Author: admin

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಖಾಲಿ ಇರುವ ಸಚಿವ ಸ್ಥಾನವನ್ನ ಕೂಡಲೇ ಭರ್ತಿ ಮಾಡಿ. ಚುನಾವಣೆ ಹಿನ್ನಲೆ ಕೂಡಲೇ ಕ್ಯಾಬಿನೆಟ್ ವಿಸ್ತರಣೆ ಮಾಡಬೇಕು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಕುರುಬ ಸಮಾಜವನ್ನ ಎಸ್.ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ಕುಲಶಾಸ್ತ್ರ ಅಧ್ಯಯನ ಬಳಿಕ ತೀರ್ಮಾನ ಮಾಡಲಾಗುತ್ತದೆ. ಕುರುಬ ಸಮಾಜವನ್ನ ಎಸ್ ಟಿಗೆ ಸೇರ್ಪಡೆ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಕಳೆದ ತಿಂಗಳ ಹಿಂದೆ ಸುರಿದ ಮಳೆಯಿಂದ ಬೆಳೆ ಹಾನಿಯಾಗಿದ್ದು, ೀ ಹಿನ್ನೆಲೆಯಲ್ಲಿ ಸರ್ಕಾರದಿಂದ ವಿತರಿಸುತ್ತಿರುವ ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ಭಾರೀ ತಾರತಮ್ಯ ಮಾಡಲಾಗುತ್ತಿದೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಹಾಗೂ ತಾಲ್ಲೂಕು ರೈತಸಂಘದ ಅಧ್ಯಕ್ಷ ಬ್ಯಾಡರಹಳ್ಳಿ ಶಿವಕುಮಾರ್ ಆರೋಪಿಸಿದ್ದಾರೆ. ಜಿಲ್ಲೆಯ ಹಿರಿಯೂರು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳೆ ಪರಿಹಾರ ವಿತರಿಸುವಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು  ವಿಫಲವಾಗಿವೆ  ಎಂದು ಆರೋಪಿಸಿದರು. ತಾಲ್ಲೂಕಿನ ದೇವರಕೊಟ್ಟ ಗ್ರಾಮದ ತಿಪ್ಪೇಸ್ವಾಮಿ ಎಂಬುವವರಿಗೆ ಸೇರಿದ 5 ಎಕರೆ ಶೇಂಗಾ ಬೆಳೆ ಹಾನಿಗೊಳಗಾಗಿದ್ದು, ಎಕರೆಗೆ 2 ಸಾವಿರದಂತೆ 10 ಸಾವಿರ ಪರಿಹಾರ ಬಂದಿದೆ. ಅದೇ ಮಸ್ಕಲ್ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ 5 ಎಕರೆ ಬೆಳೆಹಾನಿಗೆ ಕೇವಲ 2 ಸಾವಿರ ರೂಗಳ ಪರಿಹಾರ ಅವರ ಬ್ಯಾಂಕ್  ಖಾತೆಗೆ ಜಮಾ ಮಾಡಲಾಗಿದೆ ಎಂದರು. ಮಸ್ಕಲ್…

Read More

ಬೆಳಗಾವಿ: ಯಡಿಯೂರಪ್ಪರನ್ನು ಕರೆದುಕೊಂಡು ಓಡಾಡಿದರೆ ಬಿಜೆಪಿ ಲಗಾಟಿ ಹೊಡೆಯುತ್ತೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಮೂಡಲಗಿಯ ತಾಲೂಕಿನ ಕಲ್ಲೋಳಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗೆ ಹೋದರೆ ರಾಜ್ಯದಲ್ಲಿ ಬಿಜೆಪಿಯನ್ನು ಲಗಾಟಿ ಹೊಡೆಸುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳದೇ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರನ್ನು ಕರೆದುಕೊಂಡು ಹೋದರೆ ನೀವು ಕೂಡ ಲಾಗ ಹಾಕ್ತೀರಿ ಎಂದು ಹೇಳಿದ ಯತ್ನಾಳ್, ಯಡಿಯೂರಪ್ಪ ಪಂಚಮಸಾಲಿ ಸಮುದಾಯದ ವಿರೋಧಿಯಾಗಿಲ್ಲದಿದ್ದರೆ ಮೀಸಲಾತಿ ಜಾರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ವಿದ್ಯುತ್ ತಗುಲಿ ಸುಟ್ಟು ಹೋದ ವ್ಯಕ್ತಿಯ ಅಸ್ಥಿಪಂಜರ ದೊರೆತ ಘಟನೆ ಖಾನಾಪುರ ತಾಲೂಕಿನ ಲಕ್ಕೆಬೈಲ್ ಗ್ರಾಮದ ಕಬ್ಬಿನ ತೋಟದಲ್ಲಿ ನಡೆದಿದೆ. ಅಸ್ಥಿಪಂಜರದ ಪಂಚನಾಮೆ ನಡೆಸಿದ ಪೊಲೀಸರು ಅದು 26 ದಿನಗಳ ಹಿಂದೆ ಕಾಣೆಯಾಗಿದ್ದ ಲಾಕ್ಕೆಬೈಲ್ ನಿವಾಸಿ 36 ವರ್ಷದ ರಾಮಚಂದ್ರ ಅಂದಾರೆ ಎಂಬವರದೆಂದು ಗುರುತಿಸಿದ್ದಾರೆ. ಅವರ ಅಸ್ಥಿಪಂಜರದ ಮೇಲೆ ಕಂಬದಿಂದ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ಕಂಡು ವಿದ್ಯುತ್ ಹರಿದು ದೇಹ ಸುಟ್ಟು ಹೋಗಿದೆ ಎಂದು ಖಾನಾಪುರ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ IPC ಸೆಕ್ಷನ್ 306 ರ ಅನ್ವಯ ದೂರು ದಾಖಲಿಸಿಕೊಂಡಿದ್ದಾರೆ. ರಾಮಚಂದ್ರ ಅಂದಾರೆ ಅವರು ಕಾಣೆಯಾಗಿರುವ ಕುರಿತು ಕುಟುಂಬಸ್ಥರು 26 ದಿನಗಳ ಹಿಂದೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕರಾದ ರಾಹುಲ್ ಗಾಂಧಿಯವರು ಭಾರತ ಐಕ್ಯತೆ ಯಾತ್ರೆ ನಡೆಸಲಿದ್ದು, ಸಾರ್ವಜನಿಕರು ಪಕ್ಷಾತೀತವಾಗಿ  ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ಕೆ.ಷಡಕ್ಷರಿ ಮನವಿ ಮಾಡಿಕೊಂಡರು. 9ರಂದು ಭಾನುವಾರ ತಿಪಟೂರು ತಾಲೂಕು ಕಿಬ್ಬನಹಳ್ಳಿಯಲ್ಲಿ ಭಾರತ ಐಕ್ಯತಾ ಯಾತ್ರೆ ನಡೆಯಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಯಾತ್ರೆ ನಡೆಯಲಿದೆ ಎಂದು ಅವರು ತಿಳಿಸಿದರು. ಸ್ವಾತಂತ್ರ ಪೂರ್ವದಲ್ಲಿ ಸ್ವಾತಂತ್ರ ಪಡೆಯಲು ಎಲ್ಲಾ ಧರ್ಮದವರು ಸೇರಿ ಹೋರಾಟ ಮಾಡಿ, ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರವನ್ನು ಪಡೆಯಲಾಯಿತು. ಅಂತೆಯೇ ಬಿಜೆಪಿ ಆಡಳಿತದಲ್ಲಿ ಧರ್ಮ ದ್ವೇಷ, ಬೆಲೆ ಏರಿಕೆ ಮೊದಲಾದವುಗಳ ವಿರುದ್ಧ ಈ ಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ತಾಲೂಕು ಬ್ಲಾಕ್ ಅಧ್ಯಕ್ಷ ಮಡೆನೂರು ಕಾಂತರಾಜ್, ಮಾಜಿ ಪುರಸಭೆ ಅಧ್ಯಕ್ಷ ಟಿ.ಎನ್.ಪ್ರಕಾಶ್, ಲೋಕನಾಥ್ ಸಿಂಗ್ ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಬೆಂಗಳೂರು: ಗ್ರಾಮಲೆಕ್ಕಿಗರ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ತಡೆ ನೀಡಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಸ್ತುತ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಕೆಇಎ ಮೂಲಕ ಗ್ರಾಮಲೆಕ್ಕಿಗರ ನೇಮಕ ಮಾಡುವ ಸಂಬಂಧ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅಧ್ಯಕ್ಷರನ್ನಾಗಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಭೂ ದಾಖಲೆಗಳ ಇಲಾಖೆ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಸಮಿತಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದಲ್ಲಿ ಅದರಿಂದಾಗುವ…

Read More

ಬೆಂಗಳೂರು : ಎಸ್ ಸಿ, ಎಸ್ ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಮೀಸಲಾತಿ ಹೆಚ್ಚಳ ಮಾಡಲು ನಿರ್ಧಾರ ಕೈಗೊಂಡಿದೆ. ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಎಸ್ ಸಿ ಮೀಸಲಾತಿ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಲು ಹಾಗೂ ಎಸ್ ಟಿ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ನಾಳೆಯೇ ಸರ್ಕಾರದಿಂದ ಅಧಿಕೃತ ಮುದ್ರೆ ಬೀಳಲಿದ್ದು, ನಾಳಿನ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ನಮ್ಮ ಮುಂದಿನ ಯಾತ್ರೆ ವಿಜಯಯಾತ್ರೆ. ನಮ್ಮನ್ನ ಕಟ್ಟಿ ಹಾಕುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಸ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ಮುಟ್ಟಿಸುತ್ತೇವೆ. ಪ್ರಧಾನಿ ಮೋದಿ , ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರೋದನ್ನ ತಡೆಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರಗೂರು: ಮಳೆಯಿಂದಾಗಿ ಹಾನಿಯಾಗಿದ್ದ ಮನೆಗಳ ಪರಿಹಾರದ ಫಲಾನುಭವಿಗಳ ಪಟ್ಟಿಯಿಂದ ಸುಮಾರು 600 ಫಲಾನುಭವಿಗಳ ಹೆಸರನ್ನು ಏಕಾಏಕಿ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸರಗೂರು ನೆರೆ ಸಂತ್ರಸ್ತರ ಹೋರಾಟ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ತಾಲ್ಲೂಕಿನ ಕಳೆದ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸರಗೂರು ಭಾಗದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾರ್ವಜನಿಕರು ಮನೆ ಕಳೆದುಕೊಂಡಿದ್ದರು. ಆದರೆ, ಮನೆ ಪರಿಹಾರದ ಫಲಾನುಭವಿಗಳ ಪಟ್ಟಿಯಿಂದ 600 ಫಲಾನುಭವಿಗಳ ಹೆಸರನ್ನು ಕೈ ಬಿಡಲಾಗಿದೆ. ಪಟ್ಟಣದ ತಾಲ್ಲೂಕು ಕಛೇರಿಯ ಮುಂಭಾಗದ ಮೈದಾನದಲ್ಲಿ ನೆರೆ ಸಂತ್ರಸ್ತರ ಹೋರಾಟ ಸಮಿತಿ ನೇತೃತ್ವದಲ್ಲಿ ಜಮಾವಣೆಗೊಂಡ ಫಲಾನುಭವಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಅ.10ರಿಂದ ನಿರಂತರ ಧರಣಿ ನಡೆಸಲು ತೀರ್ಮಾನ ಕೈಗೊಂಡರು. ಕಳೆದ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಾವಿರಾರು ಮನೆಗಳು ಹಾನಿಗೊಳಗಾಗಿದ್ದವು. ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಪರಿಶೀಲನೆ ನಡೆಸಿ ಮನೆಯ ಪರಿಹಾರಕ್ಕಾಗಿ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ಆರ್.ಜಿ.ಎಚ್.ಸಿ.ಎಲ್ ವೆಬ್ ಸೈಟ್ ನಲ್ಲಿ…

Read More

ಕೊರಟಗೆರೆ: ಕೊರಟಗೆರೆ ತಾಲೂಕು ಪತ್ರಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನಿಸಿ, ಸುಳ್ಳು ದೂರು ದಾಖಲಿಸಿರುವುದನ್ನು ಖಂಡಿಸಿ, ವೈದ್ಯ ನವೀನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪತ್ರಕರ್ತರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಡಾ.ನವೀನ್ ಕೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ.ಪುರುಷೋತ್ತಮ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಚಿಕ್ಕಿರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಜಿಲ್ಲಾ ಸಂಘದ ಸಂಘದ ನಿರ್ದೇಶಕರುಗಳಾದ ಪರಮೇಶ್ ಹಾಗೂ ಚಿಕ್ಕಣ್ಣ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More