Subscribe to Updates
Get the latest creative news from FooBar about art, design and business.
- ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
- ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
- ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
- ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
- ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
- ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
- ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
Author: admin
ಹಿರಿಯೂರು: ಹಿರಿಯೂರು ನಗರದಲ್ಲಿ ಮೊದಲ ಹಂತದ ಒಳಚರಂಡಿ ವ್ಯವಸ್ಥೆ ಜಾರಿಗೆ ಸಚಿವರಾದ ಎಂ.ಟಿ.ಬಿ. ನಾಗರಾಜ್ ಮತ್ತು ಬೈರತಿ ಬಸವರಾಜ್ ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು. ‘2018ರಲ್ಲಿ ಹಿರಿಯೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಜಾರಿಗೆ ಡಿಪಿಆರ್ ತಯಾರಿಸಲಾಗಿತ್ತು. ಆದರೆ ಎರಡೂವರೆ ವರ್ಷ ಕೋವಿಡ್ ನಿಂದ ಒಳಚರಂಡಿ ಕಾಮಗಾರಿ ಪ್ರಗತಿ ಸಾಧ್ಯವಾಗಿರಲಿಲ್ಲ. ಒಳಚರಂಡಿ ವ್ಯವಸ್ಥೆ ಕಾಮಗಾರಿ ನಡೆಸುವಾಗ ಇತರೆ ನಗರಗಳಲ್ಲಿ ನಾಗರಿಕರು ಏನೇನು ತೊಂದರೆ ಅನುಭವಿಸಿದ್ದಾರೆ. ಕಾಮಗಾರಿ ನಡೆಸುವಾಗ ಎದುರಾಗುವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿ, ಅಲ್ಲಿನ ಲೋಪದೋಷಗಳು ಇಲ್ಲಿ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು’ ಎಂದು ತಿಳಿಸಿದರು. ‘ಒಳಚರಂಡಿ ಕಾಮಗಾರಿ ಕೆಲಸವು ಸುಲಭವಾಗಿ ನಡೆಯುವಂತದಲ್ಲ. ಮ್ಯಾನ್ ಹೋಲ್ ನಿರ್ಮಿಸುವಾಗ ಸಾರ್ವಜನಿಕರ ವಿರೋಧ ವ್ಯಕ್ತವಾಗಬಹುದು. ಅಂತಹ ಸಂದರ್ಭಗಳಲ್ಲಿ ಆಯಾ ವಾರ್ಡ್ ಸದಸ್ಯರು ಮುಂದೆ ನಿಂತು ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಎಂದು ಮನವಿ ಮಾಡಿದರು.ಈ ಕಾಮಗಾರಿಯು ₹ 122 ಕೋಟಿ ವೆಚ್ಚದಲ್ಲಿ ನಡೆಯುತಿದೆ. ‘ವೇದಾವತಿ ಬಡಾವಣೆಯಲ್ಲಿ ನಡೆಯುವ ಸಂತೆಯನ್ನು ಚಳ್ಳಕೆರೆ ರಸ್ತೆಯಿಂದ ಸ್ವಲ್ಪ…
ತುಮಕೂರು: ಕರ್ನಾಟಕ ರಾಜ್ಯ ಮಡಿವಾಳರ ಸಂಘದ ವತಿಯಿಂದ ಮೇ 22ರಂದು ಮಡಿವಾಳರ “ಬೃಹತ್ ಜನಜಾಗೃತಿ ಸಮಾವೇಶ”ವು ತುಮಕೂರಿನ ಹೆಗ್ಗೆರೆ ಸಮೀಪವಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜ್ ಪಕ್ಕದ ಮೈದಾನದಲ್ಲಿ ನಡೆಯಲಿದೆ. ತಿಪಟೂರಿನ ವಿದ್ಯಾನಗರದಲ್ಲಿರುವ ಮಡಿವಾಳ ಸಮುದಾಯ ಭವನದಲ್ಲಿ ಶ್ರೀಮಾಚಿ ದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ರಾಜ್ಯಾಧ್ಯಕ್ಷ ಸಿ.ನಂಜಪ್ಪ, ಮಹಿಳಾ ಜಿಲ್ಲಾಧ್ಯಕ್ಷೆ ಭವ್ಯ ಲೋಕೇಶ್ ಮತ್ತು ಯುವ ಸಂಚಾಲಕ ಬಿ.ಎನ್.ಮೋಹನ್ ರಾಜ್ ಮಾತನಾಡಿ ಸಮಾವೇಶದ ಕುರಿತು ಮಾಹಿತಿ ನೀಡಿದರು. ರಾಜ್ಯ ಕಾರ್ಯದರ್ಶಿಗಳಾದ ಯಲ್ಲಪ್ಪ, ಮಯೂರಿ, ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕರುಗಳಾದ ಶ್ವೇತಾ, ಪಾರ್ವತಮ್ಮ ಮತ್ತು ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್ ಸೇರಿದಂತೆ ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರುಗಳು ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಸೀಗೆಹಳ್ಳಿ ಗ್ರಾಮದ ಸ. ನಂ.15/6 ರ 1ಎಕರೆ ವಿಸ್ತೀರ್ಣದ ರೈತ ವೆಂಕಟೇಶ್ ಎಂಬುವರ ಒಡೆತನಕ್ಕೆ ಸೇರಿದ ಜಮೀನಿಲ್ಲಿ ತುರುವೇಕೆರೆ ಅರಣ್ಯ ಇಲಾಖೆಯ ಸಿಬ್ಬಂದಿ ಅತಿಕ್ರಮ ಪ್ರವೇಶಿಸಿ ಫಸಲಿಗೆ ಬಂದ ಮರಗಳನ್ನು ಕಡಿದು ಹಾಕಿದ್ದು, ತಂತಿ ಕಂಬಗಳನ್ನು ನಾಶಮಾಡುವ ಮೂಲಕ ಅನ್ಯಾಯವೆಸಗಿದ್ದಾರೆ ಎಂದು ಮಗ್ಗದ ಪಾಳ್ಯ ಗ್ರಾಮದ ನೊಂದ ರೈತ ವೆಂಕಟೇಶ್ ಗಂಭೀರವಾಗಿ ಆರೋಪಿಸಿದ್ದಾರೆ. ನಮ್ಮತುಮಕೂರು ಜೊತೆ ಅಳಲು ತೋಡಿಕೊಂಡ ರೈತ ವೆಂಕಟೇಶ್, ತುರುವೇಕೆರೆ ತಾಲೂಕಿನ ಗಡಿಭಾಗವಾದ ಸೀಗೆಹಳ್ಳಿ ಗ್ರಾಮದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸಂಬಂಧಿಸಿದ, ಸ್ವತ್ತಿನ ಪಕ್ಕದಲ್ಲಿಯೇ ನಮ್ಮ ಒಡೆತನದ ಜಮೀನಿದ್ದು, ಅರಣ್ಯ ಇಲಾಖೆಗೆ ಸಂಬಂಧಿಸಿದ ಜಮೀನಿಗೆ ಈಗಾಗಲೇ ಗಡಿ ಕಲ್ಲನ್ನು ನೆಟ್ಟಿದ್ದಾರೆ. ಹೀಗಿರುವಾಗ ಮೇ 3 ರಂದು ಮಧ್ಯಾಹ್ನ 3ರ ಸಮಯದಲ್ಲಿ ತುರುವೇಕೆರೆಯ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಇನ್ನಿತರರು ಟ್ರಂಚ್ ಹೊಡೆಯುವ ನೆಪದಲ್ಲಿ, ಉದ್ದೇಶಪೂರ್ವಕವಾಗಿ ನಮ್ಮ ಜಮೀನಿನ ಒಡೆತನದಲ್ಲಿದ್ದಂತಹ ಫಸಲಿಗೆ ಬಂದಂತಹ ಸುಮಾರು 15 ತೆಂಗಿನಗಿಡ, 50 ಬಾಳೆಗಿಡ, 40 ಅಡಿಕೆ ಸಸಿಗಳನ್ನು…
ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಸುರಿಯುತ್ತಿರುವ ನಡುವೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಗಾಳಿ ಹೆಚ್ಚಾಗುತ್ತಿದ್ದು, ಹಳದಿ ಅಲರ್ಟ್ ಘೋಷಿಸುವ ಸಾಧ್ಯತೆ ಇದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ನಗರದಲ್ಲಿ ಇಂದು ಕನಿಷ್ಠ ತಾಪಮಾನವು ೨೮ ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ನಾಳೆಯಿಂದ ಬಿಸಿಗಾಳಿ ಆವರಿಸುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ದೆಹಲಿಯ ಮೂಲ ನಿಲ್ದಾಣವಾದ ಸಫ್ದರ್ಜಂಗ್ ವೀಕ್ಷಣಾಲಯದಲ್ಲಿ ೪೦ ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಿಸಿದೆ. ಇದು ವರ್ಷದ ಈ ಸಮಯದಲ್ಲಿ ಸಾಮಾನ್ಯಕ್ಕಿಂತ ಒಂದು ಡಿಗ್ರಿ ಹೆಚ್ಚಾಗಿದೆ. ಅಲ್ಲದೆ, ಈಗಾಗಲೇ ದೆಹಲಿಯಲ್ಲಿ ಬಿಸಿ ಅಲೆಯ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ನಾಳೆ ವೇಳೆಗೆ ತಾಪಮಾನವು ೪೪ ಡಿಗ್ರಿ ಸೆಲ್ಸಿಯಸ್ಗೆ ಏರುವ ಭೀತಿಯಿದೆ. ಇದು ಮೇ ೧೫ ರವರೆಗೆ ಮುಂದುವರಿಯಬಹುದು, ಏಕೆಂದರೆ ತಗ್ಗಿಸುವ ಹವಾಮಾನ ವ್ಯವಸ್ಥೆಯು ಮುಂದಿನ ಒಂದು ವಾರದಲ್ಲಿ ವಾಯುವ್ಯ ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇಂದು ಗರಿಷ್ಠ ತಾಪಮಾನ ೪೧ ಡಿಗ್ರಿ…
ಹಿಜಾಬ್ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿ ವಿವಾದದ ಕೇಂದ್ರ ಬಿಂದುವಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪ್ರಯಾಣ ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಹಿಜಾಬ್ ವಿವಾದ ಆರಂಭವಾಗಿದ್ದ ವೇಳೆ ಮುಸ್ಕಾನ್ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಸಂದರ್ಭದಲ್ಲಿ ಆಡಳಿತ ಮಂಡಳಿ ಪ್ರವೇಶ ನಿರಾಕರಿಸಿತ್ತು. ಇದರಿಂದ ಆಕ್ರೋಶಗೊಂಡಿದ್ದ ಈ ವಿದ್ಯಾರ್ಥಿನಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದಳು. ಈಗ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಮುಸ್ಕಾನ್ ಕುಟುಂಬ ಸೌದಿ ಅರೇಬಿಯಾ ಪ್ರವಾಸಕ್ಕೆ ತೆರಳಿದೆ ಎಂದು ಹೇಳಲಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಈ ರೀತಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ಗೆ ಅಲ್ಖೈದಾ ಉಗ್ರ ಸಂಘಟನೆಯಿಂದ ಮೆಚ್ಚುಗೆ ಕೂಡ ಪಡೆದಿದ್ದಳು. ಈ ಬಗ್ಗೆ ತನಿಖೆ ನಡೆಸುವಂತೆಯು ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಮುಸ್ಕಾನ್ ಮನೆಗೆ ಬಂದು ಹೋಗುವವರ ಮೇಲೆ ತೀವ್ರ ನಿಗಾ ವಹಿಸಿತ್ತು. ಆದರೆ, ಪೊಲೀಸರಿಗೆ…
ಉಕ್ರೇನ್ – ರಷ್ಯಾ ಯುದ್ದದ ನಡುವೆ ಎರಡೂವರೆ ವರ್ಷದ ಜಾಕ್ ರಸ್ಸೆಲ್ ಶ್ವಾನ ೨೦೦ಕ್ಕೂ ಹೆಚ್ಚು ಸ್ಫೋಟಕಗಳನ್ನು ಪತ್ತೆಹಚ್ಚಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ಪದಕಕ್ಕೆ ಭಾಜನವಾಗಿದೆ. ರಷ್ಯಾದ ಆಕ್ರಮಣದ ನಂತರ ಶ್ವಾನದ ಸಮರ್ಪಿತ ಸೇವೆಯನ್ನು ಗುರುತಿಸಲು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಪದಕವನ್ನು ಪ್ರದಾನಿಸಿದರು. ಈ ನಾಯಿ ೨೦೦ಕ್ಕೂ ಹೆಚ್ಚು ಸ್ಫೋಟಕಗಳನ್ನು ಪತ್ತೆಹಚ್ಚಿದ ಕೀರ್ತಿಗೆ ಪಾತ್ರವಾಗಿದೆ. ಯುದ್ಧದ ಪ್ರಾರಂಭದಿಂದಲೂ ಅವುಗಳ ಸ್ಫೋಟವನ್ನು ತಡೆದಿದ್ದು, ಇದು ರಷ್ಯಾದ ವಿರುದ್ಧ ಉಕ್ರೇನಿಯನ್ ಪ್ರತಿರೋಧದ ಸಂಕೇತವಾಗಿದೆ ಎಂದು ಬಣ್ಣಿಸಲಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಇನ್ನಷ್ಟು ಕಷ್ಟದ ದಿನಗಳು ಬರಲಿವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.ಬಸವನಗುಡಿ ವಿಧಾನಸಭಾ ಕ್ಷೇತ್ರದ ಗವಿಗಂಗಾಧರೇಶ್ವರ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಜೆಡಿಎಸ್ನ ಜನತಾ ಜಲಧಾರೆ ಸಂಕಲ್ಪ ಸಮಾವೇಶ ಮತ್ತು ಗಂಗಾರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದ ಕೆಲವು ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಬೆಂಗಳೂರಿನ ಜನರ ಕುಡಿಯುವ ನೀರಿನ ಬವಣೆ ಪರಿಹರಿಸಬೇಕಾಗಿದೆ ಎಂದರು. 1994ರಲ್ಲಿ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರವನ್ನು ಆರಂಭಿಸಲಾಗಿತ್ತು. ಆಗ ಪಕ್ಷ ಅಕಾರಕ್ಕೆ ಬಂದಿತ್ತು. ಇಂದು ಕೂಡ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದೇವೆ. ಶಿವನ ಕೃಪೆ ನಮ್ಮ ಮೇಲೆ ಇರಲಿ. ಇದು ಶ್ರೇಷ್ಟವಾದ ಸ್ಥಳ ಎಂದರು. ಮೇ 13ರಂದು ನೆಲಮಂಗಲದ ಬಳಿ ನಡೆಯುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಹಾಹಕಾರ ಬರುವ ದಿನಗಳು ದೂರವಿಲ್ಲ. ಕಳೆದ 75 ವರ್ಷದಲ್ಲಿ ನೀರಾವರಿ ವಿಚಾರದಲ್ಲಿ ಆಗಿರುವ…
ಎಂತಹ ದಕ್ಷ ಅಧಿಕಾರಿ ಬಿಬಿಎಂಪಿ ಮುಖ್ಯಸ್ಥರಾಗಿ ಬಂದರೂ ಇಲ್ಲಿನ ಸಮಸ್ಯೆಗಳಿಗೆ ಮುಕ್ತಿ ಕೊಡಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಬಂದಿರುವ ತುಷಾರ್ ಗಿರಿನಾಥ್ ಅವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಅಧಿಕಾರಿಗಳನ್ನು ಬೆಂಡೆತ್ತುತ್ತಿದ್ದಾರೆ ಮಾತ್ರವಲ್ಲ ನಗರದ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಹಗಲಿರುಳು ಶ್ರಮಿಸುವಂತೆ ಕರೆ ನೀಡುತ್ತಿದ್ದಾರೆ. ಆದರಲ್ಲೂ ಪ್ರಮುಖವಾಗಿ ಮಳೆ ನೀರಿನ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ ಎಂದು ಸೂಚಿಸುತ್ತಿದ್ದಾರೆ. ದಪ್ಪ ಚರ್ಮದ ಅಧಿಕಾರಿಗಳಿಗೆ ಮಾತ್ರ ಆಯುಕ್ತರ ಈ ಮಾತು ಕಿವಿ ಮೇಲೆ ಬೀಳುತ್ತಿಲ್ಲ ಎನ್ನುವುದಕ್ಕೆ ಇಲ್ಲೊಂದು ಉದಾಹರಣೆ ಇದೆ ನೋಡಿ. ಕೆಲ ದಿನಗಳ ಹಿಂದೆ ಕಿರುತೆರೆ ನಟಿಯೊಬ್ಬರು ರಸ್ತೆಗುಂಡಿಗೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರೂ. ಇದೀಗ ಮತ್ತೊಬ್ಬ ಗಾಯಕ ರಸ್ತೆ ಗುಂಡಿಗೆ ಬಿದ್ದು ತಮ್ಮ ಕಾಲು ಮುರಿದುಕೊಂಡಿದ್ದಾರೆ. ಖ್ಯಾತ ಗಾಯಕರಾಗಿರುವ ಅಜಯ್ ವಾರಿಯರ್ ಅವರೇ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ರಸ್ತೆಗುಂಡಿಯಿಂದ ಕಾಲು ಮುರಿದುಕೊಂಡಿರುವ ಛಾಯಾಚಿತ್ರ ಅಪ್ಲೋಡ್ ಮಾಡಿ ಬಿಬಿಎಂಪಿಯವರ ಬೇಜವಾಬ್ದಾರಿತನದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.…
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಅಗತ್ಯವಿದ್ದರೆ ಪೊಲೀಸರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಾವು ಯಾರನ್ನೂ ಕೂಡ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತದೆ. ಪೊಲೀಸರು ಯಾರಿಗೆ ಅಗತ್ಯವಿದೆಯೋ ಅವರಿಗೆ ನೋಟಿಸ್ ನೀಡುತ್ತಾರೆ. ಇದರಲ್ಲಿ ನಮ್ಮ ಇಲಾಖೆಯ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಗಾಗಲೇ ಉಡುಪಿ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈಶ್ವರಪ್ಪನವರಿಗೆ ನೋಟಿಸ್ ನೀಡುವ ಕುರಿತು ಪೊಲೀಸರು ತೀರ್ಮಾನ ಮಾಡುತ್ತಾರೆ. ಇದನ್ನು ನಮ್ಮ ಇಲಾಖೆ ನಿರ್ಧರಿಸುವುದಿಲ್ಲ ಎಂದು ಪುನರುಚ್ಚರಿಸಿದರು. ಪಿಎಸ್ಐ ಅಕ್ರಮ ನೇಮಕಾತಿ ಕುರಿತಂತೆ ಸಿಐಡಿ ತನಿಖಾ ತಂಡ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಸಾಕ್ಷಿ ಸಮೇತವಾಗಿ ವಶಕ್ಕೆ ಪಡೆಯುತ್ತಿದ್ದಾರೆ. ಮತ್ತಷ್ಟು ಆರೋಪಿಗಳು ಬಂಧನವಾಗಲಿದ್ದಾರೆ ಎಂದರು. ಶ್ರವಣಬೆಳಗೊಳದಲ್ಲಿ ಮಾಜಿ ಸಚಿವರೊಬ್ಬರ ಆಪ್ತನ ಬಂಧನ ಕುರಿತು ಪ್ರತಿಕ್ರಿಯಿಸಿದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ಮಧ್ಯಭಾಗದಲ್ಲಿರುವ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ದೇವಸ್ಥಾನ ಹಾಗೂ ಮಸ್ಕಲ್ ನ ಶ್ರೀ ಚಿಕ್ಕ ಮೈಲಾರಲಿಂಗೇಶ್ವರ ದೇವಸ್ಥಾನದ ಬಾಗಿಲು ಮುರಿದು ದೇವಸ್ಥಾನದಲ್ಲಿದ್ದ ಬೆಳ್ಳಿ ಆಭರಣಗಳು ಹಾಗೂ ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಆರೋಪಿಗಳು ಕೊನೆಗೂ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಚಿತ್ರದುರ್ಗ ಪೋಲೀಸ್ ಅಧೀಕ್ಷಕರಾದ ಪರಶುರಾಮ್ ಹಾಗೂ ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಎಚ್.ಕೆ.ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಹಿರಿಯೂರು ಉಪವಿಭಾಗ ಪೋಲೀಸ್ ಉಪಅಧೀಕ್ಷಕರಾದ ಸೈಯದ್ ರೋಷನ್ ಜಮೀರ್ ರವರ ಉಸ್ತುವಾರಿಯಲ್ಲಿ, ನಗರ ಪೋಲೀಸ್ ನಿರೀಕ್ಷಕರಾದ ವಿ.ಎಸ್.ಶಿವಕುಮಾರ್, ಐಮಂಗಲ ವೃತ್ತ ನಿರೀಕ್ಷಕರಾದ ಕೆ.ಆರ್.ರಾಘವೇಂದ್ರ, ಹೊಸದುರ್ಗ ಠಾಣೆಯ ಪೋಲೀಸ್ ನಿರೀಕ್ಷಕರಾದ ಎಂ.ಡಿ.ಫೈಜುಲ್ಲಾ ನೇತೃತ್ವದಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ.ಅನುಸೂಯ ಸೇರಿದಂತೆ ವಿವಿಧ ಪೋಲೀಸ್ ಇಲಾಖೆಯ ಸಿಬ್ಬಂದಿಗಳ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶ ಮೂಲದ ರಮೇಶ್ ತಂದೆ ರಾಮು, ಗುರುಪ್ರಸಾದ್ ತಂದೆ ನಾಗರಾಜಪ್ಪ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಿಂದ ಆರೋಪಿಗಳು ಕಳವು ಮಾಡಿದ್ದ…