Author: admin

ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ  ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ  ಅವರು,  ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು. ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು  ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ,  ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್…

Read More

ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ  ಕಂಗೆಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸುರೇಶ್ ಎಂಬುವರು ಈ ಸಂಬಂಧ ನಮ್ಮತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ,  ಸುಮಾರು ಒಂದು ವರ್ಷದ ಹಿಂದೆ ಕಾಮಗಾರಿ ಆರಂಭ ಮಾಡಲಾಗಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೇ ಇಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದ್ದು,  ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ಕೆಲಸ ನಿರ್ವಹಿಸಿ ಹೋಗಿದ್ದಾರೆ . ಹೀಗಾಗಿ ಒಂದು ವರ್ಷವಾದರೂ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಇಂಜಿನಿಯರ್ ನಾಗೇಶ್ ವರಿಗೆ ಕರೆ ಮಾಡಿ ಕೆಲಸ ಬೇಗನೇ ಮುಗಿಸಿ ಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರೂ ಕೂಡ ಇದರ ಕಡೆಗೆ ಗಮನ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದಾಗಿ ಇಲ್ಲಿನ ಗ್ರಾಮದ ಜನರು ನೀರಿಗಾಗಿ ಪರದಾಡುವಂತಾಗಿದೆ. ಕೆಲಸದ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು ಕೆಲಸವನ್ನು ಮುಗಿಸದೇ ಇದ್ದರೂ, ಅಧಿಕಾರಿಗಳು…

Read More

ದಾವಣಗೆರೆ:  ಸಂಕ್ರಾಂತಿಯ ದಿನದಂದೇ ಜವರಾಯ ಅಟ್ಟಹಾಸ  ಮೆರೆದಿದ್ದು, ಬೆಳ್ಳಂ ಬೆಳಗ್ಗೆ ದಾವಣಗೆರೆ ಜಿಲ್ಲೆಯ  ಜಗಳೂರು ತಾಲ್ಲೂಕು ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ ಈ ಘಟನೆ ನಡೆದಿದ್ದು ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ.  ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದವರು ಯಾದಗಿರಿ ಜಿಲ್ಲೆಯ ಶಾಹಾಪುರ ನಿವಾಸಿಗಳು ಎನ್ನಲಾಗಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಸುಕಿನ ಜಾವ ಕಾರು ಚಾಲಕ ನಿದ್ದೆಮಂಪರಿನಲ್ಲಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೊರಟಗೆರೆ: ತಾಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹಿರೇಹಳ್ಳಿಯ ಕೆ.ವಿ.ಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದ ಉತ್ತಮ್ ಪಂಚಾಯತ್ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು,  ಯೋಜನೆಯ ಸಮಗ್ರ ಅಭಿವೃದ್ದಿಯನ್ನು ಪರಿಶೀಲಿಸಿ ಮಾತನಾಡಿದರು. 2010 ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗು ಬಹಳ ವ್ಯವಸ್ಥಿತವಾಗಿ ನಡೆದಿದೆ. ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ.  ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾದಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣಪ್ರದೇಶದಲ್ಲಿ ಲಾಭದಾಯಕ ಗೋಡಂಬಿ, ನಲ್ಲಿ,…

Read More

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ ಸಮನ್ವಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಾಲಕಿ ತಾಯಿ ಅಮೃತಾ ನಾಯ್ಡು ಅವರಿಗೆ ಗಂಭೀರ ಗಾಯವಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಚಾಲಕನನ್ನು  ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯೂರು: ರಾಜ್ಯಾದ್ಯಂತ ಅತಿ ವೇಗವಾಗಿ ಕೊರೊನಾ 3ನೇ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೇರವಾಗಿ ಸಂಪರ್ಕ ಇರುವ ಬೀದಿ ಬದಿ ವ್ಯಾಪಾರಿಗಳು ವರ್ತಕರುಗಳೆಲ್ಲರೂ  ಇಂದಿನಿಂದ ಬೂಸ್ಟರ್ ಡೋಸ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು  ಎಂಬುದಾಗಿ ಕ್ಷೇತ್ರದ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ ಮನವಿ ಮಾಡಿದರು. ಹಿರಿಯೂರು ನಗರದ ಗಾಂಧಿ ಸರ್ಕಲ್ ಬಳಿ ಇರುವ ನೆಹರೂ ಮಾರ್ಕೆಟ್ ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಹಮ್ಮಿಕೊಳ್ಳಲಾಗಿದ್ದ ಕೋವಿಡ್ -19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಕೊರೊನಾ ಸೋಂಕಿತರಿಗೆ ಸ್ಥಳದಲ್ಲೇ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡುವ ಕೆಲಸವನ್ನು ಇಂದಿನಿಂದಲೇ ಪ್ರಾರಂಭವಾಗುತ್ತದೆ, ಸಾರ್ವಜನಿಕರು ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್  ಮಾತನಾಡಿ, ಕೋವಿಡ್ 3 ನೇ ಅಲೆಯನ್ನು ಹಿರಿಯೂರು ತಾಲ್ಲೂಕಿನಲ್ಲಿ ತಡೆಗಟ್ಟಲು ಸರ್ಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಾರ್ವಜನಿಕರು ಸರ್ಕಾರದೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು…

Read More

ಸರಗೂರು: ತಾಲ್ಲೂಕಿನ ಯಶವಂತಪುರ ಗ್ರಾಮದಲ್ಲಿ ಇಂದು ಸಣ್ಣ ಏತ ನೀರಾವರಿ ಇಲಾಖೆ ವತಿಯಿಂದ ಗ್ರಾಮದ ಗೂಡುಕಟ್ಟೆ, ಬಾಲನಕಟ್ಟೆ ಕೆರೆಗಳ ಸಂಪೂರ್ಣ ಅಭಿವೃದ್ಧಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ  ಶಿವಲಿಂಗಯ್ಯ ಯಶವಂತಪುರ, ಸಾಕಷ್ಟು ವರ್ಷಗಳಿಂದ ಪಾಳು ಬಿದ್ದಿದ್ದ ಕೆರೆಗಳಿಗೆ ಜೀವ ತುಂಬಿದಂತಾಗಿದೆ. ತಾಲ್ಲೂಕು ಕಂದಾಯ ಇಲಾಖೆ ವತಿಯಿಂದ ಬಾಲನಕಟ್ಟೆಯನ್ನು ಅಳತೆ ಮಾಡಿಸಬೇಕಿದೆ.  ಈ ಪ್ರಯತ್ನ ಸಹ ಸನಿಹದಲ್ಲಿದ್ದು, ತಹಸೀಲ್ದಾರರ ಗಮನ ಸೆಳೆಯಲಾಗಿದೆ.  ಶೀಘ್ರವಾಗಿ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿದ್ದಾರೆ ಎಂಬ ಭರವಸೆಯಿದೆ ಎಂದರು. ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸಲು ಕೆರೆಯ ಸುತ್ತಮುತ್ತಲ ಜಮೀನಿನ ರೈತರು ಮತ್ತು ಸಾರ್ವಜನಿಕರು ಸಹಕರಿಸಬೇಕು ಕೆರೆಗಳ ಅಭಿವೃದ್ದಿ ಬಗ್ಗೆ ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದುರವರು ಕಳೆದ ಮೂರು ವರ್ಷಗಳ ನಮ್ಮ ಸತತ ಪ್ರಯತ್ನಕ್ಕೆ ಸಂಪೂರ್ಣವಾದ ಸಹಕಾರ ನೀಡಿ ಯೋಜನೆ ಅನುಷ್ಠಾನಗೊಳ್ಳಲು ಸಹಕರಿಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. ಶಾಸಕರ ಸಹಕಾರದಿಂದ ಇಂದು ಕೆರೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಈ…

Read More

ತಿಪಟೂರು : ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ ಗುರುವಾರ ಆದಿಚುಂಚನಗಿರಿಯ  ಬಾಲಗಂಗಾಧರನಾಥ ಸ್ವಾಮೀಜಿಯವರು 9ನೇ ಪುಣ್ಯಾರಾಧನಾ ಸಮಾರಂಭ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಳಕಳಿ ಕಾರಣದಿಂದಲೇ ಜಗತ್ತಿನಾದ್ಯಂತ ಚಿರಸ್ಮರಣಿಯಾರಾದ್ದು ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು ಜಾರಿಗೆ ತಂದು ಯಶಸ್ವಿಯಾಗಿ ಇತರರಿಗೆ ಪ್ರೇರಣೆಯಾದರು. ಆದ್ದರಿಂದ…

Read More

ತಿಪಟೂರು:  ತಾಲ್ಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ  ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ತೀರ್ಥವತಿ ಹಿಂದಿನ ಒಡಂಬಡಿಕೆಯ ಪ್ರಕಾರ ಅವಿರೋಧ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಅಧ್ಯಕ್ಷ ಎ.ಎಸ್.ಚಿನ್ನಸ್ವಾಮಿ, ಮಾಜಿ ಅಧ್ಯಕ್ಷ ಮಾಧುಸ್ವಾಮಿ ನಿಕಟಪೂರ್ವ ಉಪಾಧ್ಯಕ್ಷೆ ತೇಜಾವತಿ, ಟಿಎಪಿಸಿಎಂ ಎಸ್ ಅಧ್ಯಕ್ಷ ಶಂಕರ ಮೂರ್ತಿ, ತಾ.ಪಂ. ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ಚನ್ನಬಸವಯ್ಯ,ತಿ ಮ್ಮಣ್ಣ ನಟರಾಜ್, ನವೀನ್, ಲೋಕೇಶ್, ಮಲ್ಲಿಕಾರ್ಜುನಯ್ಯ, ಪವಿತ್ರ, ಜ್ಯೋತಿ, ರೇಣುಕಮ್ಮ ಮತ್ತು ಗ್ರಾಮದ ಚಂದ್ರಯ್ಯ ಸೇರಿದಂತೆ ಸದಸ್ಯರುಗಳು ಹಾಗೂ ಮುಖಂಡರುಗಳು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಚಂದ್ರಶೇಖರ್ ಕಾರ್ಯನಿರ್ವಹಿಸಿದ್ದು, ಪಿಡಿಒ ಗೋಪಿನಾಥ್ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ನೂತನ ಉಪಾಧ್ಯಕ್ಷೆ ತೀರ್ಥವತಿ ಈ ಸಂದರ್ಭ ಮಾತನಾಡಿ, ಎಲ್ಲ ಸದಸ್ಯರುಗಳ  ಬೆಂಬಲದೊಂದಿಗೆ ಗ್ರಾಮದ ಮತ್ತು ಪಂಚಾಯಿತಿಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಸರಗೂರು: ಆನೆಯ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಸರಗೂರು ತಾಲೂಕಿನ ಮಾದಪುರ ಗ್ರಾಮದಲ್ಲಿ ಗುರುವಾರ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ನಡೆದಿದೆ. ಮಾದಪುರ ಗ್ರಾಮದ ಪುಟ್ಟಸ್ವಾಮಿ ಎಂಬವರ  ಪುತ್ರ ಚಂದ್ರ ಎಂಬವರು ಆನೆಯ ದಾಳಿಗೊಳಗಾದವರಾಗಿದ್ದು, ಸದ್ಯ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಮಾಹಿತಿ ನೀಡಿದ ಮದಾಪುರ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಮಲ್ಲು, ಹಸು-ಕರುಗಳನ್ನು ಕಟ್ಟಿ ಹಾಕಲು ಚಂದ್ರ ಅವರು ಬೆಳಗ್ಗೆ ಬಂದಿದ್ದು, ಈ ವೇಳೆ ಶಬ್ಧ ಕೇಳಿ ಕಳ್ಳರು ಅಂದುಕೊಂಡು ಹುಡುಕುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಬೆಳಗ್ಗಿನ ಜಾವದಲ್ಲಿ ಇಬ್ಬನಿ ಇದ್ದ ಕಾರಣ ಕಾಡಾನೆ ಅವರಿಗೆ ಕಾಣಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಚಂದ್ರು ಅವರ ಭುಜ, ಕೈ ಹಾಗೂ ತಲೆಗೆ ಗಾಯವಾಗಿದ್ದು, ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ  ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಲ್ಲು ತಿಳಿಸಿದರು. ಇನ್ನೂ ಕಾಡಾನೆ ದಾಳಿಯಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣವೇ ಆನೆಯನ್ನು ಇಲ್ಲಿಂದ ಸ್ಥಳಾಂತರಿಸಬೇಕು. ಈ ಮೂಲಕ ಮುಂದೆ ಆಗಬಹುದಾದ…

Read More