Author: admin

ಚಿತ್ರದುರ್ಗ:  ಏಪ್ರಿಲ್ 5ರಂದು ಮಾಜಿ ಉಪ-ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 115ನೇ ಜಯಂತಿಯ ಕಾರ್ಯಕ್ರಮವನ್ನು ಕೆಪಿಸಿಸಿ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.  ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆಂಜನೇಯ,  ಕೆಪಿಸಿಸಿ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 25ರಿಂದ 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.  ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆಗಳನ್ನು ಜಿಲ್ಲೆಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದೇವೆ . ಪ್ರತಿ ವರ್ಷ ಸಹ ಒಂದೊಂದು ಜಿಲ್ಲೆಗಳಲ್ಲಿ ಈ ರೀತಿಯಲ್ಲಿಯೇ ಆಚರಣೆಗಳು ನಡೆಯುತ್ತವೆ ಎಂದರು.  ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿಗೆ ಕೇವಲ ಐದು ದಿನಗಳು ಮಾತ್ರವೇ  ಬಾಕಿ ಉಳಿದಿದ್ದು, ಹಗಲು…

Read More

ತುಮಕೂರು: ಇತ್ತೀಚೆಗಷ್ಟೆ ಭ್ರಷ್ಟ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಬೆನ್ನಲ್ಲೇ ಇದೀಗ ಮತ್ತೊರ್ವ ಭ್ರಷ್ಟ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ತುಮಕೂರು ಬೆಳ್ಳಾವಿ ಹೋಬಳಿ ಚಿನ್ನೇನಹಳ್ಳಿ  ಗ್ರಾಮ ಲೆಕ್ಕಾಧಿಕಾರಿ (VA) ನಟರಾಜ್ ಎಸಿಬಿ ಬಲೆಗೆ ಬಿದ್ದಿದ್ದು,   ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.   ಪಹಣಿ ತಿದ್ದುಪಡಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ನಟರಾಜ್ 20 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ.  ಮುಂಗಡವಾಗಿ 5,000 ಪಡೆದು, ಉಳಿದ  15 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ ನರಸಿಂಹರಾಜು ಚಂದ್ರು ಶಿವಣ್ಣ ಇನ್ನಿತರರಿದ್ದರು ವರದಿ: ಜೆಟ್ಟಿ ಅಗ್ರಹಾರ, ನಾಗರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಶಾಲಾ ಮಕ್ಕಳ‌ ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಇಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿರುವ ’ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಲಕ್ಷಾಂತರ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಬೇಕು ಎಂದು ಸಿಎಂಗೆ ಮನವಿ ಮಾಡಿದರು.  ಈ ಮನವಿ ಪರಿಗಣಿಸಿದ ಸಿಎಂ, ಮಕ್ಕಳ ಬಿಸಿಯೂಟದ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರು ಇಡುವುದಾಗಿ ವೇದಿಕೆಯಲ್ಲೇ ಘೋಷಿಸಿದರು. ಸಾವಿನ ನಂತರವೂ ಬದುಕಿರುವುದು ನೈಜ ಸಾಧಕನಿಂದ ಮಾತ್ರ ಸಾಧ್ಯ. ಡಾ.ಶಿವಕುಮಾರ ಸ್ವಾಮೀಜಿ ಕೇವಲ ಪರಮಪೂಜ್ಯರಾಗಿಲ್ಲ, ಬದುಕಿಗೆ ದಾರಿ ತೋರಿದ ಹಾಗೂ ಬದುಕು ಕಟ್ಟಿ ಕೊಟ್ಟ ಮಹಾನ್ ಸಾಧಕರು. ಸ್ವಾಮೀಜಿ ಅವರಲ್ಲಿ ದೈವಶಕ್ತಿ ಇತ್ತು. ಅವರ ಶ್ರದ್ಧೆ, ನಿಷ್ಠೆ ಹಾಗೂ ಪರಿಶ್ರಮ ಅವರ ಧ್ಯೇಯವಾಗಿತ್ತು. ಅದನ್ನು ಪರಿಪಾಲನೆ ಮಾಡುವುದು ನಮ್ಮ ಕರ್ತವ್ಯ. ಎಲ್ಲಾ ಸಮುದಾಯ, ವರ್ಗದ ಜನರನ್ನು ಪ್ರೀತಿಸಿ,…

Read More

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯ ಜನ್ಮದಿನೋತ್ಸವ ಹಿನ್ನೆಲೆ ನಿನ್ನೆ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಮಗೆ ಮತ್ತು ಸಿದ್ದಗಂಗಾ ಮಠಕ್ಕೆ ಹಳೆಯ ಸಂಬಂಧ ಇದೆ ಎಂದು ಹೇಳಿದರು. ನನ್ನ ಅಜ್ಜಿ, ತಂದೆ, ತಾಯಿ ಇಲ್ಲಿಗೆ ಭೇಟಿ ನೀಡಿದ್ದರು. ಹಾಗಾಗಿ, ನಮ್ಮದು ಮತ್ತು ಮಠದ್ದು ಬಹಳ ಹಳೆಯ ಸಂಬಂಧ. ಇಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯವಾಗುತ್ತಿದೆ ಎಂದರು. ಮಠದ ಸೇವೆ, ದಾಸೋಹ ಬಹಳಷ್ಟು ಸಂತೋಷ ಉಂಟು ಮಾಡುವಂಥದ್ದು. ಬಸವಣ್ಣನವರು ನೀಡಿದ ಜಾತಿ, ಧರ್ಮ, ದ್ವೇಷ ಹಾಗೂ ಅಸೂಹೆ ಇಲ್ಲದ ಜೀವನವೇ ನಮಗೆ ಮಂತ್ರವಾಗಿದೆ ಎಂದು ಹೇಳಿದರು. ಶಿವಕುಮಾರ ಸ್ವಾಮೀಜಿಗಳು ಸುಮಾರು ವರ್ಷಗಳ ಕಾಲ ನಮಗೆ ದಾರಿದೀಪವಾಗಿದ್ದರು. ನಾನು ಹಿಂದೆ ಮಠಕ್ಕೆ ಭೇಟಿ ಕೊಟ್ಟಾಗ ಶ್ರೀಗಳನ್ನು ಭೇಟಿ ಮಾಡಿದ್ದೆ. ಇಂದು ಸ್ವಾಮೀಜಿ ನಮ್ಮೊಂದಿಗಿಲ್ಲ, ಆದರೆ ನಮಗೆ ಅವರು ಬದುಕುವ ಮಾರ್ಗ ತೋರಿದ್ದಾರೆ. ಆ ಮಾರ್ಗದಲ್ಲಿ ನಾವು ನಡೆಯಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇಜಯಂತ್ಯುತ್ಸವ  ಪ್ರಯುಕ್ತ  ಶುಕ್ರವಾರ ಬೆಳಗ್ಗೆ  ಮಠದ ಆವರಣದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಯಿತು.  ಇದೇ ಸಂದರ್ಭದಲ್ಲಿ ತುಮಕೂರು ತಾಲೂಕಿನ ಕ್ಯಾತ್ಸಂದ್ರದ ನಿವಾಸಿ ಶಾಹಿಸ್ತಾ ಹಾಗೂ ಜಮೀರ್ ದಂಪತಿ ತಮ್ಮ ಮಗಳಿಗೆ ಶಿವಮಣಿ ಎಂದು ಹೆಸರಿಡಲಾಯಿತು.  ಡಾ. ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್​ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಆಗಮಿಸಿದ್ದ ಮಕ್ಕಳಿಗೆ ಶಿವಕುಮಾರಸ್ವಾಮೀಜಿಯ ನಾಮಕರಣ ಮಾಡಲಾಯಿತು. ಇದೊಂದು ವಿಭಿನ್ನ ಕಾರ್ಯಕ್ರಮವಾಗಿದ್ದು,  ಮೂರ್ನಾಲ್ಕು ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಜಯಣ್ಣ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5  

Read More

ಹಿರಿಯೂರು: ಕಳೆದ ಎರಡು ವರ್ಷಗಳಿಂದ ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ ಯುಗಾದಿ ಹಬ್ಬವನ್ನು ಆಚರಿಸಲು ಸಾಧ್ಯವಾಗಿರಲಿಲ್ಲ . ಆದರೆ ಈ ಬಾರಿ ಯುಗಾದಿ ಹಬ್ಬವನ್ನು ಏಪ್ರಿಲ್ 2 ರಂದು ಆಚರಿಸಲು ಸಿದ್ಧತೆಗಳು ನಡೆದಿವೆ. ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿ ಹೋಗಿದ್ದ ಜನತೆ, ಇದೀಗ ಕೊವಿಡ್ ಪ್ರಕರಣಗಳು ಇಳಿಕೆಯಾಗಿ ಸುಧಾರಿಸಿಕೊಂಡಿದ್ದರೂ, ಹಿರಿಯೂರು ನಗರದಲ್ಲಿ ಯುಗಾದಿ ಹಬ್ಬದ ಸಡಗರ ಈ ಹಿಂದಿನಷ್ಟು ಕಂಡು ಬರುತ್ತಿಲ್ಲ. ವ್ಯಾಪಾರಿಗಳು ಬಿಸಿಲಿನಲ್ಲಿ ನಿಂತು ಬಾಡಿ ಹೋಗುತ್ತಿದ್ದಾರೆಯೇ ವಿನಃ ಅಷ್ಟಾಗಿ ವ್ಯಾಪಾರವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿರಿಯೂರು ನಗರದ ಕೆಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ನ ಸುತ್ತಮುತ್ತ ಹಾಗೂ ನೆಹರು ಮಾರುಕಟ್ಟೆ ಸುತ್ತಮುತ್ತಲಿನಲ್ಲಿ ಈ ಹಿಂದೆ ಯುಗಾದಿ ಸಂದರ್ಭದಲ್ಲಿ ಸಾರ್ವಜನಿಕರು ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಮುಗಿ ಬೀಳುತ್ತಿದ್ದರು. ಆದರೆ, ಅಂದಿನ ಉತ್ಸಾಹ ಈ ಬಾರಿ ಕಂಡು ಬಂದಿಲ್ಲ. ಯುಗಾದಿ ಹಬ್ಬದ ಪ್ರಯುಕ್ತ ಹೆಚ್ಚು ಗ್ರಾಹಕರು ಇರುತ್ತಾರೆ ಎಂದು ವ್ಯಾಪಾರಿಗಳು ಹೆಚ್ಚು ಬಂಡವಾಳ ಹಾಕಿ ತರಕಾರಿ, ಹೂವು, ಹಣ್ಣುಗಳನ್ನು ತಂದು ಮಾರಾಟಕ್ಕೆ ಇಟ್ಟಿದ್ದಾರೆ.…

Read More

ತುಮಕೂರು: ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸುರುವ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಕೆಲವೇ ಕ್ಷಣದಲ್ಲಿ ಸಿದ್ಧಗಂಗಾ ಮಠಕ್ಕೆ ಅಮಿತ್​ ಷಾ ಆಗಮಿಸಲಿದ್ದಾರೆ. ಮೊದಲಿಗೆ ಲಿಂಗೈಕ್ಯರಾದ  ಶಿವಕುಮಾರ ಶ್ರೀಗಳ ಗದ್ದುಗೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರೊಂದಿಗೆ ನಮನ ಸಲ್ಲಿಸಿ ಆ ನಂತರ ವೇದಿಕೆಗೆ ಆಗಮಿಸಲಿದ್ದಾರೆ. ನಾಡಿನಾದ್ಯಂತ ಮಠದ ಭಕ್ತರು, ಅಭಿಮಾನಿಗಳು ಸಾಗರೋಪಾದಿಯಲ್ಲಿ ಕಾರ್ಯಕ್ರಮಕ್ಕೆ ಆಮಿಸುತ್ತಿದ್ದು, ಅಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. ತುಮಕೂರು ಸೇರಿದಂತೆ ಮಠದ ಆವರಣದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿದ್ಧಗಂಗಾ ಶ್ರೀಗಳ ನಾಮಸ್ಮರಣೆ, ಜಯಘೋಷ ಮೊಳಗಿದೆ. ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಶೀಕ್ಷೇತ್ರದಲ್ಲೇ ಇದ್ದು, ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5  

Read More

ಗುಬ್ಬಿ: ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ಅವರ ಮೇಲೆ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಭ್ರಷ್ಟಾಚಾರ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಚೇಳೂರು ಶಿವನಂಜಪ್ಪ ಆರೋಪ ವ್ಯಕ್ತಪಡಿಸಿದ್ದರು. ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಆರೋಪ ಮಾಡಿರುವ ಬಗ್ಗೆ ದಲಿತ ಸಂಘರ್ಷ ಸಮಿತಿಯ ಮುಖಂಡರು ಗ್ರಾಮ ಪಂಚಾಯಿತಿ ಗೆ ಭೇಟಿ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇಡಗೂರು ಗ್ರಾಮ ಪಂಚಾಯಿತಿಗೆ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ಪ್ರಮೀಳಾ ಅವರನ್ನು ಆಯ್ಕೆಯಾದ ದಿವಸದಿಂದ ಸಮರ್ಪಕವಾಗಿ ಅಧಿಕಾರ ನಡೆಸಲು ಬಿಡುತ್ತಿಲ್ಲ ಕೆಲ ಗ್ರಾಮ ಪಂಚಾಯಿತಿ ಸದಸ್ಯರು ತಮಗೆ ಬೇಕಾದ ರೀತಿಯಲ್ಲಿ ಸಭಾ ನಡವಳಿಕೆ ಬರೆಯುವಂತೆ ಒತ್ತಾಯ ಮಾಡುವುದು. ಅನುದಾನವನ್ನು ಅನಾವಶ್ಯಕವಾಗಿ ಬಳಕೆ ಮಾಡುವಂತೆ ಸಭೆಯಲ್ಲಿ ಗಲಾಟೆ ಮಾಡುವುದು ಸರಿಯಲ್ಲ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಭ್ರಷ್ಟಾಚಾರ ಮಾಡಿದ್ದರೆ ಕಾನೂನು ಹೋರಾಟ ಮಾಡಲಿ ಅದನ್ನು ಬಿಟ್ಟು ಒಬ್ಬ ದಲಿತ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಾಗಿರುವುದನ್ನು…

Read More

ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅನಿರ್ದಿಷ್ಟಾವದಿ ಅಹೋರಾತ್ರಿ ಧರಣಿ ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು 11 ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಪತ್ರ ಚಳುವಳಿ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರು ಪತ್ರ ಬರೆಯುವ ಮುಖಾಂತರ, ಅವರ ಗಮನವನ್ನು ಸೆಳೆದು, ಆದಷ್ಟು ಬೇಗ ಸರ್ಕಾರದ ಮೇಲೆ ಒತ್ತಡ ತಂದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಲಾಯಿತು ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ. ಧರಣಿಯ ಹಕ್ಕೊತ್ತಾಯಗಳು: *ತುರ್ತಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ CEO , ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ನೀಡಿರುವ ಸಮಸ್ಯೆಗಳ ಪಟ್ಟಿಯನ್ನು ಪರಿಶೀಲಿಸಿ, ಬಗೆಹರಿಸಬೇಕು. * MLA ಗಳ ಅಧ್ಯಕ್ಷತೆಯಲ್ಲಿನ ಬಗರ್ ಹುಕ್ಕು ಸಮಿತಿಯು ಏಪ್ರಿಲ್…

Read More

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಅವರ ಜಯಂತ್ಯೋತ್ಸವದ ಆಚರಣೆ ಅವರ ಬದುಕಿನ ಪ್ರೇರಣೆ ಇಂದಿನ ಯುವ ಪೀಳಿಗೆಗೆ ಬಹಳ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಶುಕ್ರವಾರ ನಡೆಯಲಿರುವ ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮದ ರೂಪುರೇಷೆ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರತಿವರ್ಷ ಶ್ರೀಮಠದ ಪರಮಪೂಜ್ಯರಾದ ಶ್ರೀ ಶ್ರಿ ಶಿವಕುಮಾರ ಮಹಾಸ್ವಾಮಿಗಳವರು ಜಯಂತ್ಯೋತ್ಸವ ಪ್ರತಿವರ್ಷ ಆಚರಣೆ ಮಾಡಲಾಗುತ್ತಿದೆ ಅದರಂತೆ ಈ ಬಾರಿಯೂ ಸಹ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದರು. ಶಿವಕುಮಾರ ಶ್ರೀಗಳ ಬದುಕಿನ ಪ್ರೇರಣೆ ಇಂದಿನ ಯುವಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗಲಿದೆ ಇನ್ನು ನಾಳೆ ನಡೆಯುವ ಕಾರ್ಯಕ್ರಮ ಅರ್ಥಪೂರ್ಣ ಕಾರ್ಯಕ್ರಮವಾಗಿರಬೇಕು ಇನ್ನು ಶ್ರೀಗಳ ಪರಂಪರೆ ,ಶಿಕ್ಷಣ,ದಾಸೋಹ ಮಾಡಿಕೊಂಡು ಬಂದಿದ್ದಾರೆ ಇದು ರಾಜ್ಯ ಹಾಗೂ ದೇಶಕ್ಕೆ…

Read More