Author: admin

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ನಾಳೆ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆ ಬೆಂಗಳೂರಿನ ವಿಜಯನಗರದ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿರುವ ಕಿಚ್ಚ ಸುದೀಪ್ ಅಭಿಮಾನಿಗಳು, ಬೃಹತ್ ಮೆರವಣಿಗೆ ನಡೆಸಿದ್ದಾರೆ. 101 ಕಳಶಗಳನ್ನ ಹೊತ್ತು ಮಹಿಳಾ ಅಭಿಮಾನಿಗಳು ಮೆರವಣಿಗೆ ಮಾಡಿದ್ದು,ಈ ವೇಳೆ ಡೋಳ್ಳು ಕುಣಿತ , ಚಂಡೆವಾದ್ಯ , ಪ್ರಚಾರದ ಟ್ಯಾಬ್ಲೋ ಜೊತೆಗೆ ಅಭಿನಯ ಚಕ್ರವರ್ತಿ ಬಾವುಟ ಹಿಡಿದು ಅದ್ಧೂರಿಯಾಗಿ ಮೆರವಣಿಗೆ ಮಾಡಿದ್ದಾರೆ. ಮಾತ್ರವಲ್ಲದೆ ಕಿಚ್ಚನ ಕಟೌಟ್ ಗೆ ಹಾರಹಾಕಿ ಪಟಾಕಿ ಸಿಡಿಸಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ವಿರೇಶ ಚಿತ್ರಮಂದಿರದ ಮೆರವಣಿಗೆ ಮಾಡಿರುವ ಕಿಚ್ಚನ ಫ್ಯಾನ್ಸ್ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಆಗಮನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಅವರ ಕಾರಿಗೆ ಹಿಂದೂ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವು ನಾಯಕರು ಸ್ಥಳಕ್ಕೆ ಭೇಟಿ ನೀಡಿ ಮೃತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಯತ್ನಿಸಿದರು. ಈ ವೇಳೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶಗೊಂಡು ನಳಿನ್ ಕುಮಾರ್ ಕಾರಿನ ಮೇಲೆ ಮುಗಿಬಿದ್ದರು. ಕಾರನ್ನು ಪಲ್ಟಿ ಮಾಡಲೂ ಯತ್ನಿಸಿದ್ದು ಕಾರಿನ ಟೈರ್​ ನಿಂದ ಗಾಳಿ ಹೊರಬಿಟ್ಟರು. ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನುಮೇಲೆ ಲಾಠಿ ಬೀಸಿದ್ದಾರೆ.ಪುತ್ತೂರು ಡಿಪೋಗೆ ಸೇರಿದ ಬಸ್​​…

Read More

ಮನಿಲಾ: ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು,ರಾಜಧಾನಿ ಮನಿಲಾ ಸೇರಿದಂತೆ ಕೆಲವು ಪ್ರದೇಶದಲ್ಲಿ ಕಟ್ಟಡಡಗಳು ಉರುಳಿದ್ದು ಭಾರಿ ಹಾನಿ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 7.3 ತೀವ್ರತೆಯ ಭೂಕಂಪವು ಪರ್ವತ ಪ್ರದೇಶದ ಅಬ್ರಾ ಪ್ರಾಂತ್ಯದ ಸುತ್ತಲೂ ಸುಮಾರು 25 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿತ್ತು ಮತ್ತು ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ಫಿಲಿಪೈನ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರ ಸಂಸ್ಥೆ ತಿಳಿಸಿದೆ. ಪ್ರಬಲವಾದ ಕಂಪನದಿಂದಾಗಿ ಕಟ್ಟಡಗಳು ಮತ್ತು ಮನೆಗಳಲ್ಲಿ ಬಿರುಕು ಉಂಟಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಖಿ.ಖ. ಭೂವೈಜ್ಞಾನಿಕ ಸಮೀಕ್ಷೆಯು ಭೂಕಂಪದ ಬಲವನ್ನು 7.0 ಮತ್ತು ಆಳವನ್ನು 10 ಕಿಲೋಮೀರ್ಟ (6 ಮೈಲುಗಳು) ನಲ್ಲಿ ಅಳೆಯಿತು. ಆಳವಿಲ್ಲದ ಭೂಕಂಪಗಳು ಹೆಚ್ಚು ಹಾನಿಯನ್ನುಂಟು ಮಾಡಿದೆ. ನೂರಾರು ಮಂದಿ ಗಾಯಗೊಂಡಿದ್ದು ತಕ್ಷಣಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 1990 ರಲ್ಲಿ 7.7 ತೀವ್ರತೆಯ ಭೂಕಂಪನ ಸಂಭವಿಸಿ ಸುಮಾರು 2,000 ಜನರು ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಮಧುಗಿರಿ:ಮದುವೆಯಾಗಿ ಏಂಟು ವರ್ಷಗಳು ಕಳೆದರೂ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಧುಗಿರಿ ತಾಲೂಕಿನ ಕಸಬಾ ಬಸವನಹಳ್ಳಿಯ ವಾಸಿ ಚೌಡಪ್ಪ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಬುಧವಾರ ಬೆಳಿಗ್ಗೆ ಚಹಾ ಸೇವಿಸಿ ಜಮೀನಿನ ಬಳಿ ಹೋಗಿ ಬರುವುದಾಗಿ ಹೋದವನು ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದು, ಮರಣೊತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚೆನ್ನೈ, ತಮಿಳು ನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು ಕಳೆದ ರಾತ್ರಿ ಶಿವಕಾಶಿಯಲ್ಲಿ ಪ್ರಥಮ ಪಿ ಯು ಸಿ  ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿಯ ಕುಟುಂಬದ ಪ್ರಕಾರ ಆಕೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ.ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆದರೂ ಈಕೆಯ ಸಾವಿನ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ. ಕಳೆದ ಒಂದು ವಾರದಲ್ಲಿ ಸುಮಾರು 4 ವಿದ್ಯಾರ್ಥಿನಿಗಳು ಆತ್ಮಹತ್ಯೆಗೆ ಶರಣಾಗಿದ್ದು ತಮಿಳುನಾಡು ಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ವಿಚಾರಣೆ ಹಂತದಲ್ಲೆ ಇದ್ದು, ಪೋಷಕರು, ಸಂಬಂಧಿಕರು ಹಾಗೂ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅವರು ವಿದ್ಯಾರ್ಥಿಗಳಿಗೆ ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡಿದ್ದಾರೆ. ಬಾಲಕಿಯರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆಯನ್ನು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದಿರುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು ಎಂದಿದ್ದಾರೆ. ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರ. ಕೊಲೆಗಡುಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ. ಎಲ್ಲಾ ಜಾತಿ, ಮತ,ವರ್ಗದವರು ಒಂದಾಗಿ ಯಾರೇ ಸಮಾಜ ಘಾತುಕ ಶಕ್ತಿಗಳು, ಕೊಲೆ ಗಡುಕರು ಆಗಲಿ ಅವರ ವಿರುದ್ಧ ಹೋರಾಡಲು ಒಟ್ಟಾಗಬೇಕು ಮತ್ತು ಇಂತಹ ಕೃತ್ಯ ನಡೆಸಿದವರನ್ನು…

Read More

ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ  ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮರಣೋತ್ತರ ಪುತ್ತೂರಿನಲ್ಲಿ ನಡೆಸಲಾಗಿದ್ದು, ಮೃತದೇಹವನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು ಹುಟ್ಟೂರು ನೆಟ್ಟಾರು ಕಡೆಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ…

Read More

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಾಧನಾ ಸಮಾವೇಶ ಜನೋತ್ಸವವಾಗಿ ಆಚರಿಸಲು ತೀರ್ಮಾನಿಸಿದೆ. ಆದರೆ ಇದು ಜನೋತ್ಸವವಲ್ಲ, ‘ಭ್ರಷ್ಟೋತ್ಸವ’ ಎಂದು ರಾಜ್ಯ ಕಾಂಗ್ರೆಸ್‌ ಘಟಕ ವ್ಯಂಗ್ಯ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ‌ಯಲ್ಲಿ ಮಂಗಳವಾರ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್‌ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಈ ಸರ್ಕಾರ ಜನರಿಗೆ ದ್ರೋಹ ಎಸಗಿದೆ. ಭ್ರಷ್ಟಾಚಾರ ಮುಗಿಲುಮುಟ್ಟಿದೆ’ ಎಂದು ವಾಗ್ದಾಳಿ ನಡೆಸಿದರು. ‘ಬೊಮ್ಮಾಯಿ ಸರ್ಕಾರದ ಆಡಳಿತ ನೋಡಿ ಸಂಪೂರ್ಣ ಭ್ರಮನಿರಸನವಾಗಿದೆ. ಗುತ್ತಿಗೆದಾರರಿಗೆ ಶೇ.40ರಷ್ಟು ಲಂಚ ಕೊಡಬೇಕಾದ ಪರಿಸ್ಥಿತಿ ಬಂದಿರುವುದು ಇದೇ ಮೊದಲು. ಗುತ್ತಿಗೆದಾರ ಸಂತೋಷ್‌ ಪಾಟೀಲ ಈ ಲಂಚದ ಹಣ ನೀಡಲಾಗದೆ ಆತ್ಮಹತ್ಯೆ ಮಾಡಿಕೊಂಡರು. ಇದಕ್ಕೆ ಕಾರಣರಾದ ಮಂತ್ರಿ, ನಮ್ಮ ಹೋರಾಟಗಳಿಗೆ ಮಣಿದು ರಾಜೀನಾಮೆ ನೀಡಿದರೂ ಇದೀಗ ಅವರಿಗೆ ಕ್ಲೀನ್‌ ಚಿಟ್‌ ನೀಡಲಾಗಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದರು. ರಾಜ್ಯ ಸರ್ಕಾರ ಕಾರ್ಯವೈಖರಿಯಿಂದಾಗಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿದ…

Read More

ತಿಪಟೂರು:  ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ.  ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಾಗ ಬಿಜೆಪಿ ನಾಯಕರು ಎಲ್ಲಿದ್ದರು ಎಂದು ಮಾಜಿ ಶಾಸಕ ಕೆ ಷಡಕ್ಷರಿ ಪ್ರಶ್ನಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಪ್ರಯುಕ್ತ ಆಗಸ್ಟ್ ಒಂದರಿಂದ ಏಳು ದಿನ ಓ ಹಮ್ಮಿಕೊಂಡಿರುವ ಪಾದಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು,  ಈ ದೇಶದಲ್ಲಿರುವ ಅಂದಾಜು 18 ರಿಂದ 20 ಕೋಟಿ ಮುಸಲ್ಮಾನರ ಮತಗಳು ಬೇಕಿಲ್ಲ ಎಂದು ಹೇಳುವ ಮೂಲಕ ಹಿಂದೂ ಮತ ಪಡೆಯುವ ಗಿಮಿಕ್ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಇದೇ ವೇಳೆ ಅವರು ಟೀಕಿಸಿದರು. ಇನ್ನೂ ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,  ಪಕ್ಷಕ್ಕೆ ಜೈಕಾರವಿರಲಿ ನಾಯಕರಿಗೆ ಬೇಡ ಎಂದು ಹೇಳಿದರು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾತನಾಡಿ, ಚಡ್ಡಿ ಸುಡುವ ಮೂಲಕ ಕೇವಲ ಸಾಂಕೇತಿಕ ಪ್ರತಿಭಟನೆ ಮಾಡಿದ ಎನ್ ಎಸ್ ಯು ವಿದ್ಯಾರ್ಥಿಗಳು ದೇಶದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಅವರನ್ನು ದೆಹಲಿಗೆ…

Read More

ಬೆಂಗಳೂರು : ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳ ನೌಕರರಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ತಿಳಿಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ   ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ’ ಎಂದು ಅಶೋಕ ಹೇಳಿದರು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More