Subscribe to Updates
Get the latest creative news from FooBar about art, design and business.
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
- ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್ ಒ ಕಚೇರಿ ವ್ಯವಸ್ಥಾಪಕ
- ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
- ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
- ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
- ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
Author: admin
ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022 ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ ಸ್ಪರ್ಧೆಯನ್ನು ಸೋಮವಾರ ಆಯೋಜಿಸಲಾಗಿತ್ತು. ತುಮಕೂರು ಜಿಲ್ಲಾ ಸ್ವಾತಂತ್ರ ಹೋರಾಟಗಾರರ ಸಂಘದ ಕಾರ್ಯದರ್ಶಿ ತು.ಮ.ಬಸವರಾಜು ಅವರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ತುಮಕೂರು ಜಿಲ್ಲೆಯಾದ್ಯಂತ ಹಲವಾರು ಗ್ರಾಮೀಣ ಭಾಗಗಳಲ್ಲೂ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಈಗ ಅವರಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಬದುಕಿದ್ದಾರೆ. ಅವರೆಲ್ಲರ ದೇಶಾಭಿಮಾನ, ತ್ಯಾಗ ಬಲಿದಾನಗಳನ್ನು ಹಾಗೂ ಅವರ ಜೀವನ ಚರಿತ್ರೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಈ ಮೂಲಕ ಅವರ ಸೇವೆಗಳನ್ನು ಗೌರವಿಸಿ ಸ್ಮರಿಸುತ್ತಿರಬೇಕು. ಆಗ ಅವರ ಆತ್ಮಕ್ಕೆ ಸ್ವಲ್ಪವಾದರೂ ಸಮಾಧಾನ ನೀಡಿದಂತಾಗುತ್ತದೆ ಎಂದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರ್ಕಾರಿ ಚಿತ್ರಕಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ಜಿ.ಎಲ್.ನಟರಾಜು ಮಾತನಾಡಿ, ಈ ಕಾಲೇಜಿನ ಉಳಿವು ಮತ್ತು…
ಚಿತ್ರದುರ್ಗ: ಚಿತ್ರದುರ್ಗ ಗೊಲ್ಲಗಿರಿ ಮಠದ ಯಾದವಾನಂದಶ್ರೀಗಳು ಜಿಲ್ಲೆಯದಾದ್ಯಂತ ದಶಕಗಳಿಂದ ಎಸ್ಟಿ ಮೀಸಲಾತಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕಾಡುಗೊಲ್ಲರ ಹೋರಾಟದ ನೇತೃತ್ವವಹಿಸಲಿ, ಇಲ್ಲವಾದರೆ ಮಠದ ಪೀಠತ್ಯಾಗ ಮಾಡಲು ಸಿದ್ಧರಾಗಿ ಎಂದು ಕಾಡುಗೊಲ್ಲ ಮುಖಂಡರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಡುಗೊಲ್ಲ ಒಳಪಂಗಡ ಮೀಸಲಾತಿ ಬೆಂಬಲವಿಲ್ಲ ಎಂಬ ಶ್ರೀಗಳ ಹೇಳಿಕೆಯನ್ನು ಖಂಡಿಸಿ, ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲ ಮುಖಂಡರು ನಡೆಸಿದ ಸಭೆಯಲ್ಲಿ ಈ ಆಗ್ರಹ ಕೇಳಿ ಬಂದಿದೆ. ಕಾಡುಗೊಲ್ಲ ಸಮಾಜ ಒಂದು ಉಪಜಾತಿಯಲ್ಲ, ಪ್ರತ್ಯೇಕ ಅಸ್ಮಿತೆ ಹೊಂದಿರುವ ಜಾತಿಯಾಗಿದ್ದು, ನಾವು ಒಳಮೀಸಲಾತಿ ಕೇಳುತ್ತಿಲ್ಲ, ಕಾಡುಗೊಲ್ಲರೇ ಬೇರೆ, ಊರುಗೊಲ್ಲರೇ ಬೇರೆಯಾಗಿದ್ದು ನಮ್ಮ ಆಚರಣೆಗೂ ಅವರ ಆಚರಣೆಗಳಿಗೆ ಬಹಳ ವ್ಯತ್ಯಾಸವಿದೆ. ಇದನ್ನು ಸ್ವಾಮೀಜಿಯವರು ಅರ್ಥಮಾಡಿಕೊಳ್ಳಬೇಕು ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಮಧ್ಯ ಕರ್ನಾಟಕದಲ್ಲಿ ಕಾಡುಗೊಲ್ಲರು ಹೆಚ್ಚಾಗಿ ಇರುವುದರಿಂದ ಮುರುಘಾ ಶರಣರು ಜಾಗವನ್ನು ನೀಡಿ ಮಠ ಸ್ಥಾಪನೆಗೆ ಕೈಜೋಡಿಸಿದರು. ಕಾಡುಗೊಲ್ಲರು ದೇಣಿಗೆ ಸಂಗ್ರಹಿಸಿ ಯಾದವಾನಂದ ಸ್ವಾಮೀಜಿಗೆ…
ನೊಬೆಲ್ ಪ್ರಶಸ್ತಿ ವಿಜೇತ, ಪ್ರಸಿದ್ದ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ಅವರಿಗೆ ಪಶ್ಚಿಮ ಬಂಗಾಳದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗಾಬಿಭೂಷಣ’ ಘೋಷಣೆ ಮಾಡಲಾಗಿದೆ. ಆದರೆ ವಿವಿಧ ಕಾರಣಗಳಿಂದಾಗಿ ಪ್ರಶಸ್ತಿ ಸ್ವೀಕರಿಸದಿರಲು ಅಮಾರ್ತ್ಯ ಸೇನೆ ನಿರ್ಧರಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸದ್ಯ ಕುಟುಂಬದ ಸದಸ್ಯರ ಜೊತೆ ಯೂರೋಪ್ನಲ್ಲಿ ಅಮಾರ್ತ್ಯ ಸೇನ್ ಇದ್ದಾರೆ ಎಂದು ಮೂಲಗಳು ತಿಳಿಸಿದ್ದು ಬಂಗಾಳ ಸರ್ಕಾರದ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹಲವು ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಡುವ ಅದೃಷ್ಟವನ್ನು ಹೊಂದಿದ್ದು. ‘ಬಂಗಾಬಿಭೂಷಣ’ ಪ್ರಶಸ್ತಿಯನ್ನು ಇತರರಿಗೆ ನೀಡಬೇಕೆಂದು ತಮದೆ ಬಯಸಿದ್ದಾರೆ ಎಂದು ಅಮಾರ್ತ್ಯ ಸೇನ್ ಅವರ ಪುತ್ರಿ ಅಂತರಾ ದೇವ್ ಸೇನ್ ತಿಳಿಸಿದ್ದಾರೆ. ಪ್ರಶಸ್ತಿ ಸ್ವೀಕಾರ ಮಾಡಬೇಕು ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಮನವಿ ಮಾಡಿದ ಸಂದರ್ಭದಲ್ಲಿ ತಾವು ಭಾರತದಲ್ಲಿ ಇರುವುದಿಲ್ಲ ಎಂದು ಸೇನ್ ಹೇಳಿದ್ದರು. ಇಂದು ಕೋಲ್ಕತ್ತಾದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಬಂಧನದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ನೀಡಿರುವ ಪ್ರಶಸ್ತಿ…
ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಲ್ಲಿನ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನ ನಡೆಸುತ್ತಿರುವ ಹೋರಾಟದಲ್ಲಿ ನಮ್ಮ ಪಕ್ಷ ನಿಲ್ಲುತ್ತದೆ. ವರ್ಷಗಳ ಕಾಲದ ಈ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಖುದ್ಧು ಕ್ರಮ ವಹಿಸಿ ಆದ್ಯತೆ ಮೇರೆಗೆ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಅವರು ಟ್ವೀಟರ್ನಲ್ಲಿ ಒತ್ತಾಯಿಸಿದ್ದಾರೆ. ರಾಜ್ಯದ ಕೆಲವೆಡೆ ಮಾತ್ರ ಸುಸರ್ಜಿತ ಆಸ್ಪತ್ರೆಗಳಿವೆ. ತುರ್ತು ಚಿಕಿತ್ಸೆ ಬೇಕೆಂದರು ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಉತ್ತರ ಕರ್ನಾಟಕ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿ…
ಮಧುಗಿರಿ: ಪಟ್ಟಣದ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪುತ್ಥಳಿಯ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಹಕಾರದೊಂದಿಗೆ ಹೊರಗುತ್ತಿಗೆ ಕಾರ್ಮಿಕರು ಬೃಹತ್ ಅಮರಣಾಂತಿಕ ಹೋರಾಟ ಆರಂಭಿಸಿದ್ದಾರೆ. ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಇಲಾಖೆ ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ಕಾರ್ಮಿಕರಿಂದ ಬೃಹತ್ ಅಮರಣಾಂತಿಕ ಹೋರಾಟ ನಡೆಯತಿದೆ. ಹೋರಾಟವನ್ನುದ್ದೇಶಿಸಿ ಮಾತನಾಡಿದ ಡಾ. ದೊಡ್ಡೇರಿ ಕಣಿಮಯ್ಯ, ವಿವಿಧ ಇಲಾಖೆಗಳ ಒಳಗೊಂಡ ಡಾಟಾ ಎಂಟ್ರಿ ಆಪರೇಟರ್, ಚಾಲಕರು, ಸಹಾಯಕರು ಸೇರಿದಂತೆ ‘ಸಿ’ ಮತ್ತು ‘ಡಿ’ ವೃಂದದ ಹುದ್ದೆಗಳಿಗೆ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಆದರೆ, ಈ ಇಲಾಖೆಗಳು ನೌಕರರನ್ನು ಜೀತದಾಳುಗಳಂತೆ ದುಡಿಸಿಕೊಂಡರೆ, ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ನೀಡದೆ, ಏಜೆನ್ಸಿಗಳು ಶೋಷಿಸುತ್ತಿವೆ ಎಂದು ಆರೋಪಿಸಿದರು. ಹೊರ ಗುತ್ತಿಗೆ ನೌಕರರಿಗೂ ಸರ್ಕಾರಿ ಖಜಾನೆ ಮೂಲಕ ವೇತನ ಪಾವತಿಸಲು ಖಜಾನೆ ಮತ್ತು ಆರ್ಥಿಕ ಇಲಾಖೆ ಕ್ರಮ ತೆಗೆದುಕೊಳ್ಳಬೇಕು.…
ತುಮಕೂರು: ತೋಟದ ಕೆಲಸಕ್ಕೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಚೌಡೇನಹಳ್ಳಿಯಲ್ಲಿ ನಡೆದಿದೆ. ಕರಿಯಣ್ಣ (50) ಕರಡಿ ದಾಳಿಗೆ ಒಳಗಾದ ರೈತನಾಗಿದ್ದು, ಇಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ತೋಟದ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಹಲಸಿನ ಮರದಲ್ಲಿದ್ದ ಕರಡಿ ರೈತನ ಮೇಲೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಕರಡಿ ದಾಳಿಯಿಂದ ಗಂಭೀರ ಗಾಯಗೊಂಡ ಕರಿಯಣ್ಣ ತಪ್ಪಿಸಿಕೊಂಡು ರಕ್ತದ ಮಡುವಿನಲ್ಲೇ ರಸ್ತೆ ಬದಿ ಕುಳಿತಿದ್ದರು. ಕೂಡಲೇ ಸ್ಥಳೀಯರು ರೈತನ ಸಹಾಯಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಸತತ 1 ಗಂಟೆಯಿಂದ ಆಂಬುಲೆನ್ಸ್ ಗೆ ಕರೆ ಮಾಡಿದರೂ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಪಂದಿದ ಕಾರಣ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ತೀವ್ರ ಸಮಸ್ಯೆ ಉಂಟಾಗಿದ್ದು, ತುರ್ತು ಸೇವೆಗೆ ಸಿಗಬೇಕಾದ ಆಂಬುಲೆನ್ಸ್ ಊಟಕಿಲ್ಲದ ಉಪ್ಪಿನಕಾಯಿಯಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು. ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ…
ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಲಾರಿಯೊಂದು ಹೊತ್ತಿ ಉರಿದ ಘಟನೆ ತುಮಕೂರು ತಾಲೂಕಿನ ಗೂಳೂರು ಬಳಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಂಜಾನೆ 3.3ರ ಸಮಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಮೊದಲು ಲಾರಿಗೆ ಬೆಂಕಿ ಹತ್ತಿಕೊಂಡ ವೇಳೆ ಬೆಂಕಿ ನಂದಿಸಲಾಗಿತ್ತು. ಆದರೆ, 6 ಗಂಟೆಯ ವೇಳೆ ಮತ್ತೆ ಏಕಾಏಕಿ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ಲಾರಿ ಹೊತ್ತಿ ಉರಿದಿದೆ. ಬೆಂಕಿಗಾಹುತಿಯಾದ ಲಾರಿ ಎಳೆ ನೀರು ಸಾಗಿಸುವ ಲಾರಿಯಾಗಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ. ದುರ್ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೃಹತ್ ಬೆಂಕಿಯನ್ನು ಕಂಡು ಸಾರ್ವಜನಿಕರು ತೀವ್ರ ಆತಂಕಗೊಂಡಿದ್ದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಚ್.ಡಿ.ಕೋಟೆ: ಇಲ್ಲಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಜೆಡಿಎಸ್ ಯುವ ಮುಖಂಡ ಕೃಷ್ಣನಾಯಕ ಅವರ ನೇತೃತ್ವದಲ್ಲಿ ಮಾಡಿರುವ ಅಪ್ಪಾಜಿ ಕ್ಯಾಂಟಿನ್ ನ್ನು ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟನೆಯನ್ನು ಮಾಡಿದರು. ತಾಲ್ಲೂಕು ಆಡಳಿತ ಮುಂಭಾಗದಲ್ಲಿ ಇಂದಿನಿಂದ ಅಪ್ಪಾಜಿ ಕ್ಯಾಂಟಿನ್ ಯಲ್ಲಿ ತಿಂಡಿ ಊಟ ಕ್ಕೆ ತಾಲ್ಲೂಕಿನ ಮುಖಂಡರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕ್ಯಾಂಟಿನ್ ಯಲ್ಲಿ ತಾಲ್ಲೂಕಿನ ಜನತೆಗೆ ಅನುಕೂಲವಾಗಲಿ ಎಂದು ಸಮಾಜ ಸೇವೆಕ ಕೃಷ್ಣ ನಾಯಕ ಕ್ಯಾಂಟಿನ್ ಯನ್ನು ತೆರೆದಿದ್ದಾರೆ. ಕ್ಯಾಂಟಿನ್ ನಲ್ಲಿ ತಿಂಡಿ ಊಟದ ಬೆಲೆ 10 ರೂಪಾಯಿ ಅಷ್ಟೇ. ತಾಲ್ಲೂಕಿನ ಸಾರ್ವಜನಿಕರು ಮತ್ತು ರೈತರು ವಿವಿಧ ಗ್ರಾಮಗಳಿಂದ ಬಂದ್ದಿರುತ್ತಾರೆ ಕಡಿಮೆ ಬೆಲೆಯಲ್ಲಿ ತಿಂಡಿ ಊಟ ನೀಡುತ್ತಿರುವುದು ಜನರಿಗೆ ಅನುಕೂಲವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಸಿ.ವಿ.ನಾಗರಾಜು, ಹುಣಸೂರು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೇವರಹಳ್ಳಿ ಸೋಮಶೇಖರ್, ಗ್ಯಾಸ್ ಪ್ರಕಾಶ್, ಸಾಗರೆ ಶಂಕರ್, ನೆನಪು ರವಿ, ಪ್ರಶಾಂತ್ ಪ್ರವೀಣ್, ಕೃಷ್ಣಪುರಶಿವಯ್ಯ, ರಘು ಇನ್ನೂ ಮುಖಂಡರು ಭಾಗಿಯಾಗಿದ್ದರು ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ…
ಕೊರಟಗೆರೆ : ಜನನ ಮತ್ತು ಮರಣ ನೊಂದಣಿ ಕಾಯಿದೆಯನ್ನು ತಿದ್ದುಪಡಿಗೊಳಿಸಿ ಜೆ.ಎಂ.ಎಫ್.ಸಿ ಮತ್ತು ಸಿವಿಲ್ ನ್ಯಾಯಾಲಯದ ಬದಲು ಎ.ಸಿ. ನ್ಯಾಯಾಲಯದ ವ್ಯಾಪ್ತಿಗೆ ಬರುವಂತೆ ಸರ್ಕಾರವು ಆದೇಶಿಸಿರುವುದನ್ನು ಖಂಡಿಸಿ ಕೊರಟಗೆರೆ ತಾಲ್ಲೂಕು ವಕೀಲರ ಸಂಘ ತಹಶೀಲ್ದಾರ್ ರವರಿಗೆ ಮನವಿ ನೀಡಿದರು. ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆ 2022 ಅನ್ನು ದಿನಾಂಕ 18/07/2022 ರಂದು ಕರ್ನಾಟಕ ರಾಜ್ಯ ಸರ್ಕಾರವು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ವ್ಯಾಪ್ತಿಯ ಬದಲು ಉಪ ವಿಭಾಗಾಧಿಕಾರಿಗಳ ವ್ಯಾಪ್ತಿಗೆ ಬರುವಂತೆ ಆದೇಶಿಸಿದ್ದು, ಈ ಆದೇಶದಿಂದ ಜನಸಾಮಾನ್ಯರಿಗೆ, ಕಕ್ಷಿದಾರರಿಗೆ, ವಕೀಲರುಗಳಿಗೆ ಜನನ ಮತ್ತು ಮರಣ ದೃಢೀಕರಣ ಪತ್ರ ಪಡೆಯುವಲ್ಲಿ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಸರ್ಕಾರವು ಏಕಾಏಕಿ ತೀರ್ಮಾನ ತೆಗೆದುಕೊಂಡು ಆದೇಶಿಸಿರುವುದು ಸೂಕ್ತವಲ್ಲ. ಈ ಆದೇಶವನ್ನು ರದ್ದುಪಡಿಸಿ, ಯಥಾಸ್ಥಿತಿ ಜನನ ಮತ್ತು ಮರಣ ದೃಢೀಕರಣ ಕಾಯ್ದೆ 1969ರಂತೆ ತಂದು ಸಾರ್ವಜನಿಕರ ಹಿತಾಸಕ್ತಿ ಕಾಪಾಡಬೇಕು ಎಂದು ಒತ್ತಾಯಿಸಿ, ತಹಶೀಲ್ದಾರ್ ನಹೀದ ಜಂ ಜಂ ಅವರಿಗೆ ಮನವಿ ಸಲ್ಲಿಸಿದರು. ವರದಿ: ಮಂಜುಸ್ವಾಮಿ.ಎಂ.ಎನ್…