Author: admin

ಪ್ರಮೋದ್ ಮುತಾಲಿಕ್‌ ರಂಥವರನ್ನ ಮೊದಲು ಒದ್ದು ಒಳಗೆ ಹಾಕಬೇಕು, ಇಂಥವರನ್ನ ಒದ್ದು ಒಳಗೆ ಹಾಕದೇ ಇದ್ದಲ್ಲಿ, ಸಮಾಜದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಉಳಿಸಲಿಕ್ಕೆ ಕಷ್ಟ ಆಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆಜಾನ್ ವಿರುದ್ಧ ಸುಪ್ರಭಾತ ವಿಚಾರವಾಗಿ ಬಾದಾಮಿಯ ಚಿಕ್ಕಮುಚ್ಚಳಗುಡ್ಡ ಹೆಲಿಪ್ಯಾಡ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ ಅವರು,  ಸರ್ಕಾರ ಇಂತಹ ವಿಷಯಗಳನ್ನ ಬೆಳೆಯೋದಕ್ಕೆ ಬಿಡಬಾರದು. ಮೌನವಾಗಿ ಒಪ್ಪಿಗೆ ಸೂಚಿಸುವುದನ್ನ ಬಿಡಬೇಕು ಎಂದರು. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಿದ್ರೆ ಆಮೇಲೆ ರಿಪೇರಿ ಮಾಡೋಕಾಗುತ್ತಾ? ಇದು  ರಾಮಸೇನೆಯೋ ? ರಾವಣ ಸೇನೆಯೋ? ಇವೆಲ್ಲಾ ಒಂದು ಕಡೆ ಇರಲಿ. ಸುಪ್ರೀಂ ಆದೇಶದಂತೆ ಸರ್ಕಾರ ಒಪ್ಪಿಗೆ ಕೊಡಲಿ. ಆ ಪ್ರಕಾರ ಹನುಮಾನ ಚಾಲೀಸಾ ಇವ್ರು ಓದಲಿ. ಅದಕ್ಕೆ ದೊಡ್ಡ ಪ್ರಚಾರ ಬೇಕಿಲ್ಲ. ನಮಗೆ ಸಂಕಷ್ಟ ಅಂದ್ರೆ ದಿನಾ ನಾವೆಲ್ಲ ಮನೆಯಲ್ಲೆ ಹನುಮಾನ ಚಾಲೀಸಾ ಹೇಳಿಕೊಳ್ಳಲ್ವಾ? ಆರೋಗ್ಯ ಸಮಸ್ಯೆ ಆದ್ರೆ, ಸಮಸ್ಯೆ ಉದ್ಭವ ಆದಾಗ ಮನೆಯಲ್ಲಿ ಹೇಳಿಕೊಳ್ಳುತ್ತೇವೆ. ಅದೇನು ದೊಡ್ಡ ಸಾಧನೆ ಅಲ್ಲ…

Read More

ಆಜಾನ್ ಗೆ ಪ್ರತಿಯಾಗಿ ಹನುಮಾನ್ ಚಾಲೀಸ, ಸುಪ್ರಭಾತ ಅಭಿಯಾನ ನಡೆಸುತ್ತಿರುವ ಸಂಘಟನೆಗಳ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ನಾಯಕ ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಅಭಿಯಾನ ಪ್ರಾರಂಭ ಮಾಡುತ್ತಿರುವವರು ಅವರನ್ನು ಭಯೋತ್ಪಾದಕರು ಎಂದು ಕರೆಯಬೇಕು ಎಂದು ಹೇಳಿಕೆ ನೀಡಿದ್ದಾರೆ. ಅಭಿಯಾನ ನಡೆಸುತ್ತಿರುವವರನ್ನು ಯುಎಪಿಎ ಕಾಯ್ದೆಯಡಿಯಲ್ಲಿ ಬಂಧಿಸಬೇಕು. ಇವರೆಲ್ಲರೂ ಸಂಘ ಪರಿವಾರದವರ ವಿವಿಧ ಆಕ್ಟೋಪಸ್ ಇದ್ದಂತೆ ಎಂದು ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ. ಇವರೆಲ್ಲರೂ ಸಂಘ ಪರಿವಾರದವರ ವಿವಿಧ ಆಕ್ಟೋಪಸ್ ಇದ್ದಂತೆ. ಸಮಾಜದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನ ಮಾಡುತ್ತಿರುವ ಇವರನ್ನೆಲ್ಲ ಯುಎಪಿಎ ಅಡಿಯಲ್ಲಿ ಅರೆಸ್ಟ್  ಮಾಡಬೇಕು ಎಂದು  ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಂಗಳೂರು: ಮುಳಬಾಗಿಲು ಪಕ್ಷೇತರ ಶಾಸಕ, ಮಾಜಿ ಸಚಿವ ಹೆಚ್..ನಾಗೇಶ್ ಅವರು ಮತ್ತೆ ಕಾಂಗ್ರೆಸ್  ಗೆ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆನ್ನಲಾಗಿದ್ದು,  ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರ ಭೇಟಿ ಬಳಿಕ ಹೇಳಿಕೆ ನೀಡಿದ ಶಾಸಕ ಹೆಚ್.ನಾಗೇಶ್, ವರುಣಾ ಕ್ಷೇತ್ರದ ಕೆಲಸದ ನಿಮಿತ್ತ ಬಂದಿದ್ದೆ. ನಮ್ಮ ಸಂಬಂಧಿಯೊಬ್ಬರ ಕೆಲಸ ಆಗುವುದಿತ್ತು. ಹಾಗಾಗಿ ಅವರ ಮಗನ ಭೇಟಿಗೆ ಬಂದೆ, ಅವರಿಲ್ಲ‌ಹೋಗುತ್ತಿದ್ದೇನೆ. ಪ್ರತಿಪಕ್ಷ ನಾಯಕರಲ್ಲವೇ , ಗೌರವ ಕೊಡಲು ಬಂದಿದ್ದೆ. ನಾನು ಬಿಜೆಪಿ ಜತೆಯೇ ಗುರುತಿಸಿಕೊಂಡಿದ್ದೇನೆ. ಹಾಗಾಗಿ ಮುಂದೆ ಟಿಕೆಟ್ ಕೊಡಬೇಕಲ್ವೇ? ನೊಡೋಣ ಇನ್ನೂ ಚುನಾವಣೆಗೆ ಸಮಯವಿದೆ. ಕ್ಷೇತ್ರದ ಜನ ಏನು ಹೇಳುತ್ತಾರೆ ಅದರಂತೆ ಮಾಡುತ್ತೇನೆ ಎಂದರು. ಸಚಿವ ಸ್ಥಾನದಿಂದ ಕೈಬಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಗ ಮುಂದೆ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಈಗ ಆಸಮಯ ಬಂದಿದೆ ಏನು ಮಾಡುತ್ತಾರೆ ನೋಡೋಣ. ಸಚಿವ ಸ್ಥಾನ ಕೊಟ್ಟರೆ ಯಾರಿಗೆ ಬೇಡ ಹೇಳಿ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಇನ್ನು ಚರ್ಚಿಸಿಲ್ಲ.…

Read More

ಮಂಗಳೂರು: ಪ್ರತಿ ನಾಗರಿಕನಿಗೆ ತೊಂದರೆಯಾಗದಂತೆ ನೋಡಿಕೊಳ್ಳೋದು ಸರ್ಕಾರದ ಜಬಾವ್ದಾರಿ. ಆದರೆ ದುರಾದೃಷ್ಟವಶಾತ್ ಸರ್ಕಾರ ಮುಂದೆ ಎಷ್ಟೇ ಮೊರೆ ಹೋದರೂ ಇದು ಸಾಧ್ಯವಾಗಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಆಝಾನ್ ವಿರುದ್ಧ ಸುಪ್ರಭಾತ ಅಭಿಯಾನದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಬೆಳಗ್ಗಿನ ಅಜಾನ್ ಜಾತ್ಯತೀತ ರಾಷ್ಟ್ರಕ್ಕೆ ಹೇಳಿ ಮಾಡಿಸಿರೋದು ಅಲ್ಲ. ಅಲ್ಲಾ ಒಬ್ಬನೇ. ದೇವರು ಬೇರೆ ಯಾರೂ ದೇವರಿಲ್ಲ ಅನ್ನೋದನ್ನು ಪ್ರತಿಯೊಬ್ಬ ಹಿಂದೂ ಕೇಳೋಕೆ ಸಾಧ್ಯ ಇಲ್ಲ ಎಂದು ಅವರು ಟೀಕಿಸಿದರು. ಬೆಳಗ್ಗಿನ ಜಾವದ ಅಝಾನ್ ಎಲ್ಲರ ನಿದ್ದೆ ಹಾಳು ಮಾಡುತ್ತದೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಕೂಡಾ ಇದೆ. ಆದರೆ ಕರ್ನಾಟಕ ಸರ್ಕಾರ ಸುದೀರ್ಘ ನಿದ್ರೆಯಲ್ಲಿದೆ. ಸರ್ಕಾರಕ್ಕೆ ಎಷ್ಟೇ ಒತ್ತಡ ಹಾಕಿದರೂ ಬೆಳಗ್ಗಿನ ಆಝಾನ್ ಧ್ವನಿ ನಿಲ್ಲಿಸುವ ಪ್ರಯತ್ನ ಮಾಡುತ್ತಿಲ್ಲ  ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀವು ಕಾನೂನು ಮೀರಿದವರನ್ನು ಹಿಡಿಯದಿದ್ದರೆ ನಾವೂ ಕಾನೂನು ಮೀರುತ್ತೇವೆ. ಹಿಡಿಯೋದಿದ್ದರೆ ಎಲ್ಲರನ್ನೂ ಹಿಡಿಯಿರಿ ಎಂಬ…

Read More

ಬೆಂಗಳೂರು: ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಸರ್ಕಾರಕ್ಕೆ ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಅವರು ಹೇಳಿದರು. ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದರು. ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ…

Read More

ಬೆಂಗಳೂರು: ರಾಜ್ಯದಲ್ಲಿ ಆಜಾನ್ ವಿವಾದ ತೀವ್ರಗೊಂಡಿರುವ ವೇಳೆ, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಇದೆ. ಆ ಆದೇಶವನ್ನು ಎಲ್ಲರು ಪಾಲನೆ ಮಾಡಬೇಕು. ಈ ವಿಷಯ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಏನೇನು ಆಗುತ್ತಿದೆ, ಬೇರೆ ಬೇರೆ ರಾಜ್ಯಗಳಲ್ಲಿ ಏನು ಆಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದರು. ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಈ ಸಂಬಂಧ ಸಂಜೆಯ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಡಿಸಿ, ಸಿಇಒ ಗಳ ಜತೆ ಸಭೆ ಸುಮಾರು ನಾಲ್ಕು ತಾಸು ನಿನ್ನೆ ಡಿಸಿಗಳ ಜತೆಗೆ ಸಭೆ ಮಾಡಿದ್ದೇನೆ. ಇವತ್ತು ಸಿಇಒಗಳ ಜೊತೆಗೆ ಸಭೆ ಮಾಡಿದ್ದೇನೆ. ಯಾವ ರೀತಿ ರಾಜ್ಯದ ಆಡಳಿತ ಚುರುಕು, ಜನಪರ ಆಗಿರಬೇಕು ಅಂತ ಹೇಳಿದ್ದೇನೆ. ಯೋಜನೆಗಳನ್ನು ದಕ್ಷತೆಯಿಂದ ಸಮಯಬದ್ದವಾಗಿ ಜನರಿಗೆ ಮುಟ್ಟಿಸಬೇಕು ಅಂತ ಹೇಳಿದ್ದೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ…

Read More

ರಾಜ್ಯದಲ್ಲಿ ಆರಂಭವಾಗಿರುವ ಆಜಾನ್ ವಿರುದ್ಧದ ಸುಪ್ರಭಾತ ಅಭಿಯಾನಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದು, ಮೊದಲು ಪ್ರಮೋದ್ ಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಪ್ರಮೋದ್ ಮುತಾಲಿಕ್ ಮಾಡುತ್ತಿದ್ದಾರೆ. ಇಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಇಲ್ಲವಾದಲ್ಲಿ ಸರ್ವಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ ಶಾಂತಿ ಉಳಿಯಲು ಸಾಧ್ಯವಿಲ್ಲ ಎಂದರು. ಮುತಾಲಿಕ್ ಅವರದ್ದು ಶ್ರೀರಾಮಸೇನೆಯೋ ? ರಾವಣ ಸೇನೆಯೋ ? ಎಂದು ಪ್ರಶ್ನಿಸಿರುವ ಹೆಚ್.ಡಿ.ಕೆ, ಅನಗತ್ಯವಾಗಿ ಧಾರ್ಮಿಕ ಸಂಘರ್ಷಗಳನ್ನು ಹುಟ್ಟುಹಾಕಿ, ಶಾಂತಿ ಕದಡುವ ವಾತಾವರಣ ಸೃಷ್ಟಿಸಲಾಗುತ್ತಿದೆ. ಇಂತಹ ಘಟನೆ ನಡೆಯುತ್ತಿದ್ದರು ಸರ್ಕಾರ ಕ್ರಮ ಕೈಗೊಳ್ಳದೇ ಸುಮ್ಮನಿರುವುದು ಯಾಕೆ ? ಸರ್ಕಾರ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ವಿಷಬೀಜ ಬೆಳೆಯಲು ಬಿಡಬಾರದು ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ತುರುವೇಕೆರೆ: ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಶೀತಲವಾಡಿ ಗ್ರಾಮದ ಮುದ್ದಮ್ಮ ಕೊಂ ತಿಮ್ಮಯ್ಯ ಎಂಬ ವಯೋವೃದ್ದೇಯು ಪ್ರವಾಸಕ್ಕೆ ಬಂದಿದ್ದ ವೇಳೆ ಜನ ಜಂಗುಳಿಯ ಮಧ್ಯೆ ಕುಟುಂಬಸ್ಥರಿಂದ ದೂರವಾಗಿದ್ದಾರೆ. ಇದೇ ವೇಳೆ ತುರುವೇಕೆರೆ ಪೊಲೀಸ್ ಪುನೀತ್ ಅವರಿಗೆ ವೃದ್ಧ ಸಿಕ್ಕಿದ್ದು, ಅವರು, ಠಾಣಾಧಿಕಾರಿಗಳಾದ ಪಿಎಸ್ಐ ಕೇಶವಮೂರ್ತಿ ಅವರ ನೇತೃತ್ವದಲ್ಲಿ ತಾಲೂಕಿನ  ಮಾಯಸಂದ್ರ- ಟಿ-ಬಿ.ಕ್ರಾಸ್ ಸಮೀಪ ಇರುವ ವೃದ್ಧಾಶ್ರಮದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿದ್ದರು. ಇನ್ನೂ ವೃದ್ಧ ನಾಪತ್ತೆಯಾಗಿರುವ ಬಗ್ಗೆ ಮುದ್ದಮ್ಮನ ಪುತ್ರ ರುದ್ರಯ್ಯ ತುರುವೇಕೆರೆ ಪೊಲೀಸ್ ಠಾಣೆ ಬಂದು ಮಾಹಿತಿ ನೀಡಿದ್ದು,  ಈ ವೇಳೆ ತಾಯಿ ಪೊಲೀಸರ ಸುಪರ್ದಿಯಲ್ಲಿ ಸುರಕ್ಷಿತರಾಗಿರುವುರುವುದು ತಿಳಿದು ಬಂದಿದ್ದು, ಬಳಿಕ ನಮ್ಮ ಜೊತೆ ತಾಯಿಯನ್ನು ಕಳುಹಿಸಿ ಕೊಡಿ ಎಂದು ಅವರು ಮನವಿ ಮಾಡಿದ್ದು, ಇದೀಗ ತಾಯಿಯನ್ನು ಮಗನ ಜೊತೆಗೆ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ. ವಿಶ್ವ ತಾಯಂದಿರ ದಿನದಂದೇ ಪೊಲೀಸರು, ಕಳೆದು ಹೋದ ತಾಯಿಯನ್ನು ಪುತ್ರನ ಜೊತೆಗೆ ಕಳುಹಿಸಿ ಕೊಟ್ಟಿದ್ದಾರೆ. ಪೊಲೀಸರ ಸಾರ್ವಜನಿಕ ಸೇವೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರದಿ: ಸಚಿನ್ ಮಾಯಸಂದ್ರ…

Read More

ತುರುವೇಕೆರೆ: ಹೊನ್ನಾಂಬ ನಾಟಕ ಮಂಡಳಿ ದಂಡಿನಶಿವರ ಮತ್ತು ಯಡಿಯೂರು ಸಾಂಸ್ಕೃತಿಕ ವೇದಿಕೆ, ಮಾಯಸಂದ್ರ ಕಲಾಭಿಮಾನಿ ಬಳಗ ವತಿಯಿಂದ ಭಾನುವಾರ ಸಂಜೆ, ಬಸ್ಟಾಂಡ್ ಸನ್ಮಾನ್ ಹೋಟೆಲ್ ನ ಬಾಣಸಿಗ ಮತ್ತು ಕಲಾವಿದ ಗೋಪಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ವೇಳೆ ಶಿಕ್ಷಕರು ಮತ್ತು ಕಲಾವಿದರಾದ ಪ್ರಕಾಶ್ ಅವರು ಮಾತನಾಡಿ, ನಮ್ಮ ತಾಲೂಕಿನಲ್ಲಿ ಬಡತನದ ಕಲಾವಿದರಿದ್ದಾರೆ,ಆದರೇ  ಕಲೆಗೆ ಬಡತನವಿಲ್ಲ, ಎಂಬ ಉದಾಹರಣೆಗೆ ಕಲಾವಿದ ಗೋಪಿಯೇ ಸಾಕ್ಷಿಯಾಗಿದ್ದಾರೆ. ರಾಮಾಯಣ ಎಂಬ ಪೌರಾಣಿಕ ನಾಟಕದಲ್ಲಿ 51ನೇ ಭಾರಿ ಜಟಾಯು ಪಾತ್ರಧಾರಿಯಾಗಿ ಅಭಿನಯಿಸಿದ್ದಾರೆ.ಮತ್ತು ತುರ್ತು ಸಂದರ್ಭಗಳಲ್ಲಿ ಕುರುಕ್ಷೇತ್ರ ನಾಟಕದಲ್ಲಿ ದುಶ್ಯಾಸನ ಪಾತ್ರಧಾರಿಯಾಗಿ ಅದ್ಭುತವಾದ ಅಭಿನಯವನ್ನು ಮಾಡಿದ್ದಾರೆ. ತಮ್ಮ ಹೊಟ್ಟೆಪಾಡಿಗಾಗಿ ಬಾಣಸಿಗ ವೃತ್ತಿಯನ್ನು ಮಾಡುತ್ತಾ, ಕಲೆಯ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದಾರೆ. ಎಷ್ಟು ದೊಡ್ಡ ನಾಟಕವಾದರೂ‌ ಸರಿಯೇ, ಯಾವ ಸ್ಥಳಗಳಲ್ಲಿ ಆದರೂ ಸರಿಯೇ, ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳನ್ನು ಮುಗಿಸಿ, ಪೌರಾಣಿಕ ನಾಟಕವನ್ನು ವೀಕ್ಷಿಸುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಇಂತಹ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವುದು ಬಹು ಮುಖ್ಯವಾಗಿದೆ ಎಂದರು. ಈ…

Read More

ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ 25ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,  ಭಾನುವಾರ ತಡರಾತ್ರಿ  ಈ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ 4 ಮಂದಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು, 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದು, 45 ಪ್ರಯಾಣಿಕರಿದ್ದರು ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ. ಅಪಘಾತಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More