೆಯ ಮನೆಗೆ ಹೋಗಿದ್ದು, ಇಬ್ಬರೂ ಮಹಿಳೆಯನ್ನು ಒಬ್ಬಂಟಿಯಾಗಿ ಇರುವುದನ್ನು ಗಮನಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಲಾಗಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ. ಲಕ್ನೋ ಮೂಲದ ಆರೋಪಿಯಾಗಿರುವ ಮಹಿಳೆಯ ಪತಿ ಮೊಹಮ್ಮದ್ ಅದ್ನಾನ್ ನನ್ನು ಗುರುವಾರ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಸೋದರ ಸಂಬಂಧಿಯನ್ನು…
ಡಿವೈಡರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಹನುಮಂತಪುರ ಬ್ರಿಡ್ಜ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟವರನ್ನು ಹಾವೇರಿ ಜಿಲ್ಲೆಯ ಸಚಿನ್ (21) ಮಲ್ಲಿಕಾರ್ಜುನ್ (24)ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಹನುಮಂತಪುರದ ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಗಳೂರು: ಸುರತ್ಕಲ್ ನ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಫಾಝಿಲ್ ಅಂತ್ಯಸಂಸ್ಕಾರಕ್ಕೆಸಾವಿರಾರು ಮಂದಿ ಭಾಗವಹಿಸಿದ್ದರು. ಪೊಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದು,ಯಾವುದೇ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿ ಫಾಝಿಲ್ ದಫನ ಕಾರ್ಯ ನೆರವೇರಿತು. ಫಾಝಿಲ್ ಮನೆಗೆ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಮೊಯಿದ್ದೀನ್ ಬಾವ, ಐವನ್ ಡಿಸೋಜಾ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಇರುವುದರಿಂದ ಸುರತ್ಕಲ್ ಪಣಂಬೂರು, ಮೂಲ್ಕಿ ಪ್ರದೇಶದಲ್ಲಿ ಸೆಕ್ಷನ್ ಜಾರಿಯಾಗಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಲಾಗಿದೆ. ಶಾಸಕ ಯು.ಟಿ. ಖಾದರ್ ಮಾತನಾಡಿ, ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದರು. ಅಲ್ಲದೆ ಪರಿಹಾರ ವಿತರಣೆಯಲ್ಲಿ ಸರಕಾರ ಯಾವುದೇ ರೀತಿಯಲ್ಲಿ ತಾರತಮ್ಯ ತೋರಬಾರದು ಎಂದು ಒತ್ತಾಯಿಸಿದರು.ಫಾಝಿಲ್ ಕೊಲೆ…
ಪಾವಗಡ: ತಾಲೂಕಿನ ಹಲಸಂಗಿಯ ವೈ ಎನ್ ಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಸಾಸಲಕುಂಟೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ದೇವರಾಜ್ ಮತ್ತು ದೈಹಿಕ ಶಿಕ್ಷಕಿ ಶ್ರೀಲಕ್ಷ್ಮೀ ಮಕ್ಕಳೆದುರು ಆಕ್ಷೇಪಾರ್ಹ ವರ್ತನೆ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮುಖ್ಯೋಪಾಧ್ಯಾಯ ದೇವರಾಜ್ ಮತ್ತು ದೈಹಿಕ ಶಿಕ್ಷಕಿ ಶ್ರೀಲಕ್ಷ್ಮೀ ಅವರು, ಮಕ್ಕಳ ಮುಂದೆಯೇ ಅಸಭ್ಯವಾಗಿ ಮಾತನಾಡುವುದು, ಮಕ್ಕಳ ಮುಂದೆಯೇ ಹೊಡೆದಾಡುವುದು, ಕೆಲವು ಮಕ್ಕಳಲ್ಲಿ ಜಾತಿ ತಾರತಮ್ಯ ಮಾಡುವುದು. ವಿಶೇಷ ಶಾಲೆಯ ಹೆಸರಿನಲ್ಲಿ ಚಿಕನ್ ಪಾರ್ಟಿ ಮಾಡುವುದು ಹೀಗೆ ಹಲವಾರ ದುರ್ವರ್ತನೆಯನ್ನು ತೋರುತ್ತಿದ್ದಾರೆ ಎಂದು ಗ್ರಾಮದ ಯುವಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಆಕ್ಷೇಪಾರ್ಹ ವರ್ತನೆಯಿಂದಾಗಿ ಪಕ್ಕದ ಹಳ್ಳಿಯ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಿಕ್ಷಕರ ಆಕ್ಷೇಪಾರ್ಹ ವರ್ತನೆಯಿಂದ ಬೇಸತ್ತ ಸಾಸಲಕುಂಟೆ ಗ್ರಾಮಸ್ಥರು ಶಾಲೆಯ ಬಳಿ ಬಂದು ಶಿಕ್ಷಕರನ್ನು ತರಾಟೆಗೆತ್ತಿಕೊಂಡಿದ್ದಾರಲ್ಲದೇ, ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದು, ಶಾಸಕರಾದ ವೆಂಕಟರಮಣಪ್ಪ, ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ…
ಮಧುಗಿರಿ: ಸರ್ಕಾರದ ಆದೇಶದಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಜನಾಂಗದವರಿಗೆ ಉಚಿತವಾಗಿ 75 ಯೂನಿಟ್ ಗಳ ವಿದ್ಯುತ್ ಅನ್ನು ನೀಡುವುದಾಗಿ ಅದಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ತಿಂಗಳ 30ನೇ ತಾರೀಕು ಎಂದು ಯೋಜನೆ ಹೊರಡಿಸಿದೆ. ಅದರಂತೆ ಇಂದು ಮಧುಗಿರಿಯಲ್ಲಿ ಬೆಸ್ಕಾಂ ಕಚೇರಿಯಲ್ಲಿ ಎಲ್ಲಾ ಪರಿಶಿಷ್ಟ ಜಾತಿ ಪಂಗಡದವರಿಗೆ ಡೆಪಾಸಿಟ್ ಕಟ್ಟಲು ಹೇಳಿದಾಗ ಹಣ ಕಟ್ಟಿದ ನಂತರ ಅರ್ಜಿ ಸಲ್ಲಿಸಿ ಅರ್ಜಿಯ ಸ್ವೀಕೃತ ಪತ್ರ ನಕಲು ಕೇಳಿದಾಗ ನಾವು ಯಾವುದೇ ನಕಲನ್ನು ಕೊಡುವುದಿಲ್ಲ ಆ ರೀತಿಯಾಗಿ ನಮಗೆ ಆದೇಶವೂ ಇಲ್ಲ ಎಂದು ಅಲ್ಲಿ ಬಂದಿರುವಂತಹ ಅರ್ಜಿದಾರರಿಗೆ ಬೆದರಿಕೆಯ ರೀತಿಯಲ್ಲಿ ಉಡಾಫೆ ಉತ್ತರವನ್ನು ಸೀನಿಯರ್ ಅಸಿಸ್ಟೆಂಟ್ ಶಶಿಕಲಾ ಅವರು ನೀಡುತ್ತಿದ್ದಾರೆ. ಇದರಿಂದ ಕೆಂಡಮಂಡಲಗೊಂಡ ಸ್ಥಳೀಯ ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿ ಅರ್ಜಿ ಸಲ್ಲಿಸಲು ಅವಿದ್ಯಾವಂತರು ವಿದ್ಯಾವಂತರು ಆಗಮಿಸುತ್ತಾರೆ, ಆದರೆ ಅಧಿಕಾರಿಗಳು…